ಧರ್ಮಸ್ಥಳ ಡಿ.5 : ಇನ್ನೂರು ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹರಕೆ ಬಯಲಾಟ ಪ್ರದರ್ಶನದ ತಿರುಗಾಟ ಆರಂಭಗೊಂಡಿದೆ. ಇನ್ನು ಮುಂದಿನ 23 ಮೇ 2024ರವರೆಗೆ ಮೇಳದ ಕಲಾವಿದರು ಮೇಳದ ಗಣಪನೊಂದಿಗೆ ಸೇವಾರ್ಥಿಗಳ ಮನೆಗೆ ತೆರಳಿ ಆಧ್ಯಾತ್ಮಿಕ ಮತ್ತು ಧಾರ್ಮಿಕ ಸಂದೇಶವನ್ನು ನೀಡುವ ಪೌರಾಣಿಕ ಪ್ರಸಂಗಗಳನ್ನು ಆಡಿ ತೋರಿಸುತ್ತಾರೆ.
ಲೇಖಕ: admin
ಕುಶಾಲನಗರ ಡಿ.5 : ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ‘ ವಚನ ಗಾಯನ ಕಾರ್ಯಕ್ರಮ ‘ ವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಆಕರ್ಷಕ ಬಹುಮಾನಗಳನ್ನು ನೀಡಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ವಚನ ಕಾರ್ಯಕ್ರಮದ ಸಂಚಾಲಕ ಕೆ.ಆರ್. ರಮೇಶ್, ಶಿಕ್ಷಕರು 78921 27188 ಇವರ ಬಳಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಮಹಾತ್ಮ ಗಾಂಧಿ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕರೂ ಆದ ವಚನ ಸಾಹಿತ್ಯ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜೇಶ್ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮಡಿಕೇರಿ ಡಿ.5 : ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುತ್ತಾರ್ಮುಡಿ- ಮೂರ್ನಾಡು ರಸ್ತೆಯಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಎಮ್ಮೆಮಾಡು ಗ್ರಾಮದ ನಿವಾಸಿ ಇಬ್ರಾಹಿಂ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇವರಿಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೂರ್ನಾಡು ಕಡೆಯಿಂದ ಮಡಿಕೇರಿಗೆ ಬರುತ್ತಿದ್ದ ಕಾರು ಹಾಗೂ ಮಡಿಕೇರಿ ಕಡೆಯಿಂದ ಮೂರ್ನಾಡು ಮಾರ್ಗವಾಗಿ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ಸಿನ ನಡುವೆ ಅಪಘಾತ ಸಂಭವಿಸಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಡಿ.5 : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ವಿರಾಜಪೇಟೆ ಪೊಲೀಸರು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ. ವಿರಾಜಪೇಟೆಯ ಕಡಂಗಮರೂರು ಗ್ರಾಮದ ನಿವಾಸಿ, ಅಸ್ಸಾಂ ಮೂಲದ ಅಬ್ದುಲ್ ಮಜೀದ್ (31) ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ 300 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ. ಕಡಂಗಮರೂರು-ಬೊಳ್ಳುಮಾಡು ಜಂಕ್ಷನ್ ಬಳಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು. ವಿರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ಮೋಹನ್ ಕುಮಾರ್, ಸಿಪಿಐ ಬಿ.ಎಸ್.ಶಿವರುದ್ರ, ಪಿಎಸ್ಐ ಸಿ.ಸಿ.ಮಂಜುನಾಥ, ಬಿ.ಎಸ್.ವಾಣಿಶ್ರೀ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಪ್ರಕರಣದಲ್ಲಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
ಬೆಂಗಳೂರು ಡಿ.5 : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಐತಿಹಾಸಿಕ ಮೈಸೂರು ದಸರಾದ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಎಂಟು ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ ಆನೆ ‘ಅರ್ಜುನ’ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು. ಬರೋಬ್ಬರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು, ಅತ್ಯಂತ ಸಂಯಮದಿಂದ ಮೆರವಣಿಗೆಯಲ್ಲಿ ಸಾಗುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಅರ್ಜುನ ಕಾಡಾನೆ ಜೊತೆಗಿನ ಕಾದಾಟದಲ್ಲಿ ಮೃತಪಟ್ಟಿದೆ. ಲಕ್ಷಾಂತರ ಜನರ ನಡುವೆ ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಡಿ.5 : ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೂ. 50 ರೂ ಪರಿಹಾರ ಧನ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಬೆಂಗಳೂರಿಗೆ ಬಂದಾಗ ಅವರಿಗೆ ನಮನ ಸಲ್ಲಿಸಿದ ಸಂದರ್ಭದಲ್ಲಿ 50 ಲಕ್ಷ ರಾಜ್ಯ ಸರ್ಕಾರದ ಪರಿಹಾರ ಧನ ಘೋಷಣೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದರು. ಇದೀಗ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸಿದ್ದರಾಮಯ್ಯ ಅವರು, ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ…
