ಸೋಮವಾರಪೇಟೆ, ಡಿ.5: ಶಿಕ್ಷಕರ ಹುದ್ದೆ ಕೇವಲ ವೃತ್ತಿ ಅಲ್ಲ, ಅದೊಂದು ಶ್ರೇಷ್ಠ ಸೇವೆ. ಈ ದಿಸೆಯಲ್ಲಿ ಶಿಕ್ಷಕರು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದು ಸೋಮವಾರಪೇಟೆ ತಾಲ್ಲೂಕು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಹೇಳಿದರು. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರ( ಬಿ.ಆರ್.ಸಿ.)ದ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಹುದ್ದೆಯಿಂದ ಮುಂಬಡ್ತಿ ಹೊಂದಿ ತಾಲ್ಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಛೇರಿಯ ಸಿಬ್ಬಂದಿಯೊಂದಿಗೆ ಶೈಕ್ಷಣಿಕ ಹಾಗೂ ಆಡಳಿತ ವ್ಯವಸ್ಥೆ ಕುರಿತು ಸಮಾಲೋಚನೆ ನಡೆಸಿ ಶೈಕ್ಷಣಿಕ ಪ್ರಗತಿ ಕುರಿತು ಚರ್ಚಿಸಿ ಮಾತನಾಡಿದರು. ನೂತನ ಬಿಇಓ ಭಾಗ್ಯಮ್ಮ ಅವರು, ಪ್ರಭಾರ ಬಿಇಓ ಎಂ.ವಿ.ಮಂಜೇಶ್ ಅವರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಶಾಲೆಯ ಪ್ರಗತಿಯೊಂದಿಗೆ ವೃತ್ತಿ ಬದ್ಧತೆ ತೋರುತ್ತಿರುವುದು ಶ್ಲಾಘನೀಯ ಎಂದರು. ಪ್ರತಿಯೊಬ್ಬ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮುಖ್ಯ. ಇದರಿಂದ…
ಲೇಖಕ: admin
ಮಡಿಕೇರಿ ಡಿ.5 : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಹುದ್ದೆಯನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ನಗರದಲ್ಲಿ ಪ್ರತಿಭಟನೆ ನಡೆಸಿತು. ಸಂಘದ ರಾಜ್ಯಾಧ್ಯಕ್ಷ ಹನುಮಂತ ಗೌಡ ಕಲ್ಮಣಿ ಹಾಗೂ ಜಿಲ್ಲಾಧ್ಯಕ್ಷ ಎಂ.ಎ.ಶ್ಯಾಮ್ ಪ್ರಸಾದ್, ಅವರ ನೇತೃತ್ವದಲ್ಲಿ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಅತಿಥಿ ಉಪನ್ಯಾಸಕರು ಘೋಷಣೆಗಳ ಸಹಿತ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿದ ಸಂಘದ ರಾಜ್ಯಾಧ್ಯಕ್ಷ ಹನುಮಂತ ಗೌಡ ಕಲ್ಮಣಿ ರಾಜ್ಯದಾದ್ಯಂತ ಇರುವ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಅತಿಥಿ ಉಪನ್ಯಾಸಕರನ್ನು ಜೀತದಂತೆ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅತಿಥಿ ಉಪನ್ಯಾಸಕರನ್ನು ಖಾಯಂ ಗೊಳಿಸುವ ಭರವಸೆ ನೀಡಿದ್ದರು. ಇಂದು ಸ್ವತ: ಸಿದ್ದರಾಮಯ್ಯ…
ಮಡಿಕೇರಿ ಡಿ.5 : ಪೊನ್ನಂಪೇಟೆಯ ಸರ್ವದೈವತಾ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಬಿ.ಎಸ್.ಸೃಷ್ಟಿ ಪ್ರಥಮ ಬಹುಮಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ಈ ಸಂದರ್ಭದಲ್ಲಿ ಶಾಲಾ ಸಂಯೋಜಕರಾದ ಅಮೃತ, ದೈಹಿಕ ಶಿಕ್ಷಕಿ ಮೋನಿಕಾ ಕಾವೇರಿ ಉಪಸ್ಥಿತರಿದ್ದರು. ವಿಜೇತ ವಿದ್ಯಾರ್ಥಿನಿಯನ್ನು ಶಾಲಾ ಆಡಳಿತ ಮಂಡಳಿ, ಶಾಲಾ ಸಂಯೋಜಕರು, ಶಿಕ್ಷಕ ವೃಂದದವರು ಶ್ಲಾಘಿಸಿ, ಅಭಿನಂದಿಸಿದರು.
