ಲೇಖಕ: admin

ಕುಶಾಲನಗರ ನ.29 NEWS DESK : ಕುಶಾಲನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಸರಕಾರಿ ಬಸ್ ನಿಲ್ದಾಣ ಆವರಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕನ್ನಡ ರಾಜ್ಯೋತ್ಸವನ್ನು ಉದ್ಯಮಿ ಹಾಗೂ ಆಟೋ ಚಾಲಕರ ಸಂಘದ ಕಟ್ಟಡಕ್ಕೆ ಸ್ಥಳ ದಾನಿಗಳಾದ ವಿ.ಎನ್.ತೇಜಸ್ ನಾಗೇಶ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರತಿಯೊಬ್ಬರೂ ಕನ್ನಡ ಭಾಷೆ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕು. ಮನೆ ಮನದಲ್ಲಿ ಕನ್ನಡ ಭಾಷೆ ಬೆಳವಣಿಗೆಗೆ ಹೆಚ್ಚಿನ ಗಮನ ಹರಿಸಬೇಕು ಎಂದರು. ಕುಶಾಲನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಕೃಷ್ಣದರ್ಶನ್ ಅಧ್ಯಕ್ಷತೆ ವಹಿಸಿದ್ದರು. ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಗೌಡ, ಖಜಾಂಚಿ ಮುನೀರ್, ಮಾಜಿ ಕಾರ್ಯದರ್ಶಿ ಮೂರ್ತಿ, ಮಂಜು ಬೆಳ್ಳುಳ್ಳಿ, ಕಾರು ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ಉದಯಕುಮಾರ್, ಲಾರಿ ಟ್ರಾನ್ಸ್ ಸ್ಪೋರ್ಟ್ಸ್ ಮಾಲೀಕರ ಸಂಘದ…

Read More

ಗೋಣಿಕೊಪ್ಪ ನ.29 NEWS DESK : ಪತ್ರಿಕೆಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಪತ್ರಕರ್ತ ಜಗದೀಶ್ ಜೋಡುಬೀಟಿ ಹೇಳಿದರು. ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ, ಗೋಣಿಕೊಪ್ಪಲು ಕಾವೇರಿ ಕಾಲೇಜು ಎನ್.ಎಸ್.ಎಸ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ವಾರ್ಷಿಕ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪತ್ರಿಕಾ ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಯುವಜನತೆ ಎಂಬ ವಿಷಯದ ಬಗ್ಗೆ ಮಾತನಾಡಿದ ಅವರು, ಪತ್ರಿಕೆಗಳು ವಿಶ್ವಾಸಾರ್ಹ ಮಾಹಿತಿಯ ಮೂಲವಾಗಿದ್ದು, ಯುವ ಜನರಿಗೆ ವಿಭಿನ್ನ ವಿಷಯಗಳ ಬಗ್ಗೆ ತಿಳುವಳಿಕೆಯನ್ನು ನೀಡುತ್ತವೆ. ಪತ್ರಿಕೆಗಳನ್ನ ಹೆಚ್ಚು ಹೆಚ್ಚು ಓದುವುದರಿಂದ ಜ್ಞಾನ ಬಂಡಾರವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸುಗಳಿಸಲು ಸಾಧ್ಯವಾಗುತ್ತದೆ. ಆದರೆ ಇಂದಿನ ಯುವಜನತೆ ಪತ್ರಿಕೆ ಹಾಗೂ ಪುಸ್ತಕ ಓದುವುದನ್ನು ಕಡಿಮೆ ಮಾಡಿ, ಮೊಬೈಲ್ ಫೋನ್ ಕಡೆಗೆ ಆಕರ್ಷಿತರಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಮಯ ಕಳೆಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ತಮ್ಮ ಓದಿಕೆ ಪೂರಕವಾಗಿ, ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಲು ಹಿತಮಿತವಾಗಿ ಬಳಸಿಕೊಳ್ಳಬೇಕು.…

