ಮಡಿಕೇರಿ ಡಿ.1 : ಪೊನ್ನಂಪೇಟೆಯ ಕೂರ್ಗ್ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕಾಲೇಜಿನ ಬೆಳ್ಳಿಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಅನ್ವೇಷಣೆ – 2 ಎಂಬ ಪ್ರಾಜೆಕ್ಟ್ ಪ್ರದರ್ಶನ ಸ್ಪರ್ಧೆಯನ್ನು ಡಿ.15 ರಂದು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮತ್ತು ಸಂಶೋಧನಾ ಪ್ರವೃತ್ತಿಯನ್ನು ಹಾಗೂ ವೈನೋದಿಕ ಚಿಂತನಾ ಶೀಲತೆ ,ವಿನೂತನ ದೃಷ್ಟಿಕೋನವನ್ನು ಬೆಳೆಸುವ ನಿಟ್ಟಿನಲ್ಲಿ ಈಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯು ಮೂರು ವಿಭಾಗದಲ್ಲಿ ಜರುಗಲಿದೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಪರಿಸರ ವಿಜ್ಞಾನ ಎಂಬ ಎರಡು ಪ್ರಕಾರದಲ್ಲಿ ಸ್ಪರ್ಧೆ ನಡೆಯಲ್ಲಿದ್ದು, ಪ್ರಥಮ ಬಹುಮಾನ 8 ಸಾವಿರ ನಗದು, ದ್ವಿತೀಯ ಬಹುಮಾನ 6 ಸಾವಿರ ನಗದು ಮತ್ತು ತೃತೀಯ ಬಹುಮಾನ 4 ಸಾವಿರ ನಗದನ್ನು ಒಳಗೊಂಡಿದೆ. ಪಿ.ಯು.ಸಿ.ವಿಭಾಗದ ಸ್ಪರ್ಧೆಯು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಕ್ಕೆ ಸಂಬಂಧಿಸಿದಂತೆ ಮೂರು ವಿಷಯದಲ್ಲಿ ಸ್ಪರ್ಧೆ ನಡೆಯಲಿದ್ದು, ಪ್ರಥಮ ಬಹುಮಾನ 10,000 ನಗದು ಮತ್ತು ದ್ವಿತೀಯ ಬಹುಮಾನ 6000 ನಗದ್ದನ್ನು ಒಳಗೊಂಡಿದೆ. ಈ ಬಹುಮಾನ ಪ್ರತಿ ವಿಷಯಕ್ಕೆ ಪ್ರತ್ಯೇಕವಾಗಿರುತ್ತದೆ. ಡಿಪ್ಲೋಮೊ ವಿಭಾಗದ ಸ್ಪರ್ಧೆಯಲ್ಲಿ ಕಂಪ್ಯೂಟರ್ರ್ಸೈನ್ಸ್…
ಲೇಖಕ: admin
ಮಡಿಕೇರಿ ಡಿ.1 : ಮೈಸೂರಿನ ಹೆಸರಾಂತ ಅಪೋಲೊ ಬಿ.ಜಿ.ಎಸ್ ಆಸ್ಪತ್ರೆ ಹಾಗೂ ಗೋಣಿಕೊಪ್ಪದ ಲೋಪಾಮುದ್ರಾ ಆಸ್ಪತ್ರೆಯ ಸಹಯೋಗದಲ್ಲಿ ಕಾರ್ಯಚರಿಸಲಿರುವ ಅತ್ಯಾಧುನಿಕ ಆಂಬ್ಯುಲೆನ್ಸ್ ಅನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಶಾಸಕ ಎ.ಎಸ್ ಪೊನ್ನಣ್ಣ, ಹೃದಯಾಘಾತವಾದ ತಕ್ಷಣ ತುರ್ತು ನೀಡಬೇಕಾದ ಪ್ರಥಮ ಹಂತದ ಜೌಷಧಿಯ ವ್ಯವಸ್ಥೆಯನ್ನು ಬಡ ರೋಗಿಗಳಿಗೆ ದಿವಂಗತ ಎ.ಕೆ.ಸುಬ್ಬಯ್ಯ ಮತ್ತು ಪೊನ್ನಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೋಣಿಕೊಪ್ಪದ ಲೋಪಾಮುದ್ರಾ ಆಸ್ಪತ್ರೆಯಲ್ಲಿ ಉಚಿತವಾಗಿ ನೀಡುವುದಾಗಿ ಭರವಸೆ ನೀಡಿದರು. ಈಸಂದರ್ಭ ಗೋಣಿಕೊಪ್ಪದ ಲೋಪಾಮುದ್ರಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸೌಮ್ಯ ಗಣೇಶ್ ನಾಣಯ್ಯ, ಲೋಪಾಮುದ್ರಾ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ಅಮೃತ್ ನಾಣಯ್ಯ , ಲೋಪಾಮುದ್ರಾ ಆಸ್ಪತ್ರೆ ಅಧ್ಯಕ್ಷ ಕ್ಯಾಪ್ಟನ್ ಮಾದಪ್ಪ, ಡಾ.ಅಮಾನ್ ಮೆಡಿಕಲ್ ಸುಪರಿಡೆಂಟ್ ಅಪೋಲೊ ಬಿ.ಜಿ.ಎಸ್ ಆಸ್ಪತ್ರೆ , ಸಮಾಜ ಸೇವಕ ಸಂಕೇತ್ ಪೂವಯ್ಯ , ಅಪೋಲೊ ಬಿ.ಜಿ.ಎಸ್ ಆಸ್ಪತ್ರೆ ಸೀನಿಯರ್ ಎಕ್ಸ್ ಕ್ಯೂಟಿವ್ ರಾಕೇಶ್ ಉತ್ತಪ್ಪ ಸೇರಿದಂತೆ ಲೋಪಾಮುದ್ರಾ ಆಸ್ಪತ್ರೆಯ…
