ಲೇಖಕ: admin

ಮಡಿಕೇರಿ ಡಿ.29 NEWS DESK : ಕನ್ನಡ ನಾಡು ಹಾಗೂ ಭಾಷೆಗೆ ಅಪಾರ ಕೊಡುಗೆ ನೀಡಿರುವ ರಾಷ್ಟ್ರಕವಿ ಕುವೆಂಪು ಅವರ ಈಗಿರುವ ಪ್ರತಿಮೆ ಜಾಗದಲ್ಲಿ ಕಂಚಿನ ಪ್ರತಿಮೆ ನಿರ್ಮಾಣ ಮಾಡುವಂತಾಗಬೇಕು ಎಂದು ಜಿ.ಪಂ.ಮಾಜಿ ಅಧ್ಯಕ್ಷರು ಹಾಗೂ ಕುವೆಂಪು ಕುಟುಂಬದ ಸಂಬಂಧಿಕರಾದ ಕೆ.ಪಿ.ಚಂದ್ರಕಲಾ ಅವರು ಕೋರಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಪ್ರಯುಕ್ತ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕನ್ನಡ ಭಾಷೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲ ಕವಿ ಕುವೆಂಪು ಅವರ ದೊಡ್ಡ ಕಂಚಿನ ಪ್ರತಿಮೆಯನ್ನು ನಿರ್ಮಿಸಬೇಕು ಎಂದು ಅವರು ಮನವಿ ಮಾಡಿದರು. ಕುವೆಂಪು ಅವರ ಮಂತ್ರ ಮಾಂಗಲ್ಯ ಸರಳ ವಿವಾಹವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಇದರಿಂದ ಉತ್ತಮ ಬದುಕು ಕಾಣಬಹುದು. ಕುವೆಂಪು ಅವರ ರಾಮಾಯಣ ದರ್ಶನಂ, ಮಲೆಗಳಲ್ಲಿ ಮದುಮಗಳು ಸೇರಿದಂತೆ ಹಲವು ಕೃತಿಗಳನ್ನು ಅಧ್ಯಯನ ಮಾಡಬೇಕು. ಮುಂದಿನ ಬಾರಿ ಕುಶಾಲನಗರದಲ್ಲಿ ಕಾರ್ಯಕ್ರಮ ಆಯೋಜಿಸಬೇಕು…

Read More

ಮಡಿಕೇರಿ ಡಿ.29 NEWS DESK : ವಸ್ತುಗಳು ಮತ್ತು ತಂತ್ರಜ್ಞಾನಗಳಲ್ಲಿನ ಪ್ರಗತಿಗಳು: ಉಷ್ಣ, ಯಾಂತ್ರಿಕ ಮತ್ತು ಕ್ರಯೋಜೆನಿಕ್ ಅನ್ವಯಿಕೆಗಳು” ಎಂಬ ವಿಷಯದ ಕುರಿತು 6 ದಿನಗಳ AICTE ಪ್ರಾಯೋಜಿತ ಆಫ್‌ಲೈನ್  ATAL ಫ್ಯಾಕಲ್ಟಿ ಅಭಿವೃದ್ಧಿ ಕಾಯಾ೯ಗಾರವನ್ನು ಪೊನ್ನಂಪೇಟೆಯ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗವು ಸೋಮವಾರ ಆಯೋಜಿಸಿತ್ತು.  ಉದ್ಘಾಟನಾ ಅಧಿವೇಶನವು ಬೆಳಗಿಸುವುದರೊಂದಿಗೆ ಪ್ರಾರಂಭವಾಯಿತು. ಮುಖ್ಯ ಅತಿಥಿಯಾಗಿದ್ದ ಕಾನ್ಪುರದ ಐಐಟಿ ಯ ಪ್ರಾಧ್ಯಾಪಕ ಡಾ. ಕಾಂತೇಶ್ ಬಲಾನಿ ವೃತ್ತಿಪರ ಜೀವನದಲ್ಲಿ ನೈತಿಕತೆ, ಸಮಗ್ರತೆ, ದೃಷ್ಟಿಕೋನ, ಸಹಾನುಭೂತಿ ಮತ್ತು ನೈತಿಕ ನಿರ್ಧಾರ ತೆಗೆದುಕೊಳ್ಳುವಿಕೆಯನ್ನು ಒತ್ತಿ ಹೇಳುವ ಮುಖ್ಯ ಭಾಷಣ ಮಾಡಿದರು. ಅಧ್ಯಕ್ಷೀಯ ಭಾಷಣದಲ್ಲಿ, ಕೊಡವ ಶಿಕ್ಷಣ ಸಂಘದ ಅಧ್ಯಕ್ಷ ಡಾ. ಎಂ. ಸಿ. ಕಾರಿಯಪ್ಪ , ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮಗಳ ಹೆಚ್ಚುತ್ತಿರುವ ಮಹತ್ವದ ಬಗ್ಗೆ ಮಾಹಿತಿ ನೀಡಿ, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ ನೆಟ್‌ವರ್ಕಿಂಗ್, ಮಾನ್ಯತೆ ಮತ್ತು ಒಟ್ಟಾರೆ ಶೈಕ್ಷಣಿಕ ಬೆಳವಣಿಗೆಯನ್ನು ಹೆಚ್ಚಿಸುವಲ್ಲಿ ಅವುಗಳ ಪಾತ್ರವನ್ನು ಅವರು ವಿವರಿಸಿದರು. ಅಸೋಸಿಯೇಟ್ ಪ್ರೊಫೆಸರ್ ಮತ್ತು…

