ಲೇಖಕ: admin

ಕಡಂಗ  ನ.6 :   ಕುಂಜಿಲ ಪಯ್ ನರಿ ಸುನ್ನೀ ಮುಸ್ಲಿಂ ಜಮಾಅತ್ ಹಾಗೂ ಕುಂಜಿಲ ಬ್ಲಾಕ್ ಕಾಂಗ್ರೆಸ್ ಪಕ್ಷದ ಸಂಯುಕ್ತಾಶ್ರಯದಲ್ಲಿ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ  ಶಾಸಕ  ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಕುಂಜಿಲ ಪೈನರಿ ಮುಸ್ಲಿಂ ಜಮಾಅತ್ತಿನ ಸಭಾಂಗಣದಲ್ಲಿ  ನಡೆದ ಸನ್ಮಾನ ಕಾರ್ಯಕ್ರಮದಲ್ಲಿ  ಕುಂಜಿಲ ಪಯ್ ನರಿ ಸುನ್ನೀ ಮುಸ್ಲಿಂ ಜಮಾಅತ್ ಹಾಗೂ ಕುಂಜಿಲ ಬ್ಲಾಕ್ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಪದಾಧಿಕಾರಿಗಳು ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಕುಂಜಿಲ ಪಯ್ ನರಿ ಕಕ್ಕಬ್ಬೆ ಸಂಪರ್ಕ ರಸ್ತೆ ಟೆಂಡರ್ ಕರೆಯಲಾಗಿದ್ದು, ಅತೀ ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸುವುದಾಗಿ  ತಿಳಿಸಿದರು. ಪಯ್ ನರಿ ಮಸ್ಜಿದ್, ಮೂಲಭೂತ ಸೌಕರ್ಯ ಹಾಗೂ ಸ್ಮಶಾನ ಸುತ್ತ ತಡೆಗೋಡೆಗೆ ಅನುದಾನ ಬಿಡುಗಡೆಗೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಪಕ್ಷ ಸಂಘಟನೆಗೆ ಒತ್ತು ನೀಡುವಂತೆ  ಮನವಿ ನೀಡಲಾಯಿತು. ಇದೇ ಸಂದರ್ಭ  ಕಾಂಗ್ರೆಸ್ ಜಿಲ್ಲಾಧ್ಯಕ್ಷ  ಧರ್ಮಜ…

Read More

ಪುತ್ತೂರು ನ.6 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರಿನಲ್ಲಿ ನಡೆದ ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಪದಕಗಳೊಂದಿಗೆ ನಗದು ಬಹುಮಾನವನ್ನು ಗೆದ್ದುಕೊಂಡಿದ್ದಾರೆ. ಮಂಗಳೂರು ರನ್ನರ್ಸ್ ಕ್ಲಬ್ ಇದರ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ನೀವಿಯಸ್ ಮಂಗಳೂರು ಮ್ಯಾರಥಾನ್-2023 ಇದರ 21.1 ಕಿಲೋಮೀಟರ್ ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಕಾಲೇಜಿನ ಅಂತಿಮ ಎಂಬಿಎ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ.ಐ ದ್ವಿತೀಯ ಸ್ಥಾನ ಗಳಿಸಿ ರೂ.15 ಸಾವಿರ ನಗದು ಬಹುಮಾನ ಪಡೆದುಕೊಂಡಿದ್ದಾರೆ. ಇದೇ ವಿಭಾಗದಲ್ಲಿ ಕಾಲೇಜ್ ನ ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾ.ಸಿ.ಎಸ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದು ರೂ.10 ಸಾವಿರ ನಗದು ಬಹುಮಾನ ಗಳಿಸಿದ್ದಾರೆ. ಈ ವಿದ್ಯಾರ್ಥಿಗಳು ಕಳೆದ ಬಾರಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಕ್ರಾಸ್-ಕಂಟ್ರಿ ಸ್ಪರ್ಧೆಯಲ್ಲಿಯೂ ಬಹುಮಾನವನ್ನು ಗೆದ್ದಿದ್ದರು. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನ ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ .ಕೆ ತಿಳಿಸಿದ್ದಾರೆ.

