ಮಡಿಕೇರಿ ಡಿ.5 : ಕುಶಾಲನಗರ ಗ್ರಾಮಾಂತರ ವ್ಯಾಪ್ತಿಯ ಬಾಳಗೋಡು ಗ್ರಾಮದ ಮನೆಯೊಂದರಿಂದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಮೂಲದ ಆರೋಪಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ರಂಗಸಮುದ್ರ ಗ್ರಾಮದಲ್ಲಿ ವಾಸವಿದ್ದ, ಅಸ್ಸಾಂ ಮೂಲದ ಸೈಫುಲ್ ಇಸ್ಲಾಂ(33) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿಯಲ್ಲಿದ್ದ 1 ಸಾವಿರ ರೂ. ನಗದು, 47 ಗ್ರಾಂ ಚಿನ್ನಾಭರಣ ಹಾಗೂ 200 ಗ್ರಾಂ ಬೆಳ್ಳಿಯ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಾಳಗೋಡು ಗ್ರಾಮದ ಶರೀಫ್ ಎಂಬುವವರ ಮನೆಯಿಂದ ಇದೇ ಡಿ.2 ರ ರಾತ್ರಿ ಗಾದ್ರೇೀಜ್ನಲ್ಲಿದ್ದ 5ಸಾವಿರ ರೂ. ನಗದು, 47 ಗ್ರಾಂ ಚಿನ್ನಾಭರಣ ಹಾಗೂ 200ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ ಪೊಲೀಸರು, ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಸೈಫುಲ್ ಇಸ್ಲಾಂ, ಅಸ್ಸಾಂನ ಬುರಗಾಂವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೊಲೆ ಪ್ರಕರಣ ಹಾಗೂ ಮರಿಗಾಂವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕಳವು, ನಿಷೇಧಿತ ಮಾದಕ ವಸ್ತುಗಳ ಸರಬರಾಜು…
ಲೇಖಕ: admin
ಮಡಿಕೇರಿ ಡಿ.5 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಂಡಿಸಿದ ಹಕ್ಕೊತ್ತಾಯದ ಹಿನ್ನೆಲೆಯಲ್ಲಿ ಡಾ.ದ್ವಾರಕನಾಥ್ ಆಯೋಗದ ವರದಿ ಮತ್ತು ಕರ್ನಾಟಕ ರಾಜ್ಯ ಶ್ರೇಷ್ಠ ನ್ಯಾಯಾಲಯದ ಸ್ಪಷ್ಟ ನಿರ್ದೇಶನವಿದ್ದರೂ ಸರ್ಕಾರಿ ದಾಖಲೆಗಳಲ್ಲಿ ಕೊಡವರನ್ನು “ಕೊಡವ” ಎಂದು ನಮೂದಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿ ಎರಡು ತಿಂಗಳೇ ಕಳೆದಿದ್ದರೂ ಸರ್ಕಾರದ ಸಾಫ್ಟ್ ವೇರ್ನಲ್ಲಿ ಈ ಬದಲಾವಣೆಯನ್ನು ಅಪ್ಲೋಡ್ ಮಾಡಿಲ್ಲ. ಇದರಿಂದ ಕೊಡವರಿಗೆ ದಾಖಲೆಗಳನ್ನು ಪಡೆಯುವ ಸಂದರ್ಭ ಅನ್ಯಾಯವಾಗುತ್ತಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಈ ವಿಚಾರದಲ್ಲಿ ಆಡಳಿತಾಂಗ ದಿವ್ಯ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಮಾಜ ವಿಜ್ಞಾನಿ ಡಾ.ಸಿ.ಎಸ್.ದ್ವಾರಕನಾಥ್ ಅವರನ್ನು ಸಿಎನ್ಸಿ ಕೊಡಗಿಗೆ ಆಹ್ವಾನಿಸಿ, ಕೊಡವರ ಸಮಗ್ರ ಸಾಮಾಜಿಕ, ಚಾರಿತ್ರಿಕ ಹಿನ್ನೆಲೆ ಮತ್ತು ದಾಖಲೆಗಳನ್ನು ಒದಗಿಸುವುದರೊಂದಿಗೆ ಆಯೋಗದ ಕರೆಯಂತೆ ಬೆಂಗಳೂರಿನ ಆಯೋಗದ ನ್ಯಾಯಾಲಯದಲ್ಲಿ ಈ ಸಂಬಂಧ…
ಮಡಿಕೇರಿ ಡಿ.5 : ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ.ಅವರ ಕೋರಿಕೆಯಂತೆ ಡಿಸೆಂಬರ್, 07 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 220ಕೆ.ವಿ ಕುಶಾಲನಗರ, 33/11ಕೆವಿ ಸೋಮವಾರಪೇಟೆ, 66/11 ಕೆವಿ ಆಲೂರು ಸಿದ್ದಾಪುರ, 66/11 ಕೆವಿ ಸುಂಟಿಕೊಪ್ಪ, 66/11ಕೆವಿ ಮಡಿಕೇರಿ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಸೋಮವಾರಪೇಟೆ, ಶಾಂತಳ್ಳಿ, ಕುಮಾರಹಳ್ಳಿ, ಗೌಡಳ್ಳಿ, ಹೆಗ್ಗಡಮನೆ ಅಬ್ಬೂರುಕಟ್ಟೆ, ಐಗೂರು, ಹೊಸಗುತ್ತಿ, ಗಣಗೂರು ಗೋಣಿಮರೂರು, ಆಲೂರು ಸಿದ್ದಾಪುರ, ಮಾಲಂಬಿ, ಸಿದ್ದಲಿಂಗಪುರ, ಮಡಿಕೇರಿ ಪಟ್ಟಣ, ಬೋಯಿಕೇರಿ ಗಾಳಿಬೀಡು, ಕುಂಡಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಇಇ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಡಿ.5 : ತುಮಕೂರಿನ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2023-24 ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಟೆಕ್ವಾಂಡೋ ಪಂದ್ಯಾವಳಿಯಲ್ಲಿ ಮಡಿಕೇರಿಯ ಸಂತ ಜೋಸೆಫರ ಪಿಯು ಕಾಲೇಜ್ ನ ವೈಷ್ಣವಿ ಬಿ.ವಿ ಪದಕ ಗೆಲ್ಲುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜನವರಿ ತಿಂಗಳಿನಲ್ಲಿ ಮಹಾರಾಷ್ಟ್ರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ವೈಷ್ಣವಿ ಸ್ಪರ್ಧಿಸಲಿದ್ದಾರೆ. ಈಕೆ ಮಡಿಕೇರಿಯ ನಿವಾಸಿ ಮಾಜಿ ಯೋಧ ವಿನೋದ್ ಕುಮಾರ್ ಬಿ.ಎಲ್ ಹಾಗೂ ಶಿಕ್ಷಕಿ ಮಾಲಿನಿ ಕೆ.ಆರ್ ದಂಪತಿಯ ಪುತ್ರಿ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡು ತೀವ್ರ ಪೈಪೋಟಿ ನೀಡಿದರೂ ವೈಷ್ಣವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತರಬೇತುದಾರ ಮರ್ಕರ ಟೆಕ್ವಾಂಡೋ ಕ್ಲಬ್ ನ ಮಾಸ್ಟರ್ ಕುಶಾಲ್ ಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಡಿ.5 : 33/11ಕೆವಿ ಎಂಯುಎಸ್ಎಸ್ ಮೂರ್ನಾಡು ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಡಿ.6 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪಾರಾಣೆ, ನಾಪೋಕ್ಲು, ಹೊದ್ದೂರು, ಮರುಗೋಡು, ಮೂರ್ನಾಡು, ಹಾಕತ್ತೂರು, ಕಾಂತೂರು, ಹೊದವಾಡ, ಚೆಯ್ಯಂಡಾಣೆ, ಕಕ್ಕಬೆ, ನೆಲಜಿ, ಪಾಲೂರು, ಯವಕಪಾಡಿ, ಬೇತು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಇಇ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಡಿ.5 : 67 ನೇ ರಾಷ್ಟ್ರ ಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಯು ಜ.3 ರಿಂದ 8 ರವರೆಗೆ ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಕೂಡಿಗೆ, ಪೊನ್ನಂಪೇಟೆ ಮತ್ತು ಸೋಮವಾರಪೇಟೆಯ ಟರ್ಫ್ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ರಾಷ್ಟ್ರ ಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿ ಆಯೋಜನೆ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರ ಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಗೆ ಆಗಮಿಸುವ ಕ್ರೀಡಾಪಟುಗಳು, ತೀರ್ಪುಗಾರರು ಹಾಗೂ ತರಬೇತಿದಾರರು ಹೀಗೆ ಎಲ್ಲರಿಗೂ ವಸತಿ, ಉಪಹಾರ, ಊಟ, ಬಿಸಿನೀರು, ಶೌಚಾಲಯ ಹೀಗೆ ಪ್ರತಿಯೊಂದನ್ನು ಸಹ ಕಲ್ಪಿಸಬೇಕಿದ್ದು, ಯಾವುದೇ ರೀತಿಯ ವ್ಯತ್ಯಾಸ ಆಗದಂತೆ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜೊತೆ…
ಕಡಂಗ ಡಿ.5 : ಕೊಡಗು ಜಿಲ್ಲೆಯ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಕೊಟ್ಟಮುಡಿ ಮರ್ಕಝ್ ನ ನೂತನ ಕಾಲೇಜು ಕಟ್ಟಡ ಮತ್ತು ವಿದ್ಯಾರ್ಥಿನಿಯರ ಹಾಸ್ಟೆಲ್ ಉದ್ಘಾಟನಾ ಸಮಾರಂಭವು 2024ನೇ ಜ.3 ರಂದು ಉದ್ಘಾಟನೆ ನಡೆಯಲಿದೆ ಎಂದು ನೆಡುವುಸದಾಗಿ ಕೊಡಗು ಜಿಲ್ಲಾ ಖಾಜಿ ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ದುಬೈನಲ್ಲಿ ಘೋಷಿಸಿದ್ದಾರೆ. ಮರ್ಕಝಲ್ ಹಿದಾಯ ಕೊಟ್ಟಮುಡಿ ಯುಎಇ ರಾಷ್ಟ್ರೀಯ ಸಮಿತಿ ಆಯೋಜಿಸಿದ ಯುಎಇ ಯೂನಿಯನ್ ದಿನಾಚರಣೆ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಹಕೀಮ್ ಅಝಹರಿ ಉಸ್ತಾದರು ಉದ್ಘಾಟಿಸಿದರು. ಜಲೀಲ್ ನಿಜಾಮಿ ಉಸ್ತಾದ್ ಅದ್ಯಕ್ಷತೆ ವಹಿಸಿದರು. ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಇಸ್ಮಾಯಿಲ್ ಸಖಾಫಿ ಉಸ್ತಾದರು ಮುಖ್ಯ ಭಾಷಣ ಮಾಡಿದರು. ಸಭೆಯಲ್ಲಿ ಕೊಡಗು ಸುನ್ನೀ ವೆಲ್ಫೇರ್ ಅಧ್ಯಕ್ಷ ಕೆ.ಕೆ.ಉಸ್ಮಾನ್ ಹಾಜಿ, ದುಬೈ ಜೋನಲ್ ಅಧ್ಯಕ್ಷ ಶಾಫಿ ಸಖಾಫಿ, ಅಹಮದ್ ಚಾಮೆ,ಮುಂತಾದ ಗಣ್ಯರು ಹಾಜರಿದ್ದರು. ವರದಿ : ನೌಫಲ್ ಕಡಂಗ
ವಿರಾಜಪೇಟೆ ಡಿ.5 : ಗೋಣಿಕೊಪ್ಪಲು ಕಾವೇರಿ ವಿದ್ಯಾಸಂಸ್ಥೆ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಸಂಘ, ಐಕ್ಯೂಎಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕಾವೇರಿ ವಿದ್ಯಾಸಂಸ್ಥೆಯ ಉಪನ್ಯಾಸಕರು ಹಾಗೂ ಸಿಬ್ಬಂದಿಗಳಿಗೆ ನಡೆದ ಪುತ್ತರಿ ಕಪ್ ಕ್ರೀಡಾಕೂಟದಲ್ಲಿ ವಿರಾಜಪೇಟೆ ಕಾವೇರಿ ಕಾಲೇಜು ತಂಡ ಸಾಧನೆ ಮಾಡಿದೆ. ಗೋಣಿಕೊಪ್ಪಲು ಕಾವೇರಿ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿರಾಜಪೇಟೆ ಕಾವೇರಿ ಕಾಲೇಜು ತಂಡವು ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ ಹಾಗೂ ಕ್ರಿಕೆಟ್ ಹಾಗೂ ಥ್ರೋ ಬಾಲ್ನಲ್ಲಿ ದ್ವಿತೀಯ ಸ್ಥಾನ ಪಡೆದು ಬಹುಮಾನ ಪಡೆದುಕೊಂಡಿತು. ಈ ಸಂದರ್ಭ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಜರಿದ್ದರು.
