ಮಡಿಕೇರಿ ನ.1 : ರಾಜ್ಯಗಳ ಮರು-ಸಂಘಟನಾ ಕಾಯಿದೆ 1956 ರ ಒಪ್ಪಂದಗಳಿಗೆ ಕರ್ನಾಟಕ ರಾಜ್ಯ ಬದ್ಧವಾಗಿಲ್ಲ, ಇದರಿಂದ ಕೊಡವರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕನ್ನಡ ರಾಜ್ಯೋತ್ಸವದ ದಿನವಾದ ಇಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸುವ ಮೂಲಕ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿತು. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತತ್ತೆ ಬೇಡಿಕೆಯನ್ವಯ 2ನೇ ರಾಜ್ಯ ಮರು ಸಂಘಟನೆ ಆಯೋಗ ರಚಿಸಬೇಕೆಂದು ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಒತ್ತಾಯಿಸಿದರು. ಜಿಲ್ಲಾಡಳಿತದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ 9 ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ ಅವರು ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಮಾಜಿ ಕೇಂದ್ರ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ಸಲ್ಲಿಸಿ ಕೊಡವ ಲ್ಯಾಂಡ್ ಪರವಾಗಿ ಆಯೋಗವನ್ನು ರಚಿಸಬೇಕೆಂದು ಪ್ರತಿಪಾದಿಸಿದ್ದಾರೆ. ಸರ್ಕಾರಗಳು ಈ ಪ್ರಸ್ತಾಪವನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಅತ್ಯಂತ ಸೂಕ್ಷ್ಮ ಬುಡಕಟ್ಟು…
ಲೇಖಕ: admin
ಕುಶಾಲನಗರ/ಕೂಡಿಗೆ, ನ.1 : ಕನ್ನಡ ನಾಡಿನ ನಾಡು- ನುಡಿ, ಭಾಷೆ, ಸಂಸ್ಕೃತಿ, ಸಾಹಿತ್ಯ, ಪರಂಪರೆಯನ್ನು ಉಳಿಸಿ ಬೆಳೆಸುವುದಕ್ಕೆ ಸರ್ಕಾರದ ಜತೆಗೆ ನಾಡಿನ ಜನರು ಸಹಕರಿಸುವ ಮೂಲಕ ಕೈಜೋಡಿಸಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ನಿವೃತ್ತ ಮುಖ್ಯ ವ್ಯವಸ್ಥಾಪಕರು ಹಾಗೂ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಸೂದನ ರತ್ನಾವತಿ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತಿ ಹಾಗೂ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ ರಾಷ್ಟ್ರಕವಿ ಕುವೆಂಪು ಕನ್ನಡ ಭಾಷಾ ಸಂಘದ ವತಿಯಿಂದ ಪ್ರೌಢಶಾಲೆಯಲ್ಲಿ ಎನ್.ಎಸ್.