ಲೇಖಕ: admin

ಗೋಣಿಕೊಪ್ಪ ಡಿ.1 NEWS DESK : ವಿರಾಜಪೇಟೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಹಿರಿಯ ಮುಖ್ಯ ಶುಶ್ರೂಷಾಧಿಕಾರಿಯಾಗಿರುವ ಇಂದಿರಾವತಿ ಎಂ.ಬಿ ಅವರು ಫ್ಲಾರೆನ್ಸ್ ನೈಟಿಂಗೇಲ್ ನರ್ಸ್ ಪ್ರಶಸ್ತಿ -2025 ಪಡೆದುಕೊಂಡಿದ್ದಾರೆ. ಬೆಂಗಳೂರಿನ ಕರ್ನಾಟಕ ಸುದ್ದಿ ಸಂಘ” ಮತ್ತು “ಭಾರತದ ರಾಷ್ಟ್ರೀಯ ಪತ್ರಿಕಾ ಮಂಡಳಿ” ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆ ನೀಡುವ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಟೌನ್‌ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಮೂರ್ನಾಡಿನ ಅವಂದೂರು ಗ್ರಾಮದ ಶಾಸ್ತ್ರಿ ನಗರದ ನಿವಾಸಿ, ಮೊಟೇರ ಜಯರಾಮ್ ಅವರ ಧರ್ಮ ಪತ್ನಿಯಾಗಿದ್ದಾರೆ.

Read More

ಮಡಿಕೇರಿ ಡಿ.1 NEWS DESK : ಮಡಿಕೇರಿ ಕೊಡವ ಸಮಾಜದ ವತಿಯಿಂದ ವರ್ಷಂಪ್ರತಿಯಂತೆ ಮೂರು ದಿನಗಳ ಪುತ್ತರಿ ಈಡ್ ಕಾರ್ಯಕ್ರಮಕ್ಕೆ  ಪುತ್ತರಿ ಕೋಲ್ ಮಂದ್ ನಲ್ಲಿ ಚಾಲನೆ ನೀಡಲಾಯಿತು. ಮಡಿಕೇರಿ ಕೊಡವ ಸಮಾಜದ ಅಧೀನದಲ್ಲಿ‌ ಜಿಲ್ಲಾ ಕ್ರೀಡಾಂಗಣದ ಸನೀಹದಲ್ಲಿರುವ ಮಂದ್ ಈ ಬಾರಿ ನವೀಕರಣಗೊಂಡಿದ್ದು‌, ಹೊಸದಾಗಿ ಆಲ್ ಮರ ನೆಡುವ ಕಾರ್ಯವನ್ನು ನಡೆಸಲಾಗಿತ್ತು. ಪುತ್ತರಿ ಹಬ್ಬಕ್ಕೂ ಮುನ್ನ ಕೊಡವ ಜನಪದ ಕಲೆಗಳನ್ನು ಯುವಕ ಪೀಳಿಗೆಗೂ ಕಲಿಸುವ ಮೂಲಕ ಈಡ್ ಹೆಸರಿನಲ್ಲಿ ತಾಲೀಮು ನಡೆಸುವುದು ಸಂಪ್ರದಾಯಬದ್ದವಾದ ವಾಡಿಕೆಯಾಗಿದೆ. ಆರಂಭಿಕ ದಿನದಂದು ನಗರ ವ್ಯಾಪ್ತಿಯ ಹಲವಷ್ಟು ಕೊಡವ ಬಾಂಧವರು ಪಾಲ್ಗೊಂಡಿದರು.‌ ಕೊಡವ ಸಮಾಜದ ಅಧ್ಯಕ್ಷರಾದ ಮಂಡುವಂಡ ಮುತ್ತಪ್ಪ, ಕೊಡವ ಸಾಂಪ್ರದಾಯಿಕ ಉಡುಪಿನೊಂದಿಗೆ ನವೀಕೃತಗೊಂಡಿರುವ ಮಂದ್ ತೆರೆಯುವ ಕಾರ್ಯಕ್ರಮದೊಂದಿಗೆ ಪುತ್ತರಿ ಈಡಿಗೆ ಚಾಲನೆ ನೀಡಿ ಮಾತನಾಡಿದರು. ಮಂದ್ ನೆಲೆಯ ಬೃಹತ್ ಮರ ಮುರಿದು ಬಿದ್ದು ಅದೇ ನೆಲೆಯಲ್ಲಿ ಅರಳಿ ಗಿಡವನ್ನು ಸಂಪ್ರದಾಯವಾಗಿ ನೆಡಲಾಯಿತು. ಹಿಂದಿನ ಸಂಪ್ರದಾಯದಂತೆ ಪುತ್ತರಿ ನಮ್ಮೆಯ ಮೂರು ದಿನ ಮುಂಚಿತವಾಗಿ ಈ ಮಂದ್‌ನಲ್ಲಿ…

