ಲೇಖಕ: admin

ಕಡಂಗ ನ.10 : ನಾಪೋಕ್ಲು ಸಮೀಪದ ಕೊಟ್ಟಮುಡಿ ಮರ್ಕಝ್ ವಿದ್ಯಾ ಸಂಸ್ಥೆಯ ಅಧಿನದಲ್ಲಿ ಕಾರ್ಯಚರಿಸುವ ಮರ್ಕಝ್ ಪಬ್ಲಿಕ್ ಪ್ರೌಢ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳು ವಿಶೇಷ ಚೇತನ ಶಾಲೆಗೆ ಭೇಟಿದರು. ಮರ್ಕಝ್ ಪ್ರೌಢ ಶಾಲೆಯ ಪ್ರಾಂಶುಪಾಲ ಹಾಗೂ ಆಡಳಿತ ಮಂಡಳಿಯ ಸಹಕಾರದೊಂದಿಗೆ ಕ್ಷೇತ್ರ ಭೇಟಿಯ ಅಂಗವಾಗಿ ಪಾಲಿಬೆಟ್ಟದ ‘ಚೆಷೈರ್ ಹೋಮ್ ಇಂಡಿಯಾ’ವಿಶೇಷ ವಿಕಲ ಚೇತನ ಭೇಟಿ ನೀಡಿದ ವಿದ್ಯಾರ್ಥಿಗಳು ಅಲ್ಲಿನ ವಿದ್ಯಾರ್ಥಿಗ ದೈನಂದಿನ ಚಟುವಟಿಕೆಗಳಲ್ಲಿ ಭಾಗಿಯಾದರು. ಮರ್ಕಝ್ ವಿದ್ಯಾರ್ಥಿಗಳೆಲ್ಲರು ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಬೋಧನಾ ಕಲಿಕಾ ಸಾಮಾಗ್ರಿಗಳನ್ನು ವಿತರಿಸಿದರು. ಶಾಲೆಯ ಶಿಕ್ಷಕರಾದ ಉಸ್ಮಾನ್, ದೈಹಿಕ ಶಿಕ್ಷಕ ನಾಸಿರ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಈ ಸಂದರ್ಭ ಶಿಕ್ಷಕಿಯರಾದ ಆಶಾ, ರೆಹನಾ, ಗೀತಾ ಹಾಜರಿದ್ದರು. ವರದಿ : ನೌಫಲ್ ಕಡಂಗ  

Read More

ಕುಶಾಲನಗರ ನ.10: ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಪುರಸಭೆ ವ್ಯಾಪ್ತಿಯಲ್ಲಿ ಪಟಾಕಿ ಮಾರಾಟ ಹಾಗೂ ಪಟಾಕಿ ಬಳಕೆ ನಿಯಂತ್ರಣ ಮಾಡುವ ಉದ್ದೇಶದಿಂದ ಕುಶಾಲನಗರ ಪುರಸಭೆ ವತಿಯಿಂದ “ಸ್ವಚ್ಚ ದೀಪಾವಳಿ ಶುಭ ದೀಪಾವಳಿ” ಅಭಿಯಾನಕ್ಕೆ ಚಾಲನೆ ದೊರೆಯಿತು. ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು, ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಜೂನಿಯರ್ ಕಾಲೇಜು ಹಾಗೂ ಫಾತಿಮಾ ಕಾನ್ವೆಂಟ್ ನಲ್ಲಿ “ಸ್ವಚ್ಚ ದೀಪಾವಳಿ ಶುಭ ದೀಪಾವಳಿ” ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಪರಿಸರ ಸ್ನೇಹಿ ಹಸಿರು ದೀಪಾವಳಿ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಆಯಾ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಸಭೆಯನ್ನು ಕರೆದು ವಿದ್ಯಾರ್ಥಿಗಳಿಗೆ ಹಸಿರು ಪಟಾಕಿ ಬಗ್ಗೆ ಜಾಗೃತಿ ಮೂಡಿಸಲಾಯಿತು. ನಂತರ ಹಸಿರು ಪಟಾಕಿ ಬಳಕೆ ಮಾಡುವ ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಯಿತು. ಕಾಲೇಜುಗಳ ಮುಂಭಾಗ ಹಾಗೂ ಕಾರ್ಯಪ್ಪ ಸರ್ಕಲ್ ನಲ್ಲಿ ಸೆಲ್ಫೀ ಬೋರ್ಡ್ ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಸೆಲ್ಫೀ ತೆಗೆಯಲು ಅನುವು ಮಾಡಿಕೊಡಲಾಗಿತ್ತು. ಪರಿಸರ ಸ್ನೇಹಿ ದೀಪಾವಳಿಯ ಪ್ರತಿಜ್ಞಾ ವಿಧಿಯನ್ನು…

