ಮಡಿಕೇರಿ ನ.13 : ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ನಗರ, ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಪಾವತಿಗೊಳಪಡಿಸಲು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪ.ಪಂ ಹೊರಹುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಈರಪ್ಪ ಶೆಟ್ಟಿ ಅವರು, ಹೊರಗುತ್ತಿಗೆ ನೌಕರರನ್ನು ನೇರ ವೇತನ ಪಾವತಿಗೆ ಒಳಪಡಿಸದ್ದಿದ್ದಲ್ಲಿ ನ.15 ರಂದು ರಾಜ್ಯವ್ಯಾಪಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂ ಮಾಡಲು ಮುಂದಾಗಿರುವ ಸರಕಾರ ವಾಹನ ಚಾಲಕರು, ನೀರು ಸರಬರಾಜುದಾರರು, ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಯುಜಿಡಿ ಕಾರ್ಮಿಕರು ಸೇರಿದಂತೆ 15ಸಾವಿರಕ್ಕೂ ಹೆಚ್ಚು ನೌಕರರನ್ನು ಗುತ್ತಿಗೆ ಆಧಾರದಲ್ಲಿ ಉಳಿಸಿಕೊಂಡಿದೆ. ನಗರಗಳ ಸ್ವಚ್ಛತೆ ಮತ್ತು ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. 2017ರಲ್ಲಿ…
ಲೇಖಕ: admin
ವಿರಾಜಪೇಟೆ ನ.13 : ದೀಪಾವಳಿ ಹಬ್ಬದ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿರಾಜಪೇಟೆ ಪ್ರಖಂಡದಿಂದ ಕಾವಾಡಿ ಶ್ರೀ ಗೋ ಶಾಲೆಯಲ್ಲಿ ಗೋ ಪೂಜೆಯನ್ನು ನಡೆಯಿತು. ಮುಕ್ಕೋಟಿ ದೇವರುಗಳು ಗೋವಿನಲ್ಲಿ ನೆಲೆಯಾಗಿದೆ, ಅಮೃತ ರೂಪವಾಗಿ ಕ್ಷೀರವನ್ನೇ ಕೊಡುವ ಮಾತೆ ಗೋವು. ಗೋ ಪರಿಪಾಲಕನಾದ ಕೃಷ್ಣನಿಗೆ ಪ್ರಿಯವಾದ ಕಾಮಧೇನು ಗೋವು ಆಗಿದೆ ಎಂದು ಗೋ ಪೂಜೆ ಮಾಹಿತಿ ನೀಡಿದರು. ಈ ಸಂದರ್ಭ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಂಪರ್ಕ ಪ್ರಮುಖ್ ಕುಟ್ಟಂಡ ಪ್ರೀನ್ಸ್ ಗಣಪತಿ, ಸೇವಾ ಭಾರತೀಯ ಜಿಲ್ಲಾಧ್ಯಕ್ಷ ಟಿ.ಸಿ.ಚಂದ್ರ, ಬಜರಂಗದಳ ಜಿಲ್ಲಾ ಸಹ ಸಂಯೋಜಕ ವಿವೇಕ್ ರೈ, ತಾಲ್ಲೂಕು ಸಂಚಾಲಕ ಐನಂಡ ಕುಶಾಲಪ್ಪ, ಗೋ ಪರಿವಾರದ ಸೋಮಶೇಖರ್, ಜಾಗರಣ ವೇದಿಕೆ ತಾಲೂಕು ಸಂಚಾಲಕ ಗಣೇಶ್, ಗೋರಕ್ಷಾ ಪ್ರಮುಖ್ ಶರೀನ್, ರಾಜ, ವಿಶ್ವ ಹಾಗೂ ಸಂಘಟನೆ ಪ್ರಮುಖರು ಹಾಜರಿದ್ದರು.
