ಲೇಖಕ: admin

ಮಡಿಕೇರಿ ನ.13 :  ದೀಪಾವಳಿ ಹಬ್ಬದ ಪ್ರಯುಕ್ತ ಮಡಿಕೇರಿಯ ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ 10ನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ  ಕಾರ್ಯಕ್ರಮವನ್ನು ಜಿ.ಪಂ ಮಾಜಿ ಅಧ್ಯಕ್ಷ ಬಿ.ಎ.ಹರೀಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪ್ರತಿಯೊಬ್ಬರು ಕ್ರೀಡಾಸ್ಫೂರ್ತಿಯನ್ನು ಮೆರೆಯಬೇಕೆಂದು ಕರೆ ನೀಡಿದರು. ನಿವೃತ್ತ ಶಿಕ್ಷಕಿ ಕಲಾವತಿ, ಪ್ರಮುಖರಾದ  ಆರ್‌.ಪಿ.ಚಂದ್ರಶೇಖರ್,  ಚೆರಿಯಮನೆ ತಿಮ್ಮಯ್ಯ, ಕನ್ನಿಕಾ, ದಮಯಂತಿ, ದಿಲೀಪ್, ಮಹೇಶ್ ಮತ್ತಿತರರು ಹಾಜರಿದ್ದು, ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಹಗ್ಗಜಗ್ಗಾಟ ಮತ್ತು ಕ್ರಿಕೆಟ್‍ನಲ್ಲಿ ಶ್ರೀರಾಮ ಯುವಕ ಸಂಘ ಪ್ರಥಮ, ಹಗ್ಗಜಗ್ಗಾಟದಲ್ಲಿ ಶ್ರೀ ವಿಷ್ಣು ಯುವಕ ಮಿತ್ರ ಮಂಡಳಿ ದ್ವಿತೀಯ, ಕ್ರಿಕೆಟ್ ಪಂದ್ಯಾವಳಿಯಲ್ಲಿ ದೃಷ್ಟಿ ಗಣಪತಿ ಯುವಕ ಮಿತ್ರ ಮಂಡಳಿ ದ್ವಿತೀಯ ಸ್ಥಾನವನ್ನು ಗಳಿಸಿತು.

Read More

ಸೋಮವಾರಪೇಟೆ  ನ.13 :  ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಸಹಕಾರಿಯಾಗಲಿದೆ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು. ಪಟ್ಟಣದ ಸೋಮೇಶ್ವರ ದೇವಾಲಯದ ಬಳಿಯ ಮೂಕಾಂಬಿಕಾ ಕಂಪ್ಯೂಟರ್ ಆವರಣದಲ್ಲಿ ಕರ್ನಾಟಕ ಒನ್, ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರಿ ಕಚೇರಿಗಳಲ್ಲಿ ಜನಸಾಮಾನ್ಯರು ಅರ್ಜಿ ಸಲ್ಲಿಸಲು ಹಾಗೂ ಸವಲತ್ತು ಪಡೆಯಲು ಉಂಟಾಗುವ ಜನಸಂದಣಿ ತಪ್ಪಿಸುವುದರೊಂದಿಗೆ ಜನಸಾಮಾನ್ಯರ ಬಳಿಗೆ ಇಲಾಖೆ ತಲುಪಿಸಲು ಪಂಚಾಯ್ತಿಯ ಮಟ್ಟದಲ್ಲಿ ಗ್ರಾಮ ಒನ್ ಹಾಗೂ ತಾಲೂಕು ಮಟ್ಟದಲ್ಲಿ ಕರ್ನಾಟಕ ಒನ್ ಎಂಬ ಸಮಗ್ರ ನಾಗರೀಕ ಸೇವಾ ಕೇಂದ್ರವನ್ನು ಆರಂಭಿಸಿದೆ ಜನತೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ತಾಲೂಕು ದಂಡಾಧಿಕಾರಿ,ತಹಶೀಲ್ದಾರ್ ನರಗುಂದ ಮಾತನಾಡಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಈ ಕರ್ನಾಟಕ ಒನ್ ಇಲ್ಲಿ ಸರ್ಕಾರಿ ಕಚೇರಿಗಳಲ್ಲಿ ನೀಡಬಹುದಾದ ಅರ್ಜಿಗಳನ್ನು ಸಲ್ಲಿಸಬಹುದು, ಹಲವು ದಾಖಲೆಗಳನ್ನು ಪಡೆಯಬಹುದು ಎಂದರು. ಕಾರ್ಯಕ್ರಮದಲ್ಲಿ ಪ.ಪಂ  ಸದಸ್ಯರುಗಳಾದ ಬಿ.ಸಿ.ವೆಂಕಟೇಶ್, ಶೀಲಾಡಿಸೋಜ, ಮೋಹಿನಿ, ಬಿಟ್ಟು ಬಿ.ಆರ್.ಮಹೇಶ್, ಪ.ಪಂ…

