ಮಡಿಕೇರಿ ನ.11 : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನ.14 ರಿಂದ 20 ರವರೆಗೆ ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಸಹಯೋಗದೊಂದಿಗೆ ನಡೆಯಲಿದೆ. ಸಹಕಾರಿ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿರುವ ಮಡಿಕೇರಿ ತಾಲ್ಲೂಕಿನ ಕೊಳಕೇರಿ ಗ್ರಾಮದ ಬಿದ್ದಾಟಂಡ ಎ.ರಮೇಶ್ರಿಗೆ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿ, ಮಡಿಕೇರಿ ತಾಲ್ಲೂಕಿನ ಕೊಂಗಂಡ ಎ. ತಿಮ್ಮಯ್ಯ, ವಿರಾಜಪೇಟೆ ತಾಲ್ಲೂಕಿನ ಚಿರಿಯಪಂಡ ಕೆ.ಉತ್ತಪ್ಪ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಎಚ್.ಎಸ್.ಸುಬ್ಬಪ್ಪರಿಗೆ ‘ಶ್ರೇಷ್ಠ ಸಹಕಾರಿ ಪ್ರಶಸ್ತಿ’ ಮತ್ತು ಮಡಿಕೇರಿಯ ಮಣವಟ್ಟೀರ ಕಾವೇರಿಯಮ್ಮ ಪೂವಣ್ಣ ಅವರಿಗೆ ‘ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಬಿದ್ದಾಟಂಡ ಎ. ರಮೇಶ್ ಚಂಗಪ್ಪ – ಕೊಡಗು ಸಹಕಾರ ರತ್ನ ಜಿಲ್ಲೆಗೊಬ್ಬರಂತೆ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. 2023 ರ ಕೊಡಗು ಸಹಕಾರ ರತ್ನಕ್ಕೆ ಭಾಜನರಾದವರು ಶ್ರೀ ಬಿದ್ದಾಟಂಡ ಎ. ರಮೇಶ್ ಚಂಗಪ್ಪ ಮಡಿಕೇರಿ ತಾಲೂಕು ಕೊಳಕೇರಿ ಗ್ರಾಮದ ಬಿದ್ದಾಟಂಡ ಎ.…
ಲೇಖಕ: admin
ಸುಂಟಿಕೊಪ್ಪ ನ.11 : ಹಿಂದೂ ಜಾಗರಣ ವೇದಿಕೆಯ ವತಿಯಿಂದ ಮಾದಾಪುರ ಗಣಪತಿ ದೇವಾಲಯದಲ್ಲಿ ಕುಟ್ಟಪ್ಪ ಸ್ಮರಣಾರ್ಥ ಶಾಂತಿ ಪೂಜೆ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವೇದಿಕೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಕುಟ್ಟಪ್ಪ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಪ್ರಮುಖರಾದ ಭೋಜೇಗೌಡ, ದಿ.ಕುಟ್ಟಪ್ಪ ಅವರ ಪುತ್ರ ಡಿ.ಕೆ.ಡಾಲಿ, ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಾಯೋಜಕ ಅಜಿತ್ ಕುಕ್ಕೇರಾ, ಪ್ರಮುಖರಾದ ಚೇತನ್ ಶಾಂತಿನಿಕೇತನ, ವಿನಯ್, ತಾಲ್ಲೂಕು ಸಾಯೋಜಕ ವಿನಯ್ ಕುಮಾರ್, ಹೇಮಂತ್, ಗಪ್ಪು ಸೋಮಯ್ಯ, ಬಿಪಿನ್, ಸೂರಜ್, ಕೊಪ್ಪತಂಡ ಗಣೇಶ್, ಅಶೋಕ್ ಹಾಗೂ ಗ್ರಾಮಸ್ಥರು ಹಾಜರಿದ್ದರು. ಸುನಿಲ್ ಮಾದಾಪುರ ಸ್ವಾಗತಿಸಿ, ನಿರ್ವಹಿಸಿ ವಂದಿಸಿದರು.
ಮಡಿಕೇರಿ ನ.11 : ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಸಂರಕ್ಷಣೆಯ ಬಗ್ಗೆ ಜಾಗೃತಿ ಉದ್ದೇಶದಿಂದ ಮಡಿಕೇರಿ ತಾಲ್ಲೂಕು, ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ನ.14 ರಂದು ಸಂಜೆ 05.30 ಗಂಟೆಗೆ ದೀಪಾವಳಿ ಬಲಿಪಾಡ್ಯಮಿ ದಿನದಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ “ಗೋಪೂಜೆ” ಕಾರ್ಯಕ್ರಮ ಏರ್ಪಡಿಸಲಾಗಿದೆ. ಆದ್ದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ “ಗೋಪೂಜೆ” ಕಾರ್ಯಕ್ರಮಕ್ಕೆ ಆಗಮಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.
