ಮಡಿಕೇರಿ ಡಿ.9 : ಮೂಲತಃ ಸುಂಟಿಕೊಪ್ಪದ ನಾಕೂರು ಶಿರಂಗಾಲ ಗ್ರಾ.ಪಂ ವ್ಯಾಪ್ತಿಯ ಬ್ಲಡ್ ಫ ಕಾಫಿ ತೋಟದ ಮಾಲೀಕ ಹಾಗೂ ಪ್ರತಿಷ್ಟಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿದ್ದ ಪಾಂಡಂಡ ಅಪ್ಪಣ್ಣ ಸುಬ್ಬಯ್ಯ( 53) ಅವರು ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಾಯಿ, ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು (ಶನಿವಾರ) ಮಡಿಕೇರಿಯ ಸ್ಟುವರ್ಟ್ ಹಿಲ್ಸ್ ನಲ್ಲಿ ನಡೆಯಲಿದೆ.
ಲೇಖಕ: admin
ಸೋಮವಾರಪೇಟೆ ಡಿ.9 : ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಮತ್ತು ಓನರ್ಸ್ ಅಸೋಸಿಯೇಷನ್ ನ ಸೋಮವಾರಪೇಟೆ ತಾಲೂಕು ಘಟಕದ ನೂತನ ಕಚೇರಿಯನ್ನು ಮಾಜಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಉದ್ಘಾಟಿಸಿದರು. ಖಾಸಗಿ ಬಸ್ ನಿಲ್ದಾಣ ಕಣಾರ ಕಟ್ಟಡದಲ್ಲಿ ನೂತನವಾಗಿ ತೆರೆಯಲಾಗಿರುವ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಚಾಲಕರು ಸುರಕ್ಷತೆಯ ಚಾಲನೆಗೆ ಆದ್ಯತೆ ನೀಡಬೇಕು. ಸಂಘಟಿತರಾಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮುಂದಾಗಬೇಕೆಂದು ಕಿವಿಮಾತು ಹೇಳಿದರು. ಈ ಸಂದರ್ಭ ರಾಮನಗರ ಗೆಜ್ಜೆಗಾರುಗುತ್ತೆ ಮಠಾಧೀಶ ಶ್ರೀ ಕುಮಾರಸ್ವಾಮೀಜಿ, ಸಂಘಟನೆಯ ಜಿಲ್ಲಾಧ್ಯಕ್ಷ ವಿನೋದ್, ತಾಲೂಕು ಅಧ್ಯಕ್ಷ ಬಿ.ವಿ. ರವಿ, ಉಪಾಧ್ಯಕ್ಷ ಮಣಿ, ಖಜಾಂಚಿ ಕೆ.ಎನ್. ದೀಪಕ್, ಸಂಘಟನಾ ಕಾರ್ಯದರ್ಶಿ ರಾಮಕೃಷ್ಣ, ಸಹ ಕಾರ್ಯದರ್ಶಿ ಲಿಜೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಸನ್ನ, ಕಟ್ಟಡ ಮಾಲೀಕ ದಿಲ್ಗಿನ್ ರಾಜ್ ಸೇರಿದಂತೆ ಇತರರು ಹಾಜರಿದ್ದರು.
