ಮಡಿಕೇರಿ ನ.28 NEWS DESK : ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ, ಆದ್ದರಿಂದ ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ಕರೆ ನೀಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕರ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಾಲಿಬಾಲ್, ಹಾಕಿ, ಬ್ಯಾಡ್ಮಿಂಟನ್ ಮುಂತಾದವುಗಳು ಅಂತರಾಷ್ಟ್ರೀಯ ಮಟ್ಟಕ್ಕೆ ತಲುಪುವುದು ಕೊಡಗು ಜಿಲ್ಲೆಯು ಒಂದಾಗಿದೆ. ಕೊಡಗು ಜಿಲ್ಲೆಯು ಕ್ರೀಡೆಯಲ್ಲಿ ಹೆಸರು ಮಾಡಿದೆ. ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಿ ಎಂದರು. ನಿರಂತರವಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಂಡರೆ ಆರೋಗ್ಯವನ್ನು ಉತ್ತಮವಾಗಿಡಲು ಸಾಧ್ಯ. ಹಾಗೂ ಪೋಷಕರು ಮಕ್ಕಳಿಗೆ ಪ್ರೋತ್ಸಾಹ ನೀಡುವುದು ಮುಖ್ಯ ಎಂದರು. ಕ್ರೀಡೆಗಳನ್ನು ನಿರಂತರವಾಗಿ ಅಭ್ಯಾಸ…
ಲೇಖಕ: admin
ಮಡಿಕೇರಿ ನ.28 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣಗೊಳ್ಳಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ನಗರದ ಐಟಿಐ ಕಾಲೇಜು ಬಳಿ ಸುಮಾರು 379 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿ, ಜಿಲ್ಲಾ ನ್ಯಾಯಾಲಯ ಬಳಿ ಸುಮಾರು 448 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಾಲಕಿಯರ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಕ್ರೀಡಾಂಗಣ ಬಳಿ ಸುಮಾರು 250 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕ್ರೀಡಾ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು, ಇಲಾಖಾ ಅಧಿಕಾರಿಗಳು ಹಾಜರಿದ್ದರು.
ಮಡಿಕೇರಿ ನ.28 NEWS DESK : ಸಮಾಜದಲ್ಲಿ ಪೌರಕಾರ್ಮಿಕರು ತೆರೆಯ ಹಿಂದಿನಂತೆ ಮೌನವಾಗಿ, ಸದ್ದಿಲ್ಲದೆ ಕರ್ತವ್ಯ ನಿರ್ವಹಿಸುತ್ತಾರೆ. ಆದ್ದರಿಂದ ಪೌರಕಾರ್ಮಿಕರ ವೃತ್ತಿಯನ್ನು ಎಷ್ಟು ಗೌರವಿಸಿದರೂ ಸಾಲದು ಎಂದು ಶಾಸಕ ಡಾ.ಮಂತರಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ. ನಗರಸಭೆ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ‘ಪೌರಕಾರ್ಮಿಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಡಿಕೇರಿ ನಗರ ಸ್ವಚ್ಛತೆ ಹಾಗೂ ಪರಿಶುದ್ಧ ಗಾಳಿಗೆ ಹೆಸರಾಗಿರಲು ಪೌರಕಾರ್ಮಿಕರ ಸೇವೆಯು ಸಹ ಒಂದಾಗಿದೆ. ಆ ನಿಟ್ಟಿನಲ್ಲಿ ಪೌರಕಾರ್ಮಿಕರನ್ನು ಗೌರವಿಸಬೇಕು. ಜೊತೆಗೆ ಸರ್ಕಾರದ ಸೌಲಭ್ಯಗಳು ತಲುಪಬೇಕು ಎಂದು ಶಾಸಕರು ನುಡಿದರು. ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ 12 ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲಾಗುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹಾಗೆಯೇ ಹೊರಗುತ್ತಿಗೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂ ಮಾಡಬೇಕಿದೆ. ಪೌರಕಾರ್ಮಿಕರಿಗೆ ವಿಮಾ ಸೌಲಭ್ಯ ದೊರೆಯಬೇಕು. ಹಾಗೆಯೇ ಕಾಲ ಕಾಲಕ್ಕೆ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸುವಂತಾಗಬೇಕು ಎಂದು ಶಾಸಕರು ಸಲಹೆ ನೀಡಿದರು.‘ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ.…
ಮಡಿಕೇರಿ ನ.28 NEWS DESK : ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ ಅವರು ಕಳೆದ 45 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿರುವ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲು ಯೋಗ್ಯ ವ್ಯಕ್ತಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಅತ್ಯಧಿಕ ಸ್ಥಾನಗಳಲ್ಲಿ ಗೆಲವು ಸಾಧಿಸಿದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಸಂದರ್ಭ ಆರಂಭದಲ್ಲೇ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವ ಎಲ್ಲಾ ಅರ್ಹತೆ ಶಿವಕುಮಾರ್ ಅವರಿಗಿದ್ದರೂ ಪಕ್ಷಕ್ಕಾಗಿ ಅಂದು ಅವರು ತ್ಯಾಗಮಯಿಯಾಗಿದ್ದರು. ಮುಖ್ಯಮಂತ್ರಿ ಸ್ಥಾನದ ಮೊದಲ ಅವಧಿಯ ಅಧಿಕಾರ ಇದೀಗ ಮುಗಿಯುವ ಹಂತದಲ್ಲಿದ್ದು, ಎರಡನೇ ಅವಧಿಯ ಅಧಿಕಾರ ನ್ಯಾಯಯುತವಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಗಬೇಕಾಗಿದೆ. 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೃಹತ್ ಮೊತ್ತದ ಸ್ಥಾನಗಳನ್ನು ಗೆಲ್ಲಲು ಶಿವಕುಮಾರ್ ಅವರು ಪ್ರಮುಖ ಕಾರಣಕರ್ತರಾಗಿದ್ದಾರೆ. ಇವರ ಶ್ರಮವನ್ನು ಪಕ್ಷದ ಹೈಕಮಾಂಡ್ ಈಗಲಾದರೂ ಪುರಸ್ಕರಿಸಬೇಕು.…
