ಮಡಿಕೇರಿ ನ.4 : ಗ್ರಾ.ಪಂ ನೌಕರರ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘ ಕೊಡಗು ಜಿಲ್ಲಾ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿ.ಪಂ ಕಚೇರಿ ಎದುರು ಸಮಾವೇಶಗೊಂಡ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಗ್ರಾ.ಪಂ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್, ನೀರುಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು, ದಿನ ನಿತ್ಯದ ಬಳಸುವ ವಸ್ತುಗಳ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ರೂ.31,000 ನಿಗದಿಗೊಳಿಸಬೇಕು, ಎಲ್ಲಾ ನೌಕರರಿಗೆ ನಿವೃತ್ತಿ ಅಥವಾ ಮರಣ ಹೊಂದಿದರೆ ಪ್ರತಿ ತಿಂಗಳು ಕನಿಷ್ಠ 6000 ರೂ.ಪಿಂಚಣಿ ವ್ಯವಸ್ಥೆ ಜಾರಿ ಮಾಡಬೇಕು, ಈಗಾಗಲೇ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಿಕೊಂಡು ಮುಂದುವರಿಸಬೇಕು, ವಾಟರ್ ಮೆನ್, ಜವಾನ, ಸ್ವೀಪರ್ ಗಳಲ್ಲಿ ಕಂಪ್ಯೂಟರ್ ಜ್ಞಾನ ಹಾಗೂ…
ಲೇಖಕ: admin
ನಾಪೋಕ್ಲು ನ.4 : ಕ್ರೀಡೆ, ಶಿಕ್ಷಣ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಸಾರ್ಥಕತೆ ಪಡೆಯಬೇಕಾದರೆ ನಿರಂತರ ಪರಿಶ್ರಮ ಪಡಬೇಕು. ಇದರಿಂದ ಯಶಸ್ಸು ಪಡೆಯಲು ಸಾಧ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2023-24ರ ಸಾಲಿನ ಸಾಂಸ್ಕೃತಿಕ ಕ್ರೀಡಾ ಮತ್ತು ವಿವಿಧ ಸಮಿತಿಗಳನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸಂಪೂರ್ಣವಾಗಿ ನಿರ್ವಹಿಸಬೇಕು ಆಗ ಸಾರ್ಥಕತೆ ಸಿಗುತ್ತದೆ. ಭಾವನೆಗಳ ಮೂಲಕ ದೇಶ ಕಟ್ಟಲು ಸಾಧ್ಯವಿಲ್ಲ. ದುಡಿಯುವ ವರ್ಗದಿಂದ ದೇಶ ಪ್ರಗತಿ ಕಾಣಲಿದೆ. ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯವನ್ನು ರೂಪಿಸುವ ಕೆಲಸವನ್ನು ಮಾಡಬೇಕಿದೆ ಎಂದ ಅವರು ವಿದ್ಯಾರ್ಥಿಗಳು ದೂರ ದೃಷ್ಟಿ ಇರಿಸಿ ಕೆಲಸ ನಿರ್ವಹಿಸಬೇಕು. ಭವಿಷ್ಯದ ಕಡೆ ನಿಗಾವಹಿಸುವಂತಹ ಜವಾಬ್ದಾರಿ ಯುವ ಸಮುದಾಯದ ಮೇಲಿದೆ ಎಂದರು. ಕೊಡಗು ವಿಶ್ವ ವಿದ್ಯಾ ಲಯದ ಕುಲ ಸಚಿವ ಡಾ.ಸೀನಪ್ಪ ಮಾತನಾಡಿ, ಉತ್ತಮ ಭವಿಷ್ಯಕ್ಕಾಗಿ ಮಕ್ಕಳಲ್ಲಿ ಬದಲಾವಣೆ ಆಗಬೇಕು. ವಿದ್ಯಾರ್ಥಿಗಳು ಇಷ್ಟಪಟ್ಟು ಓದಿ…
