ಲೇಖಕ: admin

ಮಡಿಕೇರಿ ನ.14 : ಕೊಡಗು- ಕೇರಳ ಗಡಿಯಲ್ಲಿ ಸೋಮವಾರ ನಕ್ಸಲರು ಹಾಗೂ ಕೇರಳ ನಕ್ಸಲ್ ಕಾರ್ಯಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆ ವೇಳೆ ಓರ್ವ ನಕ್ಸಲ್ ಗಾಯಗೊಂಡಿರುವುದಾಗಿ ತಿಳಿದು ಬಂದಿದ್ದು, ಈತ ಚಿಕಿತ್ಸೆಗಾಗಿ ಅಥವಾ ರಕ್ಷಣೆಗಾಗಿ ಕೊಡಗು ಜಿಲ್ಲೆಯನ್ನು ಪ್ರವೇಶಿಸುವ ಸಾಧ್ಯತೆಗಳಿರುವುದರಿಂದ ಜಿಲ್ಲಾ ಪೊಲೀಸರು ಹೈಅಲರ್ಟ್ ಘೋಷಿಸಿದ್ದಾರೆ. ಕೊಡಗಿನ 4- 5 ಕಿ.ಮೀ ದೂರದಲ್ಲಷ್ಟೇ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲರು ಕೇರಳ ಅರಣ್ಯ ಪ್ರದೇಶದಿಂದ ಕೊಡಗನ್ನು ಪ್ರವೇಶಿಸುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದ್ದರಿಂದ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚುವರಿಯಾಗಿ ಜಿಲ್ಲಾ ಸಶಸ್ತç ಪೊಲೀಸರನ್ನು ನಿಯೋಜಿಸಲಾಗಿದ್ದು, ಎಲ್ಲಾ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಗಡಿ ಭಾಗದ ಆಸ್ಪತ್ರೆ, ಮೆಡಿಕಲ್ ಶಾಪ್ ಮತ್ತು ಹೋಂಸ್ಟೇ ಗಳಿಗೂ ಎಚ್ಚರದಿಂದ ಇರುವಂತೆ ತಿಳಿಸಲಾಗಿದೆ. ಅಲ್ಲದೆ ಪೊಲೀಸರನ್ನು ನಿಯೋಜಿಸಿ ನಿಗಾ ಇರಿಸಲಾಗಿದೆ. ನಕ್ಸಲ್ ಚಟುವಟಿಕೆ ತೀವ್ರಗೊಂಡಿರುವ ಹಿನ್ನೆಲೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಗಡಿಭಾಗವಾದ ಬಿರುನಾಣಿ, ತೆರಾಳು, ಪರಕಟಗೆರೆ ಮತ್ತು ಕುಟ್ಟ ಪ್ರದೇಶಕ್ಕೆ…

Read More

ಮಂಗಳೂರು ನ.13 : ಅಜ್ಜ ಇಮಾಮ್ ಸಾಹೇಬ್, ತಂದೆ ಬಾಬನ್ ಸಾಹೇಬ್ ಅವರಿಂದ ಬಳುವಳಿಯಾಗಿ ಬಂದ ನಾಗಸ್ವರ ವಾದನವನ್ನು ಕಳೆದ 40 ವರ್ಷಗಳಿಂದ ಮುಖ್ಯ ವೃತ್ತಿಯನ್ನಾಗಿಸಿಕೊಂಡಿದ್ದ ಕಾಪುವಿನ ಶೇಖ್ ಜಲೀಲ್ ಸಾಹೇಬ್ (56) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಜಾತ್ರೆಯ ವೇಳೆ ನಾಗಸ್ವರ ಸೇವೆ ನೀಡುತ್ತಿದ್ದ ಉಡುಪಿ ಜಿಲ್ಲೆಯ ಕಾಪುವಿನ ಶೇಖ್ ಜಲೀಲ್ ಸಾಹೇಬ್ ಅವರ ಅಗಲಿಕೆಗೆ  ಅನೇಕರು ಸಂತಾಪ ಸೂಚಿಸಿದ್ದಾರೆ. ಹೋಟೆಲ್ ನಲ್ಲಿ ಚಹಾ ಕುಡಿಯಲು ಕುಳಿತ್ತಿದ್ದ ವೇಳೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಕೋಲ ಮತ್ತು ಆಶ್ಲೇಷ ಬಲಿ ಸಂದರ್ಭ ನಾಗಸ್ವರ ಸೇವೆ ಸಲ್ಲಿಸುತ್ತಿದ್ದ ಶೇಖ್ ಜಲೀಲ್ ಸಾಹೇಬ್  ಅವರು ಪತ್ನಿ, ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Read More

