ಮಡಿಕೇರಿ ಅ.16 : ಜನಪ್ರಿಯ ಚಲನಚಿತ್ರ “ಕಾಂತಾರ”ದ ದೈವದ ಕಲಾಕೃತಿ ಮಡಿಕೇರಿ ದಸರಾ ಜನೋತ್ಸವದಲ್ಲಿ ಕಲಾಭಿಮಾನಿಗಳನ್ನು ಆಕರ್ಷಿಸುತ್ತಿದೆ. ಮೈಸೂರಿನ ಮರಳು ಶಿಲ್ಪಿ ಎಂ.ಎನ್.ಗೌರಿ ಅವರು ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯ ಮುಂಭಾಗದಲ್ಲಿ ಕಳೆದ ಮೂರು ದಿನಗಳ ಸತತ ಪರಿಶ್ರಮದ ಮೂಲಕ ದೈವದ ಮರಳಿನ ಕಲಾಕೃತಿಯನ್ನು ಸುಂದರವಾಗಿ ರೂಪಿಸಿದ್ದಾರೆ. ‘ಕಾಂತಾರ” ಚಲನಚಿತ್ರದಲ್ಲಿ ಬರುವ ದೈವ ಪ್ರಕೃತಿಯ ರಕ್ಷಣೆಯ ದ್ಯೋತಕವಾಗಿ ಕಂಡು ಬರುತ್ತದೆ. ಈ ಹಿನ್ನೆಲೆ ಕೊಡಗಿನ ಸುಂದರ ಪರಿಸರ ರಕ್ಷಣೆಯಾಗಲಿ ಎನ್ನುವ ಸಂದೇಶವನ್ನು ನೀಡುವ ಮೂಲ ಚಿಂತನೆಯಡಿ ಕಾಂತಾರದ ದೈವವನ್ನು ಮರಳು ಶಿಲ್ಪವಾಗಿಸಿದ್ದೇನೆ’ ಎಂದು ಗೌರಿ ಹೇಳಿದರು. ದೇಶ ವಿದೇಶಗಳಲ್ಲಿ ಮರಳು ಶಿಲ್ಪವನ್ನು ರಚಿಸುವ ಮೂಲಕ ಪ್ರಖ್ಯಾತರಾಗಿರುವ ಮೈಸೂರಿನ ನಂಜುಂಡಸ್ವಾಮಿ ಮತ್ತು ನಾಗಲಾಂಬಿಕೆ ಅವರ ಪುತ್ರಿ, ಫೈನ್ ಆಟ್ರ್ಸ್ ಪದವೀಧರೆ ಗೌರಿ ಅವರು, ಮಡಿಕೇರಿ ದಸರಾಕ್ಕೆ ರಚಿಸಿರುವ ಕಾಂತಾರ ದೈವದ ಕಲಾಕೃತಿ, ಒಟ್ಟಾರೆ ಇವರ 66 ನೇ ಕಲಾಕೃತಿಯಾಗಿದೆ. ಸುಮಾರು ಹನ್ನೆರಡು ವರ್ಷಗಳ ಹಿಂದೆ ಮಡಿಕೇರಿ ದಸರಾದಲ್ಲಿ ‘ಮಹಿಷಾಸುರ ಮರ್ಧಿನಿ’ ಕಲಾಕೃತಿಯನ್ನು,…
ಲೇಖಕ: admin
ಪುತ್ತೂರು ಅ.16 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಭುವನ್ ರಾಮ್ ಜಗದೀಶ್ ಭಂಡಾರಿ ಇವರು ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ಭಾರ ಎತ್ತುವ ಸ್ಪರ್ಧೆಯಲ್ಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಮೈಸೂರಿನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್ ರಾಮ್ 73 ಕೆಜಿ ವಿಭಾಗದಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ. ಇವರು ಪುತ್ತೂರಿನ ಜಗದೀಶ್ ಭಂಡಾರಿ ಹಾಗೂ ನಯನಾ ಭಂಡಾರಿ ದಂಪತಿ ಪುತ್ರ. ಭುವನ್ ರಾಮ್ ಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಭಾರತೀಯ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನ ವಿಶ್ರಾಂತ ಯೋಧ ಹಾಗೂ ರಾಷ್ಟ್ರೀಯ ವೈಟ್ ಲಿಫ್ಟರ್ ಪುಷ್ಪರಾಜ್ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ. ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಅವರು ವಿದ್ಯಾರ್ಥಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮಡಿಕೇರಿ ಅ.16 : ಮಡಿಕೇರಿ ದಸರಾ ಜನೋತ್ಸವದಲ್ಲಿ ಡಿಜೆ ಬಳಸುವ ಸಂದರ್ಭ ಸುಪ್ರೀಂಕೋರ್ಟ್ ಸೂಚಿಸಿರುವ ನಿಯಮವನ್ನು ಪಾಲಿಸದಿದ್ದಲ್ಲಿ ಜಿಲ್ಲಾಡಳಿತದ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ವಕೀಲರು ಹಾಗೂ ಸಮಾಜಿಕ ಹೋರಾಟಗಾರರಾದ ಅಮೃತೇಶ್ ಎನ್.ಪಿ. ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ವಾಯ್ಸ್ ಆಫ್ ಪಬ್ಲಿಕ್ ಮೂಲಕ ಸುದ್ದಿಗೋಷ್ಠಿ ನಡೆಸಿದ ಅವರು ಡಿಜೆ ಶಬ್ಧದಿಂದ ಪ್ರಾಣಕ್ಕೆ ಕುತ್ತು ಬರಲಿದೆ ಮತ್ತು ಲೇಸರ್ ಬೆಳಕಿನಿಂದ ಕಣ್ಣಿಗೆ ಹಾನಿಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ 10 ವರ್ಷಗಳಿಂದ ವಿವಿಧ ಸಂಘಟನೆಗಳು ದಸರಾದಲ್ಲಿ ಡಿಜೆ ಬಳಕೆ ವಿರುದ್ಧ ಆಕ್ಷೇಪ ಸಲ್ಲಿಸುತ್ತಾ ಬಂದಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಈ ಬಾರಿ ನಡೆಯುವ ಮಡಿಕೇರಿ ದಸರಾವನ್ನು ಚಿತ್ರೀಕರಿಸಿ ನ್ಯಾಯಾಲಯಕ್ಕೆ ನೀಡಲಾಗುವುದು. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪರಿಸರ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಶಮಂಟಪ ಸಮಿತಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು ಎಂದರು. ಡಿಜೆಯನ್ನು ಸಂಪೂರ್ಣ ನಿಷೇಧ ಮಾಡಿ ಎಂದು ನಾವು…
