ಲೇಖಕ: admin

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ ಅಗತ್ಯವಿದೆ ಎಂದು ಚಲನಚಿತ್ರ ಹಾಗೂ ಕಿರುತೆರೆ ಕಲಾವಿದೆ ವರ್ಷ ಗಿರಿಧರ್ ಹೇಳಿದರು. ಸೋಮವಾರಪೇಟೆ ಬ್ರಾಹ್ಮಣ ಸಮಾಜ ಹಾಗೂ ದೇವಿ ಬಳಗದ ಆಶ್ರಯದಲ್ಲಿ ಶ್ರೀ ಸೋಮೇಶ್ವರ ದೇವಾಲಯದ ಆವರಣದಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಗುರಿಯೊಂದಿಗೆ ಯಾವುದೇ ಕ್ಷೇತ್ರದಲ್ಲಾದರೂ ಮುಂದುವರಿಯುವ ಮನೋಭಾವ ಬೆಳೆಸಿಕೊಂಡು, ಹೆಣ್ಣುಮಕ್ಕಳು ದೊಡ್ಡ ಕನಸುಗಳನ್ನು ಕಂಡು ಸಾರ್ಥಕ ಜೀವನ ಸಾಧಿಸಬೇಕು ಎಂದು ಹೇಳಿದರು. ಮಹಿಳಾ ದಿನಾಚರಣೆ ಕೇವಲ ಒಂದು ದಿನದ ಆಚರಣೆ ಮಾತ್ರವಲ್ಲ, ಬದಲಾಗಿ ಮಹಿಳೆಯರ ತ್ಯಾಗ, ಶಕ್ತಿ, ಸಾಹಸ ಮತ್ತು ಸಾಧನೆಗಳನ್ನು ಸ್ಮರಿಸುವ ಮಹತ್ವದ ದಿನವಾಗಿದೆ ಎಂದರು. ಹೆಣ್ಣು ಸಂಸಾರದ ಕಣ್ಣು ಎಂಬ ನುಡಿಗಟ್ಟಿನಂತೆ, ಮನೆ, ಕುಟುಂಬ ಮತ್ತು ಸಮಾಜದ ಏಳಿಗೆಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಹಿಳೆಯರು ತಮ್ಮ ಸಾಮರ್ಥ್ಯ ವನ್ನು ಅರಿತು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯಬೇಕು…

Read More

ಸೋಮವಾರಪೇಟೆ ಮಾ.26 NEWS DESK : ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿಯಿಂದ ಕೃಷಿಕರು ಕಂಗಾಲಾಗಿದ್ದಾರೆ. ಗಣಗೂರು, ಯರಪಾರೆ, ಬಾಣಾವಾರ, ಗೋಣಿಮರೂರು ಗ್ರಾಮಗಳ ಕೃಷಿ ಭೂಮಿಗೆ ಪ್ರತಿನಿತ್ಯ ಕಾಡಾನೆಗಳು ದಾಳಿ ಮಾಡುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ. ಗೋಣಿಮರೂರು-ಯರಪಾರೆ ಗ್ರಾಮದ ಗಣೇಶ್ ಎಂಬವರ ಜೋಳದ ಫಸಲನ್ನು ನಾಶರಮೇಶ್ ಎಂಬವರ ತೆಂಗಿನ ಗಿಡಗಳನ್ನು ಮುರಿದು ತಿಂದು ನಾಶಪಡಿಸಿವೆ. ಕಾಡಾನೆ ಹಾವಳಿಯಿಂದ ಕೃಷಿ ಫಸಲನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಮಗೆ ಯಾವುದೇ ಪರಿಹಾರ ಬೇಡ. ಒಂದೆರಡು ಸಾವಿರ ಪರಿಹಾರದಿಂದ ಕುಟುಂಬ ಸಾಕಲು ಸಾಧ್ಯವಿಲ್ಲ. ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಬೇಕು. ಯರಪಾರೆಯಲ್ಲಿ ಒಂದೆರಡು ಕಿ.ಮೀನಷ್ಟು ಸೋಲಾರ್ ತಂತಿಬೇಲಿ ಅಳವಡಿಸಿಕೊಡಬೇಕು ಎಂದು ರೈತರಾದ ರೇವಣ್ಣ, ಹರೀಶ್ ಆಗ್ರಹಿಸಿದ್ದಾರೆ. ಕಾಡಾನೆ ಕಂದಕಗಳನ್ನು ದುರಸ್ತಿ ಪಡಿಸಬೇಕು. ಸೋಲಾರ್ ತಂತಿಬೇಲಿಯ ನಿರ್ವಹಣೆ ಮಾಡಬೇಕು. ಸಿಬ್ಬಂದಿಗಳು ಪಟಾಕಿ ಸಿಡಿಸಿ ತೆರಳಿದರೆ, ಕಾಡಾನೆ ಹಾವಳಿ ನಿಯಂತ್ರಣ ಅಸಾಧ್ಯದ ಮಾತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read More

