ಲೇಖಕ: admin

ಮಡಿಕೇರಿ ನ.7 :   ಶ್ರೀ ಧನ್ವಂತರಿ ಜಯಂತಿಯ ದಿನವಾದ ನ.10 ರಂದು ‘ಪ್ರತಿದಿನ ಪ್ರತಿಯೊಬ್ಬರಿಗೂ ಆಯುರ್ವೇದ’ ಘೋಷವಾಕ್ಯದೊಂದಿಗೆ ನಗರದಲ್ಲಿ ‘ರಾಷ್ಟ್ರೀಯ ಆಯುರ್ವೇದ ದಿನ’ವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆಯೆಂದು ನೀಮಾ(ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್) ಕೊಡಗು ಸಂಘಟನೆಯ ಅಧ್ಯಕ್ಷ  ಡಾ. ಎ.ಆರ್.ರಾಜರಾಮ್ ತಿಳಿಸಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದ ಶತಮಾನೋತ್ಸವ ಭವನದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ 7.30 ಕ್ಕೆ ಶ್ರೀ ಧನ್ವಂತರಿ ಪೂಜೆ, ಬೆಳಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯದ ಕೆ.ವಿ.ಜಿ. ಆಯುರ್ವೇದ ಮಹಾ ವಿದ್ಯಾಲಯದ ಸಹಯೋಗದಲ್ಲಿ ಸಾರ್ವಜನನಿಕರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಸಂದರ್ಭ ಆಟೋ ಚಾಲಕರು, ಆರಕ್ಷಕರು ಮತ್ತು ಪತ್ರಿಕಾ ಸಿಬ್ಬಂದಿಗಳು ಮತ್ತು ಅವರ ಕುಟುಂಬಸ್ಥರಿಗೂ ವಿಶೇಷ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿದೆಯೆಂದು ಮಾಹಿತಿಯನ್ನಿತ್ತರು. ಮಕ್ಕಳಿಗೆ ಸ್ಪರ್ಧೆ :  ಆಯುರ್ವೇದ ದಿನಾಚರಣೆ ಪ್ರಯುಕ್ತ ಆಯ್ದ ಶಾಲೆಗಳ 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ‘ಆಯುರ್ವೇದ ಪ್ರಕೃತಿಯ ಕೊಡುಗೆ…

Read More

ಮಡಿಕೇರಿ ನ.7 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟ ಕಾರ್ಯಕ್ರಮವು ನ.12 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ಡಾ.ಪಾರ್ವತಿ ಅಪ್ಪಯ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಪೂರ್ವಾಹ್ನ 10 ಗಂಟೆಗೆ ಕಾಲೇಜಿನ ಆವರಣದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂ ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ಬಿ.ರಾಘವ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಸಭೆಯ ನಂತರ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಏರ್ಪಡಿಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಗುವುದು. ಈಗಾಗಲೇ ರಸಪ್ರಶ್ನೆ, ಪ್ರಬಂಧ ಹಾಗೂ ಪುಸ್ತಕ ವಿಮರ್ಶೆ ಮಾಡುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಅಲ್ಲದೇ ಶಕ್ತಿ ದಿನಪತ್ರಿಕೆಯ ಸಲಹ…

Read More

ಹಾಸನ  ನ.7 :   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರಸಿದ್ಧ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿದರು. ದೇವಿಯ ದರ್ಶನ ಪಡೆದು, ನಾಡಿನ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು ಮತ್ತು ಮುಖಂಡರು  ಹಾಜರಿದ್ದರು.

