ಲೇಖಕ: admin

ಕಕ್ಕಬ್ಬೆ ಅ.26 :  ಕುಂಜಿಲ  ಸಮೀಪದ  ಇತಿಹಾಸ ಪ್ರಸಿದ್ಧ ಪಯ್-ನರಿ ದರ್ಗಾ ವಠಾರದಲ್ಲಿ ಬೃಹತ್ ಮೀಲಾದ್ ಸಮ್ಮೇಳನ ಹಾಗೂ ಶಅರೇ ಮುಬಾರಕ್ ಪ್ರದರ್ಶನ ನಡೆಯಿತು. ಅಲ್ ಅಮೀನ್ ಹಾಗೂ ಅಲ್ ಹಬೀಬ್ ಎಂಬ ಎರಡು ತಂಡಗಳಾಗಿ ಸುಮಾರು ನಲವತ್ತಕ್ಕಿಂತಲು ಹೆಚ್ಚಿನ ಸ್ಪರ್ಧೆ ನಡೆಯಿತು. ಖ್ಯಾತ ಸೂಫಿ ವರ್ಯರು ಸಾತ್ವಿಕ ಪಂಡಿತರಾದ ಶೃಖ್ ಶಂಸುದ್ದೀನ್ ಅಲ್ ಖಾದಿರಿ  ಮೌಲೂದ್ ಪಾರಾಯಣ ನಡೆಸಿದರು. ಅಬೂ ಸಈದ್ ಹುಸೈನ್ ಉಸ್ತಾದ್, ಹುಸೈನ್ ಸಖಾಫಿ ಎಮ್ಮೆಮಾಡು, ಅಶ್ರಫ್ ಅಹ್ಸನಿ ಅನ್ವಾರುಲ್ ಹುದಾ, ಮುಹಮ್ಮದ್ ಸಖಾಫಿ ಆಝಾದ್ ನಗರ, ನಾಪೋಕ್ಲು ಖತೀಬ್ ಅಹ್ಸನಿ,ಕೊಳಕೇರಿ ಖತ್ವೀಬ್,ಹಫೀಳ್ ಸಅದಿ ಮುಂತಾದ ಉಲಮಾಗಳ ಸಾನ್ನಿಧ್ಯ  ವಹಿಸಿದರು. ಅಬ್ದುಲ್ ಅಜೀಜ್ ಅಲ್ ಐದರೂಸಿ ಪ್ರೌಢ ಗಾಂಭೀರ್ಯದ ದುಆ ನೆರವೇರಿಸಿದರು. ಮುಸ್ಥಫಾ ಸಖಾಫಿ ತೆನ್ನಲ ನಫೀಸತ್ ಮಾಲೆ ಹಾಡಿದರು.  ಶಿವಮೊಗ್ಗ ತಂಗಳ್  ಪ್ರಾರ್ಥನೆ ನೆರವೇರಿಸಿದರು. ನಿಝಾರ್ ಅಹ್ಸನಿ ಉಸ್ತಾದ್ ನಿರೂಪಿಸಿದರು. ವರದಿ : ಸಜಿದ್ ಪಯ್ಯಡಿ 