ಕುಶಾಲನಗರ ಮಾ.26 NEWS DESK : ಕಣಿವೆ ಶ್ರೀ ರಾಮಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವದ ಮುನ್ನ ದಿನದಂದು ರಾಮಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಸೀತಾ ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಿತು. ಬ್ರಹ್ಮ ರಥೋತ್ಸವ ಅಂಗವಾಗಿ ಮೊದಲು ಸಂಧ್ಯಾಪೂಜೆ, ಕೂಡಿಗೆ, ಮತ್ತು ಶಿರಂಗಾಲ ಗ್ರಾಮಸ್ಥರಿಂದ ನಡೆದು ನಂತರ ಸಂಪ್ರದಾಯದಂತೆ ಶ್ರೀ ರಾಮ ಮತ್ತು ಸೀತಾ ಕಲ್ಯಾಣೋತ್ಸವ ಕಾರ್ಯಕ್ರಮ ವೇ. ಬ್ರಹ್ಮ. ಶ್ರೀ .ಕರಣೀಕ ನರಹರಿಶರ್ಮಾ ಅವರ ನೇತೃತ್ವದ ತಂಡವು ವಿವಿಧ ಕಲ್ಯಾಣೋತ್ಸವದ ಪದ್ಧತಿಯಂತೆ ಆಚರಣೆ ಮಾಡಿ ಸೀತಾ ಕಲ್ಯಾಣೋತ್ಸವವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್.ಸುರೇಶ್, ಕಾರ್ಯದರ್ಶಿ ಕೆ.ಎಸ್.ಮಾಧವ ಉಪಾಧ್ಯಕ್ಷ ಕೆ.ಕೆ.ಮಂಜುನಾಥ ಸ್ವಾಮಿ, ಸಹ ಕಾರ್ಯದರ್ಶಿ ಕೆ.ಎಲ್. ಮಹೇಶ್ ಕುಮಾರ್ ಸೇರಿದಂತೆ ಸಮಿತಿ ನಿರ್ದೇಶಕರು ದೇವಾಲಯದ ಪ್ರಧಾನ ಆರ್ಚಕ ಹೆಚ್.ಆರ್. ರಾಘವೇಂದ್ರ ಚಾರ್ ಸೇರಿದಂತೆ ಕೂಡಿಗೆ, ಶಿರಂಗಾಲ ಗ್ರಾಮಸ್ಥರು ಹಾಜರಿದ್ದರು.