Read More

ಮಡಿಕೇರಿ.ಡಿ.29 NEWS DESK : ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಡಿ.30 ರಂದು ನಡೆಯಲಿದೆ. ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, 11 ಗಂಟೆಗೆ ಅದಿವಾಸ ಹೋಮ, ಕಲಶ ಪೂಜೆ, ಕಲಶ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ ಎಂದು ದೇವಾಲಯದ ಪ್ರಮುಖರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.29 NEWS DESK : ಕನ್ನಡ ಸಾಹಿತ್ಯವು ಸಮಾಜದ ಒಳನೋವಿಗೆ ಸ್ಪಂದಿಸುವ ಸಂವೇದನಾಶೀಲ ಶಕ್ತಿ. ಅದು ವ್ಯಕ್ತಿಯ ಮನೋವಿಕಾಸಕ್ಕೂ, ಸಮೂಹದ ಸಾಂಸ್ಕೃತಿಕ ಬೆಳವಣಿಗೆಗೂ ಕಾರಣವಾಗುತ್ತದೆ ಎಂದು ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಿದ್ದಾಪುರ ವಾಸುದೇವ ಭಟ್ ಅಭಿಪ್ರಾಯಪಟ್ಟರು. ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಹಿತ್ಯವು ಮನುಷ್ಯನನ್ನು ಮನುಷ್ಯನಿಗೆ ಹತ್ತಿರ ಮಾಡುವ ಸಾಧನವಾಗಿದೆ ಎಂದರು. ಜೀವನದ ಕಠಿಣ ಅನುಭವಗಳಿಗೆ ಅರ್ಥ ನೀಡುವ ಶಕ್ತಿ ಸಾಹಿತ್ಯಕ್ಕಿದೆ. ಸಮಾಜದಲ್ಲಿ ಒಳ್ಳೆಯ ಮೌಲ್ಯಗಳನ್ನು ಬೆಳೆಸುವಲ್ಲಿ ಬರಹಗಾರರ ಪಾತ್ರ ಮಹತ್ವದ್ದೆಂದು ಹೇಳಿದರು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್, ಸಾಹಿತ್ಯ ಸಮ್ಮೇಳನಗಳು ಆತ್ಮಾವಲೋಕನಕ್ಕೆ ಅವಕಾಶ ನೀಡಬೇಕು ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಗಳು ಹೆಚ್ಚಿನ ಗಮನ ಸೆಳೆಯುತ್ತಿರುವುದು ಗಮನಾರ್ಹ. ಆದರೆ ಒಂದು ಸಾಲಿನ ಸಾಹಿತ್ಯವೂ ಜನಮನದಲ್ಲಿ ದೊಡ್ಡ ಅಲೆ ಎಬ್ಬಿಸಬಲ್ಲ ಶಕ್ತಿ ಹೊಂದಿದೆ…

Read More

ಮಡಿಕೇರಿ NEWS DESK ಡಿ.29 : ಕೊಡವ ಹಾಕಿ ಅಕಾಡೆಮಿ ವತಿಯಿಂದ ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ ಯಲ್ಲಿ ಚೆಪ್ಪುಡಿರ ಮತ್ತು ಕುಲ್ಲೇಟಿರ ತಂಡಗಳು ಫೈನಲ್ ಪ್ರವೇಶಿಸಿವೆ. ಡಿ.30 ರಂದು ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ರೋಚಕ ಅಂತಿಮ ಪಂದ್ಯ ನಡೆಯಲಿದೆ. ಇಂದು ನಡೆದ ಸೆಮಿಫೈನಲ್ ನಲ್ಲಿ ಮಂಡೇಪಂಡ ಮತ್ತು ಚೆಪ್ಪುಡಿರ ನಡುವಿನ ಪಂದ್ಯದಲ್ಲಿ ಚೆಪ್ಪುಡಿರ ತಂಡ 4-3 ಗೋಲುಗಳ ಅಂತರದಲ್ಲಿ ಜಯ ದಾಖಲಿಸಿತು. ಚೆಪ್ಪುಡಿರ ಚೇತನ್ ಎರಡು, ಪ್ರಣವ್ ಹಾಗೂ ಮಾದಪ್ಪ ತಲಾ ಒಂದು ಗೋಲು ಬಾರಿಸಿದರು. ಮಂಡೇಪಂಡ ಪರ ದಿಲನ್ ದೇವಯ್ಯ ಎರಡು ಹಾಗೂ ಚಂದನ್ ಕಾರ್ಯಪ್ಪ ಒಂದು ಗೋಲು ದಾಖಲಿಸಿದರು. ಕುಲ್ಲೇಟಿರ ಮತ್ತು ಕುಪ್ಪಂಡ ತಂಡಗಳು ನಿಗಧಿತ ಅವಧಿಯಲ್ಲಿ ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ನಂತರ ನಡೆದ ಶೂಟ್ ಔಟ್ ನಲ್ಲಿ 3-0 ಗೋಲುಗಳ ಅಂತರದಲ್ಲಿ ಕುಲ್ಲೇಟಿರ ಗೆಲುವು ಸಾಧಿಸಿತು. ಮೊದಲ ಪಂದ್ಯದ…

Read More

ಮಡಿಕೇರಿ ಡಿ.29 NEWS DESK : ನೂತನವಾಗಿ ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ವಿಚಾರ ಪ್ರಸ್ತಾಪಿಸಿ ಚರ್ಚಿಸಿದ್ದೇನೆ. ಇದಕ್ಕೆ ಮುಖ್ಯಮಂತ್ರಿಗಳು ಪೂರಕವಾಗಿ ಸ್ಪಂದಿಸಿದ್ದಾರೆ. ಈ ನಿಟ್ಟಿನಲ್ಲಿ ಕೊಡವ ಅಭಿವೃದ್ಧಿ ನಿಗಮ ಶೀಘ್ರದಲ್ಲೇ ಘೋಷಣೆಯಾಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿಗಳ  ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಂತೆ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದ ಯುನೈಟೆಡ್ ಕೊಡವ ಆರ್ಗನೈಸೇಷನ್ – ಯುಕೊ ಸಂಘಟನೆಯ ನಿಯೋಗವು ಶಾಸಕ ಪೊನ್ನಣ್ಣ ಅವರನ್ನು ವಿರಾಜಪೇಟೆಯ ಅವರ ಗೃಹ ಕಚೇರಿಯಲ್ಲಿ ಭೇಟಿಮಾಡಿ ಚರ್ಚಿಸಿತು. ಈ ಸಂದರ್ಭ ಮಾತನಾಡಿದ ಶಾಸಕರು, ಈಗಾಗಲೇ ಯುಕೊ ಸಂಘಟನೆಯ ಮಂಜು ಚಿಣ್ಣಪ್ಪನವರು ಈ ಕುರಿತು ಹೋರಾಟ ನಡೆಸುತ್ತಾ ಬಂದಿದ್ದಾರೆ. ನನ್ನೊಂದಿಗೂ ಹಲವು ಬಾರಿ ಚರ್ಚಿಸಿದ್ದಾರೆ. ಹಾಗೆಯೇ ನನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೂ ಕೊಡವ ಅಭಿವೃದ್ಧಿ ನಿಗಮ ಸ್ಥಾಪಸುವ ಭರವಸೆ ನೀಡಲಾಗಿತ್ತು. ಹೀಗಾಗಿ ಮುಖ್ಯಮಂತ್ರಿಗಳೊಂದಿಗೆ ವಿಷಯ ಪ್ರಸ್ತಾಪಿಸಿ ಕೊಡವ ಜನಾಂಗಕ್ಕೆ ನೂತನವಾಗಿ ನಿಗಮ…