Read More

ಮಡಿಕೇರಿ ಅ.26 : ಹಾರಂಗಿ ಮೀನುಮರಿ ಉತ್ಪಾದನಾ ಕೇಂದ್ರದಲ್ಲಿ ಸರ್ಕಾರಿ ಮತ್ಸ್ಯಾಲಯ ಸ್ಥಾಪಿಸುವಂತೆ  ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ  ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಹಾಗೂ ಒಳನಾಡುಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಮನವಿ ಮಾಡಿದರು. ಹಾರಂಗಿಯ ಮಹಶೀರ್ ಮೀನುಮರಿಗಳ ಉತ್ಪಾದನಾ ಹಾಗೂ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭ ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು,  ಹಾರಂಗಿ ಮೀನುಮರಿ ಉತ್ಪಾದನಾ ಕೇಂದ್ರದಲ್ಲಿರುವ ಖಾಲಿ ಜಾಗದಲ್ಲಿ ಸರ್ಕಾರಿ ಮತ್ಸ್ಯಾಲಯ ಸ್ಥಾಪಿಸಲು ಕ್ರಮ ಕೈಗೊಂಡು ಕೊಡಗು ಜಿಲ್ಲೆಯ ಪ್ರವಾಸೋದ್ಯಮವನ್ನು ಬಲಪಡಿಸಲು ಕ್ರಮ ಕೈಗೊಳ್ಳುವಂತೆ  ಮನವಿ ಮಾಡಿದರು. ಹಾರಂಗಿ ಮೀನು ಮರಿ ಉತ್ಪಾದನಾ ಕೇಂದ್ರವು ಪಶ್ಚಿಮ ಘಟ್ಟ ಅಭಿವೃದ್ಧಿ ಯೋಜನೆ ಅಡಿ 1986-87 ರಲ್ಲಿ ಸ್ಥಾಪನೆಯಾಗಿದ್ದು, ಅಳಿವಿನಂಚಿನಲ್ಲಿರುವ ಮಹಶೀರ್ ಮೀನು ಮರಿ ಉತ್ಪಾದನೆ, ಪಾಲನೆ ಹಾಗೂ ನದಿ ಬಿತ್ತನೆ ಮಾಡುವ ಮೂಲಕ ವಿಶಿಷ್ಟ ಪ್ರಭೇದದ ಬಿಳಿಮೀನನ್ನು ಸಂರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು. ಕೇಂದ್ರದಲ್ಲಿ ಒಟ್ಟು 80 ಸಂಖ್ಯೆ ಮೀನು ಕೊಳಗಳಿದ್ದು,…

Read More

ಮಡಿಕೇರಿ, ಅ.26 :  ಹಾಕಿ ಇಂಡಿಯಾ ವತಿಯಿಂದ ಏರ್ಪಡಿಸಲಾಗಿದ್ದ ಪ್ರಥಮ ದಕ್ಷಿಣ ವಲಯ ಸಬ್ ಜೂನಿಯರ್-2023 ಬಾಲಕ ಹಾಗೂ ಬಾಲಕಿಯರ ಹಾಕಿ ಪಂದ್ಯಾವಳಿಯಲ್ಲಿ ಬಹುತೇಕ ಕೊಡಗು ಜಿಲ್ಲೆಯ ಆಟಗಾರರನ್ನೊಳಗೊಂಡ ಹಾಕಿ ಕರ್ನಾಟಕ ಬಾಲಕರ ತಂಡ ಚಾಂಪಿಯನ್ ಪಟ್ಟ ಗಳಿಸುವದರೊಂದಿಗೆ ಚಿನ್ನದ ಬಹುಮಾನಕ್ಕೆ ಮುತ್ತಿಕ್ಕಿದೆ. ತಮಿಳುನಾಡಿನ ಚೆನ್ನೈನ ಎಗ್ಮೋರ್‌ ನ ರಾಧಾಕೃಷ್ಣ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯಾವಳಿಯಲ್ಲಿ ತಮಿಳುನಾಡು ಹಾಕಿ ತಂಡವನ್ನು 3-2 ಗೋಲುಗಳ ಅಂತರದಿಂದ ಸೋಲಿಸಿ ಚಾಂಪಿಯನ್ ಪಟ್ಟ ಗಳಿಸಿತು. ತಂಡದ ಪರವಾಗಿ ನಿಶಾಂತ್ ಎಂ., ಜಶನ್ ದೇವಯ್ಯ ಹಾಗೂ ರೋಹಿತ್ ಗೋಲು ದಾಖಲಿಸಿ ತಂಡಕ್ಕೆ ಜಯ ತಂದು ಕೊಟ್ಟರು. ಸುಪ್ರಿತ್ ಜೆ. ಪಂದ್ಯ ಪುರುಷ ಪ್ರಶಸ್ತಿಗೆ ಭಾಜನರಾದರು. ಇದಕ್ಕೂ ಮುನ್ನ ನಡೆದ ಸೆಮಿಫೈನಲ್ ಪಂದ್ಯಾವಳಿಯಲ್ಲಿ ತೆಲಂಗಾಣ ಹಾಕಿ ವಿರುದ್ಧ 9-0 ಗೋಲುಗಳ ಅಂತರದಿಂದ ಜಯಗಳಿಸಿ ಫೈನಲ್ ಪ್ರವೇಶಿಸಿತ್ತು. ಕರ್ನಾಟಕ ತಂಡದ ಪರ ಮೇವಡ ಜಶನ್ ತಮ್ಮಯ್ಯ ಹಾಗೂ ಸುಪ್ರಿತ್ ಜೆ. ತಲಾ ಮೂರು ಗೋಲು ಬಾರಿಸಿದರೆ, ಹೆಚ್.ಹೆಚ್.ದೀಕ್ಷಿತ್ -2, ನಮನ್…

