ನಾಪೋಕ್ಲು ನ.28 NEWS DESK : ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ವತಿಯಿಂದ ಕೊಡವ ಸಮಾಜದಲ್ಲಿ ನಡೆದ ಲಯನ್ಸ್ ಕ್ಲಬ್ ಕಾರ್ಯಕ್ರಮದಲ್ಲಿ ಕ್ಲಬ್ನ ಹಿರಿಯ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಸ್ಥಳೀಯ ಲಯನ್ಸ್ ಕ್ಲಬ್ ಹಾಗೂ ಇತರ ಸಂಘ ಸಂಸ್ಥೆಗಳಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸಿ ಸಮಾಜ ಸೇವೆ ಮಾಡಿರುವ ನಾಪೋಕ್ಲುಲಯನ್ಸ್ ಕ್ಲಬ್ನ ಹಿರಿಯ ಸದಸ್ಯರುಗಳಾದ ಅಪ್ಪಾರಂಡ ಸಮ್ಮಿ ಅಪ್ಪಣ್ಣ, ಕುಂಡ್ಯೋಳಂಡ ಗಣೇಶ್ ಮುತ್ತಪ್ಪ, ಅಪ್ಪಾರಂಡ ಸುಭಾಷ್ ತಿಮ್ಮಯ್ಯ ಅವರನ್ನು ವೇದಿಕೆಯಲ್ಲಿದ್ದ ಗಣ್ಯರು ಸನ್ಮಾನಿಸಿ ಗೌರವಿಸಿದರು. ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಮಾದೆಯಂಡ ಬಿ.ಕುಟ್ಟಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಂತೀಯ ಅಧ್ಯಕ್ಷೆ ಭೇಟಿ ಸಮಾರಂಭದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಲಯನ್ಸ್ ಕ್ಲಬ್ ನ ಪ್ರಾಂತೀಯ ಅಧ್ಯಕ್ಷೆ ಬಿಂದು ಗಣಪತಿ, ಲಯನ್ಸ್ ಜೋನ್ ಅಧ್ಯಕ್ಷ ಡಾ.ಕೋಟೆರ ಪಂಚಮ್ ತಿಮ್ಮಯ್ಯ, ಸ್ಥಳೀಯ ಲಯನ್ಸ್ ಕ್ಲಬ್ ಕಾರ್ಯದರ್ಶಿ ಬನ್ಸಿ ಭೀಮಯ್ಯ, ಖಜಾಂಚಿ ಅಪ್ಪಚೆಟೋಳಂಡ ವಸಂತ ಮುತ್ತಪ್ಪ, ಲಿಯೋ ಕ್ಲಬ್ ಅಧ್ಯಕ್ಷೆ ಕನ್ನಿಕಾ, ಕಾರ್ಯದರ್ಶಿ ದೃವ್ ದೇವಯ್ಯ,…
ಲೇಖಕ: admin
ನಾಪೋಕ್ಲು ನ.28 NEWS DESK : ಡೆಕ್ಕನ್ ಯೂತ್ ಕ್ಲಬ್ ವತಿಯಿಂದ ಸಾಧಕ ಮಕ್ಕಳ ಪೋಷಕರು ಹಾಗೂ ಸಮಾಜ ಸೇವಕರನ್ನು ಸನ್ಮಾನಿಸಿದರು. ಡೆಕ್ಕನ್ ಯೂತ್ ಕ್ಲಬ್ ಅಧ್ಯಕ್ಷ ಜೈನುಲ್ ಆಬಿದ್ ಅವರ ಅಧ್ಯಕ್ಷತೆಯಲ್ಲಿ ನಾಪೋಕ್ಲುವಿನ ಕೆಪಿಎಸ್ ಶಾಲಾ ಆಟದ ಮೈದಾನದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯ ಸನ್ಮಾನ ಕಾರ್ಯಕ್ರಮದಲ್ಲಿ ಉನ್ನತ ಶ್ರೇಣಿಯಲ್ಲಿ ಅಂಕ ಪಡೆದು ವೈದ್ಯಕೀಯ ಶಿಕ್ಷಣದಲ್ಲಿ ಸರ್ಕಾರಿ ಸೀಟು ಪಡೆದ ವಿದ್ಯಾರ್ಥಿಗಳಾದ ಎಂ.ಎಂ.ಶಮ ಇವರ ಪೋಷಕರಾದ ಡೆಕ್ಕನ್ ಯೂತ್ ಕ್ಲಬ್ ಮಾಜಿ ಅಧ್ಯಕ್ಷರು, ಜೆಡಿಎಸ್ ವಕ್ತರ ಎಂ.ಎ.ಮನ್ಸೂರ್ ಆಲಿ ಹಾಗೂ ಹಫೀಯ ಫಾತಿಮಾ ಪೋಷಕರಾದ ಹುಸೇನ್ ಮತ್ತು ವಿರಾಜಪೇಟೆಯ ಸರಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಶನ್ ಆಗಿ ಕಾರ್ಯನಿರ್ವಹಿಸುತ್ತಿರುವ ಇಂದಿರ ನಗರದ ನಿವಾಸಿ ಪಿ.ಜಿ ಸುಬ್ರಮಣಿ ಅವರನ್ನು ಡೆಕ್ಕನ್ ಯೂತ್ ಕ್ಲಬ್ ಪರವಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹಂಸ ಕೊಟ್ಟಮುಡಿ, ವಿಎಸ್ಎಸ್ಎನ್ ನಿರ್ದೇಶಕ ಅರೆಯಡ ರತ್ನ ಪೆಮ್ಮಯ್ಯ, ನಾಪೋಕ್ಲು ಪಂಚಾಯತಿ…