Read More

ಸೋಮವಾರಪೇಟೆ ನ.7 : ಉದ್ಯೋಗಕ್ಕೆ ಶಿಕ್ಷಣ ಎಷ್ಟು ಮುಖ್ಯವೋ ಹಾಗೆಯೇ ಬದುಕಿಗೆ ಸಾಮಾನ್ಯ ಜ್ಞಾನವೂ ಅಷ್ಟೇ ಮುಖ್ಯ ಎಂದು ಸಾಂದೀಪನಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಲಿಖಿತ್ ದಾಮೋದರ್ ತಿಳಿಸಿದರು. ರಾಮಕೃಷ್ಣ ವಿದ್ಯಾಶಾಲೆ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದ ಸಾಂದೀಪನಿ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಅಂತರ ಶಾಲಾ ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನ ಸ್ಪರ್ಧಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದು ನಾವು ಪ್ರಮುಖವಾಗಿ ಉದ್ಯೋಗಕ್ಕಾಗಿ ಶಿಕ್ಷಣಕ್ಕೆ ಆದ್ಯತೆ ಕೊಡುತ್ತಿದ್ದೇವೆ. ಆದರೆ ಬದುಕಿನಲ್ಲಿ ಸಾಮಾನ್ಯ ಜ್ಞಾನವೆಂಬದು ಇಲ್ಲವಾದರೆ ಜೀವನ ಕಷ್ಟವಾಗುತ್ತದೆ ಎಂದರು. ರಾಮಕೃಷ್ಣ ವಿದ್ಯಾಶಾಲೆ ಆರಂಭಗೊಂಡು 50 ವರ್ಷ ವಾಗಿರುವ ಸಂದರ್ಭ ಅಂದಿನ ಗುರುಗಳಾಗಿದ್ದ ಶಂಭವಾನಂದಜಿ ಅವರ ಜ್ಞಾಪಕಾರ್ಥ ರಾಜ್ಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಾಂತ ಏಕಕಾಲದಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ ಎಂದರು. ರಾಜ್ಯದ 732 ಕೇಂದ್ರಗಳಲ್ಲಿ ಒಟ್ಟು 17241 ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿದ್ದು, ಕೊಡಗು ಜಿಲ್ಲೆಯಲ್ಲಿ 100 ಮಂದಿ ಪಾಲ್ಗೊಂಡಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಪತ್ರಿಕಾ ಭವನದ ಅಧ್ಯಕ್ಷ ಎಸ್.ಮಹೇಶ್…

Read More

ನಾಪೋಕ್ಲು ನ.7 : ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಆರೋಗ್ಯದ ಜೊತೆಗೆ ಮಾನಸಿಕ ಸ್ಥಿತಿ ಉತ್ತಮಗೊಳ್ಳಲು ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲುವಿನ ದಿ ರೋವ್ ಕೂರ್ಗ್ ಮತ್ತು ರಘುರಾಜ್ ಸ್ಪೋರ್ಟ್ಸ್ ಮ್ಯಾನೇಜ್ ಮೆಂಟ್ ವತಿಯಿಂದ ಎರಡು ದಿನಗಳ ಕಾಲ ರೋವ್ ಕೂರ್ಗ್ ನಾಪೋಕ್ಲು ವಿನ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಮುಕ್ತ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಮಾರೋಪ ಸಮಾರಂಭಕ್ಕೂ ಮೊದಲು  ಪಾಲ್ಗೊಂಡು ಅವರು ಮಾತನಾಡಿದರು. ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವಂತಹ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು. ನಾಪೋಕ್ಳು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಮಾತನಾಡಿ, ಶಟಲ್ ಬ್ಯಾಡ್ಮಿಂಟನ್ ಕ್ರೀಡೆಯ ಹುಟ್ಟು ಹಾಗೂ ನಡೆದು ಬಂದ ದಾರಿಯ ಬಗ್ಗೆ ಸವಿಸ್ತಾರವಾಗಿ ಮಾತನಾಡಿ, ಕ್ರೀಡಾಪಟುಗಳಿಗೆ ಇದರ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು ಮುಂದೆ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಲಿ ಎಂದು ಆಶಿಸಿದರು. ಕಾಫಿ ಬೆಳೆಗಾರ ಬಿದ್ದಾಟ0ಡ ಜೀವನ್ ಕಾರ್ಯಪ್ಪ ಮಾತನಾಡಿ, ತಮ್ಮ ಅನಿಸಿಕೆ ವ್ಯಕ್ತಪಡಿಸಿ…