ಕಡಂಗ ಡಿ.1 : ವಿರಾಜಪೇಟೆ ತಾಲ್ಲೂಕಿನ ಕುಂಜಲಗೇರಿ ಗ್ರಾಮದ ಬೆಟ್ಲಪ್ಪ ಈಶ್ವರ ದೇವರ ವಿಶೇಷ ಪೂಜೆಯು ಡಿ.14ರ ವರೆಗೆ ನಡೆಯಲಿದೆ. ಈ ದೇವಾಲಯ ವಿಶೇಷ ಇತಿಹಾಸ ಹೊಂದಿದ್ದು, ಈಗಾಗಲೇ ನ.15 ರಿಂದ ಆರಂಭಗೊಂಡಿರುವ ಪೂಜೆಯು ಸುಮಾರು ಒಂದು ತಿಂಗಳ ಕಾಲ ನಡೆಯಲಿದ್ದು, ಡಿ.14 ರಂದು ಮಹಾದೇವನಿಗೆ ವಾರ್ಷಿಕ ಮಹಾಪೂಜೆ, ಚೆಂಡೆ, ದೇವರ ಬಲಿ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ : ನೌಫಲ್
ಕಡಂಗ ಡಿ.1 : ಕಡಂಗ ವಿಜಯ ವಿದ್ಯಾ ಸಂಸ್ಥೆಯಲ್ಲಿ ಸಂತ, ತತ್ವಜ್ಞಾನಿ ಕನಕದಾಸ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಶಿಕ್ಷಕರು ಕನಕ ದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮುಖ್ಯ ಶಿಕ್ಷಕಿ ಗೀತಾ ದಿನದ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭ ವಿಜಯ ವಿದ್ಯಾ ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು. ವರದಿ : ನೌಫಲ್
ಮಡಿಕೇರಿ ಡಿ.1 : ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಡಿಂಪಲ್ ಎಂಬ ವ್ಯಕ್ತಿಯ ಸಂಶಯಾಸ್ಪದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಕೊಡಗು ಹಾಗೂ ಹಾಸನ ಜಿಲ್ಲಾ ದಲಿತ ಮುಖಂಡರು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಲಿತ ಮುಖಂಡ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್, ಇದೇ ಸೆ.9 ರಂದು ಹಾನಗಲ್ನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಡಿಂಪಲ್ ಎಂಬುವವರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಕೊಡಗು ಜಿಲ್ಲಾ ಪೊಲೀಸರ ತನಿಖೆ ತೃಪ್ತಿದಾಯಕವಾಗಿಲ್ಲ. ಈ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಒಪ್ಪಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ಹೇಳಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿಯ ಬಾಚಳ್ಳಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಡಿಂಪಲ್ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದ ಮಹಿಳೆಯೊಬ್ಬರೊಂದಿಗೆ 4 ವರ್ಷಗಳಿಂದ ಜೀವನ ಸಾಗಿಸುತ್ತಿದ್ದರು. ಸೆ.9 ರಂದು ಡಿಂಪಲ್ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ದೂರಿನ…