ಲಂಡನ್ ನ.13 : ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ತಮ್ಮ ತಂಡಕ್ಕೆ ಮಾಜಿ ಪ್ರಧಾನಿಯನ್ನೇ ಸೇರಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ತಮ್ಮ ಸಂಪುಟವನ್ನು ಪುನರ್‌ರಚಿಸಿರುವ ಅವರು ಭಾರತೀಯ ಮೂಲದ ವಿವಾದಿತ ಆಂತರಿಕ ಸಚಿವ ಸುಯೆಲ್ಲಾ ಬ್ರೆವರ್‌ಮನ್ ಅವರನ್ನು ತಮ್ಮ ಸಂಪುಟದಿಂದ ವಜಾಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಮಹತ್ವದ ಬದಲಾವಣೆ ಮಾಡಿದ್ದು, ಮಾಜಿ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರನ್ನು ನೂತನ ವಿದೇಶಾಂಗ ಸಚಿವರನ್ನಾಗಿ ನೇಮಕ ಮಾಡಿದ್ದಾರೆ.

Read More

ನವದೆಹಲಿ ನ.13 : ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಅಭಿನಯದ “ಟೈಗರ್-3” ಪ್ರದರ್ಶನದ ವೇಳೆ ಚಿತ್ರಮಂದಿರದೊಳಗೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಸಂದರ್ಭ ಆತಂಕ ಸೃಷ್ಟಿಯಾದ ಘಟನೆ ಮಹಾರಾಷ್ಟ್ರದ ಮಾಲೆಗಾಂವ್ ನಲ್ಲಿ ನಡೆದಿದೆ. ಮೋಹನ್ ಚಿತ್ರಮಂದಿರದೊಳಗೆ ಸಂಭ್ರಮಾಚರಣೆ ನಡೆಸುತ್ತಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು ಪಟಾಕಿ ಸಿಡಿಸಿದ್ದಾರೆ. ಇದರಿಂದ ಸಿನಿಮಾ ನೋಡುತ್ತಿದ್ದವರ ಮೇಲೆ ಪಟಾಕಿ ಕಿಡಿಗಳು ಬಿದ್ದಿದ್ದು, ಚಿತ್ರಮಂದಿರದಿಂದ ಓಡಲು ಶುರು ಮಾಡಿದ್ದಾರೆ ಎಂದು ಹೇಳಲಾಗಿದೆ. ಘಟನೆಗೆ ವಿಷಾದ ವ್ಯಕ್ತಪಡಿಸಿರುವ ಸಲ್ಮಾನ್ ಖಾನ್ ಪಟಾಕಿ ಸಿಡಿಸದಂತೆ ಮತ್ತು ಯಾರಿಗೂ ತೊಂದರೆ ನೀಡದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

Read More

ಮಡಿಕೇರಿ   ನ.13 : ವೀರಾಜಪೇಟೆಯ ಬಿಟ್ಟಂಗಾಲ ಸಮೀಪದ ಅಂಬಟ್ಟಿ  ಗ್ರಾಮದಲ್ಲಿ ದೀಪಾವಳಿ ಪ್ರಯುಕ್ತ ಹಿಂದೂ ಜಾಗರಣ ವೇದಿಕೆ ವತಿಯಿಂದ ಗೋಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ವೇದಿಕೆಯ ಜಿಲ್ಲಾ ಸಹ ಸಂಯೋಜಕ್ ಯೋಗೇಶ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಸುನಿಲ್ ಮಾದಾಫುರ, ವೀರಾಜಪೇಟೆ ತಾಲ್ಲೂಕು ಸಹ ಸಂಯೋಜಕ್ ಗಣೇಶ್ ಸೇರಿದಂತೆ ಸ್ಥಳೀಯ ಕಾರ್ಯಕರ್ತರು, ಗ್ರಾಮಸ್ಥರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ನ.13 : ನೆಲ್ಯಹುದಿಕೇರಿ ಗ್ರಾಮಕ್ಕೆ ಹೊಂದಿಕೊಂಡಿರುವ ಅರೆಕಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ (ಐದ್ರೋಡಮ್ಮ) ದೇವಿಯ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ನೆಲ್ಯಹುದಿಕೇರಿ ಭಗವತಿ ದೇಗುಲದ ಅರ್ಚಕರಾದ ರಘು ಭಟ್ ಹಾಗೂ ರಾಕೇಶ್ ಭಟ್ ಅವರುಗಳ ನೇತೃತ್ವದಲ್ಲಿ ವಿಶೇಷ ಪೂಜೆಗಳು ನಡೆದವು. ಅಭಿಷೇಕ, ಅಲಂಕಾರ ಮತ್ತು ಮಹಾಪೂಜೆ ನೆರವೇರಿತು. ಮಹಾಮಂಗಳಾರತಿ ನಂತರ ಭಕ್ತರಿಗೆ ಅನ್ನಸಂತರ್ಪಣೆಯಾಯಿತು. ದೇವಾಲಯದ ಅಡಳಿತ ಮಂಡಳಿಯ ಅಧ್ಯಕ್ಷ ರವಿಕುಮಾರ್ ಕೆ.ಎಸ್  ಮಾತನಾಡಿ ರಾಜ್ಯದ ವಿವಿಧ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬರುತ್ತಿರುವ ಭಕ್ತರು ದೇವಿಯ ದರ್ಶನ ಪಡೆದು ತೆರಳುತ್ತಿದ್ದಾರೆ ಎಂದರು.  ಅಡಳಿತ ಮಂಡಳಿಯ ಕಾರ್ಯದರ್ಶಿ ಜಯಣ್ಣ, ಉಪಾಧ್ಯಕ್ಷ ಚಂದ್ರ, ಖಜಾಂಚಿ ಅಳಗು, ಸದಸ್ಯ ಆನಂದ ರಘು ಮತ್ತಿತರರು ಪೂಝೆಯಲ್ಲಿ ಪಾಲ್ಗೊಂಡಿದ್ದರು. (ವರದಿ : ಕಿಶೋರ್ ಕುಮಾರ್ ಶೆಟ್ಟಿ)

