ಮಡಿಕೇರಿ ಅ.17 : ಇತಿಹಾಸ ಪ್ರಸಿದ್ಧ ಬೊಟ್ಟ್’ಲಪ್ಪ (ಈಶ್ವರ) ದೇವರ ವಾರ್ಷಿಕ ಬೋಡ್ ನಮ್ಮೆ ಅ.17 ಹಾಗೂ 18 ರಂದು ಪೊನ್ನಂಪೇಟೆಯ ಬೊಟ್ಟಿಯತ್ ನಾಡ್ ಕುಂದ ಮುಗುಟಗೇರಿ ಗ್ರಾಮದಲ್ಲಿ ನಡೆಯಲಿದೆ. ವರ್ಷಂಪ್ರತಿ ಕಾವೇರಿ ತೀರ್ಥೋದ್ಭವದ ದಿನದಂದು ನಡೆಯುವ ಬೊಟ್ಟಿಯತ್ ನಾಡ್ ಕುಂದ ಮುಗುಟಗೇರಿ ಗ್ರಾಮದ ಈ ಬೇಡು ಹಬ್ಬದಲ್ಲಿ ತಲಕಾವೇರಿಯಿಂದ ಪವಿತ್ರ ತೀರ್ಥವನ್ನು ತಂದು ಕುಂದಬೆಟ್ಟದ ಮೇಲಿರುವ ಈಶ್ವರ ದೇವರಿಗೆ ಅರ್ಪಿಸುವ ಮೂಲಕ ಕೊಡಗಿನ ಮೊದಲ ಬೋಡ್ ನಮ್ಮೆಗೆ ಚಾಲನೆ ದೊರೆಯಲಿದೆ ಎಂದು ದೇವಾಲಯದ ತಕ್ಕ ಮುಖ್ಯಸ್ಥರು ತಿಳಿಸಿದ್ದಾರೆ. ಹಬ್ಬಕ್ಕೆ ವಾರದ ಮುಂಚೆ ಕುಂದ ಗ್ರಾಮದಲ್ಲಿರುವ ನಾಡ್ ದೇವಸ್ಥಾನ (ಈಶ್ವರ ದೇವಸ್ಥಾನ) ಹತ್ತಿರ ಇರುವ ಅಂಬಲದಲ್ಲಿ ಬೋಡ್ ನಮ್ಮೆ ದೋಳ್ ಇಡುವ ಮೂಲಕ ಹಬ್ಬಕ್ಕೆ ಚಾಲನೆ ನೀಡಿದ್ದು, ಪ್ರತಿನಿತ್ಯ ಸಂಜೆ ಹಬ್ಬದತನಕ ಸಾಂಪ್ರದಾಯಿಕ ದೋಳ್ ಬಾರಿಸುವ ಮೂಲಕ ಹಬ್ಬದ ವಿವಿಧ ಸಾಂಪ್ರದಾಯ ಪೂಜಾ ವಿಧಿವಿಧಾನಗಳು ಜರುಗಲಿದೆ. ಮನೆಯಪಂಡ ಹಾಗೂ ಸಣ್ಣುವಂಡ ಕುಟುಂಬಸ್ಥರ ತಕ್ಕಾಮೆಯಲ್ಲಿ ಹಬ್ಬ ನಡೆಯಲಿದ್ದು. ಅ- 17ರಂದು ರಾತ್ರಿ ಇಲ್ಲಿನ…
ಲೇಖಕ: admin
ಮಡಿಕೇರಿ ಅ.16 : ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ ಕೊಡಗು ಏಕೀಕರಣ ರಂಗದ ವತಿಯಿಂದ ತಲಕಾವೇರಿಯಲ್ಲಿ ಒಂದು ತಿಂಗಳ ಕಾಲ ನಡೆಯುವ ಅನ್ನದಾನ ಕಾರ್ಯಕ್ರಮಕ್ಕೆ ಕೊಡಗು ರಕ್ಷಣಾ ವೇದಿಕೆಯ ಹಾರಂಗಿ ಹುದುಗೂರು ಘಟಕ ದಿನಸಿ ಸಾಮಾಗ್ರಿಗಳ ನೆರವು ನೀಡಿದೆ. ತಲಕಾವೇರಿಗೆ ತೆರಳಿದ ವೇದಿಕೆಯ ಪ್ರಮುಖರು ಹಾರಂಗಿ ಹುದುಗೂರು ಗ್ರಾಮಸ್ಥರಿಂದ ಸಂಗ್ರಹಿಸಿದ ಅಕ್ಕಿ, ತೆಂಗಿನಕಾಯಿ, ತರಕಾರಿ ಮತ್ತಿತರ ಸಾಮಾಗ್ರಿಗಳನ್ನು ಸಮರ್ಪಿಸಿದರು. ಘಟಕದ ಅಧ್ಯಕ್ಷ ಬೊಳ್ತಂಡ ಸಜನ್ ಕಿಶೋರ್, ಸದಸ್ಯರಾದ ಭರತ್ ಬಿ.ಆರ್, ದಿನೇಶ್ ತಡ್ಡಿಕೊಪ್ಪ, ದಿನು ಕೋಳಿಬೈಲು, ಬಿಪಿನ್ ತಿಮ್ಮಯ್ಯ ಮಚಂಡ, ನವೀನ್ ನಡುಮನೆ, ಹೇಮಂತ್, ಪವಿಹೇಮಂತ್ ನಿಡ್ಯಮಲೆ, ಹಾರ್ದಿತ್ ಉಳ್ಳಿಯೆಡ್ಕ ಮತ್ತಿತರರು ಈ ಸಂದರ್ಭ ಹಾಜರಿದ್ದರು.
