ಲೇಖಕ: admin

ಮಡಿಕೇರಿ ಅ.31 : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಜಿಲ್ಲೆಯ ಎಲ್ಲಾ ನಾಗರಿಕರು ಹಾಗೂ ಸಂಘ ಸಂಸ್ಥೆಗಳು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸರ್ಕಾರ ಹಾಗೂ ಜಿಲ್ಲಾಡಳಿತ ಆದೇಶ ನೀಡಿದೆ. ಈ ಹಿನ್ನೆಲೆ ನ.1 ರಂದು ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿ ಬಿಡಿಸಿ, ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯವನ್ನು ಬರೆಯುವುದು. ಬೆಳಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ ನಾಡಗೀತೆ ಪ್ರಸಾರವಾಗಲಿದ್ದು ಸಮಸ್ತ ನಾಗರಿಕರು ಎದ್ದು ನಿಂತು ಗೌರವ ಸಲ್ಲಿಸುವುದು. ಸಂಜೆ 5 ಗಂಟೆಗೆ ಜಿಲ್ಲೆಯ ಮೈದಾನದಲ್ಲಿ ಕೆಂಪು ಮತ್ತು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸುವುದು. ಸಂಜೆ 7 ಗಂಟೆಗೆ ಮನೆಗಳು, ಕಚೇರಿ ಹಾಗೂ ಅಂಗಡಿ ಮಳಿಗೆಗಳ ಮುಂದೆ ಹಣತೆ…

Read More

ಮಡಿಕೇರಿ ಅ.31 : ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ಜಾಗೃತಿ ಅರಿವು ಸಪ್ತಾಹ’ ಪ್ರಯುಕ್ತ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರ ಉಪಸ್ಥಿತಿಯಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮವು ಜರುಗಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಪ್ರತಿಜ್ಞಾ ವಿಧಿ ಭೋದಿಸಿದರು. ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರು ಮಾತನಾಡಿ ಸರ್ಕಾರಿ ನೌಕರರಿಗೆ ಸರ್ಕಾರ ಕಾಲ ಕಾಲಕ್ಕೆ ವೇತನ ಹೆಚ್ಚಳ, ಮುಂಬಡ್ತಿ, ಗಳಿಕೆ ರಜೆ ಹೀಗೆ ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಆ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಮುಂದಾಗಬಾರದು ಎಂದು ಹೇಳಿದರು. ನಮ್ಮ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರವು ಒಂದು ಪ್ರಮುಖ ಅಡಚಣೆಯಾಗಿದೆ. ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಪವನ್ ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿ ಅವರ ಕಾನೂನು ಸಲಹೆಗಾರರಾದ ಎ.ಲೋಕೇಶ್ ಕುಮಾರ್, ಭೂದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಗಣಿ ಮತ್ತು ಭೂವಿಜ್ಞಾನ…

Read More

ಮಡಿಕೇರಿ ಅ.31 : ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಪ್ರತಿಜ್ಞಾ ವಿಧಿ ಭೋಧಿಸಿದರು. ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆ ಕಾಪಾಡಲು ನಮ್ಮನ್ನು ಅರ್ಪಿಸಿಕೊಳ್ಳುತ್ತೇವೆ ಮತ್ತು ದೇಶ ಭಾಂದವರಲ್ಲಿ ಸಂದೇಶವನ್ನು ಸಾರಲು ಶ್ರಮಿಸುತ್ತೇನೆ ಎಂದು ಪ್ರಜ್ಞಾಪೂರ್ವಕವಾಗಿ ಪ್ರತಿಜ್ಞೆ ಮಾಡಲಾಯಿತು. ರಾಷ್ಟ್ರದ ಪ್ರಥಮ ಗೃಹ ಸಚಿವರಾದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಫೂರ್ತಿ ಕಾಪಾಡುತ್ತೇನೆ. ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿ ಪಡಿಸಲು ತಮ್ಮದೇ ಆದ ಕೊಡುಗೆ ನೀಡುತ್ತೇನೆ ಎಂದು ಪ್ರತಿಜ್ಞೆ ಸ್ವೀಕರಿಸಲಾಯಿತು. ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