ಮಡಿಕೇರಿ ಡಿ.5 : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಂತಾಪ ವ್ಯಕ್ತಪಡಿಸಿದ್ದಾರೆ. ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಫಾರೆಸ್ಟ್ನಲ್ಲಿ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವಿಗೀಡಾದ ಸಂಗತಿ ತಿಳಿದು ದುಃಖವಾಗಿದೆ. ಒಂದು ಕಾಲದಲ್ಲಿ ಮೈಸೂರು ದಸರಾದ ಕೇಂದ್ರಬಿಂದುವಾಗಿದ್ದ ಅರ್ಜುನ ನಮ್ಮೆಲ್ಲರ ಹೃದಯದಲ್ಲಿ ಮರೆಯಲಾರದ ನೆನಪುಗಳನ್ನು ಬಿಟ್ಟುಹೋಗಿದ್ದಾನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಡಿ.4 : ಮಾಯಮುಡಿಯ ಐರನ್ ಸೈಟ್ ಶೂಟರ್ಸ್ ಸಂಸ್ಥೆ ವತಿಯಿಂದ ಹುತ್ತರಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ತೋಕ್ ನಮ್ಮೆ ಮತ್ತು 4ನೇ ವರ್ಷದ ರಾಜ್ಯ ಮಟ್ಟದ ಶೂಟಿಂಗ್ ಸ್ಪರ್ಧೆಯನ್ನು ಮಾಯಮುಡಿಯ ಸರಕಾರಿ ಹಿರಿಯ ಪ್ರಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದು, ಸ್ಪರ್ಧೆಗೆ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿದೆ ಎಂದು ಸಂಸ್ಥೆಯ ಮುಖ್ಯಸ್ಥ ಆಪಟ್ಟೀರ ಆರ್.ಅಯ್ಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕಾವೇರಿ ಅಸೋಸಿಯೇಷನ್ ಕೋಲುಬಾಣೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಾಯಮುಡಿ, ಕಂಗಳತ್ತು ನಾಡು ಕಾವೇರಿ ಯುವ ಸಂಘ, ಮಾಯಮುಡಿ ಮಹಿಳಾ ಸಮಾಜ, ಗೋಣಿಕೊಪ್ಪ ಕಾವೇರಿ ಪೊಮ್ಮಕ್ಕಡ ಕೂಟ, ಕೊಡಗು ಜಾವಾ ಯೆಜ್ಡಿ ಮೋಟರ್ ಸೈಕಲ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಶೂಟಿಂಗ್ ಸ್ವರ್ಧೆಯಲ್ಲಿ 50 ಮೀ. ಅಂತರದಲ್ಲಿ 0.22 ರೈಫಲ್ ಮೂಲಕ, 30 ಮೀ. ಅಂತರದಲ್ಲಿ 12 ಬೋರ್ ಕೋವಿಯ ಮೂಲಕ ಹಾಗೂ 0.22 ನಲ್ಲಿ 30 ಮೀ. ಕೋಳಿ ಮೊಟ್ಟೆಗೆ ಗುರಿ ಇಟ್ಟು ಗುಂಡು…
ಮಡಿಕೇರಿ ಡಿ.4 : ನೀರು ಗಂಟಿಯೊಬ್ಬರ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ಮಡಿಕೇರಿ ನಗರಸಭೆಯ ಸದಸ್ಯ ಉಮೇಶ್ ಸುಬ್ರಮಣಿ ಅವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ.3ರ ರಾತ್ರಿ ಈ ಘಟನೆ ನಡೆದಿದ್ದು, ನೀರು ಗಂಟಿ ಅನಿಲ್ ಕುಮಾರ್ ಅವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇವರು ನೀಡಿರುವ ದೂರಿನ ಹಿನ್ನೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮದುವೆ ಮನೆಯೊಂದರ ಸಮಾರಂಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಉಮೇಶ್ ಸುಬ್ರಮಣಿ ಅವರು ನನ್ನ ಹಣೆಗೆ ಹಲ್ಲೆ ಮಾಡಿದಲ್ಲದೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮಡಿಕೇರಿ ಡಿ.4 : ಪೊನ್ನಂಪೇಟೆ 66/11 ಕೆವಿ ಮತ್ತು ಶ್ರೀಮಂಗಲ 33/11 ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ಡಿಸೆಂಬರ್, 06 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ಹರಿಶ್ಚಂದ್ರಪುರ, ರಾಜಾಪುರ, ಮಳ್ಳೂರು, ನಿಟ್ಟೂರು, ಕೊಟ್ಟಗೇರಿ, ಬಿಳೂರು, ದೇವನೂರು ನಲ್ಲೂರು, ಹೆಬ್ಬಾಲೆ, ಹರಿಹರ, ಕುಮೂಟೂರು, ನೋಖ್ಯ, ಮಾಯಾಮುಡಿ, ಬಾಳೆಲೆ ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಕಾನೂರು, ಕುಟ್ಟ, ಕೆ.ಕೆ.ಆರ್, ಟೀ ಎಸ್ಟೇಟ್, ತೆರಾಲು, ಪರಕಟಕೇರಿ ಬಿರುನಾಣಿ, ಬಾಡಗರಕೇರಿ, ನೆಮ್ಮಲೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಇಇ ಅನಿತಾ ಬಾಯಿ ಕೋರಿದ್ದಾರೆ.






