ಮಡಿಕೇರಿ ಅ.28 : ಕರಡು ಮತದಾರರ ಪಟ್ಟಿ ಪ್ರಕಟ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕರಡು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಪ್ರಮುಖರಿಗೆ ನೀಡಿದರು. ಕರಡು ಮತದಾರರ ಪಟ್ಟಿಯಲ್ಲಿ ಆಕ್ಷೇಪಣೆಗಳು ಇದ್ದಲ್ಲಿ ಮಾಹಿತಿ ನೀಡಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ಸ್ಥಳಾಂತರ ಮತ್ತಿತರ ಸಂಬಂಧಿಸಿದಂತೆ ಮೊಬೈಲ್ ಅಪ್ಲಿಕೇಷನ್ನಲ್ಲಿ ಮತದಾರರ ಸಹಾಯವಾಣಿ (ವೋಟರ್ ಹೆಲ್ಫ್ ಲೈನ್)ನಲ್ಲಿ ನೇರವಾಗಿ ಸಲ್ಲಿಸಬಹುದಾಗಿದೆ. ಇಲ್ಲದಿದ್ದಲ್ಲಿ ತಹಶೀಲ್ದಾರರ ಕಚೇರಿಯ ಚುನಾವಣಾ ಶಾಖೆಗೆ ಭೇಟಿ ನೀಡಿ ಸರಿಪಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು. ನಮೂನೆ-6, 6ಎ, 7 ಮತ್ತು 8ರ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗವು ಅಭಿವೃದ್ಧಿ ಪಡಿಸಿರುವ ಮೋಬೈಲ್ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಆಪ್ (VOTER HELPLINE APP) ಹಾಗೂ https://voters.eci.gov.in/ / VOTERS’ SERVICE PORTAL ಮೂಲಕ ಆನ್ಲೈನ್ನಲ್ಲಿ ನೇರವಾಗಿ ಸಲ್ಲಿಸಬಹುದು. ಮತದಾರರ ಪಟ್ಟಿಯಲ್ಲಿ ಆಧಾರ್ ಲಿಂಕ್ ಮಾಡಲಾಗಿದ್ದು, ಯಾವುದಾದರೂ ಒಂದು ಮತಗಟ್ಟೆಯಲ್ಲಿ ಮಾತ್ರ ಹೆಸರು…
ಲೇಖಕ: admin
ಮಡಿಕೇರಿ ಅ.28 : ಅವಧಿ ಪೂರ್ಣಗೊಳ್ಳಲಿರುವ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆಯನ್ನು ನಡೆಸಲು ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ತಯಾರಿಸಲು ನಿರ್ದೇಶನ ನೀಡಿರುತ್ತದೆ. ಅರ್ಹತಾ 2023 ರ ನ.1 ಕ್ಕೆ ಕರ್ನಾಟಕ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿರುತ್ತದೆ. ಭಾರತ ಚುನಾವಣಾ ಆಯೋಗದ 2023 ರ ಆ.9 ರ ಪತ್ರದನ್ವಯ ಕರ್ನಾಟಕ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಮತ ಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ದ ಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18 ಮತ್ತು ನಮುನೆ-19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಿದೆ. ನಮೂನೆ-18 ಮತ್ತು ನಮೂನೆ-19 ರ ಅರ್ಜಿಗಳನ್ನು ಸ್ವೀಕರಿಸಲು 2023 ರ ನ.6 ಕೊನೆಯ ದಿನವಾಗಿದೆ. ಕರ್ನಾಟಕ ನೈರುತ್ಯ ಶಿಕ್ಷಕರ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಹತೆಗಳು: ಭಾರತದ ಪ್ರಜೆಯಾಗಿರುವ ಮತ್ತು…