Read More

ಕಡಂಗ  ಅ.26 :  ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್‌ವೈ‌ಎಸ್) 30ನೇ ವರ್ಷಾಚರಣೆಯ ಪ್ರಯುಕ್ತ ‘ಪರಂಪರೆಯ ಪ್ರತಿನಿಧಿಗಳಾಗೋಣ’ ಎಂಬ ಧ್ಯೇಯ ವಾಕ್ಯದಡಿಯಲ್ಲಿ 2024 ರ ಜ. 24ರಂದು ಮಂಗಳೂರಿನಲ್ಲಿ ನಡೆಯುವ ಮಹಾ ಸಮ್ಮೇಳನದ ಪ್ರಚಾರಾರ್ಥ ಕೊಡಗು ಜಿಲ್ಲಾ ಸಮಿತಿ ಆಯೋಜಿಸಿದ ರಾಜ್ಯ ಸಮಿತಿ ನಾಯಕರ ಜ್ಯೂಬಿಲಿ ಜರ್ನಿ ಕಾರ್ಯಕ್ರಮವು  ಕಡಂಗದ ಬದ್ರಿಯ ಮದ್ರಸದಲ್ಲಿ ನಡೆಯಿತು. 30ನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಯುಕ್ತ ಸಮಾಜ ಸೇವೆ ಸಹಿತ ಹಲವಾರು ಕಾರ್ಯಕ್ರಮಗಳನ್ನು ವಿವಿಧ ಘಟಕಗಳಲ್ಲಿ ಹಮ್ಮಿಕೊಂಡಿದ್ದು, ಅವುಗಳೆಲ್ಲವನ್ನೂ ಕಾರ್ಯರೂಪಕ್ಕೆ ತಂದು ಯಶಸ್ವಿಗೊಳಿಸಿ ಸೇವಾ ಮನೋಭಾವವಿರುವ ಉತ್ತಮ ಕಾರ್ಯಕರ್ತರನ್ನು ಸೃಷ್ಟಿಸುವಂತೆಯೂ ಮಂಗಳೂರಿನಲ್ಲಿ ನಡೆಯುವ ಮಹಾ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆಯೂ ಎಸ್‌ವೈಎಸ್ ರಾಜ್ಯಾಧ್ಯಕ್ಷರಾದ ಹಫೀಳ್ ಸ‌ಅದಿ ಕರೆ ನೀಡಿದರು. ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್‌  ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಸ್ವಾದಿಖ್ ಮಾಸ್ಟರ್ ಮಾತನಾಡಿ ಕಾರ್ಯಚಟುವಟಿಕೆಗಳ ರೂಪುರೇಷೆಗಳನ್ನು ವಿವರಿಸಿದರು. ಕೋಶಾಧಿಕಾರಿ ಅಡ್ವಕೇಟ್ ಹಂಝತ್ ಉಡುಪಿ, ದ‌ಅವಾ ವಿಭಾಗ ಕಾರ್ಯದರ್ಶಿ ಸಯ್ಯಿದ್ ಶಾಫಿ ನ‌ಈಮಿ ತಂಙ್ಙಳ್, ಸಾಂತ್ವನ…