ಎಸ್., ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಎಸ್ ಡಿ ಎಂ ಸಿ ಹಾಗೂ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: 50 ರ ಕಾರ್ಯಕ್ರಮದಲ್ಲಿ ಕನ್ನಡ ನಾಡು-ನುಡಿ ಸಂರಕ್ಷಣೆ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: 50 ರ ಮಹತ್ವ ಕುರಿತು ಪ್ರಧಾನ ಭಾಷಣ ಮಾಡಿದರು. ಕನ್ನಡ…
ವಿರಾಜಪೇಟೆ ನ.1 : 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಅಧ್ಯಕ್ಷ ಮಾಳೇಟಿರ ಎಂ.ಬೆಲ್ಲು ಬೋಪಯ್ಯ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.3ರಂದು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಸಂಘ ಕನ್ನಡಕ್ಕೆ ಸಂಬಂದಪಟ್ಟ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಅಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ. ಹಾಗೂ ಕಾರ್ಯಕ್ರಮದಲ್ಲಿ ಶಾಸಕರು ಸೇರಿದಂತೆ ಇತರ ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಬೆಲ್ಲು ಬೋಪಯ್ಯ ಹೇಳಿದರು. ಕರ್ನಾಟಕ ಸಂಘದ ಕಾರ್ಯದರ್ಶಿ ಮುಂಡ್ಯೋಳಂಡ ಕುಸುಮ ಸೋಮಣ್ಣ, ಕೋಶಾಧಿಕಾರಿ ಕೆ.ಯು.ಗಣೇಶ್ ತಮ್ಮಯ್ಯ, ಆಡಳಿತ ಮಂಡಳಿ ನಿದೇಶಕರಾದ ಸಿ.ಪಿ. ಕಾವೇರಪ್ಪ, ಸಿ.ಎಂ.ಸುರೇಶ್ ನಾಣಯ್ಯ, ಎ.ಎಂ.ಜೋಯಪ್ಪ, ಪುಗ್ಗೇರ ನಂದ, ರಾಣು ಮಂದಣ್ಣ, ಬಿ. ಎಂ. ಸುರೇಶ್, ಎಂ.ಜಿ. ಪೂಣಚ್ಚ, ಬಿ.ಆರ್ ಗಣೇಶ್, ಕೆ.ಎಂ. ಮೊಣ್ಣಪ್ಪ, ಎಂ.ಬಿ. ದೇವಯ್ಯ, ಕಚೇರಿ ಕಾರ್ಯದರ್ಶೀ ರಾಧ ಎಂ.ಪಿ. ಮತ್ತಿತರರು ಹಾಜರಿದ್ದರು.
ಮಡಿಕೇರಿ ನ.1 : ಎಲ್ಲಾ ಭಾಷೆಗಳನ್ನು ಗೌರವಯುತವಾಗಿ ಕಾಣುವ ಸ್ವೀಕೃತಿಯ ಮನೋಭಾವ ಪ್ರತಿಯೊಬ್ಬ ರೂಪಿಸಿಕೊಳ್ಳಬೇಕು. ಪ್ರಸ್ತುತ ಸಂದರ್ಭದಲ್ಲಿ ಪ್ರಾದೇಶಿಕ ಭಾಷೆಗೂ ಸಾಹಿತ್ಯ ಸಂಸ್ಕೃತಿಯ ಹಿನ್ನೆಲೆಯಲ್ಲಿ ಭಾಷಿಕ ಎಚ್ಚರವೊಂದು ಒಡಮೂಡಿದೆ. ಆದರೂ ಸಹ ನಮ್ಮ ನಡುವೆ ಪ್ರತ್ಯೇಕತ ಕೂಗು ಮೂಡುತ್ತಲೇ ಇದೆ. ನಾವು ಎಚ್ಚರಿಕೆಯಿಂದ ಭಾಷೆಯನ್ನು ಒಳಗೊಳ್ಳುವ ಪ್ರಯತ್ನ ಮಾಡಬೇಕಾಗಿದೆ. ಮಾತ್ರವಲ್ಲ ಮಕ್ಕಳು ಕನ್ನಡದ ಜೊತೆಯಲ್ಲಿ ತಮ್ಮ ಮಾತೃ ಭಾಷೆಯಲ್ಲಿ ಕಲಿಕೆಯನ್ನು ಮುಂದುವರೆಸುವ ಅಗತ್ಯವಿದೆ ಎಂದು ಕಾಲೇಜಿನ ಉಪನ್ಯಾಸಕ ಡಾ. ಎನ್.