ಮಂಡ್ಯ ಅ 31: ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥಾದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು. ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಮಾತನಾಡಿದರು. ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ. ಆದರೂ ಮೊದಲು 5000…
ಲೇಖಕ: admin
ಮಡಿಕೇರಿ ಅ.31 : ಮಕ್ಕಳಲ್ಲಿ ಮಾನಸಿಕ ಆರೋಗ್ಯದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಸಹಯೋಗದಲ್ಲಿ ಮೈಂಡ್ ಅಂಡ್ ಮ್ಯಾಟರ್ ಚಾರಿಟೇಬಲ್ ಟ್ರಸ್ಟ್ನಿಂದ ನ.8 ರಿಂದ 10 ರವರೆಗೆ ಜಿಲ್ಲೆಯ ಹತ್ತು ಶಾಲೆಗಳಲ್ಲಿ ವಿಶೇಷ ಶಿಬಿರ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ನ ಪ್ರಮುಖ ಅಚ್ಚಯ್ಯ ಎಂ.ಎ. ಅವರು 2020 ರಲ್ಲಿ ಮಕ್ಕಳ ಮಾನಸಿಕ ಆರೋಗ್ಯದ ಕಾಳಜಿಯಿಂದ ಆರಂಭಗೊಂಡ ಮೈಂಡ್ ಅಂಡ್ ಮ್ಯಾಟರ್ ಚಾರಿಟೇಬಲ್ ಟ್ರಸ್ಟ್, ಕೊಡಗು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಕಾರದೊಂದಿಗೆ ಅವರ ಅಧೀನದಲ್ಲಿರುವ ಮಕ್ಕಳಿಗೆ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ವಿವಿಧ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆಯೆಂದು ತಿಳಿಸಿದರು. ಇದರೊಂದಿಗೆ ಮಕ್ಕಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ವಿಮಾನ ಡೈನಾಮಿಕ್ಸ್, ಕಲೆ, ತ್ಯಾಜ್ಯ ನಿರ್ವಹಣೆ, ನ್ಯಾಯಾಂಗ, ಕೊಡಗಿನ ಪಕ್ಷಿಗಳು ಹೀಗೆ ವಿವಿಧ ವಿಷಯಗಳ ಕುರಿತು ಶಿಬಿರಗಳನ್ನು ಆಯೋಜಿಸಿಕೊಂಡು ಬಂದಿದೆ. 2021 ರಿಂದ ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ ಮಾನಸಿಕ ಆರೋಗ್ಯದ ಅರಿವಿಗೆ ‘ಪೈಂಟ್ ದಿ ವಾಲ್’ ಕಾರ್ಯಕ್ರಮಗಳನ್ನು…
ಸೋಮವಾರಪೇಟೆ ಅ.31 : ಮೊಗೇರ ಸೇವಾ ಸಮಾಜದ ಕುಸುಬೂರು ಗ್ರಾಮ ಶಾಖೆಯ ವತಿಯಿಂದ ಬಜೆಗುಂಡಿ ಗ್ರಾಮದಲ್ಲಿ ಮೊಗೇರ ಸಮಾಜ ಬಾಂಧವರಿಗೆ ವಿವಿಧ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಶಾಖೆಯ ಅಧ್ಯಕ್ಷ ಎಚ್.ಬಿ. ರಾಮಚಂದ್ರ ವಹಿಸಿದ್ದರು. ಕ್ರೀಡಾಕೂಟವನ್ನು ಸಮಾಜದ ಜಿಲ್ಲಾಯಕ್ಷ ಪಿ.ಬಿ.ಜನಾರ್ಧನ್ ನೆರವೇರಿಸಿದರು. ರಾಜ್ಯಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಸಾಧನೆ ತೋರಿದ ಜೆ.ರಕ್ಷಿತಾ ಮತ್ತು ಎಂ.ರಶ್ಮಿ ಅವರುಗಳಿಗೆ ಕುಸುಬೂರು ಎಸ್ಟೇಟ್ ಮಾಲೀಕರಾದ ನಂದಿನಿ ಆನಂದ್ ಬಸಪ್ಪ ಅವರು ತಲಾ ರೂ. 5 ಸಾವಿರ ರೂ.ಪ್ರೋತ್ಸಾಹ ಧನ ವಿತರಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬೇಳೂರು ಗ್ರಾ.ಪಂ ಅಧ್ಯಕ್ಷೆ ಪಾರ್ವತಿ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮೊಗೇರ ಸಮಾಜದ ಜಿಲ್ಲಾ ಉಪಾಧ್ಯಕ್ಷ ಬಿ.ಎಂ.ದಾಮೋಧರ್, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ಪಿ.ಕೆ.ಚಂದ್ರು, ಸಂಘದ ಜಿಲ್ಲಾ ಗೌರವಾಧ್ಯಕ್ಷ ಗೌತಮ್ ಶಿವಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಬಿ. ವಸಂತ, ಗೌರವಾಧ್ಯಕ್ಷ ನಂದ, ಗ್ರಾ.ಪಂ. ಸದಸ್ಯೆ ಸುಧಾ ಗಣೇಶ್ ಇದ್ದರು.
