ಲೇಖಕ: admin

ನಂಜನಗೂಡು ಕಾವೇರಿ ನದಿಯ ಉಪನದಿಗಳಲ್ಲಿ ಒಂದಾದ ಕಪಿಲಾ ಅಥವಾ ಕಬಿನಿ ನದಿಯ ಬಲದಂಡೆಯಲ್ಲಿದೆ. ಗರಲಪುರಿ ಎಂದೂ ಕರೆಯಲ್ಪಡುವ ನಂಜನಗೂಡು ಬೃಹತ್ ನಂಜುಂಡೇಶ್ವರ ಅಥವಾ ಶ್ರೀಕಂಠೇಶ್ವರ ದೇವಸ್ಥಾನದಿಂದಾಗಿ ಪ್ರಸಿದ್ಧವಾಗಿದೆ. ನಂಜುಂಡ ಎಂಬ ಹೆಸರನ್ನು ಹಾಲಾಹಲ ಅಥವಾ ವಿಷವನ್ನು ಸೇವಿಸಿದ ಶಿವ ಎಂದು ವಿವರಿಸಲಾಗಿದೆ ಮತ್ತು ಈ ನಂಜುಂಡನೇ ಅದನ್ನು ಜೀರ್ಣಿಸಿಕೊಳ್ಳುವ ಮೂಲಕ ವಿಷಕಂಠ ಅಥವಾ ಶ್ರೀಕಂಠನಾದನು. ಹೀಗಾಗಿ ದೇವರನ್ನು ನಂಜುಂಡೇಶ್ವರ ಮತ್ತು ಶ್ರೀಕಂಠೇಶ್ವರ ಎಂದು ಕರೆಯುತ್ತಾರೆ . ಆತನು ತನ್ನ ಭಕ್ತರ ರೋಗಗಳನ್ನು ಗುಣಪಡಿಸುವವನೆಂದು ವಿವರಿಸಲಾಗಿದೆ. ಮುಸ್ಲಿಂ ದೊರೆ ಹೈದರ್ ಅಲಿಖಾನ್ ಅವರು ನಂಜುಂಡ ದೇವರಲ್ಲಿ ಬಲವಾದ ನಂಬಿಕೆಯನ್ನು ಹೊಂದಿದ್ದರು ಮತ್ತು ದೇವಾಲಯದ ಪವಿತ್ರ ನೀರನ್ನು ನೀಡುವುದರ ಮೂಲಕ ತನ್ನ ಪ್ರೀತಿಯ ಆನೆಯ ಕಣ್ಣಿನ ಕಾಯಿಲೆಯನ್ನು ಗುಣಪಡಿಸಿದ ಕಾರಣ ಅವನನ್ನು ‘ಹಕೀಮ್ ನಂಜುಂಡ’ ಎಂದು ಕರೆದರು. ಈ ಸ್ಥಳವನ್ನು ದಕ್ಷಿಣದ ದಕ್ಷಿಣ ಕಾಶಿ ಅಥವಾ ವಾರಣಾಸಿ ಎಂದು ಕರೆಯಲಾಗುತ್ತದೆ . ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಇಬ್ಬರೂ ಈ ದೇವಾಲಯದೊಂದಿಗೆ ನಿಕಟ…