ಮಡಿಕೇರಿ ಡಿ.1 : ಮಡಿಕೇರಿಯಲ್ಲಿ ಡಿ.2 ಮತ್ತು 3 ರಂದು ಎರಡು ದಿನಗಳ ಕಾಲ ಇನ್ನರ್ ವೀಲ್ ಸಂಸ್ಥೆಯ ವತಿಯಿಂದ ಶತಪವ೯ ಹೆಸರಿನ ಜಿಲ್ಲಾ ಸಮ್ಮೇಳನ ಆಯೋಜಿತವಾಗಿದ್ದು 8 ಕಂದಾಯ ಜಿಲ್ಲೆಗಳಿಗೆ ಸೇರಿದ ಕ್ಲಬ್ ಗಳ ಅಂದಾಜು 600 ಸದಸ್ಯೆಯರು ಪಾಲ್ಗೊಳ್ಳಲಿದ್ದಾರೆ ಎಂದು ಇನ್ನರ್ ವೀಲ್ ಜಿಲ್ಲಾಧ್ಯಕ್ಷೆ ಪೂಣಿ೯ಮಾ ರವಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಪೂಣಿ೯ಮಾ ರವಿ, ಡಿ.2 ರಂದು ಸಂಜೆ 4 ಗಂಟೆಗೆ ನಗರದ ಕ್ರಿಸ್ಟಲ್ ಕೋಟ್೯ ಸಭಾಂಗಣದಲ್ಲಿ ಇಸ್ರೋ ಬಾಹ್ಯಾಕಾಶ ಸಂಸ್ಥೆಯ ಯೋಜನಾ ನಿದೇ೯ಶಕಿ ಅನುರಾಧ ಪ್ರಕಾಶ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಇನ್ನರ್ ವೀಲ್ ಸಂಸ್ಥೆಯ ಮಾಜಿ ಜಿಲ್ಲಾಧ್ಯಕ್ಷೆ ಡಾ.ವಿಮಲ ರಾಧಾಕೖಷ್ಣ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇನ್ನರ್ ವೀಲ್ ಜಿಲ್ಲೆ ಕೊಡಗೂ ಸೇರಿದಂತೆ ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಜಿಲ್ಲೆಗಳನ್ನು ಒಳಗೊಂಡಿದ್ದು 51 ಕ್ಲಬ್ ಗಳಿಂದ ಈ ಜಿಲ್ಲೆಯಲ್ಲಿ1833 ಸದಸ್ಯೆಯರಿದ್ದಾರೆ ಎಂದು ತಿಳಿಸಿದರು. ಕೊಡಗು ಜಿಲ್ಲೆಯಿಂದ ಈವರೆಗೆ ವಿನ್ನಿ ಬೋಪಯ್ಯ, ಪ್ರೇಮಕಾಳಪ್ಪ…
ಕುಶಾಲನಗರ ಡಿ.1 : ಜಿಲ್ಲೆಯ ಐತಿಹಾಸಿಕ ರಥೋತ್ಸವ ಎಂದೇ ಹೆಸರಾಗಿರುವ ಸುಮಾರು ಇನ್ನೂರು ವರ್ಷಗಳ ಇತಿಹಾಸವಿರುವ ಕೊಡಗಿನ ಹೆಬ್ಬಾಗಿಲು ಕುಶಾಲನಗರದ ಶ್ರೀ ಗಣಪತಿ ದೇವಾಲಯದ ರಥೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಕಾರ್ತಿಕ ಬಹುಳ ತೃತೀಯ ದಿನವಾದ ಶುಕ್ರವಾರ ಮುಂಜಾನೆಯಿಂದಲೇ ಉತ್ಸವ ಮೂರ್ತಿಗೆ ಪಂಚಾಮೃತ ಅಭಿಷೇಕ, ಏಕವಾರ, ರುದ್ರಾಭಿಷೇಕ, ಪುಷ್ಪಾಲಂಕಾರ, ರಥ ಪೂಜೆ ಹಾಗೂ ರಥಬಲಿ ಸೇರಿದಂತೆ ವಿವಿಧ ಪೂಜಾ ವಿಧಾನಗಳೊಂದಿಗೆ ಮಧ್ಯಾಹ್ನ ೧ ಗಂಟೆಗೆ ಸರಿಯಾಗಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ದಕ್ಷಿಣ ಭಾರತದಲ್ಲಿ ಎಲ್ಲಿಯೂ ಶ್ರೀ ಗಣಪತಿಗೆ ರಥೋತ್ಸವ ನಡೆದಿರುವ ಇತಿಹಾಸವಿಲ್ಲ. ಕೇವಲ ಕುಶಾಲನಗರದಲ್ಲಿ ಮಾತ್ರ ಈ ಗಣಪತಿ ರಥೋತ್ಸವ ಅದ್ದೂರಿಯಾಗಿ ವರ್ಷ ವರ್ಷ ನಡೆಯುತ್ತಿದೆ. ಹರಿದು ಬಂದ ಭಕ್ತಸಾಗರ : ರಥೋತ್ಸವದ ಸಮಯದ ಸಂದರ್ಭಕ್ಕೆ ಕುಶಾಲನಗರ ಸುತ್ತಮುತ್ತಲಿನ ಗ್ರಾಮಗಳಿಂದ ಹಾಗೂ ನೆರೆಯ ಮೈಸೂರು ಹಾಗೂ ಹಾಸನ ಜಿಲ್ಲೆಗಳಿಂದಲು ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಭಕ್ತಾಧಿಗಳು ಹೆಚ್ಚಾಗಿ ಆಗಮಿಸಿದ್ದರಿಂದ ಉತ್ಸವಕ್ಕೆ ಜನಸಾಗರವೇ ಹರಿದು ಬಂದಂತಿತ್ತು. ಅಯ್ಯಪ್ಪ ವ್ರತದಾರಿಗಳ ಹರ್ಷೊದ್ಗಾರ: ಉತ್ಸವಕ್ಕೆ ರಥವು ತಯಾರಾಗುತ್ತಿದ್ದಂತೆ…
ವಿರಾಜಪೇಟೆ ಡಿ.1 : ವಿರಾಜಪೇಟೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ರೋಟರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. 1 ರಿಂದ 4ನೇ ತರಗತಿ ವಿಭಾಗದ ಭಕ್ತಿಗೀತೆ ಸ್ಪರ್ಧೆಯಲ್ಲಿ ಲಿಶ್ಮಿತಾ ಪ್ರಥಮ, 5 ರಿಂದ 7ನೇ ತರಗತಿ ವಿಭಾಗದಲ್ಲಿ ಪಾವನಿ ಲಘು ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿ ವಿರಾಜಪೇಟೆ ತಾಲೂಕನ್ನು ಪ್ರತಿನಿಧಿಸಲ್ಲಿದ್ದಾರೆ.