ಸೋಮವಾರಪೇಟೆ ಅ.31 : ತಾಲ್ಲೂಕು ರೈತ ಸಂಘದ ನೂತನ ಕಚೇರಿಯನ್ನು ರೈತ ಸಂಘದ ಜಿಲ್ಲಾಧ್ಯಕ್ಷ ಮನುಸೋಮಯ್ಯ ಉದ್ಘಾಟಿಸಿದರು. ಸೋಮವಾರಪೇಟೆಯ ಸಿ.ಕೆ.ಸುಬ್ಬಯ್ಯ ರಸ್ತೆಯಲ್ಲಿ ತೆರೆದ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಮನು ಸೋಮಯ್ಯ, ಸಂಘದ ಕಚೇರಿ ಪ್ರಾರಂಭ ಮಾಡಿ ಕುಳಿತುಕೊಂಡರೆ ಯಾವುದೇ ಪ್ರಯೋಜನವಿಲ್ಲ. ಕಂದಾಯ, ಸರ್ವೇ ಇಲಾಖೆ ಸೇರಿದಂತೆ ಹಲವು ಕಚೇರಿಗಳಲ್ಲಿ ರೈತರ ಕೆಲಸ ಕಾರ್ಯಗಳನ್ನು ಮಾಡಿಕೊಡದೆ, ಸಣ್ಣ ಮತ್ತು ಅತೀ ಸಣ್ಣ ರೈತರನ್ನು ಅಲೆಸುತ್ತಿದ್ದಾರೆ. ಸಂಬಂಧಿಸಿದ ಅಧಿಕಾರಿಗಳನ್ನು ಕಂಡು, ಕೆಲಸ ತಡವಾಗುತ್ತಿರುವ ಬಗ್ಗೆ ಮಾಹಿತಿ ಪಡೆದು, ಸರಿಯಾದ ದಾಖಲಾತಿ ಒದಗಿಸಿ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡಿಸಿಕೊಡಬೇಕಿದೆ ಎಂದರು. ಕೆಲವು ಅಧಿಕಾರಿಗಳು ಹಣಕ್ಕಾಗಿ ಕೆಲಸ ಮಾಡದಿದ್ದಲ್ಲಿ ಅಂತಹವರ ವಿರುದ್ಧ ಜಿಲ್ಲೆಯಾದ್ಯಂತ ಹೋರಾಟ ಮಾಡುವ ಕೆಲಸವನ್ನು ರೈತ ಸಂಘದಿಂದ ಹಮ್ಮಿಕೊಳ್ಳಲಾಗುವುದು. ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು. ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ.ದಿನೇಶ್, ಉಪಾಧ್ಯಕ್ಷ ಜಿ.ಎಂ.ಹೂವಯ್ಯ, ಪದಾಧಿಕಾರಿಗಳಾದ ಕೊಡ್ಲಿಪೇಟೆ ಪ್ರಸನ್ನ, ಮಚ್ಚಂಡ ಅಶೋಕ್, ಗರಗಂದೂರು ಲಕ್ಷ್ಮಣ, ಯಡವಾರೆ ರಾಜೇಶ್, ಬಿ.ಪಿ. ಅನಿಲ್, ಸುಭಾಶ್,…
ಮಡಿಕೇರಿ ಅ.31 : ಹುಲಿ ಉಗುರು ಸೇರಿದಂತೆ ವನ್ಯಜೀವಿ ಉತ್ಪನ್ನಗಳಿಗೆ ಸಂಬಂಧಿಸಿದಂತೆ ಅರಣ್ಯ ಅಧಿಕಾರಿಗಳು ಯಾವುದೇ ಕಾರಣಕ್ಕು ಕಾನೂನು ಮೀರಬಾರದು. ಈ ವಿಚಾರದಲ್ಲಿ ಕೊಡಗಿನ ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರೊಂದಿಗೆ ಚರ್ಚಿಸಿ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವನ್ಯಜೀವಿ ಉತ್ಪನ್ನಗಳ ವಿಚಾರದಲ್ಲಿ ಅರಣ್ಯ ಅಧಿಕಾರಿಗಳಿಗೆ ಸಚಿವರು ಯಾವುದೇ ನಿರ್ದೇಶನ ನೀಡಿಲ್ಲ. ಅಧಿಕಾರಿಗಳು ತಮಗಿಷ್ಟ ಬಂದಂತೆ ವರ್ತಿಸುತ್ತಿದ್ದು, ಕಾನೂನು ಮೀರುತ್ತಿರುವುದು ಕಂಡು ಬಂದಿದೆ. ನಟ ಜಗ್ಗೇಶ್ ಅವರ ಪ್ರಕರಣ ಹೈಕೋರ್ಟ್ನಲ್ಲಿರುವುದರಿಂದ ಇದು ಇತ್ಯರ್ಥವಾಗುವವರೆಗೆ ಅಧಿಕಾರಿಗಳು ಕಾರ್ಯಾಚರಣೆ ಮುಂದುವರೆಸಬಾರದು ಎಂದು ಒತ್ತಾಯಿಸಿದರು. ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ವಾಸ್ತವ ಸ್ಥಿತಿಗತಿಯನ್ನು ಮನವರಿಕೆ ಮಾಡಿಕೊಡಲಾಗುವುದು ಮತ್ತು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿಕೊಳ್ಳಲಾಗುವುದು. ಪೂರ್ವಜರ ಕಾಲದಿಂದಲೂ ಇರುವ ವನ್ಯಜೀವಿ…
ಮಡಿಕೇರಿ ಅ.31 : ಕುಂಜಿಲ ಪೈನರಿ ಮುಸ್ಲಿಂ ಜಮಾಅತ್ತಿನ ಅಧೀನ ಸಂಘವಾದ ಕುಂಜಿಲದ ಖುತುಬುಲ್ ಆರಿಫೀನ್ ರಾತೀಬ್ ಸಂಘದ ಸಂಯುಕ್ತ ಆಶ್ರಯದಲ್ಲಿ 108ನೇ ವಾರ್ಷಿಕ ರಾತೀಬ್ ಮಜ್ಲಿಸ್ ಹಾಗೂ ದುವಾ ಮಜ್ಲಿಸ್ ನ.3 ರಂದು ನಡೆಯಲಿದೆ. ಅಂದು ಮಗ್ರಿಬ್ ನಮಾಝಿನ ಬಳಿಕ ಮುಹಿಯದ್ದೀನ್ ರಾತೀಭ್ ಹಾಗೂ ಇಶಾ ನಮಾಜ್ ಬಳಿಕ ಭ್ರಹತ್ ಕುತ್ತಾರಾತೀಭ್ ಪಯ್-ನರಿ ಸಭಾಂಗಣದಲ್ಲಿ ನಡೆಯಲಿದ್ದು, ನಿಝಾರ್ ಅಹ್ಸನಿ ಕಕ್ಕಡಿಪುರಮ್ ಉಸ್ತಾದ್ ದುವಾ ನೇತೃತ್ವ ವಹಿಸಲಿದ್ದಾರೆ. ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ ನಡೆಯುವ ಈ ಬೃಹತ್ ರಾತೀಭ್ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಲು ಸಂಘಾಟಕರು ಮನವಿ ಮಾಡಿದ್ದಾರೆ. ವರದಿ : ನೌಫಲ್ ಕಡಂಗ
ಮಡಿಕೇರಿ ಅ.31 ; ಅಧಿಕಾರಿಗಳು ಲಂಚ ಕೇಳಿದರೆ ವಿಡಿಯೋ ಮಾಡಿ, ಸೂಕ್ತ ಸಾಕ್ಷ್ಯ ಸಹಿತ ದೂರು ನೀಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭರವಸೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಭ್ರಷ್ಟಾಚಾರ ಪ್ರಕರಣಗಳು ನಿಯಂತ್ರಣಕ್ಕೆ ಬಂದಿದೆ, ವಿರಾಜಪೇಟೆ ಕ್ಷೇತ್ರದಲ್ಲಿ ಲಂಚದ ಕುರಿತು ಯಾವುದೇ ದೂರುಗಳು ಕೇಳಿ ಬಂದಿಲ್ಲ. ಭ್ರಷ್ಟಾಚಾರ ನಿರ್ಮೂಲನೆ ಕೇವಲ ನನ್ನಿಂದ ಮಾತ್ರ ಸಾಧ್ಯವಿಲ್ಲ, ಜನರು ಕೂಡ ಜಾಗೃತರಾಗಬೇಕು. ಲಂಚ ಕೇಳಿದಾಕ್ಷಣ ನೀಡದೆ ಅದನ್ನು ಪ್ರತಿಭಟಿಸಬೇಕು, ಧ್ವನಿ ಮುದ್ರಣ ಅಥವಾ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಬೇಕು. ಸೂಕ್ತ ಸಾಕ್ಷ್ಯ ಸಹಿತ ದೂರು ನೀಡಿದರೆ ನಾನು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಅವರು ತಿಳಿಸಿದರು. ಈಗಾಗಲೇ ಲೋಕಾಯುಕ್ತ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಭ್ರಷ್ಟಾಚಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ಹೇಳಿದರು.
ಮಡಿಕೇರಿ ಅ.31 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾ ಇಲಾಖೆ ವತಿಯಿಂದ ಎಂ.ಬಾಡಗ 1 ಅಂಗನವಾಡಿ ಕೇಂದ್ರದಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನದ ಪ್ರಯುಕ್ತ “ರಾಷ್ಟ್ರೀಯ ಏಕತಾ ದಿವಸ’ವನ್ನು ಆಚರಿಸಲಲಾಯಿತು. ಅಂಗನವಾಡಿ ಕಾರ್ಯಕರ್ತೆ ಬಿ.ಬಿ.ಜಯಂತಿ ಮಾತನಾಡಿ, ಈ ಬಾರಿ “ಮೇರಿ ಮಾಟಿ ಮೇರಿ ದೇಶ್” (ನನ್ನ ಮಣ್ಣು ನನ್ನ ದೇಶ) ಎಂಬ ವಿಶೇಷ ಅಭಿಯಾನದ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದರು. ಹಲವು ದಿನಗಳಿಂದ ನಡೆದ ನನ್ನ ಮಣ್ಣು ನಮ್ಮ ದೇಶ ಕಾರ್ಯಕ್ರಮ ಕ್ಕೆ ನಾವುಗಳು ಕೈ ಜೋಡಿಸಿದ್ದು, ಈ ಅಭಿಯಾನ ಒಂದು ಮನೆಯಿಂದ ಸಂಗ್ರಹವಾದ ಒಂದು ಹಿಡಿ ಮಣ್ಣು ರಾಜಪತ್ತ್ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಉದ್ಯಾನವನಕ್ಕೆ ಕಳುಹಿಸಿ ಕೊಡುವ ಕಾರ್ಯಕ್ರಮ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಬಾಲವಿಕಾಸ ಸಮಿತಿ ಅಧ್ಯಕ್ಷರಾದ ದಿವ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯರಾದ ನಿಂಗಪ್ಪ, ಆಶಾ ಕಾರ್ಯಕರ್ತೆ ಚಂದ್ರಿಕಾ, ಅಂಗನವಾಡಿ ಸಹಾಯಕಿ ಎಚ್.…
