ಲೇಖಕ: admin

ಮಡಿಕೇರಿ ಅ.14 : ಅ.24ರ ರಾತ್ರಿ ದಶಮಂಟಪಗಳು ನಗರದಲ್ಲಿ ಶೋಭಾ ಯಾತ್ರೆ ನಡೆಸುತ್ತವೆ. ಈ ವೇಳೆ ಎಲ್ಲಾ ದಶ ಮಂಟಪಗಳು ಹೆಚ್ಚು ಪ್ರದರ್ಶನ ನೀಡಬೇಕೆಂದು ಸೂಚಿಸಲಾಗಿದೆ. ಮಾತ್ರವಲ್ಲದೇ ಹೆಚ್ಚು ಪ್ರದರ್ಶನ ನೀಡುವ ಮಂಟಪಕ್ಕೆ ವಿಶೇಷ ಬಹುಮಾನವನ್ನು ದಸರಾ ಸಮಿತಿಯಿಂದ ನೀಡಲಾಗುತ್ತದೆ ಎಂದು ಅನಿತಾ ಪೂವಯ್ಯ ತಿಳಿಸಿದರು. ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ಈ ಬಾರಿ 2 ಕೋಟಿ ರೂ. ಅನುದಾನದ ಮೂಲಕ ಮಡಿಕೇರಿ ದಸರಾವನ್ನು ಅದ್ದೂರಿಯಾಗಿ ಆಚರಿಸಬೇಕೆಂದು ಚಿಂತಿಸಲಾಗಿತ್ತು. ಆದರೆ ಬರದ ಹಿನ್ನೆಲೆಯಲ್ಲಿ ಸರಕಾರ 75 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಮಡಿಕೇರಿ ದಸರಾ ಆಚರಣೆ ಕಷ್ಟಸಾಧ್ಯವಾಗಲಿದೆ. ಈ ಕಾರಣದಿಂದ ದಾನಿಗಳ ಮೂಲಕ ದೇಣಿಗೆ ಸಂಗ್ರಹಿಸಲು ದಸರಾ ಸಮಿತಿ ಮುಂದಾಗಿದ್ದು, ಈ ಹಣದಲ್ಲಿ ದಶ ಮಂಟಪಗಳಿಗೆ ಹೆಚ್ಚಿನ ಅನುದಾನ ನೀಡಲು ಯೋಜನೆ ರೂಪಿಸಲಾಗುತ್ತಿದೆ. ದೇಣೆಗೆ ಸಂಗ್ರಹದಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ನಗರ ಸಭೆ ಪೌರಾಯುಕ್ತರೇ ದೇಣಿಗೆ ವಿಚಾರದ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.…