ಚೆಟ್ಟಳ್ಳಿ ಡಿ.5 : ಭಾರತೀಯ ತೋಟಗಾರಿಕಾ ಸಂಶೋದನಾ ಸಂಸ್ಥೆ, ಕೇಂದ್ರೀಯ ತೋಟಗಾರಿಕಾ ಕೇಂದ್ರ ಚೆಟ್ಟಳ್ಳಿಯಲ್ಲಿ ಹಣ್ಣುಗಳ- ಅಖಿಲ ಭಾರತ ಸಂಘಟಿತ ಸಂಶೋದನಾ ಯೋಜನೆಯಡಿ ಡಿ.7ರಂದು ಆಫ್ ಸೀಜನ್ ಲಿಚ್ಚಿ ಹಣ್ಣಿನ ಕ್ಷೇತ್ರೋತ್ಸವ ಹಾಗೂ ಬೇಸಾಯ ಕ್ರಮಗಳ ಬಗ್ಗೆ ಕಾರ್ಯಾಗಾರ ನಡೆಯಲಿದೆ ಎಂದು ಚೆಟ್ಟಳ್ಳಿ ಕೇಂದ್ರೀಯ ತೋಟಗಾರಿಕಾ ಕೇಂದ್ರದ ಮೇಲ್ವಿಚಾರಕ ಡಾ. ರಾಜೇಂದಿರನ್ ತಿಳಿಸಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರಿನ ಐಸಿಎರ್ – ಐಐಹೆಚ್ ಆರ್ ನ ನಿರ್ದೇಶಕ ಡಾ.ಸಂಜಯ್ ಕುಮಾರ್ ಸಿಂಗ್ ವಹಿಸಲಿದ್ದು, ಮುಖ್ಯಅತಿಥಿಗಳಾಗಿ ಐಸಿಏಅರ್ – ಎನ್ಆರ್ ಸಿಯ ನುರಿತ ತಜ್ಞರು ಹಾಗೂ ನಿರ್ದೇಶಕ ಡಾ.ಬಿಕಾಸ್ ದಾಸ್, ಅತಿಥಿಗಳಾಗಿ ಎಐಸಿಆರ್ ಪಿ ಆನ್ ಫೂಟ್ ಐಸಿಎರ್ – ಐಐಹೆಚ್ ಆರ್ ಬೆಂಗಳೂರಿನ ಪ್ರೋಜೆಕ್ಟ್ ಕೋಡಿನೇಟರ್ ಡಾ.ಪ್ರಕಾಶ್ ಪಾಟಿಲ್, ಪ್ರಗತಿಪರ ಕಾಫಿಬೆಳೆಗಾರ ಹಾಗೂ ಕಾಫಿ ಮಂಡಳಿಯ ಮಾಜಿ ಅಧ್ಯಕ್ಷ ಬೋಸ್ ಮಂದಣ್ಣ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ವಸ್ತುಪ್ರದರ್ಶನ, ಕ್ಷೇತ್ರ ಭೇಟಿ, ರತ-ವಿಜ್ಞಾನಿಗಳ ಸಂವಾದ, ಲಿಚ್ಚಿಯಲ್ಲಿ ಗರ್ಡಲಿಂಗ್ ತಂತ್ರಜ್ಞಾನದ ಮಾಹಿತಿ ಕಾರ್ಯಾಗಾರ ನಡೆಯಲಿದೆ. ಆಫ್…
ಸೋಮವಾರಪೇಟೆ ಡಿ.5 : ಸೋಮವಾರಪೇಟೆ ತಾಲೂಕು ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಎಸ್.ಭಾಗ್ಯ ಅಧಿಕಾರ ಸ್ವೀಕರಿಸಿದರು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ.ಮಂಜೇಶ್ ನೂತನ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ತಾಲ್ಲೂಕು ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ಸೋಮವಾರಪೇಟೆ ಡಿ.5 : ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದ ಮಹಿಳಾ ಸಮಾಜದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಮತ್ತು ಕರ್ನಾಟಕ ಸುವರ್ಣ ಸಂಭ್ರಮ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಯ ಕನ್ನಡ ಭಾಷಾ ಪರೀಕ್ಷೆಯಲ್ಲಿ 125ಕ್ಕೆ 125 ಮತ್ತು ಪಿಯುಸಿಯಲ್ಲಿ 100ಕ್ಕೆ 100 ಅಂಕವನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪಟ್ಟಣದ ಓ.ಎಲ್.ವಿ ಕಾನ್ವೆಂಟ್ನ ವಿದ್ಯಾರ್ಥಿಗಳಾದ ಎಸ್.ಅಶ್ವಿಜಾ ರೈ, ಎಚ್.ಎಲ್. ದಿಶಾ, ಎಂ.ಒ.ದಿವಿನ್, ಕೆ.ಪಿ.ಮೋನಿಷ, ಒ.ಪಿ.ಪ್ರತಿಕ್ಷ, ಪ್ರತೀಕ್ ಜಿ ಶೆಟ್ಟಿ, ಕೆ.ರೋಹನ್, ಬಿ.ಒ.ರೋಶನ್, ಸಹನಾ ಬೆಳ್ಳೂರು, ಎಸ್.ವಿ.ಧನುಷ್, ಮಸಗೋಡು ಚನ್ನಮ್ಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಮೃದು ಪ್ರವೀಣ್, ಎಸ್.ಎಸ್.ನಾಫಿದ, ಶನಿವಾರಸಂತೆ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆಯ ಪಿ.ಎಸ್.ಚಿನ್ಮಯಿ, ಎಸ್.ಕೆ. ಚಿನ್ಮಯ, ಫಾತಿಮಾ ತಶ್ರೀಫ್, ಬಿ.ಜಿ. ಇಂಚರ, ಕೂಡಿಗೆ ಮೊರಾರ್ಜಿ ಶಾಲೆಯ ಜಿ.ಎಲ್. ಭವ್ಯಶ್ರೀ, ಕೊಡ್ಲಿಪೇಟೆ ಶ್ರೀ ಸದಾಶಿವ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ಡಿ.ಎಸ್. ಗಗನ್, ನಿಡ್ತ ಪ್ರೌಢಶಾಲೆಯ ಎಂ.ಎಸ್.ದೀಕ್ಷಿತ, ಎಚ್.ಅಪರ್ಣ, ಕೂಡಿಗೆ ಜ್ಞಾನೋಧಯ ಶಾಲೆಯ ಎನ್.ಎಂ.…