ಮಡಿಕೇರಿ ಅ.16 : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನ.3 ರಿಂದ 5ರ ವರೆಗೆ ರಾಜ್ಯ ಮಟ್ಟದ ಕೃಷಿ ಯಂತ್ರ ಮೇಳ ನಡೆಯಲಿದೆ ಎಂದು ಕಾರ್ಯಕ್ರಮದ ಸಂಯೋಜಕ ಡಾ.ರಾಮಕೃಷ್ಣ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗಿನಲ್ಲಿ ಮೊಟ್ಟ ಮೊದಲ ಬಾರಿಗೆ ರಾಜ್ಯ ಮಟ್ಟದ ಕೃಷಿ ಯಂತ್ರ ಮೇಳ “ಕೃಷಿದೇವೋಭವ” ಎನ್ನುವ ಘೋಷವಾಕ್ಯದೊಂದಿಗೆ 3 ದಿನಗಳ ಕಾಲ ನಡೆಯಲಿದ್ದು, ಸಿದ್ಧತೆಗಳು ನಡೆದಿದೆ. ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 25ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ “ಕೃಷಿದೇವೋಭವ” ಕೃಷಿ ಯಂತ್ರ ಮೇಳ ನಡೆಯುತ್ತಿದ್ದು, 250ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ. ಗ್ರಾಹಕರಿಗೆ ಒಂದೇ ಸೂರಿನಲ್ಲಿ ಹಲವು ಉತ್ಪನ್ನಗಳು ಕಡಿಮೆ ದರದಲ್ಲಿ ಸಿಗಲಿದೆ ಎಂದು ಹೇಳಿದ್ದಾರೆ. ಮೇಳದಲ್ಲಿ ಎಲ್ಲರೂ ಮುಕ್ತವಾಗಿ ಭಾಗವಹಿಸುವ ಅವಕಾಶವಿದ್ದು, ಕೃಷಿ ಯಂತ್ರೋಪಕರಣಗಳು, ಕೃಷಿ ಪರಿಕರಗಳು, ಭತ್ತ ಕಟಾವು ಮಾಡುವ ಯಂತ್ರಗಳು, ಪಂಪ್ ಸೆಟ್ಗಳು, ಕಾಫಿ ಬಾಕಿಂಗ್ ಮಿಷನ್ ಗಳು, ಸಿಂಪಡಣೆ ಯಂತ್ರಗಳು, ಡ್ರೋನ್ ಗಳು, ಬಿತ್ತನೆ ಬೀಜಗಳು, ಗೃಹ ಉತ್ಪನ್ನಗಳನ್ನು ತಯಾರಿಸುವ…
ಮಡಿಕೇರಿ ಅ.16 : ಅಮೃತ ಮಹೋತ್ಸವದ ಸಂಭ್ರಮದಲ್ಲಿರಬೇಕಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಇಂದು ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಕೊಡಗು ವಿಶ್ವವಿದ್ಯಾನಿಲಯದ ಮಧ್ಯೆ ಸಿಲುಕಿ ಮೂಲಭೂತ ಸಮಸ್ಯೆಯನ್ನು ಎದುರಿಸುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಸೆಳೆದು ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಮಾಜಿ ಸಚಿವ ಮೇರಿಯಂಡ ಸಿ.