ಮಡಿಕೇರಿ ನ.12 : ಆದಿಮಸಂಜಾತ ಕೊಡವ ಜನಾಂಗಕ್ಕೆ ಸಂವಿಧಾನದ ಭದ್ರತೆಯ ಅಗತ್ಯವಿದೆ. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡುವುದು ಮತ್ತು ಕೊಡವರನ್ನು ಎಸ್.ಟಿ ಪಟ್ಟಿಗೆ ಸೇರಿಸುವುದು ಅನಿವಾರ್ಯವಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಸಿಎನ್ಸಿ ವತಿಯಿಂದ ನೆಲಜಿ ನಾಡ್ ಮಂದ್ ನಲ್ಲಿ ನಡೆದ ಪಾದಯಾತ್ರೆ ಮತ್ತು ಕೊಡವ ಜನಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಭಾರತದ ಸಂವಿಧಾನ ಪರಿಶೀಲನಾ ಆಯೋಗವು ಶಿಫಾರಸ್ಸು ಮಾಡಿರುವ ವರದಿಯನ್ವಯ ಕೊಡವ ಲ್ಯಾಂಡ್ ಸ್ವಯಂ ಶಾಸನದ ಜನ್ಮ ಭೂಮಿಯನ್ನು ರಚಿಸಬೇಕು. ಸಂವಿಧಾನದಲ್ಲಿ ರೇಸ್/ಮೂಲ ವಂಶಸ್ಥ ಜನಾಂಗಕ್ಕೆ ಯಾವುದೇ ವಿಶೇಷ ಪರಿಚ್ಛೇದಗಳ ಷರತ್ತು ಇಲ್ಲದಿರುವುದರಿಂದ ಕೊಡವರನ್ನು ಎಸ್.ಟಿ ಪಟ್ಟಿಗೆ ಸೇರಿಸುವುದು ಅನಿವಾರ್ಯವಾಗಿದೆ. ಆದ್ದರಿಂದ ಉಚ್ಚ ನ್ಯಾಯಾಲಯದ ಆದೇಶದಂತೆ, ಕೊಡವ ಜನಾಂಗದ ನ್ಯಾಯಯುತ, ಸೂಕ್ಷ್ಮ, ಸಮಗ್ರ ಕುಲಶಾಸ್ತ್ರ ಅಧ್ಯಯನ ಆರಂಭಿಸಬೇಕು ಎಂದು ಒತ್ತಾಯಿಸಿದರು. ಕೊಡವ ಕಸ್ಟಮರಿ ಜನಾಂಗೀಯ “ಸಂಸ್ಕಾರ ಗನ್” ಹಕ್ಕುಗಳನ್ನು ಸಿಖ್ಖರ “ಕಿರ್ಪಾನ್” ಗೆ ಸಮಾನವಾಗಿ ಸಂವಿಧಾನದ 25 ಮತ್ತು 26ನೇ…
ಲೇಖಕ: admin
ಮಡಿಕೇರಿ ನ.11 : ಕುಶಾಲನಗರದ ಸೋಮೇಶ್ವರ ಬಡಾವಣೆಯ ಮನೆಯೊಂದರಲ್ಲಿ., ಕನ್ನಡ ಸ್ನೇಹ ಸಿರಿ ಬಳಗದ ವತಿಯಿಂದ ಅಲ್ಲಿನ ನಿವಾಸಿ, ಪಿ.ಎಸ್. ಜಾನ್ ಅವರ ಮನೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಕನ್ನಡ ನಾಡು-ನುಡಿ-ಸಂಸ್ಕೃತಿ ಕುರಿತಾಗಿ ಏರ್ಪಡಿಸಲಾಗಿದ್ದ `ಮನೆಯಂಗಣದಲ್ಲಿ ಕನ್ನಡ ರಿಂಗಣ’ ಹರಟೆ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಕನ್ನಡ ಮನಸುಗಳು ಒಂದಾಗಿ ಬೆರೆತು ಸಂಭ್ರಮಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದ ಕನ್ನಡಾಭಿಮಾನಿಗಳು ತಮಗಿಷ್ಟವಾದ ಕನ್ನಡ ಹಾಡುಗಳನ್ನು ಹಾಡಿದರೆ, ಕೆಲವರು ಹಾಸ್ಯ ಚಟಾಕಿಗಳನ್ನು ಹಾರಿಸಿದರು. ಇನ್ನೂ ಕೆಲವರು ಮನದಾಳದ ಮಾತುಗಳನ್ನು ಹೇಳಿಕೊಂಡರೆ, ಇನ್ನೂ ಕೆಲವರು ಕವನ, ಚುಟುಕಗಳನ್ನು