ಲೇಖಕ: admin

ವಿರಾಜಪೇಟೆ ನ.1 : ಜನತೆ ನಮ್ಮನ್ನು ಆಯ್ಕೆ ಮಾಡಿ ಕಳುಹಿಸುವುದು ನಾಡಿನ ಏಳಿಗೆ ಮತ್ತು ಅಭಿವೃದ್ಧಿಯನ್ನು ಪಡಿಸುವುದಕ್ಕಾಗಿ, ಶಾಸಕ ಒಬ್ಬನೇ ಏನನ್ನೂ ಮಾಡಲು ಸಾದ್ಯವಿಲ್ಲ, ಎಲ್ಲರೂ ಕೈಜೋಡಿಸಿ ನಾಡಿನ ಅಭಿವೃದ್ಧಿಗೆ ಪೂರಕವಾಗಿ ಜವಬ್ದಾರಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಕಲ್ಲುಬಾಣೆ ನಾಗರೀಕ ವೇದಿಕೆ ಹಾಗೂ ಕಲ್ಲುಬಾಯ್ಸ್ ತಂಡದ ವತಿಯಿಂದ ಕಲ್ಲುಬಾಣೆಯ ಬದ್ರಿಯ ಶಾಲಾ ಆವರಣದಲ್ಲಿ ನಡೆದ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರಜಾಪ್ರಭುತ್ವವೆಂದರೆ ಸಾಮೂಹಿಕ ನಾಯಕತ್ವದಲ್ಲಿ ನಡೆಯಬೇಕಾಗಿರುವುದು. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸದಾ ನಾನು ಬದ್ಧನಾಗಿರುತ್ತೇನೆ. ನಾನು ಗೆದ್ದರೆ ಸ್ವಚ್ಛ ಆಡಳಿತವನ್ನು ನೀಡುತ್ತೇನೆ ಎಂದು ಭರವಸೆ ಕೊಟ್ಟಿದ್ದೆ. ಅದೇ ರೀತಿ ನಡೆಯುವವನಿದ್ದೇನೆ. ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಗ್ಯಾರೆಂಟಿ ಕಾರ್ಡ್ ಬಗ್ಗೆ ಯಾವುದೇ ಗೊಂದಲ ಬೇಡ. ನಮ್ಮ ಸರ್ಕಾರ ಮಾಡಿರುವ ಅಷ್ಟು ಗ್ಯಾರೆಂಟಿ ಯೋಜನೆಗಳು ಸಂವಿಧಾನಬದ್ಧವಾಗಿದ್ದು, ರಾಜ್ಯದ ಜನತೆಯನ್ನು ತಲುಪಿದೆ ಎಂದರು. ಚುನಾವಣೆ ಪೂರ್ವದಲ್ಲಿಕಲ್ಲುಬಾಣೆಗೆ ಭೇಟಿ ನೀಡಿದ…

Read More

ವಿರಾಜಪೇಟೆ ನ.1 : ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಅತೀ ಮುಖ್ಯವಾಗಿದೆ ಎಂದು ವಿರಾಜಪೇಟೆ ಉಪ ಖಜಾನೆಯ ಪ್ರಥಮ ದರ್ಜೆ ಸಹಾಯಕ ಬಲರಾಮೇಗೌಡ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಆಚರಿಸಲಾದ ಭ್ರಷ್ಟಾಚಾರ ನಿರ್ಮೂಲನ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿರು. ಭ್ರಷ್ಟಾಚಾರದ ನಿಯಂತ್ರಣ ದೇಶದ ಯುವ ಜನರ ಕೈಯಲಿದ್ದು ಅದನ್ನು ಬುಡ ಸಮೇತ ತೊಡೆದು ಹಾಕಬೇಕು. ಭ್ರಷ್ಟಾಚಾರದಿಂದ ಅಭಿವೃದ್ಧಿ ಕುಂಠಿತವಾಗಿ ಸಮಾಜದ ಸ್ವಾಸ್ತ್ಯ ಕೆಡುತ್ತಿದೆ ಎಂದರು. ಭ್ರಷ್ಟಾಚಾರವು ಪ್ರಜಾಪ್ರಭುತ್ವಕ್ಕೆ ಸವಾಲಾಗಿದ್ದು, ಅದನ್ನು ನಿಯಂತ್ರಿಸದಿದ್ದರೆ ಭವ್ಯ ರಾಷ್ಟ್ರದ ನಿರ್ಮಾಣ ಸಾಧ್ಯವಿಲ್ಲ. ಭ್ರಷ್ಟಾಚಾರದ ಸ್ವರೂಪ, ನಿಯಂತ್ರಣ ಕಾಯಿದೆಗಳನ್ನು ಉದಾಹರಣೆ ಸಮೇತ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಭ್ರಷ್ಟಾಚಾರ ಜಾಗೃತಿ ಸಪ್ತಾಹದ ಪ್ರಯುಕ್ತ ಈ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದು,್ದ ಭ್ರಷ್ಟಾಚಾರ ನಿವಾರಣೆಯಲ್ಲಿ ಯುವ ಜನರ ಪಾತ್ರ ಅಪಾರವಾಗಿದೆ. ರಾಷ್ಟ್ರಕ್ಕೆ ಹಾಗೂ ರಾಷ್ಟ್ರದ ವ್ಯವಸ್ಥೆಗೆ ಭ್ರಷ್ಟಾಚಾರ ಮಾರಕವಾಗಿದ್ದು, ಅದನ್ನು ನಿಯಂತ್ರಿಸದಿದ್ದರೆ ಆಡಳಿತ…

