ಸುಂಟಿಕೊಪ್ಪ ನ.3 : ಗ್ರಾಮೀಣ ಜನಪದ ಸೊಗಡು ನಮ್ಮ ದಿನನಿತ್ಯದ ಆಗುಹೋಗುಗಳ ಸುಖ ದುಃಖಗಳ ಹಾಡುಪಾಡಾಗಿದ್ದು, ಇದರ ಒಟ್ಟು ಮೊತ್ತವೇ ಜನಪದ ಕಲೆಗಳಾಗಿ ಸಾಹಿತ್ಯ, ಸಂಗೀತ, ಆಚಾರ ವಿಚಾರ, ಆಟೋಗಗಳಲ್ಲಿ ಹೊರಹೊಮ್ಮಿವೆ. ಆದರೆ ಇಂದು ಗ್ರಾಮೀಣ ಸಂಸ್ಕೃತಿ ಅಳಿವಿನಂಚಿನಲ್ಲಿದೆ ಎಂದು ಕುಶಾಲನಗರದ ಅನುಗ್ರಹ ಪ್ರಥಮ ದರ್ಜೆ ಕಾಲೇಜ್ ನ ಕನ್ನಡ ಉಪನ್ಯಾಸಕಿ ಲೀಲಾಕುಮಾರಿ ತೊಡಿಕಾನ ಬೇಸರ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯಲ್ಲಿ ನಡೆದ ಸಂಪಾಜೆ ಸಣ್ಣಯ್ಯ ಪಟೇಲ್ ದತ್ತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು ಆಧುನೀಕತೆಯ ಭರಾಟೆಯಲ್ಲಿ ಗ್ರಾಮೀಣ ಸಂಸ್ಕೃತಿಯ ಸೊಗಡು ನಶಿಸುತ್ತಿದೆ ಎಂಬ ಅತಂಕ ನಮ್ಮನ್ನು ಕಾಡುತ್ತಿದೆ ಎಂದರು. ಹಿಂದೆ ಅವಿಭಕ್ತ ಕುಟುಂಬ ಪದ್ಧತಿ ಇದ್ದಾಗ ಹಳ್ಳಿ ಜೀವನದಲ್ಲಿ ಸಹಬಾಳ್ವೆ ಮತ್ತು ಕಾಯಕ ಸಂಸ್ಕೃತಿ ಪ್ರಧಾನವಾಗಿತ್ತು. ಅಂದಿನ ಗ್ರಾಮೀಣ ಕ್ರೀಡೆಗಳಾದ ಕಬ್ಬಡಿ, ಖೋಖೋ, ಚೆನ್ನಮಣೆ, ಯಕ್ಷಗಾನ, ದೈವರಾಧನೆ, ನಾಟಕ, ಜನಪದ ಹಾಡು, ಒಗಟು ಮತ್ತು ಗಾದೆಗಳು ಜನಪದಕ್ಕೆ ಜೀವ ತುಂಬುತ್ತಿದ್ದವು. ಆನೇಕ ಆಧುನಿಕ ರೋಗಗಳಿಗೆ ಜನಪದ ನಾಟಿವೈದ್ಯ…
ಲೇಖಕ: admin
ಮಡಿಕೇರಿ ನ.3 : ಸಾಮಾಜಿಕ ಜಾಗೃತಿ ಮೂಡಿಸುವ “ನಂಬಿಕೆ” ಕಿರುಚಿತ್ರದ ಪೋಸ್ಟರನ್ನು ನಗರದ ಶಕ್ತಿ ವೃದ್ಧಾಶ್ರಮದಲ್ಲಿ ಬಿಡಗಡೆ ಮಾಡಲಾಯಿತು. ವೃದ್ಧಾಶ್ರಮದ ಹಿರಿಯರು ಪೊಸ್ಟರ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು. ಈ ಸಂದರ್ಭ ಶಕ್ತಿ ವೃದ್ಧಾಶ್ರಮದ ವ್ಯವಸ್ಥಾಪಕ ಸತೀಶ್ ಮಾತನಾಡಿ, ವಿಶ್ವ ಕುಂಬೂರ್ ಅವರ ನಿಶು ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ನಂಬಿಕೆ” ಕಿರುಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಚಿತ್ರದ ಕ್ಯಾಮೆರಾ ಮೆನ್ ನಾಗೇಶ್ ಶೆಟ್ಟಿ, ಕಥೆ, ನಿರ್ದೇಶನ ಮಾಡಿದ ಗೌತಮ್ ಸೂರ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬೊಳ್ಳಜಿರ ಬಿ.ಅಯ್ಯಪ್ಪ, ಚಂದನ್ ನಂದರಬೆಟ್ಟು, ಉಳ್ಳಿಯಡ ಕಾವ್ಯ ಕಾವೇರಿ, ಸತೀಶ್, ಉಮೇಶ್, ನಟ, ನಿರ್ಮಾಪಕ ವಿಶ್ವ ಕುಂಬೂರ್ ಹಾಜರಿದ್ದರು. ಪೋಸ್ಟರ್ ಬಿಡುಗಡೆ ಪ್ರಯುಕ್ತ ಚಿತ್ರತಂಡದಿಂದ 110 ಕೆ.ಜಿ ಅಕ್ಕಿಯನ್ನು ವೃದ್ಧಾಶ್ರಮಕ್ಕೆ ನೀಡಲಾಯಿತು. ಕಿರುಚಿತ್ರದಲ್ಲಿ 12 ಜನ ಪತ್ರಕರ್ತರೆ ನಟಿಸುತ್ತಿರುವುದು ವಿಶೇಷ.