Read More

ಮಡಿಕೇರಿ ನ.13 : ಕೊಡಗಿನ ಪುತ್ತರಿ  ಹಬ್ಬ ನ.27 ರಂದು  ನಡೆಯಲಿದೆ. ಕಕ್ಕಬ್ಬೆಯ ಶ್ರೀಪಾಡಿ ಇಗ್ಗುತಪ್ಪ ದೇವಾಲಯದಲ್ಲಿ  ಇಂದು ಹಬ್ಬದ ದಿನ ನಿಗದಿ  ಮಾಡಲಾಯಿತು. ರಾತ್ರಿ 7.20ಕ್ಕೆ ನೆರೆ ಕಟ್ಟುವುದು, 8.20ಕ್ಕೆ ಕದಿರು ತೆಗೆಯುವುದು, ರಾತ್ರಿ 9.20ಕ್ಕೆ  ಪ್ರಸಾದ ಸ್ವೀಕಾರ. ಅದರಂತೆ ನಾಡಿನಾದ್ಯಂತ ರಾತ್ರಿ 7.45ಕ್ಕೆ ನೆರೆ ಕಟ್ಟುವುದು,  8.45ಕ್ಕೆ ಕದಿರು ತೆಗೆಯುವುದು,  ರಾತ್ರಿ 9.45ಕ್ಕೆ  ಬೋಜನಕ್ಕೆ ಒಳ್ಳೆಯ ಸಮಯ ಎಂದು ಹಿರಿಯರು ತಿಳಿಸಿದರು.