Read More

ಮಡಿಕೇರಿ ನ.8 : ಪವಿತ್ರ ಕ್ಷೇತ್ರ ತಲಕಾವೇರಿಯಲ್ಲಿ ಇತ್ತೀಚೆಗೆ ಧ್ವಜ ಹಿಡಿದು ಕನ್ನಡ ರಾಜ್ಯೋತ್ಸವ ಆಚರಿಸುವ ಮೂಲಕ ಧಾರ್ಮಿಕ ನಂಬಿಕೆಗೆ ಚ್ಯುತಿ ತರಲಾಗಿದೆ ಎಂದು ತಲಕಾವೇರಿ ಮೂಲ ಸ್ವರೂಪ ರಕ್ಷಣಾ ವೇದಿಕೆ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಸಂಚಾಲಕ ಉಳ್ಳಿಯಡ ಎಂ.ಪೂವಯ್ಯ ಅವರು, ಇತ್ತೀಚಿನ ದಿನಗಳಲ್ಲಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಧಾರ್ಮಿಕ ಆಚರಣೆಗೆ ವಿರುದ್ಧವಾದ ಚಟುವಟಿಕೆಗಳು ನಡೆಯುತ್ತಿದೆ ಎಂದು ಆರೋಪಿಸಿದರು. ಬೆಳಗಾವಿ ಭಾಗದ ಕೆಲವು ಸಾಧು ಸಂತರು ತಲಕಾವೇರಿಯ ಪವಿತ್ರ ಕುಂಡಿಕೆ ಸಮೀಪ ಗುಂಪುಗೂಡಿ ಕನ್ನಡ ರಾಜ್ಯೋತ್ಸವ ಆಚರಿಸುವ ನೆಪದಲ್ಲಿ ಪುಣ್ಯಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತಂದಿರುವುದು ಖಂಡನೀಯ. ಕೋಟ್ಯಾಂತರ ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಕಾವೇರಿ ಕ್ಷೇತ್ರದಲ್ಲಿ ಈ ರೀತಿಯ ಅಚಾತುರ್ಯ ಇಲ್ಲಿಯವರೆಗೆ ನಡೆದಿರುವ ಉದಾಹರಣೆಗಳೇ ಇಲ್ಲ. ಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ, ಸಾರ್ವಜನಿಕ ಸಭೆ, ವಿಚಾರಗೋಷ್ಠಿ, ಕವಿಗೋಷ್ಠಿಯಂತಹ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದು ಸ್ಥಳೀಯರ ಭಾವನೆಗಳಿಗೆ ಘಾಸಿ ಉಂಟು ಮಾಡಿದೆ ಎಂದು ಪೂವಯ್ಯ ಅಸಮಾಧಾನ ವ್ಯಕ್ತಪಡಿಸಿದರು. ತಲಕಾವೇರಿ ಕ್ಷೇತ್ರವನ್ನು ಯಾರು…

Read More

ವಿರಾಜಪೇಟೆ  ನ.8 :  ಕನ್ನಡ ಭಾಷೆಯು ವಿಶ್ವ ಲಿಪಿಗಳ ರಾಣಿಯಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಪ್ರಾದ್ಯಾಪಕ ಡಾ. ಜಮೀರ್ ಅಹಮದ್ ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಹಾಗೂ ಎನ್. ಎಸ್. ಎಸ್ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಭಾಷೆಯು ಶ್ರೀಮಂತ ಭಾಷೆಯಾಗಿದ್ದು,  ವಿಶ್ವ ಭಾಷೆಗಳ ರಾಣಿಯಾಗಿದೆ. ನಮ್ಮ ಮಾತೃ ಭಾಷೆ ಅನೇಕ ಇದ್ದರೂ ಕನ್ನಡ ಭಾಷೆ ನಮ್ಮನ್ನು ಸಾಮಾಜಿಕವಾಗಿ ಒಗ್ಗೂಡಿಸುತ್ತದೆ. ಬಿ. ಎಂ. ರೈಸ್, ಕಿಟೆಲ್, ಮೊಗ್ಲಿಂಗ್ ರಂತಹ ವಿದೇಶಿಗರು ಕನ್ನಡ ಭಾಷೆಗೆ ಕೊಡುಗೆ ನೀಡಿದ್ದಾರೆ ಎಂದರು. ಕನ್ನಡ ಭಾಷಾ ಅಭಿಮಾನವನ್ನು ಪ್ರತಿಯೊಬ್ಬ ಕನ್ನಡಿಗನೂ ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಆನಂದ್. ಕೆ. ಮಾತನಾಡಿ,  ಕನ್ನಡ ಭಾಷೆಯ ಸೊಗಡು ನಮ್ಮೆಲ್ಲರ ಹೆಮ್ಮೆಯಾಗಿದ್ದು, ಭಾಷೆಯ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು. ಈ ಸಂದರ್ಭ ಕಾಲೇಜಿನ ಎನ್. ಎಸ್. ಎಸ್. ಘಟಕವನ್ನು ಉದ್ಘಾಟಿಸಲಾಯಿತು. ವೇದಿಕೆಯಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಡಾ.…