ಬೆಳಗಾವಿ ಡಿ.5 : ಕಾಡಾನೆ ಹಾವಳಿ ನಿಯಂತ್ರಣ ಸಂಬಂಧ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಅವರ ಉಪಸ್ಥಿತಿಯಲ್ಲಿ ಬೆಳಗಾವಿಯ ಸುವರ್ಣಸೌಧದ ಅರಣ್ಯ ಸಚಿವರ ಕೊಠಡಿ ಸಭಾಂಗಣದಲ್ಲಿ ಸಭೆ ನಡೆಯಿತು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶಾಸಕರು ಪಾಲ್ಗೊಂಡಿದ್ದರು. ಕಾಡಾನೆ ಹಾವಳಿ ನಿಯಂತ್ರಣ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಸಿದರು.
ಧರ್ಮಸ್ಥಳ ಡಿ.5 : ಇನ್ನೂರು ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹರಕೆ ಬಯಲಾಟ ಪ್ರದರ್ಶನದ ತಿರುಗಾಟ ಆರಂಭಗೊಂಡಿದೆ. ಇನ್ನು ಮುಂದಿನ 23 ಮೇ 2024ರವರೆಗೆ ಮೇಳದ ಕಲಾವಿದರು ಮೇಳದ ಗಣಪನೊಂದಿಗೆ ಸೇವಾರ್ಥಿಗಳ ಮನೆಗೆ ತೆರಳಿ ಆಧ್ಯಾತ್ಮಿಕ ಮತ್ತು ಧಾರ್ಮಿಕ ಸಂದೇಶವನ್ನು ನೀಡುವ ಪೌರಾಣಿಕ ಪ್ರಸಂಗಗಳನ್ನು ಆಡಿ ತೋರಿಸುತ್ತಾರೆ.
ಕುಶಾಲನಗರ ಡಿ.5 : ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ‘ ವಚನ ಗಾಯನ ಕಾರ್ಯಕ್ರಮ ‘ ವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಆಕರ್ಷಕ ಬಹುಮಾನಗಳನ್ನು ನೀಡಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ವಚನ ಕಾರ್ಯಕ್ರಮದ ಸಂಚಾಲಕ ಕೆ.ಆರ್. ರಮೇಶ್, ಶಿಕ್ಷಕರು 78921 27188 ಇವರ ಬಳಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಮಹಾತ್ಮ ಗಾಂಧಿ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕರೂ ಆದ ವಚನ ಸಾಹಿತ್ಯ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜೇಶ್ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮಡಿಕೇರಿ ಡಿ.5 : ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುತ್ತಾರ್ಮುಡಿ- ಮೂರ್ನಾಡು ರಸ್ತೆಯಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಎಮ್ಮೆಮಾಡು ಗ್ರಾಮದ ನಿವಾಸಿ ಇಬ್ರಾಹಿಂ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇವರಿಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೂರ್ನಾಡು ಕಡೆಯಿಂದ ಮಡಿಕೇರಿಗೆ ಬರುತ್ತಿದ್ದ ಕಾರು ಹಾಗೂ ಮಡಿಕೇರಿ ಕಡೆಯಿಂದ ಮೂರ್ನಾಡು ಮಾರ್ಗವಾಗಿ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ಸಿನ ನಡುವೆ ಅಪಘಾತ ಸಂಭವಿಸಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.