Read More

ಮಡಿಕೇರಿ ಅ.31 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆಯು ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿ ನಡೆಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ನಿಕಟಪೂರ್ವ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ, ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್, ಸಮಾಜದ ಮುಖಂಡರು ಇತರರು ಪುಷ್ಪ ನಮನ ಸಲ್ಲಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಚೊಕ್ಕಾಡಿ ಪ್ರೇಮ ರಾಘವಯ್ಯ, ಕಡ್ಲೇರ ತುಳಸಿ ಮೋಹನ್, ಲಿಟ್ಲ್ ಪ್ಲವರ್ ಶಾಲೆಯ ಮುಖ್ಯಸ್ಥರಾದ ಸುನಿತಾ, ಭಾರತೀಯ ಸೇವಾದಳ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಗುಡ್ಡೆಮನೆ ಅಪ್ಪಯ್ಯಗೌಡರ…

Read More

ಮಡಿಕೇರಿ ಅ.31 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಬೋಧಕ ಆಸ್ಪತ್ರೆ, ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ಕುಶಾಲನಗರ, ಪುರಸಭೆ ವತಿಯಿಂದ ಜಿಲ್ಲಾ ಮಟ್ಟದ ಆಯುಷ್ಮಾನ್ ಭವ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಶಿಬಿರದಲ್ಲಿ ಸಾಮಾನ್ಯ ವೈದಶಾಸ್ತ್ರ, ಶಸ್ತ್ರ ಚಿಕಿತ್ಸೆ, ಕಣ್ಣು, ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಆಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆಯನ್ನು ನೀಡಲಾಯಿತು. ಸುಮಾರು 250 ಕ್ಕಿಂತ ಹೆಚ್ಚು ಹೊರ ರೋಗಿಗಳ ವ್ಯೆದ್ಯರ ಭೇಟಿ, 20 ಯುಡಿಐಡಿ ಕಾರ್ಡ್ ಗಳು, 125 ಕ್ಕಿಂತ ಹೆಚ್ಚಿನ ಜನರು ಆಸಾಂಕ್ರಾಮಿಕ ರೋಗಗಳ ಪರೀಕ್ಷೆಯನ್ನು ಸಾರ್ವಜನಿಕರಿಗೆ ಕಲ್ಪಿಸಿಕೊಡಲಾಯಿತು ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ವ್ಯೆದ್ಯಕೀಯ ಕಾಲೇಜು ಮಡಿಕೇರಿಗೆ 34 ರೋಗಿಗಳನ್ನು ಕಳುಹಿಸಲಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಕುಶಾಲನಗರದ ಸಮುದಾಯ ಆರೋಗ್ಯ ಕೇಂದದ…