ಮಡಿಕೇರಿ ನ.3 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 8 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿದೆ. ಆದ್ದರಿಂದ ಈ 8 ಯೋಜನೆಗಳಿಗೆ 2023-24ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್ಲೈನ್ ಮೂಲಕ https://sevasindhu.karnataka.gov.in/Sevasindhu/DepartmentServicesKannada ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ನವೆಂಬರ್, 15 ರವರೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ವಿಕಲಚೇತನರು ನ.15 ರೊಳಗೆ ಅರ್ಜಿ ಸಲ್ಲಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಕೋರಿದ್ದಾರೆ. ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ. ಹೆಚ್ಚಿನ ಮಾಹಿತಿಗೆ 3 ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕಿನ ರಾಜೇಶ್- 8073192914, ಸೋಮವಾರಪೇಟೆ ತಾಲ್ಲೂಕಿನ ಹರೀಶ್ ಟಿ.ಆರ್–9008685129 ಹಾಗೂ ವಿರಾಜಪೇಟೆ ತಾಲ್ಲೂಕಿನ ಪ್ರಥನ್ ಕುಮಾರ್…
ಮಡಿಕೇರಿ ನ.3 : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ನವೆಂಬರ್, 08 ರಂದು ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ನ.10 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ನ.3 : ಪದವೀಧರ/ಸ್ನಾತಕ ಪದವೀಧರ ವಿದ್ಯಾರ್ಥಿಗಳಿಗೆ ಬ್ಯಾಂಕ್ ನೇಮಕಾತಿ ಪರೀಕ್ಷೆಗಳ ಬಗ್ಗೆ ಜಾಗೃತಿ ಮೂಡಿಸಲು ನ.10 ರಂದು ಬೆಳಗ್ಗೆ 10.30 ಗಂಟೆಗೆ ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್ (ರಿ) ನಲ್ಲಿ ರಾಜ್ಯದ ಖ್ಯಾತ ಅಂಕಣಕಾರರು ಮತ್ತು ತರಬೇತುದಾರರಾದ ಆರ್.ಕೆ.ಬಾಲಚಂದ್ರ ಅವರಿಂದ “ಬ್ಯಾಂಕ್ ಪರೀಕ್ಷೆಗಳ ಕುರಿತು ಉಚಿತ ಜಾಗೃತಿ ಕಾರ್ಯಾಗಾರ” ನಡೆಯಲಿದೆ. ನ.9 ರೊಳಗೆ ಮೊಬೈಲ್ ಸಂಖ್ಯೆ 8660217739 ಕ್ಕೆ ಕರೆ/ ವಾಟ್ಸಪ್ ಮಾಡಿ ಅಥವಾ https://tinyurl.com/Free-orientation ಲಿಂಕ್ ಕ್ಲಿಕ್ ಮಾಡಿ ತಮ್ಮ ಹೆಸರು ನೊಂದಾಯಿಸಿಕೊಂಡು ಈ ಅವಕಾಶದ ಸದುಪಯೋಗಪಡಿಸಿಕೊಳ್ಳುವಂತೆ ಕೃಷಿಕ್ ಸರ್ವೋದಯ ಫೌಂಡೇಶನ್ ಕಾರ್ಯದರ್ಶಿ ಎಚ್.ಪಿ.ಮೋಹನ್ ತಿಳಿಸಿದ್ದಾರೆ.
