ಲೇಖಕ: admin

ಮಡಿಕೇರಿ NEWS DESK ಡಿ.28 : “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025” ನ್ನು ವಿರೋಧಿಸಿ ಡಿ.29 ರಂದು ಸೋಮವಾರಪೇಟೆ ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಸೋಮವಾರಪೇಟೆ ಬಿಜೆಪಿಯ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ. ಸೋಮವಾರಪೇಟೆ ಪಟ್ಟಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಖಂಡಿಸುವುದಾಗಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಟೀಕೆ ಮತ್ತು ಚರ್ಚೆ ಮಾಡುವುದನ್ನು ಅಥವಾ ಸತ್ಯವನ್ನು ಬಹಿರಂಗ ಪಡಿಸುವುದನ್ನು ಕೂಡ ದ್ವೇಷ ಎಂದು ಪರಿಗಣಿಸುವ ಹುನ್ನಾರ ಈ ವಿಧೇಯಕದ ಹಿಂದೆ ಇದೆ ಎನ್ನುವ ಸಂಶಯ ಮೂಡುತ್ತಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರಕಾರ ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

Read More

ಮಡಿಕೇರಿ NEWS DESK ಡಿ.27 : ಕೊಡವ ಹಾಕಿ ಅಕಾಡೆಮಿ ವತಿಯಿಂದ ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ ಯ ಎರಡನೇ ದಿನದ ಪಂದ್ಯಾಟದಲ್ಲಿ ಚೆಪ್ಪುಡಿರ, ಪರದಂಡ, ಕುಪ್ಪಂಡ ಹಾಗೂ ಕುಲ್ಲೇಟಿರ ಗೆಲುವು ದಾಖಲಿಸಿದವು. ಚೆಪ್ಪುಡಿರ ಮತ್ತು ಮುಕ್ಕಾಟಿರ ತಂಡಗಳ ನಡುವಿನ ಪಂದ್ಯದಲ್ಲಿ ಚೆಪ್ಪುಡಿರ ತಂಡ 9-0 ಗೋಲುಗಳ ಅಂತರದಲ್ಲಿ ಭರ್ಜರಿ ಗೆಲುವು ದಾಖಲಿಸಿತು. ಚೆಪ್ಪುಡಿರ ಪ್ರಣವ್ ಹಾಗೂ ನರೇನ್ ತಲಾ ಎರಡು, ಸೋಮಣ್ಣ, ಚೇತನ್, ಅಯ್ಯಪ್ಪ, ನಾಚಪ್ಪ, ದಿವನ್ ತಲಾ ಒಂದು ಗೋಲು ಬಾರಿಸಿದರು. ಕೋಣೇರಿರ ಮತ್ತು ಪರದಂಡ ನಡುವಿನ ಪಂದ್ಯದಲ್ಲಿ ಪರದಂಡ ತಂಡ 6-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಪರದಂಡ ಚೆಶ್ವಿನ್ ಹಾಗೂ ರಂಜನ್ ಅಯ್ಯಪ್ಪ ತಲಾ ಎರಡು, ಪ್ರಧಾನ್, ಧೀರಜ್ ಮುತ್ತಣ್ಣ ತಲಾ ಒಂದು ಗೋಲು ದಾಖಲಿಸಿದರು. ಕೂತಂಡ ಮತ್ತು ಕುಪ್ಪಂಡ ನಡುವಿನ ಪಂದ್ಯದಲ್ಲಿ ಕುಪ್ಪಂಡ ತಂಡ 3-2 ಗೋಲುಗಳ ಅಂತರದಲ್ಲಿ ಗೆಲುವು ದಾಖಲಿಸಿತು. ಕುಪ್ಪಂಡ…