ಮಡಿಕೇರಿ ಅ.27 : ರಾಜ್ಯ ಸರ್ಕಾರ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ವೃಥಾರೋಪಗಳನ್ನು ಮಾಡುವ ಮೂಲಕ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಮಾಡುತ್ತಿದ್ದಾರೆ ಮತ್ತು ಸುಳ್ಳುಗಳನ್ನು ನಿಜವಾಗಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯೊಂದಿಗೆ ಸೇರಿಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಸೆಂಟ್ರಲ್ ಗ್ರಿಡ್ ಮೂಲಕ ವಿದ್ಯುತ್ ಖರೀದಿ ಮಾಡಿದೆ. ಇದರ ಬಗ್ಗೆ ಅರಿವಿಲ್ಲದ ಅವರು ವಿದ್ಯುತ್ ಖರೀದಿಯಲ್ಲಿ ಕಮಿಷನ್ ಹೊಡೆದಿದ್ದಾರೆ ಎಂದು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಅವಧಿಯಲ್ಲಿ ರಾಜ್ಯದ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೂ ಕ್ರಮ ಕೈಗೊಂಡಿಲ್ಲವೆಂದು ಟೀಕಿಸಿದರು. ಪ್ರಸ್ತುತ ಡಿ.ಕೆ.ಶಿವಕುಮಾರ್ ಅವರು ಒಕ್ಕಲಿಗರ ನಾಯಕರಾಗಿ ಬೆಳೆಯುತ್ತಿದ್ದು, ಹೆಚ್.ಡಿ.ಕುಮಾರಸ್ವಾಮಿ ಅವರು ನೇಪತ್ಯಕ್ಕೆ ಸರಿಯುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಜಾರಿ, ಜನಪರವಾದ ಕಾರ್ಯಕ್ರಮಗಳನ್ನು ಸಹಿಸದೆ ಅವರು ಆರೋಪಗಳನ್ನು…
ಮಡಿಕೇರಿ ಅ.27 : “ಪಥಲೋಧಿ” ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಇಂದು ಮಡಿಕೇರಿ ಕೋಟೆ ಮತ್ತು ನಾಲ್ನಾಡ್ ಅರಮನೆ ಆವರಣದಲ್ಲಿ ಕುತಂತ್ರಕ್ಕೆ ಸಿಲುಕಿ ಜೀವ ಕಳೆದುಕೊಂಡ ಹಿರಿಯ ಕೊಡವರಿಗೆ ಮೀದಿ ಸಮರ್ಪಿಸುವ ಕಾರ್ಯವನ್ನು ನೆರವೇರಿಸಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮೌನ ಪ್ರಾರ್ಥನೆಯ ಮೂಲಕ ಹಿರಿಯರನ್ನು ಸ್ಮರಿಸಿಕೊಂಡರು. ಅರಮನೆಯ ಪಿತೂರಿಯಲ್ಲಿ ಕೊಡವ ಜನಾಂಗೀಯ ಬುಡಕಟ್ಟು ಜನಾಂಗದ ಹತ್ಯೆಗಳು ಎರಡು ಶತಮಾನಗಳಿಗೂ ಹೆಚ್ಚು ಕಾಲ ನಿರಂತರವಾಗಿ ನಡೆದಿದೆ. ಷಡ್ಯಂತ್ರದಿoದ ಪ್ರಾಣ ಕಳೆದುಕೊಂಡ ಅಮಾಯಕ ಹಿರಿಯರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು. ಮಡಿಕೇರಿ ಕೋಟೆ ಮತ್ತು ನಾಲ್ನಾಡ್ ಅರಮನೆ ಆವರಣದಲ್ಲಿ ಅರಸರ ಕಾಲದ 201 ವರ್ಷಗಳ ಕರಾಳ ವಿಶ್ವಾಸಘಾತುಕ ಆಡಳಿತಗಾರರಿಂದ ಕೊಡವರ ದುರಂತ ಅಂತ್ಯವಾಗಿದೆ. 40 ಸಾವಿರಕ್ಕೂ ಹೆಚ್ಚು ಅಮಾಯಕ ಕೊಡವ ಜನಾಂಗೀಯ ಬುಡಕಟ್ಟು ಜನರನ್ನು ಕೋಟೆ ಆವರಣದಲ್ಲಿಯೇ ರಾಜರು ಕೊಂದು ಹಾಕಿದರು. ದೇವಟ್ ಪರಂಬುವಿನಲ್ಲಿ ನಿರಾಯುಧ ಕೊಡವ ಬುಡಕಟ್ಟು ಯೋಧರು ಟಿಪ್ಪುವಿನ ಕಾಲದಲ್ಲಿ ಕೊಲ್ಲಲ್ಪಟ್ಟರು.…
ಮಡಿಕೇರಿ ಅ.27 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮಡಿಕೇರಿ-208 ಮತ್ತು ವಿರಾಜಪೇಟೆ-209 ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಬಿಡುಗಡೆ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಈಗಾಗಲೇ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮನೆ ಮನೆ ಸಮೀಕ್ಷೆ ಮಾಡಿ ಕರಡು ಮತದಾರರ ಪಟ್ಟಿಯನ್ನು ತಯಾರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. 