ಬೆಂಗಳೂರು ಡಿ.1 : ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿ ಅಂಗವಾಗಿ ಇಂದು ವಿಧಾನಸೌಧದ ಆವರಣದಲ್ಲಿ ಹನುಮಂತಯ್ಯನವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು. ಕೆಂಗಲ್ ಹನುಮಂತಯ್ಯ ಅವರ ಕುಟುಂಬಸ್ಥರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಹಾಗೂ ನಸೀರ್ ಅಹ್ಮದ್ ಮತ್ತಿತರ ಗಣ್ಯರು ಹಾಜರಿದ್ದರು.
ಮಡಿಕೇರಿ ಡಿ.30 : ಪೊಲೀಸರು ದೈಹಿಕ ಸಾಮರ್ಥ್ಯ ವನ್ನು ಕಾಪಾಡಿಕೊಳ್ಳಬೇಕೆಂದು ದಕ್ಷಿಣ ವಲಯ ಪೊಲೀಸ್ ಉಪ ಮಹಾ ನಿರೀಕ್ಷಕ ಡಾ.ಎಂ.ಬಿ.ಬೋರಲಿಂಗಯ್ಯ ಸಲಹೆ ನೀಡಿದರು. ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಮೂರು ದಿನಗಳ ಕಾಲ ನಡೆದ ಪೊಲೀಸರ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಪೊಲೀಸರು ಕ್ರೀಡೆ, ವ್ಯಾಯಾಮಗಳ ಮೂಲಕ ತಮ್ಮ ದೈಹಿಕ ಸಾಮಥ್ರ್ಯವನ್ನು ಸದಾ ಉತ್ತಮವಾಗಿ ಇಟ್ಟುಕೊಳ್ಳಬೇಕೆಂದು ಅವರು ಹೇಳಿದರು. ಪೊಲೀಸ್ ಇಲಾಖೆಯಲ್ಲೂ ಕ್ರೀಡೆಗೆ ಪ್ರಾಮುಖ್ಯತೆ ಇದ್ದು, ಈ ನಿಟ್ಟಿನಲ್ಲಿ ವಾರ್ಷಿಕ ಕ್ರೀಡಾಕೂಟಗಳನ್ನು ಪೊಲೀಸರಿಗಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ರಾಜಾ, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಂದರ್ ರಾಜ್ ಉಪಸ್ಥಿತರಿದ್ದರು. ಕ್ರೀಡಾಕೂಟದಲ್ಲಿ ಪೊಲೀಸರಿಗೆ ಕಬ್ಬಡ್ಡಿ, ಕ್ರಿಕೆಟ್, ವಾಲಿಬಾಲ್, ಹಗ್ಗಜಗ್ಗಾಟ, ಥ್ರೋಬಾಲ್, ಗುಂಡು ಹಾರಿಸುವುದು, ರಿಲೇ, ಓಟ, ಉದ್ದ ಜಿಗಿತ, ಎತ್ತರ ಜಿಗಿತ ಮತ್ತಿತರ ಸ್ಪರ್ಧೆಗಳು ನಡೆದವು. ಕಬ್ಬಡ್ಡಿಯಲ್ಲಿ ಡಿಎಆರ್ ಪ್ರಥಮ, ಸೋಮವಾರಪೇಟೆ ಉಪ ವಿಭಾಗ ದ್ವಿತೀಯ,…