ವಿ. ಕರುಣಾಕರ ಅಭಿಪ್ರಾಯಪಟ್ಟರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕನ್ನಡ ವಿಭಾಗ, ಎನ್ ಎಸ್ ಎಸ್, ಎನ್ ಸಿ.ಸಿ, ಇಸಿ/ಸಿಸಿ, ಕ್ರೀಡಾ ಹಾಗೂ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ “ಹೆಸರಾಯಿತು ಕರ್ನಾಟಕ-50 ರಾಜ್ಯೋತ್ಸವ ಸಂಭ್ರಮ” ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಸಂದರ್ಭದಲ್ಲಿ ಭ್ರಷ್ಟಾಚಾರ ಮುಕ್ತ ಕರ್ನಾಟಕ ಎಂಬ ವಿಷಯದ ಕುರಿತು ಅವರು ಮಾತನಾಡಿದರು. ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಪಠ್ಯ ಪುಸ್ತಕಗಳಲ್ಲಿ ಪ್ರಾದೇಶಿಕ ಭಾಷೆಗಳಿಗೂ ಅವಕಾಶ ಕಲ್ಪಿಸಲಾಗಿತ್ತು. ಆ ಬಗೆಯಲ್ಲಿ ಕನ್ನಡ ತನ್ನ…
ಮಡಿಕೇರಿ ನ.1 : ಕರಿಕೆ ಗ್ರಾ.ಪಂ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗಡಿ ಗ್ರಾಮ ಕರಿಕೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಳ್ಳುಕೊಚ್ಚಿ ಯಲ್ಲಿ ಪಂಚಾಯತಿ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಧ್ವಜಾರೋಹಣ ನೆರವೇರಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಪ್ರೌಢ ಶಾಲೆಯಿಂದ ಎಳ್ಳು ಕೊಚ್ಚಿ ಪಟ್ಟಣದ ವರೆಗೆ ಕನ್ನಡ ಘೋಷಣೆಗಳೊಂದಿಗೆ ಮೆರವಣಿಗೆ ನಡೆಯಿತು. ನಂತರ ಸಿಹಿ ಹಂಚಿ ಸಂಭ್ರಮಿಸಿದರು. ಪಂಚಾಯತಿ ಉಪಾಧ್ಯಕ್ಷರಾದ ಕಲ್ಪನಾ ಜಗದೀಶ್, ಸದಸ್ಯರುಗಳಾದ ಕಟ್ಟ ಕೋಡಿ ದೇವದತ್ತ, ಆಯಿಷಾ, ಜಯಶ್ರೀ ಜನಾರ್ಧನ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಪದಾಧಿಕಾರಿಗಳು, ಸದಸ್ಯರುಗಳು, ಕರಿಕೆ ಪ್ರೌಢ ಶಾಲೆಯ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು, ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಎಸ್ಡಿಎಂಸಿ ಪದಾಧಿಕಾರಿಗಳು, ಸಹಕಾರ ಸಂಘದ ಉಪಾಧ್ಯಕ್ಷ ಎಂ.ಎಂ.ರೆಲಸನ್, ನಿರ್ದೇಶಕರು, ಅಂಗನವಾಡಿ ಕಾರ್ಯಕರ್ತರು, ಪಂಚಾಯತಿ ಸಿಬ್ಬಂದಿ ವರ್ಗ, ಸಾರ್ವಜನಿಕರು ಹಾಜರಿದ್ದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪಿ.ಪಿ.ಗಣಪತಿ ಎಲ್ಲರನ್ನು ಸ್ವಾಗತಿಸಿ, ವಂದಿಸಿದರು.