ಮಡಿಕೇರಿ ಅ.15 : ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಹಿನ್ನೆಲೆ ಶ್ರೀ ಭಾಗಮಂಡಲ ಭಗಂಡೇಶ್ವರ ಮತ್ತು ತಲಕಾವೇರಿ ಪವಿತ್ರ ಕ್ಷೇತ್ರದಲ್ಲಿ ಸಿದ್ಧತೆಗಳು ಭರದಿಂದ ಸಾಗಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾನುವಾರ ಭಾಗಮಂಡಲ ಭಗಂಡೇಶ್ವರ ದೇವಾಲಯ, ತ್ರಿವೇಣಿ ಸಂಗಮ ಹಾಗೆಯೇ ತಲಕಾವೇರಿ ಕೇತ್ರಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಭಾಗಮಂಡಲ ದೇವಾಲಯದಲ್ಲಿ ನಂದಾದೀಪ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು, ತಕ್ಕ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಕ್ಷಯ ಪಾತ್ರೆ ಇರಿಸಿದರು. ನಂತರ ಭಾಗಮಂಡಲದ ಭಗಂಡೇಶ್ವರ, ಮಹಾಗಣಪತಿ, ಸುಬ್ರಮಣ್ಯ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಅಲ್ಲಿನ ಸಿದ್ಧತೆಗಳನ್ನು ಪರಿಶೀಲಿಸಿ, ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಾಂಸ್ಕೃತಿಕ ಗೀತಾ ಗಾಯನ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ, ಭಕ್ತಾಧಿಗಳ ಅನುಕೂಲಕ್ಕಾಗಿ…
ಮಡಿಕೇರಿ ಅ.15 – ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಸಾಂಸ್ಕೃತಿಕ ಕಾಯ೯ಕ್ರಮಗಳು ಅ.16 ರಿಂದ ಪ್ರಾರಂಭವಾಗಲಿದೆ. ಆರಂಭಿಕ ದಿನವೇ ಸಂಗೀತ, ನೖತ್ಯ, ವಾದ್ಯಗಳ ಸಂಗಮದ ವೈವಿಧ್ಯತೆಗಳು ಮೂಡಿಬರಲಿದೆ. ಸಂಜೆ 7 ಗಂಟೆಯಿಂದ ನಗರದ ಗಾಂಧಿ ಮೈದಾನದಲ್ಲಿನ ಕಲಾಸಂಭ್ರಮ ವೇದಿಕೆಯಲ್ಲಿ ಪ್ರಥಮ ದಿನದ ಆಕಷ೯ಣೆಯಾಗಿ ಅಂತರರಾಷ್ಟ್ರೀಯ ಖ್ಯಾತಿಯ ಬೆಂಗಳೂರಿನ ಕಲಾವಿದ ಡ್ರಮ್ ದೇವಾ ಅವರ ತಂಡದಿಂದ ವಾದ್ಯ ಮತ್ತು ಸಂಗೀತ ಕಾಯ೯ಕ್ರಮ ಇರುತ್ತದೆ. ವಿವಿಧ ಭಾಷೆಗಳ 600 ಕ್ಕೂ ಅಧಿಕ ಸಿನಿಮಾಗಳಲ್ಲಿ ವಾದ್ಯಸಂಗೀತಕಾರನಾಗಿ ಕಾಯ೯ನಿವ೯ಹಿಸಿರುವ ಡ್ರಮ್ ದೇವ ವಿದೇಶಗಳಲ್ಲಿಯೂ ಕಾಯ೯ಕ್ರಮ ನೀಡಿದ್ದಾರೆ. ಮಡಿಕೇರಿ ದಸರಾ ಸಾಂಸ್ಕೖತಿಕ ಕಾಯ೯ಕ್ರಮಗಳ ಮೊದಲ ದಿನ ದೇವಾ ಅವರೊಂದಿಗೆ ಎದೆ ತುಂಬಿ ಹಾಡಿದೆನು ಖ್ಯಾತಿಯ ಗಾಯಕ ಪುರುಷೋತ್ತಮ, ಸರಿಗಮಪ ಖ್ಯಾತಿಯ ಹಂಸಿನಿ, ದಿವ್ಯಾಯಾದವ್, ಮನುಯಾದವ್ ಸೇರಿದಂತೆ ಅನೇಕ ಗಾಯಕರು, ಖ್ಯಾತ ವಾದ್ಯ ಸಂಗೀತಕಾರರಿಂದ ಕಾಯ೯ಕ್ರಮ ಆಯೋಜಿತವಾಗಿದೆ. ವೀರಾಜಪೇಟೆಯ ನಾಟ್ಯಾಂಜಲಿ ನೖತ್ಯ ಸಂಸ್ಥೆಯಿಂದ ನೖತ್ಯ ವೈವಿಧ್ಯ, ಮಡಿಕೇರಿಯ ಕಲಾಕಾವ್ಯ ನಾಟ್ಯಶಾಲಾ ವಿದ್ಯಾಥಿ೯ಗಳಿಂದ ನೖತ್ಯವೈವಿಧ್ಯ , ಮದೆನಾಡಿನ ಶ್ರೀ…