Read More

ಮಡಿಕೇರಿ ಅ.14 : ಮಡಿಕೇರಿ ದಸರಾ ಉತ್ಸವಕ್ಕೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಕಾರಣ ಕಾನೂನು ಸುವ್ಯವಸ್ಥೆ ಕಾಪಾಡಲು ಜನದಟ್ಟಣೆ ಏರ್ಪಡುವ ಸ್ಥಳಗಳಲ್ಲಿ ಪೊಲೀಸ್ ವ್ಯೂವ್ ಪಾಯಿಂಟ್ ಅಳವಡಿಸುವುದು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅದರಂತೆ ಪೊಲೀಸ್ ಇಲಾಖೆ ಸೂಚಿಸುವ ಕಡೆಗಳಲ್ಲಿ ಎಲ್ಲಾ ರೀತಿಯ ಭದ್ರತಾ ವ್ಯವಸ್ಥೆಗಳನ್ನು ನಗರಸಭೆ ಕಡೆಯಿಂದ ಮಾಡಲಾಗುತ್ತದೆ ಎಂದು ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಅ.14 : ಐತಿಹಾಸಿಕ ಮಡಿಕೇರಿ ದಸರಾ ಆಚರಣೆಗೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಡಿಕೇರಿ ನಗರ ದಸರಾ ಸಮಿತಿ ತಿಳಿಸಿದೆ. ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ, ಅ.15ರಂದು ನಗರದ ಪಂಪಿನ ಕೆರೆಯಲ್ಲಿ 4 ಶಕ್ತಿ ದೇವತೆಗಳಿಗೆ ಪೂಜೆ ಸಲ್ಲಿಸಿ ಕರಗ ಹೊರಡಿಸುವ ಮೂಲಕ ಮಡಿಕೇರಿ ದಸರಾ ಉತ್ಸವ ಆರಂಭವಾಗಲಿದೆ. ನವ ದಿನಗಳು ಕೂಡ ಕರಗಗಳು ನಗರ ಪ್ರದಕ್ಷಿಣೆ ತೆರಳಲಿವೆ ಎಂದು ಹೇಳಿದರು. ದಸರಾ ಹಬ್ಬಾಚರಣೆ ಹಿನ್ನೆಲೆಯಲ್ಲಿ ಮಡಿಕೇರಿ ನಗರವನ್ನು ಈ ವಿದ್ಯುತ್ ಬೆಳಕಿನಿಂದ ಶೃಂಗರಿಸಲಾಗಿದೆ ಎಂದು ಹೇಳಿದರು. ಕರಗಗಳು ಮತ್ತು ದಶ ಮಂಟಪಗಳು ಸಾಗುವ ನಗರದ ಮುಖ್ಯ ರಸ್ತೆಗಳ ಗುಂಡಿ ಮುಚ್ಚುವುದು, ರಸ್ತೆಯ ಇಕ್ಕೆಲಗಳ ಕಾಡು ಕಡಿದು ಸ್ವಚ್ಛಗೊಳಿಸಲಾಗುತ್ತಿದೆ ಎಂದು ಹೇಳಿದರು. ::: ಸಾಂಸ್ಕೃತಿಕ ವೈಭವ ::: ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನವ ದಿನಗಳ ಕಾಲ ವಿವಿಧ ಕಲಾ ತಂಡಗಳಿಂದ ವೈವಿಧ್ಯಮಯ ಸಾಂಸ್ಕೃತಿಕ…

Read More

ಮಡಿಕೇರಿ ಅ.14 : ಲೋಕಾಯುಕ್ತಕ್ಕೆ ದೂರು ಬಾರದಂತೆ ಅಧಿಕಾರಿಗಳು ಎಚ್ಚರದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ಅವರು ಸಲಹೆ ಮಾಡಿದ್ದಾರೆ. ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿ ಸಮಸ್ಯೆಗಳನ್ನು ಆಲಿಸಿದ ಬಳಿಕ ಅವರು ಮಾತನಾಡಿದರು. ಲೋಕಾಯುಕ್ತಕ್ಕೆ ದೂರು ಬಂದು ವಿಚಾರಣೆ ಆರಂಭಿಸಿದರೆ ಅಲೆಯಬೇಕಾಗುತ್ತದೆ. ಆದ್ದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತುಂಬಾ ಎಚ್ಚರವಹಿಸಬೇಕು. ಆದ್ದರಿಂದ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಾರ್ವಜನಿಕ ಸೇವೆಯನ್ನು ಸರ್ಕಾರದ ಸೇವೆ ಎಂದು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಸಾರ್ವಜನಿಕರು ಕಚೇರಿಗೆ ಆಗಮಿಸಿದಾಗ ಅವರ ಕುಂದುಕೊರತೆಯನ್ನು ಸಮಾದಾನದಿಂದ ಆಲಿಸಬೇಕು. ಕಚೇರಿಗೆ ಬಂದವರನ್ನು ಕೂರಿಸಿ ಮಾತನಾಡಬೇಕು ಎಂದು ಸುರೇಶ್ ಬಾಬು ಅವರು ಸಲಹೆ ಮಾಡಿದರು. ಸರ್ಕಾರಿ ಸೇವೆಗೆ ಸೇರಿದವರು ಸಾರ್ವಜನಿಕರ ಕರ್ತವ್ಯ ನಿರ್ವಹಿಸಲು ಬಂದಿರುವುದು ಎಂಬುದನ್ನು ಅರಿತುಕೊಳ್ಳಬೇಕು. ಸಾರ್ವಜನಿಕರ ಮನವಿಗೆ ಸ್ಪಂದಿಸಬೇಕು. ತಮ್ಮ ವ್ಯಾಪ್ತಿಯಲ್ಲಿ ಕೆಲಸ ಆಗದಿದ್ದಲ್ಲಿ ಹಿಂಬರಹವನ್ನಾದರೂ ನೀಡಬೇಕು ಎಂದು ಹೇಳಿದರು. ಜನರ ನಿರೀಕ್ಷೆಯನ್ನು ಅಲ್ಪಸ್ವಲ್ಪವನ್ನಾದರೂ ಈಡೇರಿಸಿದರೆ ಆತ್ಮತೃಪ್ತಿ…

