ಲೇಖಕ: admin

ಸೋಮವಾರಪೇಟೆ ಡಿ.9 : ಬಸ್ಸಿನೊಳಗೆ ಕೇರೆ ಹಾವೊಂದು ಸೇರಿಕೊಂಡು ಆತಂಕ ಸೃಷ್ಟಿಸಿದ ಘಟನೆ ಸೋಮವಾರಪೇಟೆ  ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕೂಡ್ಲಿಪೇಟೆಯಿಂದ ಸೋಮವಾರಪೇಟೆ ಮಾರ್ಗವಾಗಿ ವಿರಾಜಪೇಟೆಗೆ ತೆರಳುವ ಪಶುಪತಿ ಬಸ್ ಪಟ್ಟಣಕ್ಕೆ ಬಂದ ಸಂದರ್ಭ ಇಂಜಿನ್ ಸಮೀಪ ಹಾವೊಂದು ಕಾಣಿಸಿಕೊಂಡಿತು. ಇದರಿಂದ ಕೆಲಕಾಲ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದರು. ಈ ಸಂದರ್ಭ ಸ್ಥಳಕ್ಕಾಗಮಿಸಿದ ಸ್ನೇಕ್ ರಘು ಹಾವನ್ನು  ಹಿಡಿದು ರಕ್ಷಿಸಿದರು. ಹಾವುಗಳನ್ನು ಕಂಡರೆ ಕೊಲ್ಲದೆ ಈ ಸಂಖ್ಯೆಗೆ  9844558693 ಕರೆ ಮಾಡುವಂತೆ ಸ್ನೇಕ್ ರಘು ಮನವಿ ಮಾಡಿದ್ದಾರೆ.

Read More

ಮಡಿಕೇರಿ ಡಿ.9 :   ಮೈಸೂರಿನ ಬ್ರಹ್ಮಾಕುಮಾರಿ ಯಾದವಗಿರಿ ಹಾಗೂ ಜಯಲಕ್ಷ್ಮಿಪುರಂ ಶಾಖೆಯಲ್ಲಿ ಒಂದು ವಾರ ಪ್ರಪುಲ್ಲಿತ ಮನಸ್ಸಿಗಾಗಿ ದಿವ್ಯ ಗುಣಗಳ ಧ್ಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ  ಮಡಿಕೇರಿ ಶಾಖೆಯ ಬ್ರಹ್ಮಾಕುಮಾರಿ ಧನಲಕ್ಷ್ಮೀ ಅಕ್ಕನವರು  ದಿವ್ಯ ಗುಣಗಳ ಕುರಿತು ಪ್ರವಚನ ನೀಡಿ, ಧ್ಯಾನದ ಮುಖಾಂತರ ಅನುಭವ ಮಾಡಿಸಿದರು. ಈ ಸಂದರ್ಭ ಮೈಸೂರು ಉಪ ವಲಯದ ಹಿರಿಯ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಲಕ್ಷ್ಮೀ ಜೀ ಹಾಗೂ ಶಾಖೆಯ ಸಹೋದರ, ಸಹೋದರಿಯರು ಧನಲಕ್ಷ್ಮೀ ಅಕ್ಕ ಅವರನ್ನು ಸನ್ಮಾನಿಸಿ, ಗೌರವಿಸಿದರು.