ಮಡಿಕೇರಿ ನ.28 NEWS DESK : ಕಾಂತೂರು-ಮೂರ್ನಾಡು , ಹೊದ್ದೂರು ಪಂಚಾಯಿತಿ , ಕಂದಾಯ ಇಲಾಖೆಯ ನೇತೃತ್ವದಲ್ಲಿ ಬೃಂದಾವನ ಆಸ್ಪತ್ರೆ ಮೈಸೂರು ಸಹಯೋಗದಲ್ಲಿ ಮೂರ್ನಾಡುವಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಮೂರ್ನಾಡುವಿನ ಪಿ.ಎಂ ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಿಬಿರದಲ್ಲಿ 200ಕ್ಕು ಹೆಚ್ಚು ಸಾರ್ವಜನಿಕರು ಪಾಲ್ಗೊಂಡು ಉಚಿತವಾಗಿ ಬಿಪಿ, ಶುಗರ್, ನೇತ್ರ, ಮೂಳೆ, ಕೀಲು , ನರರೋಗ, ಕಿವಿ ಮೂಗು, ಗಂಟಲು ತಪಾಸಣೆ,ಸ್ತ್ರೀರೋಗ ತಜ್ಞರಿಂದ ತಪಾಸಣೆ ಮಾಡಿಸಿಕೊಂಡು ಔಷಧಿಯನ್ನು ಪಡೆದರು. ಹಿರಿಯ ತಜ್ಞರಿಂದ ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಹಾಗೂ ನೇತ್ರ ತಪಾಸಣೆ ನಡೆಸಲಾಯಿತು. ಮೈಸೂರು ಬೃಂದಾವನ ಆಸ್ಪತ್ರೆಯ ನಿರ್ದೇಶಕರಾದ ಡಾ.ಮಾತಂಡ ಆರ್.ಅಯ್ಯಪ್ಪ ಶಿಬಿರವನ್ನು ಉದ್ಘಾಟಿಸಿ, ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಕಿವಿಮಾತು ಹೇಳಿದರು. ವೈದ್ಯರಾದ ಡಾ.ಮನೋರಂಜಿನಿ, ಡಾ.ಶ್ರೇಯಸ್, ಡಾ.ಅಂಕಿತ , ಸಿಬ್ಬಂದಿಗಳಾದ ಪಿ.ಆರ್.ಓ ಗುರುರಾಜ್ ಹಾಗೂ ಮುರುಳಿ, ಆಸ್ಪತ್ರೆಯ…
ಕುಶಾಲನಗರ ನ.28 NEWS DESK : ಹನ್ನೆರಡನೇ ಶತಮಾನದ ವಚನಕಾರರು ರಚಿಸಿದ ವಚನಗಳಲ್ಲಿ ಮನುಷ್ಯನ ಬದುಕನ್ನು ಸುಂದರ ಗೊಳಿಸುವ ಜೀವನ ಮೌಲ್ಯಗಳು ಅಡಕವಾಗಿದ್ದು ಅವುಗಳನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿತ್ವವನ್ನು ಹೊಳಪು ಮಾಡಿಕೊಳ್ಳಿ ಎಂದು ತುಮಕೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಗಮಕ ಕಲಾ ವಿದ್ವಾನ್ ಎಸ್.ಜಿ.ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ” ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆಗಳು ” ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಪಠ್ಯಗಳ ಜೊತೆಯಲ್ಲಿ ನೈತಿಕ ಪ್ರಜ್ಞೆ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವ ಶರಣರ ವಚನಗಳನ್ನು ಅರಿತರೆ ಬದುಕು ಸಾರ್ಥಕ ವಾಗುತ್ತದೆ. ಕನ್ನಡ ಸಾಹಿತ್ಯವನ್ನು ವಿಶ್ವ ಮಟ್ಟದಲ್ಲಿ ಶ್ರೀಮಂತ ಗೊಳಿಸಿದ ವಚನಸಾಹಿತ್ಯ ಈ ನೆಲ ಮೂಲ ಸಂಸ್ಕ್ರತಿಯ ತಾಯಿ ಬೇರು ಎಂದು ಸಿದ್ದರಾಮಯ್ಯ ವ್ಯಾಖ್ಯಾನಿಸಿದರು. ಯಾರಿಗೂ ನೋವಾಗದಂತೆ…
