ಬೆಂಗಳೂರು ಅ.20 : ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯ ಗುಂಪು ವಿಮೆ ಮೊತ್ತವನ್ನು 20 ಲಕ್ಷ ರೂಪಾಯಿಗಳಿಂದ 50 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಘೋಷಿಸಿದ್ದಾರೆ. ಬೆಂಗಳೂರಿನ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಈ ವಿಷಯ ಪ್ರಕಟಿಸಿದರು. ಪೊಲೀಸ್ ವ್ಯವಸ್ಥೆಯು ರಾಜ್ಯ ಮತ್ತು ಸರ್ಕಾರದ ಘನತೆ ಹೆಚ್ಚಿಸುವ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ನಡುವೆ ನೇರ ಸಂಬಂಧವಿದೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದ್ದಾಗ ಹೆಚ್ಚಿನ ಬಂಡವಾಳ ಹೂಡಿಕೆಯಾಗುತ್ತದೆ ಎಂದು ಹೇಳಿದರು. ಇದು ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುತ್ತದೆ ಮತ್ತು ಅಭಿವೃದ್ಧಿಯನ್ನು ವೇಗಗೊಳಿಸುತ್ತದೆ. ಪರಿಣಾಮವಾಗಿ, ದೇಶದ ಜನರ ತಲಾ ಆದಾಯವೂ ಹೆಚ್ಚಾಗುತ್ತದೆ. ದೇಶದ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಕಾಪಾಡಬೇಕು ಎಂದು ಕರೆ ನೀಡಿದರು. ತಂತ್ರಜ್ಞಾನದ ಪ್ರಗತಿಯಿಂದ ಪೊಲೀಸ್ ಇಲಾಖೆಗೆ ಹೊಸ ಸವಾಲುಗಳು ಎದುರಾಗುತ್ತಿದ್ದು, ಸೈಬರ್ ತಂತ್ರಜ್ಞಾನದ ಜತೆಗೆ ಸೈಬರ್…
ಲೇಖಕ: admin
ಕುಶಾಲನಗರ, ಅ.21 : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ “ಕರ್ನಾಟಕ ಸುವರ್ಣ ಸಂಭ್ರಮ : 50, “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಿದ್ದತೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಆದ ಜಿಲ್ಲಾ ಕ.ಸಾ.ಪ. ಸಲಹೆಗಾರ ಟಿ.ಪಿ.ರಮೇಶ್ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು( ಕ.ಸಾ.ಪ.) ಹಾಗೂ ಕುಶಾಲನಗರ ತಾಲ್ಲೂಕು ಕ.ಸಾ.ಪ. ವತಿಯಿಂದ ಕ.ಸಾ.ಪ.ಹೆಬ್ಬಾಲೆ ಘಟಕದ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಉತ್ತರ ಕೊಡಗಿನ ಗಡಿಭಾಗದ ಹೆಬ್ಬಾಲೆ ಗ್ರಾಮದಲ್ಲಿ ನವೆಂಬರ್ : 2023 ರಲ್ಲಿ ನಡೆಸಲುದ್ದೇಶಿಸಿರುವ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಸಂಘಟನೆ ಕುರಿತು ಹೆಬ್ಬಾಲೆ ಪ್ರೌಢಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಆಚರಣೆ ಕುರಿತು ರೂಪುರೇಷೆ ಕುರಿತು ಮಾಹಿತಿ ನೀಡಿದರು. ಗ್ರಾಮೀಣ ಪ್ರದೇಶದ ಹಳ್ಳಿಗಳಲ್ಲಿ ಜನಜನಿತವಾಗಿದ್ದು,…
