ಮಡಿಕೇರಿ ಅ.31 : ಬಾಗಲಕೋಟೆಯಲ್ಲಿ ನಡೆದ ದಕ್ಷಿಣ ವಲಯ ಸಬ್ ಜೂನಿಯರ್ ಹಾಕಿ ಪಂದ್ಯಾವಳಿಯಲ್ಲಿ ಕೊಡಗು ವಿದ್ಯಾಲಯ ಬಾಲಕ ಮತ್ತು ಬಾಲಕಿಯರ ಹಾಕಿ ತಂಡವು ಉತ್ತಮ ಪ್ರದರ್ಶನ ನೀಡುವ ಮೂಲಕ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದೆ. ನಾಯಕಿ ನೀತು ಚೌಧರಿ, ಉಪನಾಯಕಿ ಪರ್ಲಿನ್ ಪೂವಮ್ಮ ನೇತೃತ್ವದ ಸಬ್ ಜೂನಿಯರ್ ಬಾಲಕಿಯರ ಹಾಕಿ ತಂಡ ಹಾಗೂ ನಾಯಕ ಧವನ್ ಉಪನಾಯಕ ಆಯೂಷ್ ಶೆಟ್ಟಿ ನೇತೃತ್ವದ ಸಬ್ ಜೂನಿಯರ್ ಬಾಲಕರ ಹಾಕಿ ತಂಡವು ಬಾಲಕ ಮತ್ತು ಬಾಲಕಿಯರ ವಿಭಾಗಗಳಲ್ಲಿ ಲೀಗ್ ಮತ್ತು ನಾಕೌಟ್ ಹಂತದಲ್ಲಿ ತಾನಾಡಿದ ಎಲ್ಲಾ ಪಂದ್ಯಾವಳಿಗಳಲ್ಲೂ ಭರ್ಜರಿ ಗೆಲುವು ದಾಖಲಿಸುವ ಮೂಲಕ ಫೈನಲ್ ಪಂದ್ಯದಲ್ಲಿ ರನ್ನರ್ ಅಫ್ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಫೈನಲ್ ಪಂದ್ಯದಲ್ಲಿ ಕೊಡಗು ವಿದ್ಯಾಲಯ ಬಾಲಕಿಯರ ತಂಡವು 0-1 ಗೋಲಿನಿಂದ ಮಹಾರಾಷ್ಟ್ರ ತಂಡದ ವಿರುದ್ಧ ಹಾಗೂ ಕೊಡಗು ವಿದ್ಯಾಲಯ ಬಾಲಕರ ತಂಡವು 0-1 ಗೋಲಿನಿಂದ ಬಾಗಲಕೋಟೆ ತಂಡದ ವಿರುದ್ಧ ಸೊಲನ್ನನುಭವಿಸುವ ಮೂಲಕ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು. ಕೊಡಗು ವಿದ್ಯಾಲಯ ಬಾಲಕಿಯರ ತಂಡದ ನಾಯಕಿ…
ಲೇಖಕ: admin
ಗುಜರಾತ್ : ಭಾರತಕ್ಕೆ ಮುಂದಿನ 25 ವರ್ಷಗಳು ಅತ್ಯಂತ ಪ್ರಮುಖ ವರ್ಷಗಳಾಗಿರಲಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದರು. ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಮಂಗಳವಾರ ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ಏಕತಾ ನಗರದಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ಜಲ ಅರ್ಚನೆ ಮತ್ತು ಪುಷ್ಪಾರ್ಚನೆ ಮಾಡಿದರು. ಬಳಿಕ ಮಾತನಾಡಿದ ಅವರು, ಈ ದಿನ ನಮ್ಮ ಸಮಾಜದಲ್ಲಿ ಏಕತೆ ಮತ್ತು ಸಹೋದರತ್ವದ ಮನೋಭಾವವನ್ನು ಇನ್ನಷ್ಟು ಹೆಚ್ಚಿಸಲಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲಿ ನೆರೆದಿರುವ ಯುವಕರು ಮತ್ತು ಧೈರ್ಯಶಾಲಿಗಳ ಉತ್ಸಾಹವು ‘ರಾಷ್ಟ್ರೀಯ ಏಕತಾ ದಿನ’ದ ದೊಡ್ಡ ಶಕ್ತಿಯಾಗಿದೆ ಎಂದು ಹೇಳಿದರು. ಮಿನಿ ಭಾರತದ ರೂಪ ವಿಭಿನ್ನವಾಗಿ ಕಾಣಿಸುತ್ತಿದೆ. ಇಲ್ಲಿ ಭಾಷೆ, ಸಂಪ್ರದಾಯ ವಿಭಿನ್ನವಾಗಿದೆ. ಆದರೆ, ಪ್ರತಿಯೊಬ್ಬ ವ್ಯಕ್ತಿಯೂ ಒಗ್ಗಟ್ಟಾಗಿದ್ದಾರೆ. ಅದು ಬಲವಾದ ಸಂಪರ್ಕವನ್ನು ಹೊಂದಿದೆ. ಆಗಸ್ಟ್ 15 ರಂದು ಕೆಂಪು ಕೋಟೆಯಲ್ಲಿ ನಡೆದ ಕಾರ್ಯಕ್ರಮ, ಜನವರಿ 26 ರಂದು ಕರ್ತವ್ಯ ಪಥದಲ್ಲಿ ನಡೆದ ಪರೇಡ್ ಮತ್ತು ನರ್ಮದಾ ತೀರದಲ್ಲಿ…
ನಾಪೋಕ್ಲು ಅ.31 : ಅಖಿಲ ಕೊಡವ ಸಮಾಜದ ಅಧ್ಯಕ್ಷರಾಗಿ ಸುಮಾರು ಐದು ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ದಿವಂಗತ ಮಾತಂಡ ಮೊಣ್ಣಪ್ಪ ಅವರ ಜ್ಞಾಪಕಾರ್ಥವಾಗಿ ವಿರಾಜಪೇಟೆಯ ಮುಖ್ಯ ರಸ್ತೆಯೊಂದಕ್ಕೆ ಅವರ ಹೆಸರು ನಾಮಕರಣ ಮಾಡಲು ಅಖಿಲ ಕೊಡವ ಸಮಾಜ ಮನವಿ ಮಾಡಿದೆ. ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಅಖಿಲ ಕೊಡವ ಸಮಾಜದ ಪರವಾಗಿ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಹಾಗೂ ಗೌರವ ಕಾರ್ಯದರ್ಶಿ ಕೀತಿಯಂಡ ವಿಜಯಕುಮಾರ್ ಅವರು ಮನವಿ ಸಲ್ಲಿಸಿದರು. ಈ ಸಂದರ್ಭ ಕುಂಜಿಲ ಗ್ರಾ.ಪಂ ಮಾಜಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಅ.31 : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿದೆ. ಅರಿವು ಶೈಕ್ಷಣಿಕ ಸಾಲ ಯೋಜನೆ:-ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿ ಪರ ಕೋರ್ಸ್ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ಬಿಯುಎಂಎಸ್, ಬಿಡಿಎಸ್. ಬಿಎಎಂಎಸ್., ಬಿಹೆಚ್ಎಂಎಸ್, ಎಂಬಿಎ, ಎಂಟೆಕ್, ಎಂಇ, ಎಂಡಿ, ಪಿಎಚ್ಡಿ, ಬಿಸಿಎ/ಎಂಸಿಎ, ಎಂಎಸ್ ಅಗ್ರಿಕಲ್ಚರ್, ಬಿಎಸ್ಸಿ ನರ್ಸಿಂಗ್, ಬಿಫಾರಂ/ಎಂಫಾರಂ, ಬಿಎಸ್ಸಿ. ಪ್ಯಾರಾ ಮೆಡಿಕಲ್, ಬಿಎಸ್ಸಿ. ಬಯೋಟೆಕ್ನಾಲಜಿ, ಬಿಟೆಕ್, ಬಿಪಿಟಿ., ಬಿವಿಎಸ್ಸಿ./ಎಂವಿ, ಬಿಎನ್ಎಂ, ಬಿಎಚ್ಎಂ, ಎಂಡಿಎಸ್, ಎಂಎಸ್ಡಬ್ಲ್ಯೂ, ಎಲ್ಎಲ್ಎಂ, ಎಂಎಫ್ಎ, ಎಂಎಸ್ಸಿ. ಬಯೋಟೆಕ್ನಾಲಜಿ, ಎಂಎಸ್ಸಿ. ಎಜಿ, ಮುಂತಾದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ವಾರ್ಷಿಕ ರೂ. 1 ಲಕ್ಷಗಳಂತೆ ಕೋರ್ಸ್ ಅವಧಿಗೆ ಗರಿಷ್ಠ ರೂ. 4 ಲಕ್ಷಗಳಿಂದ ರೂ. 5 ಲಕ್ಷಗಳವರೆಗೆ ವಾರ್ಷಿಕ ಶೇ.2ರ…