ಮೈಸೂರು ನ.28 NEWS DESK : ದಸರಾ ಆನೆ ಅರ್ಜುನನ ಎರಡನೇ ವರ್ಷದ ನೆನಪು ಹಾಗೂ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಡಿ.4 ರಂದು ನಗರದಲ್ಲಿ ನಡೆಯಲಿದೆ. ಮೈಸೂರು ಕಲ್ಚರಲ್ ಅಸೋಸಿಯೇಷನ್ ಹಾಗೂ ಕಲಿಸು ಫೌಂಡೇಷನ್ ವತಿಯಿಂದ ಅಂದು ನಗರದ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ನಲ್ಲಿ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಜರುಗಲಿದೆ. 2023ರ ಡಿಸೆಂಬರ್ 4 ರಂದು ಅರ್ಜುನ ಹಾಸನ ಜಿಲ್ಲೆಯ ಸಕ್ಲೇಶಪುರ ತಾಲೂಕಿನ ಯಸಳೂರಿನಲ್ಲಿ ಮದಗಜದೊಂದಿಗೆ ಹೋರಾಡುತ್ತಾ ದುರಂತ ಅಂತ್ಯ ಕಂಡ ದಿನ. ಕಳೆದ ವರ್ಷ ಕೂಡ ಕಲ್ಚರಲ್ ಅಸೋಸಿಯಷನ್ ಮೊದಲ ವರ್ಷದ ಕಾರ್ಯಕ್ರಮ ನಡೆಸಿತ್ತು. ಐತಿಚಂಡ ರಮೇಶ್ ಉತ್ತಪ್ಪ ಅವರ 40ನೇ ಕೃತಿ ಅರ್ಜುನ ಬಲಿಯಾದ ಘಟನೆಯ ತನಿಖಾ ವರದಿಯನ್ನು ಒಳಗೊಂಡ ‘‘ಸಾವಿನ ಸತ್ಯ-ಅರ್ಜುನ ನಿನ್ನ ಕೊಂದದ್ದು ಮದಗಜವಲ್ಲ ಪಾಪಿ ಮನುಷ್ಯ” ಹಾಗೂ ‘‘ದಸರಾ ಆನೆಗಳು- ಭೀಮ ಹಾಗೂ ಇತರರು” ಕೃತಿಗಳನ್ನು ಬಿಡುಗಡೆ ಮಾಡಲಾಗುವುದು. ಡಿ.4 ರಂದು ಕಾರ್ಯಕ್ರಮವನ್ನು ಮಾಜಿ ಸಂಸದ ಶ್ರೀ…
ಮಡಿಕೇರಿ ನ.28 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕುಂಜಿಲ -ಕಕ್ಕಬೆ ಗ್ರಾಮ ಪಂಚಾಯತ್ ನ ಎನ್ ಆರ್ ಎಲ್ ಎಂ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು, ಗ್ರಾಮದ ಹಾಗೂ ಗ್ರಾಮಸ್ಥರ ಹಿತದೃಷ್ಟಿಯಿಂದ ಪಂಚಾಯತ್ ಆಡಳಿತ ಪಾರದರ್ಶಕವಾಗಿ ಹಾಗೂ ಜನಪರವಾಗಿ ಇರಬೇಕೆಂದು ಕರೆ ನೀಡಿದರು. ಈ ಕಟ್ಟಡದಲ್ಲಿ ಲೈಬ್ರರಿ ವ್ಯವಸ್ಥೆ ಕಂಡು ಸಂತಸಗೊಂಡ ಶಾಸಕರು ಇದರ ಸದುಪಯೋಗ ಜನರಿಗೆ ಒದಗುವಂತಾಗಲಿ ಎಂದು ಕರೆ ನೀಡಿದರು. ನೂತನ ಪಂಚಾಯತ್ ಕಟ್ಟಡದಲ್ಲಿ ಗ್ರಾಮದ ಒಳಿತಿಗೆ ಶ್ರಮಿಸುವ ಬದ್ಧತೆ ಎಲ್ಲಾ ಪಂಚಾಯತ್ ಸದಸ್ಯರಿಗೆ ಇರಲಿ ಎಂದು ಸಲಹೆ ನೀಡಿದ ಶಾಸಕರು, ಗ್ರಾಮದ ಜನತೆಗೆ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಲು ಪಣ ತೊಡಬೇಕೆಂದು ಸಲಹೆ ನೀಡಿದರು. ಈ ಸಂದರ್ಭ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮಂದ್ರೀರ ಮೋಹನ್, ಕೆಡಿಪಿ ಸದಸ್ಯರು ಬಾಚಮಾಂಡ…