ಮಡಿಕೇರಿ ನ.11 : ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016 ರ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಪ್ರಸ್ತಾಪಿತ ಕಾಯ್ದೆಯನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದ್ದರಿಂದ 14 ರಿಂದ 18 ರ ವಯಸ್ಸಿನ ಕಿಶೋರಾವಸ್ಥೆಯ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಜಿಲ್ಲಾದ್ಯಂತ ದೀಪಾವಳಿ ಹಾಗೂ ಹುತ್ತರಿ ಹಬ್ಬದ ಪ್ರಯುಕ್ತ ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ. ಪಟಾಕಿ ತಾಯಾರಿಕೆ, ಮಾರಾಟ ಹಾಗೂ ಇತರೆ ಪ್ರಕ್ರಿಯೆಗಳು ಅಪಾಯಕಾರಿ ಉದ್ದಿಮೆಗಳ ವ್ಯಾಪ್ತಿಗೆ ಬರುವುದರಿಂದ ಈ ಅಂಗಡಿಗಳಲ್ಲಿ ಯಾವುದೇ ಕಾರಣಕ್ಕೂ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳಬಾರದು. ತಪ್ಪಿದ್ದಲ್ಲಿ ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016 ರ ಕಾಯ್ದೆಯನ್ವಯ…
ಮಡಿಕೇರಿ ನ.10 : ಮಕ್ಕಳ ದಿನಾಚರಣೆಯ ಪ್ರಯುಕ್ತ ಮಡಿಕೇರಿ ನಗರದ ಮಹದೇವಪೇಟೆಯ ಎಸ್ಎಸ್ ಆಸ್ಪತ್ರೆ ವತಿಯಿಂದ ನ.12 ರಂದು ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಆಸ್ಪತ್ರೆಯ ಸಮೀಪದಲ್ಲಿರುವ ಕ್ರೆಸೆಂಟ್ ಸ್ಕೂಲ್ ಆವರಣದಲ್ಲಿ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸ್ಪರ್ಧೆ ಆರಂಭಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಶಿಲ್ಪಾ ಸತೀಶ್ ಮನವಿ ಮಾಡಿದ್ದಾರೆ. ಸ್ಪರ್ಧೆ ಮೂರು ವಿಭಾಗದಲ್ಲಿ ನಡೆಯಲಿದ್ದು, ಮೊದಲ ವಿಭಾಗದಲ್ಲಿ ಎಲ್ಕೆಜಿ ಯಿಂದ ಒಂದನೇ ತರಗತಿ ವಿದ್ಯಾರ್ಥಿಗಳಿಗೆ ವಿಷಯ “ಪ್ರಕೃತಿ”, ಎರಡನೇ ವಿಭಾಗದಲ್ಲಿ 2ನೇ ತರಗತಿಯಿಂದ 6ನೇ ತರಗತಿಯವರೆಗೆ ವಿಷಯ “ಚಂದ್ರಯಾನ” ಮತ್ತು 3ನೇ ವಿಭಾಗದಲ್ಲಿ 7ನೇ ತರಗತಿಯಿಂದ 10ನೇ ತರಗತಿಯವರೆಗೆ ವಿಷಯ “ಜಾಗತಿಕ ತಾಪಮಾನ” ವಾಗಿರುತ್ತದೆ. ಚಿತ್ರ ಬಿಡಿಸಲು ಬಣ್ಣವನ್ನು ಮಾತ್ರ ವಿದ್ಯಾರ್ಥಿಗಳು ತರಬೇಕು, ಕಾಗದವನ್ನು ಆಯೋಜಕರು ನೀಡಲಿದ್ದಾರೆ. ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವನ್ನು ನೀಡಲಾಗುತ್ತಿದ್ದು, ನಗದು, ಪದಕ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ನೀಡಲಾಗುವುದು.…
ಮಡಿಕೇರಿ ನ.10 : ಕೊಡವ ಲ್ಯಾಂಡ್ ಜಿಯೋ-ರಾಜಕೀಯ ಸ್ವಾಯತ್ತತೆಯ ಪರ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ ಶಾಂತಿಯುತ ಹೋರಾಟಕ್ಕೆ ಶೀಘ್ರ ಜಯ ಸಿಗಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಾಡಿನಾಡ್- ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ಕುಂಜಿಲ ಕಕ್ಕಬ್ಬೆ “ಕೆಂಜರಾಣೆ ಪಾಡಿನಾಡ್ಮಂದ್”ನಲ್ಲಿ ಕೊಡವ ಜಾಗೃತಿ ಸಭೆಯ ಮೂಲಕ ಸಿಎನ್ಸಿ ಸಂಘಟನೆಯ ಐದು ಹಂತಗಳ ಪಾದಯಾತ್ರೆಯನ್ನು ಮುಕ್ತಾಯಗೊಳಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕೊಡಗಿನ ಆದಿಮಸಂಜಾತ ಕೊಡವ ಜನಾಂಗಕ್ಕೆ ಸಂವಿಧಾನದಡಿ ಕೊಡವ ಲ್ಯಾಂಡ್ ಜಿಯೋ-ರಾಜಕೀಯ ಸ್ವಾಯತ್ತತೆಯ ಮೂಲಕ ಮಾತ್ರ ಭದ್ರತೆ ಸಿಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕೊಡವ ಲ್ಯಾಂಡ್ ಗಾಗಿ ಶಾಂತಿಯುತ ಹೋರಾಟ ಮುಂದುವರೆಯಲಿದೆ. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು ಎನ್ನುವುದು ನಮ್ಮ ಪ್ರಮುಖ ಬೇಡಿಕೆಯಾಗಿದ್ದು, ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಹೈಕೋರ್ಟ್ ನಲ್ಲಿ ಈ ಕುರಿತು ಅರ್ಜಿ ಸಲ್ಲಿಸಿ ನಮ್ಮ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.…
ಮಡಿಕೇರಿ ನ.10 : ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ಪರಿಸರ ಸ್ನೇಹಿ ಹಬ್ಬವನ್ನಾಗಿ ಆಚರಿಸಲು ಮನವಿ ಮಾಡುತ್ತದೆ. ದೀಪಾವಳಿ ಆಚರಿಸುವ ಸಂದರ್ಭದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಪೋಟಿಸುವುದರಿಂದ ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಮತ್ತು ತ್ಯಾಜ್ಯ ಉತ್ಪಾದನೆಯಾಗಲಿದ್ದು, ಅದನ್ನು ತಡೆಗಟ್ಟಲು ಪರಿಸರಸ್ನೇಹಿ ವಸ್ತುಗಳನ್ನು ಬಳಸುವುದು ಹಾಗೂ ತ್ಯಾಜ್ಯದಿಂದ ಉಪಯುಕ್ತ ವಸ್ತುಗಳನ್ನು ಸಿದ್ಧಪಡಿಸಿ ದೀಪಾವಳಿ ಉಡುಗೊರೆ ನೀಡಬಹುದು ಹಾಗೂ https://pledge.mygov.in/swachh.divali-shubh-diwali link ಮೂಲಕ ಸ್ವಚ್ಛ ದೀಪಾವಳಿ ಶುಭ ದೀಪಾವಳಿ ಆಚರಿಸುವ ಬಗ್ಗೆ ಪ್ರತಿಜ್ಞೆ ಪಡೆದು ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಾದ ವಿಜಯ್ ಕೋರಿದ್ದಾರೆ.
ಮಡಿಕೇರಿ ನ.10 : ಕಾಂಗ್ರೆಸ್ ಸೇವಾದಳದ ಶತಮಾನೋತ್ಸವ ಸಮಾರಂಭ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹಾಗೂ ಎಐಸಿಸಿ ಸೇವಾದಳದ ರಾಷ್ಟ್ರಾಧ್ಯಕ್ಷ ಲಾಲ್ ಜಿ ದೇಸಾಯಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯಿಂದ ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಅವರ ನೇತೃತ್ವದಲ್ಲಿ ಪ್ರಮುಖರಾದ ತೆರೆಸಾ ವಿಕ್ಟರ್, ರಾಜ್ಯ ಕಾರ್ಯದರ್ಶಿ ದಾಮೋದರ್, ಸದಸ್ಯ ಸಣ್ಣುವಂಡ ಕಾವೇರಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಪಾಂಡನ ಪುಷ್ಪವೇಣಿ, ಅನೀಸ್ ಅಹಮ್ಮದ್, ಪ್ರಧಾನ ಕಾರ್ಯದರ್ಶಿ ಹಭಿಬ್ ಅಹಮ್ಮದ್, ಕಾರ್ಯದರ್ಶಿ ರವೀನಾ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಮಹಮ್ಮದ್ ಹಯಾತ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಬಸವರಾಜು, ಕುಶಾಲನಗರ ಬ್ಲಾಕ್ ಅಧ್ಯಕ್ಷ ಸಾಹುಲ್ ಹಮೀದ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ರಾಜಶೇಖರ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಹರೀಶ್, ನಾಪೋಕ್ಲು ಅಧ್ಯಕ್ಷ ಪಿಯೂಷ್ ಪೆರೇರ, ನಗರ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಪ್ರೇಮ ಕೃಷ್ಣಪ್ಪ, ಶೇಕ್…