Read More

ವಿರಾಜಪೇಟೆ  ನ.6 : ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಪಡೆಯುದರ ಮೂಲಕ ಉದ್ಯೋಗ ಪಡೆಯುವಂತಾಗಬೇಕು ಎಂದು ವಿರಾಜಪೇಟೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಕರ್ ಅಭಿಪ್ರಾಯಪಟ್ಟರು. ಮುಂಬೈ ಯ ಬಜಾಜ್ ಫಿಂಸೆರ್ವ್ ಕಂಪನಿ ವತಿಯಿಂದ ವಿರಾಜಪೇಟೆ ಪದವಿ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ನಡೆದ ಸರ್ಟಿಫಿಕೇಟ್ ಕೋರ್ಸ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯವು ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಉದ್ಯೋಗ ಕೌಶಲ್ಯ ತರಬೇರಿ ಪಡೆಯಬೇಕು ಎಂದರು. ಆ ಮೂಲಕ ಸೂಕ್ತ ಉದ್ಯೋಗದ ಆಯ್ಕೆ ಮಾಡಬಹುದು ಎಂದು ತಿಳಿಸಿದರು. ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಕೌಶಲ್ಯ ಆಧಾರಿತ ಉದ್ಯೋಗ ಇಂದು ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ತರಬೇತಿ ಪಡೆಯುವಂತಾಗಲು ಈ ಕಾರ್ಯಕ್ರಮವನ್ನು ಎಂ. ಓ. ಯು ಅಡಿಯಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭ ತರಬೇತುದಾರೆ ಬಜಾಜ್ ಫಿಂಸೆರ್ವ್ ಕಂಪನಿಯ ಪ್ರಾಜೆಕ್ಟ್ ಮ್ಯಾನೇಜರ್ ರಶ್ಮಿ ಮನ್ಸುಖಾನಿ, ಐಕ್ಯೂಎಸಿ ಸಂಚಾಲಕಿ ಹೇಮ, ವಾಣಿಜ್ಯ ವಿಭಾಗ ಮುಖ್ಯಸ್ಥೆ ದೃಶ್ಯ ಹಾಜರಿದ್ದರು. ವಿದ್ಯಾರ್ಥಿನಿ…