Read More

ಬೆಂಗಳೂರು NEWS DESK ನವೆಂಬರ್ 30 : ಕನ್ನಡ ಭಾಷೆ ರಾಜ್ಯದ  ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು  ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು   ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ  ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ  ಕಾರ್ಯಕ್ರಮವನ್ನು ಉದ್ಘಾಟಿಸಿ,  ಮಾತನಾಡಿದರು. *ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿ* ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ. 1882 ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು,  ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ, ತುಳು,  ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ , ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ  ಅರೆಭಾಷೆಯಾಗಿದೆ ಎಂದರು.…

Read More

ಮಡಿಕೇರಿ NEWS DESK ನ.30 : ಹೆಚ್ಚಿನ ಸಂಖ್ಯೆಯಲ್ಲಿರುವ ಒಕ್ಕಲಿಗ ಜನಾಂಗ ಬಾಂಧವರು ಸಂಘಟಿತರಾಗಿ ಗುರುತಿಸಿಕೊಳ್ಳಲು ರಾಜ್ಯ ಒಕ್ಕಲಿಗರ ಸಂಘದ ಸದಸ್ಯತ್ವವನ್ನು ಪಡೆದುಕೊಳ್ಳುವಂತೆ ಕುಶಾಲನಗರ ತಾಲ್ಲೂಕು ಒಕ್ಕಲಿಗರ ಸಂಘದ ಖಜಾಂಚಿ ಅರುಣ್ ಚಂಗಪ್ಪ ಮನವಿ ಮಾಡಿದ್ದಾರೆ. ಅರ್ಜಿ ಸಲ್ಲಿಸಲು ಡಿ.10 ಕೊನೆಯ ದಿನವಾಗಿದ್ದು, ರಾಜ್ಯ ಒಕ್ಕಲಿಗರ ಸಂಘದ ಸದಸ್ಯತ್ವದ ಅರ್ಜಿಗಳನ್ನು ನಾಡಪ್ರಭು ಪತ್ತಿನ ಬ್ಯಾಂಕ್, ಕುಶಾಲನಗರ, ಡಿ.ಸಿ.ಸಿ ಬ್ಯಾಂಕ್‌ನ ಜಿಲ್ಲಾ ಮತ್ತು ತಾಲ್ಲೂಕು ಶಾಖೆಗಳಲ್ಲಿ ವಿತರಿಸಲಾಗುತ್ತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಕ್ಕಲಿಗ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ, ಆದರೆ ಸಂಘಟಿತರಾಗಿ ಗುರುತಿಸಿಕೊಳ್ಳುವ ಪ್ರಮಾಣ ತುಂಬಾ ಕಡಿಮೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ಸದಸ್ಯತ್ವ ಪಡೆಯುವ ಮೂಲಕ ಒಕ್ಕಲಿಗ ಸಮುದಾಯದ ಶಕ್ತಿಯನ್ನು ಹೆಚ್ಚಿಸಲು ಮುಂದಾಗಬೇಕೆAದು ಕರೆ ನೀಡಿದ್ದಾರೆ. ನಿಗಧಿತ ದಿನಾಂಕದೊಳಗೆ ಸದಸ್ಯತ್ವ ಶುಲ್ಕ ಪಾವತಿಸಿ ಅರ್ಜಿ ಪಡೆಯಬೇಕು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಬAಧಿಸಿದ ಬ್ಯಾಂಕ್ ಶಾಖೆಗೆ ಸಲ್ಲಿಸಬೇಕು ಎಂದು ಅರುಣ್ ಚಂಗಪ್ಪ ಹೇಳಿದ್ದಾರೆ.

