ಮಡಿಕೇರಿ ಡಿ.6 : ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶನದಂತೆ ಮಡಿಕೇರಿ ನಗರಸಭೆಗೆ ಸೀನಿಯರ್ ಪ್ರೋಗ್ರಾಮರ್/ ಮಾಹಿತಿ ತಂತ್ರಜ್ಞಾನ ಕನ್ಸಲ್ಟೆಂಟ್ನ್ನು ಹೊರಗುತ್ತಿಗೆ/ ಏಜೆನ್ಸಿ ಮೂಲಕ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಉಳ್ಳವರು ಸ್ವಯಂ ಅರ್ಜಿ ಮತ್ತು ದೃಢೀಕೃತ ದಾಖಲೆಗಳೊಂದಿಗೆ ಡಿ.20 ರೊಳಗೆ ಅರ್ಜಿ ಸಲ್ಲಿಸಬೇಕು. ಇದು ಪೂರ್ಣವಾಗಿ ತಾತ್ಕಾಲಿಕ ಹೊರಗುತ್ತಿಗೆ ಹುದ್ದೆಯಾಗಿರುತ್ತದೆ. ಸೀನಿಯರ್ ಪ್ರೋಗ್ರಾಮರ್/ ಮಾಹಿತಿ ತಂತ್ರಜ್ಞಾನ ಕನ್ಸಲ್ಟೆಂಟ್ ಪ್ರಥಮ ಆದ್ಯತೆಯನ್ನು (3) ಕ್ಕೆ ದ್ವಿತೀಯ ಆದ್ಯತೆಯನ್ನು (2) ಕ್ಕೆ ಹಾಗೂ ತೃತೀಯ ಆದ್ಯತೆಯನ್ನು (1) ಕ್ಕೆ ನೀಡಲಾಗುವುದು. ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಬಿ.ಎಸ್ಸಿ(ಕಂಪ್ಯೂಟರ್ ಸೈನ್ಸ್)/ ಬಿಸಿಎ, ಎಂಎಸ್ಸಿ(ಕಂಪ್ಯೂಟರ್ ಸೈನ್ಸ್) ಅಥವಾ ಬಿಇ(ಕಂಪ್ಯೂಟರ್ ಸೈನ್/ಐಟಿ/ಎಂಸಿಎ) ವಿದ್ಯಾರ್ಹತೆ ಹೊಂದಿರಬೇಕು. ನಿಗದಿತ ಮಾಸಿಕ ಕನಿಷ್ಠ ವೇತನ ರೂ.20584 ಆಗಿರುತ್ತದೆ. ಏಜೆನ್ಸಿ ಮೂಲಕ ಅರ್ಜಿ ಸಲ್ಲಿಸುವವರು ಮಾತ್ರ ಸೇವಾ ಶುಲ್ಕವನ್ನು ನಮೂದಿಸುವುದು. ಈ ನಿಗಧಿತ ವೇತನವು ಪ್ರಥಮ ವರ್ಷಕ್ಕೆ ನಿಗಧಿಯಾಗಿದ್ದು, ಮುಂದಿನ ವರ್ಷಗಳಿಗೆ ಸರ್ಕಾರವು ನಿಗಧಿ ಪಡಿಸಿರುವಂತೆ/ ಪಡಿಸುವಂತೆ ಸೇವೆಯನ್ನು ಆಧರಿಸಿ ಪರಿಷ್ಕರಿಸಲಾಗುವುದು.…
ಲೇಖಕ: admin
ಮಡಿಕೇರಿ ಡಿ.6 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿ ವತಿಯಿಂದ ವಿಶ್ವರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಪರಿನಿರ್ವಾಣ ದಿನದ ಅಂಗವಾಗಿ ನೇತ್ರದಾನ, ದೇಹದಾನ ನೋಂದಾವಣಿ ಮತ್ತು ರಕ್ತದಾನ ಕಾರ್ಯಕ್ರಮ ನಡೆಯಿತು. ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರವನ್ನು ಗಣ್ಯರು ಉದ್ಘಾಟಿಸಿದರು. ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಹೆಚ್.ವಿ.ದೇವದಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆಯ ಸ್ಥಾನೀಯ ವೈದ್ಯಾಧಿಕಾರಿ ಡಾ.ಸತೀಶ್, ರಕ್ತನಿಧಿ ವಿಭಾಗದ ಮುಖ್ಯಸ್ಥ ಡಾ.ಕೆ.ಪಿ.ಕರುಂಬಯ್ಯ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ನವೀನ್ ಅಂಬೆಕಲ್ಲು, ದಲಿತಾ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಹಾಜರಿದ್ದರು. ಕಾರ್ಯಕ್ರಮದಲ್ಲಿ 12 ಮಂದಿ ನೇತ್ರದಾನ, 3 ಮಂದಿ ದೇಹದಾನಕ್ಕೆ ನೋಂದಾಯಿಸಿಕೊಂಡರು.