Read More

ಮಡಿಕೇರಿ ಮಾ 26  NEWS DESK : ಚಾಟ್ ಜಿಪಿಟಿಯಂಥ ತಾಂತ್ರಿಕ ಮಾಧ್ಯಮವನ್ನು ಹೆಚ್ಚು ಬಳಕೆ ಮಾಡುತ್ತಿದ್ದರೆ ನಮ್ಮ ಮನಸ್ಸಿನ ಕ್ರಿಯಾಶೀಲತೆಯನ್ನೇ ನಾಶ ಮಾಡುವ ಮೂಲಕ ಮೆದುಳಿನ ಮೇಲೆ ದುಫ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿರುವ ನಿಟ್ಟಿನಲ್ಲಿ ಅಗತ್ಯಕ್ಕೆ ತಕ್ಕಂತೆ ಎಐ, ಜಿಪಿಟಿಯಂಥ ಮಾಧ್ಯಮವನ್ನು ಬಳಸುವ ಮೂಲಕ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕರೆ ಗಮನ ನೀಡಿ ಎಂದು ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ. ಶುಭಾ ಕೆ.ಜಿ. ವಿದ್ಯಾಥಿ೯ಗಳಿಗೆ ಕರೆ ನೀಡಿದ್ದಾರೆ. ಕೊಡಗು ವಿಶ್ವವಿದ್ಯಾಲಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕೆ. ಎಂ. ಕಾರ್ಯಪ್ಪ ಕಾಲೇಜಿನ ಮಹಿಳಾ ಘಟಕ ಹಾಗೂ ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಭಾಗಗಗಳ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ರ ಅಂಗವಾಗಿ ” ಹೆಲ್ದಿ ಹ್ಯಾಬಿಟ್ಸ್ – ಹ್ಯಾಪಿ ಲೈಫ್” ವಿಷಯದ ಕುರಿತು ಆಯೋಜಿತ ಕಾಯಾ೯ಗಾರದಲ್ಲಿ ಅವರು ಮಾತನಾಡಿದರು. ಯೌವನದಲ್ಲಿ ಯುವತಿಯರು ಚಮ೯ ಸಂರಕ್ಷಣೆ ಸಂಬಂಧಿತ ಹೆಚ್ಚು ಜಾಗೖತೆ ವಹಿಸುವ ನಿಟ್ಟಿನಲ್ಲಿ ಆರೋಗ್ಯಕರ ಆಹಾರ ಸೇವಿಸಬೇಕು. ಆಯಾಯ…

Read More

ಮಡಿಕೇರಿ NEWS DESK ಮಾ.26 : ಶ್ರೀಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ ವಿಜೃಂಭಣೆಯಿoದ ನಡೆಯುತ್ತಿದೆ. ಶ್ರೀ ರಾಮೋತ್ಸವದ ಅಂಗವಾಗಿ ಮಡಿಕೇರಿಯ ಗಾಂಧಿ ಮೈದಾನದಿಂದ ನಗರದಲ್ಲಿ ಭವ್ಯ ಮೆರವಣಿಗೆ ಸಾಗಿತು. ಮೆರವಣಿಗೆ ಸಂದರ್ಭ ವಿಶೇಷ ಪಲ್ಲಕ್ಕಿಯಲ್ಲಿ ಆಸೀನಗೊಂಡ ಶ್ರೀ ಕೋದಂಡ ರಾಮ ಪರಿವಾರ ಉತ್ಸವ ಮೂರ್ತಿಯನ್ನು ಹೊತ್ತು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಾಯಿತು. ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತಕ್ಕೆ ಸಾಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ವಿವಿಧ ಆಕರ್ಷಕ ನೃತ್ಯ, ಚಂಡೆ ವಾದ್ಯ ಸಹಿತ ಸಾಂಸ್ಕೃತಿಕ ಕಲಾತಂಡಗಳು ಗಮನ ಸೆಳೆದವು. ಕಲಶ ಹೊತ್ತ ಮಹಿಳೆಯರು ಹಾಗೂ ವಿವಿಧ ಭಜನಾ ತಂಡಗಳಿAದ ಭಜನೆ ನಡೆಯಿತು. ಮಾ.27 ರಂದು ಬೆಳಿಗ್ಗೆ 8 ಗಂಟೆಯಿAದ ದೇವಾಲಯದ ಆವರಣದಲ್ಲಿ ಕ್ಷೇತ್ರ ತಂತ್ರಿಯವರಾದ ವೇದಮೂರ್ತಿ ಶ್ರೀಕೃಷ್ಣ ಉಪಾಧ್ಯ ಅವರ ನೇತೃತ್ವದಲ್ಲಿ ಶ್ರೀ ರಾಮ…

