ಮಡಿಕೇರಿ ಅ.20 : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಜರುಗಿದ 10 ನೇ ವಷ೯ದ ಮಕ್ಕಳ ದಸಾರ ಅತ್ಯಧಿಕ ಮಕ್ಕಳ ಪಾಲ್ಗೊಳ್ಳುವಿಕೆಗೆ ಕಾರಣವಾಯಿತು. ಮಕ್ಕಳ ಸಂತೆಯಲ್ಲಿ ಈ ಬಾರಿ 122 ಅಂಗಡಿಗಳು ಇದ್ದರೆ, ಮಕ್ಕಳ ಅಂಗಡಿಯಲ್ಲಿ 74 ಅಂಗಡಿಗಳಿದ್ದವು. ಮಕ್ಕಳ ಮಂಟಪದಲ್ಲಿ 18 ಸ್ಪಧಾ೯ ತಂಡಗಳು, ಛದ್ಮವೇಶ ಸ್ಪಧೆ೯ಯಲ್ಲಿ 66 ಸ್ಪಧಿ೯ಗಳು ಮತ್ತು ಕ್ಲೇಮಾಡೆಲಿಂಗ್ ಸ್ಪಧೆ೯ಗೆ 17 ಸ್ಪಧಿ೯ಗಳು ಪಾಲ್ಗೊಂಡಿದ್ದರು . ಮಕ್ಕಳ ದಸರಾದಲ್ಲಿ ಈ ವಷ೯ 620 ಕ್ಕೂ ಅಧಿಕ ಮಕ್ಕಳು ವಿವಿಧ ಸ್ಪಧೆ೯ಗಳಲ್ಲಿ ಪಾಲ್ಗೊಂಡು ದಾಖಲೆಯ ಸಂಖ್ಯೆಗೆ ಕಾರಣರಾದರು ಎಂದು ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ಮಾಹಿತಿ ನೀಡಿದ್ದಾರೆ. ವಿವಿಧ ಸ್ಪಧೆ೯ಗಳ ವಿಜೇತರು :: ಛದ್ಮವೇಶ ( ಎಲ್ ಕೆಜಿಯಿಂದ ಒಂದನೇ ತರಗತಿ) : ಮನ್ವಿತಾ ಬಿ.ಎನ್. (ಪ್ರಥಮ), ರಿಶಾ ಪೂಜಾರಿ (ದ್ವಿತೀಯ), ಆರುಶ್ ಜೆ.ಕೆ. (ತೖತೀಯ), ಶಾನ್ ಚಂಗಪ್ಪ ಮತ್ತು ಲಾಸ್ಯ ಮುತ್ತಮ್ಮ (ಸಮಧಾನಕರ ಬಹುಮಾನ)…
ಲೇಖಕ: admin
ಮಡಿಕೇರಿ ಅ.20 : ಐಜಿಪಿ ಸಂದೀಪ್ ಪಾಟೀಲ್ ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದರು. ಪೊಲೀಸ್ ಕವಾಯತು ಪರಿವೀಕ್ಷಣೆ ನಡೆಸಿ, ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರಗಳನ್ನು ನೀಡಿದರು. ಬಳಿಕ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಅಪರಾಧ ಪರಾಮರ್ಶನ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭ ದಕ್ಷಿಣ ವಲಯದ ಡಿಐಜಿಪಿ ಡಾ. ಎಂ.ಬಿ.ಬೋರಲಿಂಗಯ್ಯ, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷ ಕೆ.ಎಸ್.ಸುಂದರ್ ರಾಜ್, ಕೆಎಸ್ಪಿಎಸ್ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಅ.20 : ಒಕ್ಕಲಿಗ ಸಮುದಾಯದ ವಿರುದ್ಧ ಪ್ರೊ. ಕೆ.ಎಸ್.ಭಗವಾನ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮತ್ತು ಅವರನ್ನು ಬಂಧಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಪ್ರೊ. ಕೆ.ಎಸ್.ಭಗವಾನ್ ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದರು. ಸಂಘದ ಕಾನೂನು ಸಲಹೆಗಾರ ಎಂ.ಎ.ನಿರಂಜನ್ ಮಾತನಾಡಿ, ಭಗವಾನ್ ಅವರು ತಮ್ಮ ಭಾಷಣದಲ್ಲಿ ಒಂದು ಸಮುದಾಯವನ್ನು ಅವಹೇಳನ ಮಾಡಿ ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದರು. ಈ ಹಿಂದೆಯು ಇದೇ ರೀತಿ ಮಾಡಲಾಗಿದೆ, ಇದನ್ನು ಹೀಗೆ ಮುಂದುವರೆಯಲು ಬಿಟ್ಟರೆ ಸಂಘರ್ಷಕ್ಕೆ ದಾರಿ ಮಾಡಿದಂತಾಗುತ್ತದೆ. ಆದ್ದರಿಂದ ಪ್ರೊ. ಭಗವಾನ್ ರನ್ನು ಬಂಧಿಸಿ ಕರ್ನಾಟಕದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು. ಶಾಂತಿಯುತವಾಗಿದ್ದ ಒಕ್ಕಲಿಗರ ಮನಸ್ಸನ್ನು ಕೆರಳಿಸಿದ್ದಾರೆ, ಒಬ್ಬ ವ್ಯಕ್ತಿ ಕೇವಲ ವಿದ್ಯಾವಂತರಾದರೆ ಸಾಲದು, ಪ್ರಜ್ಞಾವಂತರಾಗಿರಬೇಕು. ಆದರೆ, ಇವರಲ್ಲಿ ಅಂತಹ…