Read More

ನಾಪೋಕ್ಲು ಅ.26 : ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಗ್ರಾಮದಲ್ಲಿ ಪ್ರೀತಿ ವಿಶ್ವಾಸ ಸಹೋದರತೆ ಬೆಳೆಯಲು ಸಹಕಾರಿಯಾಗಬಲ್ಲದು ಎಂದು ಮಾಜಿ ಸೈನಿಕ ಸಂಘದ ಅಧ್ಯಕ್ಷ ಚಂಡಿರ ಕೆ .ಬಸಪ್ಪ ಹೇಳಿದರು. ಮರಂದೋಡ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಮರಂದೋಡ ಗ್ರಾಮಸ್ಥರ 40ನೇ ವರ್ಷದ ವಾರ್ಷಿಕ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮರಂದೋಡ ಗ್ರಾಮದಲ್ಲಿ 40 ವರ್ಷಗಳಿಂದ ಕ್ರೀಡಾಕೂಟಗಳನ್ನು ನಡೆದುಕೊಂಡು ಬರುತ್ತಿರುವುದು ಹೆಮ್ಮೆಯ ವಿಷಯ ಎಂದ ಅವರು, ಇನ್ನು ಮುಂದೆಯೂ ಇದು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಮಾಜಿ ಸೈನಿಕರು ಹಾಗೂ ಎಸ್ ಬಿ ಐ ಉದ್ಯೋಗಿ ಮುಕ್ಕಾಟಿ ದೇವಯ್ಯ ಗಿರೀಶ್ ಮಾತನಾಡಿ, ಇಂತಹ ಗ್ರಾಮೀಣ ಮಟ್ಟದ ಕ್ರೀಡಾಕೂಟದಿಂದ ಉತ್ತಮ ಕ್ರೀಡಾಪಟುಗಳನ್ನು ಹೊರ ತರಲು ಸಾಧ್ಯ. ಈ ನಿಟ್ಟಿನಲ್ಲಿ ಗ್ರಾಮಸ್ಥರ ಸಹಕಾರ ಮತ್ತು ಪ್ರೋತ್ಸಾಹ ಮುಖ್ಯವಾಗಿದೆ ಎಂದರು. ನಿವೃತ್ತ ಸಿ.ಆರ್.ಪಿ.ಎಫ್ ಪುಷ್ಪಾವತಿ ಮಾತನಾಡಿ, ಹಿಂದೆ ಇಂತಹ ಕ್ರೀಡಾಕೂಟಗಳು ನಡೆಯುತ್ತಿರಲಿಲ್ಲ. ಈಗ ಗ್ರಾಮೀಣ ಜನರನ್ನು ಒಗ್ಗೂಡಿಸುವ ಕೆಲಸವನ್ನು ಸಂಘ…

Read More

ನಾಪೋಕ್ಲು ಅ.26 : ಕೊಡವ ಟಗ್ ಆಫ್ ವಾರ್ ಅಕಾಡೆಮಿಯ ಮಾನ್ಯತೆ ಪಡೆದ ಕೊಡವ ಕುಟುಂಬಗಳ ನಡುವೆ 2024ರ ಏ.15 ರಂದು ನಡೆಯಲಿರುವ ಹಗ್ಗ ಜಗ್ಗಾಟ ಸ್ಪರ್ಧೆ ಬೊಟ್ಟೋಳಂಡ ಕಪ್ ಪಂದ್ಯಾವಳಿಯ ಲೋಗೋ ಬಿಡುಗಡೆ ಕಾರ್ಯಕ್ರಮ ಅ.29 ರಂದು ಕಡಗದಾಳುವಿನಲ್ಲಿ ನಡೆಯಲಿದೆ ಎಂದು ಬೊಟ್ಟೋಳಂಡ ಕಪ್ ಸಂಚಾಲಕ ಬೊಟ್ಟೋಳಂಡ ಮಿಟ್ಟು ಪೂಣಚ್ಚ ಹೇಳಿದರು. ನಾಪೋಕ್ಲುವಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಡಗದಾಳುವಿನ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೊಟ್ಟೋಳಂಡ ಪೂಣಚ್ಚ (ಅಚ್ಚಿ) ವಹಿಸಲಿದ್ದು, ವೇದಿಕೆಯಲ್ಲಿ ಕಾಫಿ ಬೆಳೆಗಾರ ವಾಸು ಮುತ್ತಪ್ಪ, ನಿವೃತ್ತ ಸರ್ಕಲ್ ಇನ್ಸ್ ಪೆಕ್ಟರ್ ಬೊಟ್ಟೋಳಂಡ ಲಿಂಗಪ್ಪ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ, ಕರ್ನಾಟಕ ಸರ್ಕಾರದ ಚೀಫ್ ಎಲೆಕ್ಟ್ರಿಕ್ ಇನ್ಸ್ ಪೆಕ್ಟರ್ ತೀತೀರ ಅಪ್ಪಚ್ಚು, ಕೊಡವ ಟಗ್ ಆಫ್ ವಾರ್ ಅಕಾಡೆಮಿಯ ಅಧ್ಯಕ್ಷ ಪೊನ್ನೊಲತಂಡ ಕಿರಣ್ ಪೊನ್ನಪ್ಪ ಪಾಲ್ಗೊಳ್ಳಲಿರುವರು. ಕೊಡವ ಕುಟುಂಬಗಳ ನಡುವಿನ ಹಗ್ಗ ಜಗ್ಗಟ್ಟ ಸ್ಪರ್ಧೆಯನ್ನು ಪ್ರಥಮವಾಗಿ 2022 ರಲ್ಲಿ ಪೊನ್ನೊಲತಂಡ…

