ಲೇಖಕ: admin

ಮಡಿಕೇರಿ, NEWS DESK ಫೆ.27 : ಮಡಿಕೇರಿ ನಗರದ ಜ್ಯೋತಿ ನಗರ ಬಡಾವಣೆಯ ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ತಂತ್ರಿ ಬ್ರಹ್ಮಶ್ರಿ ಶ್ರೀಕಾಂತ್ ಭಟ್ಟತಿರಿ ಚಾಲೋಡ್ ಅವರ ನೇತೃತ್ವದಲ್ಲಿ ನಡೆದ ಬ್ರಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ನೂರಾರು ಭಕ್ತರು ಸಾಕ್ಷಿಯಾದರು. ನಗರದ ಗಾಂಧಿ ಮೈದಾನದಿಂದ ದೇವಾಲಯದವರೆಗೆ ದೀಪಾಲಂಕೃತ ಮಂಟಪದಲ್ಲಿ ಭವ್ಯ ಕಳಸ ಮೆರವಣಿಗೆ ಸಾಗಿತು. ಸಾಮೂಹಿಕ ಪ್ರಾರ್ಥನೆ, ಗಣಪತಿ ಪೂಜೆ, ಪ್ರಸಾದ ಶುದ್ಧಿ, ವಾಸ್ತುಬಲಿ, ಭಗವತಿ ಸೇವೆ, ಮಹಾಗಣಪತಿ ಹೋಮ, ಉಷಾ ಪೂಜೆ, ಅನುಜ್ಞಾಕಲಶಾಭಿಷೇಕ, ಪ್ರಾರ್ಥನೆ, ಪ್ರಾಸಾದ ಪ್ರತಿಷ್ಠೆ, ಪೀಠ ಪ್ರತಿಷ್ಠೆ, ಬಿಂಭಪ್ರತಿಷ್ಠೆ, ಕಲಾಭಿಷೇಕ ಪೂಜೆ, ಮಹಾಪೂಜೆ ನೆರವೇರಿತು. ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿತ್ತು.

Read More

ಬೆಂಗಳೂರು, ಫೆಬ್ರವರಿ 27, 2026: ಸಿಲಿಕಾನ್ ಸಿಟಿಯ ಸಾಂಸ್ಕೃತಿಕ ಅಸ್ಮಿತೆಯಂತಿರುವ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ಮತ್ತು ಮುಜರಾಯಿ ಇಲಾಖೆಯು ಈ ಬಾರಿಯ ಉತ್ಸವದ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಬಾರಿಯ ವಿಶೇಷತೆಗಳೇನು? 16ನೇ ಬಾರಿಗೆ ಕರಗ ಹೊರುವ ಜ್ಞಾನೇಂದ್ರ ಸ್ವಾಮಿ: ದೇವಾಲಯದ ಪೂಜಾರಿ ಎ. ಜ್ಞಾನೇಂದ್ರ ಸ್ವಾಮಿ ಅವರು ಈ ಬಾರಿಯೂ ಕರಗ ಹೊರಲು ಆಯ್ಕೆಯಾಗಿದ್ದಾರೆ. ಇದು ಅವರು ಸತತವಾಗಿ ಹೊರುತ್ತಿರುವ 16ನೇ ಕರಗ ಎಂಬುದು ವಿಶೇಷ. 11 ದಿನಗಳ ಉತ್ಸವ: ಈ ಬಾರಿಯ ಕರಗ ಮಹೋತ್ಸವವು ಒಟ್ಟು 11 ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಪ್ರಮುಖ ದಿನಾಂಕಗಳು ಮತ್ತು ಕಾರ್ಯಕ್ರಮಗಳು: ಮಾರ್ಚ್ 24: ಧ್ವಜಾರೋಹಣದ ಮೂಲಕ ಅಧಿಕೃತವಾಗಿ ಕರಗ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಮಾರ್ಚ್ 30: ಮುಂಜಾನೆ 4:00 ಗಂಟೆಗೆ ಪವಿತ್ರ ‘ಹಸಿಕರಗ’ ಆಚರಣೆ ನಡೆಯಲಿದೆ. ಆದಿಶಕ್ತಿ ದ್ರೌಪದಿ ದೇವಿಯು ಈ…