ಮಡಿಕೇರಿ ಅ.21 : ಸಮರ್ಥ ಕನ್ನಡಿಗರು ವತಿಯಿಂದ ನ.5 ರಂದು ಮಡಿಕೇರಿಯಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಂಚಾಲಕಿ ಕೆ. ಜಯಲಕ್ಷ್ಮಿ ತಿಳಿಸಿದ್ದಾರೆ. 1-7 ವರ್ಷದ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ (ಎರಡು ವಿಭಾಗಗಳಲ್ಲಿ ) : ಪ್ರೌಢಶಾಲೆಯ ಮಕ್ಕಳಿಗೆ ಜಾನಪದ ಸಮೂಹ ನೃತ್ಯ ಸ್ಪರ್ಧೆ. ನೃತ್ಯಕ್ಕೆ ಕಾಲಾವಕಾಶ 5 ನಿಮಿಷಗಳು, ತಂಡದಲ್ಲಿ ಕನಿಷ್ಠ 6 ಗರಿಷ್ಠ 8 ಮಕ್ಕಳಿರಬೇಕು. ಮಹಿಳೆಯರಿಗೆ ಸಮೂಹ ಗಾಯನ ಸ್ಪರ್ಧೆ :: ಯಾವ ಕನ್ನಡ ಹಾಡನ್ನಾದರೂ ಹಾಡಬಹುದು. ತಂಡದಲ್ಲಿ 6ರಿಂದ 10 ಸದಸ್ಯರು ಇರಬೇಕು. ಕರೋಕೆ ಬಳಸಿ ಹಾಡುವಂತಿಲ್ಲ. 4 ನಿಮಿಷ ಕಾಲಾವಕಾಶ. ಪ್ರೌಡಶಾಲೆ ಮಕ್ಕಳಿಗೆ ಮತ್ತು ಮಹಿಳೆಯರಿಗೆ ಸಮೂಹ ನೃತ್ಯ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಗೆ ಹೆಸರು ನೋಂದಾಯಿಸಲು : ಮಹಿಳೆಯರ ಸಮೂಹ ಗಾಯನ : ಜಯಲಕ್ಷ್ಮಿ 9663119670 ಛದ್ಮವೇಷ : ಗಿರಿಜಾಮಣಿ -9110657754 ಸಮೂಹ ನೃತ್ಯ : ಚಿತ್ರಾ ಆರ್ಯನ್ 9449044117 ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಅ.21 : ಕಾವೇರಿ ತೀರ್ಥೋದ್ಭವ ಹಿನ್ನೆಲೆ ವಿರಾಜಪೇಟೆಯಿಂದ ತಲಕಾವೇರಿವರೆಗೆ ಎಂಟು ಯುವಕರು ಪಾದಯಾತ್ರೆ ಮಾಡಿದರು. ಕಾವೇರಿ ಮಾತೆಯ ಭಕ್ತಾದಿಗಳಾಗಿರುವ ಚೆಟ್ಟೋಳಿರ ಶರತ್ ಸೋಮಣ್ಣ , ಮುರುವಂಡ ಸವನ್ ಸೋಮಣ್ಣ, ಕಾಳಮಂಡ ರಾಬಿನ್ ಅಚ್ಚಮ್ಮ , ಚೆಟ್ಟಿಮಾಡ ಸಜನ್ ಕುಟ್ಟಪ್ಪ, ಮಾಚಂಗಡ ಸಚಿನ್, ಪೊರುಕಂಡ ಶಾನ್ , ಮುಕ್ಕಾಟಿರ ಉತ್ತಪ್ಪ, ಅಳಮೇಂಗಡ ಸೋಮಣ್ಣ ಕಾವೇರಿ ತೀರ್ಥೋದ್ಭವದ ಹಿನ್ನೆಲೆ ವಿರಾಜಪೇಟೆಯಿಂದ ಸುಮಾರು 58 ಕಿಮೀ ಪಾದಯಾತ್ರೆ ಕೈಗೊಂಡಿದ್ದರು. ವಿರಾಜಪೇಟೆ , ಕದನೂರು , ಕಡಂಗ , ನಾಪೋಕ್ಲು, ಬಲ್ಲಮಾವಟೀ , ಅಯ್ಯಂಗೇರಿ ಮೂಲಕ ಭಾಗಮಂಡಲಕ್ಕೆ ಸಂಜೆತಲುಪಿದ ಯುವಕರು , ಮಂಗಳವಾರ ಭಾಗಮಂಡಲದಿಂದ ಎಲ್ಲರೊಂದಿಗೆ ಪಾದಯಾತ್ರೆ ಮುಂದುವರಿಸಿ ತೀರ್ಥೋದ್ಭವ ಮುನ್ನ ತಲಕಾವೇರಿಗೆ ತಲುಪಿದರು.