Read More

ಮಡಿಕೇರಿ ನ.10 : ಓರ್ವ ಮಹಿಳೆ ಸೇರಿದಂತೆ ಕೆಲವರಿಂದ ನನಗೆ ಕಿರುಕುಳವಾಗುತ್ತಿದೆ ಎಂದು ಆರೋಪಿಸಿ ಇತ್ತೀಚೆಗೆ ಪಂಪಿನಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ನಗರದ ಉಕ್ಕುಡ ನಿವಾಸಿ ಸಂದೇಶ್ ಅವರ ಮನೆಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿದರು. ಸಂದೇಶ್ ಅವರ ಪತ್ನಿ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಅವರು ಘಟನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆದರು. ಈಗಾಗಲೇ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರಿಗೆ ಕಾನೂನಿನ ಚೌಕಟ್ಟಿನಡಿ ಶಿಕ್ಷೆಯಾಗಲಿದೆ. ಕಾನೂನು ವ್ಯಾಪ್ತಿಯಲ್ಲಿ ನಾನು ನಿಮಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು. ಕಾಂಗ್ರೆಸ್ ನಗರಾಧ್ಯಕ್ಷ ಬಿ.ವೈ.ರಾಜೇಶ್, ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಸ್ಥಳೀಯ ನಗರಸಭಾ ಸದಸ್ಯ ಮನ್ಸೂರ್ ಮತ್ತಿತರ ಪ್ರಮುಖರು ಈ ಸಂದರ್ಭ ಹಾಜರಿದ್ದರು.

Read More

ಮಡಿಕೇರಿ ನ.10 : ಹುಲಿದಾಳಿಗೆ ಸಿಲುಕಿ ಮೂರು ಆಡುಗಳು ಬಲಿಯಾಗಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಗ್ರಾ.ಪಂ ವ್ಯಾಪ್ತಿಯ ರುದ್ರಬೀಡು ಗ್ರಾಮದಲ್ಲಿ ನಡೆದಿದೆ. ಹೊನ್ನಿಕೊಪ್ಪಲಿನ ಎಂ.ಬಿ.ಸಣ್ಣಪ್ಪ ಎಂಬುವವರಿಗೆ ಸೇರಿದ ಆಡುಗಳು ಇದಾಗಿದ್ದು, ಮೇಯಲೆಂದು ಗದ್ದೆಯಲ್ಲಿ ಕಟ್ಟಿ ಹಾಕಿದ್ದ ಸಂದರ್ಭ ಹುಲಿ ದಾಳಿ ಮಾಡಿದೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ತಿತಿಮತಿ ವಲಯದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಇದೇ ಪ್ರದೇಶದಲ್ಲಿ ಹುಲಿದಾಳಿಯಿಂದ ಸಾವನ್ನಪ್ಪಿದ್ದ ಕಾಡುಹಂದಿಯ ಕಳೇಬರ ಪತ್ತೆಯಾಗಿತ್ತು.