2024 ರ ಜನವರಿ, 05 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತಿದ್ದು, ಅದರೊಳಗೆ ಈ ಕರಡು ಮತದಾರರ ಪಟ್ಟಿಯನ್ನು ಗಮನಿಸಿ ಸರಿಪಡಿಸಿಕೊಳ್ಳಲು ಅವಕಾಶ ಇದೆ. 18 ವರ್ಷ ಪೂರ್ಣಗೊಂಡವರ ಹೆಸರು ಬಿಟ್ಟು ಹೋಗಿದ್ದಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶವಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ವೆಂಕಟ್ ರಾಜಾ ಅವರು ಕೋರಿದರು. ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯ 546 ಮತಗಟ್ಟೆಯಲ್ಲಿ 2,26,392 ಪುರುಷ ಮತದಾರರು, 2,33,503 ಮಹಿಳಾ ಮತದಾರರು ಹಾಗೂ 21 ಇತರ ಮತದಾರರು,…
ಮಡಿಕೇರಿ ಅ.27 : ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ, ವಿವಿಧ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಮತ್ತು ಶಾಲೆಗೆ ದಾಖಲಾಗದ ಮಕ್ಕಳನ್ನು ಗುರುತಿಸುವ ಸಮೀಕ್ಷೆ ಜಿಲ್ಲೆಯಲ್ಲಿ ನ.4 ರವರೆಗೆ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ನಡೆಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ ತಿಳಿಸಿದ್ದಾರೆ. ಶಾಲೆಯಿಂದ ಹೊರಗಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಜನವಸತಿ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ ಶಾಲೆ ಬಿಟ್ಟವರನ್ನು ಗುರುತಿಸಲಾಗುತ್ತದೆ ಎಂದು ಹೇಳಿದ್ದಾರೆ. ಜನವಸತಿ ಪ್ರದೇಶದ ನಾಗರಿಕರು ಜನಪ್ರತಿನಿಧಿಗಳು ಅಂಗನವಾಡಿ ಆಶಾ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳು ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ಒದಗಿಸಿ ಸಮೀಕ್ಷಾ ತಂಡಕ್ಕೆ ಸಹಕರಿಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ ಅವರು ಕೋರಿದ್ದಾರೆ. ಆರ್ಟಿಇ ಜಾರಿ ಹಿನ್ನೆಲೆಯಲ್ಲಿ ಯಾವ ಮಗುವೂ ಶಿಕ್ಷಣದಿಂದ ವಂಚಿತರಾಗದಂತೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲಾ ವ್ಯಾಪ್ತಿಗೆ ತರುವುದು…
ಮಡಿಕೇರಿ ಅ.27 : ‘ಖಂಡಗ್ರಾಸ ಚಂದ್ರಗ್ರಹಣ’ ಇರುವುದರಿಂದ ನಗರದ ಶ್ರೀ ಓಂಕಾರೇಶ್ವರ ಮತ್ತು ಶ್ರೀ ಆಂಜನೇಯ ದೇವಾಲಯಗಳಲ್ಲಿ ಅ.28 ರಂದು ಸಂಜೆ 6.30 ಗಂಟೆಗೆ ಮಹಾಪೂಜೆ ನಡೆಯಲಿದೆ. ನಂತರ ಸಾರ್ವಜನಿಕ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ಶ್ರೀ ಓಂಕಾರೇಶ್ವರ ದೇವಾಯದ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎಲ್.ದೇವರಾಜ್ ತಿಳಿಸಿದ್ದಾರೆ.
