ಲೇಖಕ: admin

ಮಡಿಕೇರಿ ನ.10  : ರಾಜ್ಯ ಸಕಾ೯ರ ಜನತೆಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಗುಣಮಟ್ಟ ಹೆಚ್ಚಿಸುವ ಕಾಯ೯ಕ್ಕೆ ಆದ್ಯತೆ ನೀಡಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಹೇಳಿದ್ದಾರೆ. ನಗರದ ಶ್ರೀ ಲಕ್ಷ್ಮಿ ನರಸಿಂಹ ಕಲ್ಯಾಣ ಮಂಟಪದ ಶತಮಾನ ಭವನದಲ್ಲಿ ನೀಮಾ ಸಂಸ್ಥೆಯಿಂದ ಆಯೋಜಿತ ರಾಷ್ಟ್ರೀಯ 8ನೇ ಆಯುವೇ೯ದ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯ ಸಂರಕ್ಷಣೆಯಲ್ಲಿ ಆಲೋಪತಿ ಮತ್ತು ಆಯುವೇ೯ದ ಚಿಕಿತ್ಸೆಗಳು ಬಹುಮುಖ್ಯ ಪಾತ್ರ ವಹಿಸಿದೆ. ಪುರಾತನ ಕಾಲದ ಐತಿಹ್ಯ ಹೊಂದಿರುವ ಆಯುವೇ೯ದ ಮತ್ತು ಅಲೋಪತಿ ಔಷಧೀಯ ಪದ್ದತಿಗಳ ಬಗ್ಗೆ ಆಗಿಂದಾಗ್ಗೆ ಚಚೆ೯ಗಳು ನಡೆಯುತ್ತಲೇ ಇದೆ. ಹೀಗಿದ್ದರೂ ಆಯುವೇ೯ದ ಮತ್ತು ಅಲೋಪತಿ ಎರಡೂ ಪದ್ದತಿಗಳನ್ನು ಅಗತ್ಯವಿದ್ದಷ್ಟು ಬಳಸಿಕೊಂಡು ಪ್ರತೀಯೋವ೯ರು ತಮ್ಮ ಆರೋಗ್ಯ ಸಂರಕ್ಷಣೆ ನಿಟ್ಟಿನಲ್ಲಿ ಗಮನ ಹರಿಸಲು ಸಾಧ್ಯ ಎಂದು ಹೇಳಿದರು. ಇಂದಿನ ದಿನಗಳಲ್ಲಿ ಬಹುತೇಕ ಮಂದಿ ಒತ್ತಡದ ಜೀವನ ಕ್ರಮದಿಂದಾಗಿ ಸಾಕಷ್ಟು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಎಲ್ಲಕ್ಕಿಂತ ಮೊದಲು ಮಾನಸಿಕವಾಗಿ ಪ್ರತೀಯೋವ೯ರು ಸಂತೋಷದಿಂದ…

Read More

ಮಡಿಕೇರಿ ನ.10 : ಕುಶಾಲನಗರದ ಬಿ.ಎಂ ರಸ್ತೆಯ ನಿವಾಸಿ ಹೃದಯ ರೋಗ ತಜ್ಞರಾದ ಡಾ.ಕಿರಣ್ ಕಾಳಪ್ಪ ಅವರು ಲೆಫ್ಟಿನೆಂಟ್ ಕರ್ನಲ್ ಹುದ್ದೆಯಿಂದ ಕರ್ನಲ್ ಆಗಿ ಮುಂಬಡ್ತಿ ಹೊಂದಿದ್ದಾರೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಕಮಾಂಡೋ ಆಸ್ಪತ್ರೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿದ ಡಾ.ಕಿರಣ್ ಇದೀಗ ಮುಂಬಡ್ತಿ ಹೊಂದಿ ಕೊಲ್ಕತ್ತಾದ ಕಮಾಂಡೋ ಆಸ್ಪತ್ರೆಯಲ್ಲಿ ಹೃದಯ ರೋಗ ತಜ್ಞರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಪತ್ನಿ ಡಾ.ಕಾವ್ಯಶ್ರೀ ದಂತರೋಹ ತಜ್ಞರಾಗಿದ್ದಾರೆ. ಡಾ.ಕಿರಣ್ ಕಾಳಪ್ಪ ಕುಶಾಲನಗರ ಚೌಡ್ಲು ಕಾಳಪ್ಪ ಹಾಗೂ ಕಾವೇರಿ ಅವರ ಪುತ್ರ.

