ಲೇಖಕ: admin

ಮಡಿಕೇರಿ ಅ.21 : ಪೊನ್ನಂಪೇಟೆಯ ಕೂರ್ಗ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಸಿ.ಐ.ಪಿ.ಯು.ಸಿ ಕಾಲೇಜು ಭಾರತ ಸರ್ಕಾರ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಲಯ ಜಿಲ್ಲಾ ಆಡಳಿತ .ಜಿಲ್ಲಾ ಪಂಚಾಯತ್ ಕೊಡಗು ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ, ವಿರಾಜಪೇಟೆ ತಾಲ್ಲೂಕು ಯುವ ಒಕ್ಕೂಟ ಇವರ ಅಶ್ರಯದಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಭಿಯಾನ ನಡೆಯಿತು. ಪೊನ್ನಂಪೇಟೆ ತಾಲ್ಲೂಕು ಮಟ್ಟದ ಅಮೃತ ಕಳಸ ಯಾತ್ರೆಯಲ್ಲಿ ಸಿ.ಐ.ಟಿಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬೋದಕ ವೃಂದದವರು ಮನೆ ಮನೆಗೆ ತೆರಳಿ ಮಣ್ಣನ್ನು ಸಂಗ್ರಹಿಸಿದರು. ಜೊತೆಗೆ ಅತಿಥಿ ಗಣ್ಯರು, ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ವೃಂದದವರು ಅಮೃತ ಕಳಸಕ್ಕೆ ಮಣ್ಣನ್ನು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮವು ಕೊಡವ ಎಜುಕೇಷನ್ ಸೊಸೈಟಿಯ ಕಾರ್ಯದರ್ಶಿ ಸಿ.ಪಿ.ರಾಕೇಶ್ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಅಮೃತ ಕಳಸದಲ್ಲಿ ಸಂಗ್ರಹಿಸಿದ ಮಣ್ಣನ್ನು ಜಿಲ್ಲಾ…

Read More

ಮಡಿಕೇರಿ ಅ.21 : ಅಖಿಲ ಕೊಡವ ಸಮಾಜದ ಮಾಜಿ ಅಧ್ಯಕ್ಷ ಮಾತಂಡ ಮೊಣ್ಣಪ್ಪ ಅವರ ನಿಧನಕ್ಕೆ ಕೊಡಗು ಜಿಲ್ಲಾ ಏಲಕ್ಕಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಸೂದನ ಎಸ್.ಈರಪ್ಪ ತೀವ್ರ ಸಂತಾಪ ಸೂಚಿಸಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಅತ್ಯಂತ ಆತ್ಮೀಯರಾಗಿದ್ದ ಸ್ನೇಹಜೀವಿ ಮೊಣ್ಣಪ್ಪ ಅವರ ನಿಧನ ಅತೀವ ದು:ಖವನ್ನು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಕೊಡವ ಸಮಾಜ, ಸಹಕಾರಿ ಕ್ಷೇತ್ರದ ಸೇವೆ ಮಾತ್ರವಲ್ಲದೆ ಸಾಮಾಜಿಕ ಕಳಕಳಿಯ ವ್ಯಕ್ತಿತ್ವದೊಂದಿಗೆ ಗುರುತಿಸಿಕೊಂಡಿದ್ದ ಮೊಣ್ಣಪ್ಪ ಅವರು ಸಾಧು, ಸಜ್ಜನಿಕೆಯಿಂದ ಇತರರಿಗೆ ಮಾದರಿಯಾಗಿದ್ದರು ಎಂದು ಸೂದನ ಈರಪ್ಪ ಬಣ್ಣಿಸಿದ್ದಾರೆ.

