ಕುಶಾಲನಗರ, ಅ.30 : ವೀರಶೈವ , ಲಿಂಗಾಯತ ಅಂತಾ ಪ್ರತ್ಯೇಕ ಧರ್ಮ ಅಥವಾ ಒಂದು ಜಾತಿಯಿಲ್ಲ. ವೀರಶೈವ, ಲಿಂಗಾಯತ ಎರಡೂ ಒಂದೇ ಅಂತಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಮಹದೇವ ಬಿದಿರಿ ಹೇಳಿದರು. ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕದ ವತಿಯಿಂದ ಕುಶಾಲನಗರ ರೈತ ಸಹಕಾರ ಭವನದಲ್ಲಿ ನಡೆದ ಹಾನಗಲ್ ಶ್ರೀ ಕುಮಾರಸ್ವಾಮಿಗಳ 156 ನೇ ಜಯಂತಿ, ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಸ್ಮರಣೋತ್ಸವ ಹಾಗೂ ವೀರಶೈವ ಧಾರ್ಮಿಕ ಜನಜಾಗೃತಿ ಸಭೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವೀರಶೈವ ಲಿಂಗಾಯತ ಸಮಾಜವು ಶೈಕ್ಷಣಿಕ ಹಾಗೂ ಸಾಂಸ್ಕೃತಿಕವಾಗಿ ಅಭಿವೃದ್ಧಿ ಹೊಂದಲು ಪ್ರಯತ್ನಿಸಬೇಕಿದೆ. ಎಲ್ಲರ ಒಗ್ಗಟ್ಟಿನಿಂದ ಮಾತ್ರ ಸಮಾಜ ಉಳಿಯಲು ಸಾಧ್ಯ ಎಂದು ಅವರು ಸಲಹೆ ನೀಡಿದರು. ಪ್ರತಿಯೊಬ್ಬರೂ ಸಮಾಜದ ಸುಧಾರಣೆಗೆ ಕಂಕಣಬದ್ಧರಾಗಿ ದುಡಿಯುವ ಮೂಲಕ ದುರ್ಲರ ಸಮಾಜದ ಅಭಿವೃದ್ಧಿಗೆ ಎಲ್ಲರೂ ಸಂಘಟಿತರಾಗಿ ಶ್ರಮಿಸಬೇಕು ಎಂದು…
ಲೇಖಕ: admin
ಮಡಿಕೇರಿ ಅ.30 : ಅಖಿಲ ಕೊಡವ ಸಮಾಜ ಅಧ್ಯಕ್ಷರಾಗಿ ಸುದೀರ್ಘ ಅವಧಿಗೆ ಸಮಾಜ ಸೇವೆ ಮಾಡಿ, ಇತ್ತೀಚಿಗೆ ಅಗಲಿದ ದೇಶತಕ್ಕ ಮಾತಂಡ ಮೊಣ್ಣಪ್ಪ ಅವರ ನೆನಪಿಗಾಗಿ, ಕೊಡವಾಮೆರ ಕೊಂಡಾಟ ಸಂಘಟನೆ ಪ್ರಬಂಧ ಸ್ಪರ್ಧೆ ಏರ್ಪಡಿಸಿದೆ ಎಂದು ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ಪರ್ಧೆಯಲ್ಲಿ ಯಾವುದೇ ಜಾತಿ, ಧರ್ಮದ ಮಿತಿ ಇಲ್ಲದೆ, ಬರಹಗಾರರು 2,500 ವಾಕ್ಯಗಳಿಗೆ ಮೀರದಂತೆ ಕೊಡವ ಭಾಷೆಯಲ್ಲಿ ಮಾತಂಡ ಮೊಣ್ಣಪ್ಪ ಅವರ ಬಗ್ಗೆ ಟೈಪ್ ಮಾಡಿ ಪೋಸ್ಟ್ ತೀತಿಮಾಡ ಸೋಮಣ್ಣ, ಮುಳಿಯ ಜ್ಯುವೆಲರಿ, ಮಹಾದೇವಪೇಟೆ ಅಥವಾ ವಾಟ್ಸಪ್ ಸಂಖ್ಯೆ +91 94822 46336 ಮೂಲಕ ಸ್ಪರ್ಧಾ ಸಂಚಾಲಕ ಕೊಡವಾಮೆರ ಕೊಂಡಾಟ ಸಂಘಟನೆಯ ಸಂಘಟನಾ ಕಾರ್ಯದರ್ಶಿ ತೀತಿಮಾಡ ಸೋಮಣ್ಣ ಅವರಿಗೆ ದಿನಾಂಕ 15/11/2013 ರ ಒಳಗೆ ಕಳುಹಿಸುವಂತೆ ಮನವಿ ಮಾಡಿದರು. ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದವರಿಗೆ ಪ್ರಥಮ 4,000, ದ್ವಿತೀಯ 3,000, ತೃತೀಯ 2,000 ನಗದು ಹಾಗೂ ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧೆಯ…