ಹೆಬ್ಬಾಲೆ ನ.3 : ಒಂದು ಭಾಷೆ ಬೆಳವಣಿಗೆ ಆಗಬೇಕಾದರೆ ಅನ್ಯ ಭಾಷೆಯ ಸಂಪರ್ಕ ಅತಿ ಅವಶ್ಯಕ. ಹಾಗೆಂದು ನಮ್ಮ ಮಾತೃಭಾಷೆಯನ್ನು ಮರೆಯಬಾರದು. ನಮ್ಮ ಮಾತೃಭಾಷೆಯಾದ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕಿ ಫಾನ್ಸಿ ಮುತ್ತಣ್ಣ ಅಭಿಪ್ರಾಯಪಟ್ಟರು. ಉತ್ತರ ಕೊಡಗು ಜಿಲ್ಲೆಯ ಹೆಬ್ಬಾಲೆ ವಿದ್ಯಾವರ್ಧಕ ವಿದ್ಯಾ ಸಂಘದ ವತಿಯಿಂದ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: 50 ರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ನಾಡು- ನುಡಿ, ಸಂಸ್ಕೃತಿ ಸಂರಕ್ಷಣೆ ಕುರಿತು ಮಾತನಾಡಿದರು. ಭಾಷೆಯ ಸೊಗಡು, ಭಾಷಾ ಸಂಸ್ಕೃತಿ ಉತ್ತಮವಾಗಿ ಬೆಳೆಯುತ್ತಿದೆಯೆಂದರೆ ಅದು ಗ್ರಾಮೀಣ ಪ್ರದೇಶದಲ್ಲಿ, ಅಪ್ಪ – ಅಮ್ಮ, ಅಕ್ಕ-ತಂಗಿ, ಈ ಭಾಷೆಯಲ್ಲಿ ಪ್ರೀತಿ ಇದೆ. ಇಂಥ ಭಾಷೆಯನ್ನ ಬೆಳೆಸೋಣ ಎಂದು ಹೇಳಿದರು. ವಿದ್ಯಾವರ್ಧಕ ಸಂಘದ ನಿರ್ದೇಶಕ ಹೆಚ್ ಹೆಚ್ ಸುಂದರ್ ಮಾತನಾಡಿ, ಸ್ವಾತಂತ್ರ ಪೂರ್ವದಲ್ಲಿ ಭಾರತದಲ್ಲಿ ಸುಮಾರು…
ಮಡಿಕೇರಿ ನ.3 : ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಗ್ರಾಮದಲ್ಲಿ 66/11ಕೆ.ವಿ ವಿದ್ಯುತ್ ಉಪಕೇಂದ್ರವನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು. ಈ ಸಂದರ್ಭ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಮತ್ತಿತರರು ಹಾಜರಿದ್ದರು.