Read More

ನಾಪೋಕ್ಲು ಅ.26 : ಪಾಲೆಮಾಡು ಅಂಬೇಡ್ಕರ್ ಯುವಕ ಸಂಘ ಹಾಗೂ ಕಿಂಗ್ಸ್ ಇಲೆವೆನ್ ವತಿಯಿಂದ ಆಯೋಜಿಸಲಾಗಿದ್ದ ಮೂರನೇ ವರ್ಷದ ಹೊದ್ದೂರು ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ರದರ್ಸ್ ಕೂಟಮ್ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಬಾಲ್ ಬ್ಲಾಸ್ಟರ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟು ಕೊಂಡಿತು. ಬಲಮುರಿ ಗ್ರಾಮದ ಬೊಳ್ಳಚೆಟ್ಟೀರ ಕುಟುಂಬದ ಆಟದ ಮೈದಾನದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿದ್ದ ಹೊದ್ದೂರು ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿಆರು ತಂಡಗಳು ಪಾಲ್ಗೊಂಡಿದ್ದವು. ಫೈನಲ್ ಪಂದ್ಯದಲ್ಲಿ ಬಾಲ್ ಬ್ಲಾಸ್ಟರ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ನಿಗದಿತ 5 ಓವರ್ ಪಂದ್ಯದಲ್ಲಿ 5 ವಿಕೆಟ್ ನಷ್ಟಕ್ಕೆ 25 ರನ್ ಕಲೆ ಹಾಕಿತು. ಬ್ರದರ್ಸ್ ಕೂಟಮ್ ತಂಡ 3.3 ಓವರ್ ನಲ್ಲಿ ಒಂದು ವಿಕೆಟ್ ನಷ್ಟಕ್ಕೆ 26 ರನ್ ಗಳಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಬಾಲ್ ಬ್ಲಾಸ್ಟರ್ ತಂಡ ದ್ವಿತೀಯ ಸ್ಥಾನ ಪಡೆದು ಕೊಂಡಿತು. ಟೂರ್ನಿಯ ಉದ್ಘಾಟನೆಯನ್ನು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