ಹೇಳಿದರು. ಪರಸ್ಪರ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಂಡರು. ಕನ್ನಡ ಆಸ್ತಿಯಾಗಬೇಕು :: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ ಮಾತನಾಡಿ, ಇದೊಂದು ಅಪರೂಪದ ಕ್ಷಣವಾಗಿದೆ. ಪ್ರೀತಿಯ ಕರೆಗೆ ಅಭಿಮಾನವಿಟ್ಟು ಕನ್ನಡದ ಮೂಲಕ ಸಂಬಂಧ ಕಲ್ಪಿಸಿ ಪರಸ್ಪರ ಒಂದುಗೂಡುವಿಕೆಗೆ ಕಾರಣವಾಗಿದೆ. ಹರಟೆಯ ಮೂಲಕ ಅಭಿಪ್ರಾಯಗಳನ್ನು ಸಮಾಜಕ್ಕೆ ಹೇಳಿದಾಗ ಮುಂದಿನ ಪೀಳಿಗೆಗೆ ತಲಪುವದಲ್ಲದೆ, ಕನ್ನಡದ…
ಮಡಿಕೇರಿ ನ.11 : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಗಿದೆ. ವಿವಿಧ ಭಾಗ್ಯಗಳನ್ನು ಪೂರೈಸುವುದರಲ್ಲೇ ಮಗ್ನವಾಗಿರುವ ಸರ್ಕಾರ ಗ್ರಾಮೀಣ ರಸ್ತೆಗಳ ಅಭಿವೃದ್ಧಿಯನ್ನು ಕಡೆಗಣಿಸಿದೆ ಎನ್ನುವ ಆರೋಪ ಕೇಳಿ ಬಂದಿದೆ. ಇದಕ್ಕೆ ಪೂರಕ ಎಂಬಂತೆ ಕೊಡಗಿನ ರಸ್ತೆಗಳು ಸಂಪೂರ್ಣವಾಗಿ ಹೊಂಡ, ಗುಂಡಿಗಳಾಗಿದ್ದು, ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸುಮಾರು ಆರು ತಿಂಗಳು ಮಳೆಯಲ್ಲೇ ಕಳೆದು ಹೋಗುವ ಕೊಡಗು ಜಿಲ್ಲೆ ಮಳೆಯ ಕಾರಣದಿಂದಲೇ ರಸ್ತೆಗಳನ್ನು ಕಳೆದುಕೊಳ್ಳುತ್ತಿರುವುದು ಸಾಮಾನ್ಯ. ಆದರೆ ಗುಣಮಟ್ಟದ ರಸ್ತೆಗಳು 5 ರಿಂದ 10 ವರ್ಷ ಹಾಳಾಗದೆ ಉಳಿದ ಉದಾಹರಣೆಗಳಿವೆ. ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯೇ ಹೆಚ್ಚಾಗಿದ್ದು, ಇಲ್ಲಿನ ರಸ್ತೆಗಳ ದುಸ್ಥಿತಿ ಆಡಳಿತ ನಡೆಸುತ್ತಿರುವವರಿಗೇ ಪ್ರೀತಿ ಎಂಬಂತ್ತಾಗಿದೆ. ಕುಶಾಲನಗರ- ವಾಲ್ನೂರು ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನ ಮತ್ತು ಪಾದಾಚಾರಿಗಳ ಸಂಚಾರ ಅಸಾಧ್ಯವಾಗಿದೆ. ನೆಲ್ಯಹುದಿಕೇರಿವರೆಗೆ ಸಂಪೂರ್ಣವಾಗಿ ರಸ್ತೆ ಹೊಂಡ ಗುಂಡಿಗಳಾಗಿದ್ದು, ಗ್ರಾಮಸ್ಥರೇ ಮಣ್ಣು ಹಾಕಿ ಗುಂಡಿ ಮುಚ್ಚಬೇಕಾದ ಪರಿಸ್ಥಿತಿ ಉದ್ಭವಿಸಿದೆ. ನಿತ್ಯ ಪ್ರವಾಸಿಗರ ನೂರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ಅಲ್ಲದೆ…