Read More

ಮಡಿಕೇರಿ ಅ.14 : ಮರಳನ್ನೇ ಮೂಲವಾಗಿರಿಸಿಕೊಂಡು ಅದ್ಭುತ ದೃಶ್ಯ ಕಾವ್ಯ ಸೃಷ್ಟಿಸುವ ಕರ್ನಾಟಕದ ಹೆಸರಾಂತ ಮರಳು ಕಲಾವಿದೆ ಎಂ.ಎನ್.ಗೌರಿ ಈ ಬಾರಿ ಮಡಿಕೇರಿ ದಸರಾದ ವಿಶೇಷ ಆಕರ್ಷಣೆಯಾಗಿ ಮರಳಿನಲ್ಲಿ ವನದೈವದ ಕಲಾಕೃತಿ ರೂಪಿಸಲಿದ್ದಾರೆ. ಮಡಿಕೇರಿ ದಸರಾ ಫೋಟೋ ಗ್ಯಾಲರಿ ಕೂಡ ದಸರಾ ಆಕರ್ಷಣೆಗಳಲ್ಲೊಂದಾಗಲಿದೆ. ಮೈಸೂರಿನ ಚಾಮುಂಡಿ ಬೆಟ್ಟ ತಪ್ಪಲಿನಲ್ಲಿ ಕಳೆದ 5 ವರ್ಷಗಳಿಂದ ತನ್ನದೇ ಆದ ಮರಳು ಕಲಾ ಪ್ರದರ್ಶನ ಗ್ಯಾಲರಿ ಮೂಲಕ ಕರ್ನಾಟಕದ ಏಕೈಕ ಮರಳು ಕಲಾಗ್ಯಾಲರಿ ಹೊಂದಿರುವ ಎಂ.ಎನ್.ಗೌರಿ, ಈ ಸಂಗ್ರಹಾಲಯದಲ್ಲಿ ನೂರಾರು ಮರಳು ಕಲಾಕೃತಿಗಳನ್ನು ದಿನನಿತ್ಯ ಸಾವಿರಾರು ವೀಕ್ಷಕರ ನೋಟಕ್ಕೆ ಅವಕಾಶ ಕಲ್ಪಿಸಿದ್ದಾರೆ. 2013 ರಲ್ಲಿ ಒರಿಸ್ಸಾದಲ್ಲಿ ಆಯೋಜಿತವಾಗಿದ್ದ ಅಂತರರಾಷ್ಟ್ರೀಯ ಮರಳು ಕಲಾಕೃತಿ ಸ್ಪರ್ಧೆಯಲ್ಲಿ ವಿಶ್ವದ ಹಲವೆಡೆಗಳಿಂದ ಪಾಲ್ಗೊಂಡಿದ್ದ 27 ಕಲಾವಿದರಲ್ಲಿ ಭಾರತದ ಗೌರಿ ಏಕೈಕ ಮಹಿಳಾ ಕಲಾವಿದೆಯಾಗಿದ್ದರು. ಫೈನ್ ಆರ್ಟ್ಸನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಗೌರಿ, ಮರಳು ಕಲೆಯತ್ತ ಒಲವು ತೋರಿದ್ದು ಈವರೆಗೂ ರಾಜ್ಯವ್ಯಾಪಿ ನೂರಾರು ಕಲಾಕೖತಿಗಳನ್ನು ಮರಳಿನಲ್ಲಿಯೇ ರೂಪಿಸಿದ್ದಾರೆ. ಸೌದಿ ಅರೇಬಿಯಾದಲ್ಲಿ ಈ ವರ್ಷ…

