ಲೇಖಕ: admin

ವಿರಾಜಪೇಟೆ ನ.3 : ವಿರಾಜಪೇಟೆಯ ಆರ್ಜಿ ಗ್ರಾಮದ ಕಲ್ಲುಬಾಣೆಯ ಕಲ್ಲುಬಾಯ್ಸ್ ತಂಡದ ವತಿಯಿಂದ ನ.17, 18 ಹಾಗೂ 19 ರಂದು ನಡೆಯಲಿರುವ ಕಲ್ಲುಬಾಯ್ಸ್ ನೈಸ್- ಹೈಟೆಕ್ ಕಪ್ ಫುಟ್ಬಾಲ್ ಪಂದ್ಯಾವಳಿಯ ಲೋಗೋವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಅನಾವರಣಗೊಳಿಸಿದರು. ಕಲ್ಲುಬಾಣೆಯ ಬದ್ರಿಯ ಶಾಲಾ ಆವರಣದಲ್ಲಿ ನಡೆದ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲಾಂಛನ ಅನಾವರಣಗೊಳಿಸಿ, ಕಾರ್ಯಕ್ರಮದ ಪೋಸ್ಟರ್‍ನ್ನು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಈ ಸಂದರ್ಭ ಕಲ್ಲುಬಾಯ್ಸ್ ತಂಡದ ಅಧ್ಯಕ್ಷ ರಹೀಂ ಮಾತನಾಡಿ, ಟಿ.17ರಂದು ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ನಡೆಯಲಿದ್ದು, ಇಂಡಿಯನ್ ಪೂಟ್ಬಾಲ್ ಆಟಗಾರ ಮಹಮ್ಮದ್ ರಾಫಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇನ್ನಿತ್ತರ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳಲಿದ್ದಾರೆ ಎಂದು ಮಾಹಿತಿ ನೀಡಿದರು. ಕಲ್ಲುಬಾಯ್ಸ್ ತಂಡದ ಸದಸ್ಯರಾದ ನೌಫಲ್, ಫೈಜಲ್, ಶಾಫಿ, ಫಾಜಿಲ್, ಆರ್ಜಿ ಗ್ರಾಮ ಪಂಚಾಯಿತಿಯ ಸದಸ್ಯ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾ ಅಧ್ಯಕ್ಷ ಕೆ.ಟಿ. ಬಷೀರ್, ಕೊಡಗು…

Read More

ಮಡಿಕೇರಿ ನ.2 : ನಮ್ಮ ಸಂಸ್ಕೃತಿಯೊಳಗಿನ ಮೂಲಾಂಶಗಳು ದಾಖಲಾತಿಗೊಳ್ಳುವ ಅಗತ್ಯ ಇದೆ. ಆದರೆ ಕೇಡನ್ನು ಮುಂದಿಡುವ ಸಂಸ್ಕೃತಿಯನ್ನು ಇಲ್ಲವಾಗಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಯನ್ನು ರೂಪಿಸುವ ಪ್ರಯತ್ನವನ್ನು ಮಾಡಬೇಕಾಗಿದೆ. ಅಂತಹ ಪ್ರಯತ್ನವನ್ನು ಸಂಶೋಧಕಿ ಪೂರ್ಣಿಮಾ ರವಿ ಅವರು ತಮ್ಮ “ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್” ಎಂಬ ಸಾಕ್ಷ್ಯಚಿತ್ರದ ಮೂಲಕ ಮಾಡಿ ತೋರಿಸಿದ್ದಾರೆ ಎಂದು ಖ್ಯಾತ ಚಲನಚಿತ್ರೋದ್ಯಮಿ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ಇಂಗ್ಲೀಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಇಂಗ್ಲೀಷ್ (ಯುಜಿ), ಸಮಾಜಶಾಸ್ತ್ರ, ಸಮಾಜಕಾರ್ಯ, ಕನ್ನಡ ಹಾಗೂ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ “ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ ಸಾಕ್ಷ್ಯಚಿತ್ರ ಪ್ರದರ್ಶನ ಕಾರ್ಯಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾಕ್ಷ್ಯಚಿತ್ರ ತಯಾರಿಸಿದ ಪೂರ್ಣಿಮಾ ರವಿ ಅವರನ್ನು ಅಭಿನಂದಿಸಿ ಅಂತರರಾಷ್ಟ್ರೀಯ ಮಟ್ಟದ ಚಿತ್ರೋತ್ಸವಕ್ಕೆ ಸಾಕ್ಷ್ಯಚಿತ್ರವನ್ನು ಕಳುಹಿಸುವಂತೆ ಸಲಹೆ ನೀಡಿದರು. ಸಂಶೋಧನಾ ಮಾರ್ಗದರ್ಶಕರಾದ ಡಾ.ನಯನ ಕಶ್ಯಪ್ ಮಾತನಾಡಿ ಪೂರ್ಣಿಮಾ ರವಿ ಅವರು ಇಂಗ್ಲೀಷ್ ಸಾಹಿತ್ಯ ಕೃತಿಗಳಲ್ಲಿ ದೇವದಾಸಿಗಳ…