Read More

ಸೋಮವಾರಪೇಟೆ NEWS DESK ಡಿ.27 : ರೈಲು ಡಿಕ್ಕಿಯಾಗಿ ಸೋಮವಾರಪೇಟೆ ತಾಲ್ಲೂಕಿನ ಬಾಣಾವಾರ ಗ್ರಾಮದ ನಿವಾಸಿಯೊಬ್ಬರು ಮೃತಪಟ್ಟ ಘಟನೆ ಕಾಸರಗೋಡು ರೈಲು ನಿಲ್ದಾಣದಲ್ಲಿ ನಡೆದಿದೆ. ಸೋಮವಾರಪೇಟೆ ಕಂದಾಯ ಇಲಾಖೆಯ ಹೊರಗುತ್ತಿಗೆ ನೌಕರ ರಾಜೇಶ್ (35) ಮೃತಪಟ್ಟವರಾಗಿದ್ದಾರೆ. ರೈಲಿನಿಂದ ಇಳಿದು ಮತ್ತೊಂದು ಫ್ಲಾಟ್‌ಫಾರ್ಮ್ಗೆ ಏರಲು ಯತ್ನಿಸುತ್ತಿದ್ದ ಸಂದರ್ಭ ಗೂಡ್ಸ್ ರೈಲು ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ರಾಜೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಇಂದು ಮೃತದೇಹವನ್ನು ಕಾಸರಗೋಡಿನಿಂದ ಬಾಣಾವಾರ ಗ್ರಾಮಕ್ಕೆ ತಂದು ಅಂತ್ಯಕ್ರಿಯೆ ನಡೆಸಲಾಯಿತು.

Read More

ಮಡಿಕೇರಿ ಡಿ.27 NEWS DESK : ಕುಶಾಲನಗರದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಳಶೋತ್ಸವದ ಅಂಗವಾಗಿ ‘ವಾಸವಿ ಸಪ್ತಾಹ-2026’ ಜ.2 ರಿಂದ 8ರವರೆಗೆ ವಿವಿಧ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಮತ್ತು ಆರ್ಯವೈಶ್ಯ ಮಂಡಳಿ ಅಧ್ಯಕ್ಷರಾದ ಬಿ.ಆರ್. ನಾಗೇಂದ್ರ ಪ್ರಸಾದ್ ಅವರು ಈ ಕುರಿತು ಮಾಹಿತಿ ನೀಡಿ, 1947ರಲ್ಲಿ ಶ್ರೀ ಮೈಲಾರ ಶೆಟ್ಟರ ಅಧ್ಯಕ್ಷತೆಯಲ್ಲಿ ಪ್ರತಿಷ್ಠಾನಪನೆಗೊಂಡ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಕಾರ್ಯ 2014ರಲ್ಲಿ ನಡೆಯಿತು. ಪುನರ್ ಪ್ರತಿಷ್ಠಾಪನೆಗೊಂಡ ದೇವಸ್ಥಾನದಲ್ಲಿ 12 ವರ್ಷಗಳಿಗೊಮ್ಮೆ ನಡೆಯಬೇಕಾದ ಪೂಜಾ ಕಾರ್ಯಗಳು, ಕುಂಬಾಭಿಷೇಕ, ಬ್ರಹ್ಮ ಕಳಶೋತ್ಸವ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಜ.29 ರಿಂದ 2ರವರೆಗೆ ಜರುಗಲಿದೆಯೆಂದು ತಿಳಿಸಿದರು. :: ವಾಸವಿ ಸಪ್ತಾಹ :: ಬ್ರಹ್ಮ ಕಳಶೋತ್ಸವದ ಹಿನ್ನೆಲೆಯಲ್ಲಿ ‘ವಾಸವಿ ಸಪ್ತಾಹ’ವನ್ನು ಕುಶಾಲನಗರದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ. ಸಪ್ತಾಹದ ಆರಂಭಿಕ ದಿನವಾದ ಜ.2 ರಂದು ಬೆಳಿಗ್ಗೆ ‘ಮಾದಕ ವ್ಯಸನ ಮುಕ್ತ…