ಮಡಿಕೇರಿಯಲ್ಲಿ ಅ.22 ರಂದು ಮಹಿಳಾ ದಸರಕ್ಕಾಗಿ ವೈವಿಧ್ಯಮಯ ಸ್ಪಧೆ೯ಗಳು. ಅ.22 ರಂದು ಮಹಿಳಾ ದಸರಾ – ಸ್ಥಧಿ೯ಗಳು ಸ್ಥಳದಲ್ಲಿಯೇ ಹೆಸರು ನೋಂದಾಯಿಸಬಹುದು. ಮಡಿಕೇರಿ ಅ.15- ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ವತಿಯಿಂದ ನಗರಸಭಾ ಸದಸ್ಯೆಯರು, ಮಹಿಳೆಯರ ಬಳಗ, ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೖದ್ದಿ ಇಲಾಖೆ ಸಹಯೋಗದಲ್ಲಿ ಅಕ್ಟೋಬರ್ 22 ರಂದು ಭಾನುವಾರ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿರುವ ಮಹಿಳಾ ದಸರಾದ ವಿವಿಧ ಸ್ಪಧೆ೯ಗಳಿಗೆ ಸ್ಲಳದಲ್ಲಿಯೇ ಹೆಸರು ನೋಂದಾಯಿಸಬಹುದಾಗಿದೆ. ದಸರಾ ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಮತ್ತು ಮಹಿಳಾ ದಸರಾ ಸಮಿತಿ ಸಂಚಾಲಕಿ ಕುಡೆಕಲ್ ಸವಿತಾ ಸಂತೋಷ್ ಜಂಟಿ ಪ್ರಕಣೆಯಲ್ಲಿ ತಿಳಿಸಿದ್ದಾರೆ. ಅ.22 ರಂದು ಬೆಳಗ್ಗೆ 10 ಗಂಟೆಯಿಂದಲೇ ನಗರದ ಗಾಂಧಿ ಮೈದಾನದಲ್ಲಿ 8ನೇ ವಷ೯ದ ಮಹಿಳಾ ದಸರಾವನ್ನು ಸಂಭ್ರಮದಿಂದ ಆಚರಿಸಲು ತೀರ್ಮಾನಿಸಲಾಗಿದ್ದು, ವಿವಿಧ ಸ್ಪಧೆ೯ಗಳನ್ನು ಜಿಲ್ಲೆಯ ಮಹಿಳೆಯರಿಗಾಗಿ ಆಯೋಜಿಸಲಾಗಿದೆ. ಮಹಿಳಾ ದಸರಾ ಅಂಗವಾಗಿನ ಸ್ಪಧೆ೯ಗಳ ವಿವರ ಇಂತಿದೆ. ಎಥ್ ನಿಕ್ ಫ್ಯಾಷನ್ ಶೋ 20 ರಿಂದ…
ಮಡಿಕೇರಿ ಅ.15 : ಮಡಿಕೇರಿ ದಸರಾದ ದಶ ಮಂಟಪಗಳಿಗೆ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರು ವೈಯುಕ್ತಿಕ ಆರ್ಥಿಕ ನೆರವು ನೀಡಿದ್ದಾರೆ. ದಶಮಂಟಪ ಹಾಗೂ ನಾಲ್ಕು ಕರಗ ಮಂಟಪಗಳಿಗೆ ಕಳೆದ ವರ್ಷದಿಂದ ವೈಯುಕ್ತಿಕ ನೆರವು ನೀಡುತ್ತಾ ಬಂದಿರುವ ಮಡಿಕೇರಿ ಶಾಸಕರು ಈ ಬಾರಿ ಕೂಡ ನೆರವಿನ ಹಸ್ತ ಚಾಚಿದರು. ಇಂದು ದಶಮಂಟಪಗಳ ದೇವಾಲಯಗಳಿಗೆ ಭೇಟಿ ನೀಡಿದ ಡಾ.