Read More

ನಾಪೋಕ್ಲು ನ.13 : ಕೊಡವ ಜನಾಂಗ ಅನಾಧಿಕಾಲದಿಂದ ವೈವಿಧ್ಯಮಯ ಸಂಸ್ಕೃತಿಯನ್ನು ರೂಡಿಸಿಕೊಂಡು ಬಂದಿದ್ದು, ಕೊಡವರ ಧಾರ್ಮಿಕ ಭಾವನೆಗಳಿಗೆ ಗೌರವ ಕೊಡಬೇಕಾದದ್ದು ಅತ್ಯಗತ್ಯ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ನಂದಿನೆರವಂಡ ಯು. ನಾಚಪ್ಪ ಹೇಳಿದರು. ನಾಪೋಕ್ಲು ನಾಲ್ ನಾಡು ಪ್ಲಾಂಟರ್ಸ್ ರಿಕ್ರಿಯೇಷನ್ ಅಸೋಸಿಯೇಷನ್ ವತಿಯಿಂದ ಚೆರಿಯ ಪರಂಬುವಿನ ಕೆ.ಎಸ್. ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಮೂರನೇ ವರ್ಷದ ರಾಜ್ಯಮಟ್ಟದ ಮುಕ್ತ ತೆಂಗಿನಕಾಯಿ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಕೋವಿಗಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು. ಈ ದೇಶ ನಾನಾ ಜನಾಂಗ ಧರ್ಮ ಸಂಸ್ಕೃತಿಯ ಬೀಡು.ಎಲ್ಲರಿಗೂ ಬದುಕಲು ಅವಕಾಶ ಕಲ್ಪಿಸಿಕೊಟ್ಟಿದೆ. ಜನಾಂಗದ ಧಾರ್ಮಿಕ ನಂಬಿಕೆಗಳನ್ನು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದರಷ್ಟೇ ಸರ್ಕಾರದ ಗಮನ ಸೆಳೆಯಲು ಸಾಧ್ಯ ಎಂದ ಅವರು ಕೊಡವರ ಸಾಂವಿಧಾನಿಕ ಹಕ್ಕುಗಳನ್ನು ಗೌರವಿಸಬೇಕು. ಪ್ರಕೃತಿಯಲ್ಲಿ ಹೇಗೆ ವೈವಿಧ್ಯತೆ ಇದೆಯೋ ಅದೇ ರೀತಿ ಜನಾಂಗದಲ್ಲೂ ವೈವಿಧ್ಯತೆ ಇದೆ. ಇಲ್ಲಿನ ಭೂಮಿ, ನೆಲ, ಜಲ,ಕೋವಿಗಳನ್ನು ಪೂಜಿಸುವುದರ ಮೂಲಕ ಕೊಡವರು ಧಾರ್ಮಿಕ ಆಚರಣೆಗಳನ್ನು ನೆರವೇರಿಸುತ್ತಿದ್ದು, ಒಂದು ಕಿರಿಯ ಜನಾಂಗದ ಸಂಸ್ಕೃತಿಗೆ…

Read More

ನಾಪೋಕ್ಲು ನ.13 : ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಂಡು ದೃಢ ನಿರ್ಧಾರದಿಂದ ಮುನ್ನಡೆದರೆ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಸ್ಟಾರ್ ಆಫ್ ಮೈಸೂರು, ಮೈಸೂರು ಮಿತ್ರ ಸಂಪಾದಕ ಡಾ.ಕಲ್ಯಾಟಂಡ ಬಿ.ಗಣಪತಿ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಲಭಿಸಿದ ಹಿನ್ನೆಲೆಯಲ್ಲಿ ಕಕ್ಕಬ್ಬೆ ಕುಂಜಿಲ ಗ್ರಾಮದ ಕಲ್ಯಾಟಂಡ ಐನ್ ಮನೆಯಲ್ಲಿ ಅವರನ್ನು ಕುಟುಂಬಸ್ಥರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕುಟುಂಬಗಳ ನಡುವೆ ಒಗ್ಗಟ್ಟು, ಸಾಮರಸ್ಯ ಅಗತ್ಯ. ಕಲ್ಯಾಟಂಡ ಕುಟುಂಬದಲ್ಲಿ ವಾರ್ಷಿಕವಾಗಿ ಕುಟುಂಬಸ್ಥರ ಸಮ್ಮುಖದಲ್ಲಿ ವಿವಿಧ ಕಾರ್ಯಕ್ರಮ ನಡೆಯುತ್ತಿರುವುದು ಸಂತಸ ತಂದಿದೆ ಎಂದರು. ಕುಟುಂಬದ ಎಲ್ಲಾ ಸದಸ್ಯರು ಒಗ್ಗಟ್ಟನ್ನು ಕಾಪಾಡಿಕೊಳ್ಳಬೇಕು ಎಂದ ಅವರು ಕುಟುಂಬದ ಮಕ್ಕಳ ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಉನ್ನತ ವಿದ್ಯಾಭ್ಯಾಸದ ಬಗ್ಗೆ ಉತ್ತೇಜಿಸುವ ಕೆಲಸ ಮಾಡಬೇಕು ಎಂದರು. ಕಲ್ಯಾಟಂಡ ಅಪ್ಪಚ್ಚು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಟುಂಬದ ಹಿರಿಯರಾದ ಪ್ರೊ. ಕಲ್ಯಾಟಂಡ ಪೂಣಚ್ಚ, ಕಲ್ಯಾಟಂಡ ಅಯ್ಯಪ್ಪ, ಕಲ್ಯಾಟಂಡ ಮುತ್ತಪ್ಪ,…

