ಲೇಖಕ: admin

ಕೋಲಾರ ನ.11 :  ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯರಗೋಳ್ ಅಣೆಕಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ಸಂದರ್ಭ  ಕೋಲಾರ ಜಿಲ್ಲೆಯ ಒಟ್ಟು 2,197 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ  ನೆರವೇರಿಸಿದರು. ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಸಂಸದ  ಮುನಿಸ್ವಾಮಿ, ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ಶಾಸಕ  ಕೆ.ವೈ.ನಂಜೇಗೌಡ, ಎಸ್.ಎನ್. ನಾರಾಯಣಸ್ವಾಮಿ  ಹಾಜರಿದ್ದರು.

Read More

ಕುಶಾಲನಗರ (ಕೂಡಿಗೆ) ನ.11 : ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ  ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ‘ ಗೋ ಗ್ರೀನ್ ಅಭಿಯಾನ’ದಡಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತ ಪರಿಸರ ಜಾಗೃತಿ ಆಂದೋಲ  ನಡೆಯಿತು. ಕೂಡುಮಂಗಳೂರು ಗ್ರಾ.ಪಂ, ಶಾಲೆಯ ಇಕೋ ಕ್ಲಬ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ, ಎಸ್ ಡಿ ಎಂ ಸಿ ಹಾಗೂ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ  ಕಾರ್ಯಕ್ರಮ ನಡೆಯಿತು. “ಹಸಿರು ದೀಪಾವಳಿ ಆಚರಿಸುವ ಅಗತ್ಯತೆ’ ಕುರಿತು ಮಾಹಿತಿ ನೀಡಿದ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್‌,  ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳು ಹಾಗೂ ಮಾಲಿನ್ಯದ ದುಷ್ಪರಿಣಾಮಗಳ…

Read More

ಮಡಿಕೇರಿ ನ.11 : ಮೇಕೇರಿ ಸ್ವಾಗತ ಯುವಕ ಸಂಘದ ನೇತೃತ್ವದಲ್ಲಿ ಮೇಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ದಂತ ತಪಾಸಣೆ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ದಂತ ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ದೀಪಾ ಮಕ್ಕಳ ದಂತ ತಪಾಸಣೆ ನಡೆಸಿದರು. ಹಲ್ಲಿನ ಮಹತ್ವ , ಉಂಟಾಗಬಹದಾದ ಸಮಸ್ಯೆಗಳು, ಬ್ರಶ್ ಮಾಡುವ ವಿಧಾನಗಳ  ಕುರಿತು ವಿದ್ಯಾರ್ಥಿಗಳಿಗೆ ವೈದ್ಯರು ಮಾಹಿತಿ ನೀಡಿದರು. ಹಲ್ಲಿನ ಗಂಭೀರ ಸಮಸ್ಯೆಯಿರುವ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ಕರೆ ತರುವಂತೆ ತಿಳಿಸಲಾಯಿತು. ಮೇಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು  ದಂತ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಂಡರು. ಶಿಬಿರದಲ್ಲಿ ಸ್ವಾಗತ ಯುವಕ ಸಂಘದ ಅಧ್ಯಕ್ಷ  ಟಿ.ಎನ್.ಉಮೇಶ್, ಕಾರ್ಯದರ್ಶಿ ಪವನ್, ಖಜಾಂಚಿ ಭವನ್, ಕಾರ್ಯಕಾರಿ ಸಮಿತಿ ಸದಸ್ಯ  ಲತೀ, ಗ್ರಾ.ಪಂ. ಸದಸ್ಯರಾದ ಸುಶೀಲಾ ಮಧು, ಶಾಲಾ ಮುಖ್ಯೋಪಾಧ್ಯಾಯರಾದ ಸಬಿತ ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು. ದಂತ ತಪಾಸಣೆಯ ನಂತರ ಶಾಲಾ ಮಕ್ಕಳಿಗೆ ಟೂತ್ ಬ್ರಶ್ ಹಾಗೂ ಟೂತ್…