ನಾಣಯ್ಯ ಭರವಸೆ ನೀಡಿದ್ದಾರೆ. ಕೊಡವ ಮಕ್ಕಡ ಕೂಟ, ಮಂಗಳೂರು ವಿಶ್ವವಿದ್ಯಾನಿಲಯದ ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠ ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಲೇಖಕ ನಾಗೇಶ್ ಕಾಲೂರು ಬರೆದಿರುವ ಶ್ರೀ ಕಾವೇರಿ ದರ್ಶನಂ ಮತ್ತು ಕೊಡಗಿನಿಂದ ಗಿರಿತನಕ (ಮೂಲ ಲೇಖಕರು ದಿ.ಮಳವಂಡ ಗೌರಮ್ಮ ಅಚ್ಚಯ್ಯ) ಕೃತಿಗಳ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಶ್ರೀ ಕಾವೇರಿ ದರ್ಶನಂ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಮೂಲಭೂತ ಸೌಲಭ್ಯಗಳಿಂದ ವಂಚಿತವಾಗುತ್ತದೆ ಎಂಬ ಕಾರಣಕ್ಕೆ ತನ್ನ ಅಧಿಕಾರ ಅವಧಿಯಲ್ಲಿಯೇ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ಭಾಗವಾಗಿ ಮಾಡಲಾಗಿತ್ತು. ಆದರೆ ಇಂದು ಕೊಡಗಿನ ಪ್ರತಿಷ್ಠಿತ ಕಾಲೇಜು ಮೂಲಭೂತ…
ಮಡಿಕೇರಿ ಅ.16 : ಕಾವೇರಿ ತುಲಾ ಸಂಕ್ರಮಣ ಜಾತ್ರೆಯ ಪ್ರಯುಕ್ತ ಕನ್ನಡ ಸ್ನೇಹ ಸಿರಿ ಬಳಗದ ವತಿಯಿಂದ ತಲಕಾವೇರಿ ಕ್ಷೇತ್ರದಲ್ಲಿ ಸಂಕ್ರಮಣ ಕವಿಗೋಷ್ಠಿ ಹಾಗೂ ಭಕ್ತಿಗೀತೆ ಗಾಯನ ಕಾರ್ಯಕ್ರಮ ನ.5 ರಂದು ಪುಣ್ಯ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕವಿಗಳು ಹಾಗೂ ಗಾಯಕರು ಇದೇ ತಾ.25ರ ಒಳಗಾಗಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಸರು ನೋಮದಾಯಿಸಿಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಲೋಕೇಶ್ ಸಾಗರ್ – 9980988123, ಕುಡೆಕಲ್ ಸಂತೋಷ್-9972538584 ಸಂಪರ್ಕಿಸುವಂತೆ ಸ್ನೇಹ ಬಳಗದ ಪ್ರಕಟಣೆ ತಿಳಿಸಿದೆ.