ಬೆಂಗಳೂರು ಡಿ.8 : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (85) ಅವರು ಇಂದು ನಿಧನ ಹೊಂದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಲೀಲಾವತಿ ಅವರು ತಮ್ಮ ಪ್ರೀತಿಯ ಪುತ್ರ ವಿನೋದ್ ರಾಜ್ ಅವರನ್ನು ಅಗಲಿದ್ದಾರೆ. ಕನ್ನಡ, ತಮಿಳು, ತೆಲುಗು ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಮದುವೆ ಮಾಡಿನೋಡು’ ಮತ್ತು ‘ಸಂತ ತುಕಾರಾಮ್’ ಸಿನಿಮಾಗಳಿಗೆ ಲೀಲಾವತಿ ಅವರು 2 ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. 1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಲೀಲಾವತಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ನಾಯಕರುಗಳು ಹಾಗೂ ಚಿತ್ರರಂಗದ ಸರ್ವರು ಲೀಲಾವತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಮಡಿಕೇರಿ ಡಿ.8 : ಕೊಡವ ಪಾಲೆ ಜನಾಂಗದ ಸಾಮಾಜಿಕ ಮುನ್ನಲೆಗೆ ಸಹಕರಿಸುವಂತೆ ಕೊಡವ(ಅರಮನೆ) ಪಾಲೆ ಜನಾಂಗದ ಸಮಾಜವು ಕೊಡವಾಮೆರ ಕೊಂಡಾಟ ಸಂಘಟನೆಗೆ ಮನವಿ ಮಾಡಿದೆ. ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಅವರನ್ನು ಮೈಸೂರಿನಲ್ಲಿ ಭೇಟಿಯಾದ ಕೊಡವ ಪಾಲೆ ಜನಾಂಗದ ನಿಯೋಗವು ಕೊಡಗಿನ ಆದಿಮೂಲ ನಿವಾಸಿಗಳಾಗಿ ಕೊಡವರೊಂದಿಗೆ ಬಾಳಿ ಬಂದಿರುವ, ಕೊಡವ(ಅರಮನೆ) ಪಾಲೆ ಜನಾಂಗದ ಸಾಮಾಜಿಕ ಮುನ್ನಲೆಗೆ ಸಹಕರಿಸುವಂತೆ ಮತ್ತು ಟ್ರೇಡ್ ಮಾರ್ಕ್ ಆಗಿ ನೋಂದಾಯಿಸಲ್ಪಟ್ಟಿರುವ ಕೊಡವ ಲೋಗೋವನ್ನು ಮೂಲತನದ ಆಧಾರದಲ್ಲಿ ಬಳಸಲು ಅನುವು ಮಾಡುವಂತೆ ಮನವಿ ಮಾಡಿದರು. ಕೊಡವರೊಂದಿಗೆ ಪಾಲೆ ಜನಾಂಗದ ಸಂಬಂಧ, ಬೆಳೆದು ಬಂದ ಹಾದಿ, ಇತಿಹಾಸ ಈಗಿನ ಸ್ಥಿತಿಗತಿಯ ಕುರಿತು ಕೂಲಂಕುಶವಾಗಿ ಚರ್ಚಿಸಿದರು. ಅಲ್ಲದೆ ಮೂಲ ಕೊಡವ ಪದ್ಧತಿ ಪರಂಪರೆಯನ್ನೇ ಅನುಸರಿಸುತ್ತಾ ಇಂದಿಗೂ ಕೊಡವರೊಂದಿಗೆ ಸಾಂಪ್ರದಾಯಿಕ ಮತ್ತು ಭಾವನಾತ್ಮಕ ಹಾಗೂ ದೈವಿಕ ಸಂಬಂಧಗಳನ್ನು ಇಟ್ಟುಕೊಂಡಿರುವ, ಕೊಡವ ಪಾಲೆ ಜನಾಂಗವು ಇಂದು ಅಳಿವಿನ ಅಂಚಿನಲ್ಲಿದ್ದು, ಹಿರಿಯಣ್ಣ ನಂತ್ತಿರುವ ಕೊಡವರು ನಮ್ಮ ಸಾಮಾಜಿಕ ರಕ್ಷಣೆಗೆ ಸಹಕರಿಸಬೇಕೆಂದರು. ಕೊಡವ ಪರಂಪರೆಯ…
ಮಡಿಕೇರಿ ಡಿ.9 : ಕುಶಾಲನಗರ ಪುರಸಭೆಯ ಎಸ್.ಎಫ್.ಸಿ ಶೇ.5 ಹಾಗೂ ಎಸ್ಎಫ್ಸಿ (ಎಸ್ಸಿಪಿ)(ಟಿಎಸ್ಪಿ) ಶೇ.7.25 ರ ಅನುದಾನದಡಿ ವಿವಿಧ ವೈಯಕ್ತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಡಿ.18 ರಂದು 5.30 ಗಂಟೆಯೊಳಗೆ ಮುಖ್ಯಾಧಿಕಾರಿಗಳು, ಪುರಸಭೆ, ಕುಶಾಲನಗರ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಕುಶಾಲನಗರ ಪುರಸಭೆ ಕಚೇರಿಯಲ್ಲಿ ತಿಳಿದುಕೊಳ್ಳಬಹುದು. ಎಸ್ಎಫ್ಸಿ(ಎಸ್ಸಿಪಿ) ಮತ್ತು ಎಸ್ಎಫ್ಸಿ(ಟಿಎಸ್ಪಿ) ಅನುದಾನ: 2019-20 ಮತ್ತು 2020-21 ರಲ್ಲಿ ಯಶಸ್ವಿನಿ ಯೋಜನೆಯಡಿ ಗುರುತಿಸಲ್ಪಟ್ಟ ದವಾಖಾನೆಗಳಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾದವರಿಗೆ ಒಂದು ಬಾರಿ ಸಹಾಯ ಧನ. ಅರ್ಜಿ ಸಲ್ಲಿಸಲು ಅರ್ಹತೆ ಹಾಗೂ ಅರ್ಜಿಯೊಂದಿಗೆ ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಫಲಾನುಭವಿಯ 2 ಭಾವಚಿತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ(ಆದಾಯವು 3 ಲಕ್ಷದೊಳಗಿರಬೇಕು). ಶಸ್ತ್ರ ಚಿಕಿತ್ಸೆಗೆ ಸಂಬಂಧಪಟ್ಟಂತೆ ದಾಖಲೆಗಳು ಮತ್ತು ಮೂಲ…
ಮಡಿಕೇರಿ ಡಿ.08 : ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್ ಅವರು ನಗರದ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿದರು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗಮನಹರಿಸಬೇಕು. ಸಾರ್ವಜನಿಕರು ಸಲ್ಲಿಸುವ ಯಾವುದೇ ಅರ್ಜಿಗಳಿಗೆ ಸಕಾಲದಲ್ಲಿ ಸ್ಪಂದಿಸಬೇಕು ಎಂದು ಲೋಕಾಯುಕ್ತ ಡಿವೈಎಸ್ಪಿ ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ನೊಂದ ಕುಟುಂಬಗಳಿಗೆ ಇನ್ನೂ ಸಹ ಮನೆ ಕಲ್ಪಿಸಿಲ್ಲ ಎಂಬ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ತಹಶೀಲ್ದಾರರ ಹಂತದಲ್ಲಿ ಪರಿಶೀಲಿಸಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ ಅರ್ಹರಿಗೆ ಮನೆ ಕೊಡಿಸಲು ಮುಂದಾಗಬೇಕು. ಇದನ್ನು ಪ್ರಥಮ ಆದ್ಯತೆಯಲ್ಲಿ ನಿರ್ವಹಿಸುವಂತೆ ತಹಶೀಲ್ದಾರರಿಗೆ ಲೋಕಾಯುಕ್ತ ಡಿವೈಎಸ್ಪಿ ಸಲಹೆ ನೀಡಿದರು. ಕೆಲವು ಕಡೆಗಳಲ್ಲಿ ಭೂಮಿ ಒತ್ತುವರಿ ಮಾಡಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ಸರ್ವೇ ಮಾಡಿ ಸಾರ್ವಜನಿಕರ ದೂರುಗಳನ್ನು ಪರಿಹರಿಸುವಂತಾಗಬೇಕು. ಈ ನಿಟ್ಟಿನಲ್ಲಿ ತಹಶೀಲ್ದಾರರು ಮತ್ತು ತಾಲ್ಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದ್ದಲ್ಲಿ ಇಂತಹ ಭೂ ಒತ್ತುವರಿ…
ಮಡಿಕೇರಿ ಡಿ.8 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆಸುತ್ತಿರುವ ರಾಜ್ಯ ವಲಯದ ಕ್ರೀಡಾ ಶಾಲೆ/ ಕ್ರೀಡಾ ವಸತಿ ನಿಲಯಗಳಿಗೆ 2024-25ನೇ ಸಾಲಿಗೆ 8 ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆಯು ಡಿಸೆಂಬರ್, 27 ರಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ಪೊನ್ನಂಪೇಟೆ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ, ಡಿ.28 ರಂದು ಮಡಿಕೇರಿ ತಾಲ್ಲೂಕಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣ ಹಾಗೂ ಡಿ.29 ರಂದು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿಗೆ ಕೂಡಿಗೆ ಸರ್ಕಾರಿ ಕ್ರೀಡಾ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9902911353 ಮತ್ತು 9480032712 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.