ಮಡಿಕೇರಿ ನ.10 : ಸರ್ಕಾರಿ ನೌಕರರು ಸಾರ್ವಜನಿಕರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸಬೇಕು. ಅದನ್ನು ಬಿಟ್ಟು ಸತಾಯಿಸಬಾರದು ಎಂದು ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಅವರು ಸಲಹೆ ಮಾಡಿದ್ದಾರೆ. ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿ ಅವರ ಸಮಸ್ಯೆಗಳನ್ನು ಆಲಿಸಿ ಬಳಿಕ ಅವರು ಮಾತನಾಡಿದರು. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತುಂಬಾ ಎಚ್ಚರವಹಿಸಿ ನಿಯಮಾನುಸಾರಿ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸೇವೆಯನ್ನು ಸರ್ಕಾರದ ಸೇವೆ ಎಂದು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಸರ್ಕಾರಿ ಸೇವೆಗೆ ಸೇರಿದವರು ಸಾರ್ವಜನಿಕರ ಕರ್ತವ್ಯ ನಿರ್ವಹಿಸಲು ಬಂದಿರುವುದು ಎಂಬುದನ್ನು ಅರಿತುಕೊಳ್ಳಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. ಕಳೆದ ಲೋಕಾಯುಕ್ತ ಸಭೆ ಸಂದರ್ಭದಲ್ಲಿ ಸ್ವೀಕರಿಸಿದ ಅರ್ಜಿಗಳ ಪಾಲನಾ ವರದಿಯನ್ನು ಪರಿಶೀಲಿಸಿದರು. ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್ ಅವರು ಮಾತನಾಡಿ ಸಕಾರದ ಎಲ್ಲಾ ಕಚೇರಿಗಳಲ್ಲಿ ಹಾಜರಾತಿ ಸಂಬಂಧ ಬಯೋಮೆಟ್ರಿಕ್ ಅಳವಡಿಸುವಂತೆ ಸೂಚಿಸಿದರು. ಶುಕ್ರವಾರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ದೂರು ಅರ್ಜಿ ಸ್ವೀಕಾರ ಸಂದರ್ಭದಲ್ಲಿ…
ಮಡಿಕೇರಿ ನ.10 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯಲ್ಲಿ ಕನ್ನಡ ರಾಜ್ಯೋತ್ಸವ 2023ರ ಪ್ರಯುಕ್ತ ““ಕಲಾಸ್ಮೃತಿ” ” ಕನ್ನಡ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಖ್ಯಾತ ಚಲನಚಿತ್ರ ನಟರು ಹಾಗೂ ಹಾಸ್ಯ ಕಲಾವಿದರಾದ ಮಿಮಿಕ್ರಿ ದಯಾನಂದ್ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ಪ್ರತಿಯೊಬ್ಬರಲ್ಲೂ ಆರೋಗ್ಯಕರ ನಗು ಇರಬೇಕು, ನೋವಿನ ನಗು ಇರಬಾರದು, ಮಹಿಳೆಯರಿಗೆ ಗೌರವ ಕೊಡಬೇಕು, ಹಸಿವು, ನೋವು ಅವಮಾನ ಎದುರಿಸಿದವರು ಜೀವನದಲ್ಲಿ ದೊಡ್ಡ ದೊಡ್ಡ ಸಾಧನೆ ಮಾಡುತ್ತಾರೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ವೈದ್ಯಕೀಯ ಕಾಲೇಜಿನಲ್ಲಿ ಈ ರೀತಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿರುವ ಬಗ್ಗೆ ಶ್ಲಾಘಿಸಿ ಒಬ್ಬ ವ್ಯಕ್ತಿಗೆ ಹೆತ್ತ ತಾಯಿ ಯಾವ ರೀತಿ ಶ್ರೇಷ್ಟ ಅದೇ ರೀತಿಯಾಗಿ ಪ್ರತಿಯೊಬ್ಬರಿಗೂ ತನ್ನ ನೆಲ, ತನ್ನ ಭಾಷೆ ತನ್ನ ರಾಜ್ಯ ಶ್ರೇಷ್ಟವಾಗಿದ್ದು ಯಾವುದೇ ಕಾರಣಕ್ಕೂ ಮರೆಯಬಾರದು ಎಲ್ಲರಿಗೂ ಗೌರವ ಕೊಡಬೇಕು ಆಚಾರ ವಿಚಾರಗಳನ್ನು ಬಿಟ್ಟು ಕೊಡಬಾರದು ಯಾರ ಮನಸ್ಸಿಗೂ ಗಾಯ ಮಾಡುವ ರೀತಿ ಮಾತನಾಡಬಾರದು.…