ಮಡಿಕೇರಿ ನ.3 : ವಿದ್ಯುತ್ ಮತ್ತು ರೈಲ್ವೆ ಖಾಸಗೀಕರಣವನ್ನು ವಿರೋಧಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಕೊಡಗು ಜಿಲ್ಲಾ ಸಮಿತಿ ನೇತೃತ್ವದಲ್ಲಿ ರೈತ ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಚೆಸ್ಕಾಂ ಕಚೇರಿಯ ಎದುರು ಜಮಾಯಿಸಿದ ಕಾರ್ಮಿಕರು ಹಾಗೂ ಸಂಘಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಕೇಂದ್ರ ಸರ್ಕಾರ ವಿದ್ಯುತ್ ಮತ್ತು ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡುವ ಮೂಲಕ ಸರ್ಕಾರಿ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿದೆ ಎಂದು ಆರೋಪಿಸಿದರು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಬಂಡವಾಳಶಾಹಿ ಪರವಾದ ನೀತಿಗಳನ್ನು ಜಾರಿಗೆ ತರುತ್ತಿರುವುದರಿಂದ ದೇಶದ ದುಡಿಯುವ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಸಾಲಬಾಧೆಗೆ ಸಿಲುಕಿ ಸಮಸ್ಯೆ ಎದುರಿಸುತ್ತಿದ್ದಾರೆ. ಬೆಳೆದ ಬೆಳೆಗಳಿಗೆ ಸೂಕ್ತ, ವೈಜ್ಞಾನಿಕ ಬೆಲೆ ಸಿಗದೆ ಬೇಸತ್ತಿರುವ ಕೃಷಿಕರು ಕೃಷಿ ಕಾರ್ಯ ತೊರೆಯುತ್ತಿದ್ದಾರೆ. ರೈತರ ಪಂಪ್ಸೆಟ್ಗಳಿಗೆ 10 ಹೆಚ್ಪಿವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆಯನ್ನಷ್ಟೇ ಮಾಡಿದ್ದಾರೆ. ಆದರೆ ರೈತರಿಗೆ ಈ…
ಮಡಿಕೇರಿ ನ.3 : ವೈಜ್ಞಾನಿಕ ಕೃಷಿ ,ಸಮರ್ಪಕ ಯಾಂತ್ರೀಕರಣ , ಸಮಗ್ರ ಬೇಸಾಯ ಪದ್ದತಿ ಅಳವಡಿಕೆ ರೈತರ ಆರ್ಥಿಕತೆ ಹೆಚ್ಚಿಸಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಕೂರ್ಗ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಏರ್ಪಡಿಸಿರುವ ಮೂರು ದಿನಗಳ ಕೃಷಿ ಯಂತ್ರ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ಜನಸಾಮಾನ್ಯರು, ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಸರ್ಕಾರದ ಆದ್ಯತೆ ಎಂದರು. ರಾಜ್ಯದ ಸರ್ಕಾರದ ಕೃಷಿಕರ ಅನುಕೂಲಕ್ಕಾಗಿ 600ಕ್ಕೂ ಹೆಚ್ಚು ಯಂತ್ರಧಾರೆ ಕೇಂದ್ರ ಗಳನ್ನು ತೆರದಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ಯಂತ್ರೀಕರಣ ಪ್ರೋತ್ಸಾಹ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಹೈಟೆಕ್ ಕಟಾವು ಹಬ್ ಸ್ಥಾಪನೆಗೆ 50 ಕೋಟಿ ಮೀಸಲಿರಿಸಲಾಗಿದ್ದು 70:30ರ ಸಹಾಯಧನ ಬಂಡವಾಳ ಹೂಡಿಕೆ ಅನುಪಾತದಲ್ಲಿ ರೈತರೇ ಇದನ್ನು ಸ್ಥಾಪಿಸಿ ನಡೆಸ ಬಹುದಾಗಿದೆ ಎಂದು ಸಚಿವರು ಹೇಳಿದರು. ಕೂರ್ಗ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆ ವತಿಯಿಂದ ಖಾಸಗಿಯಾಗಿ ವಿದ್ಯಾರ್ಥಿಗಳಿಗೆ ಕೃಷಿಯಲ್ಲಿ ತಾಂತ್ರಿಕ ಶಿಕ್ಷಣ ನಿಡುತ್ತಿರುವುದು…
ಹಂಪಿ(ವಿಜಯನಗರ) ನ.3 : ಕರ್ನಾಟಕ ಸಂಭ್ರಮ 50 ರ ಕಾರ್ಯಕ್ರಮವನ್ನು ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಜಯನಗರ ಜಿಲ್ಲೆ ಹೊಸಪೇಟೆಯ ವಿಶ್ವವಿಖ್ಯಾತ ಹಂಪಿಯಲ್ಲಿ ನಿನ್ನೆ ಗುರುವಾರ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ- 50” ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಜ್ಯೋತಿಯನ್ನು ಬೆಳಗಿ ನಗಾರಿ ಬಾರಿಸುವುದರ ಮೂಲಕ ಉದ್ಘಾಟಿಸಿದರು. ವರ್ಷವೀಡಿ ರಾಜ್ಯಾದ್ಯಂತ ಸಂಚಾರಿಸುವ ಕನ್ನಡ ರಥಯಾತ್ರೆಗೂ ಚಾಲನೆ ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿಗಳು ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆಧ್ಯತೆಯಾಗಿದೆ. ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು. ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371ಜೆ…