Read More

ಮಡಿಕೇರಿ ಡಿ.27 NEWS DESK : ಮಡಿಕೇರಿಯ ಕೊಡಗು ವಿದ್ಯಾಲಯ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ  ಆಚರಿಸಲಾಯಿತು. ಕಾರ್ಯಕ್ರಮವನ್ನು 5ನೇ ತರಗತಿಯ ಮಕ್ಕಳು ಉತ್ಸಾಹದಿಂದ ನಡೆಸಿಕೊಟ್ಟರು. ಪ್ರಾರ್ಥನೆಯೊಂದಿಗೆ ಪ್ರಾಂಶುಪಾಲರಾದ ಸುಮಿತ್ರ ಕೆ.ಎಸ್., ಆಡಳಿತ ನಿರ್ವಹಣಾ ಅಧಿಕಾರಿ ರವಿ ಪಿ., ಕೋ-ಆರ್ಡಿನೇಟರ್ ಸುಮಂತ್ ಹಾಗೂ ಶಿಕ್ಷಕರು ಕ್ಯಾಂಡಲ್ ಹಚ್ಚುವ ಮೂಲಕ ಕ್ರಿಸ್ಮಸ್ ಸಂದೇಶವನ್ನು ಸಾರಿದರು. ಮಕ್ಕಳಿಂದ ಮನಮೋಹಕ ಸ್ವಾಗತ ನೃತ್ಯ ಪ್ರದರ್ಶನ ನಡೆಯಿತು. ಫ್ರೀ ಸ್ಟೈಲ್ ಡಾನ್ಸ್ ಅನ್ನು ಮಕ್ಕಳು ಕೊರಿಯೋಗ್ರಾಫರ್ ಅಭಿಷೇಕ್ ಮತ್ತು ಅವರ ತಂಡದ ಮಾರ್ಗದರ್ಶನದಲ್ಲಿ ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿ ಸುದೀಪ್ತ ಕ್ರಿಸ್ಮಸ್ ದಿನದ ಮಹತ್ವದ ಬಗ್ಗೆ ಮಾತನಾಡಿ, ಯೇಸು ಕ್ರಿಸ್ತರ ಜನನವು ಪ್ರೀತಿ, ಶಾಂತಿ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾಗಿದ್ದು, ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ನೀಡಿದರು. ಕ್ರಿಸ್ಮಸ್ ಹಬ್ಬದ ಮಹತ್ವವನ್ನು ಸಾರುವಂತೆ ಮಕ್ಕಳಿಂದ ಯೇಸು ವಿನ ಜನನದ ಕಥೆಯನ್ನು ಆಧರಿಸಿದ ನಾಟಕ ಪ್ರದರ್ಶನ ನಡೆಯಿತು. ಕ್ರಿಸ್ಮಸ್ ಹಾಡುಗಳನ್ನು ಹಾಡುವ ಮೂಲಕ ಹಬ್ಬದ ಸಂಭ್ರಮವನ್ನು…

Read More

ಮಡಿಕೇರಿ ಡಿ.27 NEWS DESK : ಬೆಂಗಳೂರಿನ ಸಮಥ೯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನವು ನೀಡುವ ವಾಷಿ೯ಕ ಪ್ರಶಸ್ತಿಗೆ ಪತ್ರಿಕೋಧ್ಯಮ ಕ್ಷೇತ್ರದಿಂದ ಮಡಿಕೇರಿಯ ಅನಿಲ್ ಹೆಚ್.ಟಿ. ಆಯ್ಕೆಯಾಗಿದ್ದಾರೆ.  ಸಮಥ೯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಟಾನವು ವಾಷಿ೯ಕವಾಗಿ ಪತ್ರಿಕೋದ್ಯಮ, ಸಮಾಜಸೇವೆ, ಆರೋಗ್ಯ, ಶಿಕ್ಷಣ, ಸಾಹಿತ್ಯ, ಉದ್ಯಮ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ಗಾಂಧಿ ಪ್ರಿಯ ಹೆಸರಿನ ಪ್ರಶಸ್ತಿ ನೀಡುತ್ತಿದೆ. ಈ ವಷ೯ದ ಗಾಂಧಿ ಪ್ರಿಯ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದಿಂದ ಅನಿಲ್ ಹೆಚ್.ಟಿ. ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮ, ವಿದ್ಯುನ್ಮಾನ, ಬಾನುಲಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಸೇವೆಗಳಲ್ಲಿ ಅನಿಲ್ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರತಿಷ್ಟಾನದ ಅಧ್ಯಕ್ಷ ಎಸ್.ಆರ್. ವಿಜಯಸಮಥ್೯ ತಿಳಿಸಿದ್ದಾರೆ.  ಪ್ರಶಸ್ತಿ ಪ್ರದಾನ ಸಮಾರಂಭವು ಡಿ. 28 ರಂದು  ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯ ಕುವೆಂಪು ಸಭಾಂಗಣದಲ್ಲಿ ಆಯೋಜಿತವಾಗಿದ್ದು ವಿಶ್ರಾಂತ ನ್ಯಾಯಮೂತಿ೯ ಪಾಲಾಕ್ಷಪ್ಪ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