Read More

ನಾಪೋಕ್ಲು ನ.8 : ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ನ.13 ರಂದು ಹುತ್ತರಿ (ಪುತ್ತರಿ) ಹಬ್ಬದ ದಿನ ನಿಗದಿ ಹಾಗೂ ದೇಶ ಕಟ್ಟು ಜಾರಿ ಕಾರ್ಯಕ್ರಮವನ್ನು ನಿಗದಿ ಪಡಿಸಲಾಗುವುದು. ಮಳೆ ಬೆಳೆಗಳ ಸಮೃದ್ಧಿಯ ವರದಾತ ಎಂದು ಪ್ರಸಿದ್ಧವಾಗಿರುವ ಪಾಡಿ ಶ್ರೀ ಇಗ್ಗುತ್ತಪ್ಪ ದೇವರ ಸನ್ನಿಧಿಯಲ್ಲಿ ಪ್ರತಿ ವರ್ಷ ಸಂಭ್ರಮದಿಂದ ಆಚರಿಸಲ್ಪಡುವ ಹುತ್ತರಿ(ಪುತ್ತರಿ) ಯ ವೈಭವ ಪೂರ್ಣ ಆಚರಣೆಗಳಿಗೆ ನ.13ರ ಸೋಮವಾರದಂದು ದೇವಾಲಯದ ಪಾರಂಪರಿಕ ಪತ್ತೆಪರೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಹುತ್ತರಿ ಆಚರಣೆಯ ಎಲ್ಲಾ ಕಾರ್ಯಕ್ರಮಗಳಿಗೂ ದಿನ ನಕ್ಷತ್ರ ಮುಹೂರ್ತಗಳನ್ನು ವಿಧಿಯುಕ್ತವಾಗಿ ಪ್ರಕಟಿಸಲಾಗುವುದು. ಅಂದು ದೇವತಕ್ಕರಾದ ಪರದಂಡ ಕುಟುಂಬಸ್ಥರು, ಅಮ್ಮಂಗೇರಿ ಕಣಿಯರು (ಜ್ಯೋತಿಷ್ಯರು), ಪಾಡಿ ನಾಡಿನ ಎಲ್ಲಾ ತಕ್ಕ ಮುಖ್ಯಸ್ಥರು, ಕೊಡಗಿನ ಸರ್ವ ಸಮುದಾಯದ ಭಕ್ತಾದಿಗಳ ಸಮ್ಮುಖದಲ್ಲಿ ಹಬ್ಬದ ದಿನವನ್ನು ಹಾಗೂ ಕ್ರಮವಾಗಿ ‘ದೇವಪೊವ್ದ್’ ಹಾಗೂ ‘ನಾಡ್ ಪೊವ್ದ್’ನ ಶುಭ ಮಹೂರ್ತಗಳನ್ನು ನಿರ್ಧಾರ ಮಾಡಿ ಪ್ರಕಟಿಸಲಾಗುವುದು. ಭಕ್ತರು ದೇಶಕಟ್ಟು ವಿಧಿಸಿದ ದಿನದಿಂದ 15 ದಿನಗಳ ನಂತರ ನಡೆಯುವ ಬಿಚ್ರ್ಯಾರ್ ಕಲ್ಲಾಡ್ಚ ಹಬ್ಬದ…