Read More

ಮಡಿಕೇರಿ ನ.11 : ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ  ಹಾಗೂ ವಿವಿಧ ಸಂಘಟನೆಗಳ ವತಿಯಿಂದ  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ, ರಾಷ್ಟ್ರ ಕವಿ ಕುವೆಂಪು ಅವರ ಪುಣ್ಯಸ್ಮರಣೆ ಆಚರಿಸಲಾಯಿತು. ನಗರದ ವಿಶ್ವ ಮಾನವ ಉದ್ಯಾನವನದಲ್ಲಿ  ರಾಷ್ಟ್ರಕವಿ ಕುವೆಂಪು ಅವರ ಪುತ್ಥಳಿಗೆ ವೇದಿಕೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಪುಷ್ಪ ನಮನ ಸಲ್ಲಿಸಿ ಗೌರವಿಸಿದರು. ಯುಗದ ಕವಿ, ಜಗದ ಕವಿ ಕುವೆಂಪು ರವರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸುವುದರ ಜೊತೆಗೆ ತಮ್ಮ ವಿಶ್ವಮಾನವ ಸಂದೇಶಗಳ ಮೂಲಕ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ್ದಾರೆ ಎಂದು  ವೇದಿಕೆಯ ಪ್ರಮುಖರು ಸ್ಮರಿಸಿದರು. ಹಿತರಕ್ಷಣಾ ವೇದಿಕೆಯ ಗೌರವ ಅಧ್ಯಕ್ಷ ಖಲೀಲ್ ಭಾಷಾ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭ  ಕೊಡಗು ಹಿತರಕ್ಷಣಾ ವೇದಿಕೆ ಅಧ್ಯಕ್ಷ  ರವಿಗೌಡ, ವಿಷ್ಣುಸೇನಾ ಜಿಲ್ಲಾಧ್ಯಕ್ಷ  ರಫೀಕ್ ದಾದಾ,  ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಮುನೀರ್ ಮಾಚರ್, ವೀರಭದ್ರ ಮುನೀಶ್ವರ ದೇವಾಲಯದ ಗೌರವಾಧ್ಯಕ್ಷ ಪಿ.ಜಿ.ಮಂಜುನಾಥ್,  ಕರ್ನಾಟಕ…

Read More

ಮಡಿಕೇರಿ ನ.11 : ಕರಿಕೆ ಗ್ರಾಮದ ಆನೆಪಾರೆ ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ಫಸಲು ನಷ್ಟವಾಗುತ್ತಿರುವ ಹಿನ್ನೆಲೆ ರೈತರು ಕಂಗಾಲಾಗಿದ್ದಾರೆ. ಗ್ರಾಮದ ನಿವಾಸಿಗಳಾದ ರಧೀಶ್,  ಜೋಸೆಫ್, ಮೋಹನ ಹಾಗೂ ಮನೋಜ್ ಅವರ ತೋಟಕ್ಕೆ ನುಗ್ಗಿ  ಅಡಿಕೆ, ಕಾಫಿ,  ತೆಂಗುಗಳನ್ನು ಧ್ವಂಸಗೊಳಿಸಿದೆ. ಪ್ರತೀ ವರ್ಷ ಆನೆದಾಳಿಯಿಂದ  ರೈತರು ಕಂಗಾಲಾಗಿದ್ದು,   ಅರಣ್ಯ ಅಧಿಕಾರಿಗಳು ಆನೆಗಳನ್ನು ಕಾಡಿಗೆಗಟ್ಟಬೇಕು ಮತ್ತು ಆನೆ ಕಂದಕಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದ ಗ್ರಾಮಸ್ಥರು, ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ  ಜಿಲ್ಲಾಡಳಿತ ಹಾಗೂ ಸಂಬಂಧಿಸಿ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ನ.11 :  ಕುಶಾಲನಗರ- ಚಂದ್ರಯಾನ 3 ಯಶಸ್ಸಿನ ಸಂಭ್ರಮಾಚರಣೆಯ ಪ್ರಯುಕ್ತ  ಕೊಡಗಿನ ಸೈನಿಕ ಶಾಲೆಯಲ್ಲಿ  ಚಂದ್ರಯಾನ-3 ರ ಯಶಸ್ಸಿನ ಸಂಭ್ರಮಾಚರಣೆ  ನಡೆಯಿತು. ವಿದ್ಯಾರ್ಥಿಗಳಿಗೆ  ಸಂಭ್ರಮಾಚರಣೆ  ಪ್ರಯುಕ್ತ ‘ತಿರಂಗ’ ಎಂಬ ವಿಷಯವನ್ನಾಧರಿಸಿ ಕವನ ಬರೆಯುವ ಸ್ಪರ್ಧೆ  ನಡೆಯಿತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭ ಶಾಲೆಯ ಪ್ರಾಂಶುಪಾಲರು ಮಾತನಾಡಿ,  ಶಾಲೆಯ ಯುವ ವಿದ್ಯಾರ್ಥಿಗಳ ಮನಸ್ಸುಗಳಲ್ಲಿ ದೇಶಪ್ರೇಮವನ್ನು ತುಂಬುವ ಮೂಲಕ ತಮ್ಮ ದೇಶಭಕ್ತಿಯ ಮನೋಭಾವವನ್ನು  ಉತ್ತೇಜಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.