Read More

ಮಡಿಕೇರಿ ನ.6 : ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ವಿಖ್ಯಾತ ಮಡಿಕೇರಿ ದಸರಾ ಮಹೋತ್ಸವವನ್ನು ಮತ್ತಷ್ಟು ಅರ್ಥಪೂರ್ಣ ಮತ್ತು ವಿಜೃಂಭಣೆಯಿಂದ ನಡೆಸಲು ಬಜೆಟ್ ನಲ್ಲಿ ಸರಕಾರ ಅನುದಾನ ಮೀಸಲಿಡಬೇಕು. ಇದಕ್ಕಾಗಿ ದಸರಾ ಪ್ರಾಧಿಕಾರ ರಚಿಸಬೇಕು ಎಂದು ಮಡಿಕೇರಿ ದಸರಾ ಸಮಿತಿಯ ಕಾರ್ಯಾಧ್ಯಕ್ಷ ಕೆ.ಎಂ.ಗಣೇಶ್ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಾರಿಯ ದಸರಾ ಮಹೋತ್ಸವ ಜಿಲ್ಲೆಯ ಶಾಸಕದ್ವಯರ ಸಂಪೂರ್ಣ ಸಹಕಾರದಿಂದ ಅದ್ದೂರಿಯಾಗಿ ನಡೆದು ಜನ ಮೆಚ್ಚುಗೆಗೆ ಪಾತ್ರವಾಗಿದೆ. ಮುಂದಿನ ವರ್ಷಗಳಲ್ಲಿ ದಸರಾ ಆಚರಣೆಗೆ ಬಜೆಟ್ ನಲ್ಲೇ ಹಣವನ್ನು ಮೀಸಲಿಟ್ಟರೆ ದಸರಾ ಸಮಿತಿಗಳ ಕಾರ್ಯ ಸುಗಮವಾಗಲಿದೆ ಎಂದು ಅಭಿಪ್ರಾಯಪಟ್ಟರು. ವರ್ಷದಿಂದ ವರ್ಷಕ್ಕೆ ದಸರಾ ಆಚರಣೆಯ ಖರ್ಚು ಹೆಚ್ಚಾಗುತ್ತಿದೆ, ಜನರಿಂದ ವಂತಿಗೆ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಪ್ರತಿವರ್ಷ ಅನುದಾನಕ್ಕಾಗಿ ಸರಕಾರಕ್ಕೆ ಮನವಿ ಸಲ್ಲಿಸಬೇಕಾಗಿದೆ. ಬಿಡುಗಡೆಯಾಗುತ್ತಿರುವ ಅನುದಾನ ದಸರಾ ಸಮಿತಿ, ದಶಮಂಟಪ ಸಮಿತಿಗಳು ಹಾಗೂ ಕರಗೋತ್ಸವಗಳಿಗೆ ಸಾಕಾಗುತ್ತಿಲ್ಲ. ಲಕ್ಷಾಂತರ ಹಣ ಖರ್ಚು ಮಾಡಿ 10 ದಿನಗಳ ಕಾಲ ಹಬ್ಬವನ್ನು ಆಚರಿಸಲಾಗುತ್ತಿದ್ದು, ರಾಜ್ಯ ಮಾತ್ರವಲ್ಲದೆ…

Read More

ಬೆಂಗಳೂರು ನ.6 :   ವಿದ್ಯುತ್‌ ಬೇಡಿಕೆ ಹೆಚ್ಚಿದ್ದರೂ ರಾಜ್ಯಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ  5 ರಿಂದ 7 ಗಂಟೆಗಳ ಕಾಲ ವಿದ್ಯುತ್‌ ಅನ್ನು ಒದಗಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಇಂಧನ ಇಲಾಖೆ ಪರಿಶೀಲನಾ ಸಭೆಯಲ್ಲಿ ವಿದ್ಯುತ್‌ ಬೇಡಿಕೆ, ಸಮಸ್ಯೆ ಕುರಿತಾಗಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು ರಾಜ್ಯದಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು ದಿನಕ್ಕೆ 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದು…

Read More

ಮಡಿಕೇರಿ ನ.6 : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ನ.13 ರಂದು ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ದೀಪೋತ್ಸವ ನಡೆಯಲಿದೆ ಎಂದು ದೇವಾಲಯದ ಟ್ರಸ್ಟಿ ಹೆಚ್.ಎಸ್.ದೇವರಾಜು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ರಾತ್ರಿ 7 ಗಂಟೆಯಿಂದ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ದೀಪೋತ್ಸವ ನಡೆಯಲಿದೆ. 7 ಗಂಟೆಗೆ ಕಳಸ ಪೂಜೆ, 8 ಗಂಟೆಗೆ ಅನ್ನದಾನ, ಪ್ರಸಾದ ವಿನಿಯೋಗ ನಡೆಯಲಿದ್ದು, ರಾತ್ರಿ 9 ಗಂಟೆಗೆ ತಾಯಿಯ ದರ್ಶನ ಹಾಗೂ 9.30 ಗಂಟೆಗೆ ದೀಪೋತ್ಸವ ಪ್ರಾರಂಭವಾಗಲಿದೆ. ಭಕ್ತಾದಿಗಳು ಎಳ್ಳು ಬತ್ತಿಯನ್ನು ಹಚ್ಚಬಹುದು ಎಂದು ತಿಳಿಸಿದರು. ಮತ್ತೋರ್ವ ಟ್ರಸ್ಟಿ ವಿ.ಸಚಿನ್ ವಾಸುದೇವ್ ಮಾತನಾಡಿ, 108 ಎಳ್ಳು ಬತ್ತಿಯನ್ನು ದೇವಾಲಯದ ಆವರಣದಲ್ಲಿ ಹಚ್ಚಿದರೆ ದೋಷ ಪರಿಹಾರ ಆಗಲಿದೆ ಎಂಬ ನಂಬಿಕೆ ಇದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯಕ್ರಮಗಳು ನಡೆಯಲಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ದೇವಾಲಯದ ಧರ್ಮದರ್ಶಿ ಹೆಚ್.ಎಸ್.ಗೋವಿಂದ ಸ್ವಾಮಿ, ಟ್ರಸ್ಟಿ ಹೆಚ್.ಎಸ್.ರಾಜೇಶ್ವರಿ ಹಾಗೂ ಪ್ರಮುಖರಾದ ಎ.ಸಿ.ಚುಮ್ಮಿ ದೇವಯ್ಯ ಉಪಸ್ಥಿತರಿದ್ದರು.