ಮಡಿಕೇರಿ ಅ.31 : ರಾಜ್ಯದ ಕ್ರೀಡಾಪಟುಗಳು ಕಳೆದ 5 ವರ್ಷಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧಿಸಿದ ಅತ್ಯುತ್ತಮ ಸಾಧನೆಗಳನ್ನು ಗುರುತಿಸಿ ಕ್ರೀಡಾ ಪೋಷಕರಿಗೆ 2023-24ನೇ ಸಾಲಿನಲ್ಲಿ ರೂ.5 ಲಕ್ಷಗಳ ನಗದು ಬಹುಮಾನಗಳೊಂದಿಗೆ ‘ಕರ್ನಾಟಕ ಕ್ರೀಡಾ ಪೋಷಕ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕೊಡಗು ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಇಲ್ಲಿ ಪಡೆದು ನವೆಂಬರ್, 18 ರೊಳಗೆ ಈ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.08272-220986 ಮತ್ತು 7975381728 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಅ.31 : ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ಜಾಗೃತಿ ಅರಿವು ಸಪ್ತಾಹ’ ಪ್ರಯುಕ್ತ ಪ್ರತಿಜ್ಞಾ ವಚನವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಭೋದಿಸಿದರು. ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.
ಮಡಿಕೇರಿ ಅ.31 : ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾ.ಪಂ.ವ್ಯಾಪ್ತಿಯ ಕೆದಮುಳ್ಳೂರು ಗ್ರಾಮದ ಸರ್ವೇ ನಂಬರ್ 370/1 ರ 7.50 ಎಕರೆ ಜಾಗದಲ್ಲಿ 129 ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಪ್ರಥಮ ಹಂತದಲ್ಲಿ 60 ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ವಿದ್ಯುತ್ ಮತ್ತು ಕುಡಿಯುವ ನೀರು ಸಂಪರ್ಕ ಕಲ್ಪಿಸದೆ ಅರ್ಧಕ್ಕೆ ನಿಂತಿರುವ ಹಿನ್ನೆಲೆ ಈ ಕಾಮಗಾರಿಗಳ ಸಂಬಂಧ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಈಗಾಗಲೇ 60 ಮನೆಗಳ ನಿರ್ಮಾಣ ಕಾಮಗಾರಿ ನಡೆದಿದ್ದು, ಅರ್ಧಕ್ಕೆ ನಿಂತು ಹೋಗಿದೆ. ಈ ಸಂಬಂಧ ಸರ್ಕಾರದ ಗಮನಕ್ಕೆ ತಂದು ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು. ಈಗಾಗಲೇ ಸೋಲಾರ್ ದೀಪದ ವ್ಯವಸ್ಥೆ ಮಾಡಲಾಗಿದೆ. ಆಹಾರ ಕಿಟ್, ಟಾರ್ಚ್ ವಿತರಿಸಲಾಗಿದೆ. ಸರ್ಕಾರ ಆದಿವಾಸಿಗಳು, ಬಡವರ ಒಳಿತಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಕೆದಮುಳ್ಳೂರು ಗ್ರಾ.ಪಂ. ವ್ಯಾಪ್ತಿಯ…