ಮಂಥರ್ ಗೌಡ ವೈಯುಕ್ತಿಕವಾಗಿ ಕರಗ ದೇವಾಲಯಗಳಿಗೆ ತಲಾ 50 ಸಾವಿರ ರೂ. ಹಾಗೂ ಇತರ ದೇವಾಲಯಗಳಿಗೆ 30 ಸಾವಿರ ರೂ.ಗಳನ್ನು ದೇಣಿಗೆಯಾಗಿ ನೀಡಿ ಪೂಜೆ ಸಲ್ಲಿಸಿದರು. ::: ಹೆಚ್ಚುವರಿ ಅನುದಾನ ::: ಕಳೆದ ವರ್ಷ ದಸರಾ ಸಮಯದಲ್ಲಿ ಖುದ್ದಾಗಿ ಮಂಟಪ ರಚನೆಯ ಕಾರ್ಯಗಳನ್ನು ತಾವು ವೀಕ್ಷಿಸಿದ್ದು, ಮಂಟಪ ಸಿದ್ಧತೆಯಲ್ಲಿ ನೂರಾರು ಪದಾಧಿಕಾರಿಗಳು ಪಡುವ ಶ್ರಮವನ್ನು ಕಣ್ಣಾರೆ ಕಂಡಿದ್ದೇನೆ. ಈ ನಿಟ್ಟಿನಲ್ಲಿ ಮಂಟಪ ಸಮಿತಿಗಳಿಗೆ ಆದ್ಯತೆ ನೀಡಿ ಇದೀಗ 20 ಲಕ್ಷ ರೂ.ಗಳ ಹೆಚ್ಚುವರಿ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿದ್ದೇನೆ ಎಂದು ತಿಳಿಸಿದರು. ದಶ ಮಂಟಪ…
ಸೋಮವಾರಪೇಟೆ ಅ.15 : ಚಿತ್ರದುರ್ಗ ಬೃಹನ್ಮಠಕೆ ಸೇರಿದ ಬೇಳೂರು ಮಠದ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಆಡಳಿತಾಧಿಕಾರಿಗಳ ಪರವಾಗಿ ಮಾಹಿತಿ ಸಂಗ್ರಹಿಸಲು ಬಂದಿದ್ದ ಪ್ರತಿನಿಧಿಯ ಮುಂದೆ ವಾಗ್ವಾದ ನಡೆದು ಕೆಲಕಾಲ ಬೇಳೂರು ಮಠದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಘಟನೆ ಭಾನುವಾರ ನಡೆದಿದೆ. ಪೋಕ್ಸೋ ಮೋಖದಮ್ಮೆಯಿಂದಾಗಿ ಮುರುಘಾ ಶರಣರು ಜೈಲು ಸೇರಿದ ನಂತರ ಮುರುಘಾ ಮಠದ ವಿಚಾರಗಳು ಒಂದೊಂದಾಗಿ ವಿವಾದ ಪಡೆದುಕೊಳ್ಳುತ್ತಿವೆ. ಕೊಡಗು ಜಿಲ್ಲೆಯಲ್ಲೂ ಅಂದಿನ ರಾಜರು ನೀಡಿದ 3500 ಎಕರೆ ಜಮೀನು ಇಂದು ಕೇವಲ 550 ಎಕರೆಗೆ ಬಂದು ನಿಂತಿದೆ. ಉಳುವವನಿಗೆ ಭೂಮಿ ಕಾಯಿದೆ ಅನ್ವಯ ಒಂದಷ್ಟು ಭೂಮಿ ಉಳುವವರ ಪಾಲಾದರೆ ಬಹುತೇಕ ಭೂಮಿ ಅನಧಿಕೃತವಾಗಿ ಪರಭಾರೆಯಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ವಸ್ತುಸ್ಥಿತಿ ತಿಳಿದು ವರದಿ ನೀಡಲು ಬೃಹನ್ಮಠದ ಆಡಳಿತಾಧಿಕಾರಿಗಳು, ಮಠದ ಕಾನೂನು ಸಲಹೆಗಾರರು ಹಾಗೂ ಹಿರಿಯ ವಕೀಲರಾದ ವಿಶ್ವನಾಥ್ ಅವರು ಶನಿವಾರ ಜಿಲ್ಲೆಗೆ ಆಗಮಿಸಿ ಚಂಗದಹಳ್ಳಿ ಮಠದಲ್ಲಿ ಮಾಹಿತಿ ಸಂಗ್ರಹಿಸಿದರು. ಭಾನುವಾರ ಬೇಳೂರು ಮಠಕ್ಕೆ ಸೇರಿದ ಮಾದಾಪುರ, ಗುತ್ತಿಮಠ ಮತ್ತು…