Read More

ವಿರಾಜಪೇಟೆ ಡಿ.27 NEWS DESK :  ಮಲೆತಿರಿಕೆ ಶ್ರೀ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಶ್ರಿ ಅಯ್ಯಪ್ಪ ಸ್ವಾಮಿ ದೇವಾಲಯದ ವಾರ್ಷಿಕ ಪೂಜಾ ಮಹೋತವವು ಜ.1ರ ವರೆಗೆ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ. ಈಗಾಗಲೇ ವಾರ್ಷಿಕ ಪೂಜಾ ಮಹೋತವವು ಆರಂಭಗೊಂಡಿದ್ದು, ಕ್ಷೇತ್ರ ಪಾಲಕ ಗುಳಿಗನ ಪೂಜೆ ಶ್ರದ್ಧಾ ಭಕ್ತಿಗಳಿಂದ ನಡೆಯಿತು.  ಇಂದು ಸಂಜೆ (ಡಿ.27) ವರದ ವಿನಾಯಕ ಸೇವಾ ಸಮಿತಿ ವತಿಯಿಂದ ಮಂಡಲ ಪೂಜೆ ನಡೆಯಲಿದೆ. ಜ.1 ರಂದು ಪ್ರಾಥ:ಕಾಲ 5.30 ಗಂಟೆಗೆ ಗಣಪತಿ ಹೋಮ, ಲಕ್ಷ್ಮಿ ಪೂಜೆ, ಸರಸ್ವತಿ ಪೂಜೆ ಜರುಗಲಿದೆ. 10  ಗಂಟೆಗೆ ಲಕ್ಷಾರ್ಚನೆ ನಡೆಯಲಿದೆ. ಮಾಹಾಪೂಜೆ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ದೇವಾಲಯದ ಪುನರ್ ಪ್ರತಿಷ್ಠಾನ ಕಾರ್ಯಕ್ರಮ‌ ನಡೆಯಲಿರುವುದರಿಂದ ಉತ್ಸವ ಅಂಗವಾಗಿ ನಡೆಯಲಿರುವ ಶೋಭಯಾತ್ರೆ ರದ್ದುಗೊಳಿಸಲಾಗಿದ್ದು ಆಲಯದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಅಯ್ಯಪ್ಪ ಸೇವಾ ಸಮಿತಿ ಮನವಿ ಮಾಡಿದೆ. ವರದಿ : ಕಿಶೋರ್ ಕುಮಾರ್ ಶೆಟ್ಟಿ

Read More

ಮಡಿಕೇರಿ ಡಿ.27 NEWS DESK : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಇಂದುವಿಶೇಷ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದಲ್ಲಿ ಮುಂಜಾನೆಯಿಂದಲೇ ಕವಟ ಪೂಜೆ, ತೈಲಾಭ್ಯಂಜನ, ಪಂಚಭೂತ ಅಭಿಷೇಕ, ಧ್ವಜಸ್ತಂಭ ಪೂಜೆ, ದೇವರು ಜಳಕಕ್ಕೆ ಹೊರಡುವುದು, ದೇವಾಲಯದ ಆವರಣದಲ್ಲಿ ನೃತ್ಯ ಬಲಿ ಸೇರಿದಂತೆ  ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಗ್ರಾಮದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ಮಡಿಕೇರಿ ಡಿ.27 NEWS DESK :  ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಕಂಡುಕೊಳ್ಳುವುದರೊಂದಿಗೆ ತಾವು ಓದಿದ ವಿದ್ಯಾಸಂಸ್ಥೆಯ ಹೆಸರಿಗೆ ಚ್ಯುತಿ ಬಾರದಂತೆ ಜೀವನ ಸಾಗಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಲಹೆ ನೀಡಿದರು. ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ಅವರು ಮಾತನಾಡಿದರು.  ನಾಡಿನಾದ್ಯಂತ ಖ್ಯಾತಿ ಹೊಂದಿರುವ ಕಾವೇರಿ ಕಾಲೇಜು, ವಿದ್ಯಾರ್ಥಿಗಳ ಭವಿಷ್ಯವನ್ನು ಹಾಗೂ ಸರ್ವತೋಮುಖ ಪ್ರಗತಿಯನ್ನು ಗುರುತಿಸುವಲ್ಲಿ ಹಾಗೂ ಅವರ ಭವಿಷ್ಯವನ್ನು ವಿನ್ಯಾಸಗೊಳಿಸುವಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿಯ ಆಡಳಿತ ಮಂಡಳಿ ಹಾಗೂ ಪ್ರಾಧ್ಯಾಪಕ ವೃಂದದವರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು, ಇದು ಕೊಡಗಿನ ಏಳಿಗೆಗೂ ಕೊಡುಗೆ ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  ಸಂಸ್ಥೆಯು ಸದಾ ವಿದ್ಯಾರ್ಥಿಗಳ ಏಳಿಗೆಯನ್ನು ಬಯಸುತ್ತಿದ್ದು ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಹೆಸರು ಮಾಡಿದರೆ ಅದು ಸಂಸ್ಥೆಗೆ ಒಳ್ಳೆಯ ಹೆಸರು ತಂದುಕೊಡುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ  ಕಾವೇರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು…