Read More

ಮಡಿಕೇರಿ ಅ.24 : ವಿಜಯದಶಮಿಯ ಅ.24 ರ ರಾತ್ರಿ ಮಡಿಕೇರಿ ನಗರದಲ್ಲಿ ನಡೆಯುವ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಮಂಟಪಗಳ ತೀರ್ಪಗಾರಿಕೆ ಎಷ್ಟು ಗಂಟೆಗೆ ಎಲ್ಲೆಲ್ಲಿ ನಡೆಯುತ್ತದೆ ಎನ್ನುವ ಬಗ್ಗೆ ಸಮಿತಿ ಅಧ್ಯಕ್ಷ ಹೆಚ್.ಮಂಜುನಾಥ್ ಮಾಹಿತಿ ನೀಡಿದ್ದಾರೆ. ಪೇಟೆ ಶ್ರೀರಾಮ ಮಂದಿರ ರಾತ್ರಿ 10 ಗಂಟೆಗೆ ಗಾಂಧಿ ಮೈದಾನ, ದೇಚೂರು ಶ್ರೀರಾಮಮಂದಿರ ರಾತ್ರಿ 11 ಗಂಟೆಗೆ ಶ್ರೀ ಆಂಜನೇಯ ದೇಗುಲದ ಮುಂಭಾಗ, ಶ್ರೀ ಕೋಟೆ ಗಣಪತಿ ರಾತ್ರಿ 11.45 ಗಂಟೆಗೆ ನಗರ ಪೊಲೀಸ್ ಠಾಣೆ ಮುಂಭಾಗ, ಶ್ರೀ ಚೌಡೇಶ್ವರಿ ರಾತ್ರಿ 12.30 ಗಂಟೆಗೆ ಹೋಟೆಲ್ ಪಾಪ್ಯುಲರ್ ಮುಂಭಾಗ, ಶ್ರೀ ಕೊಟೆ ಮಾರಿಯಮ್ಮ ರಾತ್ರಿ 1.15 ಗಂಟೆಗೆ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಮುಂಭಾಗ, ಶ್ರೀ ಕೋದಂಡ ರಾಮ ರಾತ್ರಿ 1.45 ಗಂಟೆಗೆ ಮೆಟ್ರೋ ಫ್ರೆಷ್ ಮುಂಭಾಗ, ಶ್ರೀ ಕರವಲೆ ಭಗವತಿ ರಾತ್ರಿ 2.15 ಗಂಟೆಗೆ ಸಿಂಧೂರ್ ಬಟ್ಟೆ ಮಳಿಗೆ ಮುಂಭಾಗ, ಶ್ರೀ ದಂಡಿನ ಮಾರಿಯಮ್ಮ ರಾತ್ರಿ 3 ಗಂಟೆಗೆ ಕೊಡವ ಸಮಾಜದ ಮುಂಭಾಗ, ಶ್ರೀ ಕಂಚಿ…

Read More

ಮಡಿಕೇರಿ ಅ.21 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ವಿಶೇಷ ಮೆರುಗನ್ನು ನೀಡುವ ದಶಮಂಟಪಗಳ ಶೋಭಾಯಾತ್ರೆಯನ್ನು ಕಾನೂನು ನಿಯಮಗಳಿಗೆ ಬದ್ಧವಾಗಿ ಆಚರಿಸಲು ಅಗತ್ಯ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ದಶಮಂಟಪ ಸಮಿತಿ ಅಧ್ಯಕ್ಷ ಹೆಚ್.ಮಂಜುನಾಥ್ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ನಿರ್ದೇಶನಗಳಿಗೆ ಅನುಗುಣವಾಗಿ ಶಬ್ಧ ಮಾಲಿನ್ಯಕ್ಕೆ ಅವಕಾಶವಿಲ್ಲದಂತೆ ದಸರಾ ಶೋಭಾಯಾತ್ರೆ ನಡೆಸಲು ದಶಮಂಟಪ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮಂಟಪಗಳು ಅನುಸರಿಸಬೇಕಾದ 17 ನಿಯಮಗಳನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದರು. ಶೋಭಾಯಾತ್ರೆಯಲ್ಲಿ ಮಂಟಪಗಳ ಕಥಾ ಸಾರಾಂಶವನ್ನು ಜನರಿಗೆ ತಲುಪಿಸಲು ಧ್ವನಿವರ್ಧಕ ಅತ್ಯವಶ್ಯ. ಹೀಗಿದ್ದೂ ನ್ಯಾಯಾಲಯದ ಆದೇಶಗಳಿಗೆ ಬದ್ಧವಾಗಿ, ಪೊಲೀಸ್ ಇಲಾಖೆಯ ಸೂಚನೆಯಂತೆ ಅಬ್ಬರದ ಧ್ವನಿ ಬಳಕೆಗೆ ಕಡಿವಾಣ ಹಾಕಬೇಕು ಮತ್ತು ಇತಿ ಮಿತಿಯಲ್ಲಷ್ಟೆ ಧ್ವನಿವರ್ಧಕ ಬಳಸುವಂತೆ ಸ್ಪಷ್ಟ ಸೂಚನೆಯನ್ನು ದಶ ಮಂಟಪ ಸಮಿತಿಗಳಿಗೆ ನೀಡಲಾಗಿದೆ. ಶೋಭಾಯಾತ್ರೆಯ ಸಂದರ್ಭ ಪಾಶ್ಚಾತ್ಯ ಸಂಗೀತ, ಚಿತ್ರಗೀತೆಗಳಿಗೆ ಬದಲಾಗಿ ಭಕ್ತಿ ಸಂಗೀತಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡುವಂತೆಯೂ ಸೂಚಿಸಲಾಗಿದೆ ಎಂದು ತಿಳಿಸಿದರು. ಲೇಸರ್ ಲೈಟ್‍ಗೆ ಅವಕಾಶವಿಲ್ಲ- ಈ ಬಾರಿಯ…

