ವಿರಾಜಪೇಟೆ ಅ.17 : ಮೈಸೂರಿನಲ್ಲಿ ನಡೆಯಲಿರುವ ದಸರಾ ಕವಿಗೋಷ್ಠಿಗೆ ಮಡಿಕೇರಿಯ ವಿ.ಜೆ.ಮೌನ ಆಯ್ಕೆಯಾಗಿದ್ದಾಳೆ. ಮಡಿಕೇರಿಯ ವಿ.ಹೆಚ್. ಜಯಕುಮಾರ್ ಹಾಗೂ ಉಪನ್ಯಾಸಕಿ ಕೆ.ಜಯಲಕ್ಷ್ಮಿ ಅವರ ಪುತ್ರಿಯಾಗಿರುವ ವಿ.ಜೆ.ಮೌನ ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಇ ವ್ಯಾಸಂಗ ಮಾಡುತ್ತಿದ್ದಾಳೆ.
ಲೇಖಕ: admin
ಮಡಿಕೇರಿ ಅ.17 : ಮಡಿಕೇರಿ ದಸರಾ ಜನೋತ್ಸವದಲ್ಲಿ ಕಾನೂನು ಉಲ್ಲಂಘನೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ರಾತ್ರಿ 10 ಗಂಟೆಯ ನಂತರ ಡಿಜೆ ಅಬ್ಬರ ಇರಬಾರದೆಂದು ದಸರಾ ಸಮಿತಿ ಹಾಗೂ ದಶಮಂಟಪ ಸಮಿತಿಗಳಿಗೆ ಮನವರಿಕೆ ಮಾಡಿಕೊಟ್ಟಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ದಸರಾ ಸಮಿತಿ ಹಾಗೂ ದಶಮಂಟಪ ಸಮಿತಿಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಎಸ್ಪಿ, ಡಿಜೆ ಬಳಕೆ ಕುರಿತು ನ್ಯಾಯಾಲಯ ವಿಧಿಸಿರುವ ನಿಬಂಧನೆಗಳನ್ನು ವಿವರಿಸಿದರು. ಕಾನೂನು ಪಾಲನೆಗೆ ಪೊಲೀಸರೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಡಿಜೆ ಬಳಸುವ ಸಂದರ್ಭ ನಿಯಮಗಳನ್ನು ಪಾಲಿಸುವುದು ಖಡ್ಡಾಯವಾಗಿದೆ. ರಾತ್ರಿ ಹತ್ತು ಗಂಟೆಯ ನಂತರ ಡಿಜೆ ಶಬ್ಧ ನಿಯಂತ್ರಣದಲ್ಲಿರಬೇಕು, ಕಾನೂನು ಉಲ್ಲಂಘನೆಗೆ ಅವಕಾಶವಿಲ್ಲವೆಂದು ತಿಳಿಸಿದರು. ದಸರಾ ಬಂದೋಬಸ್ತ್ ಗಾಗಿ ಕೆಎಸ್ಆರ್ಪಿ ಸೇರಿದಂತೆ ಜಿಲ್ಲೆ ಮತ್ತು ಹೊರ ಜಿಲ್ಲೆಯ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗುವುದು. ಗೃಹ ರಕ್ಷಕ ದಳದ ಸಿಬ್ಬಂದಿಗಳು ಕೂಡ ಕಾರ್ಯನಿರ್ವಹಿಸಲಿದ್ದಾರೆ ಎಂದರು. ಕರ್ಕಷ ಶಬ್ಧದ ಪೀಪಿ ಗಳನ್ನು…
ಮಡಿಕೇರಿ ಅ.17 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ಶರನ್ನವರಾತ್ರಿಯ 3ನೇ ದಿನವಾದ ಇಂದು ದೇವಿಗೆ ಧನಲಕ್ಷ್ಮೀ ಅಲಂಕಾರ ಮಾಡಿ ಪೂಜಿಸಲಾಯಿತು. ಅ.18 ರಂದು ಬಾಗಿನ ದೀಪ ಅಲಂಕಾರ ನೆರವೇರಲಿದೆ.