Read More

ಕುಶಾಲನಗರ, ನ.2 : ಸ್ಥಳೀಯ ಸ್ನೇಹಿತರ ಬಳಗದ ವತಿಯಿಂದ ಹಿರಿಯ ಪತ್ರಿಕಾ ವಿತರಕ ವಿ ಪಿ ಪ್ರಕಾಶ್ ಅವರಿಗೆ ನೂತನ ಬೈಸಿಕಲ್ ಒಂದನ್ನು ಕೊಡುಗೆ ನೀಡಲಾಯಿತು.  ಕಳೆದ ಆರು ದಶಕಗಳಿಂದ ಕುಶಾಲನಗರದಲ್ಲಿ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸುತ್ತಿರುವ ವಿ ಪಿ ಪ್ರಕಾಶ್ ಅವರ ಸೈಕಲ್ ಅನ್ನು ಇತ್ತೀಚೆಗೆ ಕಳ್ಳರು ಕದ್ದಿದ್ದು, ಇದರಿಂದ ಪತ್ರಿಕೆಗಳ ವಿತರಣೆಗೆ ಅನಾನುಕೂಲ ಉಂಟಾಗಿತ್ತು. ಇದನ್ನು ಮನಗಂಡ ಕುಶಾಲನಗರದ ಸಮಾಜಸೇವಕ ಕೆ ಎಸ್ ಶಶಿಕುಮಾರ್ ಗೌಡ, ಕೆ ಜಿ ಮನು ಮತ್ತು ಸ್ನೇಹಿತರ ಬಳಗ ಸೇರಿ ಗುರುವಾರ ಬೆಳಗ್ಗೆ ಸೈಕಲ್ ಒಂದನ್ನು ಪ್ರಕಾಶ್  ಅವರಿಗೆ ಹಸ್ತಾಂತರಿಸಿದರು.  ಈ ಸಂದರ್ಭ ಬಳಗದ ಪ್ರಮುಖರಾದ ಶಿವಾಜಿ, ಎಂ ಡಿ ಕೃಷ್ಣಪ್ಪ,ರವಿ, ಕೆ ಎನ್ ದೇವರಾಜ, ಪ್ರಶಾಂತ್, ದಯಾನಂದ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್ ಇದ್ದರು.