Read More

ಕುಶಾಲನಗರ/ ಕೂಡಿಗೆ ಅ.31: ಸಮುದಾಯದತ್ತ ಶಾಲಾ ಕಾರ್ಯಕ್ರಮ ವಿದ್ಯಾರ್ಥಿ-ಶಿಕ್ಷಕರು-ಪಾಲಕರ ನಡುವಿನ ಕೊಂಡಿಯಾಗಿದ್ದು, ಪರಸ್ಪರ ಅರಿತು ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಮತ್ತು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಮೈಸೂರು ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ( ಸಿ.ಟಿ.ಇ.) ದ ಪ್ರಾಂಶುಪಾಲರು ಹಾಗೂ  ಸಹ ನಿರ್ದೇಶಕಿ ಎಚ್.ಎನ್.ಗೀತಾಂಭ  ಹೇಳಿದರು. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ( ಅ.31 ರಂದು) ನಡೆದ ಮೊದಲ ಸಮುದಾಯದತ್ತ ಶಾಲಾ ಕಾರ್ಯಕ್ರಮಕ್ಕೆ ಭೇಟಿ ನೀಡಿ ಶಾಲಾ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ ಪೋಷಕರ ಸಭೆಯಲ್ಲಿ ಮಾತನಾಡಿದರು. ವಿದ್ಯಾರ್ಥಿ- ಪೋಷಕರೊಂದಿಗೆ ಶೈಕ್ಷಣಿಕ ವಿಚಾರಗಳು ಹಾಗೂ ಶಾಲಾ ಅಭಿವೃದ್ಧಿ ಕುರಿತು ಸಮಾಲೋಚನೆ ನಡೆಸಿದ ಅವರು, ಶಾಲೆಯೆಂದರೆ ಕೇವಲ ಶಿಕ್ಷಕರು ಮತ್ತು ಮಕ್ಕಳಿಗಷ್ಟೇ ಸೀಮಿತವಲ್ಲ. ಎಲ್ಲರ ಶೈಕ್ಷಣಿಕ ಬದುಕು ಆರಂಭವಾಗುವುದೇ ಶಾಲೆಯಿಂದ ಶಾಲೆಗಳೂ ಸಹ ಸಮುದಾಯದ ಒಂದು ಭಾಗವೇ ಆಗಿರುವುದರಿಂದ ಶಾಲೆಯ ಪ್ರಗತಿಗೆ ಸಮುದಾಯದ ಸಕ್ರಿಯ ಪಾಲ್ಗೊಳ್ಳುವಿಕೆ ಅಗತ್ಯವಿದೆ ಎಂದರು. ಮಕ್ಕಳನ್ನು…

Read More

ಮಡಿಕೇರಿ ಅ.31 : ಭಾರತೀಯ ಸೇನೆಯಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿ ನಿವೃತ್ತರಾಗಿರುವ ಕೊಡಗಿನ ಲೆಫ್ಟಿನೆಂಟ್ ಜನರಲ್ ಕೋದಂಡ.ಪಿ.ಕಾರ್ಯಪ್ಪ ಪಿವಿಎಸ್‍ಎಂ, ಎವಿಎಸ್‍ಎಂ, ವಿಎಸ್‍ಎಂ, ಎಸ್‍ಎಂ ಅವರು ಕರ್ನಾಟಕ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರದ ಕೋದಂಡ ಕುಟುಂಬಕ್ಕೆ ಸೇರಿದ ಲೆ.ಜ.ಕೋದಂಡ ಪಿ.ಕಾರ್ಯಪ್ಪ ಅವರು, ಭಾರತೀಯ ಸೇನೆಯ ತಮ್ಮ ಕರ್ತವ್ಯದಿಂದ ನಿವೃತ್ತರಾದ ಬಳಿಕ ಮುಂಬಯಿಯಲ್ಲಿ ನೆಲೆಸಿದ್ದಾರೆ. ಲೆಫ್ಟಿನೆಂಟ್ ಜನರಲ್ ಕೆ.ಪಿ.ಕಾರ್ಯಪ್ಪ ಅವರು ಭಾರತದ ರಾಷ್ಟ್ರಪತಿಗಳ ಕಾರ್ಯದರ್ಶಿಯ ಗೌರವಾನ್ವಿತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದಲ್ಲದೆ, ಸೇನೆಯಲ್ಲಿ ನೂತನವಾಗಿ ಸೃಷ್ಟಿಸಲಾದ ‘ಮಾಸ್ಟರ್ ಜನರಲ್ ಸಸ್ಟೈನೆನ್ಸ್’ ಹುದ್ದೆಯನ್ನು ನಿರ್ವಹಿಸಿದ ಮೊದಲ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಯನ್ನು ಹೊಂದಿರುವುದು ವಿಶೇಷ. ‘ರಜಪೂತ್ ರೈಫಲ್ಸ್’ ವಿಭಾಗದ ಮುಖ್ಯಸ್ಥರಾಗಿಯೂ ಕರ್ತವ್ಯ ನಿರ್ವಹಿಸಿದ್ದ ಲೆ.ಜ.ಕೆ.ಪಿ.ಕಾರ್ಯಪ್ಪ, ಭಾರತೀಯ ಸೇನೆಯ ಶಸ್ತ್ರಾಸ್ತ್ರ ವಿಭಾಗದ ಮುಖ್ಯಸ್ಥರಾಗಿ, ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥರೂ ಆಗಿರುವ ರಾಷ್ಟ್ರಪತಿಗಳ ಪರ್ಸನಲ್ ಆಫೀಸರ್ ಆಗಿ, ‘ಪ್ರಿನ್ಸಿಪಲ್ ಸ್ಟಾಫ್ ಆಫೀಸರ್ ಟು ಚೀಫ್ ಆಫ್ ಆರ್ಮಿ ಸ್ಟಾಫ್’ ಹುದ್ದೆಗಳನ್ನು…