ಕೋಲಾರ ನ.11 : ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯರಗೋಳ್ ಅಣೆಕಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ಸಂದರ್ಭ ಕೋಲಾರ ಜಿಲ್ಲೆಯ ಒಟ್ಟು 2,197 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಸಂಸದ ಮುನಿಸ್ವಾಮಿ, ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ಶಾಸಕ ಕೆ.ವೈ.ನಂಜೇಗೌಡ, ಎಸ್.ಎನ್. ನಾರಾಯಣಸ್ವಾಮಿ ಹಾಜರಿದ್ದರು.
ಕುಶಾಲನಗರ (ಕೂಡಿಗೆ) ನ.11 : ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ‘ ಗೋ ಗ್ರೀನ್ ಅಭಿಯಾನ’ದಡಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತ ಪರಿಸರ ಜಾಗೃತಿ ಆಂದೋಲ ನಡೆಯಿತು. ಕೂಡುಮಂಗಳೂರು ಗ್ರಾ.ಪಂ, ಶಾಲೆಯ ಇಕೋ ಕ್ಲಬ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ, ಎಸ್ ಡಿ ಎಂ ಸಿ ಹಾಗೂ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. “ಹಸಿರು ದೀಪಾವಳಿ ಆಚರಿಸುವ ಅಗತ್ಯತೆ’ ಕುರಿತು ಮಾಹಿತಿ ನೀಡಿದ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳು ಹಾಗೂ ಮಾಲಿನ್ಯದ ದುಷ್ಪರಿಣಾಮಗಳ…
ಮಡಿಕೇರಿ ನ.11 : ಮೇಕೇರಿ ಸ್ವಾಗತ ಯುವಕ ಸಂಘದ ನೇತೃತ್ವದಲ್ಲಿ ಮೇಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ದಂತ ತಪಾಸಣೆ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ದಂತ ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ದೀಪಾ ಮಕ್ಕಳ ದಂತ ತಪಾಸಣೆ ನಡೆಸಿದರು. ಹಲ್ಲಿನ ಮಹತ್ವ , ಉಂಟಾಗಬಹದಾದ ಸಮಸ್ಯೆಗಳು, ಬ್ರಶ್ ಮಾಡುವ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ವೈದ್ಯರು ಮಾಹಿತಿ ನೀಡಿದರು. ಹಲ್ಲಿನ ಗಂಭೀರ ಸಮಸ್ಯೆಯಿರುವ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ಕರೆ ತರುವಂತೆ ತಿಳಿಸಲಾಯಿತು. ಮೇಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಂತ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಂಡರು. ಶಿಬಿರದಲ್ಲಿ ಸ್ವಾಗತ ಯುವಕ ಸಂಘದ ಅಧ್ಯಕ್ಷ ಟಿ.ಎನ್.ಉಮೇಶ್, ಕಾರ್ಯದರ್ಶಿ ಪವನ್, ಖಜಾಂಚಿ ಭವನ್, ಕಾರ್ಯಕಾರಿ ಸಮಿತಿ ಸದಸ್ಯ ಲತೀ, ಗ್ರಾ.ಪಂ. ಸದಸ್ಯರಾದ ಸುಶೀಲಾ ಮಧು, ಶಾಲಾ ಮುಖ್ಯೋಪಾಧ್ಯಾಯರಾದ ಸಬಿತ ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು. ದಂತ ತಪಾಸಣೆಯ ನಂತರ ಶಾಲಾ ಮಕ್ಕಳಿಗೆ ಟೂತ್ ಬ್ರಶ್ ಹಾಗೂ ಟೂತ್…