Read More

ಬೆಂಗಳೂರು ಡಿ.29 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ “ಸಿಎಂ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ”ಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಚರ್ಚಿಸಿದರು. ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್,  ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಹಾಗೂ ವೀಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪಾಲ್ಗೊಂಡರು.

Read More

ರಾಂಪುರ NEWS DESK ಡಿ.29 : ಟ್ರಕ್ ವೊಂದು ಬೊಲೆರೋ ವಾಹನದ ಮೇಲೆ ಬಿದ್ದ ಪರಿಣಾಮ ಬೊಲೆರೋ ಚಾಲಕ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ರಾಂಪುರದಲ್ಲಿ ನಡೆದಿದೆ. ಒಣಹುಲ್ಲಿನಿಂದ ತುಂಬಿದ್ದ ಟ್ರಕ್’ವೊಂದು ಬೊಲೆರೋ ಮೇಲೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ ಬೊಲೆರೋ ಚಾಲಕ ಮೃತಪಟ್ಟಿದ್ದಾನೆ. ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Read More

ವಿರಾಜಪೇಟೆ ಡಿ.29 NEWS DESK : ಆರ್ಜಿ-ಪೆರುಂಬಾಡಿ ಗ್ರಾಮದ ಶ್ರೀ ಅಯ್ಯಪ್ಪ ಭಜನಾ ಮಂದಿರದ 30ನೇ ವರ್ಷದ ಮಂಡಲ ಪೂಜಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಮಂಡಲ ಪೂಜೆಯ ಅಂಗವಾಗಿ ಭಜನಾ ಮಂದಿರದ ಆವರಣದ ಸಭಾಂಗಣದಲ್ಲಿ ಸಂಜೆ ಗ್ರಾಮದ ಮಕ್ಕಳಿಂದ ಭಕ್ತಿ ಪ್ರದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶನಿವಾರ ಬೆಳಿಗ್ಗೆ ಗಣಪತಿ ಹೋಮದೊಂದಿಗೆ ಪೂಜಾ ವಿಧಿವಿಧಾನಗಳಿಗೆ ಚಾಲನೆ ನೀಡಲಾಯಿತು. ಮಧ್ಯಾಹ್ನ ವಿಶೇಷ ಪೂಜೆ ಭಜನೆ ಮಾಹಾಪೂಜೆ ನಡೆಯಿತು. ಸಂಜೆ ಮಂದಿರ ಮುಂಭಾಗದಿಂದ ಶ್ರೀ ಅಯ್ಯಪ್ಪನ ಉತ್ಸವ ಮೂರ್ತಿ ವಿದ್ಯುತ್ ಅಲಂಕೃತ ಮಂಟಪದೊಂದಿಗೆ ಮಹಿಳೆಯರು ಮಕ್ಕಳ ತಾಲಾಪೊಲಿ, ಅಯ್ಯಪ್ಪ ವೃತಧಾರಿಗಳ ಕಳಶ ಹೊತ್ತು ಅಯ್ಯಪ್ಪ ಘೋಷ, ಚೆಂಡೆ ವಾದ್ಯಗಳೊಂದಿಗೆ ಶೋಭಾಯತ್ರೆ ಜರುಗಿತು. ಮೆರವಣಿಗೆ ಚೆಕ್ ಪೋಸ್ಟ್ ವರೆಗೆ ಸಾಗಿ ಚಾಮುಂಡಿ ಮಾಳದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಭಜನ ಮಂದಿರದಲ್ಲಿ ಅಂತ್ಯಗೊಂಡಿತು. ಪದಿನೆಟ್ಟ್ ಪಡಿ ಪೂಜೆ, ಮಾಹಾಪೂಜೆ ನಡೆಯಿತು. ಮಂಡಲ ಪೂಜಾ ಮಹೋತ್ಸವ ಅಂಗವಾಗಿ ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ ನಡೆಯಿತು. ಶ್ರೀ ಅಯ್ಯಪ್ಪ…