ಮಡಿಕೇರಿ ಅ.16 : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅ.17 ರಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷ ಎ.ಕಾಳನ ರವಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರಾದ ಎಚ್.ಬಸವರಾಜು, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ,…
ಮಡಿಕೇರಿ ಅ.16 : ಮಡಿಕೇರಿ ತಾಲ್ಲೂಕಿನ ಕರ್ಣಂಗೇರಿ ಬಳಿ ಗುರುತಿಸಲಾಗಿರುವ 7 ಎಕರೆ ಜಾಗದಲ್ಲಿ ‘ವಿಜ್ಞಾನ ಉಪ ಪ್ರಾದೇಶಿಕ ಕೇಂದ್ರ’ ನಿರ್ಮಾಣಕ್ಕೆ ಎಲ್ಲಾ ಸಿದ್ಧತೆಗಳು ನಡೆದಿದೆ. ಈಗಾಗಲೇ 3 ಕೋಟಿ ರೂ. ಬಿಡುಗಡೆಯಾಗಿದ್ದು, ಇನ್ನಷ್ಟು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭರವಸೆ ನೀಡಿದ್ದಾರೆ. ಸೋಮವಾರಪೇಟೆಯ ಕೊಡವ ಸಮಾಜದಲ್ಲಿ ಸೋಮವಾರ ನಡೆದ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನ.1 ರಂದು ವಿಜ್ಞಾನ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದರು. ಸರ್ಕಾರ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ಹೆಚ್ಚಿನ ಅನುದಾನ ನಿಗದಿ ಮಾಡಿದೆ. ಆ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಸಚಿವರು ವಿವರಿಸಿದರು. ಆಡಳಿತವನ್ನು ಜನರ ಬಳಿಗೆ ತೆಗೆದುಕೊಂಡು ಹೋಗಬೇಕು ಎಂಬ ಉದ್ದೇಶದಿಂದ ಸರ್ಕಾರ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಅವಕಾಶವನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು. ಸ್ಥಳೀಯ ಸಮಸ್ಯೆಗಳನ್ನು…
ಮಡಿಕೇರಿ ಅ.16 : ಎಂ ಬಾಡಗ-1 ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಕೈತೊಳೆಯುವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಸಹಯೋಗದಲ್ಲಿ “ಸ್ವಚ್ಛ ಕೈಗಳು ಸುಸ್ಥಿರ ಅಭಿವೃದ್ಧಿಗೆ ಕೀಲಿ ಎಂಬ ಘೋಷ ವಾಕ್ಯದೊಂದಿಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷ ಕುಶನ್ ರೈ, ಮಕ್ಕಳಿಗೆ ಮತ್ತು ಗ್ರಾಮಸ್ಥರಿಗೆ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಬಿ.ಬಿ.ಜಯಂತಿ ಸ್ವಚ್ಛತೆ ಮತ್ತು ಕೈ ತೊಳೆಯುವ ಆರು ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿದರು. ಗ್ರಾ.ಪಂ ಸದಸ್ಯರಾದ ನಿಂಗಪ್ಪ, ಅಂಗನವಾಡಿ ಸಹಾಯಕಿ ಪ್ರೀತ, ಮಕ್ಕಳು ಮತ್ತು ಪೋಷಕರು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತೆ ಬಿ.ಬಿ.ಜಯಂತಿ ಸ್ವಾಗತಿಸಿ, ವಂದಿಸಿದರು.