Read More

ಮಡಿಕೇರಿ, NEWS DESK ಫೆ.27 : ಸ್ಕೂಟರ್ ಡಿಕ್ಕಿಯಾದ ಪರಿಣಾಮ ರಸ್ತೆಗೆ ಬಿದ್ದ ವ್ಯಕ್ತಿಯ ಮೇಲೆ ಕಾರು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಮ್ಮತ್ತಿ ಸಮೀಪದ ಆನಂದಪುರದಲ್ಲಿ ಗುರುವಾರ ರಾತ್ರಿ ನಡೆದಿದೆ. ಆನಂದಪುರದ ನಿವಾಸಿ ಏನೋಸ್ ಮನೋಹರ್ ಮನು (43) ಎಂಬುವವರೇ ಮೃತ ದುರ್ದೈವಿಯಾಗಿದ್ದು, ಸ್ಕೂಟರ್ ಚಾಲಕ ನೆಲ್ಯಹುದಿಕೇರಿ ಗ್ರಾಮದ ಹಂಸ ತೀವ್ರವಾಗಿ ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಏನೋಸ್ ಮನೋಹರ್ ಮನು ಅವರಿಗೆ ಸ್ಕೂಟರ್ ಡಿಕ್ಕಿಯಾಗಿದೆ. ಈ ಸಂದರ್ಭ ರಸ್ತೆಗೆ ಬಿದ್ದ ಅವರ ಮೇಲೆ ಕಾರು ಹರಿದಿದೆ ಎಂದು ಹೇಳಲಾಗಿದೆ. ಕಾರಿನ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ವೃತ್ತ ನಿರೀಕ್ಷಕ ರಾಜು, ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ವಿರಾಜಪೇಟೆ, NEWS DESK ಫೆ.27: ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ಮಾರ್ಚ್ 4 ರಿಂದ ಮಾರ್ಚ್ 10 ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ತೋಡು ನಾಂಗಲದಲ್ಲಿ ಜರುಗಲಿದೆ. ಮಾರ್ಚ್ 4 ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು ಉದ್ಘಾಟನೆಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ರವರು ನೆರವೇರಿಸಲಿದ್ದಾರೆ.ಬಿಟ್ಟಂಗಾಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಮೂಕಚಂಡ ಪ್ರಸನ್ನ ಸುಬ್ಬಯ್ಯ ರವರು ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಆಶಾ ಅಧ್ಯಕ್ಷತೆಯನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಪೂಜಾ ಸಜೇಶ್ ರವರು ಹಾಗೂ ಶಾಲಾ ಸ್ಥಳದಾನಿಗಳಾದ ಕುಪ್ಪಂಡ ಗೋಪಾಲ್ ಬೋಪಯ್ಯ ರವರು ಉಪಸ್ಥಿತರಿರುವರು. ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ. ಫಾ. ಜೇಮ್ಸ್ ಡೊಮಿನಿಕ್ ಸಾನಿಧ್ಯವನ್ನು ವಹಿಸಲಿದ್ದಾರೆ. ಸೆಂಟ್ ಆನ್ಸ್ ಪದವಿ ಕಾಲೇಜಿನ…

Read More

ನವದೆಹಲಿ/ಹೈದರಾಬಾದ್: ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಟರಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ, ವಿವಾಹವಾದ ಮರುದಿನವೇ ದೆಹಲಿಗೆ ತೆರಳಿ ದೇಶದ ಉನ್ನತ ಗಣ್ಯರನ್ನು ಭೇಟಿ ಮಾಡಿದ್ದಾರೆ. ಮಾರ್ಚ್ 4 ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ತಮ್ಮ ವಿವಾಹದ ಆರತಕ್ಷತೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನವಜೋಡಿ ಖುದ್ದಾಗಿ ಆಹ್ವಾನ ನೀಡಿದ್ದಾರೆ. ಪ್ರಧಾನಿ ಮೋದಿಗೆ ಮದುವೆಯ ಆಮಂತ್ರಣ ಫೆಬ್ರವರಿ 26 ರಂದು ಉದಯಪುರದ ಐಷಾರಾಮಿ ಐಟಿಸಿ ರೆಸಾರ್ಟ್‌ನಲ್ಲಿ ವಿವಾಹವಾದ ಈ ಜೋಡಿ, ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪತ್ರದ ಮೂಲಕ ಶುಭಕೋರಿದ್ದ ಮೋದಿ: ಅಸಲಿಗೆ, ವಿಜಯ್ ಮತ್ತು ರಶ್ಮಿಕಾ ಮದುವೆಗೆ ಮುಂಚೆಯೇ ಪ್ರಧಾನಿ ಮೋದಿ ಅವರು ಪತ್ರದ ಮೂಲಕ ಶುಭಾಶಯ ತಿಳಿಸಿದ್ದರು. ವಿಜಯ್ ಅವರ ತಂದೆ ಕಳುಹಿಸಿದ್ದ ಆಹ್ವಾನ ಪತ್ರಿಕೆಗೆ ಪ್ರತಿಕ್ರಿಯೆಯಾಗಿ ಮೋದಿ ಅವರು ಪತ್ರ ಬರೆದು ವಧು-ವರರಿಗೆ ಆಶೀರ್ವದಿಸಿದ್ದರು. ಆರತಕ್ಷತೆಗೆ ಆಹ್ವಾನ: ಇಂದು…