ಸೋಮವಾರಪೇಟೆ ಅ.21 : ಸೋಮವಾರಪೇಟೆ ಶ್ರೀ ಬಸವೇಶ್ವರ ದೇವಾಲಯದಲ್ಲಿ ಶರನ್ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾದೇವಿಗೆ ವಿಳ್ಯದೆಲೆ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.
ಸೋಮವಾರಪೇಟೆ ಅ.21 : ಸೋಮವಾರಪೇಟೆ ಶ್ರೀ ಸೋಮೇಶ್ವರ ದೇವಾಲಯದ ಶ್ರೀ ಶಕ್ತಿ ಪಾರ್ವತಿ ಸನ್ನಿಧಿಯಲ್ಲಿ ಶರನ್ನವರಾತ್ರಿ ಉತ್ಸವ ಅಂಗವಾಗಿ ಶ್ರೀ ದೇವಿ ವಿಗ್ರಹಕ್ಕೆ ಮಯೂರ ವಾಹಿನಿ ಅಲಂಕಾರ ಮಾಡಿ ಪೂಜಿಸಲಾಯಿತು.
ಸುಂಟಿಕೊಪ್ಪ ಅ.21 : 7ನೇ ಹೊಸಕೋಟೆ ತೊಂಡೂರು ಗ್ರಾಮದಲ್ಲಿರುವ ವಿಕಾಸ್ ಜನಸೇವಾ ಟ್ರಸ್ಟ್ನ ಜೀವನದಾರಿ ಆಶ್ರಮಕ್ಕೆ ಶಾಸಕ ಮಂತರ್ಗೌಡ ಭೇಟಿ ನೀಡಿ ವೃದ್ಧರ ಯೋಗಕ್ಷೇಮ ವಿಚಾರಿಸಿದರು. ದಿವಂಗತ ರಮೇಶ್ ಹಾಗೂ ರೂಪ ರಮೇಶ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂತಾಪ ವ್ಯಕ್ತಪಡಿಸಿದರು. ನಂತರ ಮಾತನಾಡಿದ ಶಾಸಕರು, ನಿಮ್ಮನ್ನೆಲ್ಲಾ ರಮೇಶ್ ಅವರು ಪೋಷಿಸಿದಂತೆ ಅವರ ಅಣ್ಣ ಮಂಜುನಾಥ್ ಅವರು ನೋಡಿಕೊಳ್ಳಲು ಮುಂದಾಗಿದ್ದಾರೆ. ಅವರ ಸೇವೆಗೆ ವೈಯಕ್ತಿಕವಾಗಿ ಮತ್ತು ಸರ್ಕಾರದ ಭಾಗದಿಂದಲೂ ಸಂಪೂರ್ಣ ಸಹಕಾರವನ್ನು ನೀಡಲಾಗುವುದೆಂದು ಭರವಸೆ ವ್ಯಕ್ತಪಡಿಸಿದರು. ವಿಶೇಷಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಅಧಿಕಾರಿಯವರೊಡನೆ ಮಾತನಾಡಿ, ಅನುದಾನ ವ್ಯವಸ್ಥೆಯನ್ನು ಮುಂದಿನ ದಿನಗಳಲ್ಲಿ ಒದಗಿಸಿಕೊಡಲು ಪ್ರಯತ್ನಿಸುವೆ ಎಂದು ತಿಳಿಸುವ ಮೂಲಕ ಆಶ್ರಮದ ನಿವಾಸಿಗಳಿಗೆ ಧೈರ್ಯ ತುಂಬಿದರು. ತಿಂಗಳಿಗೆ 2 ಬಾರಿಯಾದರೂ ಆಶ್ರಮದ ಕಾರ್ಯಚಟುವಟಿಕೆಗಳ ಬಗ್ಗೆ ಗಮನಕ್ಕೆ ತಂದಲ್ಲಿ ಆಶ್ರಮಕ್ಕೆ ಬೇಕಾದ ಅವಶ್ಯಕವಾದ ಅಗತ್ಯತೆಗಳನ್ನು ಪೂರೈಸಲು ಸಹಕಾರಿಯಾಗಲಿದೆ ಮಂಜುನಾಥ್ ರವರಿಗೆ ತಿಳಿಸಿದರು. ಇದೇ ಸಂದರ್ಭ ದಿ. ರಮೇಶ್ ತಂದೆ ಕರಿಯಪ್ಪ ಅವರಿಗೆ ಸಾಂತ್ವನ ಹೇಳಿ,…
