ಸುಂಟಿಕೊಪ್ಪ ಡಿ.3 : ಮಕ್ಕಳಿಗೆ ಆಸ್ತಿ ಮಾಡಿಡುವ ಬದಲು ಉನ್ನತ ಶಿಕ್ಷಣ ನೀಡುವ ಮೂಲಕ ಅವರನ್ನೇ ಸಮಾಜದ ಆಸ್ತಿಯನ್ನಾಗಿ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರ ಮೇಲಿದೆ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಸುಂಟಿಕೊಪ್ಪ ಹೋಬಳಿ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ಆಶ್ರಯದಲ್ಲಿ ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘ ಹಾಗೂ ಬಿಲ್ಲವ ವಿದ್ಯಾರ್ಥಿ ಘಟಕದ ವತಿಯಿಂದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀನಾರಾಯಣ ಗುರುಗಳ ಜಯಂತ್ಯೋತ್ಸವ, ಗೌರವ ಸಮರ್ಪಣೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಾಸಂತ ನಾರಾಯಣ ಗುರುಗಳ ಸಾಧನೆ ಮತ್ತು ಜೀವನದ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಆಗಬೇಕು. ನಾರಾಯಣ ಗುರುಗಳು ಬಿಲ್ಲವ ಸಮುದಾಯಕ್ಕೆ ಮಾತ್ರ ಗುರುಗಳಾಗದೆ ಸಮಾಜದ ಎಲ್ಲಾ ಸಮುದಾಯಕ್ಕೂ ಮಾದರಿಯಾಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಸಮಾಜವನ್ನು ಶೈಕ್ಷಣಿಕ ಮತ್ತು ಅರ್ಥಿಕವಾಗಿ ಸಬಲಗೊಳಿಸಬೇಕೆಂದು ಕರೆ ನೀಡಿದರು. 12ನೇ ಶತಮಾನದಲ್ಲಿ ಬಸವಣ್ಣನವರು ಮಾಡಿದ ಸಮಾಜ ಸುಧಾರಣೆ ಮತ್ತು ಅನುಭವ…
ಲೇಖಕ: admin
ಮಡಿಕೇರಿ ಡಿ.3 : ಮಡಿಕೇರಿಯಲ್ಲಿ ಆಯೋಜಿತವಾಗಿದ್ದ ಇನ್ನರ್ ವೀಲ್ ಜಿಲ್ಲಾ ಸಮ್ಮೇಳನದ ಅಂಗವಾಗಿ ಇನ್ನರ್ ವೀಲ್ ಸಂಸ್ಥೆಗಳಿಂದ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮಗಳು ಆಕಷ೯ಕವಾಗಿ ನಡೆದವು. ನಗರದ ಕ್ರಿಸ್ಟಲ್ ಕೋಟ್೯ ಸಭಾಂಗಣದಲ್ಲಿ ಮಹಿಳೆಯರ ಸಾಂಸ್ಕೖತಿಕ ನೖತ್ಯಗಳ ವೈಭವ ಮೇಳೈಸಿತ್ತು. ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ಸದಸ್ಯೆಯರಿಂದ ಗಣಪತಿ ಸ್ತುತಿ ಗೀತ ನೖತ್ಯ, ಜೀವನದಿ ಕಾವೇರಿ ನೖತ್ಯ, ಕೊಡವ ನೖತ್ಯ, ಬುಡಕಟ್ಟು ನೖತ್ಯಗಳು ಗಮನ ಸೆಳೆದವು. ಕುಶಾಲನಗರ ಇನ್ನರ್ ವೀಲ್ ಸದಸ್ಯೆಯರಿಂದ ರೀಲ್ಸ್ ಡಾನ್ಸ್, ಸೋಮವಾರಪೇಟೆ ಇನ್ನರ್ ವೀಲ್ ಸದಸ್ಯೆಯರಿಂದ ಸುಗ್ಗಿ ಕುಣಿತ, ಮಲ್ಯೇಷಿಯ ತಂಡದಿಂದ ಮಲ್ಯೇಷಿಯನ್ ಜಿಗ್ ನೖತ್ಯ, ಮನ ಸೆಳೆದವು. ಇನ್ನರ್ ವೀಲ್ ಸಂಸ್ಥೆಯ ಮಾಜಿ ಜಿಲ್ಲಾ ಅಧ್ಯಕ್ಷರು ತಮ್ಮ ಆಡಳಿತ ವಷ೯ದ ಸಂದೇಶ ಸಾರುವ ಕಾಯ೯ಕ್ರಮ ಪ್ರಸ್ತುತ ಪಡಿಸಿದರು. ಅಂತೆಯೇ ಇನ್ನರ್ ವೀಲ್ ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳು ವೈವಿಧ್ಯಮಯ ಸಾಂಪ್ರದಾಯಿಕ ಸೀರೆಗಳ ಫ್ಯಾಷನ್ ಶೋದಲ್ಲಿ ಪಾಲ್ಗೊಂಡು ಮೆಚ್ಚುಗೆಗೆ ಪಾತ್ರರಾದರು. ರಾಜ್ಯದ 8 ಕಂದಾಯ ಜಿಲ್ಲೆಗಳಿಂದ 600 ಕ್ಕೂ ಅಧಿಕ ಸದಸ್ಯೆಯರು…
ಮಡಿಕೇರಿ. ಡಿ.3 : ಜನರು ಮತ್ತು ನ್ಯಾಯಾಲಯಗಳ ಮಧ್ಯೆ ಸೌಹಾಧ೯ದ ಸೇತುವೆಗಳಂತೆ ಕಾಯ೯ನಿವ೯ಹಿಸುವ ಮಹತ್ವದ ಹೊಣೆಗಾರಿಕೆ ಹೊಂದಿರುವ ವಕೀಲರು ಸಮಾಜದಲ್ಲಿ ಗುರುತರ ಬದಲಾವಣೆ ತರುವಲ್ಲಿಯೂ ಪ್ರಮುಖ ಪಾತ್ರ ವಹಿಸಬೇಕೆಂದು ರಾಜ್ಯ ಸಕಾ೯ರದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಕರೆ ನೀಡಿದ್ದಾರೆ. ನಗರದ ಹೊರವಲಯದಲ್ಲಿನ ಕ್ಯಾಪಿಟಲ್ ವಿಲೇಜ್ ರೆಸಾಟ್೯ನಲ್ಲಿ ಮಡಿಕೇರಿ ವಕೀಲರ ಸಂಘದ ವತಿಯಿಂದ ಆಯೋಜಿತವಾದ ವಕೀಲರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಇತರ ವೖತ್ತಿಗಳಿಗೆ ಹೋಲಿಸಿದರೆ ವಕೀಲ ವೖತ್ತಿಯು ಅತ್ಯಂತ ಘನತೆ, ಗೌರವ ಹೊಂದಿರುವ ಮಹತ್ವದ ವೖತ್ತಿಯಾಗಿದೆ. ವಕೀಲ ವೖತ್ತಿಯಲ್ಲಿ ಇರುವವರು ಸ್ವಾತಂತ್ರ್ಯ ಹೋರಾಟದ ಕಾಲಘಟ್ಟದಿಂದಲೂ ಸಾಮಾಜಿಕ ವಿಚಾರಗಳಲ್ಲಿನ ಹೋರಾಟಗಳಲ್ಲಿ ತಮ್ಮದೇ ಆದ ರೀತಿಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು. ಈಗಲೂ ಕೂಡ ವಕೀಲರು ಸಾಮಾಜಿಕವಾಗಿ ಬದಲಾವಣೆ ತರುವಂಥ ಹೋರಾಟಗಳಲ್ಲಿ ಕಾನೂನಾತ್ಮಕವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು. ಭಾರತದಲ್ಲಿ ಕಾನೂನು ಕಾಲೇಜುಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಾರಂಭವಾಗುತ್ತಿರುವುದು ಕೂಡ ವಕೀಲ ವೖತ್ತಿಯನ್ನು ಅತೀ ಹೆಚ್ಚು ಯುವಕ, ಯುವತಿಯರು ಆಯ್ಕೆ…