ಮಡಿಕೇರಿ ಡಿ.8 : ಪಾನ್ ಇಂಡಿಯಾ ಪಾರುಗಾಣಿಕಾ ಮತ್ತು ಮಕ್ಕಳ ಹಾಗೂ ಹದಿಹರೆಯದ ಕಾರ್ಮಿಕರ ಪುನರ್ವಸತಿ ಅಭಿಯಾನದಡಿ ರಕ್ಷಣಾ ಕಾರ್ಯಾಚರಣೆಯ ಅಂಗವಾಗಿ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆ ಗ್ರಾಮದಲ್ಲಿ ಇತರೆ ಇಲಾಖಾ (ಹೋಬಳಿ ಮಟ್ಟದ ಟಾಸ್ಕ್ ಫೋರ್ಸ್) ಅಧಿಕಾರಿಗಳನ್ನು ಒಳಗೊಂಡಂತೆ ಬಾಲ್ಯಾವಸ್ಥೆ ಹಾಗೂ ಕಿಶೋರವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಅಡಿ ವಿವಿಧ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಬಾಲ/ ಹದಿಹರೆಯ ಕಾರ್ಮಿಕರ ತಪಾಸಣೆ ಕೈಗೊಳ್ಳಲಾಯಿತು. ಈ ಸಂದರ್ಭ ವಿವಿಧ ಸಂಸ್ಥೆಯ ಮಾಲೀಕರಿಗೆ ಸ್ಟಿಕರ್ಸ್ ಹಾಗೂ ಕರಪತ್ರಗಳನ್ನು ನೀಡುವ ಮೂಲಕ ಜಾಗೃತಿ ಮೂಡಿಸಲಾಯಿತು. ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟಿ, ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕರಾದ ಶಿವಕುಮಾರ್, ಚೇರಂಬಾಣೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿಪಿನ್, ಗ್ರಾಮ ಲೆಕ್ಕಿಗರಾದ ರವಿಚಂದ್ರ, ಕ್ಷೇತ್ರ ಶಿಕ್ಷಣ ಅಧಿಕಾರಿ ದೊಡ್ಡೇಗೌಡ, ವಿಶೇಷ ಮಕ್ಕಳ ಪೊಲೀಸ್ ಘಟಕದ ಸುಮತಿ, ಮಕ್ಕಳ ಸಹಾಯವಾಣಿ ಘಟಕದ ಸಂಯೋಜಕರಾದ ನವೀನ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಆರ್.ಶೀರಾಜ್…
ಪುತ್ತೂರು ಡಿ.8 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವಿದ್ಯಾರ್ಥಿಗಳ ಎರಡು ತಂಡಗಳು ಸ್ಟಾರ್ಟ್ ಅಪ್ ಚಾಲೆಂಜಸ್ ಸ್ಪರ್ಧೆಯಲ್ಲಿ ತಲಾ ಒಂದು ಲಕ್ಷ ರೂ.ಗಳ ನಗದು ಬಹುಮಾನವನ್ನು ಗೆದ್ದುಕೊಂಡಿವೆ. ಕೆಎಸ್ಡಿಸಿ ಕರ್ನಾಟಕ ಸರ್ಕಾರ, ಯುಎನ್ಡಿಪಿ, ಕೌಶಲ್ಯ ಕರ್ನಾಟಕ, ಸೆವೆನ್ತ್ ಸೆನ್ಸ್, ಎಸ್ಎಪಿ ಲ್ಯಾಬ್ಸ್ ಇಂಡಿಯಾ ಲಿಮಿಟೆಡ್, ಕೋಡ್ ಉನ್ನತಿ ಮತ್ತು ಎಜೆಐಇಟಿ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಎ ಜೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮ್ಮ ಯೋಜನೆಯನ್ನು ಮಂಡಿಸಿ ಮೆಚ್ಚುಗೆ ಗಳಿಸಿಕೊಂಡಿದ್ದಾರೆ. ಸೌರ ಶಕ್ತಿ ಮತ್ತು ಇತರ ಇಂಧನ ವ್ಯವಸ್ಥೆಯನ್ನು ಒಳಗೊಂಡ ಡ್ಯುಯಲ್ ಟ್ಯೂನಿಂಗ್ ಇಂಜಿನ್ಗಳನ್ನು ಹೊಂದಿರುವ ದೋಣಿ, ಹಡಗು ಮತ್ತು ಕ್ರೂಸರ್ಗಳಲ್ಲಿ ಇಂಧನದ ಮಿತವ್ಯಯವನ್ನು ಸಾಧಿಸುವ ವಿನೂತನ ಕಲ್ಪನೆಯನ್ನು ಯೋಜನೆಯು ಒಳಗೊಂಡಿದೆ. ಕರಾವಳಿ ಭಾಗದ ಮೀನುಗಾರರಿಗೆ ಬಹಳಷ್ಟು ಪ್ರಯೋಜನಕಾರಿಯಾಗಬಲ್ಲ ಈ ಯೋಜನೆಯನ್ನು ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿಗಳಾದ ಪ್ರಜ್ಞೇಶ್.ಎನ್, ಸುಶಾಂತ್.ಎಚ್.ಪಿ, ಸ್ಪರ್ಶಿತ್.ಐ.ಶೆಟ್ಟಿ ಮತ್ತು ವಿಲಾಸ್ ಚೌಟಾ ಅಭಿವೃದ್ದಿಪಡಿಸಿದ್ದರು.…
ಮಡಿಕೇರಿ ಡಿ.8 : ಬರಗಾಲದ ಪರಿಸ್ಥಿತಿಯಿಂದ ರಾಜ್ಯದ ಜನ ಹಾಗೂ ಕೃಷಿಕ ವರ್ಗ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಬರ ಪರಿಹಾರ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಘಟಕ, ಹೋರಾಟದ ಎಚ್ಚರಿಕೆ ನೀಡಿದೆ. ನಗರದಲ್ಲಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಅವರು, ಬರ ಪರಿಹಾರ ಒದಗಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರ ನಿರ್ಲಕ್ಷ್ಯ ತೋರುತ್ತಿವೆ ಎಂದು ಟೀಕಿಸಿದರು. ಬರ ಪೀಡಿತ ಪ್ರದೇಶಗಳಲ್ಲಿ ಸೂಕ್ತ ರೀತಿಯಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು. ಸರ್ವ ಪಕ್ಷಗಳ ನಿಯೋಗ ದೆಹಲಿಗೆ ತೆರಳಿ ಬರ ಪರಸ್ಥಿತಿಗೆ ಸ್ಪಂದಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು. ಬೆಳೆಹಾನಿಗೆ ಬೆಳೆವಿಮೆ ತುರ್ತು ಪಾವತಿ ಮಾಡಬೇಕು. ಬರಪೀಡಿತ ಪ್ರದೇಶದ ರೈತರಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು. ಪಶುಸಂಗೋಪನೆಯಲ್ಲಿ ತೊಡಗಿರುವ ಹಾಗೂ ಜಾನುವಾರು ಹೊಂದಿರುವ ರೈತರಿಗೆ ಪ್ರತಿ ಜಾನುವಾರಿಗೆ 5…