Read More

ಮಡಿಕೇರಿ ನ.7 : ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಕರ್ನಾಟಕ ಪಾನ್ ಇಂಡಿಯಾ ಮಾಸ್ಟರ್ಸ್ ಗೇಮ್ಸ್ ಫೆಡರೇಷನ್ ವತಿಯಿಂದ ಹುಬ್ಬಳ್ಳಿ ಧಾರವಾಡದಲ್ಲಿ ನಡೆದ ಓಪನ್ ನ್ಯಾಷನಲ್ ಮಾಸ್ಟರ್ಸ್ ಗೇಮ್ಸ್ -2023 ರಲ್ಲಿ 100ಮೀ, 200ಮೀ ಮತ್ತು 400ಮೀ ಅಥ್ಲೆಟಿಕ್ ನಲ್ಲಿ ಮಡಿಕೇರಿಯ ಬಿ.ವಸಂತಿ ಅವರು ಪ್ರಥಮ ಸ್ಥಾನ ಗಳಿಸುವ ಮೂಲಕ ಕೊಡಗಿಗೆ ಕೀರ್ತಿ ತಂದಿದ್ದಾರೆ. ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ವಸಂತಿ ಅವರು, ಪ್ರಸ್ತುತ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸೀನಿಯರ್ ನರ್ಸಿಂಗ್ ಆಫೀಸರ್ ಆಗಿ ಸೇವೆಯಲ್ಲಿದ್ದಾರೆ. ಅ.27 ರಿಂದು 29 ರವರೆಗೆ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಕೂಡ ಇವರು ಉತ್ತಮ ಸಾಧನೆ ಮಾಡಿದ್ದಾರೆ.

Read More

ಮಡಿಕೇರಿ ನ.7 :  ಕುಶಾಲನಗರದ ನಂಜರಾಯಪಟ್ಟಣ ಗ್ರಾಮದ ಶ್ರೀ ನಂಜುಡೇಶ್ವರ ದೇವಾಲಯದಲ್ಲಿ ನ.13 ರಿಂದ ಡಿ.12ರ ವರೆಗೆ ಕಾರ್ತಿಕ ಮಾಸಾಚರಣೆ ಜರುಗಲಿದೆ. ಪ್ರತಿ ದಿನ ಸಂಜೆ 6 ಗಂಟೆಗೆ ದೇವರುಗಳಿಗೆ ಅಲಂಕಾರ, 7 ಗಂಟೆಗೆ ದೀಪ ಬೆಳಗುವುದು, 8 ಗಂಟೆಗೆ ಮಂಗಳಾರತಿ, 8.15 ಗಂಟೆಗೆ ತೀರ್ಥ ಪ್ರಸಾದ ವಿತರಣೆ, 8.30 ಗಂಟೆಗೆ ಅನ್ನ ಸಂತರ್ಪಣೆ ನಡೆಯಲಿದೆ. ಮೊದಲ ಮತ್ತು ಅಂತಿಮ ದಿನದ ಪೂಜೆಯನ್ನು ಗ್ರಾಮಸ್ಥರೆಲ್ಲ ಒಗ್ಗೂಡಿ ಆಚರಿಸುವಂತೆಯೂ ಉಳಿದ ದಿನಗಳನ್ನು ಸಮಿತಿಯ ಪದಾಧಿಕಾರಿಗಳು ಮತ್ತು ವೈಯಕ್ತಿಕ ಸಲ್ಲಿಸುವವರಿಗೆ ಮೀಸಲಿರಿಸಲಾಗಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಲಿ ಕೋರಿದೆ. ವೈಯಕ್ತಿಕ ಪೂಜೆ ಸಲ್ಲಿಸುವವರು 9480905471, 8217781254 ಸಂಪರ್ಕಿಸಬಹುದಾಗಿದೆ.