Read More

ಮಡಿಕೇರಿ ನ.10 : ರೈತರು ಪಂಪ್‍ಸೆಟ್‍ಗಳಿಗೆ ಸ್ವಂತ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬೇಕು ಮತ್ತು ಮೂಲಸೌಲಭ್ಯ ಕಲ್ಪಿಸಿಕೊಳ್ಳಬೇಕು ಎನ್ನುವ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣ ಹಿಂಪಡೆಯಬೇಕೆಂದು ಬಿಜೆಪಿ ರೈತ ಮೋರ್ಚಾ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ಇನ್ನು ಮುಂದೆ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಪಡೆಯಬೇಕಾದರೆ ಟ್ರಾನ್ಸ್‍ಫಾರ್ಮರ್, ಕಂಬ ಮತ್ತು ತಂತಿ ಸೇರಿದಂತೆ ಸಂಬಂಧಪಟ್ಟ ವಸ್ತುಗಳನ್ನು ರೈತರೇ ಸ್ವಂತ ಖರ್ಚಿನಲ್ಲಿ ಖರೀದಿಸಬೇಕೆಂದು ಸರ್ಕಾರ ಆದೇಶ ಮಾಡಿದೆ. ಇದೊಂದು ರೈತ ವಿರೋಧಿ ನಿಲುವಾಗಿದ್ದು, ತಕ್ಷಣ ಇದನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಹಿಂದೆ ಒಂದು ಪಂಪ್‍ಸೆಟ್‍ಗೆ ವಿದ್ಯುತ್ ಪಡೆಯಬೇಕಾದರೆ ರೈತರಿಗೆ 24 ಸಾವಿರ ರೂ. ಖರ್ಚಾಗುತ್ತಿತ್ತು, ಆದರೆ ಈಗ 2 ಲಕ್ಷ ರೂ. ಬೇಕಾಗುತ್ತದೆ. ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲ ಆವರಿಸಿದ್ದು, ಮುಂಗಾರು ಬೆಳೆ ಸಂಪೂರ್ಣ ನಾಶವಾಗಿದೆ. ಆದರೂ ಸರ್ಕಾರದಿಂದ ಬೆಳೆಹಾನಿ ಅಧ್ಯಯನಕ್ಕೆ ಯಾವುದೇ ತಂಡ ಹೋಗದಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬರಗಾಲದಿಂದ ಕಂಗೆಟ್ಟಿರುವ…

Read More

ಮಡಿಕೇರಿ ನ.10 : ಕೂರ್ಗ್ ಟೇಬಲ್ ಟೆನ್ನಿಸ್ ಯೂತ್ ಅಸೋಸಿಯೇಷನ್ ವತಿಯಿಂದ “ಮಲ್ಲೇಂಗಡ ಬೆಳ್ಯಪ್ಪ” ಅವರ ಸ್ಮರಣಾರ್ಥ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ “ಕೂರ್ಗ್ ಚಾಂಪಿಯನ್‍ಶಿಪ್ ಕಪ್-2023” ಪಂದ್ಯಾವಳಿಯು ನ.17, 18 ಹಾಗೂ 19 ರಂದು ನಡೆಯಲಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಮಲ್ಲೇಂಗಡ ರಚನ್ ಪೊನ್ನಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಯನ್ನು ನ.17 ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕಲ್ಲೇಂಗಡ ಬಬೀನ್ ಬೋಪಣ್ಣ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ ಚಕ್ರವರ್ತಿ, ಮಡಿಕೇರಿ ಜನನಿ ಆರೋಗ್ಯ ಕೇಂದ್ರದ ಡಾ.ಎನ್.ಎಸ್. ನವೀನ್ ಮತ್ತು ಡಾ.ಬಿ.ಕೆ.ರಾಜೇಶ್ವರಿ, ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ತಾತಪಾಂಡ ಎಂ.ಎಸ್. ಜ್ಯೋತಿ ಸೋಮಯ್ಯ ಪಾಲ್ಗೊಳ್ಳಲಿದ್ದಾರೆ ಎಂದರು. ನ.19 ರಂದು ಸಂಜೆ 6 ಗಂಟೆಗೆ ಪಂದ್ಯಾವಳಿಯ ಸಮಾರೋಪ ಹಾಗೂ ವಿಜೇತರಿಗೆ…

