ಮಡಿಕೇರಿ ಅ.27 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಹುತಾತ್ಮ ದಿನಾಚರಣೆಯ ಪ್ರಯುಕ್ತ ಅ.31 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಮೈಸೂರು ವಿಭಾಗದ ಕರ್ನಾಟಕ ಅರೆಭಾಷೆ ಸಂಸ್ಕೃತಿ…
ಲೇಖಕ: admin
ಮೂರ್ನಾಡು ಅ.27 : ಮೂರ್ನಾಡುವಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯುಧ ಪೂಜಾ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಪಾಂಡಾಣೆ ಶಾಲಾ ಮೈದಾನದಲ್ಲಿ ನಿರ್ಮಿಸಲಾದ ಭವ್ಯ ಬಯಲು ಅಲಂಕೃತ ವೇದಿಕೆಯಲ್ಲಿ 30ನೇ ವರ್ಷದ ಆಯುಧ ಪೂಜೆ ನೆರವೇರಿತು. ಅಲಂಕೃತ ವಾಹನಗಳಿಗೆ ಸಾಮೂಹಿಕ ಪೂಜೆಯನ್ನು ನೆರವೇರಿಸಿ, ನಂತರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಪಟ್ಟಣದ ಮುಖ್ಯ ಬೀದಿಗಳಲ್ಲಿ ತೆರಳಲಾಯಿತು. ಈ ಸಂದರ್ಭ ವಿಶೇಷವಾಗಿ ಅಲಂಕೃತಗೊಂಡ ವಾಹನಗಳಲ್ಲಿ ಚಂದ್ರಯಾನ-3, ಮದ್ಯಪಾನದಿಂದ ಆಗುವ ಅಪಘಾತಗಳ ಸ್ತಬ್ದ ಚಿತ್ರಣ, ಐತಿಹಾಸಿಕ ಹಿನ್ನಲೆಯುಳ್ಳ ಶ್ರೀರಾಮನಿಂದ ರಾವಣದ ಸಂಹಾರ, ದುರ್ಗೆಯಿಂದ ದುರ್ಗಾಸುರನ ವಧೆ, ಶುಂಭನ ವಧೆ, ಶಿವಾಂಶನಿಂದ ಕಾಲಾಂಶನ ವಧೆಯ ಚಿತ್ರಣಗಳು, ಭಾರತದ ಚಂದ್ರಯಾನ-3 ಯಶಸ್ವಿ ಉಡಾವಣೆ ಹಾಗೂ ಸುರಕ್ಷಿತ ಲ್ಯಾಂಡಿಂಗ್, ರೈತ ದೇಶದ ಬೆನ್ನುಲೆಬು, ಸರ್ಕಾರಿ ಶಾಲೆಗಳನ್ನು ಉಳಿಸಿ ಹೀಗೆ ಇನ್ನು ಹಲವಾರು ಸ್ತಬ್ದ ಚಿತ್ರಗಳು ಮತ್ತು ವಿಟ್ಲದ ಕಲಾ ರಸಿಕ ಆಟ್ರ್ಸ್ ಬೊಂಬೆ ಬಳಗದ ಗೊಂಬೆ ಕುಣಿತ ಮತ್ತು ವಾದ್ಯಗೋಷ್ಠಿಗಳು ವೀಕ್ಷಕರ ಗಮನ ಸೆಳೆದವು.…
ಸುಂಟಿಕೊಪ್ಪ ಅ.26 : ಸುಂಟಿಕೊಪ್ಪ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕುಂಜಿಲನ ಎಸ್.ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಕೆ.ವಿ.ರಮ್ಯಾ ಮೋಹನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೆ.ಎಸ್.ಮಂಜುನಾಥ್ ಅವರು ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕೆ.ವಿ.ರಮ್ಯಾ ಮೋಹನ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಈ 2 ಸ್ಥಾನಗಳಿಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ, ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಬಿ.ಕೆ.ವಿಜೆಯೇಂದ್ರ ಅವರು ಕೆ.ಎಸ್.ಮಂಜುನಾಥ್ ಹಾಗೂ ಕೆ.ವಿ.ರಮ್ಯಾ ಮೋಹನ್ ಅವರುಗಳನ್ನು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಿಸಿದರು. ಸಭೆಯಲ್ಲಿ ನಿರ್ದೇಶಕರುಗಳಾದ ಎಂ.ಎನ್.ಕೊಮಾರಪ್ಪ, ದಾಸಂಡ ರಮೇಶ್ ಚಂಗಪ್ಪ, ಕೆ.ಪಿ.ಜಗನ್ನಾಥ್, ಡಿ.ಕೆ.ಗಂಗಾಧರ, ಪಟ್ಟೆಮನೆ ಪಿ.ಉದಯಕುಮಾರ್, ಎನ್.ಸಿ.ಪೊನ್ನಪ್ಪ, ಜರ್ಮಿಡಿಸೋಜ, ಕೆ.ಆರ್.ಮಂಜುನಾಥ್, ಕೆ.ಆರ್.ದಯಾನಂದ, ಪಿ.ಪಿ.ಲೀಲಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಮಿತ್ರ, ಸಿಬ್ಬಂದಿ ವರ್ಗ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಕೆ.ಎಸ್. ಮುಂಜುನಾಥ್ ಅವರು ತಾವು 4ನೇ ಅವಧಿಗೆ ನಿರ್ದೇಶಕನಾಗಿ ಆಯ್ಕೆಯಾಗಿದ್ದು, ಈ ಬಾರಿ ಸರ್ವರ…
ಮಡಿಕೇರಿ ಅ.26 : ಕರ್ನಾಟಕ ಬೆಳೆಗಾರರ ಒಕ್ಕೂಟದ ವತಿಯಿಂದ ಕಾಫಿ ಬೆಳೆಗಾರರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಪೊನ್ನಣ್ಣ ಅವರಿಗೆ ವಿಧಾನಸೌಧದಲ್ಲಿ ಇಂದು ಮನವಿ ಸಲ್ಲಿಸಿದರು. ಕಾಫಿ ಬೆಳೆಗಾರರಿಗೆ ಒತ್ತುವರಿ ಕಂದಾಯ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಲು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಬೇಕು ಮತ್ತು ಕಾಫಿ ಬೆಳೆಯನ್ನು ಬರಗಾಲ ವ್ಯಾಪ್ತಿಗೆ ಸೇರಿಸಲು ಕ್ರಮ ಕೈಗೊಳ್ಳಬೇಕು ಸೇರಿದಂತೆ ಅನೇಕ ಬೇಡಿಕೆಗಳ ಬಗ್ಗೆ ಪ್ರಮುಖರು ವಿವರಿಸಿದರು. ಈ ಕುರಿತು ಪೊನ್ನಣ್ಣ ಅವರು ಮಾತನಾಡಿ ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ. ನ್ಯಾಯಾಲಯಗಳಲ್ಲಿ ಈ ಬಗ್ಗೆ ಅನೇಕ ತೀರ್ಪುಗಳಾಗಿದ್ದು, ಕಾನೂನಾತ್ಮಕ ಅಂಶಗಳನ್ನು ಒಳಗೊಂಡಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕಾನೂನಿನಡಿಯಲ್ಲಿ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಲು ಶ್ರಮಿಸುವುದಾಗಿ ತಿಳಿಸಿದರು. ಸಂಘದ ಅಧ್ಯಕ್ಷರಾದ ಡಾ.ಹೆಚ್.ಟಿ. ಮೋಹನ್ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಬಿ.ಕೃಷ್ಣಪ್ಪ, ಕೊಡಗು – ಚಿಕ್ಕಮಂಗಳೂರು ಹಾಸನ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಅ.26 : ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ನನ್ನ ಮಣ್ಣು, ನನ್ನ ದೇಶ’ (ಮೇರಿ ಮಾಟಿ, ಮೇರಾ ದೇಶ್) ಅಭಿಯಾನದ ಪ್ರಯುಕ್ತ ಕೊಡಗು ಜಿಲ್ಲೆಯ 5 ತಾಲ್ಲೂಕುಗಳಿಂದ ಸಂಗ್ರಹಿಸಲಾದ ಮಾದರಿ ಮಣ್ಣಿನ ಬಿಂದಿಗೆಗಳನ್ನು ನವದೆಹಲಿಗೆ ತಲುಪಿಸುವ ಸಂಬಂಧ ಗುರುವಾರ ಜಿಲ್ಲಾಧಿಕಾರಿ ವೆಂಕಟ ರಾಜಾ ಅವರ ಸಮ್ಮುಖದಲ್ಲಿ ರಾಯಭಾರಿಗಳಿಗೆ ಹಸ್ತಾಂತರಿಸಲಾಯಿತು. ಜಿಲ್ಲಾಡಳಿತ, ನೆಹರು ಯುವ ಕೇಂದ್ರ,ಜಿಲ್ಲಾ ಪಂಚಾಯತ್, ಜಿಲ್ಲಾ ಅಂಚೆ ಕಚೇರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ತಾಲ್ಲೂಕು ಪಂಚಾಯಿತಿ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ, ತಾಲ್ಲೂಕು ಯುವ ಒಕ್ಕೂಟ ಇವರ ವತಿಯಿಂದ ಆಯೋಜಿಸಲಾಗಿದ್ದ ಮೇರ ದೇಶ್ ಮೇರ ಮಾಟಿ ಅಮೃತ್ ಕಳಸ ಯಾತ್ರೆಗೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜ ಅವರು ಚಾಲನೆ ನೀಡಿದರು. ಜಿಲ್ಲಾಧಿಕಾರಿ ವೆಂಕಟರಾಜ ಅವರು ಮಾತನಾಡಿ ಅಮೃತ ಕಳಸ ಯಾತ್ರೆಗೆ ಅಭಿನಂದನೆ ತಿಳಿಸಿದರು. ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿರುವ ಪ್ರತಿಯೊಬ್ಬರಿಗೂ ಭದ್ರತೆ ನೀಡಬೇಕು. ಹಾಗೆಯೇ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು ಎಂದು…
ಮಡಿಕೇರಿ ಅ.26 : ಕುಶಾಲನಗರ ಸಮೀಪದ ಹಾರಂಗಿ ಮೀನುಗಾರಿಕಾ ಕ್ಷೇತ್ರದಲ್ಲಿ ಬೃಹತ್ ಮತ್ಸ್ಯಾಲಯ ಕೇಂದ್ರ ಪ್ರಾರಂಭಿಸುವ ಚಿಂತನೆ ಹೊಂದಲಾಗಿದೆ ಎಂದು ಮೀನುಗಾರಿಕೆ ಮತ್ತು ಬಂದರು ಹಾಗೂ ಒಳನಾಡು ಸಾರಿಗೆ ಇಲಾಖೆಯ ಸಚಿವ ಮಂಕಾಳ ಎಸ್.ವೈದ್ಯ ತಿಳಿಸಿದ್ದಾರೆ. ಅವರು ಹಾರಂಗಿಯಲ್ಲಿ ಮೀನುಗಾರಿಕಾ ಇಲಾಖೆಯ ಅಪರೂಪದ ತಳಿಯಾದ ಮಹಾಶಿರ್ ಮೀನು ಮರಿಗಳ ಉತ್ಪಾದನಾ ಮತ್ತು ಪಾಲನಾ ಕೇಂದ್ರಕ್ಕೆ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ದೇಶ ವಿದೇಶಗಳಲ್ಲಿ ಮೀನಿಗೆ ಬೇಡಿಕೆ ಇದ್ದು ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ನದಿ ಕೆರೆಗಳಲ್ಲಿ ಮೀನು ಮರಿ ತಳಿಗಳನ್ನು ಬೆಳೆಸಲು ಸರ್ಕಾರದಿಂದ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಾಗುತ್ತಿದೆ. ಆಸಕ್ತರಿಗೆ ಉಚಿತವಾಗಿ ನೀಡಲಾಗುತ್ತಿದೆ. ಸರ್ಕಾರದ ಮೂಲಕ ಪ್ರೋತ್ಸಾಹ ಧನ ಕೂಡ ಕಲ್ಪಿಸಲಾಗುತ್ತಿದೆ. ರಾಜ್ಯ, ನೆರೆ ರಾಜ್ಯಗಳು ಹಾಗೂ ವಿದೇಶಗಳಿಗೆ ಕೂಡ ಮೀನು ಸರಬರಾಜು ಮಾಡುವ ವ್ಯವಸ್ಥೆಗೆ ಸಹಾಯಹಸ್ತ ಕಲ್ಪಿಸಲಾಗುತ್ತಿದೆ ಎಂದರು. ನಾಡಿನಲ್ಲಿ ಸಿಹಿ ನೀರಿನ ಮೀನು ಉತ್ಪಾದನೆಗೆ ಹೆಚ್ಚು ಒತ್ತು…
ಮಡಿಕೇರಿ ಅ.26 : ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಕಾರೊಂದು ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಘಟನೆ ನಾಪೋಕ್ಲು -ಮಡಿಕೇರಿ ಮುಖ್ಯರಸ್ತೆಯ ಪಾಲೂರು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಮಡಿಕೇರಿ ಕಡೆಯಿಂದ ನಾಪೋಕ್ಲು ಮಾರ್ಗವಾಗಿ ಎಮ್ಮೆಮಾಡುವಿಗೆ ತೆರಳುತ್ತಿದ್ದ ಮೈಸೂರು ಮೂಲದ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದ ಮಾರುತಿ ಆಲ್ಟೊ ಕಾರು ಪಾಲೂರು ಗ್ರಾಮದ ವಿಷ್ಣುಮೂರ್ತಿ ದೇವಾಲಯದ ಮುಂಭಾಗದ ರಸ್ತೆಯ ಇಳಿಜಾರಿನಲ್ಲಿ ಗುರುವಾರ ನಸುಕು 3 ಗಂಟೆ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಸುಮಾರು 20 ಅಡಿ ಆಳದ ತೋಡಿಗೆ ಉರುಳಿ ಬಿದ್ದಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಅಪಘಾತವಾದ ಕಾರನ್ನು ಕೊಟ್ಟಮುಡಿ ಗ್ರಾಮದ ಯುವಕರು ಟ್ರ್ಯಾಕ್ಟರ್ ಬಳಸಿ ಮೇಲೆತ್ತಲು ಸಹಕರಿಸಿದರು.