ಊಟದ ನಂತರ ಮಜ್ಜಿಗೆಯನ್ನು, ರಾತ್ರಿಯಲ್ಲಿ ಹಾಲನ್ನು ಮತ್ತು ಹಗಲಲ್ಲಿ ನೀರನ್ನು ಕುಡಿಯುವುದರಿಂದ ಮನುಷ್ಯನಿಗೆ ಯಾವ ಕಾಯಿಲೆಯೂ ಬರುವುದಿಲ್ಲ. ಇಂಥ ಮಹತ್ವವನ್ನು ಹೊಂದಿರುವ ಹಾಲನ್ನು ಸೇವಿಸುವುದರಿಂದ ಅನೇಕ ಸಮಸ್ಯೆಗಳು ಪರಿಹಾರವಾಗುತ್ತದೆ. “ಗೋಮಾತೆ “ಎಂದು ಪೂಜಿಸುವ ಹಸುವಿನ ಕ್ಷೀರ ಶ್ರೇಷ್ಠವಾದದ್ದು. ಹಸುಳೆಯಾಗಿದ್ದಾಗ ತಾಯಿಯ ಎದೆಯ ಹಾಲನ್ನು ಕುಡಿದ ಮನುಷ್ಯ ದೊಡ್ಡವನಾದ ಮೇಲೆ ಕುಡಿಯುವುದು ಗೋಮಾತೆಯ ಹಾಲು. ಇಂತಹ ಹಾಲಿನಲ್ಲಿ ಬಹಳಷ್ಟು ಔಷಧೀಯ ತತ್ವಗಳಿವೆ. ದಿನಾಲು ಹಾಲು ಕುಡಿಯುವುದರಿಂದ ಬೆಳೆಯುವ ಮಕ್ಕಳ ಮೂಳೆಯ ಶಕ್ತಿ ವೃದ್ಧಿಸುತ್ತದೆ ಮತ್ತು ಮೆದುಳಿನ ಸಂಪೂರ್ಣ ಬೆಳವಣಿಗೆಗೆ ಹಾಲು ಉತ್ತಮವಾದ ಆಹಾರವಾಗಿದೆ. ಬಹಳಷ್ಟು ಪೋಷಕಾಂಶಗಳನ್ನು ಹೊಂದಿರುವ ಹಾಲು ಒಂದು ಸಂಪೂರ್ಣ ಆಹಾರವಾಗಿದೆ. ಹಾಲು ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ಹಲವಾರು ವಿಟಮಿನ್ ಗಳನ್ನು ಹೊಂದಿದೆ. ಕೇವಲ ಹಸುಗಳು ಮಾತ್ರವಲ್ಲದೆ ಇನ್ನೂ ಬಹಳಷ್ಟು ಸಸ್ತನಿಗಳು ಹಾಲನ್ನು ಉತ್ಪತ್ತಿ ಮಾಡುತ್ತವೆ. ಆದರೆ ಅವುಗಳಲ್ಲಿ ಅನಾದಿಕಾಲದಿಂದಲೂ ನಾವು ಸೇವಿಸುತ್ತಾ ಬಂದಿರುವಂತಹ ಹಸುವಿನ ಹಾಲು ಪ್ರಾಮುಖ್ಯತೆಯನ್ನು ಪಡೆದಿದೆ. ಹಿಂದೂ ಧರ್ಮದಲ್ಲಿ ಹಸುವಿನ ಹಾಲನ್ನು ಕೇವಲ ಆಹಾರವನ್ನಾಗಿ ನೋಡದೆ ಅನೇಕ…
ಸೋಮವಾರಪೇಟೆ ಡಿ.6 : ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆಯಿಂದ ಬಡರೋಗಿಗಳು ಪರದಾಡುವಂತಾಗಿದ್ದು, ತಕ್ಷಣ ಶಾಸಕರು ವೈದ್ಯರ ನೇಮಕಕ್ಕೆ ಕ್ರಮಕೈಗೊಳ್ಳಬೇಕೆಂದು ಸೋಮವಾರಪೇಟೆ ನಗರ ಬಿಜೆಪಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ನಗರಾಧ್ಯಕ್ಷ ಎಸ್.ಆರ್.