ಲೇಖಕ: admin

ಮಡಿಕೇರಿ ನ.9 : ನಗರದ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಹಾಗಣಪತಿ ದೇವಾಲಯದಲ್ಲಿ ದಸರಾ ಮಂಟಪದ ಕಲಾಕೃತಿಗಳಿಗೆ ಇತ್ತೀಚೆಗೆ ಶಾಂತಿ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. 47 ನೇ ದಸರಾ ಉತ್ಸವದ ಪ್ರಯುಕ್ತ ಆಯೋಜಿಸಿದ್ದ ಲಕ್ಕಿಡಿಪ್ ನ ಡ್ರಾ ಕೂಡ ಇದೇ ಸಂದರ್ಭ ನಡೆಯಿತು. ವಿಜೇತರು ಲಕ್ಕಿಡಿಪ್ ಕೂಪನ್ ನನ್ನು ಹಾಜರು ಪಡಿಸಿ ನ.25 ರೊಳಗೆ ಬಹುಮಾನ ಪಡೆದುಕೊಳ್ಳುವಂತೆ ಶ್ರೀಕೋಟೆ ಮಹಾಗಣಪತಿ ಮಂಟಪ ಸಮಿತಿಯ ಅಧ್ಯಕ್ಷ ಹೆಚ್.ಪಿ.ಲೋಕೇಶ್ ಮನವಿ ಮಾಡಿದ್ದಾರೆ. ::: ಫಲಿತಾಂಶ ::: ಪ್ರಥಮ ಬಹುಮಾನ ಸಂಖ್ಯೆ 3271 (ರೂ.25 ಸಾವಿರ), ದ್ವಿತೀಯ ಬಹುಮಾನ ಸಂಖ್ಯೆ 1892 (ರೂ.15 ಸಾವಿರ) ಮತ್ತು ತೃತೀಯ ಬಹುಮಾನ ಸಂಖ್ಯೆ 3642 (ರೂ.10 ಸಾವಿರ)

Read More

ಮಡಿಕೇರಿ ನ.9 : ನಾಪೋಕ್ಲುವಿನ ನೂರಂಬಡನಾಡ್ ಬೆತ್ ಮಂದ್ ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಒತ್ತಾಯಿಸಿ ಪಾದಯಾತ್ರೆ ಮತ್ತು ಕೊಡವ ಜಾಗೃತಿ ಸಭೆ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ನಾಪೋಕ್ಲು ಪಟ್ಟಣದಲ್ಲಿ ಪಾದಯಾತ್ರೆ ನಡೆಸಿ ಮಾನವ ಸರಪಳಿ ನಿರ್ಮಿಸಿದ ಪ್ರಮುಖರು ಕೊಡವ ಲ್ಯಾಂಡ್ ಪರ ಘೋಷಣೆಗಳನ್ನು ಕೂಗಿದರು. ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಕೋವಿಯೊಂದಿಗೆ ನೂರಂಬಡನಾಡ್ ಬೆತ್ ಮಂದ್ ಗೆ ಪಾದಯಾತ್ರೆಯಲ್ಲಿ ಸಾಗಿದ ಕೊಡವ, ಕೊಡವತಿಯರು ಸಿಎನ್‌ಸಿ ಮಂಡಿಸಿರುವ 9 ಬೇಡಿಕೆಗಳ ಪರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಪ್ರಮುಖ ಬೇಡಿಕೆಯನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸುತ್ತಿರುವ ಔಚಿತ್ಯದ ಕುರಿತು ಎನ್.ಯು.ನಾಚಪ್ಪ ವಿವರಿಸಿದರು. ಕೊಡವರು ಜಾಗೃತರಾದರೆ ಮಾತ್ರ ಸಂವಿಧಾನದಡಿ ಸಿಗಬೇಕಾದ ನ್ಯಾಯಯುತ ಹಕ್ಕುಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಸಿಎನ್‌ಸಿ ಯ ಶಾಂತಿಯುತ ಹೋರಾಟದೊಂದಿಗೆ ಕೈಜೋಡಿಸುವಂತೆ ಕರೆ ನೀಡಿದರು. ಕೊಡವರ ಸ್ವಯಂ ಶಾಸನದ ಜನ್ಮ ಭೂಮಿಯನ್ನು ಕಾಯ್ದೆ ಬದ್ದವಾಗಿ ಸ್ಥಿರೀಕರಣಗೊಳಿಸಲು ಭೌಗೋಳಿಕ…