Read More

ನಾಪೋಕ್ಲು ನ.8 : ಕುಂಜಿಲ-ಕಕ್ಕಬ್ಬೆ ಪಂಚಾಯತಿಯಲ್ಲಿ ಸಾಮಾಜಿಕ ಚೇತನ ಕೇಂದ್ರ ಉದ್ಘಾಟನೆಗೊಂಡಿತು. ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಸಾಕ್ಷಾರತ ಕಾರ್ಯಕ್ರಮದ ಅಂಗವಾಗಿ ಸಾಮಾಜಿಕ ಚೇತನ ಕೇಂದ್ರವನ್ನು ಕುಂಜಿಲ-ಕಕ್ಕಬ್ಬೆ ಪಂಚಾಯತಿಯ ಪಿಡಿಓ, ಶಿಕ್ಷಣ ಇಲಾಖೆಯ ಅಧಿಕಾರಿಗಳ ಮತ್ತು ಗ್ರಾ.ಪಂ ಸದಸ್ಯರ ಸಮಾಕ್ಷಮದಲ್ಲಿ ಉದ್ಘಾಟಿಸಲಾಯಿತು. ವರದಿ : ದುಗ್ಗಳ ಸದಾನಂದ  

Read More

ಮಡಿಕೇರಿ ನ.8 : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಡಿ.9 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ಲೋಕ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು…

Read More

ಮಡಿಕೇರಿ ನ.7 : ನಿವೃತ್ತ ಯೋಧರೊಬ್ಬರು ನಾಪತ್ತೆಯಾಗಿರುವ ಪ್ರಕರಣ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಗರದ ಉಕ್ಕುಡ ನಿವಾಸಿ ಸಂದೇಶ್(38) ಎಂಬುವವರೇ ನಾಪತ್ತೆಯಾದ ಯೋಧ. ಪತ್ರವೊಂದು ಸಿಕ್ಕಿರುವ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ನಗರದ ಪಂಪಿನ ಕೆರೆಯಲ್ಲಿ ನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಇಂದು ತೀವ್ರ ಶೋಧ ಕಾರ್ಯ ನಡೆಸಿದರು. ಕತ್ತಲಾದ ಹಿನ್ನೆಲೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಬುಧವಾರ ಮತ್ತೆ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ತಿಂಗಳ ಹಿಂದೆಯಷ್ಟೇ ಸೇನೆಯಿಂದ ನಿವೃತ್ತಿಯಾಗಿದ್ದ ಸಂದೇಶ್ ಗೆ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ.

Read More

ಮಡಿಕೇರಿ ನ.7 : ಕೊಡವರ ಸ್ವಯಂ ಶಾಸನದ ಜನ್ಮ ಭೂಮಿಯನ್ನು ಕಾಯ್ದೆಬದ್ಧವಾಗಿ ಸ್ಥಿರೀಕರಣಗೊಳಿಸಲು ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕನ್ನು ಸಂವಿಧಾನದ ವಿಧಿ 244 R/w 6 ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಕರ್ನಾಟಕದ ಸ್ವಾಧೀನದೊಳಗೆ ಸಂಯೋಜಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಸಿಎನ್‍ಸಿ ಸಂಘಟನೆ 5ನೇ ಹಂತದ ಪಾದಯಾತ್ರೆಯನ್ನು ಆರಂಭಿಸಿತು. ವಿರಾಜಪೇಟೆ ತಾಲ್ಲೂಕಿನ ಬೆಪ್ಪುನಾಡ್ ನ ಅರಮೇರಿ ಮಂದ್ ಮತ್ತು ಕಡಂಗ ಮುರೂರು ಮಂದ್ ನಲ್ಲಿ ಪಾದಯಾತ್ರೆ ಹಿನ್ನೆಲೆ ನಡೆದ ಕೊಡವ ಜನಜಾಗೃತಿ ಸಭೆಯ ನೇತೃತ್ವ ವಹಿಸಿ ನಾಚಪ್ಪ ಮಾತನಾಡಿದರು. ಕೊಡಗಿನ ಅತ್ಯಂತ ಸೂಕ್ಷ್ಮ ಆದಿಮಸಂಜಾತ ಕೊಡವ ಜನಾಂಗಕ್ಕೆ ಸಂವಿಧಾನದ ಭದ್ರತೆಯ ಅಗತ್ಯವಿದೆ. ಸಂವಿಧಾನದಲ್ಲಿ ರೇಸ್/ಮೂಲ ವಂಶಸ್ಥ ಜನಾಂಗಕ್ಕೆ ಯಾವುದೇ ವಿಶೇಷ ಪರಿಚ್ಛೇದಗಳ ಷರತ್ತು ಇಲ್ಲದಿರುವುದರಿಂದ ಕೊಡವರನ್ನು ಎಸ್.ಟಿ ಪಟ್ಟಿಗೆ ಸೇರಿಸುವುದು ಅನಿವಾರ್ಯವಾಗಿದೆ.…