Read More

ಮಡಿಕೇರಿ ನ.10 : ಕಕ್ಕಬ್ಬೆ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿದ್ದು, ತಕ್ಷಣ ಆಡಳಿತ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕಕ್ಕಬ್ಬೆ ಶ್ರೀಇಗ್ಗುತ್ತಪ್ಪ ದೇವಾಲಯದ ರಸ್ತೆ ಸಂಪೂರ್ಣವಾಗಿ ಹೊಂಡ, ಗುಂಡಿಗಳಾಗಿದ್ದು, ಮಳೆಯ ಸಂದರ್ಭ ಕೆರೆಯಂತ್ತಾಗುತ್ತದೆ. ವಾಹನಗಳು, ವಿದ್ಯಾರ್ಥಿಗಳು ಹಾಗೂ ಪಾದಾಚಾರಿಗಳ ಸಂಚಾರ ಅಸಾಧ್ಯವಾಗಿದೆ. ಆದ್ದರಿಂದ ರಸ್ತೆ ಡಾಂಬರೀಕರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು, ಶುಚಿತ್ವಕ್ಕೆ ಆದ್ಯತೆ ನೀಡಬೇಕು ಮತ್ತು ಬೀದಿದೀಪಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿರುವ ಗ್ರಾಮಸ್ಥರು ಸಕಾಲದಲ್ಲಿ ಮೂಲಭೂತ ಸೌಲಭ್ಯ ನೀಡದಿದ್ದಲ್ಲಿ ಗ್ರಾ.ಪಂ ಗೆ ಕಂದಾಯ ಪಾವತಿ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.

Read More

ಮಡಿಕೇರಿ ನ.10 : ನಾಪೋಕ್ಲು ಪಂಚಾಯತಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸಾಕ್ಷಾರತ ಕಾರ್ಯಕ್ರಮದ ಸಾಮಾಜಿಕ ಚೇತನ ಕೇಂದ್ರವನ್ನು ಉದ್ಘಾಟಿಸಲಾಯಿತು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್, ಬಿ.ಆರ್.ಪಿ ಮಂಜುಳಾ, ಸಿ ಆರ್ ಪಿ ಕಲ್ಪನಾ ಮತ್ತು ಇನ್ನಿತರರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ನ.10 : 3ನೇ ಹಾಕಿ ಇಂಡಿಯಾ ಹಿರಿಯ ಪುರುಷರ (senior national) ಹಾಕಿ ಚಾಂಪಿಯನ್ ಶಿಪ್ ನ ತೀರ್ಪುಗಾರರಾಗಿ ಹರ್ಷಿತ್ ಅಯ್ಯಪ್ಪ ಆಯ್ಕೆಯಾಗಿದ್ದಾರೆ. ಪಂದ್ಯಾವಳಿಯು ನ.16 ರಿಂದ 28ರ ವರೆಗೆ ಚೆನ್ನೈನಲ್ಲಿ ನಡೆಯಲಿದೆ. ಹರ್ಷಿತ್ ಅಯ್ಯಪ್ಪ ಮಡಿಕೇರಿ ತಾಲ್ಲೂಕಿನ ಬಲ್ಲಮಾವಟ್ಟಿ ಗ್ರಾಮದ ಅಪ್ಪಚೆಟ್ಟೋಳಂಡ ಬೋಪಯ್ಯ ಮತ್ತು ಭೋಜಮ್ಮ ದಂಪತಿಯ ಪುತ್ರ. ವರದಿ : ದುಗ್ಗಳ ಸದಾನಂದ

Read More

ಸುಂಟಿಕೊಪ್ಪ ನ.10 : ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲ್ಲೂಕು ಸಮಿತಿಗೆ ಟಿ.ಕೆ.ಸಾಯಿಕುಮಾರ್ ಅವರು ತಮ್ಮ ತಂದೆ ಟಿ.ಕೆ.ಕುಮಾರನ್ ಹಾಗೂ ತಾಯಿ ಕೆ.ಎನ್.ಭಾರತಿ ಅವರ ನೆನಪಿಗಾಗಿ ಘೋಷಿಸಿದ್ದ 25ಸಾವಿರ ರೂ.ಗಳ ದತ್ತಿನಿಧಿಯನ್ನು ವಿತರಿಸಿದರು. ಸುಂಟಿಕೊಪ್ಪದಲ್ಲಿ ನಡೆದ ಈ ಸಾಲಿನ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಟಿ.ಕೆ.ಸಾಯಿಕುಮಾರ್ ಅವರು ಘೋಷಿಸಿದ್ದ ದತ್ತಿನಿಧಿಯನ್ನು ಅತ್ತೂರುನಲ್ಲೂರು (ಕಂಬಿಬಾಣೆ)ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಬಿ.ಸಿ.ದಿನೇಶ್, ಗೌರವಾಧ್ಯಕ್ಷ ಕೆ.ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಬಿ.ವಿನ್ಸೆಂಟ್, ನಿರ್ದೇಶಕರಾದ ಕೆ.ಹೆಚ್.ಶಿವಣ್ಣ, ಸಿಲ್ವೆಸ್ಟರ್ ಡಿಸೋಜಾ, ಅಲ್ಫ್ರೆಡ್ ಡಿಸೋಜಾ ಅವರುಗಳಿಗೆ ಚೆಕ್ ಹಸ್ತಾಂತರಿಸಿದರು.