ಕುಶಾಲನಗರ, ಅ.20 : ಸ್ವಚ್ಛ ಮನಸ್ಸಿನ ಮೂಲಕ ಸ್ವಚ್ಛ ಪ್ರಕೃತಿ, ಸ್ವಚ್ಛ ಸಮಾಜ ನಿರ್ಮಾಣ ಸಾಧ್ಯ ಎಂದು ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಅಖಿಲ ಭಾರತ ಸನ್ಯಾಸಿ ಸಂಘ ಕಾವೇರಿ ನದಿ ಸ್ವಚ್ಛತಾ ಆಂದೋಲನ, ಕಾವೇರಿ ರಿವರ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ಸ್ವಚ್ಛ ಕಾವೇರಿಗಾಗಿ 13ನೇ ವರ್ಷದ ಕಾವೇರಿ ನದಿ ಜಾಗೃತಿ ರಥಯಾತ್ರೆಗೆ ತಲಕಾವೇರಿ ಕ್ಷೇತ್ರದಲ್ಲಿ ಚಾಲನೆ ನೀಡಿ ಮಾತನಾಡಿದರು. ನಾಡಿನಲ್ಲಿ ಜಲಮೂಲ ಪ್ರಕೃತಿ ಮೂಲಗಳು ಹಲವು ರೀತಿಯಲ್ಲಿ ಕಲುಷಿತಗೊಳ್ಳುತ್ತಿದ್ದು ಈ ಬಗ್ಗೆ ಪ್ರತಿಯೊಬ್ಬರು ಎಚ್ಚರ ವಹಿಸಬೇಕಾಗಿದೆ. ಇಲ್ಲವಾದಲ್ಲಿ ಜೀವ ಸಂಕುಲಕ್ಕೆ ಅನಾಹುತ ಉಂಟಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತಪಡಿಸಿದರು. ಪ್ರತಿಯೊಬ್ಬರೂ ಮನೆಯ ಕಸ ವಿಲೇವಾರಿಯನ್ನು ಸಮರ್ಪಕವಾಗಿ ಸಹಜವಾಗಿ ಮಾಡಿದಲ್ಲಿ ಮಾತ್ರ ಸ್ವಚ್ಛತೆ ಕಾಣಲು ಸಾಧ್ಯ ಎಂದ ಶ್ರೀಗಳು ಜಾಗೃತಿಯ ಮತ್ತು ಅರಿವಿನ ಕೊರತೆ ನಡುವೆ ನದಿ ಸಂರಕ್ಷಣೆಗೆ ಹೆಣಗಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಹೇಳಿದರು. ಈ ನಡುವೆ ಜೀವನದಿ ಕಾವೇರಿಯ ಸಂರಕ್ಷಣೆಗೆ…