Read More

ಮಡಿಕೇರಿ ನ.29 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನ.30 ರಂದು ಬೆಳಗ್ಗೆ 9.30 ಗಂಟೆಗೆ 2024 ನೇ ವರ್ಷದ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಡಾ.ಯು.ಟಿ.ಖಾದರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವರಾದ ಡಿ.ವಿ.ಸದಾನಂದ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕಸರಾದ ಡಾ.ಮಂತರ್ ಗೌಡ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉದಯ್ ಬಿ.ಗರುಡಾಚಾರ್, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ…

Read More

ಮಡಿಕೇರಿ ನ.29 NEWS DESK : ಶನಿವಾರಸಂತೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ F3-ಶನಿವಾರಸಂತೆ ಟೌನ್ ಫೀಡರ್‌ನಲ್ಲಿ ನ.30 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಸದರಿ ಫೀಡರ್‌ನಿಂದ ಹೊರಹೊಮ್ಮುವ ಶನಿವಾರಸಂತೆ ಪಟ್ಟಣ, ಗುಡುಗಳಲೆ, ಕೆ.ಆರ್.ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್  ಕೋರಿದ್ದಾರೆ.

Read More

ಕುಶಾಲನಗರ ನ.29 NEWS DESK : ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕೂಡಲೇ ಮುಖ್ಯಮಂತ್ರಿಯಾಗಿ ಘೋಷಿಸಬೇಕೆಂದು ಒತ್ತಾಯಿಸಿ ಕುಶಾಲನಗರ ತಾಲ್ಲೂಕಿನ ಒಕ್ಕಲಿಗರ ಸಮಾಜದಿಂದ ಒಕ್ಕೊರಲಿನಿಂದ ಒತ್ತಾಯದೊಂದಿಗೆ ಜಯಕಾರಗಳು ಮೊಳಗಿದವು. ತೊರೆನೂರು ಒಕ್ಕಲಿಗರ ಸಮಾಜದ ಅಧ್ಯಕ್ಷ ಟಿ.ಪಿ.ಸೋಮಶೇಖರ್ ಅವರ ನೇತೃತ್ವದಲ್ಲಿ ಗ್ರಾಮದ ಬಸವೇಶ್ವರ ದೇವಾಲಯದ ಬಳಿ ಜಮಾವಣೆಗೊಂಡ ಸಮಾಜ ಬಾಂಧವರು ಹಾಗೂ ಡಿಕೆಶಿ ಅಭಿಮಾನಿಗಳು ಡಿಕೆಶಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.  ಬಳಿಕ ಭಾವಚಿತ್ರ ಹಿಡಿದು ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸುವ ಮೂಲಕ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾವೇರಿ ತಾಯಿ ಹರಸಲಿ. ಶೀಘ್ರದಲ್ಲಿಯೇ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಘೋಷಣೆಯಾಗಲಿ ಎಂದು ಒತ್ತಾಯಿಸಲಾಯಿತು. ಈ ಸಂದರ್ಭ ಮಾತನಾಡಿದ ಸಮಾಜದ ಅಧ್ಯಕ್ಷ ಸೋಮಶೇಖರ್, 2023 ರ ಚುನಾವಣೆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರ ಅವಿರತ ಶ್ರಮದ ಫಲವಾಗಿ ರಾಜ್ಯದಲ್ಲಿ ಹಿಂದೆಂದು ಕೇಳಿರದಂತಹ 136 ಸೀಟುಗಳು ಬರುವ ಮೂಲಕ ಕಾಂಗ್ರೆಸ್ ಬಹುಮತಗಳಿಂದ ಅಧಿಕಾರಕ್ಕೆ ಬಂತು. ದೈವಭಕ್ತ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಶ್ರಮದಿಂದಾಗಿ ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿ ಇರುವ ಒಕ್ಕಲಿಗರು ಡಿ.ಕೆ.ಶಿವಕುಮಾರ್…