ಮಡಿಕೇರಿ ನ.28 NEWS DESK : ಕೊಡಗು ಜಿಲ್ಲೆಯಲ್ಲಿರುವ ತುಳು ಭಾಷಿಕರನ್ನು ಒಗ್ಗೂಡಿಸಿ ಸಂಘಟನೆಯನ್ನು ಬಲಿಷ್ಠಗೊಳಿಸಲು ಮತ್ತು ಬೃಹತ್ ತುಳು ಸಮಾವೇಶ ನಡೆಸಲು ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಪ್ರಮುಖರ ಸಭೆ ನಿರ್ಧರಿಸಿದೆ. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಕೂಟದ ಜಿಲ್ಲಾಧ್ಯಕ್ಷ ಬಿ.ಬಿ.ಐತ್ತಪ್ಪ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಆಚಾರ ವಿಚಾರ, ಪದ್ಧತಿ ಪರಂಪರೆಯನ್ನು ಉಳಿಸುವುದರೊಂದಿಗೆ ತುಳು ಭಾಷಿಕರನ್ನು ಸಂಘಟಿಸುವ ಕುರಿತು ಚರ್ಚಿಸಲಾಯಿತು. ಕೊಡಗು ಜಿಲ್ಲೆಯಲ್ಲಿ ತುಳು ಭಾಷಿಕರ ಸಂಖ್ಯೆ ಹೆಚ್ಚು ಇದ್ದು, 14 ತುಳು ಭಾಷಿಕ ಸಮುದಾಯವನ್ನು ಒಂದೇ ವೇದಿಕೆಯಡಿ ತುಳುವೆರ ಜನಪದ ಕೂಟ ತಂದಿದೆ. ಹೋಬಳಿ, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ತುಳು ಭಾಷಿಕ ಸಂಘಟನೆಯನ್ನು ಮತ್ತಷ್ಟು ಬಲಗೊಳಿಸಬೇಕು. ಮುಂದಿನ ದಿನಗಳಲ್ಲಿ ಬೃಹತ್ ತುಳು ಸಮಾವೇಶ ನಡೆಸಲು ತುಳು ಭಾಷಿಕರು ಒಗ್ಗೂಡಿ ಕಾರ್ಯಪ್ರವೃತ್ತರಾಗಬೇಕು. ತುಳು ಭಾಷಿಕರ ಶ್ರೇಯೋಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಭೆ ನಿರ್ಣಯ ಕೈಗೊಂಡಿತು. ಸಭೆಯಲ್ಲಿ ತುಳುವೆರ…
ಮಡಿಕೇರಿ ನ.28 NEWS DESK : ಕೊಡಗಿನ ವಿರಾಜಪೇಟೆಯ ಪೆರಂಬಾಡಿಯಲ್ಲಿರುವ ಶಂಸುಲ್ ಉಲಮಾ ಬಡ ಮತ್ತು ನಿರ್ಗತಿಕ ಹೆಣ್ಣು ಮಕ್ಕಳ ಅನಾಥಾಲಯದ ಬನಾತ್ ಯುಎಇ ಸಮಿತಿಯನ್ನು ಸಂಸ್ಥೆಯ ಮುಖ್ಯಸ್ಥರಾದ ಬಷೀರ್ ಹಾಜಿ ವಿರಾಜಪೇಟೆ ಅವರ ನೇತೃತ್ವದಲ್ಲಿ ರಚಿಸಲಾಯಿತು. ಅಧ್ಯಕ್ಷರಾಗಿ ಹುಸೈನ್ ಫೈಝಿ ಸೋಮವಾರಪೇಟೆ ಹಾಗೂ ಮುಖ್ಯ ಕಾರ್ಯದರ್ಶಿಯಾಗಿ ರಫೀಕಲಿ ಕುಂಡಂಡ ಕುಂಜಿಲ ಅವರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಹಾರಿಸ್ ಬಾಖವಿ ಎಡಪಾಲ, ಅಬ್ದುಲ್ ಸಲಾಂ ಕುಂಜಿಲ, ಸಹ ಕಾರ್ಯದರ್ಶಿಗಳಾಗಿ ಯಹ್ಯಾ – ಕೊಡ್ಲಿಪೇಟೆ, ನವಾಜ್ – ಎಡಪಾಲ ಆಯ್ಕೆಯಾದರು. ಖಜಾಂಚಿಯಾಗಿಅಶ್ರಫ್ ಇಅ ಎಮ್ಮೆಮಾಡು, ಸಲಹಾ ಸಮಿತಿಗೆ ಸಯ್ಯಿದ್ ಅಷ್ಕರ್ ಅಲಿ ತಂಗಳ್ ಮಂಗಳೂರು, ಬಶೀರ್ ಹಾಜಿ ವಿರಾಜಪೇಟೆ, ಅಬೂಬಕ್ಕರ್ ಹಾಜಿ ಕೊಟ್ಟಮುಡಿ, ಬಶೀರ್ ಹಾಜಿ ಎಡಪಲ, ಸಲೀಂ ಹಾಜಿ ಆರೆಕ್ಕಾಡು ನೇಮಕಗೊಂಡರು. ಸಮಿತಿ ಸದಸ್ಯರಾಗಿ ಜುನೈದ್ ಬಜೆಗುಂಡಿ, ಬಶೀರ್ ಚೇರಂಬಾಣೆ, ಸಫ್ವಾನ್ ಚಾಮಿಯಾಲ, ನಿಜಾಮ್ ಎಡಪಾಲ, ನಿಶಾಬ್ ನೆಲ್ಲಿಹುದಿಕೇರಿ, ಉಸ್ಮಾನ್ ಕುಶಾಲನಗರ ಆಯ್ಕೆಯಾದರು.