Read More

ಮಡಿಕೇರಿ ನ.7 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಅಭಿವೃದ್ಧಿಯ ಕನಸು ಕಾಣುತ್ತಾರೆ. ಆದರೆ ಸರ್ವಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕೆಲಸಗಳು ಆಗುತ್ತಿವೆಯೇ ಎಂಬ ಬಗ್ಗೆ ಪ್ರತಿಯೊಬ್ಬರೂ ಚಿಂತಿಸಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಹೆಚ್.ಸಿ.ಶ್ಯಾಮ್ ಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿ, ಜಿಲ್ಲಾಡಳಿತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಭಾರತ್ ಸ್ಕೌಟ್ಸ್ ಧ್ವಜ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಬೃಹತ್ ಜಾಥಾಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಆದರೆ ಸಮಾಜದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳು ತಲುಪಿವೆಯೇ ಎಂಬ ಬಗ್ಗೆ ಆತ್ಮವಲೋಕನ ಮಾಡಬೇಕಿದೆ. ನಿಜವಾದ ಅಭಿವೃದ್ಧಿ ಕಾರ್ಯಗಳು ನಾಗರಿಕರಿಗೆ ತಲುಪುತ್ತಿವೆಯೇ ಎಂಬುದರ ಬಗ್ಗೆ ಯೋಚಿಸಬೇಕಿದೆ ಎಂದು…

Read More

ಮಡಿಕೇರಿ ನ.7 : ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಮಡಿಕೇರಿ ನಗರಸಭೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ‘ಪೌರ ಕಾರ್ಮಿಕರ’ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪೌರಕಾರ್ಮಿಕರಿಗಾಗಿ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು, ಅವುಗಳನ್ನು ಬಳಸಿಕೊಂಡು ಉತ್ತಮ ಜೀವನ ನಡೆಸಬೇಕು. ತಾವು ಕರ್ತವ್ಯ ಸಂದರ್ಭದಲ್ಲಿ ಸೂಕ್ತ ರಕ್ಷಣಾ ಸಾಮಾಗ್ರಿಗಳನ್ನು ಬಳಸಿ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಸಲಹೆ ನೀಡಿದರು. ಪೌರಕಾರ್ಮಿಕರು ರಜೆ ಕೇಳಿದ್ದಲ್ಲಿ ನೀಡಬೇಕು. ಯಾವುದೇ ಕಾರಣಕ್ಕೂ ಸತಾಯಿಸಬಾರದು. ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸುವುದರ ಜೊತೆಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು ಎಂದು ಡಾ.ಮಂತರ್ ಗೌಡ ಕರೆ ನೀಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಎಲ್ಲೆಂದರಲ್ಲಿ ಬಿಸಾಡುವವರಿಂದ ದಂಡ ವಸೂಲಿ ಮಾಡಬೇಕು. ಈ ರೀತಿ ಆದಲ್ಲಿ ಪ್ರತಿಯೊಬ್ಬರೂ ಎಚ್ಚರವಹಿಸಲು ಸಾಧ್ಯ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ನುಡಿದರು. ನಗರಸಭೆಯಲ್ಲಿ…

Read More