ನಾಪೋಕ್ಲು ಅ.26 : ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸಿ ಸಾರ್ವಜನಿಕ ಸೇವೆಯ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಪ್ರೇಮ ಮತ್ತು ಸೇವಾ ಮನೋಭಾವನೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹೇಳಿದರು. ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪಗೊಂಡು ಉನ್ನತಿಯನ್ನು ಹೊಂದಿರಿ ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಕನ್ನಂಬೀರ ಸುಧಿ ತಿಮ್ಮಯ್ಯ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ಎಲ್ಲಾ ಕಾರ್ಯಕ್ರಮಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮೂರ್ನಾಡು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೋಕ್ಕಡ ಸುಬ್ರಮಣಿ ಮಾತನಾಡಿ, ಏಳು ದಿನಗಳ ಶಿಬಿರ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ನಾಯಕತ್ವ ಕೂಡ ಬೆಳೆಸಲು ಸಹಕಾರಿಯಾಗಿದೆ ಎಂದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಮಯಂತಿ…
ಲೇಖಕ: admin
ನಾಪೋಕ್ಲು ಅ.26 : ಶೌರ್ಯ ತಂಡದ ಸದಸ್ಯರು ಶ್ರಮದಾನದ ಮೂಲಕ ಕೊಳಕೇರಿ ಅಂಗನವಾಡಿ ಕೇಂದ್ರದ ಸುತ್ತ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಚಗೊಳಿಸಿದರು. ಅಂಗನವಾಡಿ ಸುತ್ತು ಮುತ್ತು ಗಿಡ ಗಂಟಿಗಳು ಕಡಿದು, ಕಸಕಡ್ಡಿಗಳನ್ನು ಹೆಕ್ಕಿ ಸ್ವಚ್ಚಗೊಳಿಸಿದರು. ಇವರ ಕಾರ್ಯಕ್ಕೆ ಅಂಗನವಾಡಿ ಶಿಕ್ಷಕಿ ಶಾಂತಿ ಹಾಗೂ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದರು. ಶ್ರಮದಾನದಲ್ಲಿ ಶೌರ್ಯ ತಂಡದ ಸದಸ್ಯ ಗೀತಾ, ಆಶಾ, ದಿಲೀಶ್, ಚೇತನ್, ಶಂಕರ್, ಶರವಣ, ದಮಯಂತಿ ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಅ.26 : ಕೆಎಸ್ಆರ್ಟಿಸಿ ಹಾಗೂ ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಕಾನೂರು ಸಮೀಪದ ಬಾಳೆಲೆ ಬಳಿ ನಡೆದಿದೆ. ಎರಡು ಬಸ್ ಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ನೆಲ್ಯಹುದಿಕೇರಿ ಅ.26 : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್ವೈಎಸ್) 30ನೇ ವರ್ಷಾಚರಣೆಯ ಪ್ರಯುಕ್ತ ‘ಪರಂಪರೆಯ ಪ್ರತಿನಿಧಿಗಳಾಗೋಣ’ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಜ.24ರಂದು ಮಂಗಳೂರಿನಲ್ಲಿ ನಡೆಯುವ ಮಹಾ ಸಮ್ಮೇಳನದ ಪ್ರಚಾರಾರ್ಥ ಕೊಡಗು ಜಿಲ್ಲಾ ಸಮಿತಿ ಆಯೋಜಿಸಿದ ರಾಜ್ಯ ಸಮಿತಿ ನಾಯಕರ ಜ್ಯೂಬಿಲಿ ಜರ್ನಿ ಕಾರ್ಯಕ್ರಮವು ನೆಲ್ಯಹುದಿಕೇರಿಯ ದಾರುನ್ನಜಾತ್ ಹಾಗೂ ಕಡಂಗದ ಬದ್ರಿಯ ಮದ್ರಸದಲ್ಲಿ ನಡೆಯಿತು. 30ನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಯುಕ್ತ ಸಮಾಜ ಸೇವೆ ಸಹಿತ ಹಲವಾರು ಕಾರ್ಯಕ್ರಮಗಳನ್ನು ವಿವಿಧ ಘಟಕಗಳಲ್ಲಿ ಹಮ್ಮಿಕೊಂಡಿದ್ದು, ಅವುಗಳೆಲ್ಲವನ್ನೂ ಕಾರ್ಯರೂಪಕ್ಕೆ ತಂದು ಯಶಸ್ವಿಗೊಳಿಸಿ ಸೇವಾ ಮನೋಭಾವವಿರುವ ಉತ್ತಮ ಕಾರ್ಯಕರ್ತರನ್ನು ಸೃಷ್ಟಿಸುವಂತೆಯೂ ಮಂಗಳೂರಿನಲ್ಲಿ ನಡೆಯುವ ಮಹಾ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆಯೂ ಎಸ್ವೈಎಸ್ ರಾಜ್ಯಾಧ್ಯಕ್ಷ ಹಫೀಳ್ ಸಅದಿ ಕರೆ ನೀಡಿದರು. ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಸ್ವಾದಿಖ್ ಮಾಸ್ಟರ್ ಮಾತನಾಡಿ, ಕಾರ್ಯಚಟುವಟಿಕೆಗಳ ರೂಪುರೇಷೆಗಳನ್ನು ವಿವರಿಸಿದರು. ಕೋಶಾಧಿಕಾರಿ ಅಡ್ವಕೇಟ್ ಹಂಝತ್ ಉಡುಪಿ, ದಅವಾ ವಿಭಾಗ ಕಾರ್ಯದರ್ಶಿ ಸಯ್ಯಿದ್ ಶಾಫಿ ನಈಮಿ ತಂಙ್ಙಳ್, ಸಾಂತ್ವನ…
ಮಡಿಕೇರಿ ಅ.25 : ಮಡಿಕೇರಿ ದಸರಾಗೆ ತನ್ನದೇ ಆದ ಇತಿಹಾಸವಿದ್ದು, ಧಾರ್ಮಿಕ ಹಾಗೂ ಸಾಂಸ್ಕೃತಿಕತೆಯ ಜೊತೆಗೆ ಸಾಮರಸ್ಯ ಮತ್ತು ಸಹೋದರತ್ವವನ್ನು ಒಳಗೊಂಡು ಮಾದರಿಯಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಮಂಗಳವಾರ ರಾತ್ರಿ ನಡೆದ ವಿಜಯದಶಮಿ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದಸರಾ ಹಬ್ಬವು ಪ್ರತಿಯೊಬ್ಬರಲ್ಲಿ ಐಕ್ಯತೆ ಮತ್ತು ಭ್ರಾತೃತ್ವವನ್ನು ಮೂಡಿಸಿ ಒಗ್ಗಟ್ಟಾಗಿ ಪಾಲ್ಗೊಳ್ಳಲು ಪ್ರೇರಣೆ ನೀಡುವುದು ವಿಶೇಷವಾಗಿದೆ ಎಂದರು. ರಾಷ್ಟçದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಲಾಗಿದ್ದು, ಅವುಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರಲು ಎಲ್ಲರೂ ಪ್ರಯತ್ನಿಸಬೇಕು. ದ್ವೇಷ, ಅಸೂಯೆ, ಅಸಹನೆ, ಅಸಹಿಷ್ಟುತೆಯಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ. ಎಲ್ಲರೂ ಭ್ರಾತೃತ್ವದಿಂದ ಬದುಕಿದಾಗ ಉತ್ತಮ ಜೀವನ ಕಟ್ಟಿಕೊಳ್ಳಲು ಸಾಧ್ಯ ಎಂದು ಯು.ಟಿ.ಖಾದರ್ ಪ್ರತಿಪಾದಿಸಿದರು. ಪ್ರತಿಯೊಬ್ಬ ಮನುಷ್ಯರಿಗೂ ಒಂದೇ ರೀತಿಯ ಅಂಗಾಂಗಗಳನ್ನು ದೇವರು ಸೃಷ್ಟಿಸಿರುತ್ತಾನೆ. ಕಪ್ಪು, ಬಿಳುಪು ಅಥವಾ ಕಂದು ಬಣ್ಣ ಇರಬಹುದು. ಮನುಷ್ಯನ ಅಂಗಾಂಗ ರಚನೆ ಒಂದೇ ರೀತಿ ಇರುತ್ತದೆ. ಆದ್ದರಿಂದ ಎಲ್ಲರೂ…
ಮಡಿಕೇರಿ ಅ.25 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಹತ್ತು ದಿನಗಳ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಕರ್ಷಕ ದಶಮಂಟಪಗಳ ಶೋಭಾಯಾತ್ರೆಯೊಂದಿಗೆ ವರ್ಣರಂಜಿತ ತೆರೆ ಬಿದ್ದಿದೆ. ಈ ಬಾರಿ ದಶಮಂಟಪಗಳಲ್ಲಿ “ಮಣಿಕಂಠನಿಂದ ಮಹಿಷಿಯ ಶಾಪ ವಿಮೋಚನೆ” ಕಥಾ ಸಾರಾಂಶ ಹೊಂದಿದ್ದ ಶ್ರೀಕೋದಂಡ ರಾಮ ದೇವಾಲಯದ ಮಂಟಪ ಪ್ರಥಮ ಬಹುಮಾನ ಗಳಿಸಿತು. 49ನೇ ವರ್ಷದ ದಸರಾ ಉತ್ಸವ ಆಚರಿಸಿಕೊಂಡ ಈ ದೇವಾಯದ ಮಂಟಪದ ಅಧ್ಯಕ್ಷರಾಗಿ ಗೋಪಿನಾಥ್ ಕಾರ್ಯನಿರ್ವಹಿಸಿದರು. ಸುಮಾರು ರೂ.20 ಲಕ್ಷ ರೂ.