Read More

ಮಡಿಕೇರಿ ನ.13 :  ಅಕಾಲಿಕ ಮಳೆಯಿಂದಾಗಿ ಈ ವರ್ಷ ಭಾರತದ ಕಾಫಿ ಉತ್ಪಾದನೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. 2023-24 ರ ಸಾಲಿಗೆ ಕಾಫಿ ಮಂಡಳಿಯ ದೇಶದ ಒಟ್ಟು ಕಾಫಿ ಉತ್ಪಾದನೆಯನ್ನು 3,74,200 ಮೆಟ್ರಿಕ್ ಟನ್ ಗಳೆಂದು ಅಂದಾಜಿಸಿದ್ದರೂ ಈ ವರ್ಷ ಉತ್ಪಾದನೆಯು ಶೇ.20, 30  ರಷ್ಟು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಭಾರತದ ಕಾಫಿ ಉದ್ಯಮದ ಸಂಸ್ಥೆಗಳು ತಿಳಿಸಿವೆ. ಯುನೈಟೆಡ್ ಪ್ಲಾಂಟರ್ಸ್ ಅಸೋಸಿಯೇಶನ್ ಆಫ್ ಸದರ್ನ್ ಇಂಡಿಯಾ (ಯುಪಿಎಎಸ್‌ಐ) ಕಾಫಿ ಸಮಿತಿಯ ಅಧ್ಯಕ್ಷ ಅಜೋಯ್ ತಿಪಯ್ಯ ಅವರ ಪ್ರಕಾರ “ನಿವ್ವಳ ಇಳುವರಿಯು ಈ ಸಾಲಿನಲ್ಲಿ ಶೇ.20, 30  ರಷ್ಟು ಕಡಿಮೆಯಾಗಲಿದೆ” “ಮೊದಲನೆಯದಾಗಿ, ವಲಸೆ ಕಾರ್ಮಿಕರು ದೂರವಿರುವಾಗ ಕಾಫಿ ಈಗಾಗಲೇ ಕೊಯ್ಲಿಗೆ ಸಿದ್ಧವಾಗಿದೆ. ಮತ್ತು ಎರಡನೆಯದಾಗಿ, ಅಕಾಲಿಕ ಮಳೆಯಿಂದ ಅನೇಕ ಎಸ್ಟೇಟ್‌ಗಳಲ್ಲಿ ಸಾಕಷ್ಟು ಕಾಫಿ ಹಣ್ಣಾಗಿದ್ದು, ಉದುರುವಿಕೆಯು ಆರಂಭಗೊಂಡಿದೆ.. ಸಾಮಾನ್ಯವಾಗಿ ಕಾಫಿ ಕೊಯ್ಲು ಡಿಸೆಂಬರ್ ಮಧ್ಯಭಾಗದಲ್ಲಿ ಪ್ರಾರಂಭವಾಗುತ್ತದೆ ಮತ್ತು ಎರಡು ತಿಂಗಳು ಕೊಯ್ಲು ಇರುತ್ತದೆ. ರೊಬಸ್ಟಾ ಕೊಯ್ಲು ಇನ್ನೂ ತಡವಾಗುತ್ತದೆ. ಆದಾಗ್ಯೂ, ಈ…

