ಮಡಿಕೇರಿ ಅ.18 : ನಿಷೇಧಿತ ಮಾದಕ ವಸ್ತು MDMA ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಮೂಲದ ಅಮೀರ್.ಟಿ.ಎಂ(28) ಹಾಗೂ ಮಹಮ್ಮದ್ ಶಬೀರ್.ಕೆ (30) ಬಂಧಿತ ಆರೋಪಿಗಳಾಗಿದ್ದಾರೆ. ಇವರ ಬಳಿಯಿಂದ 20 ಗ್ರಾಂ MDMA ಮಾದಕ ವಸ್ತು ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಜಗದೀಶ್.ಎಂ, ಡಿಸಿಆರ್ಬಿ ಪಿಐ ಐ.ಪಿ.ಮೇದಪ್ಪ, ಮಡಿಕೇರಿ ಸಿಪಿಐ ಅನೂಪ್ ಮಾದಪ್ಪ, ನಗರಠಾಣೆ ಪಿಎಸ್ಐ ಲೋಕೇಶ್, ಸಿಬ್ಬಂದಿಗಳು ಹಾಗೂ ಡಿಸಿಆರ್ಬಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
ಲೇಖಕ: admin
ಮಡಿಕೇರಿ ಅ.18 : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಪಲ್ಟಿಯಾದ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಮರಗೋಡು ಚೆಲ್ಲಂಗೋಡು ಸೇತುವೆ ಬಳಿ ನಡೆದಿದೆ. ಅಸ್ಸಾಂ ಮೂಲದ ಕಾರ್ಮಿಕ ರಜಾಕ್ (55) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಗಾಯಗೊಂಡಿರುವ ನಾಲ್ವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪು ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮಡಿಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಅ.18 : ಕಾವೇರಿ ತುಲಾಸಂಕ್ರಮಣದ ಹಿನ್ನೆಲೆ ಕಾವೇರಿ ತೀರ್ಥೋದ್ಭವದ ಮರುದಿನ ದೇವಟ್ ಪರಂಬುವಿಗೆ ಭೇಟಿ ನೀಡಿದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಸದಸ್ಯರು ಅಗಲಿದ ಹಿರಿಯರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕೊಡವ ಸಂಪ್ರದಾಯದಂತೆ ದೋಸೆ, ಪುಟ್ ಮತ್ತು ಬೊತ್ತ್ ಬಳ್ಳಿಯನ್ನು ಇರಿಸಿ, ಲೋಕ ಕಲ್ಯಾಣಕ್ಕಾಗಿ ಕಾವೇರಿ ಮಾತೆಯನ್ನು ಸ್ಮರಿಸಿದರು. ದೇವಟ್ ಪರಂಬು ನರಮೇಧದಲ್ಲಿ ಮೃತಪಟ್ಟ ಹಿರಿಯರಿಗೆ ಗೌರವ ಸಲ್ಲಿಸಿದ ನಾಚಪ್ಪ ಅವರು, ಕೊಡವರ ಹಿತ ಕಾಯಲು ಸಂವಿಧಾನಾತ್ಮಕ ಹೋರಾಟಕ್ಕೆ ಸಿಎನ್ಸಿ ಬದ್ಧವಾಗಿದೆ ಎಂದರು. ಕೊಡವರ ಸಮಗ್ರ ಸಬಲೀಕರಣಕ್ಕಾಗಿ ಸಂವಿಧಾನದ ಆರ್ಟಿಕಲ್ 244 R/w 6ನೇ ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಕೌನ್ಸಿಲ್ ಅನ್ನು ರಚಿಸಬೇಕು. ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕು ನೀಡಬೇಕು ಎಂದು ಒತ್ತಾಯಿಸಿದ ಅವರು, ಈ ಕುರಿತು ಈಗಾಗಲೇ ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ನ್ಯಾಯಾಂಗದ ಮೂಲಕ ಹೋರಾಟ ನಡೆಸುತ್ತಿದ್ದು, ನಮಗೆ ಜಯ…
ಮಡಿಕೇರಿ ಅ.18 : ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಬೀದರ್ ನಲ್ಲಿ ನಡೆದ ವಿಶ್ವವಿದ್ಯಾನಿಲಯದ 13 ನೇ ಘಟಿಕೋತ್ಸವದಲ್ಲಿ ಮಡಿಕೇರಿ ತಾಲ್ಲೂಕಿನ ಕಗ್ಗೋಡ್ಲು ಗ್ರಾಮದ ಮಂದ್ರೀರ ನಮೃತಾ (ನೀಷ್ಮ) ಅವರು ಚಿನ್ನದ ಪದಕ ಪಡೆದರು. 2020-22 ಶೈಕ್ಷಣಿಕ ವರ್ಷದಲ್ಲಿ ಮೀನುಗಾರಿಕೆ ವಿಜ್ಞಾನದಲ್ಲಿ ಸ್ನಾತಕೋತ್ತರ ಅವಧಿಯಲ್ಲಿ ಜಲವಾಸಿ ಪ್ರಾಣಿಗಳ ಆರೋಗ್ಯ ನಿರ್ವಹಣೆ ವಿಷಯದಲ್ಲಿ ಅವರು ಪಡೆದ ಅತ್ಯುನ್ನತ ದರ್ಜೆಯ ಅಂಕಗಳಿಗೆ ವಿಶ್ವವಿದ್ಯಾಲಯದ ಚಿನ್ನದ ಪದಕ, ಪ್ರೊ.ಎಚ್.ಪಿ.ಸಿ.ಶೆಟ್ಟಿ ಚಿನ್ನದ ಪದಕ ಮತ್ತು ಪ್ರೊ.ಪಿ.ಟೌರೊ ಚಿನ್ನದ ಪದಕವನ್ನು ನೀಡಿ ಗೌರವಿಸಲಾಗಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ನಮೃತಾ ಅವರನ್ನು ಸನ್ಮಾನಿಸಿದರು. ಇವರು ಕಗ್ಗೋಡ್ಲು ಗ್ರಾಮದ ನಿವಾಸಿ ಮಂದ್ರೀರ ರಾಮಕೃಷ್ಣ (ರಾಜ) ಹಾಗೂ ದಿ.ಧನ್ಯವೇಣಿ ಎಂ.ಆರ್ (ವಿನುತ) ಅವರ ಪುತ್ರಿ.
ಮಡಿಕೇರಿ ಅ.18 : ಮಡಿಕೇರಿ ದಸರಾ ಪ್ರಯುಕ್ತ ಅ.22 ರಂದು ಆಯೋಜಿಸಲ್ಪಟ್ಟಿದ್ದ ಭಾರತದ ಹೆಸರಾಂತ ಗಾಯಕ ವಿಜಯಪ್ರಕಾಶ್ ಗಾಯನ ಕಾಯ೯ಕ್ರಮವನ್ನು ಅ.23 ರಂದು ಆಯುಧ ಪೂಜೆಗೆ ನಿಗಧಿ ಪಡಿಸಲಾಗಿದೆ. ವಿಜಯಪ್ರಕಾಶ್ ಅವರನ್ನು ಮೈಸೂರಿನಲ್ಲಿ ಭೇಟಿಯಾದ ಮಡಿಕೇರಿ ಶಾಸಕ ಡಾ.ಮಂಥರ್ ಗೌಡ ಮಡಿಕೇರಿ ದಸರಾ ಕಾಯ೯ಕ್ರಮಕ್ಕೆ ದಸರಾ ಸಮಿತಿ ಪರವಾಗಿ ಆಹ್ವಾನ ನೀಡಿದರು. ಶಾಸಕ ಡಾ.