Read More

ಮಡಿಕೇರಿ ಅ.21 : ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಕರಾವಳಿ-ಮಲೆನಾಡು ಜನಪರ ಒಕ್ಕೂಟ ರಚಿಸಲಾಗಿದ್ದು, ಅ.31 ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೋಳಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಹಾಗೂ ಮಲೆನಾಡು ಪ್ರದೇಶ ಒಳಗೊಂಡ ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಭಾಗದ ಜನರ, ಕೂಲಿ ಕಾರ್ಮಿಕರ, ಬೆಳೆಗಾರರ ಸಮಸ್ಯೆ ಬಗೆಹರಿಸಲು ಒಕ್ಕೂಟ ರಚಿಸಲಾಗಿದೆ ಎಂದರು. ಎಲ್ಲ ಜಿಲ್ಲೆಗಳ ಗ್ರಾಪಂ ವ್ಯಾಪ್ತಿಯಲ್ಲಿ ಕನಿಷ್ಠ 200 ಕುಟುಂಬಗಳಿಗೆ ನಿವೇಶನ ಒದಗಿಸಲು ಕ್ರಮಕೈಗೊಳ್ಳಬೇಕು, ಧಾರವಾಡ, ಕಲಬುರಗಿಯಲ್ಲಿ ಹೈಕೋರ್ಟ್ ಪೀಠದಂತೆ ಮಲೆನಾಡು ಹಾಗೂ ಕರಾವಳಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಭಾಗದಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪಿಸಬೇಕು, ಆಟೋ, ಟ್ಯಾಕ್ಸಿ ಚಾಲಕರ ಮಂಡಳಿಯನ್ನು ರಚಿಸಿ, ಪರ್‍ಮಿಟರ್ ನಿಯಮವನ್ನು ಇಲ್ಲಿನ ಭೂ ಪ್ರದೇಶಕ್ಕೆ ಅನುಗುಣವಾಗಿ ತಾಲೂಕು ಪರಿಮಿಟ್ ನೀಡಬೇಕು, ಕ್ಷೇತ್ರ ಪುನರ್ ವಿಂಗಡಣೆ…