ವಿರಾಜಪೇಟೆ ಅ.30 : ನಂ.371ನೇ ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತ ವತಿಯಿಂದ ಅ.31 ರಂದು ಸರಸ್ವತಿ ಪೂಜೆ ನಡೆಯಲಿದೆ. ಮಹಿಳಾ ಸಮಾಜದ ಕಟ್ಟಡದಲ್ಲಿ ಬೆಳಿಗ್ಗೆ 11ಗಂಟೆಗೆ ಸರಸ್ವತಿ ಪೂಜೆ ನಡೆಯಲಿದ್ದು, ಮಹಿಳಾ ಸಮಾಜದ ಎಲ್ಲಾ ಸದಸ್ಯರು ಪೂಜೆಯಲ್ಲಿ ಪಾಲ್ಗೊಳ್ಳಬೇಕೆಂದು ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಂಟಿಕೊಪ್ಪ ಅ.30 : ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವ ನ.1 ರಂದು ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ನಗರದ ಹೃದಯ ಭಾಗದಲ್ಲಿರುವ ಕನ್ನಡ ವೃತ್ತದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಂಟಿಕೊಪ್ಪ ಗೌಡ ಸಂಘದ ಅಧ್ಯಕ್ಷ ಯಂಕನ ಉಲ್ಲಾಸ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ವೇಳೆ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವ ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸೆಲ್ವರಾಜ್ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ. ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಉಪಾಧ್ಯಕ್ಷೆ ಶಿವಮ್ಮ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಕಸಾಪ ಕಾರ್ಯದರ್ಶಿ ಕೆ.ಎಸ್.ಅನಿಲ್ ತಿಳಿಸಿದ್ದಾರೆ.
ಮಡಿಕೇರಿ ಅ.29 : ವಿಜಯ ದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಇಂದು ನಗರದಲ್ಲಿ ಪಥಸಂಚಲನ ನಡೆಸಿದರು. ನಗರದ ಜೂನಿಯರ್ ಕಾಲೇಜು ಮೈದಾನದಿಂದ ಆರಂಭಗೊಂಡ ಪಥಸಂಚಲನ ಮಹದೇವಪೇಟೆ, ಬನ್ನಿ ಮಂಟಪ, ಹಳೇ ಖಾಸಗಿ ಬಸ್ ನಿಲ್ದಾಣ, ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಸಾಗಿ ಶ್ರೀ ಆಂಜನೇಯ ದೇವಾಲಯದ ಮುಂಭಾಗದಲ್ಲಿ ಸಮಾರೋಪಗೊಂಡಿತು. ಜಿಲ್ಲೆಯ ವಿವಿಧ ಭಾಗಗಳಿಂದ ಮಕ್ಕಳಾದಿಯಾಗಿ ನೂರಾರು ಸಂಖ್ಯೆಯಲ್ಲಿ ಗಣವೇಷಧಾರಿಗಳು ಆಗಮಿಸಿ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು. ಮುಖ್ಯ ರಸ್ತೆಗಳ ಇಕ್ಕೆಲಗಳಲ್ಲಿ ನಿಂತಿದ್ದ ಮಹಿಳೆಯರು ಹಾಗೂ ಸಾರ್ವಜನಿಕರು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದ ಗಣ ವೇಷಧಾರಿಗಳ ಮೇಲೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸೂಚಿಸಿದರು.
ಮಡಿಕೇರಿ ಅ.29 : ಪೊನ್ನಂಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿಯ ನಾಡುಗುಂಡಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಕಾಡಾನೆಗಳ ಹಿಂಡು ದಾಳಿ ಮಾಡಿದ ಪರಿಣಾಮ ಅಪಾರ ಪ್ರಮಾಣದ ಕೃಷಿ ಫಸಲು ನಾಶವಾಗಿದೆ. ಸ್ಥಳೀಯ ನಿವಾಸಿಗಳಾದ ಮಧು ಮಂದಣ್ಣ, ಕಣ್ಣೀಯರ ಪೆಮ್ಮಯ್ಯ, ಕಾಳೇಗಡ ಬೋಪಣ್ಣ ಹಾಗೂ ಬಂಟರ ರವಿ ಎಂಬುವವರ ಭತ್ತದ ಗದ್ದೆ, ಕಾಫಿ, ಅಡಿಕೆ, ಬಾಳೆ ಸಹಿತ ಇತರ ಬೆಳೆಗಳನ್ನು ತಿಂದು, ತುಳಿದು ನಾಶಪಡಿಸಿವೆ. ಅಂದಾಜು 2 ರಿಂದ 3 ಎಕರೆ ಬೆಳೆ ನಾಶವಾಗಿದ್ದು, ಸುಮಾರು 3 ರಿಂದ 4 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಬೆಳೆಗಾರರು ಬೇಸರ ವ್ಯಕ್ತಪಡಿಸಿದ್ದಾರೆ. ಭಾನುವಾರ ನಸುಕಿನ ಜಾವ ಕಾಡಾನೆಗಳ ಹಿಂಡಿನಿಂದ ದಾಳಿಯಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಗ್ರಾಮಸ್ಥರು, ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಮಡಿಕೇರಿ ಅ.29 : ಮನೆಯ ಹಿಂಭಾಗದಲ್ಲಿ ಗಾಂಜಾ ಬೆಳೆದಿದ್ದ ಆರೋಪದಡಿ ವ್ಯಕ್ತಿಯೊಬ್ಬರನ್ನು ಕೊಡಗು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೋಣಿಕೊಪ್ಪದ ನಿವಾಸಿ ಎ.ಎಂ.ಕಾವೇರಪ್ಪ (48) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈತನ ಬಳಿಯಿಂದ 5 ಕೆ.ಜಿ ಹಸಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಗಾಂಜಾ ಗಿಡಗಳನ್ನು ಬೆಳಸಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ವಿರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ಮೋಹನ್ ಕುಮಾರ್, ಗೋಣಿಕೊಪ್ಪ ವೃತ್ತದ ಗೋವಿಂದರಾಜು, ಪಿಎಸ್ಐ ರೂಪಾದೇವಿ ಬಿರಾದರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಹಿತ ಆರೋಪಿಯನ್ನು ವಶಕ್ಕೆ ಪಡೆದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ದಕ್ಷ ಕಾರ್ಯಾಚರಣೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಅ.29 : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಕೊಡಗಿನ ಕೆ.ಕೆ.ಮಂಜುನಾಥ್ ಕುಮಾರ್ ಅವರನ್ನು ಕಾಂಗ್ರೆಸ್ ಅಧಿಕೃತಗೊಳಿಸಿದೆ. ಜನಸೇವೆಗಾಗಿ ಶಿಕ್ಷಕ ವೃತ್ತಿಯನ್ನು ತೊರೆದು ರಾಜಕೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡ ಮಂಜುನಾಥ್ ಕುಮಾರ್, 2012 ರಲ್ಲಿ ಬಿಜೆಪಿಯ ಗಣೇಶ್ ಕಾರ್ಣಿಕ್ ಅವರ ವಿರುದ್ಧ ಸ್ಪರ್ಧಿಸಿ ಅಲ್ಪಮತಗಳಿಂದ ಸೋಲು ಅನುಭವಿಸಿದ್ದರು. ಶಿಕ್ಷಕ ಸಂಘಟನೆಗಳ ಅಧ್ಯಕ್ಷರಾಗಿ, ನಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಡಿಕೇರಿ ಕ್ಷೇತ್ರದ ಸ್ಪರ್ಧಾಕಾಂಕ್ಷಿಯೂ ಆಗಿದ್ದರು. ಇದೀಗ ಕಾಂಗ್ರೆಸ್ ಹೈಕಮಾಂಡ್ 2024 ಜೂನ್ ನಲ್ಲಿ ನಡೆಯಲಿರುವ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮಂಜುನಾಥ್ ಕುಮಾರ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ನೈರುತ್ಯ ಶಿಕ್ಷಕರ ಕ್ಷೇತ್ರವು ಸುಮಾರು 30 ಸಾವಿರ ಶಿಕ್ಷಕ ಮತದಾರರನ್ನು ಹೊಂದಿದೆ.