Read More

ಸುಂಟಿಕೊಪ್ಪ ನ.10 : ಅಗ್ನಿ ಬೆಳಕಿನ ಸಂಕೇತವಾಗಿದ್ದು, ಅಗ್ನಿಯ ಅಂಶವಾಗಿರುವ ದೀಪಾರಾಧನೆಯಿಂದ ಮನೆ ಮನಗಳಲ್ಲಿ ಜ್ಞಾನ ಜ್ಯೋತಿಯನ್ನು ಹಚ್ಚಿ ಮಕ್ಕಳಲ್ಲಿ ನಮ್ಮ ಧರ್ಮ ಪರಂಪರೆ ಆಚಾರ ವಿಚಾರಗಳ ಅರಿವು ಮೂಡಿಸು ಕೆಲಸವಾಗಲೆಂದು ಸಿದ್ಧಲಿಂಗಪುರದ ಅರಶಿನಗುಪ್ಪೆಯ ಶ್ರೀ ಮಂಜುನಾಥ ಕ್ಷೇತ್ರದ ಮುಖ್ಯಸ್ಥರು ಮತ್ತು ಅಖಿಲಭಾರತ ಸಂತಸಮಿತಿಯ ಕೊಡಗು ಜಿಲ್ಲಾಧ್ಯಕ್ಷ ಜಿ.ರಾಜೇಶ್‍ನಾಥ ಕರೆ ನೀಡಿದರು. ಸುಂಟಿಕೊಪ್ಪದ ಶ್ರೀ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮಡಿಕೇರಿ ತಾಲೂಕಿನ ಸುಂಟಿಕೊಪ್ಪ ವಲಯ ಮಟ್ಟದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಭಾಕಾರ್ಯಕ್ರಮದಲ್ಲಿ ಪಾಲ್ಗೊಂಡು ಧಾರ್ಮಿಕ ಉಪನ್ಯಾಸ ನೀಡಿದರು. ಕೋವಿಡ್ ಬಂದ ಸಂದರ್ಭದಲ್ಲಿ ತುಳಸಿ ಗಿಡದ ಮಹತ್ವ ಮನೆಯ ಮುಂದೆ ಸಗಣಿ ಸಾರಿಸಿ ಶುದ್ಧತೆ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವ ಅವಶ್ಯಕತೆಯ ಪ್ರಾಮುಖ್ಯತೆಯನ್ನು ಕಂಡುಕೊಂಡೆವು. ಆದರೆ ನಮ್ಮ ಹಿರಿಯರು ಪದ್ಧತಿ ಪರಂಪರೆಗಳ ಆಚರಣೆಯ ಹಿನ್ನಲೆಯಲ್ಲಿ ಬಹಳ ಹಿಂದೆಯೇ ಇದನ್ನು ಕಂಡುಕೊಂಡಿದ್ದರು. ಕೃಷಿ ನಮ್ಮ ಬೆನ್ನಲುಬು ಆಗಿದ್ದು ಮನೆಯಂಗಳದಲ್ಲಿ ತರಕಾರಿ ಹೂವಿನ ಗಿಡದೊಂದಿಗೆ ಸಾವಯವ…

Read More

ಮಡಿಕೇರಿ ನ.10 : ಕುಶಾಲನಗರದ ಕಾಫಿ ಉದ್ಯಮಿ ನರೇಂದ್ರ ಹೆಬ್ಬಾರ್ (57) ಅವರು ನಿಧನ ಹೊಂದಿದ್ದಾರೆ. ಕಾಫಿ ಸಮ್ಮೇಳನದಲ್ಲಿ  ಪಾಲ್ಗೊಳ್ಳಲು ಐದು ದಿನಗಳ ಹಿಂದೆ ದೆಹಲಿಗೆ ತೆರಳಿದ್ದ ಅವರು ಅಸ್ವಸ್ಥಗೊಂಡಿದ್ದರು ಎಂದು ತಿಳಿದು ಬಂದಿದೆ. ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನ ಹೊಂದಿದರು. ಸಿದ್ದಾಪುರದ ನಿವಾಸಿಯಾಗಿರುವ ನರೇಂದ್ರ ಅವರು ಕುಶಾಲನಗರ ಸಮೀಪ ಕೊಪ್ಪದಲ್ಲಿ ಕಾಫಿ ಕೆಫೆಯನ್ನು ಹೊಂದಿದ್ದರು. ಜಿಲ್ಲೆಯ ಕಾಫಿ ಉದ್ಯಮಿಗಳು ನರೇಂದ್ರ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Read More