ಮಡಿಕೇರಿ ನ.28 NEWS DESK : ಮಡಿಕೇರಿ ಕೊಡವ ಸಮಾಜ ವತಿಯಿಂದ ಆಯೋಜಿಸಿದ ಆಲ್ ಮರ ನಡ್’ಪ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭಾಗವಹಿಸಿ, ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣ ಬಳಿ ಇರುವ ಕೋಲ್ ಮಂದ್ ಜಾಗದಲ್ಲಿ ಆಲದ ಗಿಡ ನೆಟ್ಟರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಮಡಿಕೇರಿ ಕೊಡವ ಸಮಾಜ ಅಧ್ಯಕ್ಷ ಮಂಡುವಂಡ ಪಿ ಮುತ್ತಪ್ಪ, ಸದಸ್ಯರು ಪದಾಧಿಕಾರಿಗಳು, ನಾಪೋಕು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ತೆನ್ನಿರ ಮೈನಾ,ಆಹ್ವಾನಿತ ಗಣ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಗೋಣಿಕೊಪ್ಪ ನ.28 NEWS DESK : ಪೋಲಿಯೋ ನಿರ್ಮೂಲನೆಗೆ ಅಳವಡಿಸುವ ಲಸಿಕೆಗೆ ಕಳೆದ ಬಾರಿ ಮೂರು ಬಿಲಿಯನ್ ಅಸಾಧಾರಣ ಮೊತ್ತದ ವೆಚ್ಚವನ್ನು ರೋಟರಿ ಸಂಸ್ಥೆ ನಿಭಾಯಿಸಿದೆ ಎಂದು ರೋಟರಿ ಸಂಸ್ಥೆಯ ಜಿಲ್ಲಾ ಗವರ್ನರ್ ಪಿ.ಕೆ ರಾಮಕೃಷ್ಣ ತಿಳಿಸಿದರು. ಗೋಣಿಕೊಪ್ಪ ರೋಟರಿ ಸಂಸ್ಥೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಹಿನ್ನೆಲೆ ಕುಕೂನ್ ಸಭಾಂಗಣದಲ್ಲಿ ಹಮ್ಮಿಕೊಂಡ ಸರ್ವ ಸದಸ್ಯರ ಸಮಾಲೋಚನ ಸಭೆಯಲ್ಲಿ ಮಾತನಾಡಿದರು. ಪ್ರಪಂಚದಲ್ಲಿ 39 ಪೋಲಿಯೋ ಪ್ರಕರಣಗಳು ಬೆಳಕಿಗೆ ಬಂದಿದೆ. ಅವುಗಳಲ್ಲಿ 30 ಪ್ರಕರಣ ಪಾಕಿಸ್ತಾನ ಮತ್ತು 9 ಪ್ರಕರಣ ಅಪಘಾನಿಸ್ತಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ವರ್ಷ ಡಿ.21ರಂದು ಪೋಲಿಯೋ ಲಸಿಕೆ ಕಾರ್ಯಕ್ರಮ ದೇಶದಾದ್ಯಂತ ನಡೆಯಲಿದೆ ಎಂದು ಹೇಳಿದರು. ಪೋಲಿಯೋ ನಿರ್ಮೂಲನೆ ಮಾಡುವುದೇ ರೋಟರಿ ಸಂಸ್ಥೆಯ ಬಹುದೊಡ್ಡ ಉದ್ದೇಶವಾಗಿ ಹಬ್ಬಿಕೊಂಡಿದೆ. ಪ್ರತಿಯೊಬ್ಬರು 5 ವರ್ಷದ ಮಕ್ಕಳಿಗೆ ಕಡ್ಡಾಯ ಲಸಿಕೆ ಹಾಕುವ ಮೂಲಕ ಪೆÇಲೀಯೋ ನಿರ್ಮೂಲನೆಯೆಡೆಗೆ ಜಾಗೃತರಾಗಬೇಕೆಂದು ಸಲಹೆ ನೀಡಿದರು. ಇದರ ಜೊತೆಗೆ ಅಪಾರವಾದ ಸಾಮಾಜಿಕ ಕಳಕಳಿಯನ್ನು ಸಂಸ್ಥೆ ಹೊಂದಿದೆ. ರಕ್ತ ಸಂಗ್ರಹ ಘಟಕ, ಮತ್ತು…
ಮಡಿಕೇರಿ NEWS DESK ನ.27 : ಭಾಗಮಂಡಲದಲ್ಲಿ ನ.28 ರಂದು ಬೆಳಿಗ್ಗೆ 10.30 ಗಂಟೆಗೆ ಕೊಡವ ಮತ್ತು ಅಮ್ಮ ಕೊಡವ ಸಮಾಜದ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಲಿದೆ. ಕಾರ್ಯಕ್ರಮದಲ್ಲಿ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ವಿಧಾಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಮತ್ತಿತರ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ವಿರಾಜಪೇಟೆ ಮಂಡಲ ಬಿಜೆಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 2022-23ರ ಬಜೆಟ್ ನಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಅಂದು ಶಾಸಕರಾಗಿದ್ದ ಕೆ.