Read More

ಮಡಿಕೇರಿ NEWS DESK ನ.30 : ಕಳೆದ 40 ವರ್ಷಗಳಿಂದ ಕೊಡವರ ನೈಜ ಚರಿತ್ರೆಯನ್ನು ಬುಡಮೇಲು ಮಾಡುವ ಪ್ರಯತ್ನಗಳು ನಡೆಯುತ್ತಿದೆ. ಕೊಡಗು ಹಾಗೂ ಈ ದೇಶಕ್ಕೆ ಕೊಡವರ ಕಾಣಿಕೆ ಏನೇನೂ ಇಲ್ಲ ಎಂದು ಪ್ರತಿಬಿಂಬಿಸುವ ಮೂಲಕ ಕೊಡವರನ್ನು ಖಳನಾಯಕರಂತೆ ತೋರಿಸುವ ಕ್ರೂರ ಹುನ್ನಾರ ಮುಂದುವರೆದಿದೆ. ಕೊಡವ ಲ್ಯಾಂಡ್ ಗಾಗಿ ಒತ್ತಾಯಿಸಿ ಮತ್ತು ಕೊಡವರ ಕುರಿತು ಸುಳ್ಳು ಚರಿತ್ರೆ ಸೃಷ್ಟಿಯ ವಿರುದ್ಧ ಜನಜಾಗೃತಿ ಮೂಡಿಸಲು ಜನವರಿ ತಿಂಗಳಿನಿಂದ ಜಿಲ್ಲೆಯಾದ್ಯಂತ ಅಭಿಯಾನ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತಿಳಿಸಿದ್ದಾರೆ. 2026-27ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿಯಲ್ಲಿ ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು ಪ್ರತ್ಯೇಕವಾಗಿ ‘ಕೊಡವ’ ಎಂದು ದಾಖಲೀಕರಣಗೊಳ್ಳುವಂತೆ ಜನಜಾಗೃತಿ ಮೂಡಿಸುವ ಸಲುವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಪಾಲಿಬೆಟ್ಟದಲ್ಲಿ ನಡೆದ 21ನೇ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿ.ರಿಚರ್ ಬರೆದ ‘ಕೂರ್ಗ್ ಗೆಜಿಟಿಯರ್’, ಡಿ.ಎನ್.ಕೃಷ್ಣಯ್ಯ ಅವರು ಬರೆದ ‘ಕೊಡಗಿನ ಇತಿಹಾಸ’, ಕೃಷ್ಣಮೂರ್ತಿ ಅವರು ಬರೆದ…

Read More

ಸೋಮವಾರಪೇಟೆ ನ.29 NEWS DESK : ನಾವು ಕನ್ನಡದಲ್ಲಿ ಮಾತನಾಡಿದಾಗ, ಕನ್ನಡದಲ್ಲಿ ಬರೆದಾಗ, ಕನ್ನಡದ ಸಾಹಿತ್ಯ ಓದಿದಾಗ, ಕನ್ನಡದ ಕಲೆಯನ್ನು ಬೆಂಬಲಿಸಿದಾಗ ಕನ್ನಡ ಭಾಷೆ ಬದುಕುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು. ಸಂತ ಜೋಸೆಫರ ವಿದ್ಯಾ ಸಂಸ್ಥೆ ಮತ್ತು ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಸಾಹಿತ್ಯ ಸಂಭ್ರಮ- 2025 ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು. ಕನ್ನಡ ಅತೀ ಪ್ರಾಚೀನ ಭಾಷೆಯಾಗಿದೆ. ತರ್ಕಬದ್ಧಭಾಷೆಯೂ ಕೂಡ. 8 ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಕನ್ನಡಿಗರು ಕನ್ನಡವನ್ನು ಹೆಮ್ಮೆಯಿಂದ ಮಾತನಾಡಬೇಕು. ಪರಭಾಷಿಕರಿಗೆ ಕನ್ನಡವನ್ನು ಮಾತನಾಡುವಂತೆ ಹೇಳಿಕೊಡಬೇಕು ಎಂದು ಹೇಳಿದರು. ಕನ್ನಡ ನಮ್ಮ ಮಾತೃಭಾಷೆ, ಹೃದಯದ ಭಾಷೆಯಾಗಿದೆ. ಕನ್ನಡ ಅನ್ನಕೋಡುವ ಭಾಷೆ, ಆದರೂ ಇತರ ಭಾಷೆಯನ್ನು ಕಲಿಯಬೇಕು. ಗೌರವಿಸಬೇಕು ಎಂದು ಕಿವಿ ಮಾತು ಹೇಳಿದರು. ಭಾರತಾಂಬೆ ತಾಯಿಯಾದರೆ ಕನ್ನಡಾಂಭೆಯನ್ನು ಮಗಳಾಗಿ…