ವಿರಾಜಪೇಟೆ ನ.13 : ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ದೇವಾಲಯದ ಅರ್ಚಕರಾದ ವಾಮನಮೂರ್ತಿ ಭಟ್ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಮೊದಲಿಗೆ ಅರ್ಚಕರು ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ವನದುರ್ಗೆ, ಶ್ರೀ ನಾಗ ಗುಡಿಯಲ್ಲಿ ವಿಶೇಷ ಅಲಂಕಾರ ಮತ್ತು ಪೂಜೆಯನ್ನು ನೆರವೇರಿಸಿ ಅರ್ಚನೆ ಮಾಡಿದರು. ದೀಪಾವಳಿ ಪ್ರಯುಕ್ತ ತುಳಸಿ ಪೂಜೆಯನ್ನು ದೇವಾಲಯದ ಆವರಣದಲ್ಲಿ ನೆರವೇರಿಸಿ, ಕುಂಕುಮಾರ್ಚನೆ, ಪುಷ್ಪರ್ಚನೆ ಹಾಗೂ ಅಷ್ಟೋತ್ತರವನ್ನು ಪಠಿಸಲಾಯಿತು. ಮಹಾ ಮಂಗಳಾರತಿ ನಂತರ ಪ್ರಸಾದ ವಿತರಣೆನೆರವೇರಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯವರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಕುಶಾಲನಗರ ನ.13. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕುಶಾಲನಗರ ಪುರಸಭೆ ವತಿಯಿಂದ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ ಆಶ್ರಯದಲ್ಲಿ ‘ಗೋ ಗ್ರೀನ್ ಅಭಿಯಾನ’ದಡಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತ ಪರಿಸರ ಜಾಗೃತಿ ಅಭಿಯಾನ ನಡೆಯಿತು. ಸ್ವಚ್ಛ ದೀಪಾವಳಿ – ಶುಭ ದೀಪಾವಳಿ ಆಚರಣೆ ಪರಿಕಲ್ಪನೆಯೊಂದಿಗೆ “ಹಸಿರು ದೀಪಾವಳಿ ಆಚರಿಸುವ ಅಗತ್ಯತೆ’ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ನ ಜಿಲ್ಲಾ ನೋಡಲ್ ಅಧಿಕಾರಿ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಪಟಾಕಿ ಮತ್ತು ಸಿಡಿಮದ್ದು ಸಿಡಿಸುವುದರಿಂದ ಪರಿಸರ…
ಮಡಿಕೇರಿ ನ.13 : ಕನ್ನಡ ನಾಡಿನಲ್ಲಿ ನೆಲೆಸಿರುವ ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಮಾತನಾಡಬೇಕು ಎಂಬುವುದೇ ಕರ್ನಾಟಕ ರಾಜ್ಯದ ಕನ್ನಡಿಗರ ಒತ್ತಾಸೆಯಾಗಿದೆಯೇ ಹೊರತು ಇತರ ಭಾಷಿಕರನ್ನು ವಿರೋಧಿಸುವ ಮನೋಸ್ಥಿತಿ ಯಾರಿಗೂ ಇಲ್ಲ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ಸೋಮವಾರಪೇಟೆ ಸಂತ ಜೋಸೆಫರ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಡಿಭಾಗದಲ್ಲಿ ಅನ್ಯ ಭಾಷಿಕರ ವಲಸೆ ಹೆಚ್ಚಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಕೂಡ ಮಲೆಯಾಳಂ, ತಮಿಳು ಮಾತ್ರವಲ್ಲ, ಅಸ್ಸಾಂ, ಬಿಹಾರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ನೇಪಾಳ ಮತ್ತಿತರ ರಾಜ್ಯಗಳ ಜನತೆ ಬಂದು ನೆಲೆಸುತ್ತಿದ್ದಾರೆ. ಅವರುಗಳ ಭಾಷೆಯನ್ನು ನಮ್ಮ ಮೇಲೆ ಹೇರಬಾರದು, ಕನ್ನಡ ಭಾಷೆಯನ್ನು ಕಲಿಯುವ ಅಭಿಮಾನವನ್ನು ಮೂಡಿಸಿಕೊಳ್ಳಬೇಕು ಎಂದರು. ಕರ್ನಾಟಕದ ಹೆಸರೇ ಒಂದು ಚೈತನ್ಯದ ಚಿಲುಮೆಯಾಗಿದೆ, ಕರ್ನಾಟಕಕ್ಕೆ ತನ್ನದೇ ಆದ ಹಿರಿಮೆ, ಸಮನ್ವಯತೆ, ಸಹಿಷ್ಣುತೆ, ಸಾಮರಸ್ಯ ಇದೆ. ಮಕ್ಕಳಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಆಸಕ್ತಿ ಮೂಡಿಸಬೇಕು ಎಂದು…