Read More

ಮಡಿಕೇರಿ ನ.9 :  ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ನಲ್ಲಿ  ಕೊಡಗಿನ ಬೊಳ್ಳಂಡ ಉನ್ನತಿ ಅಯ್ಯಪ್ಪ ಚಿನ್ನ ಗೆದ್ದಿದ್ದಾರೆ. ಕೊಯಮತ್ತೂರಿನಲ್ಲಿ  ನಡೆದ  38ನೇ ರಾಷ್ಟ್ರೀಯ  ಜ್ಯೂನಿಯರ್   ಕ್ರೀಡಾಕೂಟದಲ್ಲಿ  20 ವಷ೯ದೊಳಗಿನ ಮಹಿಳೆಯರ ವಿಭಾಗದ 100 ಮೀಟರ್ ಹಡ೯ಲ್ಸ್ ನಲ್ಲಿ  ಉನ್ನತಿ ಅಯ್ಯಪ್ಪ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈಕೆ ಮಡಿಕೇರಿ ಮೂಲದವರಾಗಿದ್ದು, ರಾಷ್ಟ್ರೀಯ ಅಥ್ಲೆಟಿಕ್ ಕೋಚ್ ಬೊಳ್ಳಂಡ ಅಯ್ಯಪ್ಪ ಮತ್ತು ಒಲಂಪಿಯನ್ ಪ್ರಮೀಳಾ ಅಯ್ಯಪ್ಪ ಅವರ ಪುತ್ರಿ.

Read More

ಮಡಿಕೇರಿ ನ.9 : ವಿದ್ಯುತ್ ಲೈನ್ ದುರಸ್ತಿ ಪಡಿಸುತ್ತಿದ್ದ ಸಂದರ್ಭ ವಿದ್ಯುತ್ ಸ್ಪರ್ಶಗೊಂಡು ಲೈನ್ ಮೆನ್ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ಆರ್ಜಿ ಗ್ರಾಮದಲ್ಲಿ ನಡೆದಿದೆ. ಅನಿಲ್ ಮ್ಯಾನೇಜಸ್(45) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕಳೆದ 20 ವರ್ಷಗಳಿಂದ ಅನಿಲ್ ಅವರು ವಿರಾಜಪೇಟೆ ವಲಯದಲ್ಲಿ ಲೈನ್‍ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೆಗ್ಗಳ ವಿಭಾಗಕ್ಕೆ ಒಳಪಡುವ ಆರ್ಜಿ ಗ್ರಾಮದಲ್ಲಿ 11 ಕೆ.ವಿ ವಿದ್ಯುತ್ ತಂತಿ ದುರಸ್ತಿಪಡಿಸುತ್ತಿದ್ದ ಸಂದರ್ಭ ಮತ್ತೊಂದು ಭಾಗದಲ್ಲಿ ತುಂಡಾಗಿ ಬಿದ್ದಿದ್ದ ತಂತಿಯಿಂದ ಭೂಮಿಗೆ ವಿದ್ಯುತ್ ಪ್ರಹರಿಸಿ ಅನಿಲ್ ಮ್ಯಾನೇಜಸ್ ಸ್ಥಳದಲ್ಲೇ ಮೃತಪಟ್ಟರು. ಘಟನಾ ಸ್ಥಳಕ್ಕೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸುರೇಶ್ ಪಿ.ಎಸ್, ಸಹಾಯಕ ಇಂಜಿನಿಯರ್ ಟೆಕ್ನಿಕಲ್ ವಿಭಾಗದ ಸೋಮೇಶ್, ಸಹಾಯಕ ಇಂಜಿನಿಯರ್ ಅಯ್ಯನ ಗೌಡ ಪಾಟೀಲ್ ಅವರುಗಳು ಭೇಟಿ ನೀಡಿದರು. ದುರಂತದ ಬಗ್ಗೆ ಮಾಹಿತಿಯನ್ನು ಕಲೆ ಹಾಕಿದ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಘಟನೆ ಕುರಿತು ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಾಗಿದೆ.