Read More

ಮಡಿಕೇರಿ ನ.2 : ಕಥೆ, ಕವನ, ಬರೆಯುವವರು, ಒಂದು ಪುಸ್ತಕ ಬರೆದವರು ಸಾಹಿತಿಗಳಾಗಲು ಸಾಧ್ಯವಿಲ್ಲ. ಅವರು ಕೇವಲ ಬರಹಗಾರರಷ್ಟೆ, ಹಲವು ಪುಸ್ತಕ ಬರೆದು, ಅಪಾರ ಜ್ಞಾನ ಹೊಂದಿದವರು ಮಾತ್ರ ನಿಜವಾದ ಸಾಹಿತಿಗಳು ಎಂದು ಬ್ರಹ್ಮಗಿರಿ ವಾರಪತ್ರಿಕೆಯ ಸಂಪಾದಕ ಡಾ.ಉಳ್ಳಿಯಡ ಎಂ.ಪೂವಯ್ಯ ಅಭಿಪ್ರಾಯಪಟ್ಟಿದ್ದಾರೆ. ನಗರದ ಪತ್ರಿಕಾಭವನದ ಸಭಾಂಗಣದಲ್ಲಿ ಕೊಡವ ಮಕ್ಕಡ ಕೂಟದ ವತಿಯಿಂದ ಲೇಖಕಿ ತೆನ್ನಿರ ಟೀನಾ ಚಂಗಪ್ಪ ಬರೆದಿರುವ “ಮರ್‍ಂಜ ಪಾಳೆ” ಕೊಡವ ಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಪುಸ್ತಕ ಪ್ರಕಟಿಸುವವರಿಗೆ ತಾಳ್ಮೆ, ಮುಂದಾಲೋಚನೆ, ತ್ಯಾಗಮನೋಭಾವ ಮತ್ತು ವಿಮರ್ಶಾ ಶಕ್ತಿ ಇರಬೇಕು. ಆಗ ಮಾತ್ರ ಪುಸ್ತಕ ಪ್ರಕಟಣೆಗೆ ಅರ್ಹತೆ ಪಡೆದುಕೊಳ್ಳುತ್ತದೆ. ಕನ್ನಡ ಭಾಷೆಯಲ್ಲಿ ಲಕ್ಷೋಪ ಲಕ್ಷ ಪುಸ್ತಕಗಳು ಇದ್ದು, ಅದನ್ನು ಯಾರಿಗೂ ಎಣಿಕೆ ಮಾಡಲು ಸಾಧ್ಯವಿಲ್ಲ. ಆದರೆ ಕೊಡವ ಭಾಷಾ ಪುಸ್ತಕ ಅಂದಾಜು 700 ರಷ್ಟು ಇದ್ದು, ಅದರ ಬೆಳವಣಿಗೆಗೆ ಎಲ್ಲರೂ ಮುಂದಾಗಬೇಕು ಎಂದರು. 1900ರಲ್ಲಿ ಆದಿಕವಿ ಹರಿದಾಸ ಅಪ್ಪಚ್ಚ ಕವಿ ಕೊಡವ ಭಾಷೆಯ ಪ್ರಥಮ ಮುದ್ರಣವನ್ನು ಹೊರತಂದಿದ್ದು, ಅಂದಿನಿಂದ ಕೊಡವ…

Read More

ಮಡಿಕೇರಿ ನ.2 : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2022-23 ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್‍ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳ ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ಚಿತ್ರಕಲೆ, ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ಹೀಗೆ 6 ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಗುವಾಗಿರಬೇಕು. ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರ ಒಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ನವೆಂಬರ್, 18 ರೊಳಗೆ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸ ಮಾನ್ಯ ಯೋಜನಾಧಿಕಾರಿಗಳು, ಚಂದ್ರಿಕಾ ಬಡಾವಣೆ ಹಿಂಭಾಗ ಕೆಎಚ್‍ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004, ದೂರವಾಣಿ ಸಂಖ್ಯೆ 0836-2461666 ಕ್ಕೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸುವುದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹಾಗೆಯೇ ಈಗಾಗಲೇ ಬಾಲಗೌರವ ಪ್ರಶಸ್ತಿ ಪಡೆದವರ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಈ ಪ್ರಶಸ್ತಿಯ ಅರ್ಜಿ ನಮೂನೆ/…