ಸೋಮೇಶ್, ಹಿಂದಿನ ಅವಧಿಯಲ್ಲಿ ಅಪ್ಪಚ್ಚು ರಂಜನ್ ಶಾಸಕರಾಗಿರುವ ಸಮಯದಲ್ಲಿ 10 ರಿಂದ 12 ವೈದ್ಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದವರು ವರ್ಗಾವಣೆಯಾಗಿ ಹೋಗಿದ್ದಾರೆ. ರೋಗಿಗಳು ಆಸ್ಪತ್ರೆಯಲ್ಲಿ ಸಾಲುಗಟ್ಟಿ ನಿಲ್ಲುತ್ತಿದ್ದಾರೆ ಎಂದು ದೂರಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾರ್ವಜನಿಕರಿಗೆ ಸಂಕಷ್ಟಗಳು ಹೆಚ್ಚಾಗಿವೆ. ಸೋಮವಾರಪೇಟೆ ಕೆ.ಎಸ್.ಆರ್.ಟಿ. ಬಸ್ ನಿಲ್ದಾಣಕ್ಕೆ ವಿವಿಧ ಮಾರ್ಗದ 17 ಬಸ್ಗಳು ಬರುತ್ತಿಲ್ಲ. ಇದರಿಂದ ಮೈಸೂರು ಮಾರ್ಗದಲ್ಲಿ ತೆರಳುವ ವಿದ್ಯಾರ್ಥಿಗಳಿಗೆ ಹಾಗೂ ನೌಕರರಿಗೆ ಸಮಸೈಯಾಗಿದೆ. ಎಲ್ಲವೂ ಉಚಿತವಾದ ಮೇಲೆ ಖಚಿತವಾಗಿ ಬಸ್ ಬರುತ್ತಿಲ್ಲ. ತಕ್ಷಣವೆ ಎಂದಿನಂತೆ ಬಸ್ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಬಿಜೆಪಿ ಕಾನೂನು ಪ್ರಕೋಷ್ಟದ ಸಂಚಾಲಕ ಎಂ.ಬಿ.ಅಭಿಮನ್ಯು ಕುಮಾರ್ ಮಾತನಾಡಿ, ಕಳೆದ 6 ತಿಂಗಳಿಂದ ಯಾವುದೇ ನೂತನ ಕಾಮಗಾರಿಗಳು ನಡೆಯುತ್ತಿಲ್ಲ.…
ಬೆಂಗಳೂರು ಡಿ.6 : ಎಲ್ಲರೂ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಡಾ: ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ ಎಂದರು. ಅಂಬೇಡ್ಕರ್ ಅವರು ಇನ್ನೂ ಬದುಕಿರಬೇಕಿತ್ತು. ಅವರು ಇದ್ದಿದ್ದರೆ ಸಮಾನತೆಯ ಪರವಾಗಿ ಇನ್ನಷ್ಟು ಹೋರಾಟಗಳಾಗುತ್ತಿತ್ತು. ಸಮಾಜ ನಿರ್ಮಾಣ ಮಾಡಲು ಸಾಧ್ಯ ವಾಗುತ್ತಿತ್ತು. ಸಂವಿಧಾನದ ಕರ್ತೃ ಅಂಬೇಡ್ಕರ್ ಅವರು ದೇಶದ ಸಂವಿಧಾನವನ್ನು ಬಹಳ ಶ್ರಮ ವಹಿಸಿ ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತದ ವ್ಯವಸ್ಥೆಗೆ ಎಂಥ ಸಂವಿಧಾನ ಬೇಕು ಎಂದು ಚಿಂತಿಸಿ ಸಂವಿಧಾನ ನೀಡಿದ್ದಾರೆ. ಸಾಮಾಜಿಕ ನ್ಯಾಯದ ಹಕ್ಕು, ಅಸಮಾನತೆಯನ್ನು ತೊಡೆದುಹಾಕುವ ಅಂಶ ಜಗತ್ತಿನ ಯಾವ ಸಂವಿಧಾನದಲ್ಲಿಯೂ ನೋಡಲು ಸಾಧ್ಯವಿಲ್ಲ. ಎಲ್ಲಾ ಜಾತಿ, ವರ್ಗ ಮತ್ತು ಬಡವರಿಗೆ ನ್ಯಾಯ ದೊರೆತಿದ್ದರೆ, ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಿದ್ದರೆ ಅದಕ್ಕೆ…