Read More

ಸುಂಟಿಕೊಪ್ಪ, ನ.13: ಭಾರತದ ಸಂವಿಧಾನದ ಅಡಿಯಲ್ಲಿ ನಾವೆಲ್ಲಾರೂ ಒಂದು ಎಂಬ ಸಮಾನತೆ ಸೂತ್ರದಡಿಯಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಂಡು ಸಾಮರಸ್ಯ ಬದುಕನ್ನು ಕೊಡಗಿನಲ್ಲಿ ಹಿಂದೂ ಮಲಯಾಳಿ ಸಮಾಜ ಆಗ್ರ ಸ್ಥಾನದಲ್ಲಿದೆ ಎಂದು ಕೊಡಗು ಜಿ.ಪಂ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಮಲಯಾಳಿ ಸಮಾಜದ ಅಧ್ಯಕ್ಷ ವಿ.ಎಂ.ವಿಜಯ ಹೇಳಿದರು. ಕಾನ್‍ಬೈಲ್ ಸರ್ಕಾರಿ ಮಾದರಿ ಶಾಲೆಯಲ್ಲಿ ನಾಕೂರು ಶಿರಂಗಾಲ ಗ್ರಾ.ಪಂ ವ್ಯಾಪ್ತಿಯ ಹಿಂದೂ ಮಲಯಾಳಿ ಸಮಾಜದ ವತಿಯಿಂದ 2ನೇ ವರ್ಷದ ಓಣಂ ಆಚರಣೆಯ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ 14 ಕಡೆಗಳಲ್ಲಿ ಹಿಂದೂ ಮಲಯಾಳಿ ಸಮಾಜದ ಶಾಖೆಗಳು ಇದ್ದು, ಕೂಲಿ ಕಾರ್ಮಿಕರಿಂದ ಹಿಡಿದು ಅತ್ಯಲ್ಪ ಸಂಖ್ಯೆಯಲ್ಲಿ ಶ್ರೀಮಂತರು ನಮ್ಮ ಸಮಾಜದಲ್ಲಿದ್ದು, ಅಚಾರ ವಿಚಾರಗಳು ಹಬ್ಬ ಹರಿದಿನಗಳನ್ನು ನಾವೆಲ್ಲಾರೂ ಒಂದಾಗಿ ಆಚರಿಸುತ್ತಿರುವುದು ವೈಶಿಷ್ಟ್ಯ ಪೂರ್ಣ ಅಂಶವೆಂದು ಬಣ್ಣಿಸಿದರು. ಸಾಮಾನ್ಯವಾಗಿ ಹಬ್ಬ ಹರಿದಿನಗಳಿಗೆ ಶುಭಸಮಾರಂಭಗಳಿಗೆ ನಾವೆಲ್ಲಾರೂ ನಮ್ಮ ಕೈಲಾದ ಸಹಾಯವನ್ನು ಮಾಡುತ್ತೇವೆ ಆದರೆ ಯಾರಿಗೂ ಸಾವು ಯಾವಾಗ ಸಂಭವಿಸುತ್ತದೆ ಎಂಬುದು ಗೊತ್ತಿರುವುದಿಲ್ಲ ಇಲ್ಲಿನ ಸಮಾಜದ ಸದಸ್ಯರು…