Read More

ಮಡಿಕೇರಿ ನ.10 : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನ.14 ರಿಂದ 20 ರವರೆಗೆ ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಸಹಯೋಗದೊಂದಿಗೆ ನಡೆಸಲಾಗುವುದು ಎಂದು ಸಹಕಾರ ಯೂನಿಯನ್‍ನ ಜಿಲ್ಲಾಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಹಕಾರಿ ಸಪ್ತಾಹದ ಸಂದರ್ಭ ಸಹಕಾರಿ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿರುವ ಮಡಿಕೇರಿ ತಾಲ್ಲೂಕಿನ ಕೊಳಕೇರಿ ಗ್ರಾಮದ ಬಿದ್ದಾಟಂಡ ಎ.ರಮೇಶ್‍ರಿಗೆ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿ, ಮಡಿಕೇರಿ ತಾಲ್ಲೂಕಿನ ಕೊಂಗಂಡ ಎ. ತಿಮ್ಮಯ್ಯ, ವಿರಾಜಪೇಟೆ ತಾಲ್ಲೂಕಿನ ಚಿರಿಯಪಂಡ ಕೆ.ಉತ್ತಪ್ಪ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಎಚ್.ಎಸ್.ಸುಬ್ಬಪ್ಪರಿಗೆ ‘ಶ್ರೇಷ್ಠ ಸಹಕಾರಿ ಪ್ರಶಸ್ತಿ’ ಮತ್ತು ಮಡಿಕೇರಿಯ ಮಣವಟ್ಟೀರ ಕಾವೇರಿಯಮ್ಮ ಪೂವಣ್ಣ ಅವರಿಗೆ ‘ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು ಎಂದರು. ಸಹಕಾರಿ ಸಪ್ತಾಹದ ಉದ್ಘಾಟನಾ ಸಮಾರಂಭ ಹೊದ್ದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ನ.14 ರಂದು ಹೊದ್ದೂರು…

Read More

ಮಡಿಕೇರಿ ನ.10 : ಕೊಡಗು ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕವಿ, ಚಿಂತಕ ಅರ್ಜುನ್ ಮೌರ್ಯ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ದಲಿತ ಸಾಹಿತ್ಯ ಪರಿಷತ್ತು, ಗದಗ ಈ ಆದೇಶ ಪತ್ರವನ್ನು ಹೊರಡಿಸಿದೆ. ಅರ್ಜುನ್ ಮೌರ್ಯ ಕೊಡಗಿನ ಕವಿ, ಬರಹಗಾರರಾಗಿದ್ದಾರೆ. ಅವನಿ, ಪಯಣ, ಕವರ, ದುಡಿ, ನಾನೂ ನನ್ನ ವ್ಯಾಖ್ಯಾನ, ಬೆಂದೊಡಲ ಕುಣಿತ, ಗುಡಿ, ತೆರೆದ ಅಂಚೆ ಕೃತಿಗಳು ಸೇರಿದಂತೆ ಒಂಭತ್ತು ಕೃತಿಗಳನ್ನು ರಚಿಸಿದ್ದಾರೆ. ಕಥಾಸಂಕಲನ, ಕವನ ಸಂಕಲನ, ಕಾದಂಬರಿ ಹಾಗೂ ಲೇಖನ ಬರಹದಲ್ಲಿ ತೊಡಗಿಸಿಕೊಂಡಿರುವ ಅರ್ಜುನ್ ಮೌರ್ಯ ಅವರಿಗೆ ಇತ್ತೀಚೆಗಷ್ಟೇ 2022ರ ” ಆಥರ್ ಆಫ್ ದ ಇಯರ್ ” ರಾಷ್ಟ್ರೀಯ ಪ್ರಶಸ್ತಿ ದೊರಕಿರುವುದು ವಿಶೇಷ. ಬರಹಲೋಕದಲ್ಲಿ ಹೆಚ್ಚಾಗಿ ದಲಿತ ಬಂಡಾಯ ಸಾಹಿತ್ಯದಲ್ಲಿ ಗುರುತಿಸಿಕೊಂಡಿರುವ ಅವರು ಹಲವು ಸಂಘಟನೆಗಳೊಂದಿಗೆ ಸಮಾಜಸೇವೆಯಲ್ಲೂ ತನ್ನನ್ನು ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಅವರು ಖಾಸಗಿ ಪದವಿ ಕಾಲೇಜೊಂದರಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Read More