Read More

ಪುತ್ತೂರು ನ.7 : ನಗರದ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯು ಯಶಸ್ವಿಯಾಗಿ ನಡೆಯುತ್ತಿದ್ದು, ಸಾಫ್ಟ್ ವೇರ್ ಕಂಪೆನಿಗಳಾದ ಯುನಿಕೋರ್ಟ್, ಎಕ್ಸಾಲ್ಕಾ ಟೆಕ್ನಾಲಜೀಸ್, ಇನ್ನೋಸಾಲ್ವ್ ಐಟಿ ಗಳಿಗೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ಸೈನ್ಸ್ ಹಾಗೂ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಈ ನೇಮಕಾತಿ ಪ್ರಕ್ರಿಯೆಯು ನಡೆದಿದ್ದು 12 ವಿದ್ಯಾರ್ಥಿಗಳು ಆಯ್ಕೆಗೊಂಡು ನೇಮಕಾತಿ ಆದೇಶವನ್ನು ಪಡೆದುಕೊಂಡಿದ್ದಾರೆ. ಚೈತ್ರ.ಬಿ, ರಾಹುಲ್.ಎಚ್.ರಾಜ್, ಸೀಮಂತ್ ಕುಮಾರ್, ನಿವೀತ.ಬಿ, ಶ್ರಾವ್ಯ.ಎಂ, ಮೆಲಿಟಾ ಪಾಯಸ್, ತ್ರಿಶಾ.ಬಿ.ಭಟ್, ಅನನ್ಯ.ಡಿ.ಆರ್, ಅನ್ವಿತಾ ಸಾವಿತ್ರಿ, ಸಮೀಕ್ಷ, ಅರ್ಪಿತಾ.ಸಿ.ಎಲ್ ಮತ್ತು ಯತಿಕಾ.ಎಂ ಆಯ್ಕೆಗೊಂಡ ವಿದ್ಯಾರ್ಥಿಗಳು ಕಾಲೇಜಿನ ತರಬೇತಿ ಮತ್ತು ನೇಮಕಾತಿ ವಿಭಾಗವು ಅವಿರತವಾಗಿ ಶ್ರಮಿಸುತ್ತಿದ್ದು, ಇನ್ನೂ ಹೆಚ್ಚಿನ ಕಂಪೆನಿಗಳು ನೇಮಕಾತಿಗಾಗಿ ಆಗಮಿಸಲಿವೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು ನ.7 :  ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳಡಿ ರೂ.389 ಕೋಟಿ ಬಿಲ್ ಬಾಕಿ ಇದ್ದು, ಈ ಬಿಲ್ ಬಾಕಿಯನ್ನು ನಮ್ಮ ಸರ್ಕಾರ  ಮನ್ನಾ ಮಾಡಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಾಕಿಯಿಂದಾಗಿ ಈ ಯೋಜನೆಗಳ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪೂರೈಸಲು ತೊಂದರೆ ಆಗುತ್ತಿತ್ತು. ಆದ್ದರಿಂದ ನಮ್ಮ ಸರ್ಕಾರವು ಬಾಕಿ ಮೊತ್ತವನ್ನು ಮನ್ನಾ ಮಾಡುವ ಮೂಲಕ ಕುಟುಂಬಗಳ ಮೇಲಿದ್ದ ಆರ್ಥಿಕ ಹೊರೆಯನ್ನು ಇಳಿಸಿದೆ ಎಂದು ಹೇಳಿದರು. ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ ಹಿಂದೆ 18 ಯೂನಿಟ್‍ಗಳ ಮಿತಿಯಿತ್ತು. ಅದನ್ನು 40 ಯೂನಿಟ್‍ಗಳಿಗೆ ನಮ್ಮ ಸರ್ಕಾರ ಹೆಚ್ಚಳ ಮಾಡಿತ್ತು. ಈಗ ಗೃಹಜ್ಯೋತಿ ಯೋಜನೆ ಜಾರಿಯ ನಂತರ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿಗಳನ್ನು ಈ ಯೋಜನೆಯಡಿ ಸೇರಿಸಿ, 58 ಯೂನಿಟ್‍ವರಗೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದರು.

Read More

ಸೋಮವಾರಪೇಟೆ ನ.7 : ಕೃಷಿ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ತುಂತುರು ನೀರಾವರಿ ಘಟಕಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಹ ರೈತರು ಅರ್ಜಿ ಸಲ್ಲಿಸುವಂತೆ ಕೃಷಿ ಇಲಾಖೆ ತಿಳಿಸಿದೆ. ಕೃಷಿ ಪರಿಕರಗಳಾದ ಕಳೆಕೊಚ್ಚುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಟೇಯರ್‍ಗಳಿಗೆ ಪಿಎಂಕೆಎಸ್‍ವೈ -1 ಯೋಜನೆಯಡಿ ಅರ್ಜಿಗಳನ್ನು ತಮ್ಮ ಸ್ಥಳಕ್ಕೆ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಿಗೆ ನೀಡಬಹುದಾಗಿದೆ. ತುಂತುರು ನೀರಾವರಿ ಘಟಕಗಳನ್ನ ಅಳವಡಿಸಿರುವ ರೈತರು, ಹೊಸದಾಗಿ ಕೊಳವೆ ಬಾವಿಗಳನ್ನು ಕೃಷಿಹೊಂಡಗಳನ್ನು ತೆಗೆಯಲು ಇಲಾಖೆಯಿಂದ ಶೇ.50ರ ವರೆಗೆ ಸಹಾಯಧನವನ್ನು ನೀಡಲಾಗುವುದು ಎಂದು ಇಲಾಖೆಯ ಸಹಾಯಕ ನಿರ್ದೇಶಕ ಯಾದವ್ ಬಾಬು ತಿಳಿಸಿದ್ದಾರೆ.

Read More