ಸೋಮವಾರಪೇಟೆ ನ.7 : ಶಿಥಿಲಾವಸ್ಥೆಯಲ್ಲಿರುವ ಕಕ್ಕೆಹೊಳೆಯ ಹಳೆ ಸೇತುವೆ ಕಾಮಗಾರಿಯನ್ನು ತಕ್ಷಣ ಪ್ರಾರಂಭಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣ ವೇದಿಕೆ ಪ್ರತಿಭಟನೆ ನಡೆಸಿತು. ಸೇತುವೆ ಬಳಿ ಜಮಾಯಿಸಿದ ವೇದಿಕೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ತಿಂಗಳ ಒಳಗೆ ಸೇತುವೆ ಕಾಮಗಾರಿ ಪ್ರಾರಂಭಿಸದಿದ್ದರೆ ಸೋಮವಾರಪೇಟೆ, ಮಡಿಕೇರಿ ರಸ್ತೆ ತಡೆದು ಪ್ರತಿಭಟಿಸುವುದಾಗಿ ಎಚ್ಚರಿಸಿದರು. ಘಟಕದ ತಾಲ್ಲೂಕು ಅಧ್ಯಕ್ಷ ಕೆ.ಎನ್.ದೀಪಕ್ ಮಾತನಾಡಿ, ಕುಸಿಯುವ ಹಂತ ತಲುಪಿದ್ದ ಸಂದರ್ಭ ಸಂಚಾರ ಬಂದ್ ಮಾಡಿ 5 ತಿಂಗಳು ಕಳೆದರೂ ಇದುವರೆಗೂ ಸೇತುವೆ ಕಾಮಗಾರಿ ಪ್ರಾರಂಭಿಸಿಲ್ಲ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸುಳ್ಳು ಹೇಳಿಕೊಂಡೇ ತಿರುಗುತ್ತಿದ್ದಾರೆ ಎಂದು ಆರೋಪಿಸಿದರು. 5 ದಶಕಗಳ ಹಳೆಯದಾದ ಸೇತುವೆ ಇದಾಗಿದ್ದು, ಅತೀ ಹೆಚ್ಚು ವಿದ್ಯಾರ್ಥಿಗಳು ಬೆಳಿಗ್ಗೆ ಸಂಜೆ ಇದೇ ಸೇತುವೆ ಮೇಲೆ ನಡೆದುಕೊಂಡು ಹೋಗುತ್ತಾರೆ. ನೂರಾರು ವಾಹನಗಳು ಸಂಚರಿಸುತ್ತವೆ. ಆದರೆ ಇದುವರೆಗೆ ಈ ಸೇತುವೆ ನಿರ್ಮಾಣ ಮಾಡಲು ಲೋಕೋಪಯೋಗಿ ಇಲಾಖೆಗೆ ಸಾಧ್ಯವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ 5 ತಿಂಗಳಿನಿಂದ ಬದಲಿ ಮಾರ್ಗ ಕಲ್ಪಿಸಲಾಗಿದೆ. ಈ ಮಾರ್ಗ ಸೂಕ್ತವಾಗಿಲ್ಲ.…
ಲೇಖಕ: admin
ಬೆಂಗಳೂರು ನ.7 : ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ಸೋಮವಾರ ರಾತ್ರಿ ನಿಧನರಾಗಿದ್ದು, ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ(ನವೆಂಬರ್ 08) ನಾಳೆ ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮೂರು ಬಾರಿ ಶಾಸಕರಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಚಂದ್ರೇಗೌಡ, ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಕಾನೂನು ಸಚಿವರು ಹಾಗೂ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಇನ್ನು ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ, ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು. ಬಳಿಕ ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಸಂತಾಪ :: ಡಿ.ಬಿ.ಚಂದ್ರೇಗೌಡ ನಿಧನಕ್ಕೆ ವಿವಿಧ ಪಕ್ಷಗಳ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ ಸಿಎಂ ಬಿಎಸ್ ಬೊಮ್ಮಾಯಿ ಟ್ವಿಟರ್ ಮೂಲಕ…
ಮಡಿಕೇರಿ ನ.7 : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ. ಸುಂಟಿಕೊಪ್ಪ ಮದುರಮ್ಮ ಬಡಾವಣೆ ನಿವಾಸಿಗಳಾದ ಉದಯ(25), ಚಂದನ್(26) ಮೃತಪಟ್ಟ ಯುವಕರು. ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ನ.6 : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಡಹಗಲೇ ಕಾಡಾನೆ ಸಂಚರಿಸುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಸೋಮವಾರ ಬೆಳಗ್ಗೆ ಸುಮಾರು 6 ಗಂಟೆ ಸಮಯದಲ್ಲಿ ಕೈಲಾಶ ಆಶ್ರಮ ಬಳಿಯ ತಲಕಾವೇರಿ ಪ್ರವೇಶ ದ್ವಾರದ ಭಾಗದಲ್ಲಿ ಕಾಡಾನೆ ತಿರುಗಾಡಿದೆ. ದ್ವಾರದ ಗೇಟ್ ಬಂದ್ ಮಾಡಿದ್ದರಿಂದ ಆನೆಗೆ ತಲಕಾವೇರಿ ಒಳಗೆ ಪ್ರವೇಶಿಸಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದು ತುಲಾಮಾಸ ಕಾವೇರಿ ಜಾತ್ರೆಯ ಅವಧಿಯಾಗಿದ್ದು, ಪ್ರತಿದಿನ ಸಾವಿರಾರು ಭಕ್ತರು ತಲಕಾವೇರಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಸುತ್ತಲೂ ಬೆಟ್ಟ, ಕಾಡುಗಳಿಂದ ಆವೃತ್ತವಾಗಿರುವ ಈ ಪ್ರದೇಶದಲ್ಲಿ ಏಕಾಏಕಿ ಕಾಡಾನೆಗಳು ನುಗ್ಗಿ ಬಂದರೆ ಅಪಾಯ ತಪ್ಪಿದ್ದಲ್ಲ ಎನ್ನುತ್ತಾರೆ ಗಾಮಸ್ಥರು. ಈಗಾಗಲೇ ಕಾಡಾನೆ ಏಲಕ್ಕಿ ಮತ್ತು ಬಾಳೆ ಫಸಲನ್ನು ನಾಶಪಡಿಸಿದೆ. ಆನೆಯನ್ನು ಓಡಿಸುವಂತೆ ಈ ಭಾಗದ ನಿವಾಸಿಗಳು ಒತ್ತಾಯಿಸಿದ ಹಿನ್ನೆಲೆ ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬ್ಬಂದಿಗಳು ಪಕ್ಕದ ಕಾಡಿನಲ್ಲಿ ಆನೆ ಇರುವುದನ್ನು ಪತ್ತೆ ಹಚ್ಚಿದರು. ನಂತರ ಸ್ಥಳೀಯರ ಸಹಕಾರ ಪಡೆದು ಕಾಡಾನೆಯನ್ನು ಮರಳಿ ಕಾಡಿಗೆ…
ಮಡಿಕೇರಿ ನ.6 : ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಅಂಗನವಾಡಿಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸದಂತೆ ಜಿಲ್ಲೆಯ ಅಧಿಕಾರಿಗಳಿಗೆ ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅವರು ಸೂಚನೆ ನೀಡಿದ್ದಾರೆ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಅಂಗನವಾಡಿಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತಿದೆ ಎನ್ನುವ ಮಾಧ್ಯಮಗಳ ವರದಿಯ ನಂತರ ಸಚಿವರು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದರ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ, ವಿದ್ಯುತ್ ಇಲಾಖೆಯ ಅಧಿಕಾರಿಗಳೊಂದಿಗೆ ಹಾಗೂ ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸುವಂತೆ ಸಚಿವರ ಕಾರ್ಯಾಲಯಕ್ಕೂ ಸೂಚನೆ ನೀಡಿದ್ದರು. ಸೂಚನೆಯ ಹಿನ್ನಲೆಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿಗಳಾದ ವೀರಭದ್ರಪ್ಪ ಹಂಚಿನಾಳ ಅವರು ಜಿಲ್ಲೆಯ ಅಧಿಕಾರಿಗಳು, ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇತರೆ ಅಧಿಕಾರಿಗಳೊಂದಿಗೆ ಮಾತನಾಡಿ ಅಂಗನವಾಡಿಗಳ ವಿದ್ಯುತ್ ಸಂಪರ್ಕವನ್ನು ಮರು ಸ್ಥಾಪಿಸಲು ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ನ.6 : ಜಿಲ್ಲಾ ಕೇಂದ್ರ ಮಡಿಕೇರಿಯ ಹೃದಯ ಭಾಗದ ಮನೆಯೊಂದರಲ್ಲಿದ್ದ ವೃದ್ಧ ಮಹಿಳೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆ ನಡೆದು ಹನ್ನೆರಡು ಗಂಟೆ ಕಳೆಯುವಷ್ಟರಲ್ಲೆ, ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಲಾಗಿದ್ದು, ಈತನ ಬಳಿಯಲ್ಲಿದ್ದ 27 ಗ್ರಾಂನ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಐಡಿಬಿಐ ಬ್ಯಾಂಕ್ ಮುಂಭಾಗದ ಮನೆಯ ನಿವಾಸಿ, ಬಿ.ಇ.ಸಾಕಮ್ಮ ಪ್ರಭಾಕರ ಎಂಬವರ ಮೇಲೆ ಭಾನುವಾರ ಸಂಜೆ ಸುಮಾರು 6 ಗಂಟೆಯ ಹೊತ್ತಿಗೆ, ಮನೆಗೆ ಹಿಂಭಾಗದಿ0ದ ಅಕ್ರಮವಾಗಿ ಪ್ರವೇಶಿಸಿದ ಆರೋಪಿ, ಸಾಕಮ್ಮ ಅವರ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರ ಹಾಗೂ ಉಂಗುರವನ್ನು ದರೋಡೆ ಮಾಡಿದ್ದ. ಕ್ಷಿಪ್ರ ಕಾರ್ಯಾಚರಣೆ : ಘಟನೆ ನಡೆದ ಬಳಿಕ ಎಸ್ಪಿ ಕೆ. ರಾಮರಾಜನ್, ಎಎಸ್ಪಿ ಸುಂದರ್ ರಾಜ್ ಕೆ.ಎಸ್. ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಪೊಲೀಸ್ ಠಾಣೆಯ ಪಿಎಸ್ಐ ಲೋಕೇಶ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ, ಸಾಕ್ಷಾಧಾರಗಳನ್ನು…
ಮಡಿಕೇರಿ ನ.6 : ಬರವಣಿಗೆ, ಒದುವುದು ಹಾಗೂ ವಾಚನ ಎಲ್ಲರಿಗೂ ಇಷ್ಟದಂತೆ ಸಿದ್ಧಿಸುವುದಿಲ್ಲ ಎಂದು ಹಿರಿಯ ಸಾಹಿತಿ ಬಾರಿಯಂಡ ಎ.ಜೋಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಪುಣ್ಯ ಕ್ಷೇತ್ರ ತಲಕಾವೇರಿಯಲ್ಲಿ ಏರ್ಪಡಿಸಲಾಗಿದ್ದ ಸಂಕ್ರಮಣ ಕವಿಗೋಷ್ಠಿ-ಭಕ್ತಿ ಗೀತೆ ಗಾಯನ ಹಾಗೂ ತಲಕಾವೇರಿ ಸ್ಥಳ ಮಹಿಮೆ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬರವಣಿಗೆ ಎಂಬದು ನಮಗಿಷ್ಟಬಂದಂತೆ ಹುಟ್ಟುವುದಿಲ್ಲ, ವಾಚನ, ಒದುವುದು ಅಷ್ಟೊಂದು ಸುಲಭದಲ್ಲಿ ಕೈ ಹಿಡಿಯುವದಿಲ್ಲ. ನಿರಂತರ ಪ್ರಯತ್ನ, ಅಭ್ಯಾಸದಿಂದ ಮಾತ್ರ ಇದು ಪರಿಪೂರ್ಣವಾಗುತ್ತದೆ. ಏನೋ ಬರೆದ ಕೂಡಲೇ ಅದು ಕತೆ, ಕವನ ಆಗುವುದಿಲ್ಲ, ಎಲ್ಲದಕ್ಕೂ ಏಕಾಗ್ರತೆ ಬೇಕು, ಈ ಬಗ್ಗೆ ಆಸಕ್ತಿ ಇರುವ ಮಕ್ಕಳಿಗೆ ಪೋಷಕರು ತಿಳಿ ಹೇಳಬೇಕು ಎಂದು ಹೇಳಿದರು. ಪ್ರಸ್ತುತ ಎಲ್ಲರೂ ನವ್ಯ ಕಾವ್ಯಗಳನ್ನು ಬರೆಯುತ್ತಿದ್ದಾರೆ, ಶಾಸ್ತ್ರೀಯವಾಗಿ ಚಂದಸ್ಸನ್ನು ಬಿಟ್ಟಿದ್ದಾರೆ. ಹಿಂದಿನ ಕಾಲದಲ್ಲಿ ಪಂಪ, ರನ್ನ, ಪೊನ್ನರು ಆದಿನಗಳಲ್ಲಿ ಬರೆದುದನ್ನು ಸ್ಮರಿಸಬೇಕೆಂದು ಉದಾಹರಣೆ ಸಹಿತ ವಿವರಿಸಿದರು.…