ಜಿ.ಬೋಪಯ್ಯ ಅವರ ಮನವಿ ಮೇರೆಗೆ ಕೊಡವರ ಶ್ರೇಯೋಭಿವೃದ್ಧಿಗಾಗಿ 10 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದರು. ಇದರಲ್ಲಿ 1 ಕೋಟಿ ರೂ.ಗಳನ್ನು ಕೊಡವ ಮತ್ತು ಅಮ್ಮ ಕೊಡವ ಸಮಾಜದ ಸಮುದಾಯ ಭವನಕ್ಕೆ ಮೀಸಲಿರಿಸಲಾಗಿತ್ತು ಎಂದು ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ತಿಳಿಸಿದ್ದಾರೆ.
ಮಡಿಕೇರಿ ನ.27 NEWS DESK : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ವತಿಯಿಂದ ನವೆಂಬರ್, 28 ರಂದು ಬೆಳಗ್ಗೆ 10.30 ಗಂಟೆಗೆ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕರ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ. ನವೆಂಬರ್ 29 ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ಮಡಿಕೇರಿ ನ.27 NEWS DESK : ಕೊಡಗು ಜಿಲ್ಲೆಯ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆಸೇನಾಪಡೆಯ 13 ನೇ ವಾರ್ಷಿಕ ಮಹಾಸಭೆಯು ನವೆಂಬರ್, 28 ರಂದು ಬೆಳಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷರಾದ ಎಂ.ಜಿ.ಯತೀಶ್ ಅವರ ಅಧ್ಯಕ್ಷತೆಯಲ್ಲಿ ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿದೆ. ಕೊಡಗು ಜಿಲ್ಲೆಯ ಅರೆ ಸೇನಾಪಡೆಯ ಮಾಜಿ ಯೋಧರು, ವೀರನಾರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸದಸ್ಯತ್ವ ಪಡೆದುಕೊಳ್ಳುವಂತೆ ಅರೆಸೇನಾಪಡೆಯ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಸಂಚಾಲಕರು/ಕಾರ್ಯದರ್ಶಿ ಎನ್.ಎಂ.ಭೀಮಯ್ಯ ಅವರು ತಿಳಿಸಿದ್ದಾರೆ.
ಮಡಿಕೇರಿ ನ.27 NEWS DESK : 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್ಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ. ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ಪುಸ್ತಕ ಪ್ರತಿ ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ. ತುಂತುರು ನೀರಾವರಿ ಉಪಕರಣಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿ ಪಡೆಯಬೇಕೆಂದು ಕೋರಿದೆ. ಈ ಸೌಲಭ್ಯವನ್ನು ಮತ್ತೊಮ್ಮೆ ನೀಡಲಾಗುತ್ತಿದ್ದು, ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ರೈತ ಬಾಂಧವರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸೋಮವಾರಪೇಟೆ ಸಹಾಯಕ ಕೃಷಿ ನಿರ್ದೇಶಕರಾದ…