ಮಡಿಕೇರಿ ನ.11 : ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ, ರಾಷ್ಟ್ರ ಕವಿ ಕುವೆಂಪು ಅವರ ಪುಣ್ಯಸ್ಮರಣೆ ಆಚರಿಸಲಾಯಿತು. ನಗರದ ವಿಶ್ವ ಮಾನವ ಉದ್ಯಾನವನದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪುತ್ಥಳಿಗೆ ವೇದಿಕೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಪುಷ್ಪ ನಮನ ಸಲ್ಲಿಸಿ ಗೌರವಿಸಿದರು. ಯುಗದ ಕವಿ, ಜಗದ ಕವಿ ಕುವೆಂಪು ರವರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸುವುದರ ಜೊತೆಗೆ ತಮ್ಮ ವಿಶ್ವಮಾನವ ಸಂದೇಶಗಳ ಮೂಲಕ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ್ದಾರೆ ಎಂದು ವೇದಿಕೆಯ ಪ್ರಮುಖರು ಸ್ಮರಿಸಿದರು. ಹಿತರಕ್ಷಣಾ ವೇದಿಕೆಯ ಗೌರವ ಅಧ್ಯಕ್ಷ ಖಲೀಲ್ ಭಾಷಾ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭ ಕೊಡಗು ಹಿತರಕ್ಷಣಾ ವೇದಿಕೆ ಅಧ್ಯಕ್ಷ ರವಿಗೌಡ, ವಿಷ್ಣುಸೇನಾ ಜಿಲ್ಲಾಧ್ಯಕ್ಷ ರಫೀಕ್ ದಾದಾ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಮುನೀರ್ ಮಾಚರ್, ವೀರಭದ್ರ ಮುನೀಶ್ವರ ದೇವಾಲಯದ ಗೌರವಾಧ್ಯಕ್ಷ ಪಿ.ಜಿ.ಮಂಜುನಾಥ್, ಕರ್ನಾಟಕ…
ಮಡಿಕೇರಿ ನ.11 : ಕರಿಕೆ ಗ್ರಾಮದ ಆನೆಪಾರೆ ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ಫಸಲು ನಷ್ಟವಾಗುತ್ತಿರುವ ಹಿನ್ನೆಲೆ ರೈತರು ಕಂಗಾಲಾಗಿದ್ದಾರೆ. ಗ್ರಾಮದ ನಿವಾಸಿಗಳಾದ ರಧೀಶ್, ಜೋಸೆಫ್, ಮೋಹನ ಹಾಗೂ ಮನೋಜ್ ಅವರ ತೋಟಕ್ಕೆ ನುಗ್ಗಿ ಅಡಿಕೆ, ಕಾಫಿ, ತೆಂಗುಗಳನ್ನು ಧ್ವಂಸಗೊಳಿಸಿದೆ. ಪ್ರತೀ ವರ್ಷ ಆನೆದಾಳಿಯಿಂದ ರೈತರು ಕಂಗಾಲಾಗಿದ್ದು, ಅರಣ್ಯ ಅಧಿಕಾರಿಗಳು ಆನೆಗಳನ್ನು ಕಾಡಿಗೆಗಟ್ಟಬೇಕು ಮತ್ತು ಆನೆ ಕಂದಕಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದ ಗ್ರಾಮಸ್ಥರು, ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಡಳಿತ ಹಾಗೂ ಸಂಬಂಧಿಸಿ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಮಡಿಕೇರಿ ನ.11 : ಕುಶಾಲನಗರ- ಚಂದ್ರಯಾನ 3 ಯಶಸ್ಸಿನ ಸಂಭ್ರಮಾಚರಣೆಯ ಪ್ರಯುಕ್ತ ಕೊಡಗಿನ ಸೈನಿಕ ಶಾಲೆಯಲ್ಲಿ ಚಂದ್ರಯಾನ-3 ರ ಯಶಸ್ಸಿನ ಸಂಭ್ರಮಾಚರಣೆ ನಡೆಯಿತು. ವಿದ್ಯಾರ್ಥಿಗಳಿಗೆ ಸಂಭ್ರಮಾಚರಣೆ ಪ್ರಯುಕ್ತ ‘ತಿರಂಗ’ ಎಂಬ ವಿಷಯವನ್ನಾಧರಿಸಿ ಕವನ ಬರೆಯುವ ಸ್ಪರ್ಧೆ ನಡೆಯಿತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭ ಶಾಲೆಯ ಪ್ರಾಂಶುಪಾಲರು ಮಾತನಾಡಿ, ಶಾಲೆಯ ಯುವ ವಿದ್ಯಾರ್ಥಿಗಳ ಮನಸ್ಸುಗಳಲ್ಲಿ ದೇಶಪ್ರೇಮವನ್ನು ತುಂಬುವ ಮೂಲಕ ತಮ್ಮ ದೇಶಭಕ್ತಿಯ ಮನೋಭಾವವನ್ನು ಉತ್ತೇಜಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.
ನಾಪೋಕ್ಲು ನ.10 : ನಾಪೋಕ್ಲು- ವಿರಾಜಪೇಟೆ ಮುಖ್ಯರಸ್ತೆಯ ಹಳೆ ತಾಲೂಕು ಬಳಿ ರಸ್ತೆ ಸಂಪೂರ್ಣವಾಗಿ ಗುಂಡಿಮಯವಾಗಿದ್ದು, ಪಾದಾಚಾರಿಗಳು ಹಾಗೂ ವಾಹನ ಚಾಲಕರ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಟ್ಟಣಕ್ಕೆ ಸಮೀಪದ ಹಳೆ ತಾಲೂಕು ಬಳಿಯ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಪಕ್ಕದ ರಸ್ತೆಯಲ್ಲಿ ಹೊಂಡವಾಗಿದ್ದು ಹಲವು ದಿನಗಳಿಂದ ಮುಚ್ಚದೆ ಇದ್ದುದರಿಂದ ಸಣ್ಣ ಗುಂಡಿಗಳು ದೊಡ್ಡ ಗುಂಡಿಗಳಾಗಿ ರಸ್ತೆ ಸಂಚಾರಕ್ಕೆ ತೀವ್ರ ತೊಂದಯಾಗುತ್ತಿದೆ. ವಾಹನಗಳು ರಸ್ತೆಯ ಅವ್ಯವಸ್ಥೆಯಿಂದ ಒಂದು ಪಾಶ್ವದಲ್ಲಿ ಚಲಿಸಲಾರದೆ ಮತ್ತೊಂದು ಕಡೆಯಲ್ಲಿ ಚಲಿಸುತ್ತಿದ್ದು ನೀರಿನ ಪೈಪಿಗೆ ತೊಂದರೆ ಉಂಟಾಗುತ್ತಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಗಣೇಶೋತ್ಸವದ ಸಂದರ್ಭದಲ್ಲಿ ದೇವಾಲಯದ ಸಮಿತಿ ಸದಸ್ಯರು ಕಾಂಕ್ರೀಟ್ ಹಾಕಿ ಗುಂಡಿ ಮುಚ್ಚುವ ಪ್ರಯತ್ನ ಮಾಡಿದ್ದರು. ಇದೀಗ ಮತ್ತೆ ರಸ್ತೆ ಗುಂಡಿಮಯವಾಗಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಇನ್ನಾದರೂ ಸಂಬಂಧಪಟ್ಟವರು ಗಮನಹರಿಸಿ ರಸ್ತೆಯ ಗುಂಡಿಯನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ವರದಿ : ದುಗ್ಗಳ ಸದಾನಂದ