Read More

ಮಡಿಕೇರಿ ನ.29 NEWS DESK : ಕ್ರೀಡೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ದೇಶಕ್ಕೆ ಯಶಸ್ವಿಯನ್ನು ತಂದು ಕೊಡಿ ಎಂದು ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ.ಎಲ್.ಚಿದಾನಂದ ಕುಮಾರ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕರ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಮಾರೋಪ  ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯಶಸ್ವಿಯಾಗಿ ಕ್ರೀಡೆಗಳಲ್ಲಿ ಭಾಗವಹಿಸಿ ಎಂದು ಆಶಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಚಿತ್ರಾ ವೈ. ಮಾತನಾಡಿ, ಸೋಲು ಗೆಲುವು ಮುಖ್ಯವಲ್ಲ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಹೇಳಿದರು. ಪ್ರಾಂಶುಪಾಲರು ಹಾಗೂ ಕೊ.ಜಿ.ಪ.ಪೂ.ಕಾ ಪ್ರಾಂಶುಪಾಲರುಗಳ ಸಂಘದ ಖಜಾಂಚಿ ವಿವಿಯನ್ ಅಂತೋಣಿ ಆಲ್ವಾರಿಸ್ ಮಾತನಾಡಿ, ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಕ್ರೀಡೆಗಳಿಗೆ ಹೆಚ್ಚಿನ…

Read More

ಮಡಿಕೇರಿ ನ.29 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಮಡಿಕೇರಿಯ ಸಂತ ಜೋಸೆಪರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ‘ಸ್ವಚ್ಛ ಕೊಡಗು ಸುಂದರ ಕೊಡಗು’ ಸ್ವಚ್ಛತಾ ಅಭಿಯಾನವು ನಗರದ ಮುಖ್ಯರಸ್ತೆಯಲ್ಲಿ ನಡೆಯಿತು. ನಗರದ ರಾಜಾಸೀಟು ಮುಂಭಾಗದಲ್ಲಿ ನಗರ ಪೊಲೀಸ್ ಅಧಿಕಾರಿ ರಾಧಾ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ ನಗರದ ಮುಖ್ಯರಸ್ತೆಗಳ ಇಕ್ಕೆಲಗಳಲ್ಲಿ ತ್ಯಾಜ್ಯ ಕಸವನ್ನು ಹೆಕ್ಕಿ ವಿಲೇವಾರಿ ಮಾಡಲಾಯಿತು. ಬಳಿಕ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ತೆರಳಿದ ವಿದ್ಯಾರ್ಥಿಗಳು ಅಲ್ಲಿಯೂ ಸ್ವಚ್ಛತಾ ಅಭಿಯಾನ ಕೈಗೊಂಡರು. ಸಂತ ಜೋಸೆಫರ ಗೈಡ್ ಶಿಕ್ಷಕಿ ಎನ್.ಪಿ.ಪ್ರೇಮ, ಶಿಕ್ಷಕಿಯರಾದ ಡಯನಾ ಚಂಗಪ್ಪ, ಪ್ರದೀಪ್, ಸ್ಕೌಟ್ಸ್‍ನ ಜಿಲ್ಲಾ ಸಹಾಯಕ ಆಯುಕ್ತರಾದ ಗಣೇಶ್, ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಪಿಲೋಮಿನಾ ಡಿ’ಸೋಜ, ಜಿಲ್ಲಾ ಸಂಘಟಕರಾದ ದಮಯಂತಿ, ಸಂತ ಜೋಸೆಫರ ಶಾಲಾ ಶಿಕ್ಷಕರುಗಳಾದ ಮೋಹಿನಿ ಸಿ.ಸಿ., ದಿವ್ಯ, ಹಾಗೂ…