ಮಡಿಕೇರಿ ಡಿ.3 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿ ವತಿಯಿಂದ ವಿಶ್ವರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಪರಿನಿರ್ವಾಣ ದಿನದ ಅಂಗವಾಗಿ ನೇತ್ರದಾನ, ದೇಹದಾನ ನೋಂದಾವಣಿ ಮತ್ತು ರಕ್ತದಾನ ಕಾರ್ಯಕ್ರಮ ಡಿ.6 ರಂದು ಮಡಿಕೇರಿಯಲ್ಲಿ ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಆಸಕ್ತರು ಪಾಲ್ಗೊಂಡು ನೇತ್ರದಾನ, ದೇಹದಾನ ನೋಂದಾವಣಿ ಮತ್ತು ರಕ್ತದಾನ ಮಾಡಬಹುದು ಎಂದು ತಿಳಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ದೇವದಾಸ್ ಹೆಚ್.ವಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಉದ್ಘಾಟಿಸಲಿದ್ದಾರೆ. ಹೆಚ್.ಎಲ್.ದಿವಾಕರ್ ಪ್ರಾಸ್ತವಿಕ ನುಡಿಗಳನ್ನಾಡಲಿದ್ದು, ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ, ಜಿಲ್ಲಾ ಆಸ್ಪತ್ರೆಯ ಶಸ್ತç ಚಿಕಿತ್ಸಕ ಡಾ.ನಂಜುಂಡಯ್ಯ, ಸ್ಥಾನೀಯ ವೈದ್ಯಾಧಿಕಾರಿ ಡಾ.ಸತೀಶ್, ರಕ್ತನಿಧಿ ವಿಭಾಗದ ಮುಖ್ಯಸ್ಥ ಡಾ.ಕೆ.ಪಿ.ಕರುಂಬಯ್ಯ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ನವೀನ್…
ಮಡಿಕೇರಿ ಡಿ.2 : ಚೆಸ್ಕಾಂ, ಸರ್ವೇ, ಶಿಕ್ಷಣ ಸೇರಿದಂತೆ ಕೆಲ ಇಲಾಖೆಗಳ ಕಾರ್ಯವೈಖರಿಯಿಂದ ಜನಸಾಮಾನ್ಯರು ತೊಂದರೆಗೆ ಒಳಗಾಗುತ್ತಿದ್ದು, ಕಾರ್ಯವೈಖರಿಯನ್ನು ಬದಲಿಸಿಕೊಳ್ಳುವಂತೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಟ್ಟುನಿಟ್ಟಿನ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದಾರೆ. ಪೊನ್ನಂಪೇಟೆ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿತ ತ್ರೈಮಾಸಿಕ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕರು, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಪ್ರಯತ್ನಶೀಲರಾಗಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ಅಧಿಕಾರಿಗಳಿಂದ ಇಲಾಖೆಗಳ ಬಗ್ಗೆ ಮಾಹಿತಿ ಪಡೆದ ಶಾಸಕರು, ಕಡಿಮೆ ಹಾಜರಾತಿ ಇರುವ ಶಾಲೆಗಳಿಗೆ ಹೆಚ್ಚಿನ ಶಿಕ್ಷಕರನ್ನು ನೇಮಿಸಿ, ಹೆಚ್ಚು ವಿದ್ಯಾರ್ಥಿಗಳು ಇರುವ ಶಾಲೆಗಳಿಗೆ ಕಡಿಮೆ ಶಿಕ್ಷಕರನ್ನು ನೇಮಿಸಿಕೊಳ್ಳುವುದು, ಶಾಲಾ ಶಿಕ್ಷಕರು ಕೇಳುವ ಸ್ಥಳಕ್ಕೆ ಅವರನ್ನು ಏತಕ್ಕೆ ವರ್ಗಾಯಿಸುತ್ತೀರಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಶಾಸಕರು ಪ್ರಶ್ನಿಸಿ, ಈ ವ್ಯವಸ್ಥೆ ಮುಂದೆ ಬದಲಾಗಬೇಕು ಎಂದು ತಿಳಿಸಿದರು. ವಿದ್ಯುತ್ ಸಂಪರ್ಕ ನೀಡಿ- ನಿಟ್ಟೂರು ಗ್ರಾಮದ ಪಾಲದಳ ಹಾಡಿಯ ಹದಿನಾರು ಮನೆಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿರುವ ಬಗ್ಗೆ ಪ್ರಶ್ನಿಸಿದ…
ಮಡಿಕೇರಿ ಡಿ.2 : ಮಂಗಳೂರಿನ ಗುರುಗೋಜು ರಾಯು ಕರಾಟೆ ಅಕಾಡೆಮಿ ಇಂಡಿಯಾ ವತಿಯಿಂದ ಮಂಗಳೂರಿನ ಕುದ್ರೋಳಿ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. 10 ವರ್ಷದೊಳಗಿನ ಕರಾಟೆ ವಿಭಾಗದಲ್ಲಿ ದಿಗಂತ್ (ದ್ವಿತೀಯ) ಹಾಗೂ ಕುಮಿತೆ ವಿಭಾಗದಲ್ಲಿ (ತೃತೀಯ), 9 ವರ್ಷದೊಳಗಿನ ಕರಾಟೆ ವಿಭಾಗದಲ್ಲಿ ಪೊನ್ನಮ್ಮ (ತೃತೀಯ), ಕಟಾವಿಭಾಗದಲ್ಲಿ ಜಿ.ವಿ.ಲಿಖಿತ್ (ದ್ವಿತೀಯ), 11 ವರ್ಷದೊಳಗಿನವರಲ್ಲಿ ಕರಾಟೆ ವಿಭಾಗದಲ್ಲಿ ಜನಿತ್ (ದ್ವಿತೀಯ), 12 ವರ್ಷದವರಲ್ಲಿ ಕಟಾವಿಭಾಗದಲ್ಲಿ ಕಾವೇರಿಮನೋಜ್ (ಪ್ರಥಮ), ಶೋಭಿತ್ (ದ್ವಿತೀಯ), ಕಟಾ ವಿಭಾಗದಲ್ಲಿ 13 ವರ್ಷದವರಲ್ಲಿ ಮೋಹಿತ್(ಪ್ರಥಮ) ಹಾಗೂ ಕುಮಿತೆ ವಿಭಾಗದಲ್ಲಿ (ತೃತೀಯ), ಶಶಿರಾ (ದ್ವಿತೀಯ) ಹಾಗೂ ಕುಮಿತೆ ವಿಭಾಗದಲ್ಲಿ 14 ವರ್ಷದ ವರುಣ್ ಪ್ರಥಮ ಸ್ಥಾನ ಪಡೆದಿದ್ದಾರೆ. ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆಯನ್ನು ಸಾಧಿಸಿದ್ದಾರೆ ಹಾಗೂ ತರಬೇತಿದಾರರಾದ ಮುಖೇಶ್ ಅವರು ಮಕ್ಕಳ ಪ್ರತಿಭೆಯಲ್ಲಿ ವಿಶ್ವಾಸವನ್ನು ಇಟ್ಟು ಉತ್ತಮ ರೀತಿಯ ತರಬೇತಿ…
ಮಡಿಕೇರಿ ಡಿ.2 : 2023-24 ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಟೆಕ್ವಾಂಡೋ ಪಂದ್ಯಾವಳಿಗೆ ಮಡಿಕೇರಿಯ ಸಂತ ಮೈಕಲರ ಪಿಯು ಕಾಲೇಜ್ ನ ಜೀವನ್ ಎಂ, ಕೃಷ್ಣಪಾಂಡಿ ಸಿ, ಮೋಹಿತ್ ಎಚ್.ಎಸ್, ಕ್ಯಾಲ್ವಿನ್ ಪಿ ಹಾಗೂ ಸಂತ ಜೋಸೆಫರ ಪಿಯು ಕಾಲೇಜ್ ನ ವೈಷ್ಣವಿ ಬಿ.ವಿ ಆಯ್ಕೆಯಾಗಿದ್ದಾರೆ. ತುಮಕೂರಿನ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಡಿ.4 ರಂದು ಪಂದ್ಯಾವಳಿ ನಡೆಯಲಿದ್ದು, ಕರ್ನಾಟಕ ರಾಜ್ಯ ಟೆಕ್ವಾಂಡೋ ತರಬೇತುದಾರ ಹಾಗೂ ಕೊಡಗು ಜಿಲ್ಲಾ ವ್ಯವಸ್ಥಾಪಕ, ಮರ್ಕರ ಟೆಕ್ವಾಂಡೋ ಕ್ಲಬ್ ನ ಮಾಸ್ಟರ್ ಕುಶಾಲ್ ಕುಮಾರ್ ವಿದ್ಯಾರ್ಥಿಗಳೊಂದಿಗೆ ತೆರಳಲಿದ್ದಾರೆ. ಎರಡೂ ಕಾಲೇಜ್ ನ ಪ್ರಾಂಶುಪಾಲರ ಪ್ರೋತ್ಸಾಹ ಹಾಗೂ ಸಂತ ಮೈಕಲರ ಕಾಲೇಜ್ ನ ದೈಹಿಕ ಶಿಕ್ಷಕಿ ಜಾನಕಿ ಐ. ಅವರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ತರಬೇತುದಾರ ಕುಶಾಲ್ ಕುಮಾರ್ ತಿಳಿಸಿದ್ದಾರೆ.
ಮಡಿಕೇರಿ ಡಿ.2 : ಕಾಂತರಾಜ್ ವರದಿ ಅಂಗೀಕರಿಸಬೇಕು, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿರುವ ಮೀಸಲಾತಿ ಪ್ರಮಾಣವನ್ನು ಶೇಕಡ 8ಕ್ಕೆ ಏರಿಸಬೇಕು ಮತ್ತು ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾ ಸಮಿತಿ ಒತ್ತಾಯಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದ ಎಸ್ಡಿಪಿಐ ಪ್ರಮುಖರು, ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಈ ಕುರಿತು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಕೋರಿದರು. ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಅಬ್ದುಲ್ಲ ಅಡ್ಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಶೀರ್ ಅಹಮ್ಮದ್, ಕೋಶಾಧಿಕಾರಿ ಮನ್ಸೂರ್ ಅಲಿ, ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಕೊಂಡಂಗೇರಿ, ಇಬ್ರಾಹಿಂ, ಷರೀಫ್ ವಿರಾಜಪೇಟೆ ಉಪಸ್ಥಿತರಿದ್ದರು.