Read More

ಮಡಿಕೇರಿ ನ.6 : ಕನ್ನಡಿಗರು ಇತರ ಭಾಷಿಕರಿಗೆ ಕನ್ನಡವನ್ನು ಕಲಿಸುವ ಔದಾರ್ಯ ತೋರಿದರೆ ಕರ್ನಾಟಕವೇ ಕನ್ನಡಮಯವಾಗುತ್ತದೆ ಎಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ ಅಭಿಮತ ವ್ಯಕ್ತಪಡಿಸಿದ್ದಾರೆ. ಕೊಡಗು ವೈದ್ಯಕೀಯ ವಿಜ್ಞಾನ ಕಾಲೇಜಿನ ಕ್ಯಾಂಪಸ್ ನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವದ ಕಾರ್ಯಕ್ರಮ ಉದ್ಘಾಟಿಸಿ  ಅವರು ಮಾತನಾಡಿದರು. ಕರ್ನಾಟಕದಲ್ಲಿ ಉದ್ಯೋಗ, ವಿಧ್ಯಾಭ್ಯಾಸ ದ ಸಲುವಾಗಿ ಹೊರ ರಾಜ್ಯದ ಜನತೆ ವಿಫುಲವಾಗಿ ಬರುತ್ತಿದ್ದು, ಅವರೊಂದಿಗೆ ನಾವು ಕನ್ನಡವನ್ನೇ ಮಾತನಾಡಿದರೆ ಅವರು ಕನ್ನಡ ಕಲಿಯುತ್ತಾರೆ. ಆ ಕಾರ್ಯವನ್ನು ಎಲ್ಲಾ ಕನ್ನಡಿಗರು ಅನುಸರಿಸಬೇಕು ಎಂದು ಕರೆ ನೀಡಿದರು. ತಾವು ಮೆಡಿಕಲ್  ವಿದ್ಯಾರ್ಥಿಯಾಗಿದ್ದಾಗ ಸಂಭ್ರಮಿಸಿದ ವಿಧ್ಯಾರ್ಥಿ ಜೀವನದ ಸುಮಧುರ ಕ್ಷಣಗಳನ್ನು ಮತ್ತೆ ಮರುಕಳಿಸಲು ಅವಕಾಶ ನೀಡಿದ ಮೆಡಿಕಲ್ ಕಾಲೇಜಿನ ಸಾಂಸ್ಕೃತಿಕ ಸಮಿತಿಯ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳಿಗೆ ಅಭಾರಿಯಾಗಿದ್ದೇನೆ ಎಂದು ತಿಳಿಸಿದರು. ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯ ಪ್ರಧಾನ ಸಂಚಾಲಕ   ತೆನ್ನಿರ ಮೈನಾ ಮಾತನಾಡಿ, ಕನ್ನಡ ವಿಶ್ವದ ಅತ್ಯಂತ…