Read More

ವಿರಾಜಪೇಟೆ ಅ.31 : ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್. ಎಸ್.ಎಸ್. ಘಟಕದ ವತಿಯಿಂದ ರಾಷ್ಟ್ರೀಯ ಏಕತಾ ದಿವಸ್ ಆಚರಿಸಲಾಯಿತು. ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಪಾ.ಐಸಾಕ್ ರತ್ನಾಕರ್ ವಿದ್ಯಾರ್ಥಿಗಳಿಗೆ ಏಕತಾ ದಿವಸ್ ಪ್ರತಿಜ್ಞೆಯನ್ನು ಭೋದಿಸಿದರು. ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ದಿನದ ಮಹತ್ವದ ಬಗ್ಗೆ ಮಾತನಾಡಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮ ದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನವನ್ನು ರಾಷ್ಟ್ರಾದ್ಯಂತ ಆಚರಿಸಲಾಗುತಿದ್ದು, ವಿದ್ಯಾರ್ಥಿಗಳು ಸಂವಿಧಾನದ ಆಶಯವನ್ನು ಎತ್ತಿ ಹಿಡಿಯುವುದರ ಮೂಲಕ ಭದ್ರ ರಾಷ್ಟ್ರದ ನಿರ್ಮಾಣ ಮಾಡಬೇಕೆಂದರು. ಭಾರತವು ವೈವಿಧ್ಯ ಸಂಸ್ಕೃತಿ ಇರುವ ದೇಶವಾಗಿದ್ದು ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಬೇಕೆಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ಎನ್.ಎಸ್..ಎಸ್ ಅಧಿಕಾರಿ ಶಾಂತಿಭೂಷಣ್, ಉಪನ್ಯಾಸಕರು ವಿದ್ಯಾರ್ಥಿಗಳು ಹಾಜರಿದ್ದರು. 