Read More

ಮಡಿಕೇರಿ ನ.9 : ಇತ್ತೀಚೆಗೆ ಗೋಣಿಕೊಪ್ಪ ವ್ಯಾಪ್ತಿಯಲ್ಲಿ ಇಬ್ಬರು ಮಹಿಳೆಯರು ಒಂದೇ ದಿನ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಶಾಸಕರು ಇಬ್ಬರು ಮಹಿಳೆಯರ ನಾಪತ್ತೆ ಪ್ರಕರಣದ ಬಗ್ಗೆ ವಿಶೇಷ ಕಾಳಜಿ ತೋರಿ ಸೂಕ್ತ ತನಿಖೆಗೆ ಕ್ರಮ ಕೈಗೊಳ್ಳಬೇಕು. ಮಹಿಳೆಯರನ್ನು ಪತ್ತೆ ಮಾಡಲು ಪೊಲೀಸರು ಕಾರ್ಯೋನ್ಮುಖವಾಗಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರ ಭದ್ರತೆ ಬಗ್ಗೆ ಸಂಶಯ ವ್ಯಕ್ತವಾಗುತ್ತಿದೆ. ಕೆಲವು ದಿನಗಳ ಹಿಂದೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯ ಕೊಲೆಯಾಗಿದೆ. ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಪ್ರಕರಣಗಳು ಹೆಚ್ಚಾಗಿದೆ. ಕೆಲವು ಪ್ರಕರಣಗಳಲ್ಲಿ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದೀಗ ಗೋಣಿಕೊಪ್ಪ ಮಹಿಳೆಯರ ನಾಪತ್ತೆ ಪ್ರಕರಣ ಆತಂಕವನ್ನು ಸೃಷ್ಟಿಸಿದೆ ಎಂದು ಆರೋಪಿಸಿದ್ದಾರೆ.

Read More

ಮಡಿಕೇರಿ ನ.9: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳನ್ನು ಆದಷ್ಟು ಶೀಘ್ರ ಆದ್ಯತೆ ಮೇಲೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಇಂತಿಷ್ಟು ಹಣ ಎಂದು ನಿಗಧಿ ಮಾಡಿದ್ದು, ಪ್ರಥಮ ಆದ್ಯತೆಯಲ್ಲಿ ಪ್ರಗತಿ ಸಾಧಿಸಬೇಕು ಎಂದು ನಿರ್ದೇಶನ ನೀಡಿದರು. ಡಿಸೆಂಬರ್, ಜನವರಿ ಮತ್ತು ಫೆಬ್ರವರಿಯಲ್ಲಿ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ. ಮಾರ್ಚ್-ಏಪ್ರಿಲ್ ನಲ್ಲಿ ಲೋಕಸಭಾ ಚುನಾವಣೆ ಬರಲಿದೆ. ಆದ್ದರಿಂದ ಆದಷ್ಟು ಶೀಘ್ರ ಇಲಾಖೆ ಕಾರ್ಯಕ್ರಮಗಳ ಆರ್ಥಿಕ ಮತ್ತು ಭೌತಿಕ ಗುರಿಯ ಪ್ರಗತಿ ಸಾಧಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಸರ್ಕಾರದ ಆಶಯವನ್ನು ಅರ್ಥಮಾಡಿಕೊಂಡು ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕಚೇರಿ ಮುಖ್ಯಸ್ಥರ ಜವಾಬ್ದಾರಿ ಹೆಚ್ಚಿನದ್ದಾಗಿದೆ. ಆ ನಿಟ್ಟಿನಲ್ಲಿ ಆದ್ಯತೆ ಮೇಲೆ ಪರಿಶೀಷ್ಟರಿಗೆ ಮೂಲ…