Read More

ಸಿದ್ದಾಪುರ ಡಿ.9 :  ಮಕ್ಕಳ ಭವಿಷ್ಯವನ್ನು ರೂಪಿಸಲು ಶಿಕ್ಷಣ ಅತ್ಯಗತ್ಯವಾಗಿದ್ದು,  ಪೋಷಕರು ಮಕ್ಕಳನ್ನು ಶಾಲೆಗೆ ಕಡ್ಡಾಯವಾಗಿ ಕಳಿಸುವುದರ ಮೂಲಕ  ಉತ್ತಮ ಭವಿಷ್ಯ ರೂಪಿಸಲು ಸಾಧ್ಯವಾಗಲಿದ್ದು, ಭವಿಷ್ಯದ ಚಿಂತನೆಯೊಂದಿಗೆ ಮುಖ್ಯ ವಾಹಿನಿಗೆ ಬರಬೇಕೆಂದು ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಸ್ವಾಮಿ ಪರಹಿತಾನಂದಜಿ ಮಹಾರಾಜ್ ಕರೆ ನೀಡಿದರು. ಚೆನ್ನಂಗಿ ಸರ್ಕಾರಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿ ಮಾತನಾಡಿ, ಸಂಘ ಸಂಸ್ಥೆಗಳು ಹಾಗೂ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಅಭಿವೃದ್ಧಿಯೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬಂದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು. ಶಾರದಾಶ್ರಮದ ಮೂಲಕ ಚೆನ್ನಂಗಿ ಶಾಲೆಗೆ ಕುಡಿಯುವ ನೀರಿಗಾಗಿ ಬೋರ್ವೆಲ್ ಕೊರಸಲಾಗಿದೆ. ಸಮೀಪದ ಹಾಡಿಗಳಲ್ಲಿ ಸಮುದಾಯ ಭವನ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಮಾಡಲಾಗಿದೆ. ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆದುಕೊಂಡು ಉನ್ನತ ಶಿಕ್ಷಣ ದೊಂದಿಗೆ ವಿವೇಕಾನಂದರ ಆದರ್ಶ ಜೀವನವನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕೆಂದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ  ಪಾಲಿಬೆಟ್ಟದ ಸಮಾಜ ಸೇವಕ…

Read More

ಮಡಿಕೇರಿ ಡಿ.9 : ಮೈಸೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕಾವೇರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಸನತ್ ಮುತ್ತಣ್ಣ ಭಾಗವಹಿಸಿ ಚಿನ್ನದ ಪದಕ ಪಡೆದು ಕೊಂಡು, ಶಾಲೆಗೆ ಕೀರ್ತಿ ತಂದಿದ್ದಾನೆ. ಶಾಲಾ ಸಂಯೋಜಕಿ ಬಿ.ಡಿ.ಭಾಗ್ಯ, ಶಾಲೆಯ ಕರಾಟೆ ತರಬೇತುದಾರ ಸೋಮಣ್ಣ ಉಪಸ್ಥಿತರಿದ್ದರು. ವಿಜೇತ ವಿದ್ಯಾರ್ಥಿಗೆ ಶಾಲೆಯ ಆಡಳಿತ ಮಂಡಳಿ, ಶಾಲಾ ಸಂಯೋಜಕರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿ ಹಾರೈಸಿದ್ದಾರೆ. 

Read More

ಮೂರ್ನಾಡು ಡಿ.9 : ಚೇರಂಬಾಣೆ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಕರಾಟೆ ಪರೀಕ್ಷೆಯಲ್ಲಿ ಪದಕ ಮತ್ತು ವಿವಿಧ ಬೆಲ್ಟ್‍ಗಳನ್ನು ಪಡೆದುಕೊಂಡಿದ್ದಾರೆ. ಅಂತರಾಷ್ಟ್ರೀಯ ಶಾವೊಲಿನ್ ಕುಂಗ್-ಫುಕರಾಟೆ ಶಾಲೆಯ ವತಿಯಿಂದ ನಡೆಸಲಾದ ಕರಾಟೆ ಪರೀಕ್ಷೆಯಲ್ಲಿ 47 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಈ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕ ಕುದುಪಜೆ ಕವನ್ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪದಕ ಮತ್ತು ವಿವಿಧ ರೀತಿಯ ಕರಾಟೆ ಬೆಲ್ಟ್‍ಗಳನ್ನು ವಿತರಿಸಿದರು. ಅಂತರಾಷ್ಟ್ರೀಯ ಶಾವೊಲಿನ್ ಕುಂಗ್-ಫುಕರಾಟೆ ಶಾಲೆಯ ಭಾರತದ ಮುಖ್ಯತರಬೇತುದಾರ ದೇವರಾಜ್, ಕರ್ನಾಟಕ ತರಬೇತುದಾರ ಹಾಗೂ ರಾಜರಾಜೇಶ್ವರಿ ಪ್ರೌಢಶಾಲೆಯ ಕರಾಟೆ ಶಿಕ್ಷಕ ನಾಟೋಳಂಡ ನಂಜುಂಡ, ಕೊಡಗು ಜಿಲ್ಲಾ ತರಬೇತುದಾರರಾದ ವೇಣು ಮತ್ತು ಸತೀಶ್ ಹಾಜರಿದ್ದರು.