ಬೆಂಗಳೂರು ಡಿ.5 : ರಾಜ್ಯ ಸರ್ಕಾರದಿಂದ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಅನ್ನು ಹಸ್ತಾಂತರಿಸಲಾಯಿತು. ಸಿಎಂ ಸಿದ್ದರಾಮಯ್ಯ ಘೋಷಿಸಿದಂತೆ ಜಿಲ್ಲಾಧಿಕಾರಿ ದಯಾನಂದ್ ಅವರು ಪ್ರಾಂಜಲ್ ಅವರು ಕುಟುಂಬಕ್ಕೆ ಚೆಕ್ ನೀಡಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ.ಪ್ರಾಂಜಲ್” ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ. ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ. ಯೋಧರ ಸಾವು – ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದು ಹೇಳಿದ್ದಾರೆ.
ಮಡಿಕೇರಿ ಡಿ.5 : ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತು ವತಿಯಿಂದ ವಿರಾಜಪೇಟೆಯಲ್ಲಿ ಮನೆ ಮನೆ ಕವಿಗೋಷ್ಠಿ, ಜಾನಪದ ಗೀತೆ ಗಾಯನ, ಪುಸ್ತಕ ಪರಿಚಯ ಮತ್ತು ಕವಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಸಮೂಹ ಮತ್ತು ಕಲಾ ಉತ್ಸವ ಕೊಡಗು-2023ರ ಕನ್ನಡ ಪ್ರಾಯೋಜಕತ್ವದಲ್ಲಿ ವಿರಾಜಪೇಟೆಯ ಮೊಗರಗಲ್ಲಿ ಕಲಾ ಪ್ರದರ್ಶನ ಸ್ಥಳದಲ್ಲಿ ನಡೆದ ಕಾರ್ಯಕ್ರಮವನ್ನು ವಿರಾಜಪೇಟೆ ಕ್ಷೇತ್ರದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್ ಉದ್ಘಾಟಿಸಿದರು. ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರಿನ ನಿವೃತ್ತ ಪ್ರಾಂಶುಪಾಲ ನಾಟಕ ಭಾರ್ಗವ ಕೆಂಪರಾಜು ಹಾಜರಿದ್ದರು. ಗಿರೀಶ್ ಕಿಗ್ಗಾಲು ಆಶಯ ನುಡಿಯಾಡಿದರು. ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತು ಬಳಗದ ಸಂಸ್ಥಾಪಕ ಪಿ.ಎಸ್. ವೈಲೇಶ ಸ್ವಾಗತಿಸಿದರು. ನಿರೂಪಣೆಯನ್ನು ಎ.ವಿ.ಮಂಜುನಾಥ್, ಭಾಗ್ಯವತಿ ಮತ್ತು ಶಿವಮ್ಮ ವೈಲೇಶ್ ನಿರ್ವಹಿಸಿದರು. ಬಳಗದ ನಲ್ವತ್ತಕ್ಕೂ ಹೆಚ್ಚು ಕವಿಗಳು ಮತ್ತು ಗಾಯಕರು ಭಾಗವಹಿಸಿದರು.