Read More

ಮಡಿಕೇರಿ ನ.13 : ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ನಗರ, ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಪಾವತಿಗೊಳಪಡಿಸಲು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪ.ಪಂ ಹೊರಹುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಈರಪ್ಪ ಶೆಟ್ಟಿ ಅವರು, ಹೊರಗುತ್ತಿಗೆ ನೌಕರರನ್ನು ನೇರ ವೇತನ ಪಾವತಿಗೆ ಒಳಪಡಿಸದ್ದಿದ್ದಲ್ಲಿ ನ.15 ರಂದು ರಾಜ್ಯವ್ಯಾಪಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂ ಮಾಡಲು ಮುಂದಾಗಿರುವ ಸರಕಾರ ವಾಹನ ಚಾಲಕರು, ನೀರು ಸರಬರಾಜುದಾರರು, ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಯುಜಿಡಿ ಕಾರ್ಮಿಕರು ಸೇರಿದಂತೆ 15ಸಾವಿರಕ್ಕೂ ಹೆಚ್ಚು ನೌಕರರನ್ನು ಗುತ್ತಿಗೆ ಆಧಾರದಲ್ಲಿ ಉಳಿಸಿಕೊಂಡಿದೆ. ನಗರಗಳ ಸ್ವಚ್ಛತೆ ಮತ್ತು ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. 2017ರಲ್ಲಿ…

Read More

ವಿರಾಜಪೇಟೆ  ನ.13 : ದೀಪಾವಳಿ ಹಬ್ಬದ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿರಾಜಪೇಟೆ ಪ್ರಖಂಡದಿಂದ ಕಾವಾಡಿ ಶ್ರೀ ಗೋ ಶಾಲೆಯಲ್ಲಿ ಗೋ ಪೂಜೆಯನ್ನು ನಡೆಯಿತು. ಮುಕ್ಕೋಟಿ ದೇವರುಗಳು ಗೋವಿನಲ್ಲಿ ನೆಲೆಯಾಗಿದೆ, ಅಮೃತ ರೂಪವಾಗಿ ಕ್ಷೀರವನ್ನೇ ಕೊಡುವ ಮಾತೆ ಗೋವು. ಗೋ ಪರಿಪಾಲಕನಾದ ಕೃಷ್ಣನಿಗೆ ಪ್ರಿಯವಾದ ಕಾಮಧೇನು ಗೋವು ಆಗಿದೆ ಎಂದು ಗೋ ಪೂಜೆ ಮಾಹಿತಿ ನೀಡಿದರು. ಈ ಸಂದರ್ಭ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಂಪರ್ಕ ಪ್ರಮುಖ್ ಕುಟ್ಟಂಡ ಪ್ರೀನ್ಸ್ ಗಣಪತಿ, ಸೇವಾ ಭಾರತೀಯ ಜಿಲ್ಲಾಧ್ಯಕ್ಷ ಟಿ.ಸಿ.ಚಂದ್ರ, ಬಜರಂಗದಳ ಜಿಲ್ಲಾ ಸಹ ಸಂಯೋಜಕ ವಿವೇಕ್ ರೈ, ತಾಲ್ಲೂಕು ಸಂಚಾಲಕ ಐನಂಡ ಕುಶಾಲಪ್ಪ, ಗೋ ಪರಿವಾರದ ಸೋಮಶೇಖರ್, ಜಾಗರಣ ವೇದಿಕೆ ತಾಲೂಕು ಸಂಚಾಲಕ ಗಣೇಶ್, ಗೋರಕ್ಷಾ ಪ್ರಮುಖ್ ಶರೀನ್, ರಾಜ, ವಿಶ್ವ ಹಾಗೂ ಸಂಘಟನೆ ಪ್ರಮುಖರು ಹಾಜರಿದ್ದರು.

Read More

ವಿರಾಜಪೇಟೆ ನ.13 : ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ದೇವಾಲಯದ ಅರ್ಚಕರಾದ ವಾಮನಮೂರ್ತಿ ಭಟ್ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಮೊದಲಿಗೆ ಅರ್ಚಕರು ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ವನದುರ್ಗೆ, ಶ್ರೀ ನಾಗ ಗುಡಿಯಲ್ಲಿ ವಿಶೇಷ ಅಲಂಕಾರ ಮತ್ತು ಪೂಜೆಯನ್ನು ನೆರವೇರಿಸಿ ಅರ್ಚನೆ ಮಾಡಿದರು. ದೀಪಾವಳಿ ಪ್ರಯುಕ್ತ ತುಳಸಿ ಪೂಜೆಯನ್ನು ದೇವಾಲಯದ ಆವರಣದಲ್ಲಿ ನೆರವೇರಿಸಿ, ಕುಂಕುಮಾರ್ಚನೆ, ಪುಷ್ಪರ್ಚನೆ ಹಾಗೂ ಅಷ್ಟೋತ್ತರವನ್ನು ಪಠಿಸಲಾಯಿತು. ಮಹಾ ಮಂಗಳಾರತಿ ನಂತರ ಪ್ರಸಾದ ವಿತರಣೆನೆರವೇರಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯವರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

Read More