ವೆಚ್ಚದ ಮಂಟಪ 25 ಕಲಾಕೃತಿಗಳನ್ನು ಹೊಂದಿತ್ತು. “ಮಹಾಗಣಪತಿಯಿಂದ ಶತಮಾಹಿಷೆಯ ಸಂಹಾರ” ಕಥಾ ಸಾರಾಂಶವನ್ನು ಹೊಂದಿ 47ನೇ ವರ್ಷದ ದಸರಾ ಉತ್ಸವ ಆಚರಿಸಿಕೊಂಡ ಶ್ರೀಕೋಟೆ ಮಹಾಗಣಪತಿ ದೇವಾಲಯದ ಮಂಟಪ ಹಾಗೂ 48ನೇ ವರ್ಷದ ದಸರಾ ಉತ್ಸವ ಆಚರಿಸಿಕೊಂಡು “ಕೃತಿಬಾಸ ರಾಮಾಯಣದಿಂದ ಆಯ್ದ ಪಂಚಮುಖಿ ಆಂಜನೇಯನಿಂದ ಅಹಿರಾವಣ- ಮಹಿರಾವಣ ವಧೆ” ಕಥಾ ಸಾರಾಂಶವನ್ನು ಪ್ರದರ್ಶಿಸಿದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ದ್ವಿತೀಯ ಬಹುಮಾನವನ್ನು ಹಂಚಿಕೊಂಡವು. ಶ್ರೀಕೋಟೆ ಮಹಾಗಣಪತಿ ಮಂಟಪಕ್ಕಾಗಿ ಸುಮಾರು ರೂ.31.5 ಲಕ್ಷ…
ಮಡಿಕೇರಿ ಅ.25 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ದಶಮಂಟಪಗಳ ಶೋಭಾಯಾತ್ರೆ ಸಂದರ್ಭ ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಮಂಟಪದ ಟ್ರ್ಯಾಕ್ಟರ್ ಮಗುಚಿಕೊಂಡ ಪರಿಣಾಮ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ನಡೆದಿದೆ. ನಾಲ್ವರು ಗಾಯಾಳುಗಳು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. ಇವರಲ್ಲಿ ವಿದ್ಯುತ್ ದೀಪಾಲಂಕರಕ್ಕಾಗಿ ಬಂದಿದ್ದ ದಿಂಡಿಗಲ್ ನ ವ್ಯಕ್ತಿಯೊಬ್ಬರ ಕಾಲು ಮೂಳೆ ಮುರಿದಿದೆ. ಅದೃಷ್ಟವಶಾತ್ ಘಟನೆ ವೇಳೆ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತ್ತಾಗಿದೆ. ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಮಂಟಪವು ಈ ಬಾರಿ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿತ್ತು. ಶ್ರೀ ದುರ್ಗಾ ಸಪ್ತಶತಿ ಪುರಾಣದಿಂದ ಅಧ್ಯಾಯ 6 ರಿಂದ 10ರವರೆಗಿನ ಕದಂಬ ಕೌಶಿಕೆ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗಿತ್ತು. ಬಹುಮಾನಕ್ಕಾಗಿ ತೀರ್ಪುಗಾರರಿಗೆ ಬೆಳಗ್ಗೆ 4 ಗಂಟೆ ವೇಳೆಗೆ ಕಾವೇರಿ ಕಲಾಕ್ಷೇತ್ರದ ಬಳಿ ಕಥಾ ಸಾರಾಂಶವನ್ನು ಪ್ರದರ್ಶಿಸಬೇಕಾಗಿತ್ತು. ರಾಜಾಸೀಟು ಉದ್ಯಾನವನದ ಬಳಿ ಇರುವ ತನ್ನ ದೇವಾಲಯದಿಂದ ಹೊರಟ ಮಂಟಪ…
ಮಡಿಕೇರಿ ಅ.25 : ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್.ವೈದ್ಯ ಅವರು ಅಕ್ಟೋಬರ್, 26 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಅಕ್ಟೋಬರ್, 26 ರಂದು ಬೆಳಗ್ಗೆ 11 ಗಂಟೆಗೆ ಅಳಿವಿನ ಅಂಚಿನಲ್ಲಿರುವ ಮಹಾಶಿರಾ ತಳಿ ಮೀನಿನ ಮರು ಸಂತಾನೋತ್ಪತಿ ಹಾರಂಗಿಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 1.30 ಗಂಟೆಗೆ ಮಡಿಕೇರಿ ತಾಲ್ಲೂಕಿನ ಕಡಗದಾಳು ಗ್ರಾಮದ ಬಳಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ನಿರ್ಮಾಣವಾಗಿರುವ ಮೀನು ಮಾರಾಟ ಕೇಂದ್ರ ವೀಕ್ಷಣೆ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪಿ.ಸಿ.ರವೀಂದ್ರ ಅವರು ತಿಳಿಸಿದ್ದಾರೆ.