ಮಡಿಕೇರಿ ಅ.29 : ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲದಂತೆ ಆಗಿದೆ. ಗ್ರೀನ್ ಎನರ್ಜಿ ಬಗ್ಗೆ ಹೇಳುವ ಕೇಂದ್ರ ಸರ್ಕಾರ ರೈತರ ಪಂಪ್ ಸೆಟ್ ಗೆ ಸಬ್ಸಿಡಿ ನೀಡದೆ ಅನ್ಯಾಯ ಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಭೋಜಣ್ಣ ಸೋಮಯ್ಯ ಆರೋಪಿಸಿದ್ದಾರೆ. ಅವರು ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರ ಸೋಲಾರ್ ಪಂಪ್ ಸೆಟ್ ಗೆ ಶೇ.50 ಸಬ್ಸಿಡಿ ನೀಡಲು ಎಎಪಿ ಪಕ್ಷ ಒತ್ತಾಯಿಸಿದೆ. ಈ ವರ್ಷ ಮಳೆ ಕಡಿಮೆ ಇರುವುದರಿಂದ ಕಾಫಿ ಬೆಳೆಗಾರರು ಬಹಳ ಸಂಕಟದಲ್ಲಿ ಇದ್ದಾರೆ. ತಮ್ಮ ಫಸಲು ಉಳಿಸಿಕೊಳ್ಳಲು ನೀರು ಪಂಪ್ ಮಾಡುವ ಕಾಯಕದಲ್ಲಿ ತೊಡಗಿದ್ದಾರೆ. ಕೇಂದ್ರ ಸರ್ಕಾರದಿಂದ ಯಾವುದೇ ಸಹಾಯಧನ ನೀಡಿಲ್ಲ. ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ನಾಶವಾಗಿದ್ದು ಯಾವುದೇ ಪ್ರೋತ್ಸಾಹ ಧನ ನೀಡಿಲ್ಲ ಎಂದು ಹೇಳಿದರು. ರಾಜ್ಯದ ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲು ರಾಜ್ಯ ಸರ್ಕಾರ ಪ್ರತಿವರ್ಷ 6,900 ಕೋಟಿ ರೂ. ಖರ್ಚು ಮಾಡುತ್ತಿದೆ. ರಾಜ್ಯದಲ್ಲಿ ಒಟ್ಟು…
ಸುಂಟಿಕೊಪ್ಪ ಅ.29 : ಚರ್ಚ್ ಆಫ್ ಸೌತ್ ಇಂಡಿಯಾದ ದಕ್ಷಿಣಪ್ರಾಂತ್ಯದ ಸುಂಟಿಕೊಪ್ಪದಲ್ಲಿರುವ ಇಮ್ಯಾನ್ವೆಲ್ ಚರ್ಚ್ ನಲ್ಲಿ ವಾರ್ಷಿಕ “ಬೆಳೆ ಹಬ್ಬ” ಶೃದ್ಧಾಭಕ್ತಿಯಿಂದ ಭಾನುವಾರ ನಡೆಯಿತು. ಕಬ್ಬು, ಭತ್ತದ ಪೈರು, ಬಾಳೆಗೊನೆ, ಇನ್ನಿತರ ಫಲ ಪುಷ್ಪಗಳಿಂದ ಚರ್ಚ್ ನ್ನು ಅಲಂಕರಿಸಲಾಗಿತ್ತು. ಮೈಸೂರು ವಲಯದ ಸಭಾಪಾಲಕ ರೆ.ಫಾ.ಡೆನ್ನಿಯಲ್ ಕೌಡಿನ್ಯ ಅವರು ಧಾರ್ಮಿಕ ವಿಧಿವಿಧಾನಗಳೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಕೊಡಗು ವಲಯಾಧ್ಯಕ್ಷ ಮತ್ತು ಸಭಾಪಾಲಕ ರೆ.ಫಾ.ಜೈಸನ್ಗೌಡರ್ ಅವರು ಮಾತನಾಡಿ ನಮ್ಮ ದೇವಾಲಯಗಳ ವಾರ್ಷಿಕ ವಿಧಿವಿಧಾನಗಳಲ್ಲಿ ಬೆಳೆ ಹಬ್ಬವು ಪ್ರಮುಖವಾಗಿದೆ. ಸತ್ಯವೇದ ಅಥವಾ ಬೈಬಲಿನ ಪ್ರಕಾರ ಭಕ್ತರು ತಾವು ಬೆಳೆದ ಕೃಷಿ ಫಸಲನ್ನು ಮೊದಲ ಕಾಣಿಕೆಯಾಗಿ ದೇವರಿಗೆ ಸರ್ಮಪಿಸುವುದು ಪದ್ಧತಿಯಾಗಿದೆ. ಇದರ ಮೂಲಕ ನಮ್ಮನ್ನು ನಾವು ದೇವರಿಗೆ ಪುನಾರವರ್ತಿ ಕಾಣಿಕೆಯಾಗಿ ಸಮರ್ಪಿಸಿಕೊಳ್ಳುವುದಾಗಿದೆ ಎಂದು ಹೇಳಿದರು. ಭಾನುವಾರದ ಬೆಳೆಹಬ್ಬವು ಪ್ರಾರ್ಥನೆ ಮತ್ತು ಪೂಜಾ ವಿಧಿ ವಿಧಾನಗಳಿಂದ ಪ್ರಾರಂಭವಾಗಿ ಆನಂತರ ವಿವಿಧ ಫಲ ವಸ್ತುಗಳ ಹರಾಜು ಪ್ರಕ್ರಿಯೆ ನಡೆಯಿತು. ಸಾಮೂಹಿಕ ಭೋಜನದ ಬಳಿಕ ಸಂಜೆಯವರೆಗೆ ಆಟೋಟ ಸ್ಪರ್ಧೆಗಳು ನಡೆದವು, ವಿಜೇತರಿಗೆ ಬಹುಮಾನ…