Read More

ನಾಪೋಕ್ಲು ಅ.26 : ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರಲಾಗುತ್ತಿರುವ ತುಲ್ಯಾರು ಹತ್ತರ ಆರಾಧನೋತ್ಸವ (ಪತ್ತಲೋದಿ ಉತ್ಸವ) ಅ.27 ರಂದು ನಡೆಯಲಿದೆ ಎಂದು ಪರದಂಡ ಸುಬ್ರಮಣಿ ಕಾವೇರಪ್ಪ ತಿಳಿಸಿದ್ದಾರೆ. ತುಲಾಭಾರ ಸೇವೆಗಳು ಮತ್ತು ಪೂಜಾ ಸೇವೆಗಳು ಎಂದಿನಂತೆ ನಡೆಯಲಿದ್ದು, ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪಾಲ್ಗೊಳ್ಳಬೇಕೆಂದು ದೇವತಕ್ಕರಾದ ಪರದಂಡ ಕುಟುಂಬಸ್ಥರ ಪರವಾಗಿ ಪರದಂಡ ಸುಬ್ರಮಣಿ ಕಾವೇರಪ್ಪ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದರು. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಅ.26 :  ಮೀನುಗಾರಿಕೆ ಸಚಿವ  ಮಂಕಾಳ ಎಸ್. ವೈದ್ಯ ಇಂದು ಹಾರಂಗಿಯ ಮಹಶೀರ್ ಮೀನುಮರಿಗಳ ಉತ್ಪಾದನಾ ಹಾಗೂ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಈ ಸಂದರ್ಭ ಶಾಸಕ ಡಾ.ಮಂಥರ್ ಗೌಡ ಹಾಗೂ ಅಧಿಕಾರಿಗಳು ಹಾಜರಿದ್ದರು. 

Read More

ಕುಶಾಲನಗರ  ಅ.26 :  ಮಹಾತ್ಮ ಗಾಂಧಿ ಪದವಿ ಕಾಲೇಜಿನ ವಾರ್ಷಿಕ ಕ್ರೀಡೋತ್ಸವಕ್ಕೆ ವಿಧಾನ ಪರಿಷತ್ತಿನ ಮಾಜಿ ಸದಸ್ಯರೂ ಆದ ಅಂತರ್ರಾಷ್ಟ್ರೀಯ ಕರಾಟೆ ಪಟು ಚೆಪ್ಪುಡಿರ ಎಸ್.ಅರುಣ್ ಮಾಚಯ್ಯ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಶೈಕ್ಷಣಿಕ ಸಂಸ್ಥೆಗಳನ್ನು ಕಟ್ಟುವುದು ಮುಖ್ಯವಲ್ಲ. ಗುಣ ಮಟ್ಟದ ಶಿಕ್ಷಣ ನೀಡುವುದು ಅತೀ ಮುಖ್ಯ. ಗುಣಮಟ್ಟದ ಶಿಕ್ಷಣ ಇಂದು ವಿದ್ಯಾರ್ಥಿಗಳಿಗೆ ಅಗತ್ಯವಿದೆ. ವಿದ್ಯಾರ್ಥಿಗಳು ಆಧುನಿಕ ಶಿಕ್ಷಣ ಪದ್ಧತಿಗೆ ಹೆಚ್ಚು ಒಲವು ತೋರುವ ಮೂಲಕ ಪದವಿ ನಂತರ ಮುಂದೇನು ಎಂಬ ಪ್ರಶ್ನೆ ಬಂದಾಗ ಸೇನೆ, ಕ್ರೀಡೆ, ಶಿಕ್ಷಣ ಹೀಗೆ ಹಲವು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡು ಮುನ್ನುಗ್ಗಲು ಕರೆ ಕೊಟ್ಟರು. ಕ್ರೀಡೆ ಎಂಬುದು ಆತ್ಮಸ್ಥೈರ್ಯ ಹಾಗೂ ಶಿಸ್ತು ರೂಢಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದ ಅವರು,  ಯುವ ಶಕ್ತಿ ಹಾಗೂ ಯುವ ಸಂಪನ್ಮೂಲ ವನ್ನು ಹೊಂದಿರುವ ಭಾರತ ಜಗತ್ತಿನಲ್ಲೇ ಮೊದಲಿನದು ಎಂದರು. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ನಾಗೇಶ್ ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳ ಸಮಗ್ರ ಅಭ್ಯುದಯಕ್ಕೆ ಮುನ್ನುಡಿಯಾಗಿದ್ದು, ಕ್ರೀಡೆಯಲ್ಲಿ ಸಾಧನೆ ತೋರುವ ಕ್ರೀಡಾ ಪಟುಗಳಿಗೆ…

Read More