Read More

ಮಡಿಕೇರಿ ನ.9 : ವಿವಿಧ ಇಲಾಖೆಗಳಿಗೆ ತಾರೀಖುವಾರು ನಿಗದಿಪಡಿಸಿರುವ ಚಟುವಟಿಕೆಗಳನ್ನು ಸಮರ್ಪಕವಾಗಿ ಕೈಗೊಂಡು ಅವುಗಳ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸುವಂತೆ ಕೊಡಗು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಸೂಚಿಸಿದರು. ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಜೊತೆಗೆ ನಗರದ ಜಿ.ಪಂ.ಕಚೇರಿಯಲ್ಲಿ ನಡೆದ ‘ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ’ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ’ ಕಾರ್ಯಕ್ರಮವು ನ.15 ರಿಂದ 28 ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ನಿಯಮಾನುಸಾರ ಇಲಾಖೆಗಳು ನಿಗದಿಪಡಿಸಿರುವ ಚಟುವಟಿಕೆಗಳನ್ನು ಅದೇ ದಿನಾಂಕಗಳಂದು ಕೈಗೊಳ್ಳಬೇಕು. ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಪೋಷ್ಟರ್‌ಗಳನ್ನು ಎಲ್ಲಾ ಅಂಗನವಾಡಿಗಳಲ್ಲಿಯೂ ಪ್ರಚುರಪಡಿಸಬೇಕು ಎಂದರು. ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ್  ಮಾತನಾಡಿ ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಂಗವಾಗಿ ಒಆರ್‍ಎಸ್ ಮತ್ತು ಜಿಂಕ್ ಮಾತ್ರೆಗಳನ್ನು ಆಶಾ ಕಾರ್ಯಕರ್ತೆಯರು ಪ್ರತಿ ಗ್ರಾಮದ 0-5 ವರ್ಷದ ಒಳಗಿನ ಮಕ್ಕಳಿರುವ…

Read More

ಮಡಿಕೇರಿ ನ.9 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಡಗದಾಳು ಸರ್ಕಾರಿ ಪ್ರೌಢಶಾಲೆ ವತಿಯಿಂದ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಪ್ರಯುಕ್ತ ಕಡಗದಾಳು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಚ್.ಸಿ. ಶಾಮ್ ಪ್ರಸಾದ್ ಉದ್ಘಾಟಿಸಿದರು. ನಂತರ ಸಂವಿಧಾನದ ಪೀಠಿಕೆಯನ್ನು ಓದಿ ಬೋಧಿಸಿದರು. ಬಳಿಕ ಮಾತನಾಡಿದ ಎಚ್.ಸಿ.ಶಾಮ್ ಪ್ರಸಾದ್ ಅವರು ಸಮಾಜದ ಕಟ್ಡಕಡೆಯ ವ್ಯಕ್ತಿಗೂ ಸಮಾನ ನ್ಯಾಯ ಸಿಗಬೇಕೆಂಬುದು ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಅದರಂತೆ ಎಲ್ಲಾ ವರ್ಗದ ಜನರಿಗೆ ಸಮಾನ ಅವಕಾಶವನ್ನು ನೀಡಲು ಕಾನೂನು ಸೇವಾ ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತವೆ. ಅದರಂತೆ ಯಾರೇ ಆದರು ಆರ್ಥಿಕ ಅಥವಾ ಇನ್ನಾವುದೇ ದುರ್ಬಲತೆಗಳಿಂದ ಸಿಗಬೇಕಾದ ಅವಕಾಶಗಳಿಂದ ವಂಚಿತರಾಗಬೇಕಾಗಿಲ್ಲ. ಪ್ರಾಧಿಕಾರದ ಮೂಲಕ ಎಲ್ಲರಿಗೂ ನ್ಯಾಯ ದೊರಕಿಸಿಕೊಡಲಾಗುವುದು ಎಂದರು. ರಾಜ್ಯಾದಾದ್ಯಂತ 100 ಗ್ರಾಮ ನ್ಯಾಯಾಲಗಳನ್ನು ಸ್ಥಾಪಿಸುತ್ತಿದ್ದು, ಕೊಡಗು ಜಿಲ್ಲೆಯಲಿ 10 ಗ್ರಾಮಗಳನ್ನು…

Read More