ಮಡಿಕೇರಿ ಅ.27 : ಕುಶಾಲನಗರ ವ್ಯಾಪ್ತಿಯ ಹಾರಂಗಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಸುಂದರನಗರದಿಂದ ಚಿಕ್ಕತ್ತೂರು ಗ್ರಾಮದವರೆಗೆ ನಿರ್ವಹಿಸಬೇಕಿರುವುದರಿಂದ 220/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೋಗುವ ಎಸ್ಎಲ್ಎನ್ ಫೀಡರ್ನಲ್ಲಿ ಅ.30 ರಂದು ಬೆಳಗ್ಗೆ 10 ಗಂಟೆಯಿಂದ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕೂಡ್ಲೂರು, ಕೂಡುಮಂಗಳೂರು, ಸುಂದರನಗರ, ಚಿಕ್ಕತ್ತೂರು, ದೊಡ್ಡತ್ತೂರು, ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಅ.28 : ಕೇಂದ್ರ ಸರ್ಕಾರ ಸಹಕಾರ ಸಚಿವಾಲಯವನ್ನು ನೂತನವಾಗಿ ಸ್ಥಾಪಿಸಿ ಸಹಕಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟು, ಸಹಕಾರ ಕ್ಷೇತ್ರದ ಮೂಲಕ ಪಾರದರ್ಶಕ ಆಡಳಿತ ನೀಡಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವತ್ತ ಸಾಗುತ್ತಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಮನು ಮುತ್ತಪ್ಪ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ ಹಾಗೂ ಸಹಕಾರ ಇಲಾಖೆ, ಕೊಡಗು ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಪ್ಯಾಕ್ಸ್, ಎ.ಪಿ.ಸಿ.ಎಂ.ಎಸ್., ಮತ್ತು ಲ್ಯಾಂಪ್ಸ್ ಸಹಕಾರ ಸಂಘಗಳ ಕಾರ್ಯನಿರ್ವಾಹಕರಿಗೆ ಕೇಂದ್ರ ಸರ್ಕಾರದ ಸಹಕಾರ ಇಲಾಖೆಯ ನೂತನ 13 ಯೋಜನೆಗಳ ಕುರಿತು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆದ ಶಿಕ್ಷಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರವು ದೇಶದ ಎಲ್ಲಾ ಸಹಕಾರ ಸಂಘಗಳಿಗೆ ಅನ್ವಯಿಸುವಂತೆ ಏಕರೂಪದ ಉಪನಿಯಮವನ್ನು ಜಾರಿಗೆ ತರಲಾಗುತ್ತಿದ್ದು, ಆ ಮೂಲಕ ಸಂಘವು ಹಲವು ಉದ್ದೇಶಗಳನ್ನು ಹೊಂದಿ ಅವುಗಳನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತಿದೆ.…
ಕುಶಾಲನಗರ, ಅ.27 : ಕನ್ನಡ ಸಾಹಿತ್ಯ ಪರಿಷತ್ತು(ಕ.ಸಾ.ಪ.) ಜಿಲ್ಲಾ ಸಮಿತಿ, ಕ.ಸಾ.ಪ. ಕುಶಾಲನಗರ ತಾಲೂಕು ಸಮಿತಿ ಹಾಗೂ ಕ.ಸಾ.ಪ.ಹೆಬ್ಬಾಲೆ ವಲಯ ಘಟಕದ ವತಿಯಿಂದ ನವೆಂಬರ್ ತಿಂಗಳಲ್ಲಿ ಹೆಬ್ಬಾಲೆ ಗ್ರಾಮದಲ್ಲಿ ನಡೆಸಲುದ್ದೇಶಿರುವ ” ಕರ್ನಾಟಕ ಸುವರ್ಣ ಸಂಭ್ರಮ: 50″ ರ ಪೂರ್ವಭಾವಿ ಸಭೆಯು ಆ.28 ರಂದು ನಡೆಯಲಿದೆ ಎಂದು ಕುಶಾಲನಗರ ತಾಲ್ಲೂಕು ಕ.ಸಾ.ಪ.ಅಧ್ಯಕ್ಷ ಕೆ.ಎಸ್.ನಾಗೇಶ್ ತಿಳಿಸಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಹೆಬ್ಬಾಲೆ ಪ್ರೌಢಶಾಲೆಯಲ್ಲಿ ನಡೆಯಲಿರುವ ಸಭೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ: 50 ರ ಆಚರಣೆ ಕುರಿತು ಸಮಾಲೋಚನೆ ನಡೆಸಲಾಗುವುದು. ಸುವರ್ಣ ಸಂಭ್ರಮ ಆಚರಣೆಗೆ ಸ್ವಾಗತ ಸಮಿತಿ ಸೇರಿದಂತೆ ವಿವಿಧ ಉಪ ಸಮಿತಿಗಳ ರಚನೆ, ಸಾಂಸ್ಕೃತಿಕ ಮೆರವಣಿಗೆ, ವಿಚಾರ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ, ಜನಪದ ವಸ್ತು ಪ್ರದರ್ಶನ, ಗ್ರಾಮದ ಅಲಂಕಾರ, ವೇದಿಕೆ ನಿರ್ಮಾಣ ಮತ್ತಿತರ ವಿಚಾರಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ: 50 ರ ಆಚರಣೆಯನ್ನು ಹೆಬ್ಬಾಲೆ ಮತ್ತು ತೊರೆನೂರು ಹಾಗೂ ಶಿರಂಗಾಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಸಹಕಾರಿ…