ಮಡಿಕೇರಿ ನ.4 : ಇಸ್ರೇಲ್ ಮತ್ತು ಪ್ಯಾಲೆಸ್ತೀನಿನ ನಡುವಿನ ಅಶಾಂತಿಯ ಶಮನಕ್ಕೆ ವಿಶ್ವಶಾಂತಿಯನ್ನು ಬಯಸುವ ಭಾರತ ಮಧ್ಯ ಪ್ರವೇಶ ಮಾಡಬೇಕು. ಆ ಮೂಲಕ ಕದನ ವಿರಾಮಕ್ಕೆ ಹಾದಿ ಸುಗಮಗೊಳಿಸುವ ಮರ್ಗೋಪಾಯಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸುನ್ನಿ ಮಹಲ್ ಒಕ್ಕೂಟದ ಕೊಡಗು ಜಿಲ್ಲಾ ಸಮಿತಿ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಮಿತಿಯ ಜಿಲ್ಲಾಧ್ಯಕ್ಷ ಸಿ.ಎಂ.ಅಬ್ದುಲ್ ಹಮೀದ್ ಮೌಲವಿ ಸುಂಟಿಕೊಪ್ಪ, ಇಸ್ರೇಲ್ ದಾಳಿಯಿಂದ ಸಾವಿರಾರು ಅಮಾಯಕ ಜೀವಗಳು ಬಲಿಯಾಗುತ್ತಿವೆ, ಅನೇಕರು ಗಾಯಾಳುಗಳಾಗಿ ನರಳುತ್ತಿದ್ದಾರೆ. ಆದ್ದರಿಂದ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಜೊತೆಯಲ್ಲಿ ಉತ್ತಮ ಬಾಂಧವ್ಯ ಹೊಂದಿರುವ ಭಾರತ ರ್ಕಾರ ಶಾಂತಿಯನ್ನು ಕಾಪಾಡಲು ಮರ್ಗರ್ಶನ ಮಾಡಬೇಕೆಂದು ತಿಳಿಸಿದ್ದಾರೆ. ಎಲ್ಲಾ ರೀತಿಯ ದಾಳಿಗಳನ್ನು ತಕ್ಷಣ ನಿಲ್ಲಿಸಿ ಶಾಂತಿಯನ್ನು ಕಾಪಾಡಬೇಕು, ಅಮಾಯಕರ ಜೀವವನ್ನು ಉಳಿಸಬೇಕು. ಭಾರತ ರ್ಕಾರ ಮುಂದೆ ಬಂದು ಕದನ ವಿರಾಮ ಘೋಷಿಸುವಂತಹ ಕರ್ಯಕ್ಕೆ ಪ್ರಯತ್ನಿಸಬೇಕು. ಇಡೀ ಜಗತ್ತಿಗೇ ಮಾರಕವಾಗಿರುವ ಯುದ್ಧ ಯಾವುದಕ್ಕೂ ಪರಿಹಾರವಲ್ಲ, ಯುದ್ಧ ಮನುಕುಲದ ಮಾರಣಹೋಮಕ್ಕೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ಭಾರತ ಇಸ್ರೇಲ್ ನ…
ನಾಪೋಕ್ಲು ನ.4 : ಶೌರ್ಯ ವಿಪತ್ತು ನಿರ್ವಹಣ ಘಟಕದ ವತಿಯಿಂದ ನಾಪೋಕ್ಲುವಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ನಾಪೋಕ್ಲುವಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣವದಲ್ಲಿ ಘಟಕದ ಪದಾಧಿಕಾರಿಗಳು ಕಾಡು ಕಡಿದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕಾವೇರಿ ಹಾಗೂ ಪ್ರಾಧ್ಯಾಪಕ ವರ್ಗ ಶೌರ್ಯ ವಿಪತ್ತು ನಿರ್ವಹಣ ಘಟಕದ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು. ಶ್ರಮದಾನದಲ್ಲಿ ಘಟಕದ ಸಂಯೋಜಕಿ ಬಾಳೆಯಡ ದಿವ್ಯ, ಗೀತಾ, ಶಂಕರ್, ಸೀನ ಮಾಧವನ್, ದಿಲೀಶ್, ಮಾಯಿಲಪ್ಪ, ಚೇತನ್, ಸುದೀಪ್, ರವಿ, ಶರವಣ, ಚಂದ್ರಕಲ, ಉಮಾಲಕ್ಷ್ಮಿ, ದಮಯಂತಿ, ಶ್ಯಾಮಲಾ, ಸರಸ್ವತಿ, ಆಶಾ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ
ಬೆಂಗಳೂರು ನ.4 : ಬರ ಪರಿಸ್ಥಿತಿಯ ಸಂಪೂರ್ಣ ವಸ್ತುಸ್ಥಿತಿ ಹಾಗೂ ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಬರ ನಿರ್ವಹಣೆ ಕಾರ್ಯಕ್ರಮಗಳ ಬಗ್ಗೆ ಪ್ರತಿ ತಾಲ್ಲೂಕುಗಳಲ್ಲಿ ಮಾಧ್ಯಮಗಳಿಗೆ ವಿವರಿಸಿ, ನ.15ರೊಳಗೆ ವರದಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ. ರಾಜ್ಯದ 236 ತಾಲೂಕುಗಳ ಪೈಕಿ ಇದುವರೆಗೆ 216 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಬರದ ಹಿನ್ನೆಲೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರು, ಮೇವು, ಕೃಷಿ-ಕೈಗಾರಿಕೆಗಳಿಗೆ ನೀರು, ಬೆಳೆಹಾನಿ, ಜನರ ಉದ್ಯೋಗದ ಸ್ಥಿತಿ, ಬರ ಪರಿಹಾರ ವಿತರಣೆ ಮುಂತಾದ ಬರ ನಿರ್ವಹಣೆ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಚಿವ ಸಂಪುಟ ಸಭೆಗಳಲ್ಲಿ ಚರ್ಚಿಸಲಾಗಿದೆ. ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೂ ಹಲವು ಬಾರಿ ನಿರ್ದೇಶನ ನೀಡಲಾಗಿದೆ. ಆದರಿಂದ, ಜಿಲ್ಲಾ ಉಸ್ತುವಾರಿ ಸಚಿವರುಗಳು ಮುಂದಿನ ಎರಡು ವಾರಗಳಲ್ಲಿ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಿಗೆ ಭೇಟಿ ನೀಡಿ, ಕುಡಿಯುವ ನೀರು, ಮೇವು, ಉದ್ಯೋಗ, ಬೆಳಹಾನಿ, ಮುಂತಾದವುಗಳ ಸ್ಥಿತಿಗತಿಗಳ ಕುರಿತು ಪರಿಶೀಲಿಸಿ, ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ…
ಮಡಿಕೇರಿ ನ.4 : ಮಾಜಿ ಸಚಿವ ಹಾಗೂ ಹಿರಿಯ ಮುತ್ಸದ್ದಿ ಎಂ.ಸಿ ನಾಣಯ್ಯ ಅವರ ನಿವಾಸಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸೌಹಾರ್ದ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ , ಮಂಡ್ಯ ಶಾಸಕ ಪಿ.ರವಿಕುಮಾರ್ ಹಾಜರಿದ್ದರು.
ಗದಗ ನ.4 : ಗದಗದ ಶ್ರೀ ತೋಂಟದಾರ್ಯ ಮಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪೀಠಾಧಿಪತಿಗಳಾದ ಡಾ. ಶ್ರೀ ಸಿದ್ಧರಾಮ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಈ ಸಂದರ್ಭ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಕೆ.ಪಾಟೀಲ್ ಸೇರಿ ಹಲವರು ಹಾಜರಿದ್ದರು.