Read More

ಕೂಡಿಗೆ ಮಾ.26 NEWS DESK : ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ – ಕರ್ನಾಟಕದ ರಾಜ್ಯ ನಿರ್ದೇಶನಾಲಯದ ನಿರ್ದೇಶನದಂತೆ ಕೂಡಿಗೆ  ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಯಲ್ಲಿ ಆರಂಭಿಸಲಾಗಿರುವ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಘಟಕದ ವತಿಯಿಂದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯಲ್ಲಿ ಶುಮಾ.27 ರಂದು ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ( ಕೆರಿಯರ್ ) ಮೇಳವನ್ನು ಬೆಳಿಗ್ಗೆ 10.00 ಗಂಟೆಗೆ ಏರ್ಪಡಿಸಲಾಗಿದೆ ಎಂದು ಡಯಟ್ ಸಂಸ್ಥೆಯ ಪ್ರಾಂಶುಪಾಲರು ಆದ ಜಿಲ್ಲಾ  ಪದನಿಮಿತ್ತ ಉಪನಿರ್ದೇಶಕರು(ಅಭಿವೃದ್ದಿ) ರಾಮಚಂದ್ರ ರಾಜೇ ಅರಸ್  ತಿಳಿಸಿದರು. ಕೂಡಿಗೆ ಡಯಟ್ ಸಂಸ್ಥೆಯಲ್ಲಿ ನಡೆಯಲಿರುವ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಮೇಳಕ್ಕೆ ಸಂಸ್ಥೆಯ ಆವರಣದಲ್ಲಿ  ವಿವಿಧ ಇಲಾಖೆಗಳು ಮತ್ತು ವಿವಿಧ ಸಂಸ್ಥೆಗಳ ನಡೆಯಲಿರುವ ಪ್ರದರ್ಶನ ಹಾಗೂ ಮಾಹಿತಿಗಳಿಗೆ ಸಿದ್ದಪಡಿಸಿರುವ ಮಳಿಗೆ( ಸ್ಟಾಲ್) ಗಳ ವ್ಯವಸ್ಥೆಯನ್ನು ಪರಿಶೀಲಿಸಿ ಮಾತನಾಡಿದರು. ಈ ವೃತ್ತಿಪರ ಮೇಳದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅವರ…

Read More

ಸುಂಟಿಕೊಪ್ಪ ಮಾ.25 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಕೋದಂಡರಾಮ ದೇವಾಲಯದಲ್ಲಿ ರಾಮನವಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೊದಂಡರಾಮ ಮಂದಿರದಲ್ಲಿ ಬೆಳಿಗ್ಗೆ ರಾಮ, ಸೀತೆ, ಲಕ್ಷ್ಮಣ, ಆಂಜನೇಯ ಸ್ವಾಮಿಗೆ ಬೆಳ್ಳಿಯ ಕವಚವನ್ನು ತೊಡಿಸಿ ಪೂಜೆ ಸಲ್ಲಿಸಲಾಯಿತು. ಪೂಜಾ ಕಾರ್ಯ ಕೈಂಕರ್ಯವನ್ನು ದೇವಾಲಯದ ಮುಖ್ಯ ಅರ್ಚಕ ಜಯಂತ್ ಭಟ್ ಅವರ ನೇತೃತ್ವದಲ್ಲಿ ನೆರವೇರಿಸಿದರು. ನಂತರ ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕದ ಬಳಿಗೆ ರಾಮತಾರಕ ಹೋಮವನ್ನು ಪ್ರಧಾನ ಅರ್ಚಕ ಹಾ.ಮಾ.ಗಣೇಶ್ ಶರ್ಮಾ ಅವರ ನೇತೃತ್ವದಲ್ಲಿ ಜಯಂತ್ ಭಟ್, ನರಸಿಂಹ ಭಟ್, ಪುರುಷೋತ್ತಮ ಭಟ್, ಮನೋಜ್ ಭಟ್ ಇತರರು ನೆರವೇರಿಸಿದರು. ಮಧ್ಯಾಹ್ನ ವಿಶೇಷ ಮಂಗಳಾರತಿ, ಮಹಾ ಆರತಿ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಸುಂಟಿಕೊಪ್ಪ ಸೇರಿದಂತೆ ಸುತ್ತಲಿನ ನೂರಾರು ಭಕ್ತರು ಆಗಮಿಸಿ ಪೂಜಾ ಕೈಂಕಾರ್ಯಗಳಲ್ಲಿ ಭಾಗವಹಿಸಿದರು. ಈ ಸಂದರ್ಭ ಗೌರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಘ್ನೇಶ್, ನಿಖಿಲ್, ಪಿ.ಆರ್.ಸುನಿಲ್ ಕುಮಾರ್, ಧನುಕಾವೇರಪ್ಪ, ಜೆ.ಎನ್.ಚಂದ್ರಶೇಖರ್,…