Read More

ಮಡಿಕೇರಿ ನ.1 : ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ  ಆಚರಿಸಲಾಯಿತು. ನಗರದ ಕುವೆಂಪು ಉದ್ಯಾನವನದಲ್ಲಿ  ವಿಷ್ಣು ಸೇನಾ ಜಿಲ್ಲಾಧ್ಯಕ್ಷ  ರಫೀಕ್ (ದಾದಾ )ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿ, ದಿನದ ಮಹತ್ವ ಕುರಿತು ತಿಳಿಸಿದರು. ಮೂಡ ಅಧ್ಯಕ್ಷ  ಮುನೀರ್ ಅಹ್ಮದ್ ಅವರು ಧ್ವಜಾರೋಹಣವನ್ನು ನೆರವೇರಿಸಿ, ಶುಭಹಾರೈಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾದ ಕವಿತಾ ಪ್ರಸಾದ್ ಮಾತನಾಡಿ, ಕನ್ನಡವನ್ನು ಉಳಿಸಿ ಬೆಳೆಸಬೇಕು ಎಂದು ಕರೆ ನೀಡಿದರು. ನವೆಂಬರ್ ಒಂದಕ್ಕೆ ಕನ್ನಡ ರಾಜ್ಯೋತ್ಸವ ಸೀಮಿತವಾಗದೆ ಪ್ರತಿನಿತ್ಯವೂ ಕನ್ನಡವನ್ನು ಉಳಿಸಿಕೊಂಡು ಹೋಗುವಂತೆ ಸಲಹೆ ನೀಡಿದರು. ತಾಲೂಕು ಅಧ್ಯಕ್ಷ  ರವಿಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ  ಕಲೀಲ್ ಭಾಷಾ, ಕೋಟೆ ಮಾರಿಯಮ್ಮ ದಸರಾ ಸಮಿತಿ ಅಧ್ಯಕ್ಷ  ಪ್ರಭುರೈ, ವೀರಭದ್ರ ಮುನೇಶ್ವರ ದೇವಾಲಯದ ಗೌರವ ಅಧ್ಯಕ್ಷ  ಪಿ.ಜಿ.ಮಂಜುನಾಥ್, ಫೀಲ್ಡ್ ಮಾರ್ಷಲ್  ಕೆ.ಎಂ.ಕಾರ್ಯಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ  ಎಂ.ಎ.ಮುನೀರ್ ಮಾಚರ್,…