Read More

ಮಡಿಕೇರಿ ನ.12 : ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪುಲಿಯೇರಿ ಗ್ರಾಮದ ಆನಂದಪುರ ಟಾಟಾ ಕಾಫಿ ಎಸ್ಟೇಟ್ ನಲ್ಲಿ ನಿಧಿ ಪತ್ತೆಯಾಗಿದೆ. ಕಾಫಿ ಎಸ್ಟೇಟ್ ಒಳಗೆ ಈಶ್ವರ ದೇವಸ್ಥಾನವಿದ್ದು, ಕಾಂಪೌಂಡ್ ಗೋಡೆ ನಿರ್ಮಾಣಕ್ಕೆ ಅಗೆಯುತ್ತಿದ್ದಾಗ ನಿಧಿ ಗೋಚರಿಸಿದೆ. ಬಂಗಾರವನ್ನು ಹೋಲುವ 1 ಕೆಜಿ 150 ಗ್ರಾಂ ತೂಕದ ಆಭರಣ ದೊರೆತ್ತಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದರು. ನಿಧಿಯನ್ನು ತಹಶೀಲ್ದಾರರಿಗೆ ಹಸ್ತಾಂತರಿಸಲಾಗಿದ್ದು, ನ್ಯಾಯಾಲಯದ ಅನುಮತಿ ನಂತರ ಪುರಾತತ್ವ ಇಲಾಖೆಗೆ ವರ್ಗಾಯಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

Read More

ಮಡಿಕೇರಿ ನ.12 : ಚಿತ್ರಕಲೆ ಮಕ್ಕಳ ಭಾವನೆ ಮತ್ತು ಕಲ್ಪನೆಯನ್ನು ಅನಾವರಣಗೊಳಿಸಬಲ್ಲ ಉತ್ತಮ ಕಲಾಪ್ರಕಾರವಾಗಿದೆ. ಪ್ರತಿಭೆಗಳ ಅನಾವರಣಕ್ಕೆ ವೇದಿಕೆಗಳನ್ನು ಕಲ್ಪಿಸುವ ಅಗತ್ಯವಿದೆ ಎಂದು ಅರಮೇರಿ ಕಳಂಚೇರಿ ಮಠದ ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ತಿಳಿಸಿದ್ದಾರೆ. ಮಡಿಕೇರಿಯ ಮಹದೇವಪೇಟೆಯ ಎಸ್‌ಎಸ್ ಆಸ್ಪತ್ರೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಕ್ರೆಸೆಂಟ್ ಶಾಲೆಯಲ್ಲಿ ನಡೆದ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಸ್ತುತ ದಿನಮಾನದ ವಿಷಯಗಳನ್ನು ನೀಡಲಾಗಿದೆ. ಇದರಲ್ಲಿ ಪ್ರಕೃತಿಯೂ ಒಂದಾಗಿದೆ, ಪ್ರಕೃತಿಯನ್ನು ಉಳಿಸಿ ಬೆಳೆಸಲು ಪೋಷಕರು ಮಕ್ಕಳಿಗೆ ಪ್ರೇರಣೆಯನ್ನು ನೀಡಬೇಕು ಎಂದು ಕರೆ ನೀಡಿದರು. ಚಿತ್ರಕಲೆಗೆ ದೊಡ್ಡ ಇತಿಹಾಸವಿದೆ, ಈ ಕಲೆಯನ್ನು ಉಳಿಸಿ ಬೆಳೆಸಲು ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕಾಗಿದೆ. ಮಕ್ಕಳಲ್ಲಿರುವ ಚಿತ್ರಕಲಾ ಪ್ರತಿಭೆಯನ್ನು ಅನಾವರಣಗೊಳಿಸಲು ಈ ರೀತಿಯ ಸ್ಪರ್ಧೆಗಳು ಹೆಚ್ಚು ಸಹಕಾರಿಯಾಗಿದೆ. ಮಕ್ಕಳ ದಿನಾಚರಣೆಯ ಹಿನ್ನೆಲೆ ಎಸ್‌ಎಸ್ ಆಸ್ಪತ್ರೆ ಅತಿ ಕಾಳಜಿಯಿಂದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿರುವುದು ಶ್ಲಾಘನೀಯ ಎಂದು ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು. ಅಧ್ಯಕ್ಷತೆ…