ಮಡಿಕೇರಿ ಅ.20 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ ಪಾದಯಾತ್ರೆಯ ನಾಲ್ಕನೇ ಹಂತ ಕುಂದದಿಂದ ಪಾದಯಾತ್ರೆ ಆರಂಭಗೊಂಡಿತು. ಬೊಟ್ಟಿಯತ್ನಾಡ್ (ಕುಂದ), ಕುತ್ನಾಡ್ (ಬಿ.ಶೆಟ್ಟಿಗೇರಿ) ಮತ್ತು ಬೆರಳಿನಾಡ್ (ಕಂಡಂಗಾಲ) ನ ಮೂರು ನಾಡುಗಳ ಮಂದ್ “ಕೈಮುಡಿಕೆ ಮಂದ್” ನಲ್ಲಿ ಕೊಡವ ಜನಜಾಗೃತಿ ಸಭೆ ನಡೆಯಿತು. ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಸಭೆ ಆರಂಭಿಸಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವ ಲ್ಯಾಂಡ್ ಸೇರಿದಂತೆ 9 ಬೇಡಿಕೆಗಳ ಹಕ್ಕೊತ್ತಾಯಗಳನ್ನು ವಿವರಿಸಿದರು. ಕೊಡವರು ಕೊಡವ ನೆಲದ ಪ್ರಾಚೀನ ಬುಡಕಟ್ಟು ಜನರಾಗಿದ್ದು, ಕೊಡವ ಮಂದ್ ಗಳು, ಜಲದೇವತೆ ಕಾವೇರಿ, ಸೂರ್ಯ, ಚಂದ್ರ, ಭೂಮಿತಾಯಿಯಷ್ಟೇ ಪವಿತ್ರವೂ ಆಗಿದ್ದಾರೆ. ಪ್ರಾಚೀನ ಬುಡಕಟ್ಟು ಕೊಡವ ಜನಾಂಗವನ್ನು ಈ ದೇಶದ ಜನ ಹಾಗೂ ಸರ್ಕಾರ ಸಂವಿಧಾನದ 51 ಎ.ಎಫ್ ವಿಧಿ ಮತ್ತು ವಿಶ್ವ ರಾಷ್ಟ್ರ ಸಂಸ್ಥೆಯ ಸನದ್ ನ ಪ್ರಕಾರ ರಕ್ಷಿಸಿ ಪೋಷಿಸಿ ಕಾಪಾಡಬೇಕಾಗಿದೆ…
ಮಡಿಕೇರಿ ಅ.20 : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ದುರ್ಗಾಷ್ಠಮಿಯ ಪ್ರಯುಕ್ತ ಅ.22 ರಂದು ಗಣಪತಿ ಹೋಮ, ಶ್ರೀ ದುರ್ಗಾ ಹವನ ಹಾಗೂ ವಿಶೇಷ ಅಲಂಕಾರ ಪೂಜೆ ನಡೆಯಲಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಗಣಪತಿ ಹೋಮ, ಶ್ರೀ ದುರ್ಗಾ ಹವನ ಹಾಗೂ ವಿಶೇಷ ಅಲಂಕಾರ ಪೂಜೆ ನಡೆಯಲಿದ್ದು, 11 ಗಂಟೆಗೆ ದೇವಾಲಯದ ಪ್ರವೇಶ ದ್ವಾರದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಮಹಾಧ್ವಾರ ಭೂಮಿ ಪೂಜೆ ನೆರವೇರಲಿದೆ. ಸಂಜೆ 7 ಗಂಟೆಗೆ ದುರ್ಗಾ ಪೂಜೆಯೊಂದಿಗೆ ಅಲಂಕಾರ ಪೂಜೆ ಜರುಗಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.