Read More

ಕುಶಾಲನಗರ ನ.29 NEWS DESK : ಪ್ರಸಕ್ತ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಹೊಸದಾಗಿ ಜಾರಿಗೆ ತಂದಿರುವ ಪಠ್ಯಾಧಾರಿತ ಮೌಲ್ಯಾಂಕವನ್ನು ಚಾಚು ತಪ್ಪದೇ ಪರಿಪಾಲಿಸುವ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಪ್ರೌಢಶಾಲಾ ಶಿಕ್ಷಕರು ವಿಶೇಷ ಕಾಳಜಿ ವಹಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಕರೆ ನೀಡಿದರು. ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶುಕ್ರವಾರ ತಾಲ್ಲೂಕಿನ ಪ್ರೌಢಶಾಲಾ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಶಿಕ್ಷಕರಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶವನ್ನು ಸುಧಾರಿಸುವ ಕುರಿತಂತೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶಾಲಾ ಶಿಕ್ಷಣ ಇಲಾಖೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಿರುವ ಪಠ್ಯಾಧಾರಿತ ಮೌಲ್ಯಾಂಕ( ಎಲ್.ಬಿ.ಎ.) ಬೋಧನೆ ಮೂಲಕ ಮಕ್ಕಳ ಕಲಿಕಾ ಪ್ರಗತಿಯ ಉನ್ನತೀಕರಣಕ್ಕೆ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು ಎಂದರು. ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ರಶ್ಮಿ ಮಹೇಶ್ ಅವರ…

Read More

ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನವು ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದಲ್ಲಿದೆ. ತೇತ್ರಾಯುಗದ ಕ್ಷತ್ರಿಯ ಸಂಹಾರಕ ಭಗವಾನ್ ಪರಶುರಾಮರು ತನ್ನ ಕೊಡಲಿಯನ್ನೆಸೆದು ಸೃಷ್ಟಿಸಿದ ಪವಿತ್ರ ಸ್ಥಳ. ಈ ತುಳು ನಾಡಿನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ದೇವರಗುಡ್ಡೆ ಎಂಬ ಎತ್ತರವಾದ ಗುಡ್ಡದಲ್ಲಿರುವ ಶ್ರೀ ಕ್ಷೇತ್ರದಲ್ಲಿ “ಅಂಬಾ(ಪಾರ್ವತಿ)ಗಣಪತಿ” ಸಮೇತರಾಗಿ ‘ಶಿವ ದೇವರು’ ನೆಲೆಸಿರುವುದರಿಂದ “ಸಾಂಬಸದಾಶಿವ” ಎಂಬ ಹೆಸರಿನಿಂದ ಆರಾಧಿಸಲ್ಪಡುತ್ತಿದ್ದು, ಶ್ರೀ ಕ್ಷೇತ್ರವು ಕಾರಣಿಕ ಹಿನ್ನಲೆಯುಳ್ಳ ಪರಮ ಪವಿತ್ರ ಕ್ಷೇತ್ರವಾಗಿದೆ.  :: ಇತಿಹಾಸ ::  ಸಾವಿರಾರು ವರ್ಷಗಳ ಹಿಂದೆ ಭಗವಾನ್ ಪರಶುರಾಮ ದೇವರು ಈ ಎತ್ತರವಾದ ಗುಡ್ಡ ಪ್ರದೇಶದಲ್ಲಿ ತಪಸ್ಸನ್ನಾಚರಿಸಿದರು. ತದನಂತರ ಋಷಿಮುನಿಗಳು ಈ ಪ್ರದೇಶದಲ್ಲಿ ಹಲವು ಕಾಲ ಯಾಗ, ಯಜ್ಞ, ತಪಸ್ಸುಗಳನ್ನು ಮಾಡಿದ ತಪೋಭೂಮಿಯಾಯಿತು. ನಂತರದ ಕಾಲದಲ್ಲಿ ಇಲ್ಲಿಯ ಮೂಲ ನಿವಾಸಿಗಳು ತಮಗೆ ಬಂದ ತೊಂದರೆಗಳನ್ನು ಕಂಡು, ಈ ಪ್ರದೇಶದಲ್ಲಿ ದೈವಿ ಶಕ್ತಿಯಿದೆಯೆಂದು ತಿಳಿದು ತಮ್ಮದೇ ರೀತಿಯಲ್ಲಿ ದೇವಿ ಶಕ್ತಿ/ಕಾಳಿಶಕ್ತಿಯನ್ನು ಪೂಜಿಸಿ ಆರಾಧಿಸಿಕೊಂಡು ಬಂದಿದ್ದರು. ತದನಂತರ ರಾಜ ಮಹಾರಾಜರ ಆಳ್ವಿಕೆಯ…