ಪುತ್ತೂರು ಅ.31 : ಯಾವುದೇ ರೀತಿಯ ಖಾಯಿಲೆಗಳಿಗೆ ಪ್ರಾಥಮಿಕ ಹಂತದಲ್ಲಿಯೇ ತಜ್ಞ ವೈದ್ಯರುಗಳಿಂದ ಔಷಧೋಪಚಾರ ಮಾಡಿಸಿದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ಮಂಗಳೂರು ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜಿನ ಬ್ರೆಸ್ಟ್ ಹಾಗೂ ಎಂಡೋಕ್ರೈಂ ಸರ್ಜನ್ ಡಾ.ಸ್ಮಿತಾ.ಎಸ್.ರಾವ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ ಹಾಗೂ ಕುಂದುಕೊರತೆ ನಿವಾರಣಾ ಪ್ರಕೋಷ್ಟ ಇದರ ಸಂಯುಕ್ತ ಆಶ್ರಯದಲ್ಲಿ ಸ್ತನ ಕ್ಯಾನ್ಸರ್ ಕುರಿತು ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತಾಡಿದರು. ಕ್ಯಾನ್ಸರ್ ಪ್ರಾಥಮಿಕ ಹಂತದಲ್ಲಿಯೇ ಗುರುತಿಸಲ್ಪಟ್ಟರೆ ಅದನ್ನು ಗುಣಪಡಿಸಬಹುದು, ಆದರೆ ಹೆಚ್ಚಿನ ಸಂದರ್ಭದಲ್ಲಿ ನಾಚಿಕೆಪಟ್ಟು ಇತರರೊಡನೆ ಹೇಳಿಕೊಳ್ಳದೆ ನಾವು ಮಾಡುವ ಸ್ವಯಂ ವೈದ್ಯ ಪದ್ಧತಿಯಿಂದ ಖಾಯಿಲೆಗಳು ಗುಣಪಡಿಸಲಾರದ ಮಟ್ಟಕ್ಕೆ ಹೋಗುತ್ತವೆ. ಅತಿಯಾದ ನೋವು ಮತ್ತು ರಕ್ತಸ್ರಾವ ಕ್ಯಾನ್ಸರ್ ರೋಗದ ಅಂತಿಮ ಘಟ್ಟ ಎಂದು ಅವರು ಹೇಳಿದರು. ನಮ್ಮ ದೇಹದಲ್ಲಿ ಅಸಹಜ ಬೆಳವಣಿಗೆಗಳು ಕಂಡು ಬಂದ ತಕ್ಷಣ ತಜ್ಞ ವೈದ್ಯರುಗಳನ್ನು ಸಂಪರ್ಕಿಸಬೇಕು. ಶೇ.10 ರಷ್ಟು ಸ್ತನ ಕ್ಯಾನ್ಸರ್ ಅನುವಂಶಿಕವಾಗಿ ಬರಬಹುದು,…
ಮಡಿಕೇರಿ ಅ.31 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆಯನ್ನು ಆಚರಿಸಲಾಯಿತು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸೇರಿದಂತೆ ಕಾಂಗ್ರೆಸ್ಪ್ರಮುಖರು ಹಾಗೂ ಕಾರ್ಯಕರ್ತರು ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕಾಂಗ್ರೆಸ್ ಮುಖಂಡರಾದ ಟಿ.ಪಿ.ರಮೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ, ಮಹಿಳಾ ಘಟಕದ ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ, ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್, ನಗರಸಭಾ ಮಾಜಿ ಅಧ್ಯಕ್ಷರಾದ ಜುಲೈಕಾಬಿ, ಪ್ರಮುಖರಾದ ವಿ.ಪಿ.ಸುರೇಶ್, ಆರ್.ಪಿ.ಚಂದ್ರಶೇಖರ್, ಚುಮ್ಮಿದೇವಯ್ಯ ಸೇರಿದಂತೆ ಮತ್ತಿತರ ಕಾರ್ಯಕರ್ತರು ಹಾಜರಿದ್ದರು.