ಮಡಿಕೇರಿ ಅ.20 : ಪ್ರಸಕ್ತ(2023-24) ಸಾಲಿಗೆ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಾಕ್ರಮವು ನವೆಂಬರ್, 02 ರಿಂದ 2024 ರ ಜನವರಿ, 31 ರವರೆಗೆ ನಡೆಯಲಿದ್ದು, ಈ ಸಂಬಂಧ ಕೊಡಗು ಜಿಲ್ಲೆಯಿಂದ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು (ಸಾಮಾನ್ಯ ವರ್ಗ-1) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್, 25 ರವರೆಗೆ ಅರ್ಜಿಯನ್ನು ಕಚೇರಿಯಲ್ಲಿ/ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ ವಲಯ), ಮಡಿಕೇರಿ, ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರ, ಇಲಾಖಾ ವೆಬ್ಸೈಟ್ https://horticulturedir.karnataka.gov.in ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅ.27 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್ಎಸ್ಎಲ್ಸಿ ಅಂಕಪಟ್ಟಿ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್ಟಿಸಿ, ತಂದೆ/ತಾಯಿಯವರ ಒಪ್ಪಿಗೆ ಪತ್ರ ಮತ್ತಿತರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ ವಲಯ), ಮಡಿಕೇರಿ ಇಲ್ಲಿಗೆ ಖುದ್ದು…
ಮಡಿಕೇರಿ ಅ.20 : ಹಾಕತ್ತೂರು-ಬಿಳಿಗೇರಿ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಫಕೀರ್ ಬಾವ (ಖ.ಸಿ) ಅವರ ಹೆಸರಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು 2024 ಮಾರ್ಚ್ 3, 4 ಮತ್ತು 5 ರಂದು ಉಲಮಾ-ಉಮರ, ಸಾದತುಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಬದರ್ ಜಮಾಅತ್ ಸಮಿತಿ ಕಾರ್ಯದರ್ಶಿ ಎಸ್.ಎ.ಅಬ್ದುಲ್ ಖಾದರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 93538 34014 ನ್ನು ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಅ.20 : ರೆಡ್ಕ್ರಾಸ್ ಸಂಸ್ಥೆ ವತಿಯಿಂದ ಮಡಿಕೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿಯ ಕಸಬಾ ವೃತ್ತ ಮತ್ತು ಚೆರಂಬಾಣೆ ವೃತ್ತಕ್ಕೆ ಸಂಬಂಧಿಸಿದ 52 ಅಂಗನವಾಡಿ ಕೇಂದ್ರಗಳಿಗೆ ಪ್ರಥಮ ಚಿಕಿತ್ಸೆ ಬಾಕ್ಸ್, ಮಾಸ್ಕ್, ಬಕೆಟ್ಗಳನ್ನು