ಮಡಿಕೇರಿ ನ.13 : ಪ್ರಸಕ್ತ(2023-24) ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗೆ ಸ್ವಯಂ ಉದ್ಯೋಗ ನೇರ ಸಾಲ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಮೈಕ್ರೋ ಕ್ರೆಡಿಟ್ ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ವೆಬ್ಸೈಟ್ https://sevasindhuservices.karnataka.gov.in ನಲ್ಲಿ ಸಲ್ಲಿಸಬಹುದು. ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಗೆ ವಿವಿಧ ಆರ್ಥಿಕ ಗಳಿಕೆಯ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಣ್ಣ ಆದಾಯ ಗಳಿಸಲು ಆರ್ಥಿಕ ಚಟುವಟಿಕೆಗಳಿಗಾಗಿ ನಿಗಮಗಳಿಂದ ನೇರ ಸಾಲ (ಗರಿಷ್ಟ ವೆಚ್ಚ ರೂ.1 ಲಕ್ಷ, ಅದರಲ್ಲಿ ಶೇ.50 ಸಾಲ ಮತ್ತು…
ಮಡಿಕೇರಿ ನ.13 : ಮಡಿಕೇರಿ-ವಿರಾಜಪೇಟೆ 66 ಕೆವಿ ವಿದ್ಯುತ್ ಮಾರ್ಗದ ಕಾಮಗಾರಿ ಸಂಬಂಧ ಹಾಲಿ ಚಾಲ್ತಿಯಲ್ಲಿರುವ 66/11 ಕೆವಿ ಮಡಿಕೇರಿ ವಿದ್ಯುತ್ ವಿತರಣಾ ಕೇಂದ್ರದ ಒಳಬರುವ 66 ಕೆವಿ ಮಡಿಕೇರಿ-ಕುಶಾಲನಗರ ವಿದ್ಯುತ್ ಮಾರ್ಗದಲ್ಲಿ ಪರಿಶೀಲನೆ ಮತ್ತು ನಿರ್ವಹಣೆ ಕಾರ್ಯವನ್ನು ಮಾಡಬೇಕಿರುವುದರಿಂದ ನ.15 ರಂದು ಮಧ್ಯಾಹ್ನ 1 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಮಡಿಕೇರಿ ಪಟ್ಟಣ, ಬೋಯಿಕೇರಿ, ಗಾಳಿಬೀಡು, ಕುಂಡಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ನ.13: ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಗ್ರೇಡ್-3 ವೃಂದದ 1 ಹಿಂಬಾಕಿ (ಬ್ಯಾಕ್ಲಾಗ್) ಹುದ್ದೆ ಸೇರಿದಂತೆ ಒಟ್ಟು 2 ಹುದ್ದೆಗಳು, ಬೆರಳಚ್ಚುಗಾರರ ವೃಂದದ 17 ಹುದ್ದೆಗಳು, ನಕಲು-ಬೆರಳಚ್ಚುಗಾರರ ವೃಂದದ 7 ಹುದ್ದೆಗಳು, ಆದೇಶಿಕ ಜಾರಿಕಾರ ವೃಂದದ 8 ಹುದ್ದೆಗಳು ಹಾಗೂ ಜವಾನ/ ಸೇವಕ ವೃಂದದ 30 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ https://kodagu.dcourts.gov.in/notice-category/recruitments/ ರಲ್ಲಿ ನೀಡಲಾದ ಲಿಂಕ್ ಮೂಲಕ ಆನ್ಲೈನ್ನಲ್ಲಿ ಡಿ.10 ರ ರಾತ್ರಿ 11.59 ಗಂಟೆಯೊಳಗೆ ಸಲ್ಲಿಸಬೇಕು. ಮತ್ತು ಪೂರ್ಣ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಪಾವತಿಸಲು ಡಿ.11 ಕೊನೆಯ ದಿನವಾಗಿದೆ. ಆನ್ಲೈನ್ ಹೊರತುಪಡಿಸಿ, ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಮಡಿಕೇರಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ…