Read More

ಮಡಿಕೇರಿ ನ.29 NEWS DESK : ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಸಮಗ್ರ ಗ್ರಾಮೀಣ ಅಭಿವೃದ್ಧಿಯಲ್ಲಿ ಸಹಕಾರ ಚಳವಳಿಯ ಪಾತ್ರ’ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಸಹಕಾರಿ ವ್ಯವಸ್ಥೆಯ ಸಾಧನೆ, ವೈಫಲ್ಯಗಳ ಪರಾಮರ್ಶೆಯಿಂದ ಮಾತ್ರವೇ ಸಹಕಾರಾಭಿವೃದ್ಧಿ ಬಲಗೊಳ್ಳಲು ಸಾಧ್ಯ’ ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಿತು.  ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಪ್ರಬಂಧವನ್ನು ಮಂಡಿಸಿದರು. ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಷಯದ ಕುರಿತಾಗಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಚರ್ಚಾ ಸ್ಪರ್ಧೆ ಕಾಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಯು.ರಾಬಿನ್ ದೇವಯ್ಯ ಮಾತನಾಡಿ, ಸಹಕಾರ ಚಳುವಳಿಯಲ್ಲಿ ಕರ್ನಾಟಕದ ಕೊಡುಗೆ ಮಹತ್ತರವಾಗಿದೆ. 1905 ರಲ್ಲಿ ರಾಜ್ಯದ ಗದಗ ಜಿಲ್ಲೆಯ ಕಣಗಿನಹಾಳ ಗ್ರಾಮದಲ್ಲಿ ಪ್ರಾರಂಭವಾದ ಕೃಷಿ ಪತ್ತಿನ ಸಹಕಾರ ಸಂಘ ದೇಶದಲ್ಲಷ್ಟೇ ಅಲ್ಲ ಏಷ್ಯಾ ಖಂಡದಲ್ಲಿಯೇ ಪ್ರಥಮ ಸಂಘವಾಗಿದೆ. ಕೊಡಗು ಜಿಲ್ಲೆಯು ತನ್ನದೇ ಆದ…