Read More

ಸಿದ್ದಾಪುರ ಆ.20 :  ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಿದ್ದಾಪುರದಲ್ಲಿ 30ನೇ ವರ್ಷದ  ಆಯುಧ ಪೂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸೂದನ ಸತೀಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಹಾಗೂ ಕೋವಿಡ್‍ನಿಂದಾಗಿ ಕಳೆದ 5ವರ್ಷಗಳಿಂದ ಸರಳವಾಗಿ ಆಚರಣೆ ಮಾಡಲಾಗಿದ್ದ ಆಯುಧ ಪೂಜೆ ಸಮಾಂಭವನ್ನು ಈ ಭಾರಿ ವಿವಿಧ ಆಟೋಟ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ  ನಡೆಸಲು ತೀರ್ಮಾನಿಸಲಾಗಿದೆ ಎಂದರು. ಅ.23 ರಂದು ಸಿದ್ದಾಪುರದ  ಬಸ್ ನಿಲ್ದಾಣದಲ್ಲಿನ ವೇದಿಕೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ  ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಮಕ್ಕಳ ಸೈಕಲ್ ನಿಧಾನ ಸ್ಪರ್ಧೆ15 ರಿಂದ 20ವರ್ಷ ವಯೋಮಿತಿಯ ಯುವಕರಿಗೆ ರಸ್ತೆ ಓಟ , ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು. ವಾಹನ ಚಾಲಕರ ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿ ಸಾಂಸ್ಕೃತಿಕ ಕಾರ್ಯಕ್ರಮವು ನಾಲ್ಕು ವಿಭಾಗಗಳಲ್ಲಿ ನಡೆಯುತ್ತಿದ್ದು, ಒಂದರಿಂದ ಏಳನೇ ತರಗತಿವರೆಗೆ ಭರತನಾಟ್ಯ, ಜಾನಪದ ನೃತ್ಯ ,ಸಾಮೂಹಿಕ ನೃತ್ಯ, ಪ್ರೌಢಶಾಲಾ…

Read More

ಮಡಿಕೇರಿ ಅ.21 :  ದೇಶದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರಿಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ಕೆ.ಸುಂದರರಾಜ್, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಡಿವೈಎಸ್‍ಪಿ ಜಗದೀಶ್, ಪ್ರಮುಖರಾದ ಪಿ.ಎ.ನಂಜಪ್ಪ, ಐ.ಪಿ.ಮೇದಪ್ಪ, ಅನೂಪ್ ಮಾದಪ್ಪ, ಅನಂತ ಎಚ್.ಎಸ್., ಚೆನ್ನನಾಯಕ, ಮಂಜು ಎಚ್.ಡಿ., ವಾಣಿಶ್ರೀ, ಸವಿತಾ, ಲಿಂಗಪ್ಪ, ಶ್ರೀಧರನ್ ನಾಯರ್, ಮುತ್ತಪ್ಪ, ಅಂಬೆಕಲ್ಲು ನವೀನ್, ಸೂರ್ತಲೆ ಸೋಮಣ್ಣ, ಗೀತಾ ಗಿರೀಶ್, ನಿರಂಜನ, ಮಧುಕರ, ಆಂಥೋಣಿ ಡಿಸೋಜ, ಪೂಣಚ್ಚ, ಬಿ.ಬಿ.ಜಗದೀಶ್, ವೆಂಕಪ್ಪ, ಸಿದ್ದೇಶ್, ಸೇರಿದಂತೆ ಹಲವರು ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ, ಗೌರವ ನಮನ ಸಲ್ಲಿಸಿದರು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಕಳೆದ ವರ್ಗ ಕರ್ತವ್ಯ ನಿರ್ವಹಿಸುವಾಗ ದೇಶದಲ್ಲಿ ಪ್ರಾಣ ಕಳೆದುಕೊಂಡ ಪೆÇಲೀಸ್ ಅಧಿಕಾರಿಗಳು ಮತ್ತು ಪೇದೆಗಳ…