Read More

ಸೋಮವಾರಪೇಟೆ ನ.1 : ಪಟ್ಟಣದ ಸಿ.ಎಸ್.ಐ ಜಾನ್ ಚರ್ಚ್ ನಲ್ಲಿ ಫಲೋತ್ಸವ ಸಂಭ್ರಮದಿಂದ ನಡೆಯಿತು. ಪ್ರಥಮ ಬೆಳೆಯನ್ನು ದೇವಾಲಯಕ್ಕೆ ತಂದು ಪೂಜಿಸಲಾಯಿತು. ಸದರನ್ ಡಯಾಸಿಸ್ ಉಪಾಧ್ಯಕ್ಷ ವಿಕ್ಟರ್ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಸ್ಥಳೀಯ ಸಭಾಪಾಲಕರಾದ ಸ್ಯಾಮುವೆಲ್, ಸಹಾಯಕ ಸಭಾಪಾಲಕರಾದ ಪ್ರಿಯದರ್ಶಿನಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರರಾದ ಎಲಿಜಬೆತ್ ಸಾಲೋಮನ್ ಅವರನ್ನು ಸನ್ಮಾನಿಸಲಾಯಿತು. ನಂತರ ಪ್ರಿಯದರ್ಶಿನಿ, ಸುಜಾತ ಜೋಸೆಫ್, ನಮಿತಾ ಆಟೋಟ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಡಯಾಸಿಸ್ ಕೌನ್ಸಿಲ್ ಸದಸ್ಯ ಸಾಲೋಮನ್ ಡೇವಿಡ್, ಏರಿಯಾ ಕೌನ್ಸಿಲ್ ಸದಸ್ಯ ಅನಿಲ್ ಮತ್ತು ಕಾರ್ಯದರ್ಶಿ ಎಬ್ನೆಜರ್ ಚಾರ್ಲಿ ಇದ್ದರು.

Read More

ಮಡಿಕೇರಿ ನ.1 :   ನಗರದ ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕ.ಸಾ.ಪ. ಮಾಜಿ ಅಧ್ಯಕ್ಷ ಟಿ.ಪಿ ರಮೇಶ್  ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ಕೋಶಾಧಿಕಾರಿ ಕೆ.ತಿಮ್ಮಪ್ಪ, ಟ್ರಸ್ಟಿ ವಿ.ಪಿ.ಸುರೇಶ್, ಸಿಬ್ಬಂದಿಗಳಾದ ಯಮುನಾ, ಸವಿತಾ, ರಾಜೇಶ್, ಉದ್ಯಮಿಗಳಾದ ಅಬ್ದುಲ್ ರೆಹಮಾನ್, ಅಶ್ರಫ್, ರಾಮಣ್ಣ, ಲೀಲಾವತಿ, ಬೊಟ್ಟೋಳಂಡ.ಜಿ.ಗಣೇಶ್, ಪುಟಾಣಿಗಳಾದ ಮೌಲ್ಯ ಬಜೆಕೋಡಿ, ತರುಣ್ ಬಜೆಕೋಡಿ, ಚರಿತಾ ಮುಂತಾದವರು ಭಾಗವಹಿಸಿದ್ದರು.

Read More

ಸೋಮವಾರಪೇಟೆ ನ.1 : ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ 39ನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಯಿತು. ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್, ತಾಲ್ಲೂಕು ಸೇವಾದಳದ ಅಧ್ಯಕ್ಷ ಬಿ.ಬಸವರಾಜು, ಪಟ್ಟಣ ಪಂಚಾಯಿತಿ ಸದಸ್ಯರಾದ ಬಿ.ಸಿ.ವೆಂಕಟೇಶ್, ಶೀಲಾ ಡಿಸೋಜ, ಸಂಘದ ಕಾರ್ಯದರ್ಶಿ ಎಚ್.ಬಿ. ರಾಜಪ್ಪ, ಪ್ರಮುಖರಾದ ಮಹಮ್ಮದ್ ಬೇಟು, ಸುನಿಲ್, ಎಂ.ಬಿ. ಜಮೀರ್, ಕೆ.ಪಿ. ದಿನೇಶ್, ಕೆ.ಕೆ. ಸ್ವಾಮಿ, ಸಂದ್ಯಾ ಪ್ರಕಾಶ್, ಪಳನಿ ಇದ್ದರು.

Read More

ಮಡಿಕೇರಿ ನ.1 : ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಬರೆ ಕುಸಿದು ಗಾಯಗೊಂಡವರನ್ನು ಉಸ್ತುವಾರಿ ಸಚಿವ ಎನ್.ಬೋಸರಾಜು ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ  ಆರೋಗ್ಯ ವಿಚಾರಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಣ್ಣು ಕುಸಿತದಿಂದ ಮೃತಪಟ್ಟ ಕಾರ್ಮಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