Read More

ಬೇಕಾಗುವ ಸಾಮಾಗ್ರಿಗಳು ::  ದೋಸೆ ಅಕ್ಕಿ- 2 ಬಟ್ಟಲು, ಬೆಲ್ಲ- 1.5 ಬಟ್ಟಲು, ಕಪ್ಪು ಎಳ್ಳು- 2 ಚಮಚ,  ಏಲಕ್ಕಿ- ಚಿಟಿಕೆ, ಮೈದಾ- 3 ಟೀ ಚಮಚ, ತುಪ್ಪ- 3 ಚಮಚ, ತೆಂಗಿನತುರಿ- 2 ಚಮಚ, ಉಪ್ಪು- ರುಚಿಗೆ ತಕ್ಕಷ್ಟು, ಅಡುಗೆ ಸೋಡಾ- ಚಿಟಿಕೆ. ಮಾಡುವ ವಿಧಾನ ::  ಮೊದಲಿಗೆ ದೋಸೆ ಅಕ್ಕಿಯನ್ನು ಚೆನ್ನಾಗಿ ತೊಳೆದು, ನೀರು ಹಾಕಿ 5 ಗಂಟೆಗಳ ನೆನೆಯಲು ಬಿಡಿ. ನಂತರ ಮಿಕ್ಸಿ ಜಾರಿಗೆ ಅಕ್ಕಿ, ಸೋಸಿದ ಬೆಲ್ಲ, ಚಿಟಿಕೆ ಉಪ್ಪು ಹಾಗೂ ಏಲಕ್ಕಿ ಹಾಕಿ ರುಬ್ಬಿಕೊಳ್ಳಿ. ಬಳಿಕ ಈ ಹಿಟ್ಟಿಗೆ ಕಪ್ಪು ಎಳ್ಳು ಹಾಗೂ ಮೈದಾ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ತೆಂಗಿನತುರಿಯನ್ನು ತುಪ್ಪದಲ್ಲಿ ಹುರಿಯಿರಿ. ರುಬ್ಬಿದ ಹಿಟ್ಟಿಗೆ ತೆಂಗಿನ ತುರಿ ಹಾಕಿ ಮಿಶ್ರಣ ಮಡಿ, 7 ರಿಂದ 8 ಗಂಟೆ ಕಾಲ ಹಾಗೆ ಇಡಿ. ಹಿಟ್ಟು ದೋಸೆ ಹಿಟ್ಟಿನ ಹದಕ್ಕಿಂತ ಸ್ವಲ್ಪ ತೆಳ್ಳಗಿರಲಿ. ಒಂದು ಬಾಣಲೆಯನ್ನು ಒಲೆಯ ಮೇಲಿಟ್ಟು ಎಣ್ಣೆ ಹಾಕಿ ಈ ವೇಳೆ…

Read More

ಪಣಜಿ ನ.29 NEWS DESK : ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದ 550ನೇ ವರ್ಷಾಚರಣೆಯ ಅಂಗವಾಗಿ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗೋವಾದಲ್ಲಿ ವಿಶ್ವದ ಅತಿ ಎತ್ತರದ ಶ್ರೀರಾಮನ 77 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ದಕ್ಷಿಣ ಗೋವಾದ ಪರ್ತಗಲಿಯಲ್ಲಿರುವ ಮಠದ ದೇವಾಲಯಕ್ಕೂ ಪಧಾನಿ ಮೋದಿ ಭೇಟಿ ನೀಡಿದರು. ಈ ಮಠವು ಭಾರತದ ಅತ್ಯಂತ ಹಳೆಯ ಮಠಗಳಲ್ಲಿ ಒಂದಾಗಿದ್ದು, ಇದು ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕೊಡುಗೆಗಳಿಗೆ ಹೆಸರುವಾಸಿಯಾಗಿದೆ ಮತ್ತು ಸಾರಸ್ವತ ಸಮುದಾಯದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ. ಗುಜರಾತ್‌ನಲ್ಲಿ ಏಕತಾ ಪ್ರತಿಮೆ ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ಅವರೇ ಈ ಶ್ರೀರಾಮನ ಪ್ರತಿಮೆಯನ್ನು ನಿರ್ಮಿಸಿದ್ದಾರೆ ಎಂದು ಗೋವಾ ಲೋಕೋಪಯೋಗಿ ಇಲಾಖೆ ಸಚಿವ ದಿಗಂಬರ ಕಾಮತ್ ಹೇಳಿದ್ದಾರೆ. ಇದು ಶ್ರೀರಾಮನ ವಿಶ್ವದ ಅತಿ ಎತ್ತರದ ಪ್ರತಿಮೆಯಾಗಿದೆ. ಗೋವಾ ರಾಜ್ಯಪಾಲ ಅಶೋಕ್ ಗಜಪತಿ ರಾಜು ಮತ್ತು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Read More