Read More

ಮಡಿಕೇರಿ ಡಿ.29 NEWS DESK  : ತಿತಿಮತಿಯ ಲ್ಯಾಂಪ್ಸ್ ಅಕಾಡೆಮಿಯ ಬೆಳ್ಳಿಹಬ್ಬ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಬೆಳ್ಳಿ ಹಬ್ಬದ ಶುಭಾಶಯಗಳು ಹಾರೈಸುತ್ತಾ ಮಾತನಾಡಿದ ಮಾನ್ಯ ಶಾಸಕರು, ಲ್ಯಾಂಪ್ ಅಕಾಡೆಮಿಯು ದಶಕಗಳಿಂದ ಉತ್ತಮ ಸೇವೆ ಸಲ್ಲಿಸುತ್ತಾ ಈ ಭಾಗದ ಮಕ್ಕಳ ವಿದ್ಯಾರ್ಜನೆಗೆ ಶ್ರಮವಹಿಸುತ್ತಿದೆ. ಇಲ್ಲಿ ಕಲಿತ ಮಕ್ಕಳು ಸಮಾಜದಲ್ಲಿ ಉತ್ತಮ ಹೆಸರು ಗಳಿಸುತ್ತಿದ್ದಾರೆ. ಮುಂದೆಯೂ ಸಹ ನಾಡಿಗೆ ಉತ್ತಮ ವ್ಯಕ್ತಿಗಳನ್ನು ಈ ಅಕಾಡೆಮಿಯ ಮೂಲಕ ಕೊಡುವಂತಾಗಲಿ ಎಂದು ಹಾರೈಸಿದರು. :: ವಿದ್ಯಾರ್ಥಿನಿಗೆ ವಿದ್ಯಾರ್ಥಿವೇತನ ಘೋಷಣೆ :: ಎಸ್‍ಎಸ್‍ಎಲ್‍ಸಿಯಲ್ಲಿ  ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿನಿ ಮೋಕ್ಷಿತಾಗೆ ಗೆ ಇದೇ ಸಂದರ್ಭ ಮುಂದಿನ ಐದು ವರ್ಷಗಳ ಕಾಲ ವಿದ್ಯಾರ್ಥಿವೇತನ ಘೋಷಿಸಿದರು.  ಕಳೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 613 ಅಂಕ ಗಳಿಸಿದ ಬಡ ವಿದ್ಯಾರ್ಥಿನಿ ಮೋಕ್ಷಿತ ಗೆ ಶಾಸಕರು ಅವರ ದತ್ತಿನಿದಿಯಿಂದ ಮುಂದಿನ ಐದು ವರ್ಷಗಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನವನ್ನು ಘೋಷಿಸಿದರು. ಬಡ ಕುಟುಂಬದಿಂದ ಬಂದಿರುವ ಮೋಕ್ಷಿತ ಲೈನ್ ಮನೆಯಲ್ಲಿ ವಾಸವಿದ್ದುಕೊಂಡು ಸ್ವ ಪ್ರಯತ್ನದಿಂದ…

Read More