Read More

ಕುಶಾಲನಗರ ನ.6 : ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಹನ್ನೆರಡನೇ ಶತಮಾನದಲ್ಲಿ ಬಸವಾದಿ ಶರಣರು ನಡೆಸಿದ ಹೋರಾಟ 800 ವರ್ಷಗಳು ಕಳೆದರೂ ಇಂದಿಗೂ ಕೂಡ ನಡೆಯುತ್ತಲೇ ಇದ್ದರೂ ಕೂಡ ಸಮ ಸಮಾಜ ಸಾಧ್ಯವಾಗುತ್ತಿಲ್ಲ ಎಂದು ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ  ಡಾ.ಸುನಿಲ್ ಕುಮಾರ್ ವಿಷಾದಿಸಿದರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಸ್ಥಳೀಯ ಕನ್ನಡ ಭಾರತಿ ಪಿಯು ಕಾಲೇಜಿನಲ್ಲಿ  ಹಮ್ಮಿಕೊಂಡಿದ್ದ “ವಚನಗಳ ನಡಿಗೆ – ವಿದ್ಯಾರ್ಥಿಗಳ ಕಡೆಗೆ ” ಚಿಂತನಾ ಗೋಷ್ಠಿಯಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದ ಅವರು, ಶತ ಶತಮಾನಗಳಿಂದ ಅದೆಷ್ಟೋ ಆಡಳಿತಗಳು, ಸರ್ಕಾರಗಳು ಬಂದು ಹೋದರೂ ಕೂಡ ಜಾತಿ, ಧರ್ಮ, ವರ್ಣ, ಬೇಧಗಳ ತಾರತಮ್ಯ ದೂರವಾಗಿಲ್ಲ. ವಿದ್ಯಾವಂತರಿಂದಲೇ ಸಮಾಜದಲ್ಲಿಂದು ಹೆಚ್ಚಿನ ಕೆಡುಕುಗಳು ಉಂಟಾಗುತ್ತಿವೆ ಹೊರತು ಅವಿದ್ಯಾವಂತರಿಂದಲ್ಲ. ದಯೆಯೇ ಧರ್ಮದ ಮೂಲ ಎಂದು ಬಸವಣ್ಣನವರು ಸಾರಿ ಹೋಗಿದ್ದಾರೆ. ಆದರೆ ಯುದ್ಧಗಳ ಹೆಸರಲ್ಲಿ ಮಕ್ಕಳಾದಿಯಾಗಿ ಜನರನ್ನು ಸಿಡಿಮದ್ದು ಗುಂಡುಗಳ ಸಿಡಿಸಿ ಅಮಾನುಷವಾಗಿ ಕೊಲ್ಲಲಾಗುತ್ತಿದೆ. ಒಳಿತು ಕೆಡುಕುಗಳ ಅವಲೋಕನ…

Read More

ನಾಪೋಕ್ಲು ನ.6 : ಜಿಲ್ಲೆಯ ಕ್ರೀಡಾಪಟುಗಳನ್ನು ಅಧಿಕ ಸಂಖ್ಯೆಯಲ್ಲಿ ತರಬೇತುಗೊಳಿಸಿ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವಂತೆ ಮಾಡುವುದು ಕೊಡಗು ಬ್ಯಾಡ್ಮಿಂಟನ್ ಅಸೋಸಿಯೇಷನ್ ಉದ್ದೇಶವಾಗಿದೆ ಎಂದು ಕೊಡಗು ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಡಾ.ಮೋಹನ್ ಅಪ್ಪಾಜಿ ಹೇಳಿದರು. ದಿ ರೋವ್ ಕೂರ್ಗ್ ನಾಪೋಕ್ಲು ಮತ್ತು ರಘುರಾಜ್ ಸ್ಪೋರ್ಟ್ಸ್ ಮ್ಯಾನೇಜ್ ಮೆಂಟ್ ವತಿಯಿಂದ ದಿ ರೋವ್ ಕೂರ್ಗ್ ನಾಪೋಕ್ಲು ವಿನ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಮುಕ್ತ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಘಟಕವಾಗಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯ ನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳನ್ನು ತರಬೇತಿಗೊಳಿಸುವಲ್ಲಿ ಕಾರ್ಯನಿರತವಾಗಿದೆ. ಇದೀಗ ನಾಪೋಕ್ಲುವಿನಲ್ಲಿ ಬ್ಯಾಡ್ಮಿಂಟನ್ ತರಬೇತಿಗಾಗಿ ವಿದ್ಯಾರ್ಥಿಗಳಿಗೆ ಅವಕಾಶ ಲಭಿಸಿದ್ದು, ಇದು ವ್ಯಾವಹಾರಿಕವಾಗಿ ಮಾಡಿದ್ದಲ್ಲ. ಈಜು ಹಾಗೂ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೇರಲು ಕೈಗೊಂಡ ಕಾರ್ಯವಾಗಿದೆ ಎಂದರು. ಕೊಡಗಿನಲ್ಲಿ ಕ್ರೀಡೆಗೆ ವಿಪುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಡಾ.ಮೋಹನ್ ಅಪ್ಪಾಜಿ ತಿಳಿಸಿದರು. ಅಂಕುರ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ರತ್ನ…