ಮಡಿಕೇರಿ ನ.28 NEWS DESK : ಅಯ್ಯಂಗೇರಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಮತ್ತು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು, ಗ್ರಾಮ ಪಂಚಾಯತ್ ಜವಾಬ್ದಾರಿ ಸಂವಿಧಾನದ ಅಡಿಯಲ್ಲಿ ಅತ್ಯಂತ ಪ್ರಮುಖವಾಗಿದ್ದು. ಗ್ರಾಮದ ಜನರಿಗೆ ನೇರವಾಗಿ ಸಂಪರ್ಕಕ್ಕೆ ಸಿಗುವ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳು ಸರ್ಕಾರದ ಪ್ರತಿನಿಧಿಗಳಂತೆ ಜನರ ಕಷ್ಟಗಳಿಗೆ ಸ್ಪಂದಿಸಲು ತುಂಬಾ ಅನುಕೂಲಕರವಾಗಿದೆ ಎಂದರು. ಗ್ರಾಮ ಪಂಚಾಯತ್ ಪ್ರತಿನಿಧಿಗಳು ಜನರ ಸಮಸ್ಯೆಗೆ ಸ್ಪಂದಿಸಬೇಕು ಮತ್ತು ಜನಸೇವೆಯ ಉದ್ದೇಶದಿಂದ ಚುನಾವಣೆಗೆ ನಿಲ್ಲಬೇಕೆ ಹೊರತು ಪ್ರತಿಷ್ಠೆಗೆ ಅಲ್ಲ ಎಂದು ಸಲಹೆ ನೀಡಿದರು. ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಗ್ರಾಮ ಪಂಚಾಯತ್ ಮೂಲಕ ಗ್ರಾಮೀಣ ಜನರಿಗೆ ಹೆಚ್ಚು ಕೆಲಸಗಳು ಆಗಲಿ, ಆ ನಿಟ್ಟಿನಲ್ಲಿ ಗ್ರಾಮದ ಮೂಲ ಸೌಲಭ್ಯಕ್ಕೆ ಒತ್ತು ನೀಡಬೇಕು ಎಂದು ತಿಳಿಸಿದರು. ಪಂಚಾಯಿತಿ ಅಧ್ಯಕ್ಷರಾದ ಪುಷ್ಪ ಮತ್ತು ಉಪಾಧ್ಯಕ್ಷರಾದ ಮಿಶ್ರಿಯ, ಪಂಚಾಯಿತಿ ಸದಸ್ಯರು…
ಮಡಿಕೇರಿ ನ.28 NEWS DESK : ನಗರಸಭೆ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಪೌರಕಾರ್ಮಿಕರ ದಿನಾಚರಣೆ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿ, ಪೌರ ಕಾರ್ಮಿಕರ ಕಾರ್ಯವೈಖರಿಯನ್ನು ಶ್ಲಾಘೀಸಿದರು. ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ನಾಮನಿರ್ದೇಶಿತ ಸದಸ್ಯರಾದ ಮುದ್ದುರಾಜ್, ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ, ನಗರಸಭಾ ಸದಸ್ಯರುಗಳು ಹಾಜರಿದ್ದರು.