Read More

ಮಡಿಕೇರಿ ಅ.21 :  ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ನಗರಸಭಾ ಸದಸ್ಯೆಯರು, ಮಹಿಳೆಯರ ಬಳಗ, ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಅ.22 ರಂದು  ಗಾಂಧಿ ಮೈದಾನದಲ್ಲಿ ಮಹಿಳಾ ದಸರಾ ಆಯೋಜಿತವಾಗಿದೆ. ಬೆಳಗ್ಗೆ 9.30 ಗಂಟೆಯಿಂದಲೇ ವಿವಿಧ ಸ್ಪಧೆಗಳನ್ನು ಮಹಿಳೆಯರಿಗೆ ಆಯೋಜಿಸಲಾಗಿದೆ ಎಂದು ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ  ಎಚ್.ಟಿ.ಅನಿಲ್  ಮತ್ತು ಮಹಿಳಾ ದಸರಾ ಸಮಿತಿ ಸಂಚಾಲಕಿ ಕುಡೆಕಲ್ ಸವಿತಾ ಸಂತೋಷ್ ತಿಳಿಸಿದ್ದಾರೆ. 8ನೇ ವಷ೯ದ ಮಹಿಳಾ ದಸರಾ ಅಂಗವಾಗಿ ಎಥ್ ನಿಕ್ ಫ್ಯಾಷನ್ ಶೋ , ಸಾಂಪ್ರದಾಯಿಕ ಉಡುಗೆ ಸ್ಪಧೆ೯, ಗಾರ್ಭಾ ನೃತ್ಯ ಸ್ಪಧೆ೯, 100 ಮೀಟರ್ ಓಟದ ಸ್ಪರ್ಧೆ , ತೆಂಗಿನ ಕಾಯಿಗೆ ಕಲ್ಲು ಹೊಡೆಯುವ ಸ್ಪರ್ಧೆ , ಹಗ್ಗ ಜಗ್ಗಾಟ, ಚಮಚದಲ್ಲಿ ನಿಂಬೆ ಹಣ್ಣು ಇಟ್ಟು ವೇಗವಾಗಿ ನಡೆಯುವುದು., ಬಕೆಟ್ ಗೆ ಚೆಂಡನ್ನು ಹಾಕುವುದು, ತಲೆಯ ಮೇಲೆ ಪುಸ್ತಕ ಇಟ್ಟು ನಡೆಯುವುದು, ಕೋಲಿಗೆ ರಿಂಗ್ ಹಾಕುವುದು, ನಿಧಾನವಾಗಿ ನಡೆಯುವುದು. ಸೂಜಿಗೆ ನೂಲನ್ನು…

Read More

ಮಡಿಕೇರಿ ಅ.21 :  ಅಖಿಲ ಕೊಡವ ಸಮಾಜದ ಮಾಜಿ ಅಧ್ಯಕ್ಷ, ವಿರಾಜಪೇಟೆ ಸಮೀಪದ ಕೆದಮಳ್ಳೂರು ಗ್ರಾಮದ ನಿವಾಸಿ ಮಾತoಡ ಮೊಣ್ಣಪ್ಪ( 76) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕೊಡಗು ಏಕೀಕರಣ ರಂಗ ಸೇರಿದಂತೆ ಹಲವಾರು ಸಂಘ-ಸಂಸ್ಥೆಯಲ್ಲಿ ತೊಡಗಿಸಿಕೊಂಡ ಮಾತoಡ ಮೊಣ್ಣಪ್ಪನವರು, ತಲಕಾವೇರಿ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾಗಿ ತಲಕಾವೇರಿ ಜೀರ್ಣೋದ್ಧಾರಕ್ಕೆ ಕಾರಣಕರ್ತರಾದವರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ ಮೊಣ್ಣಪ್ಪ, ಹಲವಾರು ಸಹಕಾರ ಸಂಘಗಳಲಿ ಕೂಡ ಸೇವೆಯನ್ನು ಸಲ್ಲಿಸಿದ್ದರು. ಸಾಮಾಜಿಕ ಪ್ರಜ್ಞೆ ಹಾಗೂ ಸಾಮಾಜಿಕ ಕಳಕಳಿ ಹೊಂದಿದ್ದ ಇವರ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ. ಮೃತರ ಅಂತ್ಯಕ್ರಿಯೆ  ಅ.22 ರಂದು  ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಮಡಿಕೇರಿ ಅ.21 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯು    ಶರನ್ನವರಾತ್ರಿಯ  7ನೇ ದಿನವಾದ ಇಂದು  ತಾವರೆ ಪುಷ್ಪದ ಅಲಂಕಾರದಲ್ಲಿ  ಗಮನ ಸೆಳೆಯುತ್ತಿದೆ. ನವರಾತ್ರಿಯ 6ನೇ ದಿನ ಶಾರದಾ ದೇವಿಯ ಅಲಂಕಾರದಲ್ಲಿ ಪೂಜೆ ಸಲ್ಲಿಸಲಾಯಿತು. ಅ.22 ರಂದು ಬಳೆ ಅಲಂಕಾರ ಅಲಂಕಾರ ನೆರವೇರಲಿದೆ.

Read More