Read More

ಮಡಿಕೇರಿ ನ.6 :  ಇತಿಹಾಸ ಪ್ರಸಿದ್ಧದ ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಅನ್ನು ಪುತ್ತರಿ ಕಳೆದ ಮೊದಲ ಭಾನುವಾರ  ಸಂಭ್ರಮದಿಂದ ಆಚರಿಸಲಾಗುವುದೆಂದು  ಬೊಟ್ಟಿಯತ್ ನಾಡ್ ತಕ್ಕ ಹಾಗೂ ಕೈಮುಡಿಕೆ ಮಂದ್ ತಕ್ಕ ಮುಖ್ಯಸ್ಥರು ತಿಳಿಸಿದ್ದಾರೆ. ಬೊಟ್ಟಿಯತ್ ನಾಡ್ ತಕ್ಕ ಹಾಗೂ ಕೈಮುಡಿಕೆ ಮಂದ್ ತಕ್ಕ ಮುಖ್ಯಸ್ಥರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ನಡೆದ ಕೈಮುಡಿಕೆ ಕೋಲ್ ಮಂದ್’ನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ  ಪುತ್ತರಿ ಹಬ್ಬವು ನ.27 ಅಥವಾ 28 ರಂದು ನಡೆಯಲಿದ್ದು,  ಮೂರು ನಾಡಿಗೆ ಸೇರಿದ ಕೋಲ್ ಮಂದ್ ನಡೆಸುವ ಉದ್ದೇಶದಿಂದ, ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ  ಈ ಬಾರಿ  ಡಿ.3ರಂದು ನಡೆಸಲು ಸಭೆಯಲ್ಲಿ ತಿರ್ಮಾನಿಸಲಾಯಿತು. ಮೂರು ನಾಡಿನವರಿಂದ ಸಾಮೂಹಿಕ ಪುತ್ತರಿ ಕೋಲಾಟ್ ಬಳಿಕ ಸಾರ್ವಜನಿಕವಾಗಿ ವಿವಿಧ ಪೈಪೋಟಿಯನ್ನು ಏರ್ಪಡಿಸಲು ಸಭೆ ತಿರ್ಮಾನಿಸಿತು. ಪುತ್ತರಿ ಕೋಲಾಟ್, ಉಮ್ಮತಾಟ್, ಬೊಳಕಾಟ್, ಪರೆಯಕಳಿ, ಬಾಳೋಪಾಟ್, ಕೊಡವ ಪಾಟ್ ಹಾಗೂ ವಾಲಗತಾಟ್ ಪೈಪೋಟಿಗಳನ್ನು ತಲಾ ಎರಡು ವಿಭಾಗಗಳಾಗಿ ನಡೆಯಲಿದೆ.  ಪ್ರಾಥಮಿಕ ಹಾಗೂ…

Read More