Read More

ನಾಪೋಕ್ಲು ನ.10 : ನಾಪೋಕ್ಲು- ವಿರಾಜಪೇಟೆ ಮುಖ್ಯರಸ್ತೆಯ ಹಳೆ ತಾಲೂಕು ಬಳಿ ರಸ್ತೆ ಸಂಪೂರ್ಣವಾಗಿ ಗುಂಡಿಮಯವಾಗಿದ್ದು,  ಪಾದಾಚಾರಿಗಳು ಹಾಗೂ ವಾಹನ ಚಾಲಕರ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಟ್ಟಣಕ್ಕೆ ಸಮೀಪದ ಹಳೆ ತಾಲೂಕು ಬಳಿಯ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಪಕ್ಕದ ರಸ್ತೆಯಲ್ಲಿ ಹೊಂಡವಾಗಿದ್ದು ಹಲವು ದಿನಗಳಿಂದ ಮುಚ್ಚದೆ ಇದ್ದುದರಿಂದ ಸಣ್ಣ ಗುಂಡಿಗಳು ದೊಡ್ಡ ಗುಂಡಿಗಳಾಗಿ ರಸ್ತೆ ಸಂಚಾರಕ್ಕೆ ತೀವ್ರ ತೊಂದಯಾಗುತ್ತಿದೆ.  ವಾಹನಗಳು ರಸ್ತೆಯ ಅವ್ಯವಸ್ಥೆಯಿಂದ ಒಂದು ಪಾಶ್ವದಲ್ಲಿ ಚಲಿಸಲಾರದೆ ಮತ್ತೊಂದು ಕಡೆಯಲ್ಲಿ ಚಲಿಸುತ್ತಿದ್ದು  ನೀರಿನ ಪೈಪಿಗೆ ತೊಂದರೆ ಉಂಟಾಗುತ್ತಿರುವುದರಿಂದ  ಸಾರ್ವಜನಿಕರು ಪರದಾಡುವಂತಾಗಿದೆ. ಗಣೇಶೋತ್ಸವದ ಸಂದರ್ಭದಲ್ಲಿ ದೇವಾಲಯದ ಸಮಿತಿ ಸದಸ್ಯರು ಕಾಂಕ್ರೀಟ್ ಹಾಕಿ ಗುಂಡಿ ಮುಚ್ಚುವ ಪ್ರಯತ್ನ ಮಾಡಿದ್ದರು. ಇದೀಗ ಮತ್ತೆ ರಸ್ತೆ ಗುಂಡಿಮಯವಾಗಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಇನ್ನಾದರೂ ಸಂಬಂಧಪಟ್ಟವರು ಗಮನಹರಿಸಿ ರಸ್ತೆಯ ಗುಂಡಿಯನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ವರದಿ : ದುಗ್ಗಳ ಸದಾನಂದ  