Read More

ವಿರಾಜಪೇಟೆ ಡಿ.9 : ಮೈಸೂರಿನಲ್ಲಿ ನಡೆದ 6ನೇ ಜಿ ಕೆ ಎ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‍ಶಿಪ್‍ನ 13 ರಿಂದ 14 ವರ್ಷದ ಬಾಲಕಿಯರ ವಿಭಾಗದ ಕತಾ ಸ್ಪರ್ಧೆಯಲ್ಲಿ ಕಾವೇರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅಪ್ಸರಾ ಜಯನ್ ದ್ವಿತೀಯ ಸ್ಥಾನ ಹಾಗೂ ಕುಮಿತೆ ಯಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ವಿಜೇತ ವಿದ್ಯಾರ್ಥಿನಿಯನ್ನು ಶಾಲಾ ಆಡಳಿತ ಮಂಡಳಿ, ಪೋಷಕರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ. ಶಾಲಾ ಸಂಯೋಜಕಿ ಎನ್.ಬಿ.ಚೈತ್ರಾ ಹಾಗೂ ದೈಹಿಕ ಶಿಕ್ಷಕಿ ಬಿ.ಬಿ.ಲಾವಣ್ಯ ಉಪಸ್ಥಿತರಿದ್ದರು.

Read More

ಮಡಿಕೇರಿ ಡಿ.9 :  ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿಯಿಂದ ಡಿ.12ರಂದು  ಅಮ್ಮತ್ತಿಯಲ್ಲಿ ಎರಡನೇ ವರ್ಷದ ರಾಜ್ಯಮಟ್ಟದ ಕೊಡವ ವಾಲಗತ್ತಾಟ್ ನಮ್ಮೆ  ನಡೆಯಲಿದೆ ಎಂದು  ಕಾರ್ಯಕ್ರಮದ ಸಂಚಾಲಕ ಮುಲ್ಲೇಂಗಡ ಮಧೋಶ್ ಪೂವಯ್ಯ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಅಮ್ಮತ್ತಿ ಕೊಡವ ಸಮಾಜದ ಸಹಕಾರದೊಂದಿಗೆ   ಅಮ್ಮತ್ತಿ ಕೊಡವ ಸಮಾಜದ ಆವರಣದಲ್ಲಿ  ಕೊಡವ ವಾಲಗತ್ತಾಟ್ ನಮ್ಮೆ ನಡೆಯಲಿದ್ದು,  ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ವಿವಿಧ ವಿಭಾಗಳಲ್ಲಿ ಸ್ಪರ್ಧೆ ನಡೆಯಲಿದೆ ಎಂದರು. 1 ರಿಂದ 7ನೇ ತರಗತಿಯವರೆಗೆ ಪ್ರಾಥಮಿಕ ವಿಭಾಗ, 8ನೇ ತರಗತಿಯಿಂದ 10ನೇ ತರಗತಿಯವರೆಗೆ ಪ್ರೌಢಶಾಲಾ ವಿಭಾಗ,  ಪ್ರಥಮ ಪಿಯುಸಿಯಿಂದ  3ನೇ ಪದವಿಯವರೆಗೆ ಕಾಲೇಜು ವಿಭಾಗ, ಕಾಲೇಜಿನ ನಂತರ 60 ವಯಸ್ಸಿನವರೆಗೆ ಮತ್ತೊಂದು ವಿಭಾಗ, 60 ವಯಸ್ಸಿನ ಮೇಲ್ಪಟ್ಟು ಹಿರಿಯ ನಾಗರಿಕರ ವಿಭಾಗ  ಸೇರಿದಂತೆ  ಐದು ವಿಭಾಗಗಳಲ್ಲಿ ಪುರುಷರು ಹಾಗೂ ಮಹಿಳೆಯರು ಎಂದು ತಲಾ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ ಎಂದು ಮಧೋಶ್ ಪೂವಯ್ಯ ಮಾಹಿತಿ ನೀಡಿದರು. ಕಳೆದ ವರ್ಷ ಮೊದಲ…