ಮಡಿಕೇರಿ ಅ.17 : ಮಡಿಕೇರಿ ದಸರಾ ಸಾಂಸ್ಕೃತಿಕ ಕಾಯ೯ಕ್ರಮಗಳ ಎರಡನೇ ದಿನವಾದ ಇಂದು (ಅ.17) ವೈವಿಧ್ಯಮಯ ಕಾಯ೯ಕ್ರಮಗಳು ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ನಡೆಯಲಿದೆ. ಮಡಿಕೇರಿಯ ನಾಟ್ಯ ನಿಕೇತನ ಸಂಗೀತ ನೖತ್ಯಶಾಲಾ ತಂಡದಿಂದ ನೃತ್ಯ ವೈವಿಧ್ಯ, ಕುಶಾಲನಗರದ ಕುಂದನ ನಾಟ್ಯಾಲಯ ತಂಡದಿಂದ , ಶ್ರೀ ಮಂಜುನಾಥ ಮಹಿಮೆ ನೃತ್ಯ ರೂಪಕ, ವಿರಾಜಪೇಟೆಯ ಜಗನ್ಮೋಹನ ನಾಟ್ಯಾಲಯ ತಂಡದಿಂದ ಭಾರತೀಯ ಶಾಸ್ತ್ರೀಯ ನೃತ್ಯ, ಕುಶಾಲನಗರದ ಟೀಮ್ ಅ್ಯಟಿಟ್ಯೂಡ್ ತಂಡದಿಂದ ನೃತ್ಯ ವೈವಿಧ್ಯ , ಕುಶಾಲನಗರದ ಮಂಜುಭಾಗ೯ವಿ ಮತ್ತು ತಂಡದಿಂದ ನೃತ್ಯ ಹಾಗೂ ಮಡಿಕೇರಿಯ ಮುತ್ತಿನ ಹಾರ ತಂಡದಿಂದ ಸಂಗೀತ ರಸಮಂಜರಿ ಕಾಯ೯ಕ್ರಮ ಸೇರಿದಂತೆ ವೈವಿಧ್ಯಮಯ ಕಾಯ೯ಕ್ರಮಗಳು ಆಯೋಜಿತವಾಗಿದೆ. ಅಂತೆಯೇ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಮೈಸೂರಿನ ಖ್ಯಾತ ಮರಳು ಕಲಾವಿದೆ ಎನ್.ಎಂ.ಗೌರಿ ರೂಪಿಸಿರುವ ಕಾಂತಾರ ಶೈಲಿಯ ವನದೇವ ಮರಳುಕಲಾಕೖತಿಯನ್ನೂ ವೀಕ್ಷಿಸಬಹುದಾಗಿದೆ. ಫೋಟೋ ಪಾಯಿಂಟ್ ನಲ್ಲಿ ಮಡಿಕೇರಿ ದಸರಾದ ಸಂಭ್ರಮವನ್ನು ತೆಗೆದುಕೊಳ್ಳಬಹುದಾಗಿದೆ ಎಂದು ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ತಿಳಿಸಿದ್ದಾರೆ.
ಪುತ್ತೂರು ಅ.17 : ಕಾಲ ಇರುವುದು ಕಳೆಯುವುದಕ್ಕಲ್ಲ, ಅರ್ಥಪೂರ್ಣವಾಗಿ ವಿನಿಯೋಗಿಸುವುದಕ್ಕೆ, ಕಳೆದುಹೋದ ಹಣವನ್ನಾದರೂ ಮರಳಿ ಸಂಪಾದಿಸಬಹುದು, ಆದರೆ ಕಳೆದು ಹೋದ ಸಮಯವನ್ನು ಏನು ಮಾಡಿದರೂ ಹಿಂಪಡೆಯಲಾಗದು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ. ಕಲ್ಲಾಜೆ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ IEEE ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಸಮಯವನ್ನು ಚಾತುರ್ಯದಿಂದ ನಿರ್ವಹಿಸುವವನು ಎತ್ತರಕ್ಕೆ ಏರುತ್ತಾನೆ, ಸಮಯವನ್ನು ಅಲಕ್ಷ್ಯದಿಂದ ವ್ಯಯಿಸುವವನು ಪರಿತಪಿಸುತ್ತಾನೆ ಎಂದರು. ಅವಕಾಶಗಳು ಸಾಕಷ್ಟು ಇವೆ, ಆದರೆ ಅದನ್ನು ಸರಿಯಾದ ರೀತಿಯಲ್ಲಿ ಪಡೆದುಕೊಳ್ಳುವ ಚಾಕಚಕ್ಯತೆಯನ್ನು ಬೆಳೆಸಿಕೊಳ್ಳಬೇಕು. ಪ್ರಸ್ತುತ ಸನ್ನಿವೇಶದಲ್ಲಿ ಸ್ವಯಂ ಉದ್ಯೋಗಕ್ಕೆ ಸಾಕಷ್ಟು ಅವಕಾಶವಿದೆ. ಆದರೆ ಅದಕ್ಕೆ ಬೇಕಾದ ಪೂರ್ವ ತರಬೇತಿಯನ್ನು ಪಡೆಯದೆ ಪ್ರಾರಂಭಿಸಿದರೆ ಯೋಜಿತ ಉನ್ನತಿ ದೊರೆಯದೆ ಹೋಗಬಹುದು ಎಂದರು. ಕಾಲೇಜಿನ IEEE ವಿದ್ಯಾರ್ಥಿ ವಿಭಾಗದ ಪೂರ್ವ ಮುಖ್ಯಸ್ಥ ಡಾ.ಮಹಾಂತೇಶ್ ಚೌಧರಿ ಮಾತನಾಡಿ ಇದೊಂದು ವಿಶ್ವದ ಅತಿದೊಡ್ಡ ತಾಂತ್ರಿಕ ವೃತ್ತಿಪರ…