ಮಡಿಕೇರಿ ಅ.30 : ಕೊಯವ ಸಮಾಜದ 18ನೇ ವಾರ್ಷಿಕ ಮಹಾಸಭೆ ಮತ್ತು ಕೈಲು ಮುಹೂರ್ತ ಸಂತೋಷ ಕೂಟ ಮೂರ್ನಾಡುವಿನಲ್ಲಿ ಸಂಭ್ರಮದಿಂದ ನಡೆಯಿತು. ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂವರು ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಡಿ ಭದ್ರತಾ ಪಡೆಯ ನಿವೃತ್ತ ಅಧಿಕಾರಿ ಚೀಪಂಡ ಕಾರ್ಯಪ್ಪ, ಹಿರಿಯ ಸಹಕಾರಿ ಈರಮಂಡ ಸೋಮಣ್ಣ ಹಾಗೂ ಬಿಎಸ್ಎನ್ಎಲ್ ನ ನಿವೃತ್ತ ಅಧಿಕಾರಿ ಮುಕ್ಕಾಟಿರ ಪೂರ್ಣಿಮಾ ಪೂಣಚ್ಚ ಅವರುಗಳು ಸನ್ಮಾನ ಸ್ವೀಕರಿಸಿದರು. ಚೀಪಂಡ ಕಾರ್ಯಪ್ಪ ಅವರು ಮಾತನಾಡಿ ಅವಕಾಶ ನಮಗಾಗಿ ಕಾಯುವುದಿಲ್ಲ, ಅವಕಾಶ ಸಿಕ್ಕಿದಾಗ ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವುದನ್ನು ಕಲಿಯಬೇಕು ಎಂದು ಕಿವಿಮಾತು ಹೇಳಿದರು. ನನ್ನ ತಂದೆ ತಾಯಿ ಬಡತನದಲ್ಲಿದ್ದರೂ ನನಗೆ ಶಿಕ್ಷಣ ನೀಡಿದ ಪರಿಣಾಮ ನಾನು ಗಡಿ ಭದ್ರತಾ ಪಡೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಸಾಧ್ಯವಾಯಿತು. ಪ್ರತಿಯೊಬ್ಬರು ವಿದ್ಯೆಗೆ ಆದ್ಯತೆ ನೀಡಬೇಕು ಎಂದರು. ಸಹಕಾರಿ ಕ್ಷೇತ್ರ ದಲ್ಲಿ ಸಾಧನೆ ಮಾಡಿದ ಈರಮಂಡ ಸೋಮಣ್ಣ ಅವರು ಮಾತನಾಡಿ, ಸಹಕಾರಿ ಕ್ಷೇತ್ರ ಮತ್ತು ಸಮಾಜಕ್ಕೆ ನಿಕಟ ಸಂಪರ್ಕವಿದೆ.…
ಮಡಿಕೇರಿ ಅ.30 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಇಂಗ್ಲೀಷ್ ಸ್ನಾತಕೋತ್ತರ ಮತ್ತು ಸಂಶೋಧನಾ ವಿಭಾಗದ ವತಿಯಿಂದ ನ.2 ರಂದು ಕರ್ನಾಟಕದಲ್ಲಿ ದೇವದಾಸಿ ಪದ್ಧತಿಯ ಕುರಿತು “ಗಾಡ್ಸ್ ವೈಫ್ಸ್ ಮೆನ್ಸ್ ಸ್ಲೇವ್” ಎಂಬ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ. ಅಪರಾಹ್ನ 1.45ಕ್ಕೆ ಕಾಲೇಜಿನ ವಿಚಾರ ಸಂಕಿರಣ ಕೊಠಡಿಯಲ್ಲಿ ಪ್ರದರ್ಶನ ಗೊಳ್ಳುವ ಸಾಕ್ಷ್ಯ ಚಿತ್ರವನ್ನು ಕಾಲೇಜಿನ ಆಂಗ್ಲ ವಿಭಾಗದಲ್ಲಿ ಸಹ ಪ್ರಾಧ್ಯಾಪಕಿಯಾಗಿರುವ ಡಾ. ನಯನ ಕಾಶ್ಯಪ ಅವರ ಮಾರ್ಗದರ್ಶನದಲ್ಲಿ ಪಿಎಚ್.