ಮಡಿಕೇರಿ ನ.10 : ಪ್ರಸಕ್ತ(2023-24) ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ಸೋಮವಾರಪೇಟೆ, ಮಡಿಕೇರಿ ಮತ್ತು ವಿರಾಜಪೇಟೆ ತಾಲ್ಲೂಕು ಯುವ ಒಕ್ಕೂಟ, ಬೆಟ್ಟದಹಳ್ಳಿ ಸಿದ್ದಾರ್ಥನಗರ ಮಾನವತ ಯುವ ಸಂಘ ಇವರ ಸಹಯೋಗದೊಂದಿಗೆ ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವು ನ.20 ರಂದು ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಹಳ್ಳಿ ಶಾಂತಳ್ಳಿ ಕುಮಾರ ಲಿಂಗೇಶ್ವರ ಪ್ರೌಢಶಾಲೆ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯುವಜನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಕೋರಿದ್ದಾರೆ. ಹೆಚ್ಚಿನ ವಿವರಗಳಿಗೆ ಪಿ.ಪಿ.ಸುಕುಮಾರ್, ಅಧ್ಯಕ್ಷರು, ಜಿಲ್ಲಾ ಯುವ ಒಕ್ಕೂಟ, ಕೊಡಗು ಜಿಲ್ಲೆ 9481213920, 9591137275, ಚಂದ್ರಿಕಾ, ಅಧ್ಯಕ್ಷರು, ತಾಲ್ಲೂಕು ಯುವ ಒಕ್ಕೂಟ, ಸೋಮವಾರಪೇಟೆ ದೂ.ಸಂ.9480747935 ಮತ್ತು ಆದರ್ಶ್, ಅಧ್ಯಕ್ಷರು, ಮಾನವತ ಯುವಕ ಸಂಘ, ಬೆಟ್ಟದಳ್ಳಿ, ಶಾಂತಳ್ಳಿ ಮೊ.ಸಂ.9141079884 ನ್ನು ಸಂಪರ್ಕಿಸಬಹುದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಸ್ಪರ್ಧೆಗಳ ವಿವರ: ಜನಪದ…

Read More

ಮಡಿಕೇರಿ ನ.10 : 68 ನೇ ಕನ್ನಡ ರಾಜ್ಯೋತ್ಸವ ಮತ್ತು ‘ಕರ್ನಾಟಕ ಸುವರ್ಣ ಸಂಭ್ರಮ-50 ರ ಆಚರಣೆಯ ಪ್ರಯುಕ್ತ ನ.22 ರಂದು ಬೆಳಗ್ಗೆ 10 ಗಂಟೆಗೆ ಸೋಮವಾರಪೇಟೆಯ ಮಹಿಳಾ ಸಮಾಜದಲ್ಲಿ ಶಾಲಾ, ಕಾಲೇಜು, ಸಾರ್ವಜನಿಕರಿಗೆ, ಕನ್ನಡ ನಾಡು ನುಡಿ ಸಂಸ್ಕೃತಿ ಬಿಂಬಿಸುವ ಸ್ಪರ್ಧೆಗಳು ನಡೆಯಲಿದೆ. ಈ ಸ್ಪರ್ಧೆಗಳ ಬಹುಮಾನವನ್ನು ನ.30 ರಂದು ಮಧ್ಯಾಹ್ನ 2.30 ಗಂಟೆಗೆ ಸೋಮವಾರಪೇಟೆ ಮಹಿಳಾ ಸಮಾಜದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ನೀಡಲಾಗುವುದು. ರಸ ಪ್ರಶ್ನೆ ಸ್ಪರ್ಧೆ ಪ್ರೌಢಶಾಲೆ/ ಕಾಲೇಜು(ಪ್ರತಿ ಶಾಲಾ ಕಾಲೇಜಿನಿಂದ 3 ವಿದ್ಯಾರ್ಥಿಗಳಿಗೆ ಅವಕಾಶ) ಹೆಸರು ನೋಂದಾಯಿಸಲು ವಸತಿ ರವೀಂದ್ರ 8970075594. ಚಿತ್ರಕಲಾ ಸ್ಪರ್ಧೆ ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು(ಪ್ರತಿ ಶಾಲಾ ಕಾಲೇಜಿನಿಂದ 3 ವಿದ್ಯಾರ್ಥಿಗಳಿಗೆ ಅವಕಾಶ) ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುವುದು. ಹೆಸರು ನೋಂದಾಯಿಸಲು ಹರೀಶ್ 9448896487, ಸಿ.ಸಿ.ನಂದ 7760530274. ಛದ್ಮವೇಷ ಸ್ಪರ್ಧೆ: ಯುಕೆಜಿಯಿಂದ 3 ನೇ ತರಗತಿ, 4 ನೇ ತರಗತಿಯಿಂದ 7ನೇ ತರಗತಿ, 8ನೇ ತರಗತಿಯಿಂದ 10ನೇ ತರಗತಿಯವರೆಗೆ (ಕನ್ನಡ ನಾಡು ನುಡಿ…

Read More