ಮೂರ್ನಾಡು ಅ.26 : ಮೂರ್ನಾಡುವಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯುಧ ಪೂಜಾ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಪಾಂಡಾಣೆ ಶಾಲಾ ಮೈದಾನದಲ್ಲಿ ನಿರ್ಮಿಸಲಾದ ಭವ್ಯ ಬಯಲು ಅಲಂಕೃತ ವೇದಿಕೆಯಲ್ಲಿ 30ನೇ ವರ್ಷದ ಆಯುಧ ಪೂಜೆ ನೆರವೇರಿತು. ಅಲಂಕೃತ ವಾಹನಗಳಿಗೆ ಸಾಮೂಹಿಕ ಪೂಜೆಯನ್ನು ನೆರವೇರಿಸಿ, ನಂತರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಪಟ್ಟಣದ ಮುಖ್ಯ ಬೀದಿಗಳಲ್ಲಿ ತೆರಳಲಾಯಿತು. ಈ ಸಂದರ್ಭ ವಿಶೇಷವಾಗಿ ಅಲಂಕೃತಗೊಂಡ ವಾಹನಗಳಲ್ಲಿ ಚಂದ್ರಯಾನ-3, ಮದ್ಯಪಾನದಿಂದ ಆಗುವ ಅಪಘಾತಗಳ ಸ್ತಬ್ದ ಚಿತ್ರಣ, ಐತಿಹಾಸಿಕ ಹಿನ್ನಲೆಯುಳ್ಳ ಶ್ರೀರಾಮನಿಂದ ರಾವಣದ ಸಂಹಾರ, ದುರ್ಗೆಯಿಂದ ದುರ್ಗಾಸುರನ ವಧೆ, ಶುಂಭನ ವಧೆ, ಶಿವಾಂಶನಿಂದ ಕಾಲಾಂಶನ ವಧೆಯ ಚಿತ್ರಣಗಳು, ಭಾರತದ ಚಂದ್ರಯಾನ-3 ಯಶಸ್ವಿ ಉಡಾವಣೆ ಹಾಗೂ ಸುರಕ್ಷಿತ ಲ್ಯಾಂಡಿಂಗ್, ರೈತ ದೇಶದ ಬೆನ್ನುಲೆಬು, ಸರ್ಕಾರಿ ಶಾಲೆಗಳನ್ನು ಉಳಿಸಿ ಹೀಗೆ ಇನ್ನು ಹಲವಾರು ಸ್ತಬ್ದ ಚಿತ್ರಗಳು ಮತ್ತು ವಿಟ್ಲದ ಕಲಾ ರಸಿಕ ಆಟ್ರ್ಸ್ ಬೊಂಬೆ ಬಳಗದ ಗೊಂಬೆ ಕುಣಿತ ಮತ್ತು ವಾದ್ಯಗೋಷ್ಠಿಗಳು ವೀಕ್ಷಕರ ಗಮನ ಸೆಳೆದವು.…
ಮಡಿಕೇರಿ ಅ.26 : ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಿರುನಾಣಿ ಗ್ರಾಮದಲ್ಲಿ ನಡೆದಿದೆ. ಬಿರುನಾಣಿ ಗ್ರಾಮದ ಕಳಕೂರ್ ನಿವಾಸಿ ಕಳಕಂಡ ಬೋಪಯ್ಯ (ಶಶಿ-52 ವರ್ಷ) ಅವರು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಬೋಪಯ್ಯ ಅವರು ಇದೇ ಅ.24 ರಂದು ಮನೆ ಬಿಟ್ಟು ತೆರಳಿದ್ದು, ಇವರಿಗಾಗಿ ಕುಟುಬಸ್ಥರು ಹುಡುಕಾಟ ನಡೆಸಿದರು. ಈ ಸಂದರ್ಭ ಬೋಪಯ್ಯ ಅವರಿಗೆ ಸೇರಿದ ಹಳೇ ಮನೆಯಲ್ಲಿ ಗುಂಡು ಹೊಡೆದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಅ.26 : ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಈ ಸಂದರ್ಭ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಪಕ್ಷದ ಕಾರ್ಯಕರ್ತರುಗಳೊಂದಿಗೆ ಶ್ರಮದಾನ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ದಸರಾ ಉತ್ಸವದ ಹಿನ್ನೆಲೆಯಲ್ಲಿ ಮಡಿಕೇರಿಯ ಗಾಂಧಿ ಮೈದಾನ ಹಲವಾರು ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿತ್ತು.