ಕಠ್ಮಂಡು: ಪ್ರಬಲ ಭೂಕಂಪಕ್ಕೆ ನೇಪಾಳ ರಾಷ್ಟ್ರ ನಲುಗಿ ಹೋಗಿದ್ದು, ಭೂಕಂಪದ ಪರಿಣಾಮ 128 ಮಂದಿ ಸಾವನ್ನಪ್ಪಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಹಿಮಚ್ಛಾದಿತ ಪ್ರದೇಶವಾಗಿರುವ ನೇಪಾಳದ ಪಶ್ಚಿಮ ಗಡಿ ಭಾಗದಲ್ಲಿ ನೆಲಮಟ್ಟದಿಂದ ಭೂಮಿಯ ಒಳಗೆ ಸುಮಾರು 18 ಕಿ.ಮೀ. ದೂರದಲ್ಲಿ ಕಂಪನ ಕೇಂದ್ರ ಸ್ಥಾನವಿತ್ತು. ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯನ್ನು ಈ ಕಂಪನಗಳು ಹೊಂದಿದ್ದವು ಎಂದು ಅಮೆರಿಕದ ಜಿಯೋಲಜಿಕಲ್ ಸರ್ವೆ ಇಲಾಖೆ ತಿಳಿಸಿದೆ. ಈ ನಡುವೆ ಕಂಪನದ ಕೇಂದ್ರ ಸ್ಥಾನದಿಂದ ಅಂದಾಜು 500 ಕಿ.ಮೀ. ದೂರವಿರುವ, ಭಾರತದ ರಾಜಧಾನಿ ದೆಹಲಿಯಲ್ಲೂ ಕಂಪನದ ಅನುಭವಗಳಾಗಿವೆ. ಆದರೆ, ಯಾವುದೇ ಕಟ್ಟಡ ಹಾನಿ ಅಥವಾ ಸಾವು ನೋವು ಸಂಭವಿಸಿಲ್ಲ. ದೆಹಲಿ – ರಾಷ್ಟ್ರ ರಾಜಧಾನಿ ಪ್ರಾಂತ್ಯ (ದೆಹಲಿ – ಎನ್ ಸಿಆರ್) ಹಾಗೂ ನೊಯ್ಡಾ ಮುಂತಾದ ಕಡೆಗಳಲ್ಲಿ ಕಂಪನದ ಅನುಭವ ಉಂಟಾಗಿದೆ ಎಂದು ತಿಳಿದುಬಂದಿದೆ. ಶುಕ್ರವಾರ ರಾತ್ರಿ 11:47 ಕ್ಕೆ ಜಜರ್ಕೋಟ್ನ ರಾಮಿದಂಡಾದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಸಾವು- ನೋವಿನ ಬಗ್ಗೆ ಪ್ರಧಾನಿ…
ಮಡಿಕೇರಿ ನ.4 : ದಲಿತ ಸಂಘರ್ಷ ಸಮಿತಿ ವತಿಯಿಂದ ಪುನೀತ್ ರಾಜ್ಕುಮಾರ್ ಅವರ ಪುಣ್ಯಸ್ಮರಣೆಯ ಸಲುವಾಗಿ ನಗರದಲ್ಲಿರುವ ನಿರ್ಗತಿಕರಿಗೆ ಸ್ವೆಟರ್ ವಿತರಿಸಲಾಯಿತು. ಡಿ.ಎಸ್.ಎಸ್ ನ ಪೋಷಕ ಡಾ. ಹೆಚ್.ವಿ. ದೇವದಾಸ್ ಸ್ವೆಟರ್ ವಿತರಣೆ ಮಾಡಿದರು. ಈ ಸಂದರ್ಭ ಡಿ.ಎಸ್.ಎಸ್ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮತ್ತು ನಗರ ಸಂಚಾಲಕ ಲೋಕನಾಥ ಹಾಜರಿದ್ದರು.
ಮಡಿಕೇರಿ ನ.3 : ಕೃಷಿ ಇಲಾಖೆ ಕಾರ್ಯಕ್ರಮಗಳ ಸಂಬಂಧ ಕಾಲಮಿತಿಯಲ್ಲಿ ಆರ್ಥಿಕ ಹಾಗೂ ಭೌತಿಕ ಗುರಿ ಸಾಧಿಸುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ತಲುಪಿಸುವ ಮೂಲಕ ರೈತರಿಗೆ ಸಹಕಾರಿಯಾಗುವಂತೆ ಸಲಹೆ ನೀಡಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸೋಮಸುಂದರ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಶೇ.39 ರಷ್ಟು ಮಳೆ ಕೊರತೆ ಉಂಟಾಗಿದೆ ಎಂದರು. ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ, ಮುಸುಕಿನ ಜೋಳ, ರಾಗಿ ಬಿತ್ತನೆ ಸಂಬಂಧಿಸಿದಂತೆ ಶೇ.67 ರಷ್ಟು ಪ್ರಗತಿ ಸಾಧಿಸಲಾಗಿದೆ. ಕಾಲ ಕಾಲಕ್ಕೆ ರಸಗೊಬ್ಬರ ಪೂರೈಕೆ ಮಾಡಲಾಗಿದೆ. ಹಾಗೆಯೇ ಬಿತ್ತನೆ ಬೀಜವನ್ನು ವಿತರಿಸಲಾಗಿದೆ ಎಂದು ತಿಳಿಸಿದರು. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಪ್ರಗತಿ ಸಾಧಿಸಲಾಗಿದೆ.…