Read More

ಗೋಣಿಕೊಪ್ಪ ನ.29 NEWS DESK : ಒಬ್ಬರ ರಕ್ತದಿಂದ ಮೂವರ ಜೀವ ಉಳಿಸಬಹುದಾಗಿದ್ದು, ಈ ಬಗ್ಗೆ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ. ಕರುಂಬಯ್ಯ ಮನವಿ ಮಾಡಿಕೊಂಡರು. ಮಾಧ್ಯಮ ಸ್ಪಂದನ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ, ಗೋಣಿಕೊಪ್ಪ ರೋಟರಿ ಸಹಯೋಗದಲ್ಲಿ ಉಮಾಮಹೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ಒಬ್ಬರು ನೀಡುವ ರಕ್ತದಿಂದ ಕನಿಷ್ಠ ಮೂವರ ಜೀವ ಉಳಿಸಲು ಸಾಧ್ಯವಿದೆ. ಇದರಿಂದ ರಕ್ತದಾನ ಮಹತ್ವವನ್ನು ಅರಿತುಕೊಂಡು ಸ್ವಯಂಪ್ರೇರಿತವಾಗಿ ನೀಡಲು ಮುಂದಾಗಬೇಕಿದೆ ಎಂದು ಮನವಿ ಮಾಡಿಕೊಂಡರು. ಕೊಡಗು ಜಿಲ್ಲೆಯಲ್ಲಿ ರಕ್ತದ ಬೇಡಿಕೆ ಹೆಚ್ಚಾಗುತ್ತಿದ್ದು, ಶಿಬಿರ ಆಯೋಜನೆ ಮೂಲಕ ಬೇಡಿಕೆ ಪೂರೈಸಿಕೊಳ್ಳುವ ಕಾರ್ಯದಲ್ಲಿ ರಕ್ತನಿಧಿ ಕೇಂದ್ರ ತೊಡಗಿಕೊಂಡಿದೆ. ವಾರಕ್ಕೆ ಕನಿಷ್ಟ 3 ಶಿಬಿರಗಳು ರಕ್ತದಾನಕ್ಕಾಗಿ ಮೀಸಲಿಡುವ ಅನಿವಾರ್ಯತೆ ಎದುರಾಗಿದೆ. ಪ್ರಸ್ತುತ ವರ್ಷಕ್ಕೆ ಸುಮರು 100 ಶಿಬಿರ…

Read More

ಮಡಿಕೇರಿ ನ.29 NEWS DESK : ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್ ಮತ್ತು ಒಂದು ಲೀಟರ್ ನ ಪ್ಲಾಸ್ಟಿಕ್ ಬಾಟಲ್ ಗಳ ಮಾರಾಟವನ್ನು ನಿಷೇಧಿಸಿರುವಂತೆ ಕೊಡಗು ಜಿಲ್ಲೆಯಾದ್ಯಂತ ಈ ಕ್ರಮವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ವಿರಾಜಪೇಟೆಯ ಯೋಗೇಶ್ ನಾಯ್ಡು ಟಿ.ಎಂ ಅವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ ಅವರು ಪ್ಲಾಸ್ಟಿಕ್ ಬಾಟಲ್ ಗಳಿಂದ ಜಿಲ್ಲೆಯ ಪರಿಸರದ ಮೇಲೆ ಉಂಟಾಗುತ್ತಿರುವ ವ್ಯತಿರಿಕ್ತ ಪರಿಣಾಮದ ಕುರಿತು ವಿವರಿಸಿದರು. ಪ್ಲಾಸ್ಟಿಕ್ ಬಾಟಲಿಗಳ ನಿಷೇಧದ ಕ್ರಮ ಮಡಿಕೇರಿ ನಗರದಲ್ಲಿ ಯಶಸ್ವಿಯಾಗಿದೆ. ಆದರೆ ಜಿಲ್ಲೆಯ ಇತರ ಭಾಗಗಳಲ್ಲಿ ಅರ್ಧ ಲೀಟರ್ ಮತ್ತು ಒಂದು ಲೀಟರ್ ನ ಪ್ಲಾಸ್ಟಿಕ್ ಬಾಟಲ್ ಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರಿಂದಾಗಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಾಟಲ್ ಗಳ ರಾಶಿ ಕಂಡು ಬರುತ್ತಿದ್ದು, ಅಶುಚಿತ್ವಕ್ಕೆ ಕಾರಣವಾಗಿದೆ. ಚರಂಡಿ ಮತ್ತು ತೋಡುಗಳಲ್ಲಿ ನೀರಿನ ಹರಿವಿಗೂ ತೊಡಕುಂಟಾಗುತ್ತಿದೆ. ವಿರಾಜಪೇಟೆ ಭಾಗದಲ್ಲಿ ಪ್ಲಾಸ್ಟಿಕ್ ಬಾಟಲ್ ಗಳು ವ್ಯಾಪಕವಾಗಿ…

Read More