Read More

ಚೆನ್ನೈ, ಫೆಬ್ರವರಿ 27, 2026: ಕಾಲಿವುಡ್‌ನ ‘ದಳಪತಿ’ ಎಂದೇ ಖ್ಯಾತರಾಗಿರುವ ನಟ ವಿಜಯ್ ಅವರ ವೈವಾಹಿಕ ಜೀವನದಲ್ಲಿ ಭಾರಿ ಬಿರುಕು ಮೂಡಿದೆ. ವಿಜಯ್ ಅವರ ಪತ್ನಿ ಸಂಗೀತ ಅವರು ಚೆಂಗಲ್‌ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಇಂದು (ಫೆಬ್ರವರಿ 27) ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಮೂಲಕ ತಮಿಳು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಅಂತ್ಯ? ವಿಜಯ್ ಮತ್ತು ಸಂಗೀತ ಅವರು 27 ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಷ್ಟು ವರ್ಷಗಳ ಕಾಲ ಸುಖಮಯವಾಗಿದ್ದ ಇವರ ಸಂಸಾರದಲ್ಲಿ ಈಗ ಬಿರುಕು ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಭಾರಿ ಶಾಕ್ ನೀಡಿದೆ. ನಟಿಯ ಜೊತೆ ಅನೈತಿಕ ಸಂಬಂಧದ ಗಂಭೀರ ಆರೋಪ ವಿಜಯ್ ಅವರ ಪತ್ನಿ ಸಂಗೀತ ಅವರು ವಿಚ್ಛೇದನಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಪತಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ: ಅನೈತಿಕ ಸಂಬಂಧ: ನಟ ವಿಜಯ್ ಅವರು ಖ್ಯಾತ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಸಂಗೀತ ಆರೋಪಿಸಿದ್ದಾರೆ. ಹೊರಬರಲಿದೆಯೇ ನಟಿಯ ಹೆಸರು? ವಿಜಯ್ ಅವರ…

Read More

ಮಡಿಕೇರಿ, NEWS DESK ಫೆ.27:-33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು ಹಾಗೂ ಎಫ್5 ಹೊದ್ದೂರು ಫೀಡರ್‍ನಲ್ಲಿ ಮಾರ್ಚ್, 01 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ, NEWS DESK ಫೆ.27:-ಮಕ್ಕಳ ಮೇಲೆ ಒತ್ತಡ ಹೇರದೆ, ಒಳ್ಳೆಯ ಸಲಹೆ-ಮಾರ್ಗದರ್ಶನ ನೀಡುವುದರ ಜತೆಗೆ ಧೈರ್ಯ ತುಂಬಿ ಮಕ್ಕಳ ಮನಸ್ಸನ್ನು ಪೋಷಕರು ಗೆಲ್ಲುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಪ್ರತಿಪಾಧಿಸಿದ್ದಾರೆ. ಕೊಡಗು ಜಿಲ್ಲಾಡಳಿತ, ನವದೆಹಲಿಯ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಇವರ ಸಹಯೋಗದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ವಿವಿಧ ಇಲಾಖೆಯ ಭಾಗೀಧಾರರಿಗೆ ಮಕ್ಕಳ ಹಕ್ಕುಗಳನ್ನು ಅನುಷ್ಠಾನಗೊಳಿಸಲು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ವಿವಿಧ ಕಾಯ್ದೆಗಳ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಎಲ್ಲರ ಕುಟುಂಬದಲ್ಲೂ ಮಕ್ಕಳ ಮೇಲೆ ಪ್ರತೀ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಒತ್ತಡ ಸೃಷ್ಟಿಸುತ್ತಿದ್ದು, ಇದರಿಂದ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ಮಾಡಿದರು. ಮಕ್ಕಳಿಗೆ…