Read More

ಮಡಿಕೇರಿ ಡಿ.9 :  ಮೂಲತಃ ಸುಂಟಿಕೊಪ್ಪದ ನಾಕೂರು ಶಿರಂಗಾಲ ಗ್ರಾ.ಪಂ  ವ್ಯಾಪ್ತಿಯ ಬ್ಲಡ್ ಫ ಕಾಫಿ ತೋಟದ ಮಾಲೀಕ ಹಾಗೂ ಪ್ರತಿಷ್ಟಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿದ್ದ ಪಾಂಡಂಡ ಅಪ್ಪಣ್ಣ ಸುಬ್ಬಯ್ಯ( 53) ಅವರು ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಾಯಿ, ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ  ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು (ಶನಿವಾರ) ಮಡಿಕೇರಿಯ ಸ್ಟುವರ್ಟ್‌ ಹಿಲ್ಸ್ ನಲ್ಲಿ ನಡೆಯಲಿದೆ.

Read More

ಸೋಮವಾರಪೇಟೆ ಡಿ.9 : ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಮತ್ತು ಓನರ್ಸ್ ಅಸೋಸಿಯೇಷನ್ ನ ಸೋಮವಾರಪೇಟೆ ತಾಲೂಕು ಘಟಕದ ನೂತನ ಕಚೇರಿಯನ್ನು ಮಾಜಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್  ಉದ್ಘಾಟಿಸಿದರು. ಖಾಸಗಿ ಬಸ್ ನಿಲ್ದಾಣ ಕಣಾರ ಕಟ್ಟಡದಲ್ಲಿ ನೂತನವಾಗಿ ತೆರೆಯಲಾಗಿರುವ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಚಾಲಕರು ಸುರಕ್ಷತೆಯ ಚಾಲನೆಗೆ ಆದ್ಯತೆ ನೀಡಬೇಕು. ಸಂಘಟಿತರಾಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮುಂದಾಗಬೇಕೆಂದು ಕಿವಿಮಾತು ಹೇಳಿದರು. ಈ ಸಂದರ್ಭ ರಾಮನಗರ ಗೆಜ್ಜೆಗಾರುಗುತ್ತೆ ಮಠಾಧೀಶ ಶ್ರೀ ಕುಮಾರಸ್ವಾಮೀಜಿ, ಸಂಘಟನೆಯ ಜಿಲ್ಲಾಧ್ಯಕ್ಷ ವಿನೋದ್, ತಾಲೂಕು ಅಧ್ಯಕ್ಷ ಬಿ.ವಿ. ರವಿ, ಉಪಾಧ್ಯಕ್ಷ ಮಣಿ, ಖಜಾಂಚಿ ಕೆ.ಎನ್. ದೀಪಕ್, ಸಂಘಟನಾ ಕಾರ್ಯದರ್ಶಿ ರಾಮಕೃಷ್ಣ, ಸಹ ಕಾರ್ಯದರ್ಶಿ ಲಿಜೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಸನ್ನ, ಕಟ್ಟಡ ಮಾಲೀಕ ದಿಲ್ಗಿನ್ ರಾಜ್ ಸೇರಿದಂತೆ ಇತರರು ಹಾಜರಿದ್ದರು.

Read More

ಬೆಂಗಳೂರು ಡಿ.8 :  ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (85) ಅವರು ಇಂದು ನಿಧನ ಹೊಂದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಲೀಲಾವತಿ ಅವರು ತಮ್ಮ ಪ್ರೀತಿಯ ಪುತ್ರ ವಿನೋದ್​ ರಾಜ್ ಅವರನ್ನು ಅಗಲಿದ್ದಾರೆ.  ಕನ್ನಡ, ತಮಿಳು, ತೆಲುಗು ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಮದುವೆ ಮಾಡಿನೋಡು’ ಮತ್ತು ‘ಸಂತ ತುಕಾರಾಮ್​’ ಸಿನಿಮಾಗಳಿಗೆ ಲೀಲಾವತಿ ಅವರು 2 ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. 1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಲೀಲಾವತಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ನಾಯಕರುಗಳು ಹಾಗೂ ಚಿತ್ರರಂಗದ ಸರ್ವರು ಲೀಲಾವತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Read More