ಅಂಗನವಾಡಿ ಕೇಂದ್ರದ ಬಳಕೆಗಾಗಿ ವಿತರಣೆ ಮಾಡಲಾಯಿತು. ಮಾತೃವಂದನ ಯೋಜನೆ ಅಡಿ ಕಾರ್ಯಕರ್ತರೆ ಮೊಬೈಲ್ನಲ್ಲಿ ಅರ್ಜಿಗಳನ್ನು ದಾಖಲೆ ಮಾಡುವ ಕುರಿತು ತರಬೇತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ರವೀಂದ್ರ, ಕಾರ್ಯದರ್ಶಿ ಮುರುಳಿ ಅವರು ರೆಡ್ಕ್ರಾಸ್ ಸಂಸ್ಥೆ ವತಿಯಿಂದ ಜಿಲ್ಲಾಮಟ್ಟದ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಿದ್ದು, ಎಲ್ಲಾ ಫಲಾನುಭವಿಗಳಿಗೆ ಇದು ತಲುಪುವಂತೆ ಸಹಕರಿಸಲು ಕೋರಿದರು. ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು ಮಾತನಾಡಿ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಸಹಕಾರ, ಮಾರ್ಗದರ್ಶನ ನೀಡಲು ಕೋರಿದರು. ಇಲಾಖೆಯ ಯೋಜನೆಗಳನ್ನು ಸೂಕ್ತ ಸಮಯದಲ್ಲಿ ಸೂಕ್ತ ಫಲಾನುಭವಿಗಳಿಗೆ ತಲುಪಿಸಲು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಪೋಷಣ್ ಅಭಿಯಾನ…
ಮಡಿಕೇರಿ ಅ.20 : ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.28 ರಂದು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಅರ್ಥಪೂರ್ಣವಾಗಿ ಆಯೋಜಿಸುವ ಸಂಬಂಧ ಪೂರ್ವಭಾವಿ ಸಭೆಯು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮ ಆಯೋಜನೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಆಯೋಜಿಸಬೇಕು. ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಐಟಿಡಿಪಿ ಇಲಾಖಾ ಅಧಿಕಾರಿ ಸೂಚಿಸಿದರು. ಮಹರ್ಷಿ ವಾಲ್ಮೀಕಿ ಕುರಿತು ಮಾತನಾಡುವ ಭಾಷಣಕಾರರನ್ನು ಕರೆಸುವುದು. ಎಸ್ಎಸ್ಎಲ್ಸಿ, ಪಿಯುಸಿ ಪದವಿಯಲ್ಲಿ ಹೆಚ್ಚು ಅಂಕ ಪಡೆದವರನ್ನು ಸನ್ಮಾನಿಸುವುದು ಸೇರಿದಂತೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು. ಸಭೆಯ ಆರಂಭದಲ್ಲಿ ಮಾತನಾಡಿದ ಕುಡಿಯರ ಮುತ್ತಪ್ಪ ಅವರು ಪರಿಶಿಷ್ಟ ಪಂಗಡದಲ್ಲಿ ಹಲವು ಸಮಾಜಗಳಿದ್ದು, ವಾಲ್ಮೀಕಿ ಸಮಾಜದ ಜೊತೆ ಯರವ, ಕುಡಿಯ, ಮಲೆ ಕುಡಿಯ, ಸೋಲಿಗ, ಕಾಡುಕುರುಬ, ಜೇನುಕುರುಬ, ಬೆಟ್ಟ ಕುರುಬ ಹೀಗೆ ಹಲವು ಸಮಾಜಗಳಿದ್ದು, ಇತರ ಸಮಾಜದಲ್ಲಿ ದುಡಿದವರನ್ನು ಗುರುತಿಸಿ…
ವಿರಾಜಪೇಟೆ ಅ.20 : ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಶ್ರೀ ವನದುರ್ಗಿ ಗುಡಿಯಲ್ಲಿ ನವರಾತ್ರಿ ಪ್ರಯುಕ್ತ ಪಂಚಮಿ ಉತ್ಸವ ಶ್ರದ್ಧಾಭಕ್ತಿಯಿಂದ ಜರಿಗಿತು. ದೇವಾಲಯದ ಪ್ರಧಾನ ಅರ್ಚಕ ವಿಶ್ವನಾಥ್ ಭಟ್ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಕುಂಕುಮಾರ್ಚನೆ, ದೇವಿ ಅಷ್ಟೋತ್ತರ ಪಠಣ ಹಾಗೂ ಪಾರಾಯಣ ಮಾಡಿ ವಿಶೇಷ ಪೂಜಾ ಸೇವೆಯನ್ನು ಸಲ್ಲಿಸಿದರು. ಬಳಿಕ ಮಹಾ ಮಂಗಳಾರತಿ ನೆರವೇರಿಸಿ ಪ್ರಾರ್ಥನೆ ಸಲ್ಲಿಸಿದರು. ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು. ವಿನಾಯಕ ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಕುಶಾಲನಗರ ಅ.20 : ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ 14 ವರ್ಷದ ಒಳಗಿನ ಬಿಭಾಗದಲ್ಲಿ ಕುಶಾಲನಗರದ ವಿಶಾಲ್ ಗಣನೀಯ ಸಾಧನೆ ತೋರುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕನಕಪುರದ ವಡೇರಪುರದಲ್ಲಿನ ಜೈನ್ ಕ್ರೀಡಾ ಶಾಲೆಯಲ್ಲಿ ನಡೆದ ಪಂದ್ಯಾವಳಿಯಲ್ಲಿ ಪಾಲ್ಗೊಂಡು ವಿಶೇಷ ಸಾಧನೆ ತೋರಿರುವ ವಿಶಾಲ್ ಕಾಫಿ ಉದ್ಯಮಿ ಡಿ.ಎಂ.ಆನಂದ್ ಹಾಗೂ ಭವ್ಯ ಅವರ ಪುತ್ರ. ಇವನು ಕುಶಾಲನಗರದ ಉದ್ಗಂ ಶಾಲೆಯಲ್ಲಿ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯತ್ತ ಹೆಚ್ಚಿನ ಉತ್ಸುಕತೆ ತೋರುವ ಮೂಲಕ ಹಲವಾರು ಪಂದ್ಯಾವಳಿಗಳಲ್ಲಿ ಭಾಗವಹಿಸಿ ಹಲವಾರು ಪ್ತಶಸ್ತಿ ಗಳಿಸಿದ್ದಾನೆ.
ಮಡಿಕೇರಿ ಅ.20 : ‘ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8 ನೇ ತರಗತಿ) ನೇಮಕಾತಿ-2022”ರ ನೇಮಕಾತಿಗೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯದ ರಿಟ್ ಪಿಟಿಷನ್ ಅಕ್ಟೋಬರ್ 12, 2023 ರ ವಿಭಾಗೀಯ ಪೀಠದ ತೀರ್ಪಿನಂತೆ ಇದೇ ಮಾ.8 2023 ರಂದು ಪ್ರಕಟಿತ 1:1 ರ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸೆಲಿಂಗ್ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಅಕ್ಟೋಬರ್, 19 ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ https://schooleducation.karnataka.gov.in ನಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ಮತ್ತು ವಿಜ್ಞಾನ, ಸಮಾಜ ಪಾಠಗಳು, ಜೀವಶಾಸ್ತ್ರ ಹಾಗೂ ಆಂಗ್ಲ ಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಲಿಂಗ್ ಪ್ರಕ್ರಿಯೆಯು ಅಕ್ಟೋಬರ್, 21 ರಂದು ಬೆಳಗ್ಗೆ 10 ಗಂಟೆಯಿಂದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ. ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್ಸೈಟ್ನಲ್ಲಿ ಇರುವಂತೆ ಎಲ್ಲಾ ಅಗತ್ಯ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಕೌನ್ಸೆಲಿಂಗ್ ಸ್ಥಳದಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಸಂಬಂಧಪಟ್ಟ ಅಗತ್ಯ ದಾಕಲೆಗಳೊಂದಿಗೆ…