Read More

ಮಡಿಕೇರಿ ನ.2 : 2023-24ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್‍ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08272-225531 ಅನ್ನು ಸಂಪರ್ಕಿಸಬಹುದು. ಯೋಜನೆಗಳ ವಿವರ: ಪರಿಶಿಷ್ಟ ಜಾತಿಯವರಿಗೆ ಸ್ವಯಂ-ಉದ್ಯೋಗ (ನೇರಸಾಲ) ಯೋಜನೆ(ಘಟಕ ವೆಚ್ಚ ರೂ.1 ಲಕ್ಷ), ಉದ್ಯಮಶೀಲತಾ ಯೋಜನೆ (ಘಟಕ ವೆಚ್ಚ ರೂ.2 ಲಕ್ಷ), ಉದ್ಯಮಶೀಲತಾ ಯೋಜನೆ (ಸರಕು ಸಾಗಣಿಕೆ/ ನಾಲ್ಕು ಚಕ್ರಗಳ ವಾಹನ ಮತ್ತಿತರ) (ಘಟಕ ವೆಚ್ಚ ರೂ.4 ಲಕ್ಷ), ಭೂ ಒಡೆತನ ಯೋಜನೆ, ಪರಿಶಿಷ್ಟ ಪಂಗಡದವರಿಗೆ ಸ್ವಯಂ-ಉದ್ಯೋಗ (ನೇರಸಾಲ) ಯೋಜನೆ(ಘಟಕ ವೆಚ್ಚ ರೂ.1 ಲಕ್ಷ), ಉದ್ಯಮಶೀಲತಾ ಯೋಜನೆ (ಘಟಕ ವೆಚ್ಚ ರೂ.2 ಲಕ್ಷ), ಉದ್ಯಮಶೀಲತಾ ಯೋಜನೆ(ಸರಕು ಸಾಗಣಿಕೆ/…

Read More

ಮಡಿಕೇರಿ ನ.2 : ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ನ.3 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಗೆ ಪೊನ್ನಂಪೇಟೆಯಲ್ಲಿ ನಡೆಯುವ ಕೃಷಿ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬೆಳಗ್ಗೆ 11.50 ಗಂಟೆಗೆ ಶ್ರೀಮಂಗಲ 66 ಕೆ.ವಿ.ವಿದ್ಯುತ್ ಉಪ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆಗೆ ಕೃಷಿ ಪ್ರಶಸ್ತಿ ವಿಜೇತರಾದ ರವಿಶಂಕರ್ ಅವರ ಹುದ್ದೂರು ಬಳಿಯ ಸಸ್ಯ ತಳಿ ಸಂರಕ್ಷಣಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ನಂತರ ಸಂಜೆ 4 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ(ಜಿಲ್ಲಾಧಿಕಾರಿ ಕಚೇರಿ) ನಡೆಸಲಿದ್ದಾರೆ ಎಂದು ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಎಚ್.ಜಿ.ಪ್ರಭಾಕರ್  ತಿಳಿಸಿದ್ದಾರೆ.

Read More

ಮಡಿಕೇರಿ ನ.2 : ವಿರಾಜಪೇಟೆ ತಾಲ್ಲೂಕಿನ ಪೊದಕೋಟೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಕಳೆದ ಒಂದು ವಾರದಿಂದ ಸುಮಾರು ಮೂರು ಕಾಡಾನೆಗಳು ಗದ್ದೆ ಮತ್ತು ತೋಟಗಳಿಗೆ ಲಗ್ಗೆ ಇಡುತ್ತಿದ್ದು, ಫಸಲನ್ನು ನಾಶ ಪಡಿಸುತ್ತಿವೆ. ಸ್ಥಳೀಯ ರೈತ ಮಂಡೇಪಂಡ ಗಣಪತಿ ಅವರ ಗದ್ದೆಯಲ್ಲಿ ಬೆಳೆದ ಬೆಳೆಯನ್ನು ಧ್ವಂಸ ಮಾಡಿರುವ ಆನೆಗಳು ತೋಟಗಳಿಗೂ ನುಗ್ಗಿ ಹಾನಿ ಮಾಡಿವೆ. ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆನಷ್ಟಕ್ಕೆ ತಕ್ಷಣ ಪರಿಹಾರ ವಿತರಿಸಬೇಕೆಂದು ಬೆಳೆಗಾರರು ಒತ್ತಾಯಿಸಿದ್ದಾರೆ.