Read More

ಮಡಿಕೇರಿ ಮಾ.26 NEWS DESK : ಮಹಿಳೆಯರು ಸಬಲರಾದಾಗ ಮಾತ್ರ ಸಮಾಜದ ಏಳಿಗೆ ಸಾಧ್ಯ ಎಂದು ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಸ್ಥಾಪಕ ಅಧ್ಯಕ್ಷರಾದ ಮುತ್ತಮ್ಮ ಕೋಟಿ ಅವರು ಹೇಳಿದರು. ಕೊಡಗು ಜಿಲ್ಲಾ, ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ವತಿಯಿಂದ ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಮಹಿಳಾ ಸಂಭ್ರಮ-2026ಅನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಮಹಿಳೆಯರಿಗೆ ಸರ್ಕಾರದ ಹತ್ತು ಹಲವು ಯೋಜನೆಗಳಿದ್ದು, ಅದನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು. ಆ ಮೂಲಕ ಬದುಕನ್ನು ಭದ್ರವಾಗಿ ರೂಪಿಸಿಕೊಳ್ಳಬೇಕು. ಮಹಿಳಾ ಘಟಕದ ಇಂತಹ ಕಾರ್ಯಕ್ರಮವು ಮಹಿಳೆಯರ ಸಂಘಟನೆಯ ಜೊತೆಗೆ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘಟನೆಗೆ ಪೂರಕವಾಗಿದೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾದ ಲತಾ ಮಡಿಕೆಬೀಡು ಮಾತನಾಡಿ, ಮಹಿಳೆಯರು ಸಂಘಟಿತಗೊಳ್ಳುವ ಮೂಲಕ ಸಮಾಜದ ಆಗು ಹೋಗುಗಳನ್ನು ತಿಳಿಯಬಹುದು. ಈ ರೀತಿಯ ಸ್ಪಂದನೆ ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘವು ಬೆಳವಣಿಗೆಗೆ ಇನ್ನಷ್ಟು ಪೂರಕವಾಗಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…