Read More

ಮಡಿಕೇರಿ ಅ.14 : ಕರಡಿಗೋಡು ಗ್ರಾಮದ ಕಾಫಿ ತೋಟಗಳಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಕೆಲವು ದಿನಗಳ ಹಿಂದೆಯಷ್ಟೇ ಹೆಜ್ಜೆ ಗುರುತು ಪತ್ತೆಯಾಗಿ ಅರಣ್ಯ ಇಲಾಖೆ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿತ್ತು. ಇದೀಗ ಮತ್ತೆ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹುಲಿಯ ಚಲನವಲನ ಪತ್ತೆ ಹಚ್ಚಲು ಕ್ಯಾಮೆರಾ ಅಳವಡಿಸಲಾಗಿದೆ. ಹುಲಿಯನ್ನು ಸೆರೆ ಹಿಡಿಯಲು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ರೂಪಿಸಬೇಕಾಗುತ್ತದೆ ಎಂದು ರೈತ ಸಂಘ ಎಚ್ಚರಿಕೆ ನೀಡಿದೆ.

Read More

ಮಡಿಕೇರಿ ಅ.14 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಕರಗೋತ್ಸವದ ಮೂಲಕ ಅ.15 ರಿಂದ ಆರಂಭಗೊಳ್ಳಿದೆ. ಹತ್ತು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಂತಿಮ ದಿನ ದಶಮಂಟಪಗಳ ಶೋಭಾಯಾತ್ರೆ ನಡೆಯಲಿದ್ದು, ಸಾವಿರಾರು ಜನ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅ.17 ರಂದು ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ ಕೂಡ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ರಾಜ್ಯ ಕ್ಷಿಪ್ರ ಕಾರ್ಯಪಡೆ ತಂಡ ಮಡಿಕೇರಿ ನಗರದಲ್ಲಿ ಪಥ ಸಂಚಲನ ನಡೆಸಿತು. ತ್ಯಾಗರಾಜ ಕಾಲೋನಿಯಿಂದ ಆರಂಭವಾದ ಪಥ ಸಂಚಲನಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರು ಚಾಲನೆ ನೀಡಿದರು. ಇಂದಿರಾ ಗಾಂಧಿ ವೃತ್ತ, ಪೇಟೆ ಶ್ರೀ ರಾಮ ಮಂದಿರ, ಎಸ್‌ಬಿಐ, ಕೊಹಿನೂರ್ ರಸ್ತೆ, ಹಳೇ ಖಾಸಗಿ ಬಸ್, ಮೇಜರ್ ಮಂಗೇರಿರ ಮುತ್ತಣ್ಣ ವೃತ್ತ ಸೇರಿದಂತೆ ನಗರದ ಮುಖ್ಯ ಬೀದಿಗಳಲ್ಲಿ ಶಸ್ತç ಸಜ್ಜಿತ ರ‍್ಯಾಪಿಡ್ ಆ್ಯಪಿಡ್ ಆ್ಯಕ್ಷನ್ ಫೋರ್ಸ್ ಸಿಬ್ಬಂದಿಗಳು ಪಥ ಸಂಚನ ನಡೆಸಿ, ಹಬ್ಬಾಚರಣೆ ಸಂದರ್ಭ ಯಾವುದೇ ರೀತಿಯ…