ಸೋಮವಾರಪೇಟೆ ನ.1 : ಕನ್ನಡನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ, ಕನ್ನಡ ನಮ್ಮ ಮಾತೃಭಾಷೆ. ನಮ್ಮ ಆತ್ಮಗೌರವ ಭಾಷೆ ಬೆಳೆಯಲು ನಾವೆಲ್ಲಾ ಪಣತೊಡಬೇಕು ಎಂದು ತಶೀಲ್ದಾರ್ ಎಸ್.ಎನ್.ನರಗುಂದ ಹೇಳಿದರು. ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಾವು ಕೇವಲ ನವೆಂಬರ್ ಕನ್ನಡಿಗರಾಗದೇ ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇನೆ, ಬರೆಯುತ್ತೇನೆ, ನಿತ್ಯ ವ್ಯವಹಾರದಲ್ಲಿ ಕನ್ನಡ ಬಳಸುತ್ತೇನೆ, ಕನ್ನಡೇತರರಿಗೆ ಕನ್ನಡ ಕಲಿಸುತ್ತೇನೆ, ಕನ್ನಡ, ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಕಟ್ಟಿಬದ್ಧರಾಗಿರುತ್ತೇನೆ ಎಂದು ಪ್ರತಿಜ್ಞೆ ಮಾಡಬೇಕಾಗಿದೆ ಎಂದು ಹೇಳಿದರು. ಉದಯವಾದ ಕನ್ನಡ ನಾಡಿನ ಮುಂದೆ ಸಾಕಷ್ಟು ಸಮಸ್ಯೆಗಳು ಹಿಂದಿನಿಂದಲೂ ಹಸಿರಾಗಿಯೇ ಉಳಿದುಕೊಂಡಿವೆ. ಕನ್ನಡ ಶಾಲೆಗಳು ಮುಚ್ಚುತ್ತಿವೆ. ಶಾಲೆಗಳ ಮೇಲೆ ಪೋಷಕರ ಆಸಕ್ತಿ ಕಡಿಮೆಯಾಗುತ್ತಿವೆ. ಅಂತಾರಾಜ್ಯ ನದಿ ವಿವಾದ, ಗಡಿಸಮಸ್ಯೆ, ಪ್ರಾದೇಶಿಕ ಅಸಮಾತೋಲನ, ಉದ್ಯೋಗದಲ್ಲಿ ಕನ್ನಡಗರಿಗೆ ಮೀಸಲಾತಿ ವಿಚಾರವಾಗಿ ಬಂದ ವರದಿಗಳು ಕಾರ್ಯಗತಗೊಳ್ಳಬೇಕಿದೆ.…
ಬೆಂಗಳೂರುನ.1- ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು. ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು. ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ…
ಮಡಿಕೇರಿ ನ.1 : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಅಚರಿಸಲಾಯಿತು. ನಗರದ ಗಾಂಧಿ ಮೈದಾನದ ರಂಗಮಂದಿರ ಬಳಿ ಕನ್ನಡ ಸಾಹಿತ್ಯ ಪರಿಷತ್ ನ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ. ರಮೇಶ್ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಪರಿಷತ್ ನ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಸಂಘಟನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಬೇಬಿ ಮ್ಯಾಥ್ಯು, ಅಂಬೇಕಲ್ ನವೀನ್, ಪ್ರಕಾಶ್ ಆಚಾರ್ಯ, ಪುದಿಯನೆರವನ ರಿಷಿತ್ ಹಾಜರಿದ್ದರು.