Read More

ಮಡಿಕೇರಿ ಮಾ.26 NEWS DESK : ರೋಟರಿ ಮಡಿಕೇರಿ ವತಿಯಿಂದ ನಗರದ ಶ್ರೀ ರಾಜರಾಜೇಶ್ವರಿ ಶಾಲೆ ಮತ್ತು ಶ್ರೀ ರಮಾದೇವಿ ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಕ್ಕೆ ದಹನ ಯಂತ್ರ (ಸ್ಯಾನಿಟರಿ ನ್ಯಾಪ್ಕಿನ್ ಇನ್ಸಿನರೇಟರ್) ವನ್ನು ವಿತರಿಸಲಾಯಿತು. ರೋಟರಿ ಸಂಸ್ಥೆಯು ಸಾಮಾಜಿಕ ಕಳಕಳಿ, ಶಿಕ್ಷಣ, ಆರೋಗ್ಯ ಜಾಗೃತಿ, ವೃತ್ತಿಪರ ಕೌಶಲ್ಯ, ಸ್ವಚ್ಛತೆ ಮತ್ತು ಪರಿಸರದ ಬಗ್ಗೆ ಹೆಚ್ಚು ಕಾಳಜಿ ಹೊಂದಿದೆ. ದಹನ ಯಂತ್ರ ವಿತರಿಸುವ ಮೂಲಕ ಇದನ್ನು ಸಾಬೀತು ಪಡಿಸಿದೆ ಎಂದು ರೋಟರಿ ಮಡಿಕೇರಿ ಪ್ರಮುಖರು ತಿಳಿಸಿದರು. ರೋಟರಿ ಮಡಿಕೇರಿ ಅಧ್ಯಕ್ಷೆ ಲಲಿತಾ ರಾಘವನ್, ಸಮುದಾಯ ಸೇವಾ ವಿಭಾಗದ ನಿರ್ದೇಶಕ ಸುದಯ್ ನಾಣಯ್ಯ, ಯುವಸೇವಾ ನಿರ್ದೇಶಕ ಅನಿಲ್ ಕೃಷ್ಣಾನಿ, ಮಲ್ಲಿಗೆ ಪೈ, ರೋ.ಈಶ್ವರ್ ಭಟ್, ಶ್ರೀ ರಾಜರಾಜೇಶ್ವರಿ ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಶ್ರೀ ರಮಾದೇವಿ ವಸತಿ ನಿಲಯದ ಸಿಬ್ಬಂದಿಗಳು ಹಾಜರಿದ್ದರು.

Read More

ಮಡಿಕೇರಿ NEWS DESK ಮಾ.26 : ಮಹಿಳಾ ಸಬಲೀಕರಣಕ್ಕಾಗಿ ವೃತ್ತಿಪರ ಕೌಶಲ್ಯ ಶಿಬಿರದಡಿ ರೋಟರಿ ಮಡಿಕೇರಿ ವತಿಯಿಂದ ಆಯೋಜಿಸಿರುವ ಟೈಲರಿಂಗ್ ತರಬೇತಿಗೆ ಮಡಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಚಾಲನೆ ನೀಡಲಾಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸರಕಾರಿ ಪದವಿ ಪೂರ್ವ ಕಾಲೇಜ್ ನ ಪ್ರಾಂಶುಪಾಲ ಡಾ.ವೆಂಕಟೇಶ್ ಪ್ರಸನ್ನ ಅವರು ಕಾಲೇಜ್ ನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯದ ತರಗತಿಗಳನ್ನು ನಡೆಸಿ ಸ್ವಾವಲಂಬಿ ಬದುಕಿಗೆ ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು. ಬ್ಯೂಟಿಷಿಯನ್ ಮತ್ತು ಉತ್ತಮ ಆತಿಥ್ಯಕ್ಕೆ ಸಂಬAಧಿಸಿದ ತರಬೇತಿಗಳನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕ ಜೀವನದ ನಂತರ ಎದೆಗುಂದದೆ ಸ್ವಯಂ ಉದ್ಯೋಗ ಸೃಷ್ಟಿಸಿಕೊಳ್ಳಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಇದೀಗ ಸಾಮಾಜಿಕ ಕಳಕಳಿ ಹೊಂದಿರುವ ರೋಟರಿ ಮಡಿಕೇರಿ ಸಂಸ್ಥೆ ಕೂಡ ವಿದ್ಯಾರ್ಥಿನಿಯರಿಗೆ ಟೈಲರಿಂಗ್ ತರಬೇತಿ ನೀಡಲು ಮುಂದೆ ಬಂದಿರುವುದು ಹೆಚ್ಚು ಉಪಯುಕ್ತವೆನಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರೋಟರಿ ಮಡಿಕೇರಿ ಅಧ್ಯಕ್ಷರಾದ ಲಲಿತಾ ರಾಘವನ್ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು…

Read More