Read More

ಮಡಿಕೇರಿ ನ.11 :  ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನ.14 ರಿಂದ 20 ರವರೆಗೆ ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಸಹಯೋಗದೊಂದಿಗೆ ನಡೆಯಲಿದೆ. ಸಹಕಾರಿ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿರುವ ಮಡಿಕೇರಿ ತಾಲ್ಲೂಕಿನ ಕೊಳಕೇರಿ ಗ್ರಾಮದ ಬಿದ್ದಾಟಂಡ ಎ.ರಮೇಶ್‍ರಿಗೆ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿ, ಮಡಿಕೇರಿ ತಾಲ್ಲೂಕಿನ ಕೊಂಗಂಡ ಎ. ತಿಮ್ಮಯ್ಯ, ವಿರಾಜಪೇಟೆ ತಾಲ್ಲೂಕಿನ ಚಿರಿಯಪಂಡ ಕೆ.ಉತ್ತಪ್ಪ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಎಚ್.ಎಸ್.ಸುಬ್ಬಪ್ಪರಿಗೆ ‘ಶ್ರೇಷ್ಠ ಸಹಕಾರಿ ಪ್ರಶಸ್ತಿ’ ಮತ್ತು ಮಡಿಕೇರಿಯ ಮಣವಟ್ಟೀರ ಕಾವೇರಿಯಮ್ಮ ಪೂವಣ್ಣ ಅವರಿಗೆ ‘ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.  ಬಿದ್ದಾಟಂಡ ಎ. ರಮೇಶ್ ಚಂಗಪ್ಪ – ಕೊಡಗು ಸಹಕಾರ ರತ್ನ ಜಿಲ್ಲೆಗೊಬ್ಬರಂತೆ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. 2023 ರ ಕೊಡಗು ಸಹಕಾರ ರತ್ನಕ್ಕೆ ಭಾಜನರಾದವರು ಶ್ರೀ ಬಿದ್ದಾಟಂಡ ಎ. ರಮೇಶ್ ಚಂಗಪ್ಪ ಮಡಿಕೇರಿ ತಾಲೂಕು ಕೊಳಕೇರಿ ಗ್ರಾಮದ ಬಿದ್ದಾಟಂಡ ಎ.…

Read More

ಸುಂಟಿಕೊಪ್ಪ ನ.11 : ಹಿಂದೂ ಜಾಗರಣ ವೇದಿಕೆಯ ವತಿಯಿಂದ ಮಾದಾಪುರ ಗಣಪತಿ ದೇವಾಲಯದಲ್ಲಿ ಕುಟ್ಟಪ್ಪ ಸ್ಮರಣಾರ್ಥ ಶಾಂತಿ ಪೂಜೆ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವೇದಿಕೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಕುಟ್ಟಪ್ಪ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಪ್ರಮುಖರಾದ ಭೋಜೇಗೌಡ, ದಿ.ಕುಟ್ಟಪ್ಪ ಅವರ ಪುತ್ರ ಡಿ.ಕೆ.ಡಾಲಿ, ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಾಯೋಜಕ ಅಜಿತ್ ಕುಕ್ಕೇರಾ, ಪ್ರಮುಖರಾದ ಚೇತನ್ ಶಾಂತಿನಿಕೇತನ, ವಿನಯ್, ತಾಲ್ಲೂಕು ಸಾಯೋಜಕ ವಿನಯ್ ಕುಮಾರ್, ಹೇಮಂತ್, ಗಪ್ಪು ಸೋಮಯ್ಯ, ಬಿಪಿನ್, ಸೂರಜ್, ಕೊಪ್ಪತಂಡ ಗಣೇಶ್, ಅಶೋಕ್ ಹಾಗೂ ಗ್ರಾಮಸ್ಥರು ಹಾಜರಿದ್ದರು. ಸುನಿಲ್ ಮಾದಾಪುರ ಸ್ವಾಗತಿಸಿ, ನಿರ್ವಹಿಸಿ ವಂದಿಸಿದರು.

Read More

ಮಡಿಕೇರಿ ನ.11 : ಧಾರ್ಮಿಕ ಮತ್ತು ಸಾಂಸ್ಕೃತಿಕ  ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಸಂರಕ್ಷಣೆಯ ಬಗ್ಗೆ ಜಾಗೃತಿ ಉದ್ದೇಶದಿಂದ ಮಡಿಕೇರಿ ತಾಲ್ಲೂಕು, ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ನ.14 ರಂದು ಸಂಜೆ 05.30 ಗಂಟೆಗೆ ದೀಪಾವಳಿ ಬಲಿಪಾಡ್ಯಮಿ ದಿನದಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ “ಗೋಪೂಜೆ” ಕಾರ್ಯಕ್ರಮ ಏರ್ಪಡಿಸಲಾಗಿದೆ. ಆದ್ದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ “ಗೋಪೂಜೆ” ಕಾರ್ಯಕ್ರಮಕ್ಕೆ ಆಗಮಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.

Read More