Read More

ಮಡಿಕೇರಿ ಅ.31 : ಪೊನ್ನಂಪೇಟೆ ಸಿ.ಐ.ಟಿ ಕಾಲೇಜ್ ನಲ್ಲಿ ನ.3 ರಿಂದ 5ರ ವರೆಗೆ ನಡೆಯುವ ರಾಜ್ಯ ಮಟ್ಟದ ಕೃಷಿಯಂತ್ರ ಮೇಳದ ಆಹ್ವಾನ ಪತ್ರಿಕೆಯನ್ನು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಮೈಸೂರಿನಲ್ಲಿ ಬಿಡುಗಡೆ ಮಾಡಿದರು. ಕೃಷಿ ಜಿಲ್ಲೆ ಕೊಡಗಿನಲ್ಲಿ ಬೃಹತ್ ಕೃಷಿಮೇಳ ನಡೆಸುತ್ತಿರುವುದರ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿಯಂತ್ರ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವ ಕೃಷಿ ಸಚಿವರನ್ನು ಮೇಳದ ಸಂಚಾಲಕರು ಹಾಗೂ ಪ್ರಾಧ್ಯಾಪಕ ವೃಂದ ವೈಯುಕ್ತಿಕವಾಗಿ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು. ರಾಜ್ಯದ ವಿವಿಧೆಡೆಗಳಿಂದ ಕೃಷಿ ಪರಿಕರ, ಉತ್ಪನ್ನ ಮತ್ತು ಉಪಕರಣವನ್ನು ಪ್ರದರ್ಶಿಸಲು ಕೃಷಿ ಉತ್ಪಾದಕರು ಮೇಳಕ್ಕೆ ಆಗಮಿಸುತ್ತಿದ್ದಾರೆ. 180ಕ್ಕೂ ಹೆಚ್ಚು ಮಳಿಗೆಗಳು ಇರಲಿದ್ದು, ಕೃಷಿಕರು ಹಾಗೂ ಸಾರ್ವಜನಿಕರು ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಕೃಷಿ ಪರಿಕರಗಳನ್ನು ಕೊಂಡುಕೊಳ್ಳಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ನ.5 ರಂದು ಪಂಡಿತ್ ಪ್ರವೀಣ್ ಗೋಡ್ಖಿಂಡಿ ಅವರ ಸಂಗೀತ ಕಾರ್ಯಕ್ರಮದೊಂದಿಗೆ ಮೇಳ ಸಮಾರೋಪಗೊಳ್ಳಲಿದೆ. ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ…

Read More

ಮಡಿಕೇರಿ ಅ.31 : ನಮ್ಮ ಸಂಸ್ಕೃತಿ ಈ ಭೂಮಿಯ ಕೃಷಿಯೊಂದಿಗೆ ಬೆಸೆದುಕೊಂಡಿದೆ. ಆದರೆ ಈ ಭೂಮಿಯೊಂದಿಗೆ ಪೂರ್ವಜರು ಹಾಗೂ ಹಿರಿಯರು ಹೊಂದಿದಂತಹ ಪೂಜನೀಯ ಬಾಂಧವ್ಯವನ್ನು ನಾವು ಕೂಡ ಅನುಕರಿಸಬೇಕು ಎಂದು ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟರು. ಟಿ.ಶೆಟ್ಟಿಗೇರಿಯ ಮೂಂದ್ ನಾಡ್ ಕೊಡವ ಸಮಾಜ ಆಶ್ರಯದಲ್ಲಿ ಸಾರ್ವಜನಿಕ ಗೌರಿ ಗಣೇಶೋತ್ಸವ ಸೇವಾ ಸಮಿತಿ, ಸಂಭ್ರಮ ಮಹಿಳಾ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಘ, ಕೊಡವ ತಕ್ಕ್ ಎಳ್ತ್’ಕಾರಡ ಕೂಟದ ಆಶ್ರಯದಲ್ಲಿ ಟಿ- ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ನಡೆಯುತ್ತಿರುವ 7ನೇ ವರ್ಷದ ಕಾವೇರಿ ಚಂಗ್ರಾಂದಿ ಪತ್ತಾಲೋದಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ 10ನೇ ದಿನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಟಿ.ಶೆಟ್ಟಿಗೇರಿ ಕೊಡವ ಸಮಾಜ ಅಧ್ಯಕ್ಷ ಕೈಬುಲೀರ ಹರೀಶ್ ಅಪ್ಪಯ್ಯ ಅವರು ಕೊಡಗಿನ ಪಾಳು ಬಿದ್ದಿರುವ ಸಹಸ್ರಾರು ಎಕರೆ ಭತ್ತದ ಗದ್ದೆಗಳನ್ನು ಕೃಷಿ ಭೂಮಿಯಾಗಿ ಸಂರಕ್ಷಣೆ ಮಾಡಲು ಮರುಕೃಷಿ ಮಾಡಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಮತ್ತು ಈ ಮೂಲಕ ಅಂತರ್ಜಲ ವೃದ್ಧಿಸುವ…

Read More