ಮಡಿಕೇರಿ ನ.6 : ಕೊರೋನಾ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರಹಳ್ಳಿ ವ್ಯಾಪ್ತಿಯ ತಲಕಾಯಲಬೆಟ್ಟ ಹಳ್ಳಿಯಲ್ಲಿ ಈಡಿಸ್ ಈಜಿಪ್ಟಾ ಸೊಳ್ಳೆಗಳ ಸಮೂಹ ಮಾದರಿಗಳನ್ನು ಪರೀಕ್ಷಿಸಿದಾಗ ಝೀಕಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಾದ ಕೊಡಗು ಜಿಲ್ಲೆಯಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಂ.ಸತೀಶ್ ಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಡೆಂಗ್ಯೂ/ ಚಿಕುಂಗುನ್ಯಾ, ವೆಸ್ಟನೈಲ್ ಹಾಗೂ ಹಳದಿ ಜ್ವರವನ್ನು ಹರಡುವಂತಹ ಸೊಳ್ಳೆಗಳಾದ ಈಡೀಸ್ ಜಾತಿಯ ಸೊಳ್ಳೆಗಳು ಕಚ್ಚುವುದರಿಂದ ಝೀಕಾ ವೈರಸ್ ಖಾಯಿಲೆಯು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಝೀಕಾ ವೈರಸ್ ಕೇವಲ ಸೊಳ್ಳೆಗಳ ಕಡಿತದಿಂದ ಹರಡುವುದಲ್ಲದೇ ರಕ್ತದ ವರ್ಗಾವಣೆ, ಅಸುರಕ್ಷಿತ ಲೈಂಗಿಕತೆ ಮುಂತಾದ ದೇಹದ ದ್ರವಗಳ ವಿನಿಮಯದ ಮೂಲಕವೂ ಹರಡುತ್ತದೆ. ಮಳೆಗಾಲದಲ್ಲಿ ಈ ವೈರಸ್ ಹರಡಲು ಅನುಕೂಲವಾದ ವಾತಾವರಣ ಸೃಷ್ಟಿಯಾಗುತ್ತದೆ. ಮಳೆಗಾಲದಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳ ಸಾಂದ್ರತೆ ಜಾಸ್ತಿ ಇರುತ್ತದೆ. ಈ ಸೊಳ್ಳೆಗಳು…
ಮಡಿಕೇರಿ ನ.6 : ಪ್ರಸಕ್ತ (2023-24) ಸಾಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವೃತ್ತಿ ರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 5 ವರ್ಷಗಳ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಬಹುದು. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ (ನಿಗದಿತ ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಯನ್ನು ವೆಬ್ಸೈಟ್ kannadasiri.karnataka.gov.in ನಲ್ಲಿ ಪಡೆಯಬಹುದು) ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಡಿಸೆಂಬರ್, 7 ರೊಳಗೆ ಅರ್ಜಿಯನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣಿದೇವಿ ಮಾಲಗತ್ತಿ ತಿಳಿಸಿದ್ದಾರೆ.
ಮಡಿಕೇರಿ ನ.6 : ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ (ಯುಪಿಎಸ್ಸಿ/ಕೆಎಎಸ್/ಬ್ಯಾಂಕಿಂಗ್/ಗ್ರೂಫ್-ಸಿ/ಆರ್ಆರ್ಬಿ/ ಎಸ್ಎಸ್ಸಿ/ಜೆಯುಡಿಐಸಿಐಎಆರ್ವೈ ಸರ್ವೀಸಸ್) ಮತ್ತು ವಸತಿಯುತ ಸಂಯೋಜಿತ ಪದವಿಯೊಂದಿಗೆ ಯುಪಿಎಸ್ಸಿ/ಕೆಎಎಸ್ ತರಬೇತಿಗೆ ನಿಯೋಜಿಸಲು ಅರ್ಹ ಅಭ್ಯರ್ಥಿಗಳಿಂದ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 29 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್ಸೈಟ್ www.sw.kar.nic.in ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.