ಮಡಿಕೇರಿ ನ.1 : ಮೇಕೇರಿ ಗ್ರಾಮಸ್ಥರಿಂದ 68ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೇಕೇರಿ ಬಿಳಿಗೇರಿ ಬಳಿ ದಾನಿಗಳ ನೆರವಿನಿಂದ ನೂತನವಾಗಿ ನಿರ್ಮಿಸಲಾದ ಸಾರ್ವಜನಿಕ ಬಸ್ ತಂಗುದಾಣವನ್ನು ಮಾಜಿ ಸೈನಿಕರಾದ ಎಂ.ಟಿ.ಚಿಣ್ಣಪ್ಪ, ಚೊಟ್ಟೆಯಂಡ ಅಪ್ಪಾಜಿ, ಕ್ಯಾಪ್ಟನ್ ತುಂತಜ್ಜೀರ ದಯಾನಂದ, ಮೇಕೇರಿ ಗ್ರಾ.ಪಂ ಸದಸ್ಯ ಎಂ.ಯು ಹನೀಫ್, ತಾ.ಪಂ ಮಾಜಿ ಸದಸ್ಯ ಮಂಜ್ಞೀರ ಸಾಬಾ ತಿಮ್ಮಯ್ಯ ಉದ್ಘಾಟಿಸಿದರು. ಇದೇ ಸಂದರ್ಭ ಸಮೀಪದಲ್ಲೇ ನೂತನವಾಗಿ ನಿರ್ಮಿಸಲಾದ ಧ್ವಜಸ್ಥಂಬವನ್ನು ಉದ್ಘಾಟಿಸಿ, ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಮಾತನಾಡಿದ ಮಾಜಿ ಯೋಧ ಚೊಟ್ಟೆಯಂಡ ಅಪ್ಪಾಜಿ, ಸ್ಥಳೀಯರ ಪ್ರಯತ್ನದಿಂದ ನೂತನ ಸಾರ್ವಜನಿಕ ಬಸ್ ತಂಗುದಾಣವನ್ನು ನಿರ್ಮಿಸಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಬಸ್ ತಂಗುದಾಣ ಶುಚಿತ್ವ ಕಾಪಾಡುವಂತೆ ಕರೆ ನೀಡಿದರು. ಮಾಜಿ ಸೈನಿಕರಾದ ಎಂ.ಟಿ.ಚಿಣ್ಣಪ್ಪ ಹಾಗೂ ಕ್ಯಾಪ್ಟನ್ ತುಂತಜ್ಜೀರ ದಯಾನಂದ, ಮೇಕೇರಿ ಗ್ರಾ.ಪಂ ಪಿಡಿಓ ಶ್ರೀಧರ್ ಸ್ಥಳಿಯರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಿಳಿಗೇರಿ, ಅರ್ವತ್ತೋಕ್ಲು, ಕುಂಬಳದಾಳು, ಹೊದವಾಡ ಗ್ರಾಮಕ್ಕೆ ಮೇಕೇರಿ ಬಿಳಿಗೇರಿ ಜಂಕ್ಷನ್ ನಿಂದ ತೆರಳಬಹುದಾಗಿದ್ದು, ಈ ಭಾಗದ…
ಮಡಿಕೇರಿ ನ.1 : ಕರ್ನಾಟಕ ಸರ್ಕಾರದಿಂದ ಆಚರಿಸಲ್ಪಡುತ್ತಿರುವ “ಕರ್ನಾಟಕ ಸಂಭ್ರಮ-50″ರ ಪ್ರಯುಕ್ತ ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಕನ್ನಡ ಭಾಷಾ ವಿಭಾಗ ಹಾಗೂ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದಿಂದ “ನುಡಿನಮನ ಗೀತಗಾಯನ” ವಿಶೇಷ ಕಾರ್ಯಕ್ರಮ ನಡೆಯಿತು. ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಗೀತಗಾಯನಕ್ಕೆ ಸೂಚಿಸಿದ್ದ ಹಾಡುಗಳನ್ನು ಎಲ್ಲಾ ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾವ ತುಂಬಿ ಹಾಡಿದರು. ಕಾರ್ಯಕ್ರಮವನ್ನು ಸೈಂಟ್ ಆನ್ಸ್ ವಿದ್ಯಾಸಂಸ್ಥೆಗಳ ನಿಕಟ ಪೂರ್ವ ವ್ಯವಸ್ಥಾಪಕ ಹಾಗೂ ಎಂಡಿಇಎಸ್ ನ ಆರ್ಥಿಕ ಅಧಿಕಾರಿ ರೆ.ಫಾ. ಮದಲೈ ಮುತ್ತು ಉದ್ಘಾಟಿಸಿದರು. ಸೈಂಟ್ ಆನ್ಸ್ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಾಕರ್ ರಾಜ್ಯೋತ್ಸವ ಶುಭಾಶಯ ಕೋರಿದರು. ಪದವಿ ವಿಭಾಗದ ಕನ್ನಡ ಭಾಷಾ ಮುಖ್ಯಸ್ಥ ಅರ್ಜುನ್ ಮೌರ್ಯ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಪದವಿ ವಿಭಾಗದ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ, ಕನ್ನಡ ವಿಭಾಗದ ಮುಖ್ಯಸ್ಥ ಹೇಮಂತ್ ಕುಮಾರ್, ಸೈಂಟ್ ಆನ್ಸ್ ಪದವಿ ಹಾಗೂ ಪ.ಪೂ. ಕಾಲೇಜಿನ ಎಲ್ಲಾ ಬೋಧಕ ವೃಂದ…