ಮಡಿಕೇರಿ ಅ.15 : ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಭಾನುವಾರ ಶ್ರದ್ಧಾಭಕ್ತಿಯಿಂದ ಚಾಲನೆ ದೊರೆಯಿತು. ಆ ಮೂಲಕ ನಾಲ್ಕು ಶಕ್ತಿ ದೇವತೆಗಳು ನಗರ ಸಂಚಾರವನ್ನು ಆರಂಭಿಸಿದವು. ನಗರದ ನಾಲ್ಕು ಶಕ್ತಿ ದೇವತೆಗಳಾದ ಕುಂದೂರು ಮೊಟ್ಟೆ ಶ್ರೀಚೌಟಿ ಮಾರಿಯಮ್ಮ ದೇವಾಲಯ, ಶ್ರೀದಂಡಿನ ಮಾರಿಯಮ್ಮ ದೇವಾಲಯ, ಶ್ರೀಕೋಟೆ ಮಾರಿಯಮ್ಮ ದೇವಾಲಯ ಮತ್ತು ಶ್ರೀಕಂಚಿ ಕಾಮಾಕ್ಷಿ ದೇವಾಲಯಗಳ ಕರಗಗಳಿಗೆ ನಗರದ ಪಂಪಿನಕೆರೆಯಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಕರಗೋತ್ಸವಕ್ಕೆ ಚಾಲನೆ ನೀಡಲಾಯಿತು. ಕುಂದೂರು ಮೊಟ್ಟೆ ಶ್ರೀಚೌಟಿ ಮಾರಿಯಮ್ಮ ದೇವಾಲಯದ ಕರಗವನ್ನು ಚಾಮಿ, ಶ್ರೀದಂಡಿನ ಮಾರಿಯಮ್ಮ ದೇವಾಲಯದ ಕರಗವನ್ನು ಉಮೇಶ್, ಶ್ರೀಕೋಟೆ ಮಾರಿಯಮ್ಮ ದೇವಾಲಯ ಕರಗವನ್ನು ಅನೀಸ್ ಹಾಗೂ ಶ್ರೀಕಂಚಿ ಕಾಮಾಕ್ಷಿ ದೇವಾಲಯದ ಕರಗವನ್ನು ಕಾರ್ತಿಕ್ ಅವರು ಹೊತ್ತಿದ್ದರು. ನಾಲ್ಕು ಕರಗಗಳು 9 ದಿನಗಳ ನಗರ ಸಂಚಾರ ಮಾಡಿ ಭಕ್ತರಿಂದ ಪೂಜೆ ಸ್ವೀಕರಿಸಲಿವೆ. ಪಂಪಿನಕೆರೆಯಲ್ಲಿ ಪೂಜೆ ಸಲ್ಲಿಸುವ ಸಂದರ್ಭ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ…
ಮಡಿಕೇರಿ ಅ.14 : ಮುಖವಾಡ ಮತ್ತು ಕರ್ಕಷ ಧ್ವನಿ ಹೊರಡಿಸುವ ಎಲ್ಲಾ ಮಾದರಿಯ ತುತ್ತೂರಿಗಳನ್ನು ಈ ಬಾರಿ ಮಡಿಕೇರಿ ದಸರಾದಲ್ಲಿ ನಿಷೇಧಿಸಲಾಗಿದೆ. ಅದನ್ನು ಬಳಸಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮುಖವಾಡ ಮತ್ತು ಕರ್ಕಷ ಧ್ವನಿಯ ತುತ್ತೂರಿಗಳನ್ನು ಬಳಸುವವರ ವಿರುದ್ಧ ದಂಡ ವಿಧಿಸಲು ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ಮಾತ್ರವಲ್ಲದೇ ಇವುಗಳನ್ನು ಮಾರಾಟ ಮಾಡುವ ಮಳಿಗೆಗಳನ್ನು ತೆರವು ಮಾಡುವಂತೆಯೂ ಪೊಲೀಸರಿಗೆ ತಿಳಿಸಲಾಗಿದೆ ಎಂದು ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ ತಿಳಿಸಿದ್ದಾರೆ.