Read More

ಮಡಿಕೇರಿ ಅ.14 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ನಗರದ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಅ.15 ರಿಂದ ಮತ್ತು ಸಾಂಸ್ಕೃತಿಕ ಕಲಾವೈಭವ ಅ.16 ರಿಂದ ಆರಂಭಗೊಳ್ಳುತ್ತಿದ್ದು, ನಗರಸಭೆ ಭರದ ಸಿದ್ಧತೆ ನಡೆಸಿದೆ. ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರ ನೇತೃತ್ವದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ನಗರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡರು. ಶಕ್ತಿ ದೇವತೆಗಳ ಕರಗಗಳು ನಗರ ಸಂಚಾರ ಆರಂಭಿಸುವ ಪಂಪಿನ ಕೆರೆ ಭಾಗದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಯಿತು. ಕುರುಚಲು ಗಿಡಗಳನ್ನು ಕಡಿದು, ಕಸವನ್ನು ತೆರವುಗೊಳಿಸಿ ಸುಣ್ಣಬಣ್ಣ ಬಳಿಯಲಾಯಿತು.  ಬೀದಿದೀಪಗಳನ್ನು ದುರಸ್ತಿ ಪಡಿಸಲಾಯಿತು, ಚರಂಡಿಗಳ ತ್ಯಾಜ್ಯಗಳನ್ನು ತೆಗೆಯಲಾಯಿತು. ರಸ್ತೆಗಳ ಗುಂಡಿಗಳನ್ನು ಮುಚ್ಚುವ ಕಾರ್ಯ ಭರದಿಂದ ಸಾಗಿತು. ಹತ್ತು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಗಾಂಧಿ ಮೈದಾನದಲ್ಲಿ ಪ್ರೇಕ್ಷಕರಿಗೆ ಅನುಕೂಲವಾಗುವಂತೆ ಕೆಸರುಮಯವಾಗಿದ್ದ ಮೈದಾನವನ್ನು ಸಮತಟ್ಟುಗೊಳಿಸಲಾಯಿತು. ಇಲ್ಲಿರುವ ಶೌಚಾಲಯಗಳನ್ನು ಸ್ವಚ್ಛಗೊಳಿಸಿ ನೀರಿನ ವ್ಯವಸ್ಥೆ ಕಲ್ಪಿಸಲಾಯಿತು. ಈ ಭಾಗದಲ್ಲೂ ರಸ್ತೆಗಳ ಗುಂಡಿಗಳನ್ನು ಮುಚ್ಚಲಾಯಿತು. ಅಂತಿಮ ಹಂತದ…

Read More

ಮಡಿಕೇರಿ ಅ.13 : ನಿಷೇಧಿತ ಮಾದಕ ವಸ್ತು ‘ಎಂಡಿಎಂಎ’ ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಡಿಕೇರಿಯ ಸೆನ್ ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ. ಪಿರಿಯಾಪಟ್ಟಣ ನಿವಾಸಿ ಮಹಮ್ಮದ್ ಆಲಿಶಾ(29) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಆತನ ಬಳಿಯಿದ್ದ ಎಂಡಿಎಂಎ ಯನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಮಡಿಕೇರಿಯ ಸಂಪಿಗೆಕಟ್ಟೆ ಬಳಿ ವ್ಯಕ್ತಿಯೋರ್ವ ನಿಷೇಧಿತ ಮಾದಕ ವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಮಾಲು ಸಹಿತ ವಶಕ್ಕೆ ಪಡೆದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರ ಮಾರ್ಗದರ್ಶನದಲ್ಲಿ ಸೆನ್ ಪೊಲೀಸ್ ಠಾಣಾ ವೃತ್ತನಿರೀಕ್ಷಕ ಸಿ.ಕೆ.ರಾಘವೇಂದ್ರ ನೇತೃತ್ವದಲ್ಲಿ ಸೆನ್ ಠಾಣೆಯ ಕ್ರೈಂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.

Read More

ಮಡಿಕೇರಿ ಅ.13 : ಕಂಟೈನರ್ ವಾಹನದಡಿಗೆ ಸಿಲುಕಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ರೆಸಾರ್ಟ್ ವೊಂದರ ಬಳಿ ನಡೆದಿದೆ. ಮೂಲತಃ ಕೆ.ಆರ್. ನಗರದ ಬೇರ್ಯ ಗ್ರಾಮದ ನಿವಾಸಿ ಬೈರವ(28) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಮಡಿಕೇರಿಯಿಂದ ಸುಮಾರು 5 ಕಿ.ಮೀ ದೂರದಲ್ಲಿ ಕಾರೊಂದರ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದಿದ್ದಾರೆ. ಈ ಸಂದರ್ಭ ಎದುರಿನಿಂದ ಬರುತ್ತಿದ್ದ ಕಂಟೈನರ್ ವಾಹನದ ಚಕ್ರ ಬೈಕ್ ಸವಾರನ ತಲೆ ಮೇಲೆ ಹರಿದು ಈ ಸಾವು ಸಂಭವಿಸಿದೆ. ಬೈರವ ತಮ್ಮ ಬೈಕ್ ನಲ್ಲಿ ಮಡಿಕೇರಿಯಿಂದ ಕೆ.ಆರ್ ನಗರದ ಕಡೆಗೆ ತೆರಳುತ್ತಿದ್ದಾಗ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದಿಂದ ಸುಮಾರು 1 ಗಂಟೆ ಕಾಲ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

Read More