ಮಡಿಕೇರಿ ಅ.25 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ 2022-23 ನೇ ಸಾಲಿನ 19 ನೇ ಗೌರಮ್ಮ ದತ್ತಿನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಗೌರಮ್ಮ ದತ್ತಿನಿಧಿ ಕಥಾಸ್ಪರ್ಧೆ ಬಹುಮಾನ ವಿತರಣೆ ಕಾರ್ಯಕ್ರಮವು ಅಕ್ಟೋಬರ್, 27 ರಂದು ಮಧ್ಯಾಹ್ನ 1.30 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ (ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ) ನಡೆಯಲಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಪಿ.ಕೆ.ವೆಂಕಟೇಶ್ ಪ್ರಸನ್ನ, ಕೊಡಗು ವಿಶ್ವ ವಿದ್ಯಾನಿಲಯದ ಚಿಕ್ಕಅಳುವಾರ ಜ್ಞಾನಕಾವೇರಿ ಕನ್ನಡ ಉಪನ್ಯಾಸಕರಾದ ಡಾ.ಜಮೀರ್ ಅಹ್ಮದ್, ಪ್ರಶಸ್ತಿ ವಿಜೇತರಾದ ಕಟ್ರತನ ಲಲಿತ ಅಯ್ಯಣ್ಣ, ಈರಮಂಡ ಹರಿಣಿ ವಿಜಯ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ನಿಕಟಪೂರ್ವ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ…
ಸುಂಟಿಕೊಪ್ಪ ಅ.25 : ಸುಂಟಿಕೊಪ್ಪ ವಾಹನ ಚಾಲಕರ ಸಂಘದ 53ನೇ ವಾರ್ಷಿಕೋತ್ಸವ ಅದ್ಧೂರಿಯಾಗಿ ನಡೆಯಿತು. ಆಯುಧ ಪೂಜಾ ಸಮಾರಂಭದ ಅಂಗವಾಗಿ ವಿವಿಧ ಅಲಂಕಾರ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವರ್ಕ್ ಶಾಪ್ ಅಲಂಕಾರ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಶಬರಿ ಆಟೋ ವರ್ಕ್ಸ್, ದ್ವಿತೀಯ ಬಹುಮಾನ ವೆಂಕಟರಮಣ ಟಯರ್ ವರ್ಕ್ಸ್ ಪಡೆಯಿತು. ಕಚೇರಿ ಅಲಂಕಾರ ಸ್ಪರ್ಧೆಯಲ್ಲಿ ಕೆ. ಇ.ಬಿ. ಪ್ರಥಮ, ಪೊಲೀಸ್ ಠಾಣೆ ದ್ವಿತೀಯ ಮತ್ತು ಗ್ರಾಮ ಪಂಚಾಯತಿ ಕಚೇರಿ ತೃತೀಯ ಬಹುಮಾನ ಗಳಿಸಿತು. ಅಂಗಡಿ ಅಲಂಕಾರ ಸ್ಪರ್ಧೆಯಲ್ಲಿ ಶ್ರೀಮಾನ್ ಎಂಟರ್ ಪ್ರೈಸಸ್ ಪ್ರಥಮ ಬಹುಮಾನ, ಅಶ್ರಫ್ ಸ್ಟೂಡೆಂಟ್ ಕಾರ್ನರ್ ದ್ವಿತೀಯ ಬಹುಮಾನ ಪಡೆಯಿತು. ಲಘು ವಾಹನ ಅಲಂಕಾರ ಸ್ಪರ್ಧೆಯಲ್ಲಿ ಆನಂದ ಪ್ರಥಮ, ನಾಗಪ್ಪ ದ್ವಿತೀಯ ಮತ್ತು ಪಟ್ಟೆಮನೆ ಹರ್ಷ ತೃತೀಯ ಬಹುಮಾನ ಪಡೆದರು. ಶಿವಮಣಿ ಅವರು ಆಟೋ ರಿಕ್ಷಾ ಅಲಂಕಾರ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದರು. ವಿಜೇತರಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದ ಅತಿಥಿಗಳು ಸೇರಿದಂತೆ ವಾಹನ ಚಾಲಕರ ಸಂಘದ ಅಧ್ಯಕ್ಷ…