ಮಡಿಕೇರಿ ಅ.17 : ಪ್ರಸಕ್ತ (2023-24) ಸಾಲಿಗೆ ಹಿಂದುಳಿದ ವರ್ಗಗಳ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿಗೆ ಸೌಲಭ್ಯ ಒದಗಿಸಲು ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ/ ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವ ಹಿಂದುಳಿದ ವರ್ಗಗಳ ವಿವಿಧ ನಿಗಮಗಳ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in, ಗ್ರಾಮ ಒನ್ https://gramaone.karnataka.gov.in ಬೆಂಗಳೂರು ಒನ್ https://www.karnatakaone.gov.in ಹಾಗೂ ಕರ್ನಾಟಕ ಒನ್ https://klapp.karnatakaone.gov.in ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿದೆ. ಹೆಚ್ಚಿನ…
ಮಡಿಕೇರಿ ಅ.17 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಾಗೂ ಸರ್ವೋದಯ ಸಮಿತಿ ಸಹಕಾರದಲ್ಲಿ ಮಹಾತ್ಮ ಗಾಂಧೀಜಿ ಸ್ಮಾರಕ ನಿರ್ಮಾಣಕ್ಕೆ ನಗರದ ಗಾಂಧಿ ಮಂಟಪದಲ್ಲಿ ಭೂಮಿ ಪೂಜೆ ನೆರವೇರಿಸುವ ಮೂಲಕ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಚಾಲನೆ ನೀಡಿದರು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಮಾಜಿ ಸಚಿವ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಪ್ರಮುಖರಾದ ಟಿ.ಪಿ.ರಮೇಶ್ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸರ್ವೋದಯ ಸಮಿತಿ ಸರ್ವ ಸದಸ್ಯರು, ಇತರರು ಪಾಲ್ಗೊಂಡಿದ್ದರು.
ಮಡಿಕೇರಿ ಅ.17 : ಮಡಿಕೇರಿ ದಸರಾ ಸಾಂಸ್ಕೃತಿಕ ಕಾಯ೯ಕ್ರಮಗಳ ಮೂರನೇ ದಿನವಾದ ಅ.18 ರಂದು (ಬುಧವಾರ) ವೈವಿಧ್ಯಮಯ ಕಾಯ೯ಕ್ರಮಗಳು ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ನಡೆಯಲಿದೆ. ಚಿಕ್ಕಮಗಳೂರಿನ ಹೆಸರಾಂತ ಗಾಯಕ ಸಾಯಿ ಸತೀಶ್ ಅವರಿಂದ ಭಕ್ತಿಸುಧೆ, ಮೂನಾ೯ಡುವಿನ ಸ್ಟೇಪ್ ಅಪ್ ಶೇಡ್ಸ್ ತಂಡದಿಂದ ನೖತ್ಯ ವೈವಿಧ್ಯ , ಮೇಕೇರಿಯ ಶ್ರೀ ಗೌರಿಶಂಕರ ಕಲಾಟ್ರಸ್ಟ್ ನಿಂದ ಶ್ರೀ ರಾಮಚರಿತ ನೃತ್ಯ ರೂಪಕ, ಪುತ್ತೂರಿನ ಶ್ರೀದೇವಿ ನೃತ್ಯಾರಾಧನ ಕೇಂದ್ರದಿಂದ ನೃತ್ಯ ಪ್ರೇರಣ ಹಾಗೂ ಮಡಿಕೇರಿಯ ಸ್ವರಶಾರದಾ ತಂಡದಿಂದ ಗಾನ ವೈಭವ ಕಾಯ೯ಕ್ರಮ ಆಯೋಜಿತವಾಗಿದೆ.
ಮಡಿಕೇರಿ ಅ.17 : ದಸರಾ ಉತ್ಸವದಲ್ಲಿ ಸರ್ವರೂ ಪಾಲ್ಗೊಳ್ಳುವ ಮೂಲಕ ಉತ್ಸವ ಯಶಸ್ವಿಯಾಗಿ ನಡೆಯುವಂತಾಗಲಿ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಆಶಿಸಿದರು. ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯ ಹಾಗೂ ಜಿಲ್ಲೆಯಲ್ಲಿ ಬರಪರಿಸ್ಥಿತಿ ಇದ್ದರೂ ಕೂಡ ಐತಿಹಾಸಿಕ ಹಿನ್ನೆಲೆಯಿರುವ ದಸರಾ ಉತ್ಸವ ಕಳೆಗುಂದ ಬಾರದು ಎಂಬ ಕಾರಣಕ್ಕಾಗಿ ಸರ್ಕಾರವು ಸಾಧ್ಯವಾದಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ. ಒಂದು ವೇಳೆ ಬರಪರಿಸ್ಥಿತಿ ಇಲ್ಲದಿದ್ದಲ್ಲಿ ಮತ್ತಷ್ಟು ವೈಭವಯುತವಾಗಿ ಉತ್ಸವ ಆಚರಣೆ ಮಾಡಬಹುದಾಗಿತ್ತು ಎಂದು ಅವರು ಹೇಳಿದರು. ಶಾಸಕ ಡಾ.ಮಂಥರ್ ಗೌಡ ಮಾತನಾಡಿ, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ಸಾಂಸ್ಕೃತಿಕ ಸಿಗುವಂತಾಗಬೇಕು. ಸರಕಾರ ದಸರಾ ಉತ್ಸವಕ್ಕೆ ಬಿಡುಗಡೆ ಮಾಡಿರುವ ಅನುದಾನದಲ್ಲಿ ಮಂಟಪ ಸಮಿತಿಗಳಿಗೆ ಹೆಚ್ಚಿನ ಆದ್ಯತೆ ನೀಡುವತ್ತ ದಸರಾ ಸಮಿತಿ ಗಮನಹರಿಸಬೇಕೆಂದು ಹೇಳಿದರು. ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ,…
ಮಡಿಕೇರಿ ಅ.17 : ನಗರ ದಸರಾ ಸಮಿತಿ, ಬಹುಭಾಷಾ ಕವಿಗೋಷ್ಠಿ ಸಮಿತಿ ವತಿಯಿಂದ ಬಹುಭಾಷಾ ಕವಿಗೋಷ್ಠಿಯು ಅ.18 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿದೆ. ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ ಅಧ್ಯಕ್ಷರಾದ ಉಜ್ವಲ್ ರಂಜಿತ್, ರಾಜ್ಯ ಉಚ್ಚ ನ್ಯಾಯಾಲಯ ಹಾಗೂ ಅಂಕಣಕಾರರು ಹಾಗೂ ಹಿರಿಯ ವಕೀಲರಾದ ಎಚ್.ಎಸ್.ಚಂದ್ರಮೌಳಿ, ಹಿರಿಯ ಕವಿ, ಸಾಹಿತಿ, ಸಂಶೋಧಕರು ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೋರನ ಸರಸ್ವತಿ ಪ್ರಕಾಶ್, ಕಾಂತಾರ ಚಲನಚಿತ್ರ ಖ್ಯಾತಿಯ ಸಾಹಿತಿ ಪ್ರಮೋದ್ ಮರವಂತೆ, ಉದ್ಯಮಿ ಹಾಗೂ ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷರಾದ ಗಿರೀಶ್ ಮಲ್ಲಪ್ಪ ಮೋರಿಕಲ್ಲು, ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷರಾದ ಡಾ.ಮೇಚಿರ ಸುಭಾಶ್ ನಾಣಯ್ಯ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೇಶವ ಕಾಮತ್, ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷರಾದ ಅನಿತಾ ಪೂವಯ್ಯ, ಕಾರ್ಯಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಪ್ರಧಾನ ಕಾರ್ಯದರ್ಶಿ…