ಮಂಥರ್ ಗೌಡ ಅವರ ಸಹಕಾರದಲ್ಲಿ ನಡೆಯುವ ವಿಜಯಪ್ರಕಾಶ್ ಮತ್ತು ತಂಡದ ಸಂಗೀತ ರಸಮಂಜರಿ ಕಾಯ೯ಕ್ರಮವು ಅ.23 ರಂದು ಸೋಮವಾರ ರಾತ್ರಿ 8.30 ಗಂಟೆಗೆ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿಸಲ್ಪಟ್ಟಿದೆ ಎಂದು ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಮಾಹಿತಿ ನೀಡಿದ್ದಾರೆ. ಅ.22 ರಂದು ಸಂಜೆ 6 ಗಂಟೆಗೆ ಮಹಿಳಾ ದಸರಾ ಅಂಗವಾಗಿ ಜಿಲ್ಲೆಯ ಹಲವಾರು ಮಹಿಳಾ ತಂಡಗಳಿಂದ ವೈವಿಧ್ಯಮಯ ಕಾಯ೯ಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಡಿಕೇರಿ ಅ.18 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಐದು ಹಂತಗಳಲ್ಲಿ ನಡೆಸುತ್ತಿರುವ ಪಾದಯಾತ್ರೆಯ ನಾಲ್ಕನೇ ಹಂತ ಅ.20 ರಿಂದ ಆರಂಭಗೊಳ್ಳಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಕುಂದದಿಂದ ಪಾದಯಾತ್ರೆ ಆರಂಭಗೊಳ್ಳಲಿದೆ. ಬೊಟ್ಟಿಯತ್ನಾಡ್ (ಕುಂದ), ಕುತ್ನಾಡ್ (ಬಿ.ಶೆಟ್ಟಿಗೇರಿ) ಮತ್ತು ಬೆರಳಿನಾಡ್ (ಕಂಡಂಗಾಲ) ನ ಮೂರು ನಾಡುಗಳ ಮಂದ್ “ಕೈಮುಡಿಕೆ ಮಂದ್” ನಲ್ಲಿ ಬೆಳಗ್ಗೆ 10.30 ಗಂಟೆಗೆ ಕೊಡವ ಜನಜಾಗೃತಿ ಸಭೆ ನಡೆಯಲಿದೆ. ಅ.21 ರಂದು ಬೆಳಗ್ಗೆ 10 ಗಂಟೆಗೆ ಬಿಟ್ಟಂಗಾಲ ಜಂಕ್ಷನ್ ಬಳಿಯಿಂದ ಪಾದಯಾತ್ರೆ ಆರಂಭಗೊಳಲಿದೆ. ನಂತರ ಪಟ್ಟಿಬಾಣೆ ಮಂದ್ ಪೆರವನಾಡ್ (ಬುಟ್ಟಂಗಾಲ) ನಲ್ಲಿ ಮತ್ತು ಮಧ್ಯಾಹ್ನ 2.30 ಗಂಟೆಗೆ ಬೋಟೋಳಿನಾಡ್ (ವಿರಾಜಪೇಟೆ ತಾಲ್ಲೂಕಿನ ಆರ್ಜಿ ಬೊಟೋಳಿ,)ನಲ್ಲಿ ಜಾಗೃತಿ ಸಭೆಯನ್ನು ಆಯೋಜಿಸಲಾಗಿದೆ. ಕೊಡವ, ಕೊಡವತಿಯರು ಕೋವಿಯೊಂದಿಗೆ ಸಾಂಪ್ರದಾಯಿಕ ಉಡುಪಿನಲ್ಲಿ ಪಾಲ್ಗೊಳ್ಳಲಿದ್ದು, 9 ಬೇಡಿಕೆಗಳ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು…
ಬೆಂಗಳೂರು: ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ 3ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ 2 ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು. ‘ದೇಶ ಮತ್ತು ರಾಜ್ಯದ ಗೌರವ ಹೆಚ್ಚು ಮಾಡಿದ್ದೀರಿ. ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ದೇಶದ ಕ್ರೀಡಾಪಟುಗಳ ಸಾಧನೆ ದೇಶ ಮತ್ತು ರಾಜ್ಯದ ಗೌರವ ಹೆಚ್ಚಿಸಿದೆ. ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ವಿಷಯ. ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ.…
ಸೋಮವಾರಪೇಟೆ ಅ.18 : ಗೋ ಸಂರಕ್ಷಣಾ ರಥಯಾತ್ರೆ ಇಂದು ಸೋಮವಾರಪೇಟೆ ಪಟ್ಟಣಕ್ಕೆ ಆಗಮಿಸಿತು. ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಹಾಗೂ ಗೋ ಸೇವಾ ಗತಿವಿಧಿ ಕರ್ನಾಟಕ ನೇತೃತ್ವದಲ್ಲಿ ನ.14 ರಿಂದ 24 ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುದು ಗ್ರಾಮದಲ್ಲಿ ನಡೆಯಲಿರುವ ಅಷ್ಟೋತ್ತರ ಶ್ರೀಮದ್ ಭಾಗವತ ಸಪ್ತಾಹ ಮತ್ತು 1108 ನಾರಾಯಣ ಕವಚದ ಮಹಾಯಜ್ಞಾದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸಲಿರುವ ಗೋ ಸಂರಕ್ಷಣಾ ರಥ ಇಂದು ಸೋಮವಾರಪೇಟೆಗೆ ಪ್ರವೇಶಿಸಿತು. ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ದೊಡ್ಡಬಳ್ಳಾಪುರ ಮಠದ ಶ್ರೀ ನಿಶ್ಚಲ ದೇಶಿಕೇಂದ್ರ ಸ್ವಾಮೀಜಿ ಗೋವಿಗೆ ಪೂಜೆ ಸಲ್ಲಿ ಸುವುದರೊಂದಿಗೆ, ಅಕ್ಕಿ ಬೆಲ್ಲ ತಿನ್ನಿಸಿ ಆಶೀರ್ವದಿಸಿದರು. ಈ ಸಂದರ್ಭ ವೀರಶೈವ ಸಮಾಜದ ಪ್ರಮುಖರಾದ ಶಿವಕುಮಾರ್, ಜಯಣ್ಣ, ನಾಗರಾಜ್, ರಾಜಣ್ಣ, ಯೋಗೇಶ್, ಕಲಾಗಿರೀಶ್, ಮಂಜುಳಾ ಬಸವರಾಜ್, ಉಮಾರುದ್ರ ಪ್ರಸಾದ್ ಹಾಗೂ ಮತ್ತಿತರರು ಹಾಜರಿದ್ದರು.
ಕುಶಾಲನಗರ ಅ.18 : ಬಾರವಿ ಕನ್ನಡ ಸಂಘದ ವತಿಯಿಂದ ಕೊಡಗು-ಮೈಸೂರು ಗಡಿಯಲ್ಲಿನ ಕಾವೇರಿ ಪ್ರತಿಮೆ ವೃತ್ತದಲ್ಲಿ 11ನೇ ವರ್ಷದ ಕಾವೇರಿ ಸಂಕ್ರಮಣ ಆಚರಣೆ ಮಾಡಲಾಯಿತು. ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಕಾವೇರಿ ತೀರ್ಥ ವಿತರಣೆ ಮತ್ತು ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭ ನೂತನವಾಗಿ ನಿರ್ಮಿಸಿದ ಅನ್ನ ಸಂತರ್ಪಣ ಭವನವನ್ನು ಎಸ್.ಎಲ್.