Read More

ಕುಶಾಲನಗರ NEWS DESK  ಡಿ.27 : ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕ್ಯಾಮರಗಳ ಅಳವಡಿಕೆ ಮೂಲಕ ಅಪರಾಧ ಮುಕ್ತ ವ್ಯವಸ್ಥೆ ನಿರ್ಮಾಣವಾಗಲು ಸಹಕಾರಿಯಾಗುತ್ತದೆ ಎಂದು ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ ಪಿ ದಿನೇಶ್ ಕುಮಾರ್ ತಿಳಿಸಿದ್ದಾರೆ. ಅವರು ಕುಶಾಲನಗರ ಗುಮ್ಮನಕೊಲ್ಲಿ ಬಸವೇಶ್ವರ ಬಡಾವಣೆ, ಬಯಲು ಬಸವೇಶ್ವರ ದೇವಾಲಯ ಸಮಿತಿ ಕುಶಾಲನಗರದ ವ್ಯಾಪ್ತಿಯ ಆಯಕಟ್ಟಿನ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಉದ್ಘಾಟನೆ ಮತ್ತು ಅದರ ನಿರ್ವಹಣೆಗಾಗಿ ಪೊಲೀಸ್ ಇಲಾಖೆ ಮತ್ತು ಪುರಸಭೆಗೆ ಹಸ್ತಾಂತರ ಮಾಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಸಕ್ತ ದಿನಗಳಲ್ಲಿ ಅಪರಾಧಗಳನ್ನು ಪತ್ತೆಹಚ್ಚಲು ಸಿಸಿ ಕ್ಯಾಮೆರಾ ಮಹತ್ತರ ಪಾತ್ರ ವಹಿಸುತ್ತಿದೆ ಎಂದ ಅವರು, ಪ್ರತಿಯೊಬ್ಬರು ತಮ್ಮ ಮನೆ ವ್ಯಾಪಾರ ವಹಿವಾಟು ಮಾಡುವ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಆ ಮೂಲಕ ಅಪರಾಧ ತಡೆ ಸಾಧ್ಯ ಎಂದರು.  ಸಮಿತಿ ಮೂಲಕ ಅತ್ಯಾಧುನಿಕ ತಂತ್ರಜ್ಞಾನದ ಕ್ಯಾಮೆರಾಗಳನ್ನು ಸಾರ್ವಜನಿಕವಾಗಿ  ಅಳವಡಿಸಿ ಸ್ವಚ್ಛ ಹಾಗೂ ಸ್ವಸ್ಥ ಸಮಾಜ ನಿರ್ಮಾಣದ ಗುರಿಯೊಂದಿಗೆ ಸಮಾಜಮುಖಿ ಸೇವೆ ಸಲ್ಲಿಸಿರುವ ಬಗ್ಗೆ ಶ್ಲಾಘನೆ…

Read More