Read More

ಕೊಪ್ಪಳ, ನ.2 : ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬರಪರಿಹಾರ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ವಿಳಂಬವೇಕೆ ತೋರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕೇಂದ್ರ ಸರ್ಕಾರಕ್ಕೆ ಬರಪರಿಹಾರ 17,900 ಕೋಟಿ ರೂ.ಗಳನ್ನು ಕೋರಿ ಮನವಿ ಸಲ್ಲಿಸಿದೆ. ರಾಜ್ಯದ ಸಚಿವರ ಭೇಟಿಗೂ ಸಮಯ ನೀಡದೇ , ಪರಿಹಾರ ಮೊತ್ತವನ್ನು ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ.   ಕೇಂದ್ರಸರ್ಕಾರ  ನರೇಗಾ ಯೋಜನೆಯಡಿ ದಿನಗೂಲಿ ಕಾರ್ಮಿಕರ ವೇತನ 600 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ ಎಂದರು. *ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆಗೆ ಚರ್ಚೆ :* ಕೇಂದ್ರ ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೆವಾಲ ಹಾಗೂ  ವೇಣುಗೋಪಾಲ್ ಅವರು ರಾಜ್ಯಕ್ಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ನಾಯಕರು ರಾಜ್ಯಕ್ಕೆ…

Read More

ಮಡಿಕೇರಿ ನ.2 : ಚೆಟ್ಟಳ್ಳಿಯ ಅವರ್ ಕ್ಲಬ್ ವತಿಯಿಂದ ನ.4 ರಂದು ವಿವಾಹಿತ ಮಹಿಳೆಯರ ಮುಕ್ತ ನಾಕೌಟ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಕ್ಲಬ್ ನ ಅಧ್ಯಕ್ಷೆ ಐಚೆಟ್ಟಿರ ಸುನಿತಾ ಮಾಚಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೆಟ್ಟಳ್ಳಿಯ ಪ್ರೌಢಶಾಲಾ ಮೈದಾನದಲ್ಲಿ ಬೆಳಗ್ಗೆ 8.30 ಗಂಟೆಗೆ ನಡೆಯಲಿರುವ ಪಂದ್ಯಾವಳಿಯನ್ನು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ನಿವೃತ್ತ ಪ್ರಾಂಶುಪಾಲರಾದ ಮಂಡೇಪಂಡ ಡಾ.ಪುಷ್ಪಾ ಕುಟ್ಟಣ್ಣ ಉದ್ಘಾಟಿಸಲಿದ್ದಾರೆ ಎಂದರು. 6 ಓವರ್ ಗಳ ಪಂದ್ಯಾವಳಿ ನಡೆಯಲಿದ್ದು, 25 ವರ್ಷ ಮೇಲ್ಪಟ್ಟ ವಿವಾಹಿತ ಮಹಿಳೆಯರಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಒಟ್ಟು 15 ತಂಡಗಳು ಪಾಲ್ಗೊಳ್ಳಲಿವೆ. ವಿಜೇತ ತಂಡಕ್ಕೆ ರೂ.21 ಸಾವಿರ ನಗದು ಮತ್ತು ಟ್ರೋಫಿ, ದ್ವಿತೀಯ ರೂ.11 ಸಾವಿರ ನಗದು ಮತ್ತು ಟ್ರೋಫಿ, ತೃತೀಯ ರೂ.6 ಸಾವಿರ ನಗದು ಮತ್ತು ಟ್ರೋಫಿ ನೀಡಲಾಗುವುದು. ಅಲ್ಲದೆ, ಬೆಸ್ಟ್ ಬೌಲರ್, ಬೆಸ್ಟ್ ಬ್ಯಾಟರ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಬಹುಮಾನ ವಿತರಿಸಲಾಗುವದು. ಇದರೊಂದಿಗೆ ಚಿಯರ್ ಲೀಡಿಂಗ್…

Read More