ಎನ್ ಕಂಪನಿ ಮಾಲೀಕ ಸಾತಪ್ಪನ್ ಉದ್ಘಾಟಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಪಾಲ್ಗೊಂಡು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು. ಈ ಸಂದರ್ಭ ಬಾರವಿ ಕನ್ನಡ ಸಂಘದ ವತಿಯಿಂದ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು ಕಾವೇರಿ ಪ್ರತಿಮೆ ಹಾಗೂ ಅನ್ನ ಸಂತರ್ಪಣೆ ಕಟ್ಟಡಕ್ಕೆ ತಾನು ವೈಯಕ್ತಿಕವಾಗಿಯೂ ಸರ್ಕಾರದಿಂದ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ನೀಡುವುದಾಗಿ ಭರವಸೆ ನೀಡಿದರು. ಬಾರವಿ ಕನ್ನಡ ಸಂಘದ ಅಧ್ಯಕ್ಷ ಬಬೀ0ದ್ರ ಪ್ರಸಾದ್, ವಿಜೇಂದ್ರ ಪ್ರಸಾದ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ಕುಶಾಲನಗರ ಪುರಸಭೆ ಸದಸ್ಯ ಪ್ರಮೋದ್ ಮುತ್ತಪ್ಪ,…
ಮಡಿಕೇರಿ ಅ.18 : ಸಾಹಿತ್ಯ ರಚನೆಯ ಮೂಲಕ ಪ್ರಾದೇಶಿಕ ಭಾಷಾ ಸಂಸ್ಕೃತಿಯ ಬೆಳವಣಿಗೆ ಸಾಧ್ಯವಿದೆ. ಆದ್ದರಿಂದ ಕವಿಗೋಷ್ಠಿ ಮತ್ತು ಸಾಹಿತ್ಯ ಕಾರ್ಯಕ್ರಮಗಳ ಮೂಲಕ ಪ್ರಾದೇಶಿಕ ಭಾಷೆಗಳಲ್ಲೂ ಕವನ, ಸಾಹಿತ್ಯ ಕೃಷಿ ವಿಫುಲವಾಗಿ ನಡೆಯಬೇಕಾಗಿದೆ ಎಂದು “ಕಾಂತಾರ” ಚಲನಚಿತ್ರದ ಗೀತ ರಚನಾಕಾರರು ಹಾಗೂ ಸೈಮಾ ಪ್ರಶಸ್ತಿ ವಿಜೇತ ಪ್ರಮೋದ್ ಮರವಂತೆ ಕರೆ ನೀಡಿದ್ದಾರೆ. ಮಡಿಕೇರಿ ನಗರ ದಸರಾ ಸಮಿತಿಯ ಬಹುಭಾಷಾ ಕವಿಗೋಷ್ಠಿ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ‘ಕಲಾ ಸಂಭ್ರಮ’ ವೇದಿಕೆಯಲ್ಲಿ ನಡೆದ ‘ಬಹುಭಾಷಾ ಕವಿಗೋಷ್ಠಿ’ಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ಗಳಲ್ಲಿ ಮಕ್ಕಳು ಮುಳುಗಿ ಹೋಗಿದ್ದಾರೆ. ಇಂತಹ ಪರಿಸ್ಥಿತಿಗಳ ನಡುವೆಯೂ ಬರಹಗಾರರು ಹಾಗೂ ಅದನ್ನು ಓದುವವರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಆದರೆ, ಅವರನ್ನು ಒಗ್ಗೂಡಿಸುವ ಕವಿಗೋಷ್ಠಿಯಂತಹ ಕಾರ್ಯಕ್ರಮಗಳು ಕಡಿಮೆಯಾಗಿದೆ. ಹೆಚ್ಚು ಹೆಚ್ಚಾಗಿ ಇಂತಹ ಸಾಹಿತ್ಯ ಪರವಾದ ಕಾರ್ಯಕ್ರಮಗಳು ನಡೆಸುವ ಮೂಲಕ ಬರಹಗಾರರಿಗೆ ಪ್ರೇರಣೆ ನೀಡಬೇಕು ಎಂದರು. ತಾನು ಕುಂದಾಪುರ ಮೂಲದವನಾಗಿದ್ದು, ಅಲ್ಲಿನ ಕುಂದಾಪುರ ಕನ್ನಡ ಭಾಷೆಯಲ್ಲಿ…