ಡಿ ಸಂಶೋಧನೆಯನ್ನು ಕೈಗೊಳ್ಳುತ್ತಿರುವ ಸಂಶೋಧನಾರ್ಥಿ ಪೂರ್ಣಿಮಾ ರವಿ ಅವರು ನಿರ್ಮಿಸಿ ತಯಾರಿಸಿದ್ದಾರೆ. ಸಾಕ್ಷ್ಯಚಿತ್ರ ಪ್ರದರ್ಶನ ಕಾರ್ಯಕ್ರಮಕ್ಕೆ ಖ್ಯಾತ ಸಾಕ್ಷ್ಯಚಿತ್ರ ತಯಾರಕರು, ಸಿನಿಮಾ ನಿರ್ಮಾತೃ ಕೆ.ಪ್ರಕಾಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ವಹಿಸಿಕೊಳ್ಳಲಿದ್ದಾರೆ. ಸಾಮಾಜಿಕ ಪಿಡುಗಾದ ದೇವದಾಸಿ ಪದ್ಧತಿಯ ಕುರಿತು ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯದಲ್ಲಿ ಸಂಶೋಧನೆ ಕೈಗೊಳ್ಳುತ್ತಿರುವ ಪೂರ್ಣಿಮಾ ರವಿ ತಮ್ಮ ಸಂಶೋಧನೆಯ ಜೊತೆಯಲ್ಲಿಯೇ “ಗಾಡ್ಸ್ ವೈಫ್ಸ್ ಮೆನ್ಸ್ ಸ್ಲೇವ್” ಎಂಬ ಸಾಕ್ಷ್ಯಚಿತ್ರವನ್ನು ರೂಪಿಸಿದ್ದಾರೆ. ಆ ಮೂಲಕ…
ಮಡಿಕೇರಿ ಅ.30 : ಚೇರಳ ಗೌಡ ಸಂಘದ 15ನೇ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಐಯಂಡ್ರ ರಾಘವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಂದಿನ ಸಭೆ ವೇಳೆಗೆ ನೂತನ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ಧಾರ ಕೈಗೊಳ್ಳಲಾಯಿತು. ಸಂಘದ ನೂತನ ಕಟ್ಟಡದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಘವಯ್ಯ ಅವರು ಸಂಘದಲ್ಲಿ ಕಡಿಮೆ ಸಂಖ್ಯೆಯ ಸದಸ್ಯರಿದ್ದರೂ ಎಲ್ಲರ ಸಹಕಾರದಿಂದ 15 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಲಾಗಿದೆ. ಅಲ್ಲದೆ ನೂತನ ಕಟ್ಟಡವನ್ನು ನಿರ್ಮಿಸಲಾಗುತ್ತಿದ್ದು, ಮೇಲಿನ ಅಂತಸ್ತಿನ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆ ಇಂದು ಇದೇ ಕಟ್ಟಡದಲ್ಲಿ ಮಹಾಸಭೆ ನಡೆಸಲು ಸಾಧ್ಯವಾಗಿದೆ. ಇದು ಹೆಮ್ಮೆಯ ವಿಚಾರವೆಂದು ಹರ್ಷ ವ್ಯಕ್ತಪಡಿಸಿದರು. ಸಂಘದ ಸದಸ್ಯರಿಗೆ ಸಮಾಜದ ಸಭಾಂಗಣವನ್ನು ಸಭೆ, ಸಮಾರಂಭಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುವುದು. ಉಳಿದಿರುವ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸರ್ವರು ಸಹಕಾರ ನೀಡಬೇಕೆಂದು ರಾಘವಯ್ಯ ಮನವಿ ಮಾಡಿದರು. ಕಾರ್ಯದರ್ಶಿ ಆಜೀರ ಧನುಂಜಯ 2022-23 ನೇ ಸಾಲಿನ ವರದಿ ವಾಚಿಸಿದರು. ಉಪ ಕೋಶಾಧಿಕಾರಿ ಪೇರಿಯನ ಉದಯ ಲೆಕ್ಕಪತ್ರ ಮಂಡಿಸಿದರು. ಮರದಾಳು ದುವಿನ್ ಹಾಗೂ ಸಂಗಡಿಗರು…