Read More

ಮಡಿಕೇರಿ, NEWS DESK ಫೆ.27 : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕೊಡಗು ಜಿಲ್ಲಾ ಘಟಕ ಜಿಲ್ಲಾಡಳಿತದ ಮೂಲಕ ಇಂದು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿತು. ಕೇಂದ್ರ ಸರಕಾರದ ಪ್ರೋತ್ಸಾಹಧನ ಹಾಗೂ ರಾಜ್ಯ ಸರಕಾರದ ಗೌರವಧನ ಒಟ್ಟಿಗೆ ಸೇರಿಸಿ ಮಾಸಿಕ ರೂ.15 ಸಾವಿರ ನೀಡಬೇಕು. ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಸರಕಾರ ಆಶಾ ಕಾರ್ಯಕರ್ತೆಯರ ಗೌರವಧನವನ್ನು ರೂ.5 ಸಾವಿರದಿಂದ ರೂ.8 ಸಾವಿರಕ್ಕೆ ಹೆಚ್ಚಿಸಬೇಕು. ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು.  ತೀವ್ರತರ ರೋಗಗಳ ಚಿಕಿತ್ಸಾ ವೆಚ್ಚಕ್ಕಾಗಿ ಅಂಗನವಾಡಿ ಮಾದರಿಯಲ್ಲಿ ಕಾರ್ಪಸ್ ಫಂಡ್ ಮಾಡಿ, ಚಿಕಿತ್ಸಾ ವೆಚ್ಚ ಮರುಪಾವತಿಗೆ ವ್ಯವಸ್ಥೆ ಮಾಡಬೇಕು. ಗಂಭೀರ ಖಾಯಿಲೆಗಳಿಂದ ಬಳಲುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಚೇತರಿಕೆ ಅವಧಿಯಲ್ಲಿ 3 ತಿಂಗಳು ಮಾಸಿಕ ನಿಶ್ಚಿತ ಗೌರವಧನವನ್ನು ಪಾವತಿ ಮಾಡಬೇಕು. ಆಶಾ ಕಾರ್ಯಕರ್ತೆಯರನ್ನು ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಸಾವಿರಾರು ಕಾರ್ಯಕರ್ತೆಯರನ್ನು ಕೈಬಿಡುವ ಪ್ರಕ್ರಿಯೆ ನಿಲ್ಲಿಸಬೇಕು. ಆಶಾ ಸುಗಮಕಾರರನ್ನು ಸೂಕ್ತ…

Read More

ಬೀದರ್ ಜಿಲ್ಲೆಯಲ್ಲಿ “ವಚನ ಗ್ಲೋಬಲ್ ವಿಶ್ವವಿದ್ಯಾಲಯ” ಸ್ಥಾಪಿಸುವ ನಿಟ್ಟಿನಲ್ಲಿ ಭಾಲ್ಕಿ ಮಠದ ನಾಡೋಜ ಡಾಕ್ಟರ್ ಬಸವಲಿಂಗ ಪಟ್ಟದೇವರು ಅವರ ನೇತೃತ್ವದ ಮಠಾಧೀಶರ ತಂಡ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕಾವೇರಿಯಲ್ಲಿ ಭೇಟಿಯಾಗಿ ಚರ್ಚಿಸಿ ಮನವಿ ಸಲ್ಲಿದರು. ಈ ಸಂದರ್ಭದಲ್ಲಿ ಗದಗಿನ ಪೂಜ್ಯ ಶ್ರೀ ಜಗದ್ಗುರು ಡಾ. ತೋಟದ ಸಿದ್ದರಾಮಯ್ಯಗಳು, ಪೂಜಶ್ರೀ ಶಿವಾನಂದ ಮಹಾಸ್ವಾಮಿಗಳು ವಿರಕ್ತಮಠ ಹಂದಿಗುಂದ, ಭಾಲ್ಕಿಯ ಕಿರಿಯ ಶ್ರೀಗಳು, ಕುಂಬಳಗೋಡು ಬಸವ ಮಂಟಪದ ಶ್ರೀಗಳು ಹಾಗೂ ಸಚಿವರಾದ ಎಂ. ಬಿ. ಪಾಟೀಲ್ , ಈಶ್ವರ ಖಂಡ್ರೆ, ಶಾಸಕ ಬಿ.ಆರ್.ಪಾಟೀಲ್ ಉಪಸ್ಥಿತರಿದ್ದರು.

Read More