ಮಡಿಕೇರಿ ಅ.16 : ಸರ್ಕಾರಿ ದಾಖಲೆಗಳಲ್ಲಿ “ಕೊಡವ” ಪದ ಬಳಕೆ ಕುರಿತು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸಿದ ಹೋರಾಟದ ಫಲವಾಗಿ ಡಾ.ದ್ವಾರಕಾನಾಥ್ ಆಯೋಗ ಹೊರಡಿಸಿದ ವರದಿಯ ಶಿಫಾರಸ್ಸಿಗಾಗಿ ಸಿಎನ್ಸಿ ಪರ ಕಾನೂನು ಹೋರಾಟ ನಡೆಸಿದ ರಾಜ್ಯ ಸಾರ್ವಜನಿಕ ಅಭಿಯೋಜಕ ಬಲ್ಲಚಂಡ ಬೊಳ್ಳಿಯಪ್ಪ ಅವರಿಗೆ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದ ನಿಯೋಗ ಧನ್ಯವಾದಗಳನ್ನು ಅರ್ಪಿಸಿತು. ಬೆಂಗಳೂರಿನಲ್ಲಿರುವ ಬೊಳ್ಳಿಯಪ್ಪ ಅವರ ಹೈಕೋರ್ಟ್ ನ ಕಚೇರಿಯಲ್ಲಿ ಭೇಟಿಯಾದ ನಿಯೋಗ ಹೈಕೋರ್ಟ್ ನ ರಾಜ್ಯ ಸಾರ್ವಜನಿಕ ಅಭಿಯೋಜಕರಾಗಿ ಆಯ್ಕೆಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿತು. ಸಿಎನ್ಸಿಯ ಕಾನೂನಾತ್ಮಕ ಹೋರಾಟಗಳಿಗೆ ಬೆಂಬಲವಾಗಿ ನಿಂತ ಕಾರಣಕ್ಕೆ ಧನ್ಯವಾದಗಳನ್ನು ಅರ್ಪಿಸಿ ಮಾತನಾಡಿದ ಎನ್.ಯು.ನಾಚಪ್ಪ, ಸುಮಾರು 15 ವರ್ಷಗಳ ನಿರಂತರ ಹೋರಾಟದ ಫಲವಾಗಿ “ಕೊಡವ” ಪದ ಬಳಕೆಯ ಹಕ್ಕು ದೊರೆತ್ತಿದೆ. ವಕೀಲರಾಗಿ ಬೊಳ್ಳಿಯಪ್ಪ ಅವರು 8 ವರ್ಷಗಳ ಕಾಲ ಕಾನೂನು ಹೋರಾಟದ ಮೂಲಕ ನಮಗೆ ವಿಜಯ ತಂದು ಕೊಟ್ಟಿದ್ದಾರೆ ಮತ್ತು ಕಳೆದ 10 ವರ್ಷಗಳಿಂದ ಸಿಎನ್ಸಿಗೆ ಬೆಂಬಲವಾಗಿ ನಿಂತಿದ್ದಾರೆ ಎಂದರು. ವಿರಾಜಪೇಟೆ ಶಾಸಕ…
ಮಡಿಕೇರಿ ಅ.16 : ಮಡಿಕೇರಿ ದಸರಾ ಉತ್ಸವದ ಅಂಗವಾಗಿ ಕ್ರೀಡಾ ಸಮಿತಿಯಿಂದ ನಗರದ ರಾಜದರ್ಶನ್ ಹೊಟೇಲ್ ಸಭಾಂಗಣದಲ್ಲಿ ಇಂದು ನೂರಾರು ಶಾಲಾ ಮಕ್ಕಳ ಪಾಲ್ಗೊಳ್ಳುವಿಕೆಯೊಂದಿಗೆ ಚೆಸ್ ಪಂದ್ಯಾವಳಿ ಅತ್ಯಂತ ಕುತೂಹಲಕಾರಿಯಾಗಿ ನಡೆಯಿತು. ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಅವರ ನೇತೃತ್ವದಲ್ಲಿ ನಡೆದ ಚೆಸ್ ಹಾಗೂ ಕೇರಂ ಪಂದ್ಯಾವಳಿಗೆ ಜಿಲ್ಲೆಯ ವಿವಿಧೆಡೆಗಳಿಂದ ನೂರಾರು ವಿದ್ಯಾರ್ಥಿಗಳು ಆಗಮಿಸಿದ್ದು ವಿಶೇಷವಾಗಿತ್ತು. ಅಚ್ಚುಕಟ್ಟಾದ ವ್ಯವಸ್ಥೆಗಳ ನಡುವೆ ವಿದ್ಯಾರ್ಥಿಗಳು ಚೆಸ್ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರೆ, ಮತ್ತೊಂದೆಡೆ ಕೇರಂ ಪಂದ್ಯಗಳಲ್ಲಿ ಕ್ರೀಡಾ ಸ್ಫೂರ್ತಿ ಮೆರೆದರು. ದಸರಾ ಕ್ರೀಡಾಕೂಟದ ಅಥ್ಕೆಟಿಕ್ಸ್ ಸ್ಪರ್ಧೆಗಳು ಇದೇ ಅ.18 ರಂದು ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿವೆ.