Read More

ಮಡಿಕೇರಿ ನ.12 : ಮಕ್ಕಳ ವಿದ್ಯಾಭ್ಯಾಸಕ್ಕೆ ಪೋಷಕರು ಹೆಚ್ಚಿನ ಒತ್ತು ನೀಡಬೇಕು ಮತ್ತು ಉತ್ತಮ ಸಂಸ್ಕಾರಗಳನ್ನು ಕಲಿಸಬೇಕೆಂದು ಕೊಡಗು ಜಿಲ್ಲಾ ಮಲೆಯಾಳಿ ಸಮಾಜದ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ.ವಿಜಯ ಕರೆ ನೀಡಿದ್ದಾರೆ. ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲೆಯಾಳಿ ಸಮಾಜದ ವತಿಯಿಂದ ಕಾನ್ ಬೈಲ್ ನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಎರಡನೇ ವರ್ಷದ ಓಣಂ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳನ್ನು ಮೊಬೈಲ್ ಗಳಿಂದ ದೂರವಿರಿಸಿ ಗುರು ಹಿರಿಯರಿಗೆ ಗೌರವ ನೀಡುವ, ಸತ್ಕರಿಸುವಂತಹ ಸತ್ಪ್ರಜೆಗಳನ್ನಾಗಿ ರೂಪಿಸಬೇಕಿದೆ. ಎಲ್ಲಿ ನೋಡಿದರೂ ಮಕ್ಕಳು ಮೊಬೈಲ್ ನಲ್ಲಿ ಮಗ್ನರಾಗಿರುತ್ತಾರೆ, ತಮ್ಮ ಎದುರು ಯಾರೇ ಹಿರಿಯರು ಬಂದರೂ ಗೌರವ ನೀಡದಂತಹ ಮನೋಸ್ಥಿತಿ ಬಂದಿದೆ. ಪೋಷಕರು ಈ ಬಗ್ಗೆ ಎಚ್ಚರ ವಹಿಸಿ ಎಳೆಯ ವಯಸ್ಸಿನಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು. ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿದರೆ ಸಾಲದು, ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು. ಸಮಾಜದ ರೋಗಗ್ರಸ್ಥ ಹಾಗೂ ಧರ್ಮದ್ರೋಹಿಗಳು…

Read More

ಕುಶಾಲನಗರ ನ.12 : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ ಹಾಗೂ ಶಾಲೆಯ ಇಕೋ ಕ್ಲಬ್ ವತಿಯಿಂದ “ಸ್ವಚ್ಛ ದೀಪಾವಳಿ-ಶುಭ ದೀಪಾವಳಿ” ಆಚರಣೆ ನಡೆಯಿತು. ಪರಿಸರ ಸ್ನೇಹಿ ದೀಪಾವಳಿ ಆಚರಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಅವರು ಮಾತನಾಡಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವನ್ನು ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತದೆ. ಇದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜತೆಗೆ ಪ್ರಾಣಿ-ಪಕ್ಷಿಗಳ ಜೀವಕ್ಕೂ ಅಪಾಯವಿದೆ. ಹಾಗಾಗಿ, ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಪ್ಲಾಸ್ಟಿಕ್ ಮುಕ್ತ ಹಾಗೂ ಮಾಲಿನ್ಯ ರಹಿತವಾಗಿ ಆಚರಿಸಬೇಕಿದೆ ಎಂದರು. ‘ಸ್ವಚ್ಛ ದೀಪಾವಳಿ-ಶುಭ ದೀಪಾವಳಿ’ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಎಲ್ಲರೂ ಸಹಕರಿಸಿದರೆ ದೀಪಾವಳಿ ಸಂದರ್ಭದಲ್ಲಿ…

Read More