ಮಡಿಕೇರಿ ಡಿ.6 : ದಲಿತ ಸಂಘಟನೆಗಳ ವತಿಯಿಂದ ಕೊಡ್ಲಿಪೇಟೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ಕೊಡ್ಲಿಪೇಟೆಯ ಬಸ್ ನಿಲ್ದಾಣದಲ್ಲಿ ಡಾ.ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣದ ಸ್ಥಳದಲ್ಲಿ ದಲಿತ ಸಂಘಟನೆಗಳ ಪದಾಧಿಕಾರಿಗಳು, ದಲಿತ ಬಂಧುಗಳು ಹಾಗೂ ಸಾರ್ವಜನಿಕರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ದಲಿತ ಸಂಘಟನೆಯ ಮುಖಂಡ ಜೆ.ಎಲ್.ಜನಾರ್ಧನ ಮಾತನಾಡಿ ಡಾ.ಅಂಬೇಡ್ಕರ್ ಅವರ ಆದರ್ಶ ಇಡೀ ವಿಶ್ವಕ್ಕೇ ಮಾದರಿಯಾಗಿದೆ, ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದ ಅವರು ಸಂವಿಧಾನ ರಚನೆಯ ಮೂಲಕ ದೇಶಕ್ಕೆ ಸಮಾನತೆಯ ಪಾಠ ಹೇಳಿದರು ಎಂದರು. ಸಂಘಟನೆಯ ಪ್ರಮುಖರಾದ ಡಿ.ಸಿ.ಸೋಮಣ್ಣ, ವೀರಭದ್ರ, ಕೇಶವ, ಡಿ.ಬಿ.ವಿಜಯ, ಕೆ.ಎನ್.ಇಂದ್ರೇಶ್, ದಯಾನಂದ, ವಸಂತ್, ಸತ್ಯಪ್ರಕಾಶ್, ದೇವರಾಜ್, ನಟೇಶ್, ಹೇಮಂತ್, ಗೋವಿಂದ, ಡಿ.ಎಸ್.ವಸಂತ, ಗೌತಮ್, ವಿಜಯ್, ಮಂಜುನಾಥ್ ಸೇರಿದಂತೆ ಅನೇಕರು ಈ ಸಂದರ್ಭ ಹಾಜರಿದ್ದು ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮಿಸಿದರು.
ಮಡಿಕೇರಿ ಡಿ.6 : ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ಘೋಷಿಸಿದಂತೆ ಸಮಯಕ್ಕೆ ಸರಿಯಾಗಿ ಅಧಿವೇಶನಕ್ಕೆ ಹಾಜರಾದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ, ಸ್ಪೀಕರ್ ಯು.ಟಿ.ಖಾದರ್ ರಾಷ್ಟ್ರ ಮತ್ತು ರಾಜ್ಯ ಲಾಂಛನವಿರುವ ವಿಶಿಷ್ಟವಾಗಿ ತಯಾರಿಸಿದ ಕಪ್ ಮತ್ತು ಸಾಸರ್ ನ್ನು ಬಹುಮಾನವಾಗಿ ವಿತರಿಸಿದರು.