ಸುಂಟಿಕೊಪ್ಪ ನ.10 : ಕಂಬಿಬಾಣೆ ಸರಕಾರಿ ಪ್ರಾಥಮಿಕ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸಲು ತಾವು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್‍ನ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ಮತ್ತು ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಹೇಳಿದರು. ಕಂಬಿಬಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡಿ ಮಾತನಾಡಿದ ಅವರು, ತಾವು ಸೇರಿದಂತೆ ಹೆಚ್ಚಿನವರು ಕನ್ನಡ ಮಾಧ್ಯಮ ಶಾಲೆಯಲ್ಲಿ ಓದಿದವರು. ಕನ್ನಡ ಮಾಧ್ಯಮದಲ್ಲಿ ಓದಿದವರು ಹಿಂದುಳಿಯುತ್ತಾರೆ. ಇಂಗ್ಲೀಷ್ ಮಾಧ್ಯಮದಲ್ಲಿ ಓದಿದವರು ಬುದ್ಧಿವಂತರು ಎಂಬ ಭ್ರಮೆ ನಮ್ಮಲ್ಲಿದೆ ಅದನ್ನು ಹೊಗಲಾಡಿಸಬೇಕು ಎಂದು ಕರೆ ನೀಡಿದ ಅವರು ಈಗಾಗಲೇ ತಮ್ಮ ಸ್ನೇಹಿತರು ಆಗಿರುವ ಮಧುಬಂಗಾರಪ್ಪ ಶಿಕ್ಷಣ ಸಚಿವರಾಗಿದ್ದು, ವಿಷಯ ಪ್ರಸ್ತಾಪಮಾಡಿ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ಕೂಡ ಅವರು ನೀಡಿದ್ದಾರೆ ಎಂದು ತಿಳಿಸಿದರು. ಮ್ಯಾಗಡೂರ್ ಶ್ರೀ ವಿಶ್ವನಾಥ ದೇವಸ್ಥಾನ ಆಡಳಿತ ಮಂಡಳಿಯವರು ಈ ಶಾಲೆಯನ್ನು ದತ್ತು ತೆಗೆದುಕೊಳ್ಳಲು ಮುಂದಾಗಿದ್ದು, ಈ ಬಗ್ಗೆ ಆಡಳಿತ ಮಂಡಳಿಯ ಸಭೆಯಲ್ಲಿ ಚರ್ಚಿಸಿ ಸರಕಾರದೊಂದಿಗೆ ವ್ಯವಹಾರಿಸಲಾಗುವುದು…

Read More

ಮಡಿಕೇರಿ ನ.10 : ಟಿಪ್ಪು ಜಯಂತಿಯ ಸಂದರ್ಭ ಮೃತಪಟ್ಟ ವಿಶ್ವ ಹಿಂದೂ ಪರಿಷತ್ ನ ಪ್ರಮುಖರಾದ ದೇವಪ್ಪಂಡ ಕುಟ್ಟಪ್ಪ ಅವರ ಸ್ಮರಣಾರ್ಥ ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ವಿಶೇಷ ಪೂಜೆ ಸಲ್ಲಿಸಿದರು. ಮಡಿಕೇರಿ ನಗರದ ಶ್ರೀಓಂಕಾರೇಶ್ವರ ದೇವಾಲಯ, ಕುಟ್ಟಪ್ಪ ಅವರ ಹುಟ್ಟೂರಾದ ಮಾದಾಪುರದ ಶ್ರೀಗಣಪತಿ ದೇವಾಲಯ, ಕುಶಾಲನಗರದ ಶ್ರೀಗಣಪತಿ ದೇವಾಲಯ, ವಿರಾಜಪೇಟೆಯ ಬಾಲಾಂಜನೇಯ ದೇವಾಲಯ ಸೇರಿದಂತೆ ವಿವಿಧೆಡೆ ಪೂಜೆ ಸಲ್ಲಿಸಿ ಕುಟ್ಟಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಲಾಯಿತು. ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Read More