ಮಡಿಕೇರಿ ನ.13 : ತಲಕಾವೇರಿ ಕ್ಷೇತ್ರದ ತಕ್ಕ ಮುಖ್ಯಸ್ಥರಾಗಿರುವ ಕೋಡಿ ಮೋಟಯ್ಯ ಅವರ ರಾಜೀನಾಮೆ ಕೇಳುವುದು ಅರ್ಥಹೀನ ಪ್ರಸ್ತಾಪವೆಂದು ಕೊಡಗು ಗೌಡ ವಿದ್ಯಾಸಂಘದ ನಿರ್ದೇಶಕ ಸೂದನ ಎಸ್.ಈರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಳಗಾವಿ ಹಾಗೂ ಶ್ರೀ ರಂಗಪಟ್ಟಣದ ಮಠಾಧೀಶರು ಭಕ್ತಿ ಮತ್ತು ಅಭಿಮಾನದಿಂದ ತಲಕಾವೇರಿ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಕನ್ನಡ ರಾಜ್ಯೋತ್ಸವವಾದ ಕಾರಣ “ಕನ್ನಡ” ಧ್ವಜ ಪ್ರದರ್ಶಿಸಿದ್ದಾರೆಯೇ ಹೊರತು ಆರೋಹಣ ಮಾಡಿಲ್ಲ. ಕನ್ನಡ ನಾಡಿನಲ್ಲಿ ಕನ್ನಡ ಧ್ವಜ ಪ್ರದರ್ಶಿಸಿದರೆ ತಪ್ಪೇನು ಇಲ್ಲ, ಈ ವಿಚಾರದಲ್ಲಿ ವಿನಾಕಾರಣ ಕೋಡಿ ಮೋಟಯ್ಯ ಅವರನ್ನು ಎಳೆದು ತಂದಿರುವುದು ಖಂಡನೀಯವೆಂದು ತಿಳಿಸಿದ್ದಾರೆ. ಪರಂಪರೆಯಂತೆ ತಲಕಾವೇರಿ ಕ್ಷೇತ್ರದಲ್ಲಿ ಕೋಡಿ ಮನೆಯವರು ತಕ್ಕ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಅಚ್ಚುಕಟ್ಟಾದ ವ್ಯವಸ್ಥೆಯೊಂದಿಗೆ ಭಕ್ತಿಯಿಂದ ಕಾವೇರಿ ಮಾತೆಯ ಸೇವೆ ಮಾಡುತ್ತಿದ್ದಾರೆ. ಯಾವುದೋ ಒಂದು ವಿಚಾರವನ್ನು ನೆಪವಾಗಿಟ್ಟುಕೊಂಡು ತಕ್ಕ ಮುಖ್ಯಸ್ಥರತ್ತ ಬೆರಳು ತೋರುವ ಕ್ರಮವನ್ನು ವೈಯುಕ್ತಿಕ ದ್ವೇಷ ಎಂದು ಭಾವಿಸಬೇಕಾಗುತ್ತದೆ. ಯಾರೆಲ್ಲ “ಕಾವೇರಿ” ನದಿಯ ನೀರು ಸೇವಿಸಿ ಪುನೀತರಾಗುತ್ತಾರೋ ಅವರೆಲ್ಲರಿಗೂ ಮಾತೆಯನ್ನು…
ಮಡಿಕೇರಿ ನ.13 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಮಡಿಕೇರಿ ರೋಟರಿ ಸಹಯೋಗದೊಂದಿಗೆ ಚೇರಂಬಾಣೆ ವೃತ್ತದ ಮಕ್ಕಳ ದಿನಾಚರಣೆ ಮತ್ತು ಅಂಗನವಾಡಿ ದಿನಾಚರಣೆ ನಡೆಯಿತು. ಮಡಿಕೇರಿಯ ರೆಡ್ ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು ನೂರು ಮಕ್ಕಳು ಛದ್ಮವೇಶ ನೃತ್ಯ ಮತ್ತು ಅಭಿನಯ ಗೀತೆಗಳಲ್ಲಿ ಪಾಲ್ಗೊಂಡಿದ್ದರು. ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ರೋಟರಿ ಸಂಸ್ಥೆ ಅಧ್ಯಕ್ಷರಾದ ಗೀತಾ ಗಿರೀಶ್ ಪ್ರಮಾಣ ಪತ್ರ, ಡ್ರಾಯಿಂಗ್ ಪುಸ್ತಕ, ಕ್ರಯನ್ಸ್ ಗಳನ್ನು ವಿತರಿಸಿದರು. ಅಂಗನವಾಡಿ ದಿನಾಚರಣೆಯ ಪ್ರಯುಕ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ಪೋಷಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಛದ್ಮವೇಶ ನೃತ್ಯ ಮತ್ತು ಹಾಡುಗಳಲ್ಲಿ ಉತ್ತಮವಾಗಿ ಪ್ರದರ್ಶನ ನೀಡಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ರೆಡ್ ಕಾರ್ಡ್ ಸಂಸ್ಥೆಯ ಸಭಾಪತಿಗಳಾದ ರವೀಂದ್ರ, ರೋಟರಿ ಸಂಸ್ಥೆಯ ಅಧ್ಯಕ್ಷರಾದ ಗೀತ ಗಿರೀಶ್ ಕಾರ್ಯಕ್ರಮಕ್ಕೆ ಹಾಗೂ ಮಕ್ಕಳ ಉಜ್ವಲ ಭವಿಷ್ಯಕ್ಕೆ ಶುಭ…