ಮಡಿಕೇರಿ ಡಿ.6 : ಉಡೋತ್ ಮೊಟ್ಟೆಯ ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಡಿ.7 ಮತ್ತು 8 ರಂದು ಸ್ವಾಮಿ ಕೊರಗಜ್ಜ ದೈವದ ಹಾಗೂ ಪರಿವಾರ ಸತ್ಯ ದೈವಗಳ ನೇಮೋತ್ಸವ ಜರುಗಲಿದೆ. ಡಿ.7 ರಂದು ಬೆಳಿಗ್ಗೆ 7.30 ಗಂಟೆಗೆ ಗಣಪತಿ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದ್ದು, ಸಂಜೆ 5 ಗಂಟೆಗೆ ದೈವಗಳ ಭಂಡಾರ ಇಳಿಸುವುದು, 6.30 ಗಂಟೆಯಿಂದ ಡಿ.8ರ ಸಂಜೆಯ ವರೆಗೆ ಶ್ರೀ ಮಂತ್ರವಾದಿ ಗುಳಿಗ, ಶ್ರೀ ಕಲ್ಲುರ್ಟಿ ದೈವ, ಶ್ರೀ ಧರ್ಮ ದೈವ, ಪಂಜುರ್ಲಿ ದೈವ ಹಾಗೂ ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮವು ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೈವಸ್ಥಾನದ ಪ್ರಮುಖರು ಮನವಿ ಮಾಡಿದ್ದಾರೆ.
ಪುತ್ತೂರು ಡಿ.6 : ಪೋಷಕರು ತಮ್ಮ ಮಕ್ಕಳ ದೈನಂದಿನ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು ಮತ್ತು ಅವರ ಶೈಕ್ಷಣಿಕ ಕಾರ್ಯಕ್ಷಮತೆಯ ಮೇಲ್ವಿಚಾರಣೆಯನ್ನು ನಿರಂತರವಾಗಿ ಮಾಡುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಮತ್ತು ಪೇರೆಂಟ್ ರಿಲೇಶನ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀರಾಮ ಸಭಾಭವನದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಹೆತ್ತವರ ಮತು ಪೋಷಕರ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದರು. ಕಾಲೇಜಿನ ಚಟುವಟಿಕೆಗಳ ಬಗ್ಗೆ ಉಪನ್ಯಾಸಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳನ್ನು ಗಮನಿಸುತ್ತಾರೆ, ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪಠ್ಯ ಶಿಕ್ಷಕರನ್ನು ಸಂಪರ್ಕಿಸುವುದು ವಿದ್ಯಾರ್ಥಿಯ ಕರ್ತವ್ಯ ಎಂದರು. ಸಾಮಾಜಿಕ ಜಾಲತಾಣಗಳ ಬಳಕೆ, ವಾಹನಗಳ ಬಳಕೆಯ ಬಗ್ಗೆ ಮಕ್ಕಳಿಗೆ ಎಚ್ಚರಿಕೆಯನ್ನು ನೀಡಬೇಕು ಮತ್ತು ಅವುಗಳಿಂದಾಗುವ ಹಾನಿಯ ಬಗ್ಗೆ ಮನವರಿಕೆ ಮಾಡಬೇಕು, ವಿದ್ಯಾರ್ಥಿಗಳ ಪ್ರಗತಿಯನ್ನು ಗಮನಿಸಿವುದಕ್ಕೆ ಆಗಾಗ ಕಾಲೇಜಿಗೆ ಭೇಟಿ…
ಬೆಂಗಳೂರು ಡಿ.6 : ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದರು. ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಡಾ. ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಲಿಡ್ಕರ್ ಉತ್ಪನ್ನಕ್ಕೆ ಡಾಲಿ ರಾಯಭಾರಿಯಾಗಿದ್ಧಾರೆ. ಈ ಸಂದರ್ಭ ಸಚಿವ ಹೆಚ್.ಸಿ.ಮಹದೇವಪ್ಪ ಸೇರಿದಂತೆ ಅನೇಕರು ಹಾಜರಿದ್ದರು.