ಮಡಿಕೇರಿ ಡಿ.2 : ನಿಗಮ ಮಂಡಳಿಗಳಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವುದಕ್ಕಾಗಿ ಮತ್ತು ಪ್ರಚಾರಕ್ಕಾಗಿ ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಅವರು ಕೊಡಗು, ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಇಲ್ಲಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ಕೃಷಿ ಮೋರ್ಚಾದ ಕಿರುಗೂರು ಘಟಕದ ಅಧ್ಯಕ್ಷ ಚೆಪ್ಪುಡಿರ ರಾಕೇಶ್ ದೇವಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂಸದ ಪ್ರತಾಪ್ ಸಿಂಹ ಅವರು ತಮ್ಮ ಅವಧಿಯಲ್ಲಿ ಕೊಡಗು ಮತ್ತು ಮೈಸೂರು ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ದಶಪಥ ಹೆದ್ದಾರಿ ಯೋಜನೆಯನ್ನು ಅನುಷ್ಠಾನಗೊಳಿಸಿರುವುದು ಕೂಡ ದೊಡ್ಡ ಸಾಧನೆಯಾಗಿದೆ ಎಂದು ತಿಳಿಸಿದ್ದಾರೆ. ಆದರೆ ಇತ್ತೀಚೆಗೆ ಸಂಕೇತ್ ಪೂವಯ್ಯ ಅವರು ಈ ದಶಪಥವನ್ನು ಸಂಬAಧ ಇಲ್ಲದ ರಸ್ತೆ ಬಗ್ಗೆ ಸಂಸದರು ಮಾತನಾಡುತ್ತಾರೆ ಎಂದು ಟೀಕಿಸಿರುವುದು ಖಂಡನೀಯ. ಜನೋಪಯೋಗಿ ಯೋಜನೆಯೊಂದು ಯಶಸ್ವಿಯಾಗಿರುವುದಕ್ಕೆ ಹೆಮ್ಮೆ ಪಡಬೇಕೆ ಹೊರತು ಹಾಸ್ಯಾಸ್ಪದ ಹೇಳಿಕೆಗಳನ್ನು ನೀಡಬಾರದು. ಇದೇ ಹೆದ್ದಾರಿಯಲ್ಲಿ ಸ್ವತ: ಸಂಕೇತ್ ಪೂವಯ್ಯ ಅವರು ಕೂಡ ಸಂಚರಿಸುವುದಿಲ್ಲವೇ ಎಂದು…
ಮಡಿಕೇರಿ ಡಿ.2 : ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸಲು ಬದ್ಧನಾಗಿರುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಕೊಡವಾಮೆರ ಕೊಂಡಾಟ ಸಂಘಟನೆ ವತಿಯಿಂದ ನಗರದ ಬಾಲಭವನದಲ್ಲಿ ನಡೆದ 2ನೇ ವರ್ಷದ ಕೊಡವ ಅಂತರ ಕುಟುಂಬ ಬಾಳೋಪಾಟ್ ಬಂಬಂಗ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯಾವುದೇ ಒಂದು ಜನಾಂಗದ ಏಳಿಗೆಗೆ ಸರ್ಕಾರದ ಸಹಕಾರದ ಅಗತ್ಯವಿದೆ. ಜನಪ್ರತಿನಿಧಿಯಾಗಿ ಜಿಲ್ಲೆಯ ಮತ್ತು ಜನರ ಅಭ್ಯುದಯಕ್ಕಾಗಿ ಸರ್ಕಾರಿ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಮಾತನಾಡಿ ಅಭಿವೃದ್ಧಿಯ ವಿಚಾರದಲ್ಲಿ ಪಕ್ಷಬೇಧ ಮರೆತು ಒಟ್ಟಾಗಿ ಶ್ರಮಿಸುವುದಾಗಿ ಹೇಳಿದರು. ದೇಶದ ಸಂವಿಧಾನದಡಿ ಕೊಡವರಿಗೆ ದೊರಕಬೇಕಾದ ಹಕ್ಕುಗಳ ಪರ ಇರುವುದಾಗಿ ಭರವಸೆ ನೀಡಿದರು. ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಅವರು ಮಾತನಾಡಿ ಕೊಡವ ಜನಾಂಗದ ಏಳಿಗೆಯ ದೃಷ್ಟಿಯಿಂದ ಕೊಡವಾಮೆರ ಕೊಂಡಾಟ ಸಂಘಟನೆ ಜನಜಾಗೃತಿ ಮೂಡಿಸುವ ಮೂಲಕ ಇತರರಿಗೆ ಮಾದರಿಯಾಗಿದೆ…