Read More

ಮಡಿಕೇರಿ ನ.1 :  ಕನ್ನಡ ನಾಡಿನ ಮಣ್ಣಿಗೆ, ನುಡಿಗೆ ತನ್ನದೇ ಆದ ಸೊಗಸಿದೆ, ಸೌಂದರ್ಯವಿದೆ, ಬೆಡಗಿದೆ. ಇಂತಹ ಪ್ರಾದೇಶಿಕ ವಿಭಿನ್ನ ಸಂಸ್ಕೃತಿಯನ್ನು ಎತ್ತಿಹಿಡಿಯುವ ಕಾರ್ಯವನ್ನು ನಾವು ಮಾಡಬೇಕಿದೆಯೆಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಆಶಿಸಿದರು. ಕೊಡಗು ಜಿಲ್ಲಾಡಳಿದ ವತಿಯಿಂದ ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ 68ನೇ ಕನ್ನಡ ರಾಜ್ಯೋತ್ಸವವನ್ನು ತ್ರಿವರ್ಣ ಧ್ವಜಾರೋಹಣ ನೆರವೇರಿಸಿ, ಕನ್ನಡಾಂಬೆ ಭುವನೇಶ್ವರಿಗೆ ಪುಷ್ಪಾರ್ಚನೆಯ ಮೂಲಕ ಗೌರವ ಸಲ್ಲಿಸಿ ಸಚಿವರು ನಾಡಿನ ಜನತೆಗೆ ಸಂದೇಶ ನೀಡಿದರು. ಕನ್ನಡ ರಾಜ್ಯೋತ್ಸವವು ನಾಡಿನೆಲ್ಲೆಡೆ ಕನ್ನಡ ಧ್ವಜವನ್ನು ಹಾರಿಸಿ, ನಾಡಗೀತೆಯನ್ನು ಹಾಡಿ ಸಂಭ್ರಮಿಸುವ ದಿನವಾಗಿದೆ. ಇದಕ್ಕೂ ಮಿಗಿಲಾಗಿ ಸಹಬಾಳ್ವೆಯ ಸಂದೇಶ ನೀಡಿ ಸೌಹಾರ್ದತೆಯನ್ನು ಪಸರಿಸುವ ಶುಭದಿನವೂ ಆಗಿದೆ. ಸ್ವಾಭಿಮಾನದ ಜೊತೆಗೆ ಸೋದರ ಭಾಷೆಗಳನ್ನು ಗೌರವಿಸುವ ವಿಶಾಲ ಭಾವನೆ ನಮ್ಮೆಲ್ಲರದ್ದಾಗಿದ್ದು, ಈ ಮೂಲಕ ಭಾಷೆ ಸಾಮರಸ್ಯ, ಸಾಂಸ್ಕೃತಿಕ ಸಾಮರಸ್ಯ ರೂಪಿತವಾಗಿರುವುದು ಕನ್ನಡ ನಾಡಿನ ಹಿರಿಮೆಯಾಗಿದೆಯೆಂದರು. ಕನ್ನಡ, ಕರ್ನಾಟಕ, ಕರುನಾಡು ಎಂಬುದು…

Read More

ಮಡಿಕೇರಿ ಅ.31 : ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಬರೆ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ. ಹುಬ್ಬಳ್ಳಿ ನಿವಾಸಿಗಳಾದ ಬಸವ (35),   ಲಿಂಗಪ್ಪ (45)  ಹಾಗೂ  ಹಾವೇರಿ ಜಿಲ್ಲೆಯ ನಿವಾಸಿ ಆನಂದ (35)  ಮೃತ ದುರ್ದೈವಿಗಳು. ಖಾಸಗಿ ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಬರೆ ಕುಸಿದಿದೆ. ಈ ಘಟನೆಯಿಂದ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದರು. ಅದೃಷ್ಟವಶಾತ್ ಕಾರ್ಮಿಕರಾದ ರಾಜು (35), ಮಂಜು (38)  ಎಂಬುವವರು ಇತರ ಕಾರ್ಮಿಕರ ಸಹಕಾರದಿಂದ ಮೇಲೆ ಬಂದು ಜೀವ ಉಳಿಸಿಕೊಂಡಿದ್ದಾರೆ. ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡ ಪರಿಣಾಮ ಮೇಲೆ ಬರಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 9 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಿದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ,…

Read More

ಮಡಿಕೇರಿ ಅ.31 : ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ಸಂಪ್ರದಾಯದಂತೆ ನಡೆಸಿಕೊಂಡು ಬರುತ್ತಿರುವ “ವಿಷ್ಣುಮೂರ್ತಿ ಕೋಲ” (ಚಾಮುಂಡಿ)ವು ನ.5 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು “ವಿಷ್ಣುಮೂರ್ತಿ ಕೋಲ